ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಸೀಜ್ ಪ್ರಕರಣ; ಇದರ ಹಿಂದಿದ್ಯಾ ಕೆಮಿಕಲ್ ಇಂಜಿನಿಯರ್ ಮಾಸ್ಟರ್ ಮೈಂಡ್!? – Kannada News | Bangalore Drug Factory seized; Is a chemical engineer the mastermind

ಡ್ರಗ್ಸ್ ತಯಾರಿಕೆಗೆ ಬೇಕಾದ ಫಾರ್ಮುಲಾ ನೀಡುತ್ತಿದ್ದನಾ ಪ್ರಶಾಂತ್? ಬೆಂಗಳೂರು, ಡಿಸೆಂಬರ್ 29: ಮಹಾರಾಷ್ಟ್ರ ANTF, ಬೆಂಗಳೂರು ಪೊಲೀಸರು ಹಾಗೂ ಎನ್‌ಸಿಬಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನ (Bengaluru) ಮೂರು ಕಡೆಗಳಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾಗಿದ್ದು, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು. ಈತ ಕೆಮಿಕಲ್ ಇಂಜಿನಿಯರ್ ಆಗಿದ್ದು, ಡ್ರಗ್ಸ್ ಜಾಲದಲ್ಲಿ ಈತನೇ ಮಖ್ಯಪಾತ್ರಧಾರಿಯೇ ಎಂಬ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ ತಯಾರಿಕೆಗೆ…

Read More

ಬೆಂಗಳೂರು: ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್ ಪೀಸ್

ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನ ಕತ್ರಿಗುಪ್ಪೆ ಪ್ರದೇಶದಲ್ಲಿ ಇಬ್ಬರು ಯುವಕರ ಮೇಲೆ ಲಾಂಗು ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಭಾನುವಾರ ರಾತ್ರಿ 8:30ರ ಸುಮಾರಿಗೆ ಬಷೀರ್ ಮತ್ತು ಆತನ ಸ್ನೇಹಿತ ಟೀ ಅಂಗಡಿಯ ಬಳಿ ಇದ್ದಾಗ, ವೆಂಕಟೇಶ್ ಎಂಬಾತನ ನೇತೃತ್ವದ ಏಳರಿಂದ ಎಂಟು ಜನರ ಗ್ಯಾಂಗ್ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಇಬ್ಬರೂ ಕಾರಿನಲ್ಲಿ ಅಡಗಿಕೊಂಡಿದ್ದಾರೆ. ಆದರೆ, ಗ್ಯಾಂಗ್ ಲಾಂಗು, ಮಚ್ಚು ಮತ್ತು ಕಲ್ಲುಗಳಿಂದ ಕಾರಿನ ಮೇಲೆ ಹಲ್ಲೆ ನಡೆಸಿದೆ. ನಂತರ ಯುವಕರು ಕಾರಿನಿಂದ ತಪ್ಪಿಸಿಕೊಂಡು ಮುಖ್ಯ…

Read More

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು – Kannada News | BJP MLA Sharanu Salagar Booked in Cheque Bounce Case

ಬೀದರ್, ಡಿ.29: ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು ಶಾಸಕರ ವಿರುದ್ಧ ದೂರು ನೀಡಿದ್ದಾರೆ. ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಅವರು ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು. ಹಣ ಪಡೆದ ಸಮಯದಲ್ಲಿ ಶಾಸಕರು ಭದ್ರತೆಗಾಗಿ ಖಾಲಿ ಚೆಕ್…

Read More

ಒಂದೆರಡಲ್ಲ, ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಹಲವು ಬ್ಯಾಂಕ್ ದರೋಡೆ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ! – Kannada News | Major Bank Robbery Cases Across Karnataka in 2025: Bengaluru and Statewide Timeline

ಬೆಂಗಳೂರು, ಡಿಸೆಂಬರ್ 29: 2025ರಲ್ಲಿ ಕರ್ನಾಟಕದಾದ್ಯಂತ ಸರಣಿ ದರೋಡೆ ಪ್ರಕರಣಗಳು ನಡೆದಿವೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿರುವ ಈ ಭಯಾನಕ ಕೃತ್ಯಗಳು ಜನರ ಮನಸ್ಸಿನಲ್ಲಿ ಭೀತಿ ಹುಟ್ಟಿಸಿದ್ದು, ಅದರಲ್ಲೂ ಬ್ಯಾಂಕ್​ ದರೋಡೆ ಪ್ರಕರಣಗಳೇ ಹೆಚ್ಚು ಗಮನ ಸೆಳೆದಿವೆ. ರಾಷ್ಟ್ರೀಕೃತ ಬ್ಯಾಂಕ್​ಗಳಿಂದಲೇ ಡಕಾಯಿತರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ಮೌಲ್ಯದ ಎಟಿಎಂ ವಾಹನ ಹೈಜಾಕ್ ಪ್ರಕರಣ, ವಿಜಯಪುರದ ಚಡಚಣದಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 20 ಕೋಟಿ ರೂ….

Read More

ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಅಬುಧಾಬಿ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಅಬುಧಾಬಿ ಪಡೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಗಲ್ಫ್ ಜೈಂಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಮೈಕೆಲ್ ಪೆಪ್ಪರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ…

Read More

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ – Kannada News | Bangalore Power cut: Power outage in these areas of Bangalore on 29th of December

ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಬೆಸ್ಕಾಂನಿಂದ (BESCOM)ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಮೂರು ತಿಂಗಳ ಕಾಲ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೇಳಿಕೊಂಡಿದೆ. ಅದರೊಂದಿಗೆ ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಯ ಮೂಲಕ ಮನೆ ಮೇಲ್ಛಾವಣಿಯಲ್ಲಿ ಸೌರವಿದ್ಯುತ್ ಘಟಕ ಸ್ಥಾಪಿಸಲು ಸಾರ್ವಜನಿಕರಿಗೆ ಸಬ್ಸಿಡಿ ನೀಡುತ್ತಿದೆ. ಎಲ್ಲೆಲ್ಲಿ ಪವರ್ ಕಟ್? ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ನಿನ್ನೆ (ಡಿ.28) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು….

Read More

Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕ್ಯಾಪ್ಟನ್ ಕೊಟ್ಟ ಶಿಕ್ಷೆ ಘನಘೋರ – Kannada News | Gilli Nata And Ashwini Gowda Fights erupted in Bigg Boss Kannada

ಅಶ್ವಿನಿ ಹಾಗೂ ಗಿಲ್ಲಿ ನಡುವಿನ ಸಂಬಂಧ ಆಗಾಗ ಹಳಸುತ್ತದೆ, ಮತ್ತೆ ಸರಿ ಆಗುತ್ತದೆ. ಇತ್ತೀಚೆಗೆ ಇಬ್ಬರೂ ಒಂದಾಗಿದ್ದರು. ಈಗ ಕೆಲಸದ ವಿಷಯಕ್ಕೆ ಫೈಟ್ ನಡೆದಿದೆ. ಅಶ್ವಿನಿ ಅವರು ಅಡುಗೆ ಮನೆ ಕ್ಲೀನ್ ಮಾಡೋ ಕೆಲಸ ಮಾಡಿಲ್ಲ. ಇದನ್ನು ಪ್ರಸ್ತಾಪಿಸಿದಾಗ ‘ನಾನು ಮಾಡಲ್ಲ’ ಎಂದು ನೇರವಾಗಿ ಹೇಳಿದರು. ಈ ವೇಳೆ ಜಗಳ ನಡೆದಿದೆ. ಆ ಬಳಿಕ ಗಿಲ್ಲಿ ಅವರು ‘ರಾತ್ರಿ ನಿದ್ರಿಸೋಕೆ ಕೊಡಲ್ಲ’ ಎಂದು ಹೇಳಿದರು. ಅದರಂತೆಯೇ ಅವರು ನಡೆದುಕೊಂಡಿದ್ದಾರೆ. ರಾತ್ರಿ ಪಾತ್ರೆ ಶಬ್ದ ಮಾಡಿ ಅಶ್ವಿನಿಗೆ ನಿದ್ದೆ…

Read More

Bengaluru Air Quality: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ, ಸಿಲ್ಕ್ ಬೋರ್ಡ್–ವೈಟ್‌ಫೀಲ್ಡ್‌ನಲ್ಲಿ ಉಸಿರಾಡಲೂ ಕಷ್ಟ – Kannada News | Bangalore Air Pollution Crisis: Bengaluru, Other district of karnataka face severe Air pollution

ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಲ್ಲಿ ಅತೀ ಕಳಪೆ ಏರ್ ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 86…

Read More

ವಿವಾದಗಳ ಮಧ್ಯೆ ಅಕ್ಷಯ್ ಖನ್ನಾ ಪರ ಬ್ಯಾಟ್ ಬೀಸಿದ ಬಾಲಿವುಡ್ ಹೀರೋ – Kannada News | Akshaye Khanna Drishyam 3 Controversy: Arshad Warsi Reveals Truth About His Nature

‘ಧುರಂಧರ್’ ನಟ ಅಕ್ಷಯ್ ಖನ್ನಾ (Akshaye Khanna) ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ರೆಹಮಾನ್ ದಕೈತ್ ಪಾತ್ರದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದರು. ಹಲವು ವರ್ಷಗಳ ನಂತರ ಅಕ್ಷಯ್ ಅವರ ಯಶಸ್ಸನ್ನು ನೋಡಿ ಅಭಿಮಾನಿಗಳು ಸಂತೋಷಪಟ್ಟಿದ್ದಾರೆ. ಅಕ್ಷಯ್ ಅವರಿಗೆ ಹೆಚ್ಚಿನ ಚಿತ್ರಗಳು ಸಿಕ್ಕರೆ ಮತ್ತೆ ಅವರನ್ನು ದೊಡ್ಡ ಪರದೆಯ ಮೇಲೆ ನೋಡಬಹುದು ಎಂಬ ಬಯಕೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಅವರು ಮಾಡಿಕೊಂಡ ವಿವಾದದ ಬಗ್ಗೆ ಚರ್ಚೆ ಶುರುವಾಗಿದೆ. ‘ದೃಶ್ಯಂ 3′ ಚಿತ್ರದಿಂದಾಗಿ…

Read More