Category Archives: Blog

Your blog category

ಸರಿಯಾದ ಸಮಯಕ್ಕೆ ಸಿಂಧೂರ ತಂದು, ನಿಲ್ಲಬೇಕಿದ್ದ ಮದುವೆಯನ್ನು ಸರಾಗವಾಗಿ ನಡೆಯುವಂತೆ ಮಾಡಿದ ಬ್ಲಿಂಕಿಟ್ – Kannada News | Delhi: Wedding Ritual Resumes After Blinkit Rush Delivers Sindoor

ದೆಹಲಿ, ಡಿಸೆಂಬರ್ 29: ಇತ್ತೀಚಿನ ದಿನಗಳಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೊಮಾಟೊ ಹೀಗೆ ಆನ್​ಲೈನ್​ ಆ್ಯಪ್​ಗಳದ್ದೇ ಹವಾ. ಬ್ಲಿಂಕಿಟ್ ಕೂಡಾ ಕಣ್ಣು ಮಿಟುಕಿಸುವಷ್ಟರಲ್ಲಿ ನಾವು ಆರ್ಡರ್​ ಮಾಡಿದ್ದನ್ನು ನಮ್ಮ ಕಣ್ಣಮುಂದಿರಿಸುತ್ತದೆ. ಈ ಬಾರಿ ಬ್ಲಿಂಕಿಟ್ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ದೆಹಲಿಯಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿತ್ತು, ಎಲ್ಲಾ ವಿಧಿ ವಿಧಾನಗಳು ನಡೆಯುತ್ತಿದ್ದವು. ಇನ್ನೇನು ವರ ವಧುವಿಗೆ ಸಿಂಧೂರ ಹಚ್ಚಬೇಕು ಎನ್ನುವಷ್ಟರಲ್ಲಿ ತಾವು ಸಿಂಧೂರವನ್ನು ತಂದೇ ಇಲ್ಲ ಎಂಬುದು ಕುಟುಂಬಕ್ಕೆ ನೆನಪಾಗಿದೆ.

ಸಪ್ತಪದಿ ಮುಗಿದಿತ್ತು, ಪತ್ನಿ ಹಣೆಗೆ ಸಿಂಧೂರವಿಡಬೇಕು ಎನ್ನುವಷ್ಟರಲ್ಲಿ ಸಿಂಧೂರವಿರಲಿಲ್ಲ, ಆಗಲೇ ನೆನಪಾಗಿದ್ದು, ಬ್ಲಿಂಕಿಟ್ ಇದು ಕೂಡಲೇ ಸಿಂಧೂರವನ್ನು ಡೆಲಿವರಿ ಮಾಡಿದೆ. ಮದುವೆ ಸರಾಗವಾಗಿ ನಡೆದಿದೆ. ಮದುವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು, ಕುಟುಂಬ ಸದಸ್ಯರು ಪರಿಸ್ಥಿತಿಯನ್ನು ಪರಿಹರಿಸಲು ಒಟ್ಟುಗೂಡಿದರು.

ಭಯಭೀತರಾಗುವ ಅಥವಾ ಅಂಗಡಿಯನ್ನು ಹುಡುಕಲು ಕುಟುಂಬ ಸದಸ್ಯರನ್ನು ಕಳುಹಿಸುವ ಬದಲು, ಅವರು ಬ್ಲಿಂಕಿಟ್‌ನಲ್ಲಿ ತುರ್ತು ಆರ್ಡರ್ ಮಾಡಿದ್ದರು. ಕೆಲವೇ ನಿಮಿಷಗಳಲ್ಲಿ ಸಿಂಧೂರ ಅವರ ಕೈ ಸೇರಿತು. ಅತಿಥಿಗಳ ಚಪ್ಪಾಳೆ ಮತ್ತು ಹರ್ಷೋದ್ಗಾರದ ನಡುವೆ ವರನು ಆಚರಣೆಯನ್ನು ಮುಗಿಸುತ್ತಾರೆ. ಬ್ಲಿಂಕಿಟ್ ಡೆಲಿವರಿ ಬಾಯ್​ನನ್ನು ಸೈಲೆಂಟ್ ಸೂಪರ್ ಹೀರೋ ಎಂದು ಕರೆದಿದ್ದಾರೆ.

ಪೋಸ್ಟ್

ಗುಜರಾತ್‌ನಲ್ಲಿ ನಡೆದ ನನ್ನ ಮೈದುನನ ಮದುವೆಯಲ್ಲೂ ಇಂಥಾ ಘಟನೆ ಸಂಭವಿಸಿದೆ ಮತ್ತು ಕಣ್ಣು ಮಿಟುಕಿಸುವುದರ ಒಳಗೆ ವ್ಯಕ್ತಿ ಅದನ್ನು ತಲುಪಿಸಿದ್ದಾರೆ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.

Published On – 12:53 pm, Mon, 29 December 25

Source link

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ ಬಗ್ಗೆಯೂ ಮಾತನಾಡಿದ್ದಾರೆ.

ಗಿಲ್ಲಿ ಕ್ರೇಜ್ ನೋಡಿ ಶಾಕ್ ಆದೆ..

‘ಗಿಲ್ಲಿ ಇಡೀ ದಿನ ಎನರ್ಜಿಯಲ್ಲೇ ಇರುತ್ತಾನೆ. ಅವನ ಕೌಂಟರ್ ನೋಡಿ ಶಾಕ್ ಆಗ್ತಾ ಇತ್ತು. ರಕ್ಷಿತಾ ಶೆಟ್ಟಿ ಚೆನ್ನಾಗಿ ಆಡ್ತಾ ಇದಾಳೆ. ಅವಳ ಮಾತು ಇಷ್ಟ ಆಗ್ತಿದೆ. ಅವಳು ಯಾರಿಗೂ ಬೇಸರ ಮಾಡಿಲ್ಲ’ ಎಂದಿದ್ದಾರೆ ಸೂರಜ್.
‘ಗಿಲ್ಲಿ ಆಟ ಕಾವ್ಯಾಗೆ ಪ್ಲಸ್ ಆಗುತ್ತಿದೆ. ಗಿಲ್ಲಿ ಯಾವಾಗಲೂ ಕಾವ್ಯಾ ಜೊತೆ ಇರ್ತಾನೆ. ಇದು ತಪ್ಪು ಎಂದು ಹೇಳುವುದಿಲ್ಲ. ಗಿಲ್ಲಿಯಿಂದ ಕಾವ್ಯಾಗೆ ಸಹಾಯ ಆಗುತ್ತಿದ್ದೆ.

ಕಾವ್ಯಾಗೆ ಮುಳುವಾಗುತ್ತದೆ..

ಕಾವ್ಯಾ ಸಹೋದರ ಬಿಗ್ ಬಾಸ್ ಮನೆಗೆ ಬಂದಿದ್ದರು. ಈ ವೇಳೆ ಹೊರಗಿನ ವಿಷಯ ಹೇಳಿದ್ದರು. ಇದರಿಂದ ಕಾವ್ಯಾ ಸಹೋದರನ ಅರ್ಧಕ್ಕೆ ಹೊರಕ್ಕೆ ಕಳುಹಿಸಬೇಕಾಯಿತು. ಈ ಬಗ್ಗೆ ಸೂರಜ್ ಮಾತನಾಡಿದ್ದಾರೆ. ‘ಕಾವ್ಯಾಗೆ ಹೊರಗಿರೋ ಒಪೀನಿಯನ್ ಸಿಕ್ಕಿದೆ. ಅದೇ ರೀತಿ ಆಡಿದರೆ ಅವರಿಗೆ ನೆಗೆಟಿವ್ ಆಗುತ್ತದೆ. ಕಾವ್ಯಾರ ತಮ್ಮಆ ರೀತಿ ಮಾಡಿದ್ದು ಸರಿಯಲ್ಲ’ ಎಂದಿದ್ದಾರೆ ಸೂರಜ್.

ಎಲಿಮಿನೇಷನ್ ಫೇರ್ ಅನಿಸಿದೆ.

‘ಬಿಗ್ ಬಾಸ್ ಮನೆಯ ಅನುಭವ ಚೆನ್ನಾಗಿತ್ತು. ಸಾಮಾನ್ಯ ವ್ಯಕ್ತಿಯಾಗಿ ಹೋಗಿ ಇಷ್ಟು ದಿನ ಆಡಿದ್​ದೇನೆ. ಆರಂಭದಲ್ಲಿ 4-5 ವಾರ ಇರುತ್ತೇನೆ ಎಂದುಕೊಂಡಿದ್ದೆ. ಆದರೆ, ನನ್ನ ಸಾಮರ್ಥ್ಯ ಏನು ಎಂಬುದು ನಂತರ ಗೊತ್ತಾಗಿದೆ. ಫಿನಾಲೆವರೆಗೆ ಇರ್ತೀನಿ ಎಂದುಕೊಂಡಿದ್ದೆ, ಆದರೆ, ಆಗಿಲ್ಲ. ಆ ಬಗ್ಗೆ ಬೇಸರ ಇದೆ. ಎಲ್ಲರ ಜೊತೆ ಒಳ್ಳೆಯ ರೀತಿಯಲ್ಲಿ ಒಡನಾಡಬೇಕಿತ್ತು ಎಂದು ಈಗ ಅನಿಸುತ್ತದೆ. ಹಾಗಿದ್ದರೆ ನಾನು ಮತ್ತೊಂದಷ್ಟು ದಿನ ಮನೆಯಲ್ಲಿ ಇರೋ ಅವಕಾಶ ಸಿಗುತ್ತಿತ್ತು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಗಿಲ್ಲಿ ರೀತಿಯ ಹುಡುಗ ಬೇಕು’; ಮನಸ್ಸಿನ ಭಾವನೆ ಹೊರಹಾಕಿದ ರಕ್ಷಿತಾ ಶೆಟ್ಟಿ

‘ನಾನು ಸ್ಟ್ರಾಂಗ್ ಸ್ಪರ್ಧಿ. ಸ್ಪಂದನಾ ಅವರಿಗಿಂತ ಟಫ್ ಕಾಂಪಿಟೇಟರ್ ಆಗಿದ್ದೆ. ಜನರು ಅವರಿಗೆ ವೋಟ್ ಹಾಕಿ ಉಳಿಸಿಕೊಂಡಿದ್ದಾರೆ ಎಂದರೆ ನನಗೇನು ತೊಂದರೆ ಇಲ್ಲ. ಎಲ್ಲರೂ ರಾಶಿಕಾ ಜೊತೆ ಸ್ಟ್ರಕ್ ಆಗಿದ್ದೀನಿ ಎನ್ನುತ್ತಿದ್ದರು. ಆದರೆ, ನಾನು ಹಾಗೆ ಸ್ಟ್ರಕ್ ಆಗಿಲ್ಲ’ ಎಂದಿದ್ದಾರೆ ಸೂರಜ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:15 pm, Mon, 29 December 25

Source link

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ – Kannada News | Karnataka new year restrictions nandi hills mullayanagiri and seetalayyanagiri closed on december 31

ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್​​ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್​​ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ನಂದಿಗಿರಿಧಾಮಕ್ಕಿಲ್ಲ ಪ್ರವೇಶ

ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್​​ ಆಗಿರಲಿದೆ. ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರರಿಂದ ಆದೇಶ ಮಾಡಿದ್ದಾರೆ. ಕುಡಿದು ಪ್ರವಾಸಿಗರ ಮೋಜು ಮಸ್ತಿ ಮಾಡೋದನ್ನು ತಡೆಯುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರೋದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2026ರ ಹೊಸ ವರ್ಷ ಈ ಮೂರು ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ; ಮುಟ್ಟಿದೆಲ್ಲಾ ಚಿನ್ನ!

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ನಿರ್ಬಂಧ

ನ್ಯೂ ಇಯರ್ ಆಚರಣೆಗೆ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಜಿಲ್ಲಾಡಳಿತ ಅಲರ್ಟ್ ಆಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಪ್ರವಾಸಿತಾಣಗಳಿಗೆ ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ಸ್ಥಾಳಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಪ್ರವಾಸಿತಾಣಗಳಲ್ಲಿ ಪಾರ್ಟಿ, ನ್ಯೂ ಇಯರ್ ಆಚರಣೆಗೂ ನಿರ್ಬಂಧ ಹೇರಲಾಗಿದೆ.

ಮಂಗಳವಾರವೂ ಬನ್ನೇರುಘಟ್ಟ ಮೃಗಾಲಯ ಓಪನ್

ಕ್ರಿಸ್ ಮಸ್ ಮತ್ತು ಹೊಸವರ್ಷಾಚರಣೆ ರಜೆ ಹಿನ್ನೆಲೆ ಮಂಗಳವಾರವೂ ಬನ್ನೇರುಘಟ್ಟ ಮೃಗಾಲಯ ಓಪನ್ ಇರಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಝೂಗೆ ಭೇಟಿ ನೀಡುವ ಸಾಧ್ಯತೆ ಹಿನ್ನಲೆ ವಾಡಿಕೆಯ ರಜೆ ದಿನವೂ ಮೃಗಾಲಯ ಓಪನ್ ಇರಲಿದೆ. ಪ್ರವಾಸಿಗರಿಗೆ ಮೃಗಾಲಯ ಮತ್ತು ಚಿಟ್ಟೆ ಪಾರ್ಕ್ ನೋಡಲು ಅವಕಾಶ ಇರಲಿದ್ದು, ಆನ್​​ಲೈನ್​​ ಮೂಲಕವೂ ಡಿಕೆಟ್​​ ಪಡೆದುಕೊಳ್ಳಬಹುದು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಡಳಿತ ಮಂಡಳಿ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:28 pm, Mon, 29 December 25

Source link

ಅಂತ್ಯಕ್ರಿಯೆಗೆಂದು ಬಂದವರು ಹೋಗಿದ್ದು ಆಸ್ಪತ್ರೆಗೆ, 200 ಜನರಿಗೆ ರೇಬಿಸ್ ಇಂಜೆಕ್ಷನ್, ಆಗಿದ್ದೇನು? – Kannada News | 200 UP Villagers Get Rabies Shots After Consuming Curd From Buffalo Killed By Dog

ಉತ್ತರ ಪ್ರದೇಶ, ಡಿಸೆಂಬರ್ 29: ಅಂತ್ಯಕ್ರಿಯೆಗೆ ಬಂದ 200ಕ್ಕೂ ಹೆಚ್ಚು ಮಂದಿ ರೇಬಿಸ್(Rabies) ಚುಚ್ಚುಮದ್ದು ಪಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬುಡೌನ್‌ನ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನಿಂದ ಮಾಡಿದ ರಾಯತಾವನ್ನು ತಿಂದಿದ್ದರು. ಬಳಿಕ 200 ಮಂದಿಗೂ ರೇಬಿಸ್ ಚುಚ್ಚುಮದ್ದು ನೀಡಲಾಗಿದೆ.

ಗ್ರಾಮಸ್ಥರ ಪ್ರಕಾರ, ಡಿ.23ರಂದು ಗ್ರಾಮದಲ್ಲಿ ಅಂತ್ಯಕ್ರಿಯೆಯೊಂದು ನಡೆದಿತ್ತು. ಅಲ್ಲಿ ಜನರು ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನಿಂದ ಮಾಡಿದ ಮೊಸರನ್ನು ತಿಂದಿದ್ದರು. ನಂತರ, ಖಾದ್ಯ ತಯಾರಿಸಲು ಬಳಸಲಾದ ಹಾಲು ಕೆಲವು ದಿನಗಳಿಂದ ನಾಯಿ ಕಚ್ಚಿ ಸತ್ತ ಎಮ್ಮೆಯದ್ದು ಎಂಬುದು ಬೆಳಕಿಗೆ ಬಂದಿತ್ತು. ಡಿಸೆಂಬರ್ 26 ರಂದು ಎಮ್ಮೆ ಸಾವನ್ನಪ್ಪಿತು, ನಂತರ ಸೋಂಕಿನ ಭಯದಿಂದಾಗಿ ಗ್ರಾಮದಲ್ಲಿ ಭೀತಿ ಹರಡಿತ್ತು. ಗ್ರಾಮಸ್ಥರು ಉಜ್ನಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಗಿ ಲಸಿಕೆ ಹಾಕಿಸಿಕೊಂಡರು.

ಗ್ರಾಮದಲ್ಲಿ ಒಂದು ಎಮ್ಮೆಯನ್ನು ಹುಚ್ಚು ನಾಯಿ ಕಚ್ಚಿ ರೇಬೀಸ್ ಲಕ್ಷಣಗಳಿಂದ ಸಾವನ್ನಪ್ಪಿದೆ ಎಂಬ ಮಾಹಿತಿ ಬಂದಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರಾಮೇಶ್ವರ ಮಿಶ್ರಾ ಭಾನುವಾರ ತಿಳಿಸಿದ್ದಾರೆ.
ಗ್ರಾಮಸ್ಥರು ರಾಯ್ತಾ ಸೇವಿಸಿದ್ದಾರೆ ಎಂದು ವರದಿಯಾಗಿದೆ. ಮುನ್ನೆಚ್ಚರಿಕೆಯಾಗಿ, ಎಲ್ಲರಿಗೂ ರೇಬೀಸ್ ಇಂಜೆಕ್ಷನ್ ಪಡೆಯುವಂತೆ ಸೂಚಿಸಲಾಯಿತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಕೇವಲ ನಾಯಿ ನೆಕ್ಕಿದ್ದಕ್ಕೆ ರೇಬಿಸ್​​ನಿಂದ ಪ್ರಾಣಬಿಟ್ಟ ಬಾಲಕ

ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ. ಸಂದೇಹ ಇದ್ದ ಎಲ್ಲರಿಗೂ ರೇಬಿಸ್ ವಿರೋಧಿ ಲಸಿಕೆ ನೀಡಲಾಯಿತು. ಸಾಮಾನ್ಯವಾಗಿ, ಹಾಲನ್ನು ಕುದಿಸಿದ ನಂತರ ರೇಬೀಸ್ ಬರುವ ಅಪಾಯವಿರುವುದಿಲ್ಲ, ಆದರೆ ಯಾವುದೇ ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಲಸಿಕೆಯನ್ನು ನೀಡಲಾಯಿತು ಎಂದು ಮಿಶ್ರಾ ಹೇಳಿದರು.

ಆರೋಗ್ಯ ಇಲಾಖೆಯ ಪ್ರಕಾರ, ಗ್ರಾಮದಲ್ಲಿ ಇಲ್ಲಿಯವರೆಗೆ ಯಾವುದೇ ರೋಗ ಹರಡಿಲ್ಲ ಮತ್ತು ಪರಿಸ್ಥಿತಿ ಸಾಮಾನ್ಯವಾಗಿದೆ. ಉಜ್ನಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೇಬಿಸ್ ನಿರೋಧಕ ಇಂಜೆಕ್ಷನ್ ಪಡೆಯಲು ಬಂದವರಿಗೆ ತಕ್ಷಣವೇ ಇಂಜೆಕ್ಷನ್ ನೀಡಲಾಗುತ್ತಿತ್ತು ಎಂದು ಸಿಎಂಒ ತಿಳಿಸಿದ್ದಾರೆ.

ಈ ಉದ್ದೇಶಕ್ಕಾಗಿ, ಪ್ರಾಥಮಿಕ ಆರೋಗ್ಯ ಕೇಂದ್ರ/ಸಮುದಾಯ ಕೇಂದ್ರವನ್ನು ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ ತೆರೆಯಲಾಗಿತ್ತು. ಯಾವುದೇ ರೀತಿಯ ವದಂತಿ ಅಥವಾ ಭೀತಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಗ್ರಾಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಗ್ರಾಮಸ್ಥರಾದ ಧರ್ಮಪಾಲ್, ಆ ಎಮ್ಮೆಯನ್ನು ನಾಯಿ ಕಚ್ಚಿದ್ದರಿಂದ ಅದು ಅನಾರೋಗ್ಯಕ್ಕೆ ಒಳಗಾಯಿತು ಮತ್ತು ನಂತರ ಸತ್ತುಹೋಯಿತು ಎಂದು ಹೇಳಿದರು. ಅದೇ ಎಮ್ಮೆಯ ಹಾಲಿನಿಂದ ರಾಯ್ತಾ ತಯಾರಿಸಲ್ಪಟ್ಟಿದ್ದರಿಂದ ಸೋಂಕಿನ ಭಯ ಹುಟ್ಟಿಕೊಂಡಿತು, ಆದ್ದರಿಂದ ಅವರಿಗೆ ರೇಬೀಸ್ ಇಂಜೆಕ್ಷನ್ ನೀಡಲಾಯಿತು ಎಂದರು.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ವೋಟ್ಪಿಸ್ಮಿಕ್‌ (Whotfismick) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಉದ್ಯೋಗಿಯು ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದಿರುವುದನ್ನು ಕಾಣಬಹುದು. ಕಂಪನಿ ನನ್ನನ್ನು ಹೇಗೆ ನಡೆಸಿಕೊಂಡಿತು ಎಂಬುದರ ಸಂಕೇತವಾಗಿ ನಾನು ಈ ಟಾಯ್ಲೆಟ್ ಪೇಪರ್‌ರನ್ನು ನನ್ನ ರಾಜೀನಾಮೆ ಪತ್ರ ಬರೆಯಲು ಆರಿಸಿಕೊಂಡೆ. ನಾನು ಈ ಕೆಲಸವನ್ನು ತ್ಯಜಿಸುತ್ತೇನೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ:ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ

ಡಿಸೆಂಬರ್ 23 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 1.6 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ವ್ಯಕ್ತಿಯೂ ಕಂಪನಿ ನಡೆಸಿಕೊಂಡ ರೀತಿ ತೀರಾ ವೈಯುಕ್ತಿಕವಾಗಿ ತೆಗೆದುಕೊಂಡ ಎನಿಸುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ಕಂಪನಿಗೆ ಮುಟ್ಟಿಕೊಳ್ಳುವಂತಹ ಉತ್ತರ ನೀಡಿದ ಉದ್ಯೋಗಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅತ್ಯದ್ಭುತ ಪ್ರತಿಭೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೇಣುಗೋಪಾಲ್ ಒಂದು ಸಂದೇಶಕ್ಕೆ ಕೇರಳದವರಿಗೆ 180 ಮನೆ ಕಟ್ಟಿ ಕೊಡ್ತೀರಾ, ನಮ್ಮವರಿಗೆ ಯಾರು ಮನೆ ಕೊಡ್ತಾರೆ? ರವಿಕುಮಾರ್ ಪ್ರಶ್ನೆ – Kannada News | Kogilu Layout Demolition Case: BJP MLC Ravi Kumar Questions Who Will Build Houses for Kannadigas

ಬಿಜೆಪಿ ಎಂಎಲ್​ಸಿ ರವಿಕುಮಾರ್ ಹಾಗೂ ಕೋಗಿಲು ಅಕ್ರಮ ಶೆಡ್​ಗಳ ತೆರವು ಮಾಡಿದ ಜಾಗ

ಬೆಂಗಳೂರು, ಡಿಸೆಂಬರ್ 29: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ (ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದರು) ಲೋಕಸಭಾ ಕ್ಷೇತ್ರ ವಯನಾಡ್​​ನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದ್ದ ವಿಚಾರ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್​ಗಳ ತೆರವು ವಿಚಾರ ಕೂಡ ಅದೇ ರೀತಿಯ ರಾಜಕೀಯ ಆಯಾಮ ಪಡೆದುಕೊಂಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಒಂದು ಎಕ್ಸ್ ಸಂದೇಶಕ್ಕೆ ಕೇರಳದವರಿಗೆ 180 ರಿಂದ 200 ಮನೆಗಳನ್ನು ಕಟ್ಟಿಕೊಡಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆಯೇ? ಹಾಗಾದರೆ, ಉತ್ತರ ಕರ್ನಾಟಕ ಸೇರಿದಂತೆ ನಮ್ಮದ ರಾಜ್ಯದ ನಿರಾಶ್ರಿತರಿಗೆ ಯಾರು ಮನೆ ಕಟ್ಟಿಕೊಡುತ್ತಾರೆ ಎಂದು ಬಿಜೆಪಿ (BJP) ಎಂಎಲ್​ಸಿ ರವಿಕುಮಾರ್ (Ravikumar) ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರವಿಕುಮಾರ್, ರಾಜ್ಯ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೆಸಿ ವೇಣುಗೋಪಾಲ್ ಅವರ ಒಂದು ಟ್ವೀಟ್‌ಗೆ ಅಕ್ರಮ ಮನೆಗಳನ್ನು ಸಕ್ರಮಗೊಳಿಸುವ ಸರ್ಕಾರದ ಉದ್ದೇಶವನ್ನು ರವಿಕುಮಾರ್ ಪ್ರಶ್ನಿಸಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿಗೂ ಮನೆ ಇಲ್ಲದ ಸಾವಿರಾರು ಕನ್ನಡಿಗರಿಗೆ ನೆರವಾಗದಿರುವುದು ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿತ್ತು. ಈ ಕುರಿತು ಆರಂಭದಲ್ಲಿ, ತೆರವುಗೊಳಿಸಿದ ಕಟ್ಟಡಗಳು ಕೇರಳದವರು ಅಕ್ರಮವಾಗಿ ನಿರ್ಮಿಸಿದವು ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ, ಕೇರಳ ಸಿಎಂ ಎಕ್ಸ್​ ಸಂದೇಶದೊಂದಿಗೆ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಸರ್ಕಾರವನ್ನು ಪ್ರಜಾಪ್ರಭುತ್ವ ವಿರೋಧಿ ಮತ್ತು ಜೆಸಿಬಿ ಸರ್ಕಾರ ಎಂದು ತೀವ್ರವಾಗಿ ಟೀಕಿಸಿದ್ದರು. ಇದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಕೇರಳ ಮುಖ್ಯಮಂತ್ರಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಖಂಡಿಸಿದ್ದರು.

ಆದರೆ, ಈ ಘಟನೆಗಳ ನಂತರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಎಕ್ಸ್​​ ಸಂದೇಶ ಪ್ರಕಟಿಸಿದ ತಕ್ಷಣವೇ ರಾಜ್ಯ ಸರ್ಕಾರ, ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಭರವಸೆ ನೀಡಿದೆ.

ಇದನ್ನೂ ಓದಿ: ಯೋಗಿ ಬುಲ್ಡೋಜರ್ ರಾಜ್ ಜತೆ ಹೋಲಿಕೆ ಬೇಡ: ಕೋಗಿಲು ಶೆಡ್​ಗಳ ತೆರವು ವಿಚಾರದಲ್ಲಿ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಮುಸ್ಲಿಂ ಲೀಗ್

ಈ ಬಗ್ಗೆ ವಾಗ್ದಾಳಿ ನಡೆಸಿದ ರವಿ ಕುಮಾರ್, ‘ನಮ್ಮ ಎಐಸಿಸಿ ಜನರಲ್ ಸೆಕ್ರೆಟರಿ ಒಂದು ಎಕ್ಸ್ ಪೋಸ್ಟ್ ಮಾಡಿದ್ದಕ್ಕೆ ಕೇರಳದವರಿಗೆ ಮನೆ ಕಟ್ಟಿಕೊಡುತ್ತೇವೆ ಎಂದು ಹೇಳುತ್ತಿದ್ದೀರಾ? ಕನ್ನಡಿಗರು ಕಣ್ಣೀರು ಸುರಿಸುತ್ತಿದ್ದಾರೆ. ಹಗಲು ರಾತ್ರಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ನಿಮ್ಮ ಕಣ್ಣಿಗೆ ಕಾಣುವುದಿಲ್ಲವೇ? ವೇಣುಗೋಪಾಲ್ ಸಂದೇಶಕ್ಕೆ ಅವರಿಗೆ 180, 200 ಮನೆ ಕಟ್ಟಿಕೊಡುತ್ತೀರೆಂದರೆ, ಉತ್ತರ ಕರ್ನಾಟಕದಲ್ಲಿ ಮನೆ ಇಲ್ಲದವರು ಎಷ್ಟು ಜನ ಇದ್ದಾರೆ? ಇಡೀ ಕರ್ನಾಟಕ ರಾಜ್ಯದಲ್ಲಿ ಮನೆ ಇಲ್ಲದವರು ಎಷ್ಟು ಜನ ಇದ್ದಾರೆ, ಅವರಿಗೆ ಕಟ್ಟಿಕೊಟ್ಟಿದ್ದೀರಾ? ಇದಾ ನಿಮ್ಮ ಧೋರಣೆ?’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾಖಲೆ ವಿಶ್ವ ದಾಖಲೆ… ತನ್ನದೇ ವರ್ಲ್ಡ್​ ರೆಕಾರ್ಡ್ ಮುರಿದ ಸ್ಮೃತಿ ಮಂಧಾನ – Kannada News | Smriti Mandhana Breaks Her Own World Record

2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1659 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು.

Source link

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ, ಪಾರ್ಕಿಂಗ್ ಜಾಗಗಳ ವಿವರ ಇಲ್ಲಿದೆ – Kannada News | Bangalore Traffic Advisory Issued For New Year 2026 Celebration in Bengaluru City; Check Detailed Report Here

ಬೆಂಗಳೂರಿನಲ್ಲಿ 2026 ರ ಹೊಸ ವರ್ಷಾಚರಣೆಗೆ ಹೊಸ ಟ್ರಾಫಿಕ್ ರೂಲ್ಸ್!

ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಹೊಸವರ್ಷದ (New year 2026) ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಈಗಾಗಲೇ ಹೊಸರ್ಷಾಚರಣೆಗೆ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ಬೆನ್ನಲ್ಲೇ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ ಹೇರಲಾಗಿದ್ದು, ಪಾರ್ಕಿಂಗ್ ವ್ಯವಸ್ಥೆ ಮತ್ತು ಪರ್ಯಾಯ ಮಾರ್ಗಗಳನ್ನು ಟ್ರಾಫಿಕ್ ಅಡ್ವೈಸರಿ ಹಂಚಿಕೊಂಡಿದೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಡಿಸೆಂಬರ್ 31ರ ರಾತ್ರಿ 8 ಗಂಟೆಯಿಂದ ಜನವರಿ 1ರ ಮಧ್ಯರಾತ್ರಿ 02 ಗಂಟೆಯವರೆಗೆ ಪೊಲೀಸ್ ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರ ಎಲ್ಲಾ ವಾಹನಗಳ ಸಂಚಾರವನ್ನು ಕೆಳಕಂಡ ರಸ್ತೆಗಳಲ್ಲಿ ನಿಷೇಧಿಸಲಾಗಿದೆ

  • ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆ
  • ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ವರೆಗೆ
  • ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
  • ರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
  • ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ ವೃತ್ತ) ವರೆಗೆ
  • ರೆಸ್ಟ್ ಹೌಸ್ ರಸ್ತೆ: ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ
  • ರೆಸಿಡೆನ್ಸಿ ಕ್ರಾಸ್ ರಸ್ತೆ: ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ ರಸ್ತೆ ಜಂಕ್ಷನ್‌ವರೆಗೆ (ಶಂಕರ್ ನಾಗ್ ಚಿತ್ರಮಂದಿರದವರೆಗೆ)

ಇದನ್ನೂ ಓದಿ New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು

ನಿರ್ಬಂಧಿತ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಡಿಸೆಂಬರ್ 31ರ ರಾತ್ರಿ 08 ಗಂಟೆಯ ನಂತರ ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸಲು ಪೊಲೀಸ್ ಇಲಾಖೆ ಸೂಚಿಸಿದೆ

  • ಕ್ವೀನ್ಸ್ ವೃತ್ತದಿಂದ ಹಲಸೂರು ಕಡೆಗೆ ಹೋಗುವ ವಾಹನಗಳು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ – ಬಿ.ಆರ್.ವಿ ಜಂಕ್ಷನ್ – ಕಬ್ಬನ್ ರಸ್ತೆ ಮೂಲಕ ವೆಬ್ಸ್ ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಬಹುದು
  • ಹಲಸೂರಿನಿಂದ ಕಂಟೋನ್ಮೆಂಟ್ ಕಡೆಗೆ ಹೋಗುವ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ – ಡಿಕನ್ಸನ್ ರಸ್ತೆ ಮೂಲಕ ಕಬ್ಬನ್ ರಸ್ತೆ ಸೇರಬೇಕು
  • ಕಾಮರಾಜ್ ರಸ್ತೆ: ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ ವಾಹನ ನಿಲುಗಡೆಗೆ ಅವಕಾಶ
  • ಈಜಿಪುರ ಕಡೆಯಿಂದ ಬರುವ ವಾಹನಗಳು ಇಂಡಿಯಾ ಗ್ಯಾರೇಜ್ ಬಳಿ ಬಲ ತಿರುವು ಪಡೆದು ಎ.ಎಸ್.ಸಿ ಸೆಂಟರ್‌ನಲ್ಲಿ ಎಡ ತಿರುವು ಪಡೆದು ಟ್ರಿನಿಟಿ ಮೂಲಕ ಸಾಗಬೇಕು
  • ಹೆಚ್.ಎ.ಎಲ್ ಕಡೆಯಿಂದ ಬರುವ ವಾಹನಗಳು ಎ.ಎಸ್.ಸಿ ಸೆಂಟರ್‌ನಲ್ಲಿ ಬಲ ತಿರುವು ಪಡೆದು ಟ್ರಿನಿಟಿ ಮೂಲಕ ಸಾಗಬೇಕು
  • ಪಾದಚಾರಿಗಳು ಬ್ರಿಗೇಡ್ ರಸ್ತೆಯಲ್ಲಿ ಎಂ.ಜಿ ರಸ್ತೆ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ಕಡೆಗೆ ಮಾತ್ರ ಕಾಲ್ನಡಿಗೆಯಲ್ಲಿ ಸಾಗಬೇಕು; ವಿರುದ್ಧ ದಿಕ್ಕಿನಲ್ಲಿ ಸಂಚರಿಸಲು ಅವಕಾಶವಿಲ್ಲ

ಇದನ್ನೂ ಓದಿ ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಪಾರ್ಕಿಂಗ್ಗೆ ನಿರ್ಬಂಧ

ಡಿಸೆಂಬರ್ 31ರ ಸಂಜೆ 04.00 ಗಂಟೆಯಿಂದ ಜನವರಿ 1ರ ಬೆಳಗಿನ ಜಾವ 03.00 ಗಂಟೆಯವರೆಗೆ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ

  • ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ
  • ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಲ್ಡ್ ಪಿ.ಎಸ್ ಜಂಕ್ಷನ್ ವರೆಗೆ
  • ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಸೆಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್ ವರೆಗೆ
  • ರೆಸ್ಟ್ ಹೌಸ್ ರಸ್ತೆ: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
  • ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆ ಜಂಕ್ಷನ್‌ನಿಂದ ಎಸ್.ಬಿ.ಐ ವೃತ್ತದವರೆಗೆ
  • ರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ

ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ ಹಾಗೂ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳನ್ನು ಡಿಸೆಂಬರ್ 31ರ ಸಂಜೆ 04.00 ಗಂಟೆಯೊಳಗೆ ತೆರವುಗೊಳಿಸಬೇಕು. ನಿಯಮ ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ

ಪಾರ್ಕಿಂಗ್ ವ್ಯವಸ್ಥೆ

ಸಾರ್ವಜನಿಕರ ಅನುಕೂಲಕ್ಕಾಗಿ ಶಿವಾಜಿನಗರ ಬಿ.ಎಂ.ಟಿ.ಸಿ ಶಾಪಿಂಗ್ ಕಾಂಪ್ಲೆಕ್ಸ್ – 1ನೇ ಮಹಡಿ, ಯು.ಬಿ. ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ)  ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

January 2026 Monthly Horoscope: ಹೊಸ ವರ್ಷದ ಮೊದಲ ತಿಂಗಳಲ್ಲಿ ಈ ರಾಶಿಯವರಿಗೆ ಶುಭ – Kannada News | January 2026 Astrology: Monthly Predictions, Planetary Changes and Remedies for All Rashis

2026 ರ ಮೊದಲ ತಿಂಗಳು ಇದಾಗಿದ್ದು ನಾಲ್ಕು ಗ್ರಹಗಳ ಮಹತ್ತ್ವದ ಬದಲಾವಣೆಯಾಗಲಿದೆ. ಸಂಗಾತಿ, ಸುಖ, ತಂದೆ, ಸರ್ಕಾರ, ಸಾಹೋದರ್ಯ, ಪರಾಕ್ರಮ, ವಾಕ್ಚಾತುರ್ಯ, ಮೊದಲಾದ ಅನೇಕ ಸಂಗತಿಗಳು ನಡೆಯಲಿದ್ದು, ಶುಭವೇ ಈ ತಿಂಗಳು ಅಧಿಕವಾಗಿದೆ. ಬೌದ್ಧಿಕವಾದ ನಿಲುವಿನಲ್ಲಿ ನಿಂತು ತಮ್ಮ ಕಾರ್ಯವನ್ನು ಮಾಡುವುದು ಶ್ರೇಯಸ್ಕರ.

ಮೇಷ ರಾಶಿ :

ಹೊಸ ವರ್ಷದ ಮೊದಲ ತಿಂಗಳಲ್ಲಿ ಮೊದಲ ರಾಶಿಯವರಿಗೆ ಶುಭ. ರಾಶಿಯ ಅಧಿಪತಿ ನವಮದಿಂದ ದಶಮಕ್ಕೆ ಹೋಗಲಿದ್ದು ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿ, ಸ್ಥಾನಮಾನ ಪ್ರಾಪ್ತಿಯಾಗಲಿದೆ. ವಿವಾಹ ಅಥವಾ ಪ್ರೇಮ ವಿಚಾಗಳು ಕೈಗೂಡುವುದು. ಕುಜ ದಶೆ ಧೈರ್ಯ ಸ್ಥೈರ್ಯಗಳನ್ನು ವರ್ಧಿಸುವುದು. ಉದ್ಯಮದಲ್ಲಿ ಆಲಸ್ಯ ಬರಲಿದೆ. ವಿದೇಶದ ವ್ಯಾಪಾರಕ್ಕೆ ಪ್ರಯತ್ನಿಸಿದರೆ ಸಫಲತೆಯನ್ನು ಕಾಣಬಹುದು. ನೀರಿನ ವ್ಯಾಪಾರಕ್ಕೆ ಮಾರುಕಟ್ಟೆ ತೆರೆದುಕೊಳ್ಳುವುದು. ಆರ್ಥಿಕ ಅಭಿವೃದ್ಧಿಗೆ ಶನಿಸ್ತೋತ್ರ ಮಾಡಿ.

ವೃಷಭ ರಾಶಿ :

ರಾಶಿ ಚಕ್ರದ ಎರಡನೇ ರಾಶಿಯವರಿಗೆ ತಿಂಗಳು ನಿಮಗೆ ಶುಭ. ರಾಶಿಯ ಅಧಿಪತಿ ಅಷ್ಟಮದಲ್ಲಿದ್ದು ಆರ್ಥಿಕ ನಷ್ಟ, ಅಪಮಾನ, ವಾಹನದಿಂದ ನೋವು ಅನುಭವಿಸಿದವರಿಗೆ ಎಲ್ಲವೂ ಮಾಯಾಜಾಲದಂತೆ‌ ಕಾಣಿಸುವುದು. ವಿವಾಹಕ್ಕೆ ಪ್ರೇಮವು ಬಲ‌ ತುಂಬುವುದು. ಶನಿ ದಶೆ ಉತ್ತಮವಾಗಿದ್ದು ಉದ್ಯೋಗದಲ್ಲಿ ಬೆಳವಣಿಗೆ ಯಥಾಪ್ರಕಾರವಾಗಿ ಮುಂದುವರಿಯುವುದು. ಬರುವ ಹಣವೆಲ್ಲ ಕೈಸೇರಿ ಸಂತೋಷ ನಿಮ್ಮದಾಗುವುದು. ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲಾಗುವಂತೆ ನೋಡಿಕೊಳ್ಳುವಿರಿ.

ಮಿಥುನ ರಾಶಿ :

ರಾಶಿಯ ಅಧಿಪತಿ ಅಷ್ಟಮದಲ್ಲಿ ಇರಲಿದ್ದು ನಿಮಗೆ ಅಶುಭ. ಸಪ್ತಮದಲ್ಲಿ ಇದ್ದಾಗಿನ ಧೈರ್ಯ, ವರ್ಚಸ್ಸು, ಮಾತುಗಾರಿಕೆ ಎಲ್ಲ‌ ಕಡೆ ಗೆಲವಿದ್ದು ಈಗ ಅದೆಲ್ಲವೂ ಕಾಣಿಸದು. ಬುಧ ದಶೆಯವರಿಗೆ ಇದರ ಅತಿಯಾದ ಅನುಭವವಾಗಲಿದೆ. ವಿವಾಹಕ್ಕೆ ಬಂಧುಗಳಿಂದ ಅಡಚಣೆಯಾಗಲಿದೆ. ಈ ತಿಂಗಳ ಗೃಹೋದ್ಯಮ ಲಾಭಕರವಾಗಿದ್ದು ಅಸಕ್ತಿ ಹೆಚ್ಚುವುದು. ಲೇಖನ, ಸಾಹಿತ್ಯ, ಭಾಷಣ ಕ್ಷೇತ್ರಕ್ಕೆ ನಿಮಗೆ ಒತ್ತಡ ಬರಲಿದೆ. ಗಣಪತಿಯನ್ನು ಯಶಃಪ್ರಾಪ್ತಿಗೆ ಪ್ರಾರ್ಥಿಸಿ.

ಕರ್ಕಾಟಕ ರಾಶಿ :

ಈ ರಾಶಿಯವರಿಗೆ ಜನವರಿಯಲ್ಲಿ ಮಿಶ್ರಫಲ. ಸಪ್ತಮದಲ್ಲಿ ನಾಲ್ಕು ಗ್ರಹದ ಸಮಾಗಮದಿಂದ ಶುಭವಿದ್ದರೂ ಸಂಗಾತಿಯು ಪ್ರಬಲವಾಗಿರುವರು. ಕುಜನು ಉಚ್ಚಸ್ಥಾನದಲ್ಲಿದ್ದು ಇದರ ಪ್ರಭಾವದಿಂದ ತಂದೆಗೂ ಪರಿಣಾಮವಾಗಲಿದೆ. ಆನ್ ಲೈನ್ ಮೂಲಕ ವ್ಯಾಪರಕ್ಕೆ ಹೆಚ್ಚು ಮಹತ್ತ್ವ ಬರಲಿದೆ. ಬೇಕಾದ ವ್ಯವಸ್ಥೆಯನ್ನು ಮಾಡುವಿರಿ. ಶನಿ ಹಾಗೂ ಕುಜ ದಶೆ ನಿಮಗೆ ಉದ್ಯಮ‌ ಹಾಗೂ ದಾಂಪತ್ಯ ಜೀವನಕ್ಕೆ ಪೂರಕವಾಗಿದ್ದಾಗಿದೆ. ಶಿವಪಾರ್ವತಿಯರು ಒಟ್ಟಾಗಿರುವ ಸ್ಥಳಕ್ಕೆ ಹೋಗಿ.

ಸಿಂಹ ರಾಶಿ :

ರಾಶಿ ಚಕ್ರದ ಐದನೇ ರಾಶಿಯವರಿಗೆ ಜನವರಿ ತಿಂಗಳಲ್ಲಿ ಅಶುಭ. ರಾಶಿಯ ಅಧಿಪತಿ ಶತ್ರುವಿನ‌ ರಾಶಿಯಲ್ಲಿ ಇರಲಿದ್ದು ಜೊತೆಗೆ ಶತ್ರುಸ್ಥಾನದಲ್ಲಿಯೂ ಇರುವ ಕಾರಣ ನಿಮ್ಮ ಗುಣಗಳೇ ನಿಮಗೆ ಶತ್ರುವಾಗಲಿದೆ. ಸ್ವಭಾವದ ಕಾರಣ ಎಲ್ಲರಿಂದ ದೂರವಾಗಬೇಕಾಗುವುದು. ರವಿ ದಶೆ ನಿಮಗೆ ಸಂಪೂರ್ಣ ನಕಾರಾತ್ಮಕ ಅಂಶವನ್ನು ಕೊಡಲಿದೆ. ಸರ್ಕಾರದ ಕಾರ್ಯದಲ್ಲಿ ವೈಫಲ್ಯ, ಆರೋಗ್ಯದಲ್ಲಿ ಮುನ್ನೆಚ್ಚರಿಕೆ ಬೇಕು. ತಂದೆಯ ಬಗ್ಗೆ ಸದ್ಭಾವ ದೂರಾಗುವುದು. ಶಿವನ ವ್ರತವನ್ನು ಮಾಡುವುದು ಉತ್ತಮ.

ಕನ್ಯಾ ರಾಶಿ :

ಜನವರಿ ತಿಂಗಳಲ್ಲಿ ನಿಮಗೆ ಮಿಶ್ರಫಲ. ರಾಶಿಯ ಅಧಿಪತಿ ಪಂಚಮದಲ್ಲಿ ಇರಲಿದ್ದು ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಿಸುವುದು. ವೈವಾಹಿಕ ಸಂಬಂಧದಲ್ಲಿ ಭಾವನೆಗಳು ಅನರ್ಥಕ್ಕೆ ದಾರಿ ಮಾಡುವುದು. ಹೋಟೆಲ್, ರೆಸ್ಟೋರೆಂಟ್ ಉದ್ಯಮದಿಂದ ಲಾಭ. ಕಲಾವಿದರಿಗೆ ಅವಕಾಶ ಲಭ್ಯವಾಗಿದ್ದು, ಅದನ್ನು ಬಳಸಿಕೊಳ್ಳಿ. ಸಹೋದ್ಯೋಗಿಗಳ ಜೊತೆ ಮನಸ್ತಾಪವನ್ನು ಬೆಳೆಸಿಕೊಳ್ಳುವಿರಿ. ಬುಧ ದಶೆ ಸಾಧಾರಣವಾಗಿರಲಿದೆ.

ತುಲಾ ರಾಶಿ :

ಏಳನೇ ರಾಶಿಯವರಿಗೆ ಜನವರಿ ತಿಂಗಳಲ್ಲಿ ಶುಭ ಫಲ. ರಾಶಿ ಅಧಿಪತಿ ಶುಕ್ರ ಚತುರ್ಥದಲ್ಲಿ ಇರುವನು. ಮಿತ್ರನ ರಾಶಿಯಲ್ಲಿ ಇದ್ದು, ಭೋಗದ ಸುಖವನ್ನು ನೀಡುವನು. ಕುಟುಂಬದ ಜೊತೆ ಕಾಲ‌ ಕಳೆಯುವಿರಿ. ಇನ್ನು ಉದ್ಯೋಗಕ್ಕೆ ಸಂಬಂಧಿಸಿದಂತೆ ಕೃಷಿಯ‌ ಚಟುವಟಿಕೆಯಲ್ಲಿ ಪ್ರಗತಿ ಕಾಣಬಹುದು. ಯಂತ್ರೋಪಕರಣ ಅಥವಾ ಔಷಧೀಯ ವ್ಯಾಪಾರದಿಂದ ಲಾಭವಿದೆ. ವಾಹನವೂ ನಿಮಗೆ ತಕ್ಕಮಟ್ಟಿನ ಲಾಭವನ್ನು ಕೊಡುವುದು. ಶುಕ್ರದಶೆಯಿಂದ ನೆಮ್ಮದಿ ನಿಮ್ಮದಾಗುವುದು.

ವೃಶ್ಚಿಕ ರಾಶಿ :

ಜನವರಿ ತಿಂಗಳಲ್ಲಿ ಎಂಟನೇ ರಾಶಿಯವರಿಗೆ ಅಶುಭ. ಗುರುವಿನ ಪ್ರಭಾವ ನಿಮ್ಮ ಮೇಲೆ ಪೂರ್ಣವಾಗಿ ಇರದ ಕಾರಣ ಪ್ರಯತ್ನ ಪೂರ್ವಕ ಪಡೆಯಬೇಕು. ಈ ತಿಂಗಳು ನಿಮ್ಮ ಸಾಮರ್ಥ್ಯ ಹೊಳಪಿನಿಂದ ಕೂಡಿರುವುದು. ಯಾರ ಪ್ರಶಂಸೆಯನ್ನೂ ಅಪೇಕ್ಷಿಸದೇ ನಿಮ್ಮಷ್ಟೇ ಮಹತ್ಕಾರ್ಯದಲ್ಲಿ ತತ್ಪರರಾಗುವಿರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ರವಿ ದಶೆ ಉತ್ತಮ. ಇನ್ನು ವೈವಾಹಿಕ ವಿಚಾರದಲ್ಲಿ ಬಲವಂತ ಬೇಡ. ನಿಮ್ಮ‌ತಲೆ ಗಟ್ಟಿಯಿದೆ ಎಂದು ಬಂಡೆಗೆ ಕುಟ್ಟಲಾಗದು. ಕಾಲಕ್ಕಾಗಿ ಕಾಯಬೇಕು.

ಧನು ರಾಶಿ :

ರಾಶಿ ಚಕ್ರದ ಒಂಭತ್ತನೆಯ ರಾಶಿಯವರಿಗೆ ಈ ತಿಂಗಳು ಶುಭಪ್ರದ. ಗುರವಿನ ರಾಶಿಗೆ ಗುರವಿನ ದೃಷ್ಟಿ ಇದೆ. ಉದ್ಯೋಗದ ಅಧಿಪತಿ ದ್ವಿತೀಯದಲ್ಲಿ ಇದ್ದಾನೆ. ಸಾಲವನ್ನು ಮಾಡಿಕೊಂಡಿದ್ದರೆ ತೀರಿಹೋಗುವುದು. ಗ್ರಾಹಕ ಕೇಂದ್ರದಲ್ಲಿ ಇರುವವರಿಗೆ ಶುಭ. ಖಾರದ ಮಾತುಗಳಿಂದ ಬೇಸರವೂ ಉಂಟಾಗುವುದು. ಹೇಳಬೇಕಾದ ವಿಚಾರಗಳನ್ನು ನೇರವಾಗಿ ಹೇಳದೇ ಸುತ್ತಿ ಬಳಸಿ ಮಾತನಾಡುವಿರಿ.

ಮಕರ ರಾಶಿ :

ಈ ರಾಶಿಯವರಿಗೆ ಜನವರಿ ತಿಂಗಳಿನಲ್ಲಿ ಶುಭಫಲ. ನಿಮ್ಮ ರಾಶಿಯಲ್ಲಿ ಈ ತಿಂಗಳು ನಾಲ್ಕು ಗ್ರಹಗಳ ಸಂಯೋಗವಾಗಲಿದ್ದು ಪರಸ್ಪರ ಸಾಮರಸ್ಯವುಳ್ಳ ಗ್ರಹಗಳೇ ಆಗಿದೆ. ಕುಜನ ಉಚ್ಚಕ್ಷೇತ್ರವಿದಾಗಿದೆ. ಭೂಮಿಯ ಲಾಭವಾಗಲಿದೆ. ಮನೆಯಿಂದ ದೂರವಿದ್ದವರಿಗೆ ಈ ತಿಂಗಳಲ್ಲಿ ಸಂತೋಪ ಪ್ರದವಾದ ಸಂಗತಿಗಳು ಇರಲಿವೆ. ಕುಜ, ಶುಕ್ರ ದಶೆಗಳು ಶುಭವಾಗಲಿದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವುದು.

ಇದನ್ನೂ ಓದಿ: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಪ್ರಭಾವಿ ವ್ಯಕ್ತಿಗಳಿಂದ ಉದ್ಯೋಗಕ್ಕೆ ಸಹಾಯವಾಗಲಿದೆ

ಕುಂಭ ರಾಶಿ :

ಜನವರಿ ತಿಂಗಳಲ್ಲಿ ನಿಮಗೆ ಮಿಶ್ರಫಲ. ನಾಲ್ಕು ಗ್ರಹರು ದ್ವಾದಶಸ್ಥಾನದಲ್ಲಿ ಇವೆ. ತಂದೆಯಿಂದ ನಷ್ಟ, ಸಂಗಾತಿಯಿಂದ ಬೇಸರ, ಸ್ಪರ್ಧೆಯಲ್ಲಿ ಸೋಲು, ಮಾತಿನ ಮೇಲೆ ಅಪನಂಬಿಕೆ, ಬಂಧುಗಳ‌ ಮೇಲೆ ವಿಶ್ವಾಸ ರಾಹಿತ್ಯ ಇವೆಲ್ಲ ಇರಲಿವೆ. ಗುರುವಿನ ದೃಷ್ಟಿ ನಿಮ್ಮ ಮೇಲಿರುವ ಕಾರಣ, ಎಂತಹ ಆಪತ್ತನ್ನೂ ಗೆಲ್ಲುವ ಸಾಮರ್ಥ್ಯ ಬರಲಿದೆ. ದೇಹ ಮನಸ್ಸಿಗೆ ಬಂಧನದ ಭಾವ ಬಂದರೂ ಅದರಿಂದ ಮುಕ್ತರಾಗುವಿರಿ. ಗುರು ದಶೆ ಉತ್ತಮವಾಗಲಿದೆ.

ಮೀನ ರಾಶಿ :

ಈ ತಿಂಗಳ ಕೊನೆಯ ರಾಶಿಯವರಿಗೆ ಶುಭಫಲ. ನಿಮಗೆ ನಾಲ್ಕು ಗ್ರಹಗಳ ಸ್ಥಿತಿಯಿಂದ ಶುಭದ ಪ್ರವಾಹ ನಿಮಗೆ. ಹಲವು ದಿನಗಳಿಂದಲೂ ಸಂಕಟದಲ್ಲಿ, ದುಃಖದಲ್ಲಿದ್ದ ನಿಮಗೆ ಒಂದೊಂದೆ ಮಾರ್ಗಗಳು ತೆರೆಯಲ್ಲಿದ್ದು ನೆಮ್ಮದಿ, ಸಂಪತ್ತು, ಆರೋಗ್ಯ ಎಲ್ಲವೂ ಬರುವ ಸೂಚನೆ ನಿಮಗೆ ಸಿಗಲಿದೆ. ಸೋಲುಂಡ ನಿಮಗೆ ಗೆಲವು ನಿಶ್ಚಯವಾಗಲಿದೆ. ತಾಯಿ ಪ್ರೀತಿ ನಿಮಗೆ ಸಿಗಲಿದೆ. ಕುಜ, ಶುಕ್ರ, ಶನಿ ದಶೆಗಳು ನಿಮಗೆ ಬದಲಾವಣೆಯನ್ನು ತಂದುಕೊಡುವವಾಗಿವೆ.

– ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ – Kannada News | Suraj Singh realized why He eliminated from Bigg Boss Kannada House

ಸೂರಜ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಷ್ಟು ದಿನ ಇದ್ದರು. ಮೂರನೇ ವಾರಕ್ಕೆ ಎಂಟ್ರಿ ಮತ್ತು ಮೂರನೇ ತಿಂಗಳಿಗೆ ಅವರು ಹೊರ ಬಂದರು. ಈ ವೇಳೆ ಅವರು ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ‘ಎಲ್ಲರ ಜೊತೆ ಇನ್ನಷ್ಟು ಬೆರೆತಿದ್ದರೆ ಮತ್ತಷ್ಟು ದಿನ ಉಳಿದುಕೊಳ್ಳುವ ಸಾಧ್ಯತೆ ಇತ್ತು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link