Category Archives: Blog

Your blog category

ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

Source link

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ – Kannada News | Nali Kali Project Failure: KDA Report Exposes Flaws in Karnataka Govt Schools

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ: ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ

ಬೆಂಗಳೂರು, ಫೆಬ್ರವರಿ 11: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ‘ನಲಿ ಕಲಿ’ (Nali-Kali) ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಮಗ್ರ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾಗಿದೆ.

1995-96ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ ಕಲಿ ಯೋಜನೆ, 2010-11ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ವಿಸ್ತರಿಸಲಾಯಿತು. ಮಕ್ಕಳಿಗೆ ಚಟುವಟಿಕೆ ಆಧಾರಿತ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀಡುವುದು, ಭಾಷಾ ಕೌಶಲ್ಯವನ್ನು ವೃದ್ಧಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿತ್ತು. ಆದರೆ ಕಾಲಕ್ರಮೇಣ ಯೋಜನೆ ಪರಿಣಾಮಕಾರಿತ್ವ ಕಳೆದುಕೊಂಡಿದೆ ಎಂದು ವರದಿ ಸೂಚಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಈ ಬಗ್ಗೆ ಮಾಡಿದ ಎಕ್ಸ್ ಪೋಸ್ಟ್ ಇಲ್ಲಿದೆ

ಶಿಕ್ಷಕರಿಗೆ ಸಮರ್ಪಕ ತರಬೇತಿ ಕೊರತೆ, ಬಹುತರಗತಿ ನಿರ್ವಹಣೆಯಲ್ಲಿ ಸಮಸ್ಯೆಗಳು, ಹೆಚ್ಚಿನ ವಿದ್ಯಾರ್ಥಿಗಳ ಕಾರಣ ವೈಯಕ್ತಿಕ ಗಮನದ ಅಭಾವ, ಅಗತ್ಯ ಕಲಿಕಾ ಸಾಮಗ್ರಿಗಳ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಅಭಾವ ಪ್ರಮುಖ ಕಾರಣಗಳಾಗಿವೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿನ ದೋಷಗಳು ಮತ್ತು ಮೂರನೇ ತರಗತಿಯ ನಂತರ ವಿದ್ಯಾರ್ಥಿಗಳಿಗೆ ಹೊಂದಾಣಿಕೆ ಸಮಸ್ಯೆಯೂ ಕಂಡುಬಂದಿದೆ.

ಇದನ್ನೂ ಓದಿ ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಮೂರು ತರಗತಿಗಳಿಗೆ ಒಬ್ಬ ಶಿಕ್ಷಕ ಎಂಬ ವ್ಯವಸ್ಥೆಗೆ ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ. ಭಾಷಾ ಕಲಿಕೆಯ ಗುಣಮಟ್ಟ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಎಲ್ಲಾ ಕಾರಣಗಳಿಂದ ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಕುಸಿದು, ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 2:45 pm, Wed, 11 February 26

Source link

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು? – Kannada News | Aishwarya Sarja said as director Arjun Sarja is very strict

ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್​ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು ತಂದೆಯ ಜೊತೆಗೆ ಕೆಲಸ ಮಾಡಿದ ಅನುಭವ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಬೆಳಗಾವಿ ಮಲಪ್ರಭಾ ನದಿಯಲ್ಲಿ ಮೂರು ಬೈಕ್​​​ ಪತ್ತೆ: ಇದರ ಹಿಂದಿದೆ ಒಂದು ಜಾಲ – Kannada News | Belagavi: Three bikes found in Malaprabha river; Chaddi Gang Link Suspected

ಬೆಳಗಾವಿ, ಫೆಬ್ರವರಿ 11: ಮಲಪ್ರಭಾ ನದಿ (Malaprabha River) ದಂಡೆ ಮೇಲೆ ವಾಕಿಂಗ್ ಮಾಡುತ್ತಿದ್ದವರಿಗೆ ಕಂಡಿದ್ದು ನದಿಯಲ್ಲಿ ಬೈಕ್ (Bike) ಒಂದು. ಮುಂದೆ ಹೋಗಿ ನೋಡಿದವರಿಗೆ ಸಿಕ್ಕಿದ್ದು ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಬೈಕ್​ಗಳು. ನದಿ ನೀರಲ್ಲಿ ಬೈಕ್ ಕಂಡು ಶಾಕ್ ಆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಬೈಕ್ ಮೂಲ ಪತ್ತೆ ಹಚ್ಚಿದ್ದಾರೆ. ಒಂದೂವರೆ ತಿಂಗಳ ಹಿಂದೆ ಕಳ್ಳತನವಾಗಿದ್ದ ಬೈಕ್​ಗಳು ಇದೀಗ ನದಿಯಲ್ಲಿ ಪತ್ತೆ ಆಗಿವೆ.

ಒಂದೂವರೆ ತಿಂಗಳ ಹಿಂದೇ ಬೈಕ್​ಗಳು ಕಳ್ಳತನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಹೊರ ವಲಯದಲ್ಲಿ ಹಾದು ಹೋಗುವ ಮಲಪ್ರಭಾ ನದಿಯಲ್ಲಿ ಮೂರು ಬೈಕ್​ಗಳು ಪತ್ತೆ ಆಗಿವೆ. ಇಂದು ಬೆಳಂಬೆಳಗ್ಗೆ ನದಿ ನೀರಲ್ಲಿ ದಂಡೆ ಮೇಲೆ ಬೈಕ್ ಒಂದು ಕಾಣಿಸಿದೆ. ಹತ್ತಿರ ಹೋಗಿ ನೋಡಿ ಯಾರೋ ಬೈಕ್ ಸಮೇತ ಸೇತುವೆ ಮೇಲಿಂದ ಬಿದ್ದಿರಬಹುದು ಅಂತಾ ನದಿಗಿಳಿದು ಹುಡುಕಾಟ ನಡೆಸಿದ್ದಾರೆ. ಅಲ್ಲಿ ಮನುಷ್ಯರ ಬದಲಿಗೆ ಸಿಕ್ಕಿದ್ದು ಮತ್ತೊಂದು ಬೈಕ್, ಇದನ್ನ ಕಂಡು ಶಾಕ್ ಆಗಿ ಮತ್ತೆ ಹುಡುಕಿದಾಗ ಸಿಕ್ಕಿದ್ದು ಮತ್ತೊಂದು ಬೈಕ್. ಹೀಗೆ ಮೂರು ಬೈಕ್​ಗಳು ನದಿ ನೀರಿನಲ್ಲಿ ಸಿಗುತ್ತಿದ್ದಂತೆ ಶಾಕ್ ಆದ ಸ್ಥಳೀಯರು ಕೂಡಲೇ ಬೈಲಹೊಂಗಲ ಠಾಣೆ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಬೈಕ್ ಹೊರ ತೆಗೆದು ಠಾಣೆಗೆ ತೆಗೆದುಕೊಂಡು ಹೋಗಿ ಅವುಗಳ ನಂಬರ್ ಆಧಾರದ ಮೇಲೆ ಮಾಲೀಕನ ಪತ್ತೆ ಹಚ್ಚಿ ಕೇಳಿದಾಗ ಗೊತ್ತಾಗಿದ್ದು ತಮ್ಮ ಬೈಕ್​ಗಳು ಒಂದೂವರೆ ತಿಂಗಳ ಹಿಂದೆ ಕಳ್ಳತನವಾಗಿರುವ ವಿಚಾರ.

ಇದನ್ನೂ ಓದಿ: ಚಡ್ಡಿ ಹೋಗಿ ಲುಂಗಿ ಗ್ಯಾಂಗ್ ಬಂತು: ಕಳ್ಳರ ಹಾವಳಿಗೆ ಆತಂಕಗೊಂಡ ಬಾಗಲಕೋಟೆ ಜನ

ಇಲ್ಲಿ ನದಿಯಲ್ಲಿ ಸಿಕ್ಕ ಬೈಕ್​ಗಳು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಿಂದ ಒಂದೂವರೆ ತಿಂಗಳ ಹಿಂದೆ ಬೈಕ್ ಕಳ್ಳತನವಾಗಿದ್ದವು. ಬೈಕ್ ಕಳ್ಳತನವಾಗಿರುವ ಕುರಿತು ಠಾಣೆಯಲ್ಲಿ ಮಾಲೀಕರು ಕೇಸ್ ಕೂಡ ನೀಡಿದ್ದರು. ಈ ವಿಚಾರ ತಿಳಿದು ಪೊಲೀಸರು ಮತ್ತಷ್ಟು ತನಿಖೆ ಚುರುಕುಗೊಳಿಸಿದಾಗ ಗೊತ್ತಾಗಿದ್ದು, ಸಿಕ್ಕ ಬೈಕ್ ಬಳಕೆಯಾಗಿದ್ದು ಖದೀಮರಿಗೆ.

ಕಳ್ಳತನಕ್ಕೂ ಮೊದಲು ಮೂರು ಬೈಕ್​​​ಗಳನ್ನ ಕದ್ದಿದ್ದ ಕಳ್ಳರು

ಡಿಸೆಂಬರ್ 22ರಂದು ಸವದತ್ತಿ ಪಟ್ಟಣದ ಅದೊಂದು ಚಿನ್ನದ ಅಂಗಡಿಯಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ಮಾಡುತ್ತೆ. 09 ಜನ ಮೂರು ಬೈಕ್ ಮೇಲೆ ಬಂದು ಚಿನ್ನದಂಗಡಿ ಬಾಗಿಲು ಮುರಿದು 12 ಲಕ್ಷ ರೂ ಮೌಲ್ಯದ ಚಿನ್ನ ಕದ್ದು ಪರಾರಿಯಾಗಿರುತ್ತಾರೆ. ಈ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುತ್ತೆ. ಚಿನ್ನದಂಗಡಿ ಕಳ್ಳತನಕ್ಕೂ ಮೊದಲು ಮೂರು ಬೈಕ್​ಗಳನ್ನ ಕದ್ದು ಕಳ್ಳರು ಬಳಿಕ ಚಿನ್ನದಂಗಡಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಹೀಗೆ ಕದ್ದು 25 ಕಿಮೀ ದೂರದಲ್ಲಿರುವ ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಎಸೆದು ಯಾರಿಗೂ ಗೊತ್ತಾಗದ ಹಾಗೆ ಪರಾರಿಯಾಗಿದ್ದರು.

ಕಳ್ಳತನವಾದ ಬೈಕ್​ಗಳು ಕಳ್ಳತನಕ್ಕೆ ಬಳಕೆ ಮಾಡಿಕೊಂಡು ಬಳಿಕ ನದಿಗೆ ಎಸೆದಿದ್ದು ಒಂದೂವರೆ ತಿಂಗಳ ಬಳಿಕ ಬೈಕ್ ಪತ್ತೆಯಾಗಿವೆ. ಇದರಿಂದ ಕಳ್ಳರು ಪೊಲೀಸರ ದಿಕ್ಕು ತಪ್ಪಿಸಲು ಹೇಗೆಲ್ಲಾ ಪ್ಲ್ಯಾನ್ ಮಾಡ್ತಾರೆ ಅನ್ನೋದಕ್ಕೆ ಈ ಕೇಸ್ ಉದಾಹರಣೆಯಾಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆದಷ್ಟು ಬೇಗ ಕಳ್ಳರನ್ನು ಬಂಧಿಸುವುದಾಗಿ ಎಸ್​​ಪಿ ಕೆ.ರಾಮರಾಜನ್​ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಚಡ್ಡಿ ಗ್ಯಾಂಗ್ ಹಾವಳಿಗೆ ಜನರು ತಲ್ಲಣ: ಬಂಧಿಸುವಲ್ಲಿ ಖಾಕಿ ವಿಫಲ?

ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸರು ಕೂಡ ಖದೀಮರ ಹಿಡಿಯಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಖದೀಮರು ಪೊಲೀಸರ ದಿಕ್ಕು ತಪ್ಪಿಸಲು ಹೊಸ ಹೊಸ ಟೆಕ್ನಿಕ್ ಅಳವಡಿಸಿಕೊಂಡು ಕಳ್ಳತನ ಮಾಡುತ್ತಿರುವುದು ಪೊಲೀಸರಿಗೂ ಸವಾಲ್ ಆಗಿ ಪರಿಣಮಿಸಿದೆ. ಒಟ್ಟಿನಲ್ಲಿ ಕಳ್ಳತನವಾಗಿದ್ದ ಬೈಕ್ ನೀರಲ್ಲಿ ಪತ್ತೆಯಾಗಿದ್ದು, ಬೈಕ್ ಕಳೆದುಕೊಂಡವರು ನಿಟ್ಟುಸಿರು ಬಿಟ್ಟಿದ್ದಾರೆ. ಅತ್ತ ಚಿನ್ನದಂಗಡಿ ಮಾಲೀಕ ಮಾತ್ರ ಕಳ್ಳರು ಸಿಗಲಿ ಅಂತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ – Kannada News | Union Minister Hardeep Puri slams Rahul Gandhis charge says Epstein meetings were part of IPI delegation protocol

ನವದೆಹಲಿ, ಫೆಬ್ರವರಿ 11: ಲೋಕಸಭೆ ಅಧಿವೇಶನದಲ್ಲಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ರಾಹುಲ್ ಗಾಂಧಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಮತ್ತು ಉತ್ತರಗಳನ್ನು ಕೇಳದೆ ಸದನದಿಂದ ಹೊರನಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಸತ್ತಿನ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿದ ಹರ್ದೀಪ್ ಪುರಿ, “ನಮ್ಮಲ್ಲಿ ಯುವ ನಾಯಕರೊಬ್ಬರು ಇಂದು ಸಂಸತ್ತಿನ ಮುಂದೆ ಕೆಲವು ವಿಷಯಗಳನ್ನು ಮಂಡಿಸಿದರು. ಅವರಿಗೆ ಆಧಾರರಹಿತ ಆರೋಪಗಳನ್ನು ಮಾಡುವ ಅಭ್ಯಾಸವಿದೆ. ಅಪರೂಪಕ್ಕೆ ನಮ್ಮ ದೇಶಕ್ಕೆ ಬರುವ ನಾಯಕ ಸಂಸತ್ತಿಗೆ ಬಂದಾಗ ಮನಬಂದಂತೆ ಆರೋಪ ಮಾಡುತ್ತಾರೆ. ಯಾರೂ ಅವರ ಮಾತನ್ನು ಕೇಳದಿದ್ದಾಗ ಸದನದಿಂದ ಹೊರನಡೆಯುತ್ತಾರೆ. ಅವರು ಇಂದು ತಮ್ಮ ಭಾಷಣದ ನಂತರ ಹೊರಟುಹೋದರು” ಎಂದು ರಾಹುಲ್ ಗಾಂಧಿಯ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, ಅಂತಾರಾಷ್ಟ್ರೀಯ ಶಾಂತಿ ಸಂಸ್ಥೆ (ಐಪಿಐ)ಗೆ ಸಂಬಂಧಿಸಿದ ಅಧಿಕೃತ ನಿಯೋಗದ ಭಾಗವಾಗಿ ಮಾತ್ರ ಜೆಫ್ರಿ ಎಪ್ಸ್ಟೀನ್ ಅವರನ್ನು ಭೇಟಿಯಾಗಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಪ್ಸ್ಟೀನ್ ಅವರೊಂದಿಗಿನ ಅವರ ಸಭೆಗಳು ಅಧಿಕೃತ ಭೇಟಿಗೆ ಸೀಮಿತವಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಸಚಿವ ಹರ್ದೀಪ್ ಪುರಿ ಅವರ ಹೆಸರನ್ನು ಎಪ್ಸ್ಟೀನ್ ಫೈಲ್ಸ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಹೇಳಿದ ನಂತರ ಈ ಸ್ಪಷ್ಟೀಕರಣ ಬಂದಿದೆ. ಇದು ಲೈಂಗಿಕ ಅಪರಾಧಿಯ ಅಪರಾಧ ಚಟುವಟಿಕೆಗಳನ್ನು ವಿವರಿಸುತ್ತದೆ. ಇದರಲ್ಲಿ ಸಾರ್ವಜನಿಕ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳ ಸಾಮಾಜಿಕ ವಲಯವೂ ಸೇರಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಬಿಲ್ ಕ್ಲಿಂಟನ್ ಸೇರಿದಂತೆ ಪ್ರಪಂಚದಾದ್ಯಂತದ ಹಲವಾರು ಉನ್ನತ ವ್ಯಕ್ತಿಗಳನ್ನು ಈ ಫೈಲ್‌ಗಳಲ್ಲಿ ಹೆಸರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಗ್ರೇನ್ ಬಿಪಿಯನ್ನು ಹೆಚ್ಚಿಸುತ್ತದೆಯೇ? ಮಹಿಳೆಯರೇ… ಈ ವಿಷಯಗಳ ಬಗ್ಗೆ ಗಮನ ಕೊಡಿ – Kannada News | Women and Migraine: BP Concerns and Precautions

ಇತ್ತೀಚಿನ ದಿನಗಳಲ್ಲಿ, ಮೈಗ್ರೇನ್ (Migraine) ಮತ್ತು ಅಧಿಕ ರಕ್ತದೊತ್ತಡದ (High BP) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಗಮನಿಸಿರಬಹುದು. ಮೈಗ್ರೇನ್ ಒಂದು ನರವೈಜ್ಞಾನಿಕ ಸಮಸ್ಯೆಯಾಗಿದ್ದು, ತಲೆಯ ಒಂದು ಭಾಗದಲ್ಲಿ ನೋವು ಕಂಡುಬರುತ್ತದೆ. ಇದರ ಜೊತೆಗೆ, ವಾಕರಿಕೆ, ವಾಂತಿ, ತಲೆತಿರುಗುವಿಕೆ ಮತ್ತು ಬೆಳಕು ಮತ್ತು ಶಬ್ದಕ್ಕೆ ಸೂಕ್ಷ್ಮತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾರ್ಮೋನುಗಳ ಬದಲಾವಣೆಯಿಂದಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿ ಪದೇ ಪದೇ ಬರುವ ಮೈಗ್ರೇನ್ ದೇಹದಲ್ಲಿ ಒತ್ತಡದ ಹಾರ್ಮೋನುಗಳನ್ನು ಹೆಚ್ಚಿಸುತ್ತವೆ, ರಕ್ತದೊತ್ತಡವನ್ನು ಅಡ್ಡಿಪಡಿಸುತ್ತದೆ. ಕೆಲವು ಸಂದರ್ಭಗಳಲ್ಲಿ, ಇದು ಹೃದಯ ಮತ್ತು ರಕ್ತದೊತ್ತಡಕ್ಕೆ ಸಂಬಂಧಿಸಿದ ಅಪಾಯವನ್ನು ಕೂಡ ಹೆಚ್ಚಿಸಬಹುದು. ಮಾತ್ರವಲ್ಲ, ದೀರ್ಘಕಾಲದ ವರೆಗೆ ಮೈಗ್ರೇನ್‌ಗಳನ್ನು ನಿರ್ಲಕ್ಷಿಸುವುದು ಹೃದಯದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಸಮಯೋಚಿತ ಎಚ್ಚರಿಕೆ ಮತ್ತು ಸರಿಯಾದ ಆರೈಕೆ ಬಹಳ ಮುಖ್ಯವಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೈಗ್ರೇನ್ ಹೈಬಿಪಿ ಗೆ ಕಾರಣವಾಗುತ್ತದೆಯೇ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಮಹಿಳೆಯರಲ್ಲಿ ಮೈಗ್ರೇನ್ ಮತ್ತು ಅಧಿಕ ರಕ್ತದೊತ್ತಡದ ನಡುವಿನ ನೇರ ಸಂಬಂಧವು ಹಾರ್ಮೋನುಗಳ ಬದಲಾವಣೆಗಳಿಗೆ ಸಂಬಂಧಿಸಿದೆ. ಮುಟ್ಟಿನ ಸಮಯ, ಗರ್ಭಾವಸ್ಥೆಯಲ್ಲಿ ಮತ್ತು ಋತುಬಂಧದ ಸಮಯದಲ್ಲಿ, ಈಸ್ಟ್ರೊಜೆನ್ ಹಾರ್ಮೋನ್‌ನಲ್ಲಿನ ಏರಿಳಿತಗಳು ಮೈಗ್ರೇನ್‌ಗೆ ಕಾರಣವಾಗಬಹುದು. ಮೈಗ್ರೇನ್ ಸಮಯದಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ ಮತ್ತು ಹಿಗ್ಗುತ್ತವೆ, ಇದು ರಕ್ತದೊತ್ತಡದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಗಬಹುದು. ಮೈಗ್ರೇನ್ ಬಹಳ ಸಮಯದವರೆಗೆ ಕಂಡುಬಂದರೆ, ಅದು ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಅಷ್ಟೇಅಲ್ಲ, ಮೈಗ್ರೇನ್ ನಿದ್ರೆಯ ಕೊರತೆ, ಮಾನಸಿಕ ಒತ್ತಡ ಮತ್ತು ಚಡಪಡಿಕೆಗೆ ಕಾರಣವಾಗಬಹುದು, ಇವು ಅಧಿಕ ರಕ್ತದೊತ್ತಡಕ್ಕೆ ಪ್ರಮುಖ ಕಾರಣವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ನೋವು ನಿವಾರಣೆಗೆ ತೆಗೆದುಕೊಳ್ಳುವ ಕೆಲವು ಔಷಧಿಗಳು ಕೂಡ ರಕ್ತದೊತ್ತಡವನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸವೇನು? ಇದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ?

ದೀರ್ಘಕಾಲದವರೆಗೆ ಮೈಗ್ರೇನ್‌ನಿಂದ ಬಳಲುತ್ತಿರುವ ಮಹಿಳೆಯರಲ್ಲಿ ಅಧಿಕ ರಕ್ತದೊತ್ತಡದ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಬೊಜ್ಜು, ಒತ್ತಡದ ಜೀವನಶೈಲಿ ಮತ್ತು ಅನಿಯಮಿತ ನಿದ್ರೆ ಕೂಡ ಈ ರೀತಿಯ ಅಪಾಯವನ್ನು ಹೆಚ್ಚಿಸುತ್ತದೆ. ಧೂಮಪಾನ ಮಾಡುವ ಅಥವಾ ಬಹಳಷ್ಟು ಕೆಫೀನ್ ಸೇವಿಸುವ ಮಹಿಳೆಯರೂ ಸಹ ಅಪಾಯದಲ್ಲಿದ್ದಾರೆ. ಜೊತೆಗೆ ಕುಟುಂಬದ ಇತಿಹಾಸದಲ್ಲಿ ಅಧಿಕ ರಕ್ತದೊತ್ತಡ ಅಥವಾ ಹೃದ್ರೋಗದವಿದ್ದರೆ ಅಂತವರು ಬಹಳ ಎಚ್ಚರಿಕೆವಹಿಸುವುದು ಅಗತ್ಯ. ಅಷ್ಟೇಅಲ್ಲ, ಋತುಬಂಧ ಸಮೀಪಿಸುತ್ತಿರುವ ಮಹಿಳೆಯರಿಗೆ ಮೈಗ್ರೇನ್ ಜೊತೆಗೆ ಅಧಿಕ ರಕ್ತದೊತ್ತಡ ಬರುವ ಅಪಾಯ ಹೆಚ್ಚಾಗಿರಬಹುದು.

ತಡೆಗಟ್ಟುವುದು ಹೇಗೆ?

ಮೈಗ್ರೇನ್ ಮತ್ತು ಅಧಿಕ ರಕ್ತದೊತ್ತಡವನ್ನು ತಡೆಗಟ್ಟಲು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಪ್ರತಿದಿನ 7- 8 ಗಂಟೆ ನಿದ್ರೆ ಮಾಡಿ ಮತ್ತು ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಉಪ್ಪು ಮತ್ತು ಕೆಫೀನ್ ಸೇವನೆಯನ್ನು ಸೀಮಿತಗೊಳಿಸಿ. ನಿಯಮಿತ ಯೋಗ, ನಡಿಗೆ ಮತ್ತು ಲಘು ವ್ಯಾಯಾಮ ಮಾಡುವುದನ್ನು ಮರೆಯಬೇಡಿ. ಮೈಗ್ರೇನ್‌ಗೆ ಕಾರಣವಾಗುವ ಆಹಾರಗಳನ್ನು ತಪ್ಪಿಸಿ ಮತ್ತು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ನಿಮ್ಮ ರಕ್ತದೊತ್ತಡವನ್ನು ಕಾಲಕಾಲಕ್ಕೆ ಪರೀಕ್ಷಿಸಿಕೊಳ್ಳಿ. ವೈದ್ಯರ ಸಲಹೆಯ ಮೇರೆಗೆ ಮಾತ್ರ ಔಷಧಿಗಳನ್ನು ತೆಗೆದುಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆಯುರ್ವೇದ ಪಾತ್ರ ಹೇಗೆ? ಬಾಬಾ ರಾಮದೇವ್ ವಿವರಣೆ ಇದು… – Kannada News | Cancer treatment, Baba Ramdev explains how Ayurvedic food and lifestyle can help

ವಿಶ್ವಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್​ನಿಂದ ಜೀವ ಉಳಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದೆ. ಹೆಚ್ಚಿನ ಕ್ಯಾನ್ಸರ್ ರೋಗಿಗಳು ಅಲೋಪತಿ ಚಿಕಿತ್ಸೆಯನ್ನು ಅವಲಂಬಿಸಿದ್ದಾರೆ. ಈಗೀಗ ಕೆಲವರು ಸಪೋರ್ಟಿವ್ ಟ್ರೀಟ್ಮೆಂಟ್​ಗಾಗಿ ಆಯುರ್ವೇದದತ್ತ ಮುಖ ಮಾಡುತ್ತಿದ್ದಾರೆ. ಕ್ಯಾನ್ಸರ್ ಗುಣಪಡಿಸುವ ಚಿಕಿತ್ಸೆಯಲ್ಲಿ ಆಯುರ್ವೇದ ವಿಧಾನಗಳು ಎಷ್ಟು ಉಪಯುಕ್ತ ಎಂಬುದನ್ನು ಬಾಬಾ ರಾಮದೇವ್ (Baba Ramdev) ತಿಳಿಸಿದ್ದಾರೆ.

ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆ ಅತ್ಯಗತ್ಯವಾದರೂ, ರೋಗಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆಯೂ ಗಮನ ಹರಿಸಬೇಕು ಎಂದೆನ್ನುತ್ತಾರೆ ಬಾಬಾ ರಾಮದೇವ್. ರೋಗದಿಂದ ಗುಣಮುಖವಾಗಲು ಮತ್ತು ಅಡ್ಡಪರಿಣಾಮಗಳನ್ನು ಕಡಿಮೆ ಮಾಡಲು ಬೇಕಾದ ಚೈತನ್ಯ ಇದರಿಂದ ಸಿಗುತ್ತದೆ. ಆಯುರ್ವೇದ ಶಿಫಾರಸು ಮಾಡುವ ಕೆಲ ಆಹಾರಗಳನ್ನು ಸಪೋರ್ಟಿವ್ ನ್ಯೂಟ್ರಿಯೆಂಟ್​ಗಳಾಗಿ ನೋಡಲಾಗುತ್ತದೆ. ಇವು ಚಿಕಿತ್ಸೆಗೆ ಪರ್ಯಾಯ ಅಲ್ಲವಾದರೂ, ಟ್ರೀಟ್ಮೆಂಟ್ ಸಂದರ್ಭದಲ್ಲಿ ವೈದ್ಯರ ಸಲಹೆ ಮೇರೆಗೆ ಇವನ್ನು ತೆಗೆದುಕೊಳ್ಳುವುದು ಅನುಕೂಲವಾಗುತ್ತದೆ.

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಸಪೋರ್ಟಿವ್ ಡಯಟ್ ಯಾಕೆ ಮುಖ್ಯ?

ಕ್ಯಾನ್ಸರ್ ಚಿಕಿತ್ಸೆಯು ರೋಗಿಯ ರೋಗನಿರೋಧಕ ಶಕ್ತಿಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಹಲವಾರು ಅಡ್ಡಪರಿಣಾಮಗಳನ್ನು ಸಹ ಗಮನಿಸಬಹುದು. ಅಂತಹ ಸಂದರ್ಭಗಳಲ್ಲಿ, ಆಯುರ್ವೇದವು ಈ ಅಡ್ಡಪರಿಣಾಮಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅನೇಕ ರೋಗಿಗಳಿಗೆ ಅಜೀರ್ಣತೆ, ಹಸಿವಿನ ಕೊರತೆ, ಸುಸ್ತು ಇತ್ಯಾದಿ ಸಮಸ್ಯೆಗಳು ಅನುಭವವಾಗುತ್ತವೆ. ಆದ್ದರಿಂದ, ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ಸೇವಿಸಿದರೆ ಪ್ರಯೋಜನಕಾರಿಯಾಗಬಹುದಾದ ಕೆಲವು ಆಯುರ್ವೇದೀಯ ಆಹಾರಗಳಿವೆ. ಇವನ್ನು ಸೇವಿಸುವುದರಿಂದ ಕ್ಯಾನ್ಸರ್ ಚಿಕಿತ್ಸೆಯಲ್ಲಿನ ಅಡ್ಡಪರಿಣಾಮಗಳು ಕಾಣಿಸುವುದಿಲ್ಲ. ಈ ಆಹಾರಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ದೌರ್ಬಲ್ಯವನ್ನು ನಿವಾರಿಸಲು ನೆರವಾಗುತ್ತದೆ.

ಇದನ್ನೂ ಓದಿ: ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು

ಆಯುರ್ವೇದದಲ್ಲಿ ಈ ವಿಷಯಗಳು ಪ್ರಯೋಜನಕಾರಿ

ಆಯುರ್ವೇದ ಮತ್ತು ನ್ಯೂಟ್ರಿಶನ್ ಎಕ್ಸ್​ಪರ್ಟ್​ಗಳ ಪ್ರಕಾರ, ಈ ಕೆಳಕಾಣಿಸಿರುವ ಆಹಾರಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಲು ಸಹಾಯ ಮಾಡುತ್ತವೆ:

  • ಬಾರ್ಲಿ ರಸ
  • ಗಿಲೋಯ್ ರಸ
  • ಮಸೂರ ಮತ್ತು ದ್ವಿದಳ ಧಾನ್ಯಗಳು
  • ಹಸಿರು ತರಕಾರಿಗಳು
  • ವೀಟ್ ಗ್ರಾಸ್ ಪೌಡರ್
  • ಬೇವಿನ ರಸ

ಈ ವಸ್ತುಗಳನ್ನು ತಿನ್ನಬಾರದು

  • ಸಕ್ಕರೆ
  • ಹುರಿದ ಆಹಾರ
  • ಕೆಂಪು ಮಾಂಸ
  • ಅಧಿಕ ಉಪ್ಪು ಸೇವನೆ

ಇದನ್ನೂ ಓದಿ: Hair Fall Treatment: ಕೂದಲು ಉದುರುವಿಕೆ ನಿಲ್ಲಿಸಲು ಮನೆಮದ್ದುಗಳು: ಸರಳ ಪರಿಹಾರ ಸೂಚಿಸುವ ಬಾಬಾ ರಾಮದೇವ್

ಮುಂಚಿತವಾಗಿ ವೈದ್ಯರನ್ನು ಸಂಪರ್ಕಿಸಿ

ಆಯುರ್ವೇದದಲ್ಲಿ ಉಲ್ಲೇಖಿಸಲಾದ ಈ ಪದಾರ್ಥಗಳು ಕ್ಯಾನ್ಸರ್ ಚಿಕಿತ್ಸೆಗೆ ಪರ್ಯಾಯವಲ್ಲ. ಅವುಗಳನ್ನು ನಿಮ್ಮ ಆಹಾರದಲ್ಲಿ ಸಪೋರ್ಟಿವ್ ಕೇರ್ ಆಗಿ ಮಾತ್ರ ಸೇರಿಸಿಕೊಳ್ಳಬಹುದು. ಆದಾಗ್ಯೂ, ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು? – Kannada News | HD Devegowda Requests In rajyasabha Industrial corridor from Bengaluru to Mangaluru

ನವದೆಹಲಿ, (ಫೆಬ್ರವರಿ 11):  ಕೇಂದ್ರ ಬಜೆಟ್ (Union Budget) ಮೇಲಿನ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರು ಪಾಲ್ಗೊಂಡು ಮಾತನಾಡಿದ್ದು, ಮೂರು ಪ್ರಮುಖ ಬಂದರುಗಳನ್ನು ಜೋಡಿಸುವ ಬೆಂಗಳೂರಿನಿಂದ – ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್ ವಿಸ್ತರಣೆ ಹಾಗೂ ಹಲಸು, ಹುಣಸೆ, ನೇರಳೆ ಮಂಡಳಿ ರಚನೆ ಮಾಡಬೇಕು ಎಂದು ಕೋರಿದರು.

ಈಗಾಗಲೇ ಚೆನ್ನೈನಿಂದ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಬೆಂಗಳೂರು ನಡುವಿನ ಪ್ರಮುಖ ಬಂದರುಗಳನ್ನು ಹೊಂದಿರುವ ಕೈಗಾರಿಕಾ ಕಾರಿಡಾರ್ ಯೋಜನೆಗಳಿಗೆ ಅನುಮೋದನೆ ನೀಡುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಅದೇ ರೀತಿ, ಬೆಂಗಳೂರಿನಿಂದ ಮಂಗಳೂರಿನವರೆಗೆ ಈ ಕೈಗಾರಿಕಾ ಕಾರಿಡಾರ್ ವಿಸ್ತರಿಸಿದರೆ ಕೈಗಾರಿಕಾ ಅಭಿವೃದ್ಧಿಗೆ ಬಹಳಷ್ಟು ಅನುಕೂಲ ಆಗುತ್ತದೆ. ಮಂಗಳೂರು ಕೂಡ ಪ್ರಮುಖ ಬಂದರು ಆಗಿದ್ದು; ವಿಶಾಖಪಟ್ಟಣ, ಚೆನ್ನೈ ಹಾಗೂ ಮಂಗಳೂರು ಬಂದರುಗಳನ್ನುಜೋಡಿಸಿದರೆ ರಾಷ್ಟ್ರದ ಕೈಗಾರಿಕಾಭಿವೃದಿಗೆ ಪರಿವರ್ತನಾತ್ಮಕ ವೇಗ ಬರುತ್ತದೆ ಎಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದರು.

ಇದನ್ನೂ ಓದಿ: ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ಹಲಸು, ಹುಣಸೆ, ನೇರಳೆ ಮಂಡಳಿ ರಚನೆಗೆ ಸಲಹೆ

ಕರ್ನಾಟಕವೂ ಸೇರಿ ತಮಿಳುನಾಡು, ಕೇರಳ ಮುಂತಾದ ರಾಜ್ಯಗಳಲ್ಲಿ ಬೆಳೆಯಲಾಗುವ ಹಲಸು, ಹುಣಸೆ, ನೇರಳೆಗೆ ಉತ್ತೇಜನ ನೀಡಲು ಮಕಾನ ಮಂಡಳಿಯಂತೆ ಪ್ರತ್ಯೇಕ ಮಂಡಳಿಯನ್ನು ರಚನೆ ಮಾಡಬೇಕು. ಈ ಮೂರು ಬೆಳೆಗಳು ಔಷಧೀಯ ಗುಣಗಳನ್ನು ಹೊಂದಿದ್ದು, ದಕ್ಷಿಣದ ಭಾಗದಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತಿದೆ. ಕಡಿಮೆ ಮಳೆ ಅಗತ್ಯವಿರುವ ಬೆಳೆಗಳು ಎಂದು ಮಾಜಿ ಪ್ರಧಾನಿ ದೇವೇಗೌಡರು ಮನವಿ ಹೇಳಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಡಳಿ ರಚನೆ ಬಗ್ಗೆ ಕ್ರಮ ವಹಿಸುತ್ತಾರೆ ಎಂಬ ನಂಬಿಕೆ ಹೊಂದಿದ್ದೇನೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಜೆಟ್ ಅನ್ನು ಎನ್ಡಿಎ ಮೈತ್ರಿಪಕ್ಷವಾಗಿ ಮುಕ್ತಕಂಠದಿಂದ ಸ್ವಾಗತಿಸಿವೆ ಎಂದ ಮಾಜಿ ಪ್ರಧಾನಿಗಳು; ಆಯವ್ಯಯದಲ್ಲಿ ಅಡಗಿರುವ ಅನೇಕ ಉತ್ತಮ ಅಂಶಗಳನ್ನು ಪಟ್ಟಿ ಮಾಡಿದರು. ಉತ್ಪಾದನೆ, ಎಂಎಸ್‌ಎಂಇಗಳು, ಕೈಗಾರಿಕಾ ಮೂಲಸೌಕರ್ಯ ಮತ್ತು ರಫ್ತು ವಹಿವಾಟಿಗೆ ಉತ್ತೇಜನ ನೀಡುವುದು ಸೇರಿದಂತೆ ಅನಿಶ್ಚಿತತೆಯನ್ನು ಕಡಿಮೆ ಮಾಡುವ ಮತ್ತು ದೀರ್ಘಾವಧಿಯ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶವನ್ನು ಮುಂಗಡಪತ್ರದಲ್ಲಿ ಒತ್ತಿ ಹೇಳಲಾಗಿದೆ. ಇದು ಜಾಗತಿಕ ಮೌಲಿಕ ಸರಪಳಿಗಳಲ್ಲಿ ಭಾರತದ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ದೃಷ್ಟಿಕೋನವನ್ನು ದೃಢವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು.

ಜನತೆಗೆ ಅನುಕೂಲ ಆಗುವಂತೆ ತೆರಿಗೆ ವ್ಯವಸ್ಥೆಯಲ್ಲಿ ಸರಳೀಕರಣ ಮಾಡಿರುವುದು ಸ್ವಾಗತಾರ್ಹ. ತೆರಿಗೆದಾರರ ವಿಶ್ವಾಸವು ಅಷ್ಟೇ ಮುಖ್ಯವಾಗಿದೆ ಎಂದ ಅವರು; ಸರ್ಕಾರವು ಕರ್ನಾಟಕದ ಕರಾವಳಿ ಸೇರಿ ಇತರ ಪ್ರದೇಶಗಳಲ್ಲಿ ಯಥೇಚ್ಛವಾಗಿ ಬೆಳೆಯಲಾಗುವ ತೆಂಗಿನಕಾಯಿ, ಶ್ರೀಗಂಧ, ಕೋಕೋ ಮತ್ತು ಗೋಡಂಬಿಯಂತಹ ವಾಣಿಜ್ಯ ಬೆಳೆಗಳಿಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡಿರುವುದು ಉತ್ತಮವಾದ ಹೆಜ್ಜೆ. ತೆಂಗು ‘ಕಲ್ಪವೃಕ್ಷ’ ಎಂದು ಜನಪ್ರಿಯವಾಗಿದೆ. ಇದು ಎಲ್ಲಾ ವಯಸ್ಸಿನ ಜನರಿಗೆ ಬಹುವಿಧದಲ್ಲಿ ಆರೋಗ್ಯ ಪ್ರಯೋಜನಗಳೊಂದಿಗೆ ಪೋಷಣೆ ಒದಗಿಸುತ್ತದೆ. ಹೆಚ್ಚಿನ ಪ್ರದೇಶಗಳಲ್ಲಿ ತೆಂಗು ಜೀವನಾಡಿಯಾಗಿದೆ. ಕೃಷಿಗೆ ಉತ್ತಮ ಬೆಂಬಲ ಕೊಡಲಾಗಿದೆ. ಒಟ್ಟು ಬಜೆಟ್ ನಲ್ಲಿ ಒಟ್ಟು ಬಜೆಟ್‌ನ 3% ರಷ್ಟು ಹಂಚಿಕೆ ನೀಡಲಾಗಿದ್ದು, ಈ ಪ್ರಮಾಣವನ್ನು 5% ಗೆ ಕೃಷಿ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 8:18 pm, Wed, 11 February 26

Source link

ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ ಕನ್ನಡದಲ್ಲಿ ನಟಿಸಿದ ಸುಂದರಿ

Source link

ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ – Kannada News | Arnataka Govt Revokes BJP Leader Bhookant’s Cabinet Rank Amidst Congress Backlash

ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರImage Credit source: Tv9 Kannada

ಬೆಂಗಳೂರು, ಫೆಬ್ರವರಿ 11: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್​​ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್​​ ಸರ್ಕಾರದಿಂದ ಈ ಸ್ಥಾನ ಮಾನ ನೀಡಿರೋದು ಎಷ್ಟು ಸರಿ ಎಂಬ ವಿರೋಧ ಕೇಳಿಬಂದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರವೀಗ ಹಿಂಪಡೆದಿದೆ. ಕಾರ್ಯಕರ್ತರ ಅಸಮಾಧಾನದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ.

ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ದೊರೆಯುತ್ತಿದ್ದ ಈ ಸ್ಥಾನಮಾನವನ್ನು ಎಲ್ಲ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಸರಿ. ಆದರೆ ಕಾಂಗ್ರೆಸ್​​ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡನಿಗೆ ಈ ಸ್ಥಾನಮಾನ ನೀಡಿದ್ದು ಯಾಕೆ ಎಂದು ಪ್ರಶ್ನಿಸಲಾಗಿತ್ತು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!; ‘ಕೈ’ ಕಾರ್ಯಕರ್ತರ ಕಿಡಿ

ಕಿಡಿ ಕಾರಿದ್ದ ಡಿ.ಕೆ. ಸುರೇಶ್​​

ಕಾರ್ಯಕರ್ತರು ಮಾತ್ರವಲ್ಲದೆ ತಮ್ಮದೇ ಸರ್ಕಾರದ ವಿರುದ್ಧ ಮಾಜಿ ಸಂಸದ, ಡಿಸಿಎಂ ಡಿಕೆಶಿ ಸಹೋದರ ಡಿ.ಕೆ. ಸುರೇಶ್​​ ಕೂಡ ಲೇವಡಿ ಮಾಡದ್ದರು. ನಮ್ಮದು ಸರ್ವಧರ್ಮ ಪಾಲಿಸಿಯಾಗಿದ್ದು, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ ನೀಡಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ‌ ಆದ್ಯತೆ ನೀಡುತ್ತೇವೆ ಎಂದು ಪರೋಕ್ಷವಾಗಿ ತಿವಿದಿದ್ದರು.

ವರದಿ: ಈರಣ್ಣಾ ಬಸವ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:01 pm, Wed, 11 February 26

Source link