Headlines

ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!

ಬೆಂಗಳೂರು, ಏಪ್ರಿಲ್ 08: ಬೊಮ್ಮನಹಳ್ಳಿಯ ಊಬರ್ ಕಚೇರಿ ಮುಂದೆ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಊಬರ್ ಕಂಪನಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಮತ್ತು ಶೋಷಣೆಯನ್ನು ಖಂಡಿಸಿ, ಚಾಲಕರು ಮನವಿ ಸಲ್ಲಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಗಳನ್ನು ಊಬರ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ನಾನ್-ಪೀಕ್ ಅವರ್‌ಗಳಲ್ಲಿ ಸಿಗುವ ದರ ಅತ್ಯಂತ ಕಡಿಮೆಯಾಗಿದ್ದು, ಒಂದು ಟ್ರಿಪ್‌ಗೆ ಕೇವಲ 8 ರಿಂದ 15 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್‌ಪಿಜಿ ಮತ್ತು ಸಿಎನ್‌ಜಿ ಇಂಧನ ಬೆಲೆಗಳು ಗಣನೀಯವಾಗಿ…

Read More

ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಪ್ರಯಾಣಿಸುವಾಗ ಅದರಲ್ಲೂ ಉತ್ತರ ಭಾರತದ ರೈಲುಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಿರುತ್ತದೆ. ಹಣ ಕೇಳುತ್ತಾರೆ, ಕೊಟ್ಟರೆ ಆಶೀರ್ವಾದ ಮಾಡುತ್ತಾರೆ, ಕೊಡದಿದ್ದರೆ ಏನೋ ಬೈದು ಶಾಪ ಹಾಕುತ್ತಾ ಹೋಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇವರ ವರ್ತನೆ ಮಿತಿ ಮೀರಿದೆ, ಹಣ ಕೊಡದಿದ್ದರೆ ಹೊಡೆಯುವುದು, ಅನುಚಿತವಾಗಿ ವರ್ತಿಸುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅಂಥದ್ದೇ ವಿಡಿಯೋವೊಂದರಲ್ಲಿ ಮಂಗಳಮುಖಿಯೊಬ್ಬರು ಹಣ ಕೇಳಿದಾಗ ಪ್ರಯಾಣಿಕ ಹಣ ಕೊಡದಿದ್ದಕ್ಕೆ ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಕೆಟ್ಟದಾಗಿ ವರ್ತಿಸಿದ್ದು, ಎಲ್ಲರಿಗೂ ಮುಜುಗರ ತಂದಿತ್ತು.   ವಿಡಿಯೋ ಸುದ್ದಿಗಳಿಗಾಗಿ…

Read More

ಯುಎಇಗೆ ಸಾಲ ವಾಪಸ್ ಕೊಟ್ಟರೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಏನಾಗಬಹುದು? ಇಲ್ಲಿದೆ ಇಂಟರೆಸ್ಟಿಂಗ್ ಲೆಕ್ಕಾಚಾರ

ನವದೆಹಲಿ, ಏಪ್ರಿಲ್ 8: ತಾನು ನೀಡಿರುವ ಸಾಲವನ್ನು ವಾಪಸ್ ಮಾಡುವಂತೆ ಪಾಕಿಸ್ತಾನಕ್ಕೆ ಯುಎಇ ಕೇಳಿದೆ. ಸಾಲಗಳನ್ನು ಪಡೆದು ವಾಪಸ್ ಮಾಡದೇ ಹಾಗೇ ಉಳಿಸಿಕೊಂಡು ಹೋಗಿ ಅಭ್ಯಾಸಗೊಂಡಿರುವ ಪಾಕಿಸ್ತಾನಕ್ಕೆ (Pakistan) ಈಗ ಒತ್ತಡ ಶುರುವಾಗತೊಡಗಿದೆ. ಯುಎಇ ದೇಶಕ್ಕೆ ಭಿಕ್ಷೆ ಹಾಕುತ್ತಿದ್ದೇವೆ ಎಂಬಂತೆ ಪಾಕಿಸ್ತಾನದ ಕೆಲ ರಾಜಕಾರಣಿಗಳು ಕಿಚಾಯಿಸತೊಡಗಿದ್ದಾರೆ. ಸಾಲದ ಒತ್ತಡವು ಪಾಕಿಸ್ತಾನೀಯರ ಈ ವರ್ತನೆಗೆ ಕಾರಣವಾಗಿರಬಹುದು. ಪಾಕಿಸ್ತಾನಕ್ಕೆ ಯುಎಇ ನೀಡಿದ ಸಾಲದಲ್ಲಿ ಒಂದು ಭಾಗವನ್ನು ವಾಪಸ್ ಮಾಡುವಂತೆ ಕೇಳಲಾಗಿದೆ. ಮೂರು ಕಂತುಗಳಲ್ಲಿ ಪಾಕಿಸ್ತಾನ ಕಟ್ಟಬೇಕು. ಏಪ್ರಿಲ್ 11ರಂದು 450…

Read More

ದಾವಣಗೆರೆ: ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಗೆ ಬಂದ ಚುನಾವಣಾ ಸಿಬ್ಬಂದಿಗೆ ಸ್ಥಳದಲ್ಲೇ ಹೆಲ್ತ್ ಚೆಕಪ್

ದಾವಣಗೆರೆ, ಏಪ್ರಿಲ್ 8: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಈ ಚುನಾವಣೆಯಲ್ಲಿ ಭಾಗವಹಿಸುವ 1430 ಮಂದಿ ಚುನಾವಣಾ ಸಿಬ್ಬಂದಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲಾಡಳಿತ ವಿಶೇಷ ಗಮನ ಹರಿಸಿದೆ. ಹೃದಯಾಘಾತ, ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತಗಟ್ಟೆಗಳಲ್ಲೇ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಮತದಾನವನ್ನು ಹೆಚ್ಚಿಸುವ ಉದ್ದೇಶದಿಂದ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಆರೋಗ್ಯ ಸಮಸ್ಯೆಗಳಿಂದ ಮತಗಟ್ಟೆಗೆ ಬರಲು…

Read More

Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಭಾರತದಾದ್ಯಂತ ಇರುವ ಶಕ್ತಿ ಪೀಠಗಳಲ್ಲಿ ದೇವಿಗೆ ರೇಷ್ಮೆ ಸೀರೆ, ಬಂಗಾರ, ಹಣ್ಣು-ಹಂಪಲು ಅಥವಾ ವೈಭವದ ನೈವೇದ್ಯಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಅರಣ್ಯದ ನಡುವೆ ನೆಲೆಸಿರುವ ‘ಮಾ ಬಾಗದಾಯಿ’ ದೇವಾಲಯವು ಈ ಎಲ್ಲಾ ಸಂಪ್ರದಾಯಗಳಿಗಿಂತ ಭಿನ್ನವಾಗಿದೆ. ಇಲ್ಲಿ ಭಕ್ತರು ದೇವಿಗೆ ಅರ್ಪಿಸುವುದು ಕೇವಲ ಐದು ಕಲ್ಲುಗಳು ಮತ್ತು ಒಂದು ಹೂವು! ಕಲ್ಲುಗಳ ಅರ್ಪಣೆಯ ಹಿಂದಿರುವ ‘ಕುರುಬ ಭಕ್ತಿ’ಯ ಕಥೆ: ಶತಮಾನಗಳಷ್ಟು ಹಳೆಯದಾದ ಈ ವಿಶಿಷ್ಟ ಆಚರಣೆಯ ಹಿಂದೆ ಹೃದಯಸ್ಪರ್ಶಿ ಕಥೆಯೊಂದಿದೆ. ಜನಪದರ ನಂಬಿಕೆಯಂತೆ, ಸುಮಾರು…

Read More

ಸರ್​​​ ಶೂ ತೆಗೆಯಿರಿ, ನಾನು ಇದೇ ಕಾರಣಕ್ಕೆ ಬರುವುದಿಲ್ಲ: ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ!

ಜಮ್ಮು, ಏ.8 : ಶ್ರೀ ಮಾತಾ ವೈಷ್ಣೋದೇವಿ ಶ್ರೈನ್ ಬೋರ್ಡ್‌ನ (SMVDSB) ಹೆಚ್ಚುವರಿ ಸಿಇಒ (ACEO) ಅವರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನಡೆದುಕೊಂಡ ರೀತಿ ಈಗ ಭಾರಿ ವಿವಾದಕ್ಕೆ ಈಡಾಗಿದೆ. ಮಂಡಳಿಯ ಹೊಸ ಸ್ಮರಣಿಕೆ ಮಳಿಗೆಯ (Souvenir Shop) ಉದ್ಘಾಟನಾ ಸಮಾರಂಭದ ಪೂಜಾ ವಿಧಿವಿಧಾನಗಳ ವೇಳೆ ಪಾದರಕ್ಷೆಗಳನ್ನು ತೆಗೆಯಲು ಅಧಿಕಾರಿ ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಳಿಗೆಯ ಉದ್ಘಾಟನೆಗಾಗಿ ಅರ್ಚಕರು ಪೂಜೆ ನೆರವೇರಿಸುತ್ತಿದ್ದರು. ಈ ಸಂದರ್ಭದಲ್ಲಿ ಅಧಿಕಾರಿ ಶೂ ಧರಿಸಿಯೇ ಪೂಜೆಯಲ್ಲಿ ಭಾಗವಹಿಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಪಂಡಿತರು…

Read More

ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 

ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್​​ಗೆ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದೇನೆ ಎಂಬುದರ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Viral: ವ್ಯವಹಾರ ಶುದ್ಧವಾಗಿರಲಿ; ಸಾಲ ಕೇಳುವವರಿಗೆ ಅಂಗಡಿ ಮುಂಭಾಗ ಬೋರ್ಡ್ ಹಾಕಿ ಎಚ್ಚರಿಕೆ ಕೊಟ್ಟ ಮಾಲೀಕ

ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಹಣದ ವಿಚಾರ ಬಂದ್ರೆ ಅತ್ಯಾಪ್ತರು ಸಹ ದೂರವಾಗಿ ಬಿಡ್ತಾರೆ. ಹೀಗಾಗಿ ವ್ಯಾಪಾರಸ್ಥರು ಹಾಗೂ ಅಂಗಡಿ ಮಾಲೀಕರು (shop owner) ವ್ಯವಹಾರ ವಿಷ್ಯದಲ್ಲಿ ಕಟ್ಟುನಿಟ್ಟಾಗಿ ಇರೋದನ್ನು ನೀವು ನೋಡಿರುತ್ತೀರಿ. ಅಷ್ಟೇ ಅಲ್ಲ, ಸಾಲ ಕೇಳಿ ಸ್ನೇಹ (Friendship) ಕಳೆದುಕೊಳ್ಳಬೇಡಿ ಅನ್ನೋದನ್ನು ದೊಡ್ಡ ಅಕ್ಷರದಲ್ಲಿ ಅಂಗಡಿಗಳಲ್ಲಿ ಬರೆದಿರುತ್ತಾರೆ. ಇದೀಗ ಇಂತಹದ್ದೇ ಅಂಗಡಿ ಮುಂಭಾಗದಲ್ಲಿನ  ಬೋರ್ಡ್‌ ಪೋಟೋ ವೈರಲ್‌ ಆಗಿದೆ. ಈ ಬೋರ್ಡ್‌ನಲ್ಲಿ ಸಾಲ ಕೇಳುವವರಿಗೆ  ಅಂಗಡಿ ಮಾಲೀಕ ಖಡಕ್…

Read More

ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಮಲಯಾಳಂ ಸಿನಿಮಾಗಳು ಮೊದಲಿನಿಂದಲೂ ಬೆಂಗಳೂರು ನಂಟನ್ನು ಹೊಂದಿವೆ. ಅವರ ಅನೇಕ ಸಿನಿಮಾಗಳು ಬೆಂಗಳೂರಿನಲ್ಲಿ ಶೂಟ್ ಆದ ಉದಾಹರಣೆ ಇದೆ. ‘ಬೆಂಗಳೂರು ಡೇಸ್’, ‘ಡಿಯರ್ ಫ್ರೆಂಡ್’, ‘ಲೋಕಃ: ಚಾಪ್ಟರ್ 1’ ಹೀಗೆಯೇ ಅನೇಕ ಚಿತ್ರಗಳು ಬೆಂಗಳೂರು ಕನೆಕ್ಷನ್ ಹೊಂದಿವೆ. ಈಗ ಮುಂಬರುವ ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರಕ್ಕೂ ಕರ್ನಾಟಕದ ಲಿಂಕ್ ಇದೆ ಎಂಬ ವಿಷಯ ರಿವೀಲ್ ಆಗಿದೆ. ‘ಪಳ್ಳಿ ಚಟ್ಟಂಬಿ’ ಸಿನಿಮಾದಲ್ಲಿ ಟುವಿನೋ ಥಾಮಸ್ ನಟಿಸಿದ್ದಾರೆ. ಈ ಚಿತ್ರಕ್ಕೆ ಕಯಾದು ಲೋಹರ್ ನಾಯಕಿ. ಈ ಮೊದಲು ಕಯಾದು ಅವರು…

Read More

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾದ (Cinema) ಬಿಡುಗಡೆ ಆಗುವ ಕೆಲ ದಿನಗಳ ಮುಂಚೆ ಕೆಲವೊಮ್ಮೆ ಕೆಲವು ಗಂಟೆಗಳ ಮುಂಚೆ ಮಾತ್ರ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ಗಳು ಶುರು ಆಗುತ್ತವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆಗೆ ಎಂಟು ತಿಂಗಳ ಮುಂಚೆಯೇ ಟಿಕೆಟ್​​ಗಳು ಮಾರಾಟ ಆಗಿವೆ, ಅದೂ 90 ಸಾವಿರ ರೂಪಾಯಿಗೆ ಮಾರಾಟ ಆಗಿವೆ. ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ…

Read More