Headlines

ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?

ಬಾಗಲಕೋಟೆ, ಏಪ್ರಿಲ್​​ 08: ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಇವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್‌ಗಳತ್ತ ತೆರಳಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,775 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು…

Read More

ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಅಭಿನಯದ ಮೂಲಕ ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ನಟ ರಜನಿಕಾಂತ್ (Rajinikanth), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಅವರು. ಕೇವಲ ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ. ಇದೀಗ ನಟ ರಜನೀಕಾಂತ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ಯುವಜನತೆಯು ತಮ್ಮ ವಿದ್ಯಾಭ್ಯಾಸ ಮತ್ತು…

Read More

R Ashwin: ನಾ ನಿವೃತ್ತಿ ಘೋಷಿಸಲು ಇದುವೇ ಅಸಲಿ ಕಾರಣ!

ಭಾರತೀಯ ಕ್ರಿಕೆಟ್‌ನ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ (IPL 2026) ಸೀಸನ್-19 ಆರಂಭಕ್ಕೂ ಮುನ್ನ ಹಠಾತ್ ವಿದಾಯ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಅಶ್ವಿನ್ ರಿಟೈನ್ ಪ್ರಕ್ರಿಯೆಗೂ ಮುನ್ನ ನಿವೃತ್ತಿ ಘೋಷಿಸಿದ್ದರು. ಇದಕ್ಕೇನು ಕಾರಣ ಎಂಬುದನ್ನು ಅಶ್ವಿನ್ ತಮ್ಮಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಮನಬಿಚ್ಚಿ ಮಾತನಾಡಿರುವ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮೇಲಿನ ಅಭಿಮಾನಕ್ಕಾಗಿ ಈ ಕಠಿಣ…

Read More

ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

ಹುಬ್ಬಳ್ಳಿ, ಏಪ್ರಿಲ್​ 08: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಇವುಗಳ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆಯಾಗಿದ್ದು, ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಜೊತಗೆ ಮನೆ ಖರೀದಿಸಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇದೀಗ ಹಣವೂ ಇಲ್ಲ, ಮಗಳೂ ಇಲ್ಲ ಎಂಬಂತಾಗಿದೆ. ದಯವಿಟ್ಟು ಮಗಳನ್ನು ಹುಡುಕಿ ಕೊಡಿ ಎಂದು ತಾಯಿಯೊಬ್ಬಳು ಮನವಿ ಮಾಡಿದ್ದಾರೆ. ಕಳೆದ ಎರಡು…

Read More

Video Viral: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಚಂಡೀಗಢ: ವೈದ್ಯಕೀಯ ವೃತ್ತಿ ಎಂದರೆ ಅದೊಂದು ಪವಿತ್ರ ಸೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಕೇವಲ ‘ಹಣ ಮಾಡುವ ಯಂತ್ರ’ಗಳಂತೆ ನೋಡುತ್ತಿವೆ ಎಂಬ ಕಹಿಸತ್ಯವೊಂದನ್ನು ಯುವ ವೈದ್ಯೆಯೊಬ್ಬರು ಧೈರ್ಯವಾಗಿ ಬಯಲಿಗೆಳೆದಿದ್ದಾರೆ. ಚಂಡೀಗಢದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಈ ಘಟನೆ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಏನಿದು ಘಟನೆ? ಯುವ ವೈದ್ಯೆ ಡಾ. ಪ್ರಭ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯೆಯಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ…

Read More

Assembly Elections 2026 Voting: ನಾಳೆ ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 4ಕ್ಕೆ ಫಲಿತಾಂಶ

ನವದೆಹಲಿ, ಏಪ್ರಿಲ್ 08: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ(Assembly Election) ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಎಷ್ಟು ಮತದಾರರಿದ್ದಾರೆ? ಅಸ್ಸಾಂನಲ್ಲಿ ಒಟ್ಟು 25…

Read More

Karnataka 2nd PUC Result 2026: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಂಜೆ ರಿಸಲ್ಟ್ ಘೋಷಿಸಲಿದ್ದಾರೆ ಸಚಿವ ಮಧು ಬಂಗಾರಪ್ಪ!

ಬೆಂಗಳೂರು, ಏ.8: ದ್ವಿತೀಯ ಪಿಯುಸಿ ಪರೀಕ್ಷೆ ( 2nd PUC Result 2026) ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನಾಳೆ, ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 8: ಬಹಳ ದಿನಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 300ರಿಂದ 500 ರೂಗಳಷ್ಟು ಏರಿಕೆ ಪಡೆದಿದೆ. ಬೆಳ್ಳಿ ಬೆಲೆಯೂ ಕೂಡ ಒಂದು ಗ್ರಾಮ್​ಗೆ 10 ರೂನಷ್ಟು ದುಬಾರಿಗೊಂಡಿದೆ. ಚೀನಾ ದೇಶದ ಸೆಂಟ್ರಲ್ ಬ್ಯಾಂಕ್ ಸತತವಾಗಿ ಚಿನ್ನದ ಖರೀದಿ ಮಾಡುತ್ತಿರುವುದು ಬೆಲೆ ಹೆಚ್ಚಳಕ್ಕೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,000…

Read More

ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಬೆಂಗಳೂರು, ಏಪ್ರಿಲ್ 08: ಓದು ಮುಗಿಸಿ, ಕೆಲಸ ಹಿಡಿದು, ಆರಾಮದಾಯಕ ಜೀವನ ಕಟ್ಟಿಕೊಂಡರೆ ಸಾಕು ಎನ್ನುವ ಮನೋಭಾವ ಹಲವು ಯುವಕರಿಗಿದೆ. ಆದರೆ ಕೆಲವೇ ಕೆಲವರು ಮಾತ್ರ ರಿಸ್ಕ್ ತೆಗೆದುಕೊಂಡು ತಾವೇ ಒಂದು ಸ್ಟಾರ್ಟ್​ಅಪ್ (Startup) ಮಾಡಲು ಮುಂದಾಗುತ್ತಾರೆ. ಅಂತೆಯೇ ನಗರದಲ್ಲಿ ಯುವ ಉದ್ಯಮಿಯೊಬ್ಬರು ತಮ್ಮ ಕಾರ್ಪೊರೇಟ್ ವೃತ್ತಿಯನ್ನು ತೊರೆದು ಹೊಸ ಪ್ರಯೋಗಕ್ಕೆ ಕೈಹಾಕಿರುವ ಘಟನೆ ಗಮನಸೆಳೆದಿದೆ. ನಗರದ ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಪ್ರದೇಶದ 23 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಫ್ಲಾಟ್‌ನಿಂದ ಕ್ಲೌಡ್ ಕಿಚನ್ ಆರಂಭಿಸಿ ಸ್ವಯಂ…

Read More

ಸಾಲದ ವಿಚಾರದಲ್ಲಿ ರಾಜ್‌ಪಾಲ್ ಯಾದವ್​ರನ್ನು ಅಪಹಾಸ್ಯ ಮಾಡಿದವರಿಗೆ ಸಲ್ಮಾನ್ ನೇರ ಉತ್ತರ

ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಾಜ್‌ಪಾಲ್ ಯಾದವ್ ಅವರನ್ನು ಅಪಹಾಸ್ಯ ಮಾಡಲಾಗಿತ್ತು. ಈ ವಿಡಿಯೋ ವೈರಲ್ ಆದ ನಂತರ, ಸಲ್ಮಾನ್ ಖಾನ್ ಈಗ ರಾಜ್‌ಪಾಲ್ ಅವರನ್ನು ಬೆಂಬಲಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾಲರ್ ದರ ಏರಿಕೆಯ ಬಗ್ಗೆ ಮಾತನಾಡುವಾಗ, ಕಾರ್ಯಕ್ರಮದ ನಿರೂಪಕ, ಪತ್ರಕರ್ತ ಸೌರಭ್ ದ್ವಿವೇದಿ, ಚೆಕ್ ಬೌನ್ಸ್ ವಿಷಯದ ಬಗ್ಗೆ ರಾಜ್‌ಪಾಲ್ ಅವರನ್ನು ಅಣಕಿಸಿದರು. ಡಾಲರ್ ದರ ಹೆಚ್ಚಾದರೂ ಅಥವಾ ಕಡಿಮೆಯಾದರೂ, ನೀವು ಅದಕ್ಕೆ ತಕ್ಕಂತೆ ಸಾಲದ ಮೊತ್ತವನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು…

Read More