ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್ – Kannada News | Bengaluru Drug Factory Bust: G. Parameshwara Says Maharashtra Police Statement Is Far from the Truth

ಬೆಂಗಳೂರು, ಡಿಸೆಂಬರ್​​ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎಎನ್‌ಟಿಎಫ್ ಡಿಸೆಂಬರ್ 26ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಜಿ ಪರಮೇಶರ್​​ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು ಎಂದಿದ್ದಾರೆ. ಅದು 1…

Read More

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ? – Kannada News | Bengaluru: QR Code System Introduced for the Convenience of New Year Celebrations

ಬೆಂಗಳೂರು, ಡಿಸೆಂಬರ್​ 28: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆಗೆ ಬೆಂಗಳೂರಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಕ್ಯೂಆರ್ ಕೋಡ್‌ಗಳು ಆಂಬುಲೆನ್ಸ್ ಸೇವೆಗಳು, ವಾಹನ ಪಾರ್ಕಿಂಗ್ ಮತ್ತು ಸಂಚಾರ ಮಾಹಿತಿ ಸೇರಿದಂತೆ ಅಗತ್ಯ ವಿವರಗಳನ್ನು ಒದಗಿಸುತ್ತವೆ. ಪಬ್‌, ಬಾರ್‌, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳಲ್ಲಿ ಅಳವಡಿಸಲಾಗಿದೆ ಎಂದರು. ಮತ್ತಷ್ಟು ವಿಡಿಯೋ…

Read More

ವಿಶ್ವ ಕಲ್ಯಾಣಕ್ಕಾಗಿ ಭಾರತ ವಿಶ್ವಗುರು ಆಗಲೇಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ – Kannada News | India should become vishwaguru for the world welfare RSS chief Mohan Bhagwat says

ಹೈದರಾಬಾದ್, ಡಿಸೆಂಬರ್ 28: “ವಿಶ್ವಗುರು” ಆಗುವ ಭಾರತದ ಪ್ರಯಾಣವು ಕೇವಲ ರಾಷ್ಟ್ರೀಯ ಮಹತ್ವಾಕಾಂಕ್ಷೆಯ ವಿಷಯವಲ್ಲ, ಅದು ಜಾಗತಿಕ ಅವಶ್ಯಕತೆಯಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಒತ್ತಿ ಹೇಳಿದ್ದಾರೆ. ಈ ಗುರಿಗೆ ಕಠಿಣ ಪರಿಶ್ರಮ, ಬದ್ಧತೆ ಮತ್ತು ಮಾನವ ಮೌಲ್ಯಗಳು ಮತ್ತು ಸಾಮಾಜಿಕ ಬದಲಾವಣೆಯನ್ನು ಅಭಿವೃದ್ಧಿಪಡಿಸುವತ್ತ ಅಚಲ ಗಮನದ ಅಗತ್ಯವಿದೆ ಎಂದು ಹೇಳಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ವಿಶ್ವಗುರುವಾಗಿ ಭಾರತದ ಪಾತ್ರವು ಕೇವಲ ಒಂದು ಆಕಾಂಕ್ಷೆಯಲ್ಲ. ಆರ್‌ಎಸ್‌ಎಸ್…

Read More

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್ – Kannada News | A delivery boy arrested for molesting young woman private parts during christmas celebration in bengaluru

ಬೆಂಗಳೂರು, (ಡಿಸೆಂಬರ್ 28): ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ (christmas celebration) ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ (Bengaluru) ಮಾಲ್​​​ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್‌ ಮನೋಜ್, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಇದರಿಂದ ಮುಜುಗರಕ್ಕೊಳಗಾದ ಯುವತಿ, ಕೂಡಲೇ ಸ್ಥಳದಲ್ಲೇ ಇದ್ದ ಹದೇವಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಪೊಲೀಸರು, ಕಾಮುಕ…

Read More

BECIL Recruitment 2025: 10 ನೇ ತರಗತಿಯಿಂದ ಪದವೀಧರರವರೆಗೆ BECILನಲ್ಲಿ ನೇಮಕಾತಿ; 40 ಸಾವಿರ ರೂ. ಮಾಸಿಕ ವೇತನ – Kannada News | BECIL Recruitment 2025: 78 Government Jobs for 10th Pass and Graduates, Apply by Jan 5

ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್​​ ನ್ಯೂಸ್​ ಇಲ್ಲಿದೆ. ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) 10 ನೇ ತರಗತಿಯಿಂದ ಪದವೀಧರರವರೆಗಿನ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು BECIL ನ ಅಧಿಕೃತ ವೆಬ್‌ಸೈಟ್ becil.com ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 5 ಸಂಜೆ 6:00 ಗಂಟೆ. BECIL ತಾಂತ್ರಿಕ ಸಹಾಯಕ (ENT), ನೇತ್ರ ತಂತ್ರಜ್ಞ, ರೋಗಿಯ ಆರೈಕೆ ವ್ಯವಸ್ಥಾಪಕ (PCM),…

Read More

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ – Kannada News | Drishyam 3 movie producer case against Akshay Khanna

‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದ್ದರೂ ಸಹ ಸಿನಿಮಾನಲ್ಲಿ ಹೆಚ್ಚು ಗಮನ ಸೆಳೆದಿರುವುದು ನಟ ಅಕ್ಷಯ್ ಖನ್ನಾ. ಸಿನಿಮಾನಲ್ಲಿ ರಹಮಾನ್ ಡಕೈತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದು, ಅವರ ಡೈಲಾಗ್​​ಗಳು, ಅವರ ಎಂಟ್ರಿ, ಅವರ ಡ್ಯಾನ್ಸಿನ ರೀಲುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಸಿನಿಮಾ ನೋಡಿದವರೆಲ್ಲ ರಣ್ವೀರ್ ಸಿಂಗ್​​ಗಿಂತಲೂ ಹೆಚ್ಚಾಗಿ ಅಕ್ಷಯ್ ಖನ್ನಾ ಪಾತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಅಚಾನಕ್ ಯಶಸ್ಸು…

Read More

IND-W vs SL-W: 69,79,79.. ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಶಫಾಲಿ ವರ್ಮಾ

ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ತಿರುವನಂತಪುರದಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಸ್ಫೋಟಕ 79 ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ. ಇದು ಈ ಸರಣಿಯಲ್ಲಿ ಶಫಾಲಿ ಅವರ ಸತತ ಮೂರನೇ ಅರ್ಧಶತಕವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 9 ರನ್​ಗಳಿಗೆ ಔಟಾಗಿದ್ದ ಶಫಾಲಿ, ಆ ಬಳಿಕ 2ನೇ ಟಿ20 ಪಂದ್ಯದಲ್ಲಿ 69 ರನ್, 3ನೇ ಟಿ20 ಪಂದ್ಯದಲ್ಲಿ 79 ರನ್ ಹಾಗೂ 4ನೇ ಟಿ20 ಪಂದ್ಯದಲ್ಲಿ 79 ರನ್ ಬಾರಿಸಿದ್ದಾರೆ….

Read More

ಮೊದಲ ಪತಿ ಮೇಲೆ ವರದಕ್ಷಿಣೆ ಕೇಸ್​​ ಹಾಕಿದ ಮಹಿಳೆಗೆ ಶಾಕ್ ಕೊಟ್ಟ 2ನೇ ಗಂಡ! – Kannada News | Second husband testifies for first husband in court woman loses domestic violence case

ಮುಂಬೈ, ಡಿಸೆಂಬರ್ 28: ಮಹಾರಾಷ್ಟ್ರದ ಮುಂಬೈನ (Mumbai) ಕೋರ್ಟ್​ನಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರ ಮೇಲೆ ಅವರ ಹೆಂಡತಿ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿದ್ದಳು. ತನಗೆ ಗಂಡನಿಂದ ಆರ್ಥಿಕ ಪರಿಹಾರ ಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದಳು. ಆದರೆ, ಆಕೆಯ ಗಂಡ ಆಕೆಯ 2ನೇ ಗಂಡನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬಂದ ನಂತರ ಈ ಪ್ರಕರಣದ ದಿಕ್ಕೇ ಬದಲಾಗಿದೆ. ವರದಕ್ಷಿಣೆ ಆರೋಪದ ಮೇಲೆ ತನ್ನ ಪತಿ ತನ್ನ ಮೇಲೆ ದೈಹಿಕ ಹಲ್ಲೆ ನಡೆಸಿ, ವಿಚ್ಛೇದನದ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ…

Read More

ಮನೆಯಲ್ಲಿ ನನ್ನ ಮಕ್ಕಳು ಸುರಕ್ಷಿತವಾಗಿಲ್ಲ; ಕುಲದೀಪ್ ಸೆಂಗಾರ್ ಜಾಮೀನು ವಿರುದ್ಧ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕಳವಳ – Kannada News | My children unsafe at home Unnao rape survivor accuses against Kuldeep Singh Sengar

ನವದೆಹಲಿ, ಡಿಸೆಂಬರ್ 28: 2017ರ ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದ ಆರೋಪಿ ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲೇ ಅತ್ಯಾಚಾರ ಸಂತ್ರಸ್ತೆ ತನ್ನ ಮಕ್ಕಳು ಮತ್ತು ಕುಟುಂಬದ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ನೀಡುವ ಬಗ್ಗೆ ನಂಬಿಕೆ…

Read More

ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್​ ಬಾಡಿಗೆ ದರ ಹೆಚ್ಚಳ: ಅಸಲಿ ಕಾರಣ ಏನು ಗೊತ್ತಾ? – Kannada News | Bengaluru: JCB and Tipper Rental Rates to Increase; Here Are the Details

ಆನೇಕಲ್, ಡಿಸೆಂಬರ್​ 28: 15 ಮತ್ತು 20 ವರ್ಷ ಮೀರಿದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲು ಸಾರಿಗೆ ಸಚಿವರು ಸೂಚಿಸಿದ್ದರು. ಆದರೆ ಆರ್​ಟಿಓ (RTO) ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಜನವರಿ 5ರೊಳಗೆ ಫಿಟ್ನೆಸ್ ಸರ್ಟಿಫಿಕೇಟ್ ರಿಜಿಸ್ಟರ್ ಮಾಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಖಪ್ಪ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ರಾಜ್ಯದಲ್ಲಿ ಮೀತಿಮೀರಿದ ಆರ್​ಟಿಓ, ಪೊಲೀಸ್ ಕಿರುಕುಳ 15 ಮತ್ತು 20 ವರ್ಷ ಹಳೆಯದಾದ ವಾಹನಗಳ ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲು ದುಬಾರಿ…

Read More