‘ಧುರಂಧರ್’ ನಟ ಅಕ್ಷಯ್ ಖನ್ನಾ (Akshaye Khanna) ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ರೆಹಮಾನ್ ದಕೈತ್ ಪಾತ್ರದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದರು. ಹಲವು ವರ್ಷಗಳ ನಂತರ ಅಕ್ಷಯ್ ಅವರ ಯಶಸ್ಸನ್ನು ನೋಡಿ ಅಭಿಮಾನಿಗಳು ಸಂತೋಷಪಟ್ಟಿದ್ದಾರೆ. ಅಕ್ಷಯ್ ಅವರಿಗೆ ಹೆಚ್ಚಿನ ಚಿತ್ರಗಳು ಸಿಕ್ಕರೆ ಮತ್ತೆ ಅವರನ್ನು ದೊಡ್ಡ ಪರದೆಯ ಮೇಲೆ ನೋಡಬಹುದು ಎಂಬ ಬಯಕೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಅವರು ಮಾಡಿಕೊಂಡ ವಿವಾದದ ಬಗ್ಗೆ ಚರ್ಚೆ ಶುರುವಾಗಿದೆ.
‘ದೃಶ್ಯಂ 3′ ಚಿತ್ರದಿಂದಾಗಿ ಅಕ್ಷಯ್ ಖನ್ನಾ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಸಂಭಾವನೆಯಿಂದಾಗಿ ಅವರು ಈ ಚಿತ್ರದಿಂದ ಇದ್ದಕ್ಕಿದ್ದಂತೆ ಹಿಂದೆ ಸರಿದರು. ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಅಕ್ಷಯ್ ವಿರುದ್ಧ ನೇರ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಯಶಸ್ಸಿನ ಅಮಲು ಅವರ ತಲೆಗೆ ಏರಿದೆ ಎಂದು ಅವರು ಟೀಕಿಸಿದ್ದಾರೆ. ಈ ವಿವಾದದ ನಡುವೆ, ನಟ ಅರ್ಷದ್ ವಾರ್ಸಿ ಈಗ ಅಕ್ಷಯ್ ಅವರ ಸ್ವಭಾವದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.
‘ದಿ ಲಲ್ಲಂಟಾಪ್’ ವೆಬ್ಸೈಟ್ಗೆ ನೀಡಿದ ಸಂದರ್ಶನದಲ್ಲಿ, ಅಕ್ಷಯ್ ಜೊತೆ ಕೆಲಸ ಮಾಡಿದ ಅನುಭವದ ಬಗ್ಗೆ ಅರ್ಷದ್ ಅವರನ್ನು ಕೇಳಲಾಯಿತು . ಇದಕ್ಕೆ ಅವರು, ‘ಅಕ್ಷಯ್ ತುಂಬಾ ಹಿರಿಯರು. ಅವರು ಮೊದಲಿನಿಂದಲೂ ನಟನಾಗಿ ತುಂಬಾ ಒಳ್ಳೆಯವರು. ಅದರಲ್ಲಿ ಯಾರಿಗೂ ಸಂದೇಹವಿಲ್ಲ. ಆದರೆ ಅವರು ತಮ್ಮದೇ ಆದ ಜಗತ್ತಿನಲ್ಲಿ ಮುಳುಗಿದ್ದಾರೆ. ಅವರು ಬೇರೆಯವರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಅವರಿಗೆ ಬೇರೆಯದೇ ಜೀವನವಿದೆ. ನೀವು ನನ್ನ ಬಗ್ಗೆ ಏನು ಯೋಚಿಸುತ್ತೀರಿ, ಏನು ಯೋಚಿಸುವುದಿಲ್ಲ ಎಂಬುದು ನಿಮ್ಮ ಸಮಸ್ಯೆ, ನನ್ನದಲ್ಲ. ಇದು ಅವರ ಅಭಿಪ್ರಾಯ. ಅವರು ತಮ್ಮದೇ ಆದ ಲೆಕ್ಕಾಚಾರದ ಪ್ರಕಾರ ತಮ್ಮ ಜೀವನವನ್ನು ನಡೆಸುತ್ತಾರೆ’ ಎಂದು ಹೇಳಿದರು.
‘ಅವರಿಗೆ ಯಾವುದೇ ಪಿಆರ್ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಹೀಗೆಯೇ ಇದ್ದಾರೆ. ಅಕ್ಷಯ್ ಅವರ ಜೀವನದಲ್ಲಿ ಯಾವಾಗಲೂ ಹೀಗೆಯೇ ಇದೆ’ ಎಂದು ಅರ್ಷದ್ ವಿವರಿಸಿದರು. ಅಕ್ಷಯ್ ಮತ್ತು ಅರ್ಷದ್ ‘ಹಲ್ಚಲ್’ ಮತ್ತು ‘ಶಾರ್ಟ್ಕಟ್’ ನಂತಹ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.
ಏತನ್ಮಧ್ಯೆ, ನಟ ಜೈದೀಪ್ ಅಹ್ಲಾವತ್ ‘ದೃಶ್ಯಂ 3’ ನಲ್ಲಿ ಅಕ್ಷಯ್ ಖನ್ನಾ ಬದಲಿಗೆ ನಟಿಸಲಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಂದಿನ ವರ್ಷದಿಂದ ಪ್ರಾರಂಭವಾಗಲಿದೆ. ಅಕ್ಷಯ್ಗೆ ಕಾನೂನು ನೋಟಿಸ್ ನೀಡಲಾಗಿದೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅಬ್ಬರಿಸಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆದ ಸಿಡ್ನಿ ಥಂಡರ್ ವಿರುದ್ಧದ ಪಂದ್ಯದಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ಪರ ಕಣಕ್ಕಿಳಿದ ಮ್ಯಾಕ್ಸಿ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 39 ರನ್ ಬಾರಿಸಿದ್ದಾರೆ.
ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ 104 ಮೀಟರ್ ಸಿಕ್ಸ್ ಸಿಡಿಸುವ ಮೂಲಕ ಮ್ಯಾಕ್ಸ್ವೆಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸರ್ ಸರದಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 2 ಸಿಕ್ಸ್ ಸಿಡಿಸುವುದರೊಂದಿಗೆ ಮ್ಯಾಕ್ಸಿ ಬಿಗ್ ಬ್ಯಾಷ್ ಲೀಗ್ನಲ್ಲಿ 150 ಸಿಕ್ಸರ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ 220 ಸಿಕ್ಸ್ ಸಿಡಿಸಿರುವ ಕ್ರಿಸ್ ಲಿನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 151 ಸಿಕ್ಸರ್ಗಳೊಂದಿಗೆ ಗ್ಲೆನ್ ಮ್ಯಾಕ್ಸ್ವೆಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್ ಸ್ಟಾರ್ಸ್ ತಂಡವು 14 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.
ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ
ಬೆಂಗಳೂರು, ಡಿಸೆಂಬರ್ 29: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಒಣಹವೆ?
ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಂಜು
ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗವಾಗಿ ರನ್ಗಳಿಸುವ ಮೂಲಕ. ಈ ವೇಗದೊಂದಿಗೆ ಸ್ಮೃತಿ ಮುರಿದಿರುವುದು ಟೀಮ್ ಇಂಡಿಯಾ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆಯನ್ನು ಎಂಬುದು ವಿಶೇಷ.
ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಅತಿಕ್ರಮಣ ವಿಚಾರದಲ್ಲಿ, 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡವರು ಮತ್ತು ರೈತರನ್ನು ಒಕ್ಕಲೆಬ್ಬಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 210 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಿದ್ದು, ಆಧುನಿಕ ಸೌಲಭ್ಯವುಳ್ಳ ಹೊಸ ಕಟ್ಟಡ ನಿರ್ಮಿಸುವುದಾಗಿ ಘೋಷಿಸಿದರು. ಇದೆ ವೇಳೆ ಶರಾವತಿ ಯೋಜನೆ ಮತ್ತು ವರದಾ ಹಾಗೂ ಬೇಡ್ತಿ ನದಿ ಜೋಡಣೆಗೆ ಡಿಪಿಆರ್ ಸಿದ್ಧಪಡಿಸಲು ಚೀಫ್ ಇಂಜಿನಿಯರ್ಗೆ ನೀಡಿರುವುದಾಗಿ ನೀಡಿರುವುದಾಗಿ ತಿಳಿಸಿದರು.
ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಮುೂರ್ತಿಯಾಗಲ್ಲ ಎಂದ ಉಪಮುಖ್ಯಮಂತ್ರಿಗಳು, ಇಂದು ನಾಯಕರಾಗಲು ಬಹಳಷ್ಟು ಕಷ್ಟ ಪಡಬೇಕಿದೆ ಎಂದು ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
16 ಲಕ್ಷ ರೂ. ಮೌಲ್ಯದ ಶ್ರೀಗಂಧದಿಂದ ಮಾಡಿದ ವಿಗ್ರಹ ಉಡುಗೊರೆ!
ಕರಾವಳಿ ಉತ್ಸವದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ, ಜಿಲ್ಲಾಡಳಿತ ವತಿಯಿಂದ ಶಾಸಕ ಸತೀಶ್ ಸೈಲ್, ವಿಷ್ಣುವಿನ ವಿಶ್ವರೂಪ ದರ್ಶನ ಬಿಂಬಿಸುವ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧದ ವಿಗ್ರಹ ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆ ಈಡೇರಲೆಂದು ಆಶಿಸುವುದಾಗಿ ತಿಳಿಸಿದರು.
ಕರಾವಳಿ ಉತ್ಸವದಲ್ಲಿ ಖ್ಯಾತ ಗಾಯ ದಲೇರ್ ಮೆಹಂದಿ ಅವರ ಕಾರ್ಯಕ್ರಮ ಮನಸೂರೆಗೊಂಡಿತು. ಡಿಸಿಎಂ ಡಿಕೆಶಿ ಕೂಡ ರಿಲ್ಯಾಕ್ಸ್ ಆಗಿ ಕಾರ್ಯಕ್ರಮ ವೀಕ್ಷಿಸಿದರು. ಒಟ್ಟಿನಲ್ಲಿ, ಕರಾವಳಿಗೆ ಉಪಮುಖ್ಯಮಂತ್ರಿ 3 ಮಹತ್ವದ ಘೋಷಣೆಗಳನ್ನು ಮಾಡಿದ್ದು, ಜಿಲ್ಲೆಯ ಜನರಿಗೆ ಹೊಸ ಆಶಾಭಾವನೆ ಮೂಡಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ವಾಷಿಂಗ್ಟನ್, ಡಿಸೆಂಬರ್ 29: ಉಕ್ರೇನ್(Ukraine) ಯುದ್ಧ ಕೊನೆಗೊಳಿಸುವ ಕುರಿತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಜತೆ ಭಾನುವಾರ ಮಾತುಕತೆ ನಡೆಸಿದರು. ಈ ಮಾತುಕತೆ ಬಳಿಕ ಡೊನಾಲ್ಡ್ ಟ್ರಂಪ್ ಮಾತನಾಡಿ, ಯುದ್ಧ ನಿಲ್ಲಿಸಲು ಯಾವುದೇ ನಿರ್ದಿಷ್ಟ ಗಡುವಿಲ್ಲ, ಉಕ್ರೇನ್ ಯುದ್ಧ ಕೊನೆಗೊಳಿಸುವತ್ತ ಗಮನ ಎಂದು ಹೇಳಿದ್ದಾರೆ.
ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಕುರಿತು ನಿರ್ಣಾಯಕ ಮಾತುಕತೆಗಾಗಿ ಅಮೆರಿಕದ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಫ್ಲೋರಿಡಾ ಎಸ್ಟೇಟ್ಗೆ ಉಕ್ರೇನ್ನ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ಬರಮಾಡಿಕೊಂಡಿದ್ದರು.
ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ರಾಜತಾಂತ್ರಿಕ ಪ್ರಯತ್ನಗಳು ಅಂತಿಮ ಹಂತಗಳಲ್ಲಿವೆ ಎಂದು ಟ್ರಂಪ್ ಹೇಳಿದ್ದಾರೆ. ಇಲ್ಲದಿದ್ದರೆ, ಇದು ದೀರ್ಘಕಾಲದವರೆಗೆ ಮುಂದುವರಿಯುತ್ತದೆ ಎಂದು ಟ್ರಂಪ್ ಹೇಳಿದರು, ಈ ಪ್ರಕ್ರಿಯೆಗೆ ಅವರು ಯಾವುದೇ ಗಡುವನ್ನು ಹೊಂದಿಲ್ಲ ಎಂದರು.
ಝೆಲೆನ್ಸ್ಕಿಯೊಂದಿಗಿನ ಭೇಟಿಗೆ ಕೆಲವೇ ಗಂಟೆಗಳ ಮೊದಲು ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಫಲದಾಯಕ ಮಾತುಕತೆ ನಡೆಸಿರುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಉಕ್ರೇನ್ನಲ್ಲಿನ ಸಂಘರ್ಷವನ್ನು ಕೊನೆಗೊಳಿಸಲು ಪೂರ್ವ ಡಾನ್ಬಾಸ್ ಪ್ರದೇಶದಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳುವಂತೆ ರಷ್ಯಾ ಕೈವ್ಗೆ ಒತ್ತಾಯಿಸಿತು.
🇺🇦🇺🇸 Zelenksy arrived in Miami where he is scheduled to meet with Trump tonight.
The meeting is scheduled for 8pm Kiev time.
In US Zelensky was met once again by his own people pretending to be an American greeting party 🤫 pic.twitter.com/uD67tBa36w
ಉಕ್ರೇನ್ನ ಭದ್ರತೆಯನ್ನು ಖಾತರಿಪಡಿಸಲು ಬಲವಾದ ಒಪ್ಪಂದವಿರುತ್ತದೆ ಮತ್ತು ಇದು ಯುರೋಪಿಯನ್ ದೇಶಗಳನ್ನು ಒಳಗೊಳ್ಳುತ್ತದೆ ಎಂದು ಅವರು ಟ್ರಂಪ್ ಹೇಳಿದರು. 20 ಅಂಶಗಳ ಶಾಂತಿ ಯೋಜನೆಯ ಕುರಿತು ಶೇ. 90 ರಷ್ಟು ಒಪ್ಪಂದವಿದೆ.
ಅಮೆರಿಕ-ಉಕ್ರೇನ್ ಭದ್ರತಾ ಖಾತರಿಗಳ ಕುರಿತು ಶೇ. 100 ರಷ್ಟು ಒಪ್ಪಂದವಿದೆ ಮತ್ತು ಅಮೆರಿಕ-ಯುರೋಪ್-ಉಕ್ರೇನ್ ಭದ್ರತಾ ಖಾತರಿಗಳ ಕುರಿತು ಬಹುತೇಕ ಶೇ. 100 ರಷ್ಟು ಒಪ್ಪಂದವಿದೆ ಎಂದು ಝೆಲೆನ್ಸಕಿ ಹೇಳಿದ್ದಾರೆ.
ಸಮೃದ್ಧಿ ಯೋಜನೆಯನ್ನು ಅಂತಿಮಗೊಳಿಸಲಾಗುತ್ತಿದೆ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಶಾಶ್ವತ ಶಾಂತಿಯನ್ನು ಸಾಧಿಸುವಲ್ಲಿ ಭದ್ರತಾ ಖಾತರಿಗಳು ಮುಖ್ಯವಾಗಿರುತ್ತದೆ.
ಬೆಂಗಳೂರು, ಡಿಸೆಂಬರ್ 29: ದೇವಾಲಯವು ದೈವಿಕ ಶಕ್ತಿಯ ಆಧಾರ ಕೇಂದ್ರವಾಗಿದೆ. ಭಕ್ತರು ತಮ್ಮ ಆಶಯಗಳು, ದೋಷಗಳು ಮತ್ತು ಕರ್ಮಫಲಗಳನ್ನು ಭಗವಂತನಿಗೆ ನಿವೇದಿಸಿಕೊಳ್ಳುವ ಪವಿತ್ರ ಸ್ಥಳವಾಗಿದೆ. ಸಾಮಾನ್ಯ ಜನರು ಗರ್ಭಗುಡಿಯನ್ನು ಪ್ರವೇಶಿಸಬಹುದೇ? ಅದು ಶುಭಕರವೇ ಅಥವಾ ಅಶುಭಕರವೇ? ಎಂಬುದು ಅನೇಕರಿಗೆ ಕಾಡುವ ಪ್ರಶ್ನೆ. ಸಾಮಾನ್ಯವಾಗಿ ಶ್ರೀಮಂತರು, ಅಧಿಕಾರದಲ್ಲಿರುವ ರಾಜಕಾರಣಿಗಳು, ಸರಕಾರಿ ಅಧಿಕಾರಿಗಳು ಮತ್ತು ಜ್ಞಾನಿಗಳಿಗೆ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಧಾರ್ಮಿಕ ನಿಯಮಗಳ ಪ್ರಕಾರ, ಯಾವುದೇ ದೇವಸ್ಥಾನದಲ್ಲಿ ದೇವರನ್ನು ನೇರವಾಗಿ ಸ್ಪರ್ಶಿಸುವ ಹಕ್ಕು ಎಲ್ಲರಿಗೂ ಇರುವುದಿಲ್ಲ. ಜ್ಯೋತಿರ್ಲಿಂಗಗಳು ಇದಕ್ಕೆ ಅಪವಾದವಾಗಿದ್ದು, ಅಲ್ಲಿ ಭಕ್ತರಿಗೆ ದೈವವನ್ನು ಸ್ಪರ್ಶಿಸಿ ಅಭಿಷೇಕ ಮಾಡಲು ಪ್ರಾಚೀನ ಕಾಲದಿಂದಲೂ ಅನುಮತಿ ಇದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 29, ಸೋಮವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷದ ನವಮಿ ತಿಥಿ ಮತ್ತು ರೇವತಿ ನಕ್ಷತ್ರದ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 8:04 ರಿಂದ 9:31 ರವರೆಗೆ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 3:12 ರಿಂದ 4:37 ರವರೆಗೆ ಇರಲಿದೆ.
ಸೋಮವಾರವಾಗಿರುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗಲು ಓಂ ನಮಃ ಶಿವಾಯ ಮಂತ್ರ ಜಪಿಸಲು ಸಲಹೆ ನೀಡಲಾಗಿದೆ. ಈ ದಿನ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಮತ್ತು ಬಂಗಾಡಿ, ಭೂಕನಕಟ್ಟೆಯಲ್ಲಿ ರಥೋತ್ಸವಗಳು ನಡೆಯಲಿವೆ. ಸೂರ್ಯ ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ ರಾಶಿಗಳಿಗೆ ಆರ್ಥಿಕ, ಕೌಟುಂಬಿಕ, ವೈವಾಹಿಕ ಮತ್ತು ವೃತ್ತಿ ಕ್ಷೇತ್ರದಲ್ಲಿನ ಫಲಿತಾಂಶಗಳನ್ನು ವಿವರವಾಗಿ ತಿಳಿಸಲಾಗಿದ್ದು, ಹಲವು ರಾಶಿಗಳಿಗೆ ಶುಭಫಲಗಳು ಕಂಡುಬರುತ್ತವೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಜೀ ಪವರ್ನಲ್ಲಿ ಪ್ರಸಾರ ಕಾಣುತ್ತಾ ಇದ್ದ, ‘ಹಳ್ಳಿ ಪವರ್’ ಶೋ (Halli Power) ಈಗ ಪೂರ್ಣಗೊಂಡಿದೆ. ಡಿಸೆಂಬರ್ 28ರಂದು ಶೋನ ಫಿನಾಲೆ ಪ್ರಸಾರ ಆಗಿದೆ. ಈ ವೇಳೆ ಅಕುಲ್ ಬಾಲಾಜಿ ಅವರು ವಿನ್ನರ್ನ ಘೋಷಣೆ ಮಾಡಿದರು. ಬೆಂಗಳೂರಿನ ರಗಡ್ ರಶ್ಮಿ ಅವರು ವಿನ್ನರ್ ಎಂದು ಘೋಷಿಸಲಾಯಿತು. ಟಾಸ್ಕ್ನಲ್ಲಿ ಮೊದಲಿನಿಂದಲೂ ಟಫ್ ಫೈಟ್ ಕೊಡುತ್ತಾ ಬರುತ್ತಿದ್ದ ಅವರು ಈಗ ಗೆಲುವು ಕಂಡಿದ್ದಾರೆ. ಆಕರ್ಷಕ ಟ್ರೋಫಿ, ಹಣ ಹಾಗೂ ಅಪಾರ ಜನಪ್ರಿಯತೆ ಮೂಲಕ ಅವರು ‘ಹಳ್ಳಿ ಪವರ್’ ಪ್ರಯಾಣವನ್ನು ಪೂರ್ಣಗೊಳಿಸಿದ್ದಾರೆ.
‘ಹಳ್ಳಿ ಪವರ್’ ಶೋ ಆಗಸ್ಟ್ ಕೊನೆಯಲ್ಲಿ ಪ್ರಸಾರ ಆರಂಭಿಸಿತು. ನಗರದಿಂದ ಹಳ್ಳಿಗೆ ಬಂದು ಅಲ್ಲಿಯ ಜೀವನ ಅನುಭವಿಸುವ ಥೀಮ್ನಲ್ಲಿ ರಿಯಾಲಿಟಿ ಶೋ ಮೂಡಿಬಂದಿತ್ತು. ಬೆಳಗಾವಿಯ ಕಿತ್ತೂರಿನಲ್ಲಿ ಈ ಶೋ ನಡೆಯಿತು. ಈ ಶೋ ಸಾಕಷ್ಟು ಜನಪ್ರಿಯತೆ ಪಡೆಯಿತು. ಒಳ್ಳೆಯ ಟಿಆರ್ಪಿ ಕೂಡ ಪಡೆಯಿತು. ಸಾಕಷ್ಟು ಮಂದಿ ಶೋನಲ್ಲಿ ಭಾಗವಹಿಸಿದ್ದರು. ಕೊನೆಗೆ ರಶ್ಮಿ ವಿನ್ನರ್ ಆದರೆ, ಘಾಟಿ ಗಾನವಿ ಅವರು ಮೊದಲ ರನ್ನರ್ ಅಪ್ ಆದರು.
ಈ ಶೋನಲ್ಲಿ ಸೆಕೆಂಡ್ ರನ್ನರ್ ಅಪ್ ಆಗಿ ಸೋನಿಯಾ ಹೊರಹೊಮ್ಮಿದ್ದಾರೆ. ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಕ್ಕಿದೆ. ಸೆಕೆಂಡ್ ರನ್ನರ್ ಅಪ್ ಘಾಟಿ ಗಾನವಿ ಅವರಿಗೆ 7 ಲಕ್ಷ ರೂಪಾಯಿ ಹಣ ಸಿಕ್ಕಿದೆ. ಇನ್ನು, ವಿನ್ನರ್ ರಗಡ್ ರಶ್ಮಿ ಅವರಿಗೆ ಆಕರ್ಷಕ ಟ್ರೋಫಿ ಜೊತೆ 10 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವೀಕರಿಸಿದರು.
ಆ ಬಳಿಕ ಮಾತನಾಡಿದ ರಶ್ಮಿ, ‘ನಿಮ್ಮ ಪ್ರೀತಿ ಇಲ್ಲಿಗೆ ತಂದು ನಿಲ್ಲಿಸಿದೆ. ನಾನು ಹರಿಸಿದ ಬೆವರು, ರಕ್ತಕ್ಕೆ ಎಲ್ಲದಕ್ಕೂ ಪ್ರತಿಫಲ ಸಿಕ್ಕಿದೆ. ಅನ್ನ ಹಾಕಿದೀರಿ, ಆಶ್ರಯ ಕೊಟ್ಟಿದೀರಿ. ವೋಟ್ ಹಾಕಿ ಗೆಲ್ಲಿಸಿದ್ದಕ್ಕೆ ಧನ್ಯವಾದ. ಅಕುಲ್ ಅವರೇ ನೀವು ಸಾಕಷ್ಟು ಮೋಟಿವೇಷನ್ ಕೊಟ್ಟಿದೀರಾ. ಈ ಕಲ್ಲು ಶಿಲೆ ಆಗಿದೆ’ ಎಂದರು. ರಶ್ಮಿ ಅವರು ತುಂಬಾನೇ ಟಫ್ ಕಾಂಪಿಟೇಟರ್ ಆಗಿದ್ದರು. ಅವರು ಬಿಗ್ ಬಾಸ್ಗೆ ಬರಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು.
ನೈತಿಕತೆಯ ರಕ್ಷಣೆ ಅಸಾಧ್ಯ ಎನಿಸಬಹದು. ಮಾನಸಿಕ ಶಾಂತಿಯನ್ನು ಬಲವಾಗಿ ತಂದುಕೊಳ್ಳಬೇಕು. ಶತ್ರುವಿನ ಸಂಚು ವಿಫಲ. ಭೂಮಿ ವ್ಯವಹಾರದಲ್ಲಿ ಲಾಭ. ಯಾರ ಮೇಲೂ ಸುಮ್ಮನೇ ಸಂಶಯಪಟ್ಟು ಸಂಬಂಧವನ್ನು ದೂರ ಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸಾಮಾಜಿಕ ಕಾರ್ಯದಿಂದ ಸಮ್ಮಾನವನ್ನು ನಿರೀಕ್ಷಿಸುವಿರಿ. ಎಲ್ಲರನ್ನೂ ತೃಪ್ತಿಪಡಿಸುವ ಸಂಕಲ್ಪವು ಸುಮ್ಮನೇ ವ್ಯರ್ಥವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆಯು ಇಲ್ಲವಾಗುವುದು. ನಿಮ್ಮ ಮೇಲೆ ಹಿತಶತ್ರುಗಳು ಬೇಕಂತಲೇ ಆರೋಪವನ್ನು ಮಾಡಬಹುದು. ಹೊಸ ಉದ್ಯೋಗ ಶುಭಾರಂಭ. ದೈಹಿಕ ಆರೋಗ್ಯ ಸುಧಾರಣೆ, ಹೊಣೆಗಾರಿಕೆ ಸಮತೋಲನ ತಾನಾಗಿಯೇ ಅನುಭವಕ್ಕೆ ಬರುವುದು. ನಿಮ್ಮ ತಿಳಿವಳಿಕೆಯನ್ನು ಇನ್ನೊಬ್ಬರ ಮುಂದೆ ತೋರಿಸಿಕೊಳ್ಳುವುದಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಅನಿರೀಕ್ಷಿತ ಸಂದರ್ಭವನ್ನು ಜಾಣ್ಮೆಯಿಂದ ಎದುರಿಸುವಿರಿ.
ವೃಷಭ ರಾಶಿ:
ಉದ್ವೇಗದಿಂದ ನಿರ್ಧಾರ ತಪ್ಪುವ ಸಾಧ್ಯತೆ. ಮಾನಸಿಕ ಪೀಡೆಗೆ ವಿಶ್ರಾಂತಿ ಅಗತ್ಯ. ಶತ್ರುಕಾಟದಲ್ಲಿ ಸ್ನೇಹಿತರ ಸಹಾಯದ ಅನುಮಾನ ಬರಲಿದೆ. ಮಕ್ಕಳ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಮನೆಯಿಂದ ಹೊರಗೆ ಹೋಗಿ ಇಡೀ ದಿನವನ್ನು ಕಳೆದುಬರುವಿರಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ. ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ. ನಿಮ್ಮ ಒರಟಾದ ಮಾತು ನೌಕರರು ಸಿಟ್ಟಾಗುವಂತೆ ಮಾಡುವುದಹ. ನಿಯಮದ ತಪ್ಪಿಗೆ ದಂಡವನ್ನು ಕೊಡಬೇಕಾದೀತು. ಭೂಮಿ ವ್ಯವಹಾರದಲ್ಲಿ ಹೊಸ ಅವಕಾಶ. ಉದ್ಯೋಗ ಬದಲಾವಣೆ ಸಾಧ್ಯ. ವಂಚನೆಗೆ ಎಚ್ಚರ ವಹಿಸಿದಷ್ಟು ಸಾಲದು. ಅತಿಯಾದ ಉತ್ಸಾಹದಲ್ಲಿರುವ ನಿಮಗೆ ಸಂಗಾತಿಯ ಮಾತು ಉತ್ಸಾಹವನ್ನು ಕೊಟ್ಟಿತು. ಹಳೆಯ ಸ್ನೇಹಿತರು ಉಪಕಾರ ಸ್ಮರಣೆಯಿಂದ ಸಹಾಯ ಮಾಡುವರು. ನಿಮ್ಮ ಹೆಜ್ಜೆಗಳೆಲ್ಲ ಗುರುತಾಗಬೇಕು ಎಂದರೆ ಸಾಧ್ಯವಾಗದು.
ಮಿಥುನ ರಾಶಿ:
ಹೊಣೆಗಾರಿಕೆಯಿಂದ ಕೆಲಸದ ಒತ್ತಡ. ದೈಹಿಕ ದಣಿವೂ ಕಂಡುಬರುವುದು. ಶತ್ರುಗಳ ಮಾತುಗಳಿಗೆ ಸ್ಪಂದಿಸಬೇಡಿ. ಯೋಚನೆಯ ದಿಕ್ಕನ್ನು ಬದಲಿಸದರೆ ತೊಂದರೆಗಳಿಗೆ ಉತ್ತರವೂ ಸಿಗಲಿದೆ. ಅಪರಿಚಿತರ ಸಹಾಯದಿಂದ ಪೂರ್ಣ ನಂಬಿಕೆ ಬರದು. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಬೇಸರ ತರಿಸಬಹುದು. ಕಲಾವಿದರು ಉತ್ತಮ ಅವಕಾಶದ ನಿರೀಕ್ಷೆಯಲ್ಲಿ ಇರುವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು. ಸ್ವಂತ ಶ್ರಮದಿಂದ ಗಳಿಸಿದ್ದು ನಿಮಗೆ ಆಪ್ತವೆನಿಸಲಿದೆ. ಭೂಮಿ ವ್ಯವಹಾರದಲ್ಲಿ ವಿಳಂಬ. ಉದ್ಯೋಗದಲ್ಲಿ ಸ್ಥಿರತೆಯನ್ನು ಕಾಪಿಟ್ಟುಕೊಳ್ಳಿ. ನೈತಿಕ ನಡೆ ಮುಂದಿನ ಲಾಭಕ್ಕೆ ಕಾರಣ. ಮಾಡಬೇಕೆಂದುಕೊಂಡ ಕಾರ್ಯಕ್ಕೆ ತೊಂದರೆ ಬಂದರೂ ಬಿಡದೇ ಮುಂದುವರಿಸುವಿರಿ. ಆದಾಯದ ಹೆಚ್ಚಿಸಿಕೊಳ್ಳು ವಿಚಾರದಲ್ಲಿ ನೀವು ಬಹಳ ಹಿಂದೆ.
ಕರ್ಕಾಟಕ ರಾಶಿ:
ಮಾನಸಿಕ ಉತ್ಸಾಹ ಹೆಚ್ಚಾದರೂ ಉದ್ವೇಗ ನಿಯಂತ್ರಿಸಿ. ಶತ್ರುಕಾಟ ತಾನಾಗಿಯೇ ದೂರವಾಗುತ್ತದೆ. ಭೂಮಿ ವ್ಯವಹಾರದಲ್ಲಿ ಪ್ರಯಾಣ ಸಾಧ್ಯ. ನಿರೀಕ್ಷಿತ ಸಂದರ್ಭವು ಇಂದು ಬರಲಿದ್ದು ಅದನ್ನು ಬಳಸಿಕೊಳ್ಳುವಿರಿ. ಆಕಸ್ಮಿಕವಾಗಿ ಧನಲಾಭದಿಂದ ನಿಮಗೆ ಆಶ್ಚರ್ಯವಾಗಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಜಾಣ್ಮಯಿಂದ ನಿಮ್ಮ ಕಾರ್ಯವನ್ನು ಸಾಧಿಸಿ. ನಿಮ್ಮವರನ್ನು ಕಳೆದುಕೊಳ್ಳುವ ಸಂದರ್ಭ ಬರುವುದು. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ. ಇಂದು ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ. ವಂಚನೆ ಪರರ ಕಾರಣದಿಂದ ತಪ್ಪುತ್ತದೆ. ಹೊಣೆಗಾರಿಕೆ ಸಮರ್ಪಕವಾಗಿ ನಿಭಾಯಿಸಿದರೆ ನೈತಿಕ ಗೌರವ. ನಿಮ್ಮ ಕೆಲಸಗಳನ್ನು ಮೇಲಧಿಕಾರಿಗಳು ಪರಿಶೀಲಿಸುವರು. ವ್ಯಾಪಾರದಲ್ಲಿ ನೀವು ತಜ್ಞರಾಗಿದ್ದು ಅಧಿಕ ಲಾಭವನ್ನು ಗಳಿಸುವಿರಿ. ಸಂತೋಷದ ವಿಚಾರವನ್ನು ಹೇಳಲು ಸಂಕೋಚವಾಗುವುದು. ಯಾವುದನ್ನೇ ಆದರೂ ಮಿತಿಯಲ್ಲಿ ಬಳಸಿದರೆ ಉತ್ತಮ.
ಸಿಂಹ ರಾಶಿ:
ಈ ದಿನ ನಿಮಗೆ ವಂಚನೆಯ ಸೂಚನೆ ಗಟ್ಟಿಯಾಗಿ ಕಾಣುತ್ತದೆ, ಎಚ್ಚರಿಕೆ ಅಗತ್ಯ. ದೈಹಿಕ ಶಕ್ತಿ ಉತ್ತಮವಾಗುತ್ತ ಹೋಗುವುದು. ಶತ್ರು ಸಂಹಾರಕ್ಕೆ ಸಮಾನವಾದ ಫಲ ಸಿಗುವ ದಿನ. ಪರರ ಕಷ್ಟಕ್ಕೆ ಸುಮ್ಮನೆ ಕಿವಿಯಾಗಿ ಸಾಕು. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು. ವ್ಯವಹಾರವು ಅಧಿಕ ಲಾಭವನ್ನು ತಂದುಕೊಡದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು ಮಾನಸಿಕ ಹಿಂಸೆಯಾದೀತು. ಮನೆಯಲ್ಲಿ ಜಗಳವಾಡಿ ನೀವು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಭೂಮಿಯ ವ್ಯವಹಾರದಲ್ಲಿ ಲಾಭ. ಹೊಸ ಉದ್ಯೋಗದಲ್ಲಿ ಹೊಣೆಗಾರಿಕೆ ಹೆಚ್ಚುತ್ತದೆ. ನೈತಿಕತೆ ಕಾಯ್ದುಕೊಳ್ಳಲು ಅತಿಯಾದ ಪರೀಕ್ಷೆ. ಮಕ್ಕಳ ತಪ್ಪನ್ನು ನೀವು ಸಮರ್ಥಿಸಿಕೊಳ್ಳಬೇಕಾದೀತು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಇಂದು ಸಾಧ್ಯವಾಗದು. ಕೊಟ್ಟ ಹಣವನ್ನು ವಾಪಾಸು ಪಡೆಯಲು ಓಡಾಟ ಮಾಡುವಿರಿ.
ಕನ್ಯಾ ರಾಶಿ:
ಉದ್ವೇಗ ಮತ್ತು ಕುಟುಂಬದ ನಿರ್ಧಾರದಲ್ಲಿ ದ್ವಂದ್ವ. ನೈತಿಕತೆಯನ್ನು ಕೈ ಬಿಡದಿರಿ. ಶತ್ರುಕಾಟದಲ್ಲಿ ಮಾತುಗಳಿಂದಲೇ ಜಯ. ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ಬಂಧುಗಳ ಒಡನಾಟವು ಹೆಚ್ಚಿರಲಿದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಇಂದು ನೀವು ಅಂದುಕೊಂಡ ವಿಚಾರದಲ್ಲಿ ಜಯವು ಸಿಗುವುದು. ಕೆಟ್ಟವರ ಸಹವಾಸದಿಂದ ಅಪಕೀರ್ತಿ ಬರಬಹುದು. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡುವಿರಿ. ಭೂಮಿ ವ್ಯವಹಾರದಲ್ಲಿ ಮಧ್ಯಮ ಫಲ. ಉದ್ಯೋಗ ಬದಲಾವಣೆ ಯೋಚನೆ. ಮಾನಸಿಕ ಪೀಡೆಗೆ ಧ್ಯಾನ ಸಹಾಯಕ. ಕೋಪವನ್ನು ತಾನಾಗಿಯೇ ಕಡಿಮೆ ಆಗಿದ್ದು ನಿಮಗೆ ಆಶ್ಚರ್ಯವಾಗಬಹುದು. ನಿಮ್ಮ ಮನಸ್ಸಿಗೆ ಬಾರದೇ ಯಾರಿಗೂ ಏನನ್ನೂ ಕೊಡುವುದು ಬೇಡ. ನಿಮ್ಮ ಹೊಸ ವಸ್ತುಗಳನ್ನು ಬಳಸಲು ಮನಸ್ಸು ಹಿಂಜರಿಯಲಿದೆ.
ತುಲಾ ರಾಶಿ:
ದೈಹಿಕ ಪೀಡೆ ತಾತ್ಕಾಲಿಕವಾಗಿ ಉಪಶಮನವಾಗಲಿದೆ. ಮಾನಸಿಕ ಸ್ಪಷ್ಟತೆ ಹೆಚ್ಚಲಿದೆ. ಶತ್ರುಗಳ ಸಂಚು ಬಹಿರಂಗ. ಇಂದು ನಿಮಗೆ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಾಗಬಹುದು. ಸಾಮಾಜಿಕ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರು ಇಂದು ಒತ್ತಡದಿಂದ ಇರುವರು. ದೇಹ ಪೀಡೆಯು ಅಧಿಕವಾಗಿ ಕಾಣಿಸಿಕೊಳ್ಳುವುದು. ಅನಿವಾರ್ಯ ನೀವು ಪ್ರಯಾಣವನ್ನು ಮಾಡಬೇಕಾಗಬಹುದು. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ, ಅದಕ್ಕೆ ಕಾರಣ ಸುಖವಿದೆ ಎಂಬುಸ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಭೂಮಿ ದಾಖಲೆಗಳು ಸರಿಯಾಗುತ್ತವೆ. ಹೊಸ ಉದ್ಯೋಗದ ಆಹ್ವಾನ ಸಾಧ್ಯ. ಹೊಣೆಗಾರಿಕೆ ಸ್ವೀಕಾರದಿಂದ ಗೌರವ. ಯಾರ ಜೊತೆಯೂ ನಿಮ್ಮ ಮಾತು ಸರಿಯಾಗಿ ಇರದು. ಇಂದು ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ನಿಮ್ಮ ನಿರ್ಧಾರಗಳಿಂದ ನಿಮಗೇ ಅಸಮಾಧಾನ.
ವೃಶ್ಚಿಕ ರಾಶಿ:
ಹೊಣೆಗಾರಿಕೆ ಹೆಚ್ಚಾಗಿ ಉದ್ವೇಗ ಉಂಟಾಗಬಹುದು. ವಂಚನೆಗೆ ಒಳಗಾಗದಂತೆ ಎಚ್ಚರ. ಶತ್ರುಕಾಟದಲ್ಲಿ ಧೈರ್ಯದಿಂದ ಗೆಲುವು. ಭವ್ಯ ಗೃಹದ ಕನಸನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸದ ಕನಸು ಬಂಧುಗಳ ಸಹಕಾರದಿಂದ ಆಗಲಿದೆ. ಧಾರ್ಮಿಕ ಸ್ಥಳಗಳ ಭೇಟಿಯೂ ಆಗಲಿದೆ. ಸಾಲದ ಮೊತ್ತವನ್ನು ಕಡಿಮೆ ಮಾಡಿಕೊಂಡು ಸಮಾಧಾನವಾಗುವುದು. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ಸಹೋದರರ ನಡುವೆ ವಿನಾಕಾರಣ ಆರಂಭವಾದ ವಾಗ್ವಾದವು ಗಂಭೀರ ಸ್ವರೂಪವನ್ನು ಪಡೆದುಕೊಳ್ಳುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳಲು ಆಗದು. ಯಾರದೋ ಒತ್ತಾಯಕ್ಕೆ ಹೂಡಿಕೆಯನ್ನು ಮಾಡುವಿರಿ. ಭೂಮಿ ವ್ಯವಹಾರದಲ್ಲಿ ಲಾಭದ ಸೂಚನೆ. ಉದ್ಯೋಗದಲ್ಲಿ ಹೊಸ ಪಾತ್ರ. ನೈತಿಕತೆ ನಿಮ್ಮ ಶಕ್ತಿ. ಪಕ್ಷಪಾತ ಮಕ್ಕಳ ವಿಚಾರದಲ್ಲಿ ಮಾಡುವುದು ಬೇಡ. ನಿಮ್ಮನ್ನು ನೋಡುವ ದೃಷ್ಟಿಯು ಬದಲಾದೀತು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು.
ಧನು ರಾಶಿ:
ಮಾನಸಿಕ ಒತ್ತಡ ಹೆಚ್ಚಾದರೂ ಕುಟುಂಬ ಬೆಂಬಲ ಸಿಗುತ್ತದೆ. ನೈತಿಕತೆಯಿಂದ ನಡೆದುಕೊಳ್ಳುವುದರಿಂದ ಶತ್ರುಸಂಹಾರ. ಇಂದು ನಿಮ್ಮ ನಡತೆಯು ಸಾಮಾನ್ಯರಂತೆ ಕಂಡರೂ ಪ್ರಭಾವವು ಅಧಿಕವಾಗಿರುತ್ತದೆ. ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು. ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ನಿಮ್ಮವರ ಬಗ್ಗೆ ಯಾರಾದರೂ ಕಿವಿ ಚುಚ್ಚಬಹುದು. ಹೊಂದಾಣಿಕೆಯ ಮನೋಭಾವವು ನಿಮ್ಮಲ್ಲಿ ಇರದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಸಂಗಾತಿಯ ಮಾತಿನಿಂದ ಕೆಲವು ಮಾರ್ಪಾಡು ಮಾಡಿಕೊಳ್ಳುವಿರಿ. ಭೂಮಿ ಖರೀದಿ ಯೋಚನೆ ಮುಂದೂಡಿ. ಹೊಸ ಉದ್ಯೋಗದ ಪ್ರಯತ್ನ ಶುಭ. ದೈಹಿಕ ವಿಶ್ರಾಂತಿ ಅಗತ್ಯ. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೇ ವಹಿಸಿಕೊಂಡು ಯಾವುದನ್ನೂ ಮಾಡಲಾರಿರಿ. ಪ್ರಯಾಣದಲ್ಲಿ ನಿಮಗೆ ಜಾಗರೂಕತೆ ಇರಲಿ.
ಮಕರ ರಾಶಿ:
ವಂಚನೆಯ ಪ್ರಯತ್ನಗಳು ಗೋಚರಿಸಬಹುದು, ದಾಖಲೆಗಳ ಪರಿಶೀಲನೆ ಅಗತ್ಯ. ಉದ್ವೇಗದಿಂದ ದೈಹಿಕ ಸಮಸ್ಯೆ. ಶತ್ರುಕಾಟದಿಂದ ದೂರವಿರಿ. ನಿಮ್ಮ ಕಾರ್ಯದ ದಕ್ಷತೆಯಿಂದ ಉನ್ನತ ಸ್ಥಾನವು ಸಿಗುವುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಮಕ್ಕಳ ಬಗ್ಗೆ ಕನಿಕರ ಬರಬಹುದು. ಹೊರಗಿನ ಆಹಾರದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಮನೆಯ ವಾತಾವರಣವು ಸಂತೋಷವನ್ನು ಕೊಟ್ಟೀತು. ಎಲ್ಲ ವಿಚಾರಕ್ಕೂ ಸಿಟ್ಟು ಉಪಯೋಗಕ್ಕೆ ಬಾರದು. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆಯಾಗುವುದು. ಅಧ್ಯಾತ್ಮದ ವಿಚಾರವು ಹೆಚ್ಚು ಇಷ್ಟವಾಗುವುದು. ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವಿರಿ. ಎಲ್ಲರ ಜೊತೆ ಉತ್ಸಾಹದಿಂದ ಮಾತನಾಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡಬೇಕು ಎಂದುಕೊಳ್ಳುವಿರಿ. ಹೊಸ ಉದ್ಯೋಗದ ಮಾತುಕತೆ ನಡೆಯಲಿದೆ. ಭೂಮಿ ವ್ಯವಹಾರದಲ್ಲಿ ತಾಳ್ಮೆ. ಹೊಣೆಗಾರಿಕೆಯನ್ನು ಹಂಚಿಕೊಳ್ಳುವುದು ಉತ್ತಮ.
ಕುಂಭ ರಾಶಿ:
ಹೊಣೆಗಾರಿಕೆ ಭಾರವಾಗುತ್ತದೆ, ಆದರೆ ಅದನ್ನು ನಿಭಾಯಿಸುವ ಶಕ್ತಿ ನಿಮ್ಮಲ್ಲಿದೆ. ಮಾನಸಿಕ ಪೀಡೆ ಕಡಿಮೆಯಾಗಲಿದೆ. ಶತ್ರುಗಳ ಯುಕ್ತಿ ವಿಫಲ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಅಹಿತಕರ ಆಹಾರದಿಂದ ಆರೋಗ್ಯವು ಕೆಡಬಹುದು. ನೀರಿನ ಭೀತಿಯು ಇರಲಿದೆ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟವಾಗುವುದು. ಯಾರಾದರೂ ನಿಮಗೆ ಬೇಜಾರು ಮಾಡಿಸುವರು. ನೀವು ಇಂದು ಮೌನವನ್ನೇ ಹೆಚ್ಚು ಇಷ್ಟಪಡುವಿರಿ. ಇಬ್ಬಗೆಯ ಮಾನಸಿಕತೆಯು ಬೇಡ. ಭೂಮಿ ಸಂಬಂಧಿತ ಲಾಭ ಸಾಧ್ಯ. ಉದ್ಯೋಗ ಬದಲಾವಣೆಯ ಅವಕಾಶ. ನೈತಿಕ ನಿರ್ಧಾರಗಳು ಗೌರವ ತರುತ್ತವೆ. ವೈದ್ಯ ವೃತ್ತಿಯವರಿಗೆ ಅಪವಾದವು ಬರಬಹುದು. ಮಾನಸಿಕ ಕಿರಿಕಿರಿಯಿಂದ ಸ್ವಲ್ಪ ನೆಮ್ಮದಿ ಸಿಗಲಿದೆ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.
ಮೀನ ರಾಶಿ:
ಉದ್ವೇಗ ಹೆಚ್ಚಾಗಿ ಮನಸ್ಸು ಅಶಾಂತಿಯಾಗಬಹುದು. ಶತ್ರುಕಾಟಕ್ಕೆ ಪ್ರತಿಕ್ರಿಯೆ ನೀಡುವಲ್ಲಿ ನೈತಿಕತೆ ಕಾಪಾಡಿ. ಭೂಮಿ ವ್ಯವಹಾರದಲ್ಲಿ ವಿಳಂಬ. ದೈಹಿಕ ದೌರ್ಬಲ್ಯ ಕಂಡುಬರುವುದು. ಇಂದು ನೀವು ಭೂಮಿಯ ವಿಚಾರವಾಗಿ ಕಲಹವನ್ನು ಮಾಡುವಿರಿ. ಅವಿವಾಹಿತರಿಗೆ ವಿವಾಹದ ಸಂತೋಷವು ಇರಲಿದೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ಕಳೆದುಕೊಂಡಿದ್ದು ನಿಮ್ಮ ಕೈಸೇರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ. ಹೊಸ ಉದ್ಯೋಗದ ಸೂಚನೆ ಇದ್ದರೂ ಹೊಣೆಗಾರಿಕೆಯೂ ಹೆಚ್ಚಲಿದೆ. ವಂಚನೆಯಿಂದ ಎಚ್ಚರ ವಹಿಸುವಿರಿ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡಬಹುದು. ಹೂಡಿಕೆ ಯಾರಾದರೂ ಒತ್ತಾಯ ಮಾಡಬಹುದು. ಇಂದು ನಿಮಗೆ ಇಷ್ಟವಾದ ಕೆಲಸವನ್ನು ಮಾತ್ರ ಮಾಡಿ. ಬೇರೆಯವರ ಬಗ್ಗೆ ಚಿಂತೆ ಬೇಡ. ಮನೆಯ ಸಮಸ್ಯೆಗೆ ಪರಿಹಾರ ಕಾಣುವಲ್ಲಿ ಸಂಗಾತಿಯು ಸಂಪೂರ್ಣ ಬೆಂಬಲ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ನವಮೀ ನಿತ್ಯನಕ್ಷತ್ರ : ರೇವತೀ, ಯೋಗ : ಶುಕ್ಲ, ಕರಣ : ಕೌಲವ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 04 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:13 – 09:38, ಯಮಗಂಡ ಕಾಲ 11:02 – 12:27, ಗುಳಿಕ ಕಾಲ 13:51 – 15:15