15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
Your blog category
15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಬೆಂಗಳೂರು, ಡಿಸೆಂಬರ್ 28: ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ 27ನೇ ಕ್ರಾಸ್ನಲ್ಲಿ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸಂತೋಷ್(26) ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಮೃತ ಯುವಕ ಬೆಂಗಳೂರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಾರು ಚಾಲಕ ಅಬ್ದುಲ್ ರೆಹಮಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಪಾದಚಾರಿಗೆ ಕಾರು ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, HSR ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಹಿನ್ನೆಲೆ ರಕ್ತದ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸೌತ್ ಆಫ್ರಿಕಾ ಟಿ20 ಲೀಗ್ನ 3ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ತಂಡವು ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ. ಪರ್ಲ್ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.
187 ರನ್ಗಳ ಗುರಿ ಪಡೆದ ಪಾರ್ಲ್ ರಾಯಲ್ಸ್ ತಂಡವು ಅನ್ರಿಕ್ ನೋಕಿಯ ದಾಳಿಗೆ ತತ್ತರಿಸಿದೆ. ಪರಿಣಾಮ ಕೇವಲ 49 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಅತ್ಯಲ್ಪ ಮೊತ್ತ ಕಲೆಹಾಕಿದ ಹೀನಾಯ ದಾಖಲೆಯನ್ನು ಬರೆದಿದೆ.
ಇದಕ್ಕೂ ಮುನ್ನ ಈ ದಾಖಲೆ ಪ್ರಿಟೊರಿಯಾ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ವಿರುದ್ಧ ಪ್ರಿಟೊರಿಯಾ ಕ್ಯಾಪಿಟಲ್ಸ್ ಕೇವಲ 52 ರನ್ಗಳಿಗೆ ಆಲೌಟ್ ಆಗಿದ್ದರು.
ಇದೀಗ 49 ರನ್ಗಳಿಗೆ ಸರ್ವಪತನ ಕಾಣುವ ಮೂಲಕ ಪಾರ್ಲ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆಯನ್ನು ಸರಿಗಟ್ಟಿದೆ. ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಆರ್ಸಿಬಿ ತಂಡದ ಹೆಸರಿನಲ್ಲಿದೆ.
ಆರ್ಸಿಬಿ 2017 ರಲ್ಲಿ ಕೆಕೆಆರ್ ವಿರುದ್ಧ 49 ರನ್ಗಳಿಗೆ ಆಲೌಟ್ ಆಗಿದ್ದರು. ಇದೀಗ ಪಾರ್ಲ್ ರಾಯಲ್ಸ್ ಕೂಡ 49 ರನ್ಗಳಿಗೆ ಸರ್ವಪತನ ಕಾಣುವ ಮೂಲಕ ಪ್ರಮುಖ ಲೀಗ್ಗಳಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಬರೆದಿದೆ.
ಬೆಂಗಳೂರು, ಡಿಸೆಂಬರ್ 28: ಉಚಿತ ಶಿಕ್ಷಣದ ಜೊತೆಗೆ ನಾನಾ ಸೌಲಭ್ಯಗಳ ಹೊರತಾಗಿಯೂ ಶಾಲೆಯತ್ತ ಮುಖ ಮಾಡದ ಮಕ್ಕಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದೇಶಾದ್ಯಂತ ಈ ಸಮಸ್ಯೆ ಇದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಇತ್ತೀಚಿಗೆ ಈ ಬಗ್ಗೆ ಅಂಕಿಅಂಶಗಳನ್ನ ಬಹಿರಂಗಗೊಳಿಸಿದೆ. ಆ ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿಯೇ ಮೂರನೇ ಸ್ಥಾನದಲ್ಲಿದೆ.
2025–26ರಲ್ಲಿ ಕರ್ನಾಟಕದಲ್ಲಿ ಒಟ್ಟು 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರಲ್ಲಿ 6,462 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. 2024–25ರಲ್ಲಿ ಈ ಸಂಖ್ಯೆ 9,422 ಇದ್ದು, ಅವರಲ್ಲಿ ಕೇವಲ 115 ಮಂದಿ ಮಾತ್ರ ಹುಡುಗಿಯರಾಗಿದ್ದರು. ಕಳೆದ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಪ್ರಸ್ತುತ ಹೆಚ್ಚಾಗಿದೆ. ದೇಶವ್ಯಾಪಿ ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಗುಜರಾತ್, ಅಸ್ಸಾಂ ಮತ್ತು ಉತ್ತರ ಪ್ರದೇಶಗಳು ಅಗ್ರಸ್ಥಾನದಲ್ಲಿವೆ.
ಇದನ್ನೂ ಓದಿ: ಎಲ್ಲ ತರಗತಿಗೆ ಒಬ್ಬರೇ ಟೀಚರ್; ರಾಜ್ಯದಲ್ಲಿವೆ 6,675 ಏಕ ಶಿಕ್ಷಕ ಶಾಲೆಗಳು
ದಕ್ಷಿಣ ಭಾರತದಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದ್ದು, 46,463 ಮಕ್ಕಳು ಶಾಲೆಯತ್ತ ಇಲ್ಲಿ ಮುಖ ಮಾಡಿಲ್ಲ. ಆ ಪೈಕಿ 17,584 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. ತಮಿಳುನಾಡು ಎರಡನೇ ಸ್ಥಾನದಲ್ಲಿದ್ದು, 19,897 ಮಕ್ಕಳು ಇಲ್ಲಿ ಶಾಲೆಯಿಂದ ಹೊರಗಿದ್ದಾರೆ. ತೆಲಂಗಾಣದಲ್ಲಿ ಈ ಸಂಖ್ಯೆ 4,753 ಇದ್ದು, ಅವರಲ್ಲಿ 2,006 ಹುಡುಗಿಯರು. ಕೇರಳದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಅತಿ ಕಡಿಮೆ ಇದ್ದು, 1,773 ಮಕ್ಕಳು ಮಾತ್ರ ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಶೌಚಾಲಯಗಳು ಮತ್ತು ಕುಡಿಯುವ ನೀರಿನಂತಹ ಮೂಲಸೌಕರ್ಯದ ಕೊರತೆ, ಶಿಕ್ಷಕರ ಅಭಾವ, ಉಚಿತ ಹಾಗೂ ಕಡ್ಡಾಯ ಶಿಕ್ಷಣ 14 ವರ್ಷ ವಯಸ್ಸಿನವರೆಗೂ ಮಾತ್ರ ಸೀಮಿತವಾಗಿರುವುದು, ಬಾಲ್ಯವಿವಾಹ ಮತ್ತು ಹೆಣ್ಣುಮಕ್ಕಳ ಗರ್ಭಧಾರಣೆ ಮೊದಲಾದ ಕಾರಣಗಳಿಂದ ಸಾವಿರಾರು ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿ 46,460 ಶಾಲೆಗಳಿದ್ದು, ಇಂದಿಗೂ ಸುಮಾರು 170 ಶಾಲೆಗಳಲ್ಲಿ ಶೌಚಾಲಯ ಸೌಲಭ್ಯಗಳಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ಬೆಂಗಳೂರು, ಡಿಸೆಂಬರ್ 28: ಎಂದು ಸಹ ನಂಬಲಾಗುತ್ತದೆ. ಭಕ್ತರು ತಮ್ಮ ಮನೋಕಾಮನೆಗಳ ಈಡೇರಿಕೆಗಾಗಿ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುತ್ತಾರೆ. ಈ ಹರಕೆ ಅಥವಾ ಮುಡುಪನ್ನು ಸರಿಯಾದ ವಿಧಾನದಲ್ಲಿ ಕಟ್ಟಿದರೆ ಶುಭ ಫಲಗಳು ದೊರೆಯುತ್ತವೆ ಎಂಬ ನಂಬಿಕೆ ಇದೆ.
ಹರಕೆ ಕಟ್ಟುವ ವಿಧಾನ ಹೀಗಿದೆ. ಶನಿವಾರದಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನ ಮಾಡಿ ಶುದ್ಧರಾಗಿ, ಮನೆಯಲ್ಲಿರುವ ವೆಂಕಟೇಶ್ವರನ ಚಿತ್ರ ಅಥವಾ ವಿಗ್ರಹದ ಮುಂದೆ ಕುಳಿತು ದೀಪಾರಾಧನೆ ಮಾಡಬೇಕು. ಗಣಪತಿ ಸ್ತೋತ್ರ ಪಠಿಸಿ, ಶುದ್ಧವಾದ ಬಿಳಿಯ ವಸ್ತ್ರಕ್ಕೆ ಅರಿಶಿನ ಲೇಪಿಸಿ ಹಳದಿ ಬಣ್ಣಕ್ಕೆ ಬದಲಾಯಿಸಬೇಕು. ಆ ವಸ್ತ್ರದ ನಾಲ್ಕು ಮೂಲೆಗಳಲ್ಲಿ ಕುಂಕುಮ ಹಚ್ಚಿ, ಅದರಲ್ಲಿ ಅರಿಶಿನದ ಅಕ್ಷತೆ ಮತ್ತು ಹನ್ನೊಂದು ರೂಪಾಯಿ ನಾಣ್ಯಗಳನ್ನು ಇಟ್ಟು ಕಟ್ಟಬೇಕು. ನಂತರ “ಓಂ ನಮೋ ವೆಂಕಟೇಶಾಯ” ಎಂಬ ಮಂತ್ರವನ್ನು 108 ಬಾರಿ ಜಪಿಸಿ, ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಪ್ರಾರ್ಥಿಸಬೇಕು. ಈ ಮುಡುಪನ್ನು ದೇವರ ಮನೆಯಲ್ಲಿ ಅಥವಾ ಬೀರುವಿನಲ್ಲಿ ಇಟ್ಟು, ಇಷ್ಟಾರ್ಥಗಳು ನೆರವೇರಿದ ನಂತರ ತಿರುಪತಿಗೆ ತೆರಳಿ ಹುಂಡಿಗೆ ಸಮರ್ಪಿಸಬೇಕು. ಇದರಿಂದ ಎಲ್ಲಾ ಕಾರ್ಯಗಳು ಈಡೇರುತ್ತವೆ ಎಂಬುದು ಭಕ್ತರ ದೃಢ ನಂಬಿಕೆಯಾಗಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 28, ಭಾನುವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ಇದು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರ ಹಾಗೂ ವರಿಯನ್ ಯೋಗವಿರುವ ದಿನವಾಗಿದೆ. ಇಂದು ಮಧ್ಯಾಹ್ನ 4:37 ರಿಂದ 6:03 ರವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 1:46 ರಿಂದ 3:11 ರವರೆಗೆ ಶುಭ ಮತ್ತು ಸಂಕಲ್ಪ ಕಾಲವಿದೆ. ಸೂರ್ಯನು ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರನು ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ.
ಡಾ. ಬಸವರಾಜ ಗುರೂಜಿ ಅವರು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ಕುಂಭ ಮತ್ತು ಮೀನ ರಾಶಿಗಳ ಪ್ರಮುಖ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭ ಫಲ, ವ್ಯವಹಾರ, ಉದ್ಯೋಗ, ಆರ್ಥಿಕ ಸ್ಥಿತಿ, ಆರೋಗ್ಯ ಮತ್ತು ಸಂಬಂಧಗಳ ಕುರಿತು ನಿರ್ದಿಷ್ಟ ಭವಿಷ್ಯವನ್ನು ನೀಡಲಾಗಿದೆ. ಉದಾಹರಣೆಗೆ, ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದ್ದು, ಕುಟುಂಬದಲ್ಲಿ ಪೂರ್ಣ ಸಹಕಾರ ಹಾಗೂ ಉದ್ಯೋಗದಲ್ಲಿ ಶುಭವಾಗಲಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಸ್ವಾಭಿಮಾನ ಇಂದು ನಿಮ್ಮ ಆತ್ಮರಕ್ಷಣೆಗೆ ದಾರಿ. ಶತ್ರುಕಾಟ ಇದ್ದರೂ ಮನೋಬಲ ಕುಗ್ಗಿಸಿಕೊಳ್ಳಬೇಡಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಮತ್ತು ಸಹಾನುಭೂತಿ. ಬಹಳ ಪರಿಶ್ರಮದಿಂದ ಇಂದು ಸ್ಥಳವನ್ನು ತಲುಪುವಿರಿ. ಇಂದು ಕೆಲಸದಲ್ಲಿ ಯಾವುದೇ ಅನಾನುಕೂಲತೆ ಇರುವುದಿಲ್ಲ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು. ಹಿಂದಿನ ತಪ್ಪುಗಳು ಪಾಠವಾಗುವುದು. ದೈವಾನುಗ್ರಹವನ್ನು ಪಡೆದು ಮುಂದಿನ ಹೊಸ ಕಾರ್ಯಕ್ಕೆ ಅಣಿಯಾಗಿ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಅಪವಾದದಿಂದ ಸಂಘರ್ಷ ಸಾಧ್ಯ. ರಾಜಕೀಯ ವಿಷಯಗಳು ಗೊಂದಲ ತರುತ್ತವೆ. ಸ್ವಾವಲಂಬನೆಯಿಂದ ಸೋಲು ದೂರವಾಗಿ ಗೆಲುವು ಸಮೀಪಿಸುತ್ತದೆ. ಕೆಲವು ಸಮಯದಲ್ಲಿ ಪರಿಸ್ಥಿತಿ ಸಹ ಸಾಮಾನ್ಯವಾಗಿರುತ್ತದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದೀರಿ. ಆರ್ಥಿಕವಾಗಿ ಉತ್ತಮ ದಿನವಾಗಿದೆ. ಹೊಸ ಪ್ರದೇಶದಿಂದ ನಿಮಗೆ ಉತ್ಸಾಹ ಬರಲಿದೆ. ಇಂದು ವಿಘಟನೆಗೆ ಆಗಲು ಅವಕಾಶವು ಕೊಡುವುದು ಬೇಡ.
ಅಪವಾದದ ಮಾತುಗಳು ಪರಿಸ್ಥಿತಿ ಕಠಿಣಗೊಳಿಸಬಹುದು. ಶತ್ರುಕಾಟದಿಂದ ಸಂಘರ್ಷ ಅವಕಾಶವಾಗಲಿದೆ. ಅಪರಿಚಿತ ವ್ಯಕ್ತಿಯಿಂದ ಅಚ್ಚರಿ ಸಹಾಯ ಸಿಗುತ್ತದೆ. ಇಂದು ಎಲ್ಲದಕ್ಕೂ ವಿರೋಧ ಮಾಡುವುದು ನಿಮಗೇ ಇದು ಸರಿ ಕಾಣದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ಪರಸ್ಥಳದಲ್ಲಿ ವಾಸ ಮಾಡುವ ಸಂದರ್ಭವು ಬರಲಿಸೆ. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ಯಾರೊಬ್ಬರ ಮಾತುಗಳಿಗೆ ತ್ವರಿತ ಪ್ರತಿಕ್ರಿಯೆ ಕೊಡುವುದು ಬೇಡ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ಖಾಸಗಿ ಸಂಸ್ಥೆ ದೂರದೃಷ್ಟಿಯ ಯೋಜನೆಯು ಪ್ರಯೋಜನವಾದೀತು. ರಾಜಕೀಯ ಸ್ಥಿತಿಯಲ್ಲಿ ಅಸ್ಥಿರತೆ. ನಿಮ್ಮ ಸ್ವಾಭಿಮಾನ ಬಲವಾಗಿರಲಿ. ಹೊಸ ತಂತ್ರಗಳಿಂದ ಸೋಲನ್ನು ಗೆಲುವಾಗಿ ಮಾಡಬಹುದು. ಇಂದು ಅವಲಂಬನೆ ತಪ್ಪಿಸಲಾಗದು. ಬೇಗನೆ ಹಣವನ್ನು ಸಂಪಾದಿಸಲು ಅನ್ಯ ಮಾರ್ಗವನ್ನು ಹಿಡಿಯಬಹುದು. ಹೊಸ ಸಂಪರ್ಕದಿಂದ ಅದೃಷ್ಟ ಬದಲಾಗುತ್ತದೆ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಹಳೆಯ ವಸ್ತುವನ್ನು ಪುನಃ ಉಪಯೋಗಿಸುವಿರಿ.
ಇಂದಿನ ಸಂಘರ್ಷ ನಿಮ್ಮ ಸಹನೆಯನ್ನು ಪರೀಕ್ಷಿಸುತ್ತದೆ. ಶತ್ರುಕಾಟ ಇದ್ದರೂ ವರ್ತನೆಯಿಂದ ವ್ಯಕ್ತಿತ್ವ ಪರಿಚಯವಾಗಲಿದೆ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಮತ್ತು ಸಂಪರ್ಕ ಸಾಧ್ಯತೆ. ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣವಾಗಲಿದೆ. ದುಃಸ್ವಪ್ನಗಳು ಬೀಳಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಕೈ ಮತ್ತು ಕಾಲುಗಳಲ್ಲಿ ನೋವು ಕಾಣಿಸಿಕೊಂಡು ದೈನಂದಿನ ಕೆಲಸಗಳೂ ಕಷ್ಟವಾದೀತು. ಇಂದು ವ್ಯವಹಾರದಲ್ಲಿ, ಮಾತುಗಳು ಹೆಚ್ಚು ತೀವ್ರವಾಗಿರಲಿದ್ದು, ಅದರ ಸರಿಯಾದ ಪ್ರಯೋಜನು ವಿಳಂಬದಿಂದ ಬರುವುದು. ರಾಜಕೀಯ ಜವಾಬ್ದಾರಿ ಹೆಚ್ಚಾಗುತ್ತದೆ. ಸ್ವಾಭಿಮಾನ ಉಳಿಸಿಕೊಂಡರೆ ಸೋಲಿನ ಅನಂತರವೂ ಅಂತಿಮ ಗೆಲುವು ನಿಮ್ಮದೇ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಕಾಣಿಸಿಕೊಳ್ಳುವುದು. ಹಿರಿಯ ಅಧಿಕಾರಿಗಳ ಜೊತಡ ವೈಮನಸ್ಸು ಬರಬಹುದು. ಹಿರಿಯರ ಎದುರು ವಿನಯದಿಂದ ಮಾತನಾಡಿ.
ರಾಜಕೀಯದಲ್ಲಿ ಅವಕಾಶಗಳು ನಿಮ್ಮತ್ತ ಬರುತ್ತವೆ. ಅಪರಿಚಿತ ವ್ಯಕ್ತಿಯಿಂದ ಮಾರ್ಗದರ್ಶನ ಸಿಗಬಹುದು. ಶತ್ರುಕಾಟದ ಮಾತುಗಳು ಸಂಘರ್ಷಕ್ಕೆ ಕಾರಣವಾಗಬಹುದು. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಪಾಲುದಾರಿಕೆಯಲ್ಲಿ ಉಂಟಾದ ವಿವಾದವನ್ನು ದೊಡ್ಡ ಮಾಡಿಕೊಳ್ಳುವಿರಿ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ಮಕ್ಕಳಿಂದ ಧನಸಹಾಯದ ನಿರೀಕ್ಷೆ ಇರಲಿದೆ. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ಈ ದಿನ ನೀವು ಸಂತೋಷವಾಗಿರುವಿರಿ. ಆದರೆ ಅಸಭ್ಯ ವರ್ತನೆಯು ಕೆಲವರಿಂದ ಮಾತುಗಳು ಕೇಳಿಬರಬಹುದು. ಅಪವಾದದಿಂದ ದೂರವಿರಲು ಪ್ರಯತ್ನಿಸುವಿರಿ. ಸ್ವಾಭಿಮಾನ ಕಾಪಾಡಿಕೊಂಡರೆ ಸೋಲು ನಿಮ್ಮನ್ನು ಮುಟ್ಟದು. ಅತಿಯಾದ ಅವಲಂಬನೆ ಬಿಟ್ಟು ಸ್ವತಂತ್ರ ನಿರ್ಧಾರ ಕೈಗೊಳ್ಳಿ. ಕೆಲಸದ ಬಿಡುವಿಲ್ಲದಿದ್ದರೂ ಇನ್ನಿತರ ಚಟುವಟಿಕೆಯಲ್ಲಿ ಭಾಗವಹಿಸುವಿರಿ. ಇಂದು ನೀವು ಯಾವುದೇ ಒಂದು ಸರಿಯಾದ ನಿರ್ಧಾರಕ್ಕೆ ಬರಲಾಗದು. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು.
ಶತ್ರುಕಾಟ ಇಂದು ತೀವ್ರವಾದಂತೆ ಅನುಭವಕ್ಕೆ ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಸಂದರ್ಭ. ಅಪವಾದದಿಂದ ಸಂಘರ್ಷ ಉಂಟಾಗುವ ಸಾಧ್ಯತೆ. ನಿಮ್ಮ ಸಂಕಟವನ್ನು ಆಪ್ತರ ಜೊತೆ ಹಂಚಿಕೊಂಡು ಸಮಾಧಾನ ಪಟ್ಟುಕೊಳ್ಳುವಿರಿ. ಎಂದೋ ಮಾಡಿದ ಕಾರ್ಯಕ್ಕೆ ಇಂದು ಪಶ್ಚಾತ್ತಾಪಪಡಬೇಕಾದೀತು. ಈ ದಿನ ನೀವು ತಾಳ್ಮೆಯನ್ನು ಅಭ್ಯಾಸ ಮಾಡುವುದರ ಮೂಲಕ ನಿರೀಕ್ಷೆಗಿಂತ ಹೆಚ್ಚಿನದನ್ನು ಗಳಿಸಬಹುದು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ಈ ಕಾರಣದಿಂದಾಗಿ ಜನರಿಂದ ಟೀಕೆ ಬರುವುದು. ಇಂದು, ನೀವು ವಾಸ್ತವಕ್ಕಿಂತ ಕಾಲ್ಪನಿಕತೆಯಲ್ಲಿ ಹೆಚ್ಚು ಇರುತ್ತೀರಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಇದ್ದರೂ ಎಚ್ಚರ. ರಾಜಕೀಯ ವಿಚಾರಗಳು ಒತ್ತಡ ತರುತ್ತವೆ. ತಾತ್ಕಾಲಿಕ ಸೋಲಿನ ಅನಂತರ ದೃಢ ನಿಲುವಿನಿಂದ ಗೆಲುವು ಸಾಧ್ಯ. ಖರ್ಚು ಆದಾಯಕ್ಕಿಂತ ಹೆಚ್ಚಾಗುತ್ತದೆ. ದೇಶೀಯ ಸಂತೋಷ ಮತ್ತು ಆನಂದದ ಸಾಧನಗಳನ್ನು ಪ್ರದರ್ಶನಕ್ಕಾಗಿ, ಹವ್ಯಾಸಗಳಿಗಾಗಿ ಖರ್ಚು ಮಾಡಲಾಗುವುದು.
ಆಕರ್ಷಣೆ ಮತ್ತು ವಿರೋಧ ಎರಡೂ ಒಂದೇ ಸಮಯದಲ್ಲಿ ಎದುರಾಗಬಹುದು. ಶತ್ರುಕಾಟದಿಂದ ಸಂಘರ್ಷ ಉಂಟಾಗುವ ಸಾಧ್ಯತೆ. ಅಪವಾದದ ಭಯ ಇದೆ. ಅಧಿಕಾರಿಗಳಿಗೆ ಬೇಕಾದುದನ್ನು ನೀಡಿ ಅವರನ್ನು ಖುಷಿಪಡಿಸುವಿರಿ. ಸ್ಥಿರಾಸ್ತಿಯ ನಷ್ಟದಿಂದ ಬೇಸರವಾಗುವುದು. ಸ್ನೇಹಿತರ ಜೊತೆ ಸಣ್ಣ ಕಾರಣಕ್ಕೆ ಕಲಹವಾಗುವುದು. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸುವುದು. ಇಂದು ನಿಮಗೆ ಸಾಮಾಜಿಕವಾಗಿ ಗೌರವವನ್ನು ಪಡೆಯುವಿರಿ. ಆದರೆ ಕೆಲವು ತಪ್ಪುಗ್ರಹಿಕೆಯಿಂದಾಗಿ ಅಸಮಾಧಾನ ಇರಲಿದೆ. ಇಂದಿನ ಉದ್ಯಮವು ನಿಮ್ಮ ಹಿಡಿತದಲ್ಲಿ ಇರುತ್ತದೆ. ಲಾಭವೂ ಹೆಚ್ಚಾಗುವುದು. ರಾಜಕೀಯ ಚರ್ಚೆಗಳಿಂದ ಒಂದು ತೀರ್ಮಾನಕ್ಕೆ ಬರುವಿರಿ. ಸ್ವಾಭಿಮಾನ ಸಮತೋಲನದಲ್ಲಿರಲಿ. ಸೋಲು, ಗೆಲವು ಎರಡರ ಅನಂತರವೂ ನ್ಯಾಯವೇ ನಿಮ್ಮ ಜಯ. ಕಾರ್ಯಕ್ಷೇತ್ರದ ಗೆಳೆಯರು ನಿಮ್ಮ ನಡವಳಿಕೆಯಿಂದ ಸಂತೋಷವಾಗಿರುತ್ತಾರೆ. ಇದರಿಂದ ಅವರು ತಮ್ಮ ಕೆಲಸವನ್ನು ಒಂದು ನಿರ್ದಿಷ್ಟ ಅವಧಿಯಲ್ಲಿ ಪೂರ್ಣವಾಗುವುದು. ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಬಹುದು.
ಸಂಘರ್ಷ ತಪ್ಪಿಸಲು ಇಂದು ಜಾಣ್ಮೆ ತೋರಿಸುವಿರಿ. ಅಪವಾದದ ಮಾತುಗಳು ಮನಸ್ಸನ್ನು ಕಾಡಬಹುದು. ಅಪರಿಚಿತ ವ್ಯಕ್ತಿಯಿಂದ ಸಹಕಾರ ಸಿಗುವ ಸೂಚನೆ. ರಾಜಕೀಯ ವಿಷಯಗಳಲ್ಲಿ ಎಚ್ಚರ. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಒಪ್ಪಿಸಿ ಮಾಡಬೇಕಾದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಎಲ್ಲಾ ಕೆಲಸಗಳನ್ನು ಮಾಡಿದರೂ ಯಶಸ್ಸಿನಲ್ಲಿ ವಿಳಂಬವಾಗಬಹುದು. ಮನಸ್ಸಿನ ನಕಾರಾತ್ಮಕ ಭಾವನೆಗಳು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಚಲಿತರನ್ನಾಗಿ ಮಾಡುತ್ತವೆ. ಶತ್ರುಕಾಟದ ನಡುವೆ ಲೆಕ್ಕಾಚಾರದಿಂದ ನಡೆದು ಸೋಲು ತಪ್ಪಿಸಬಹುದು. ಸ್ವಾಭಿಮಾನ ಕಾಪಾಡಿ, ಅವಲಂಬನೆ ಕಡಿಮೆ ಮಾಡಿರಿ. ಮನೆಯವರ ಸಮಸ್ಯೆ ಬಗೆಹರಿಯಲಿದ್ದು, ಮುಖಂಡರ ಸಹಾಯವನ್ನೂ ಪಡೆಯಬೇಕಾಗುವುದು. ಪ್ರತಿಕೂಲ ಪರಿಸ್ಥಿತಿ ಎದುರಾದಾಗ ಕೋಪವನ್ನು ನಿಯಂತ್ರಿಸಿ.
ಸ್ವಾಭಿಮಾನ ಇಂದು ಪ್ರಮುಖ ಪಾತ್ರ ವಹಿಸುತ್ತದೆ. ಶತ್ರುಕಾಟ ಎದುರಾದರೂ ನಿಮ್ಮ ಪ್ರಭಾವ ಕಡಿಮೆಯಾಗದು. ರಾಜಕೀಯ ವಿಚಾರಗಳು ಚರ್ಚೆಗೆ ಬರುತ್ತವೆ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಬರಲಿದೆ. ಇಂದು ನಿಮ್ಮ ಬಾಕಿ ಉಳಿದ ಸಾಲಗಳನ್ನು ಪೂರ್ಣ ಮಾಡಿ. ಸ್ವಯಂಕೃತ ಅಪರಾಧಗಳಿಂದ ಕಿಂಚಿತ್ತೂ ಬೇಸರವಾಗದು. ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ. ದೈಹಿಕ ದೋಷಗಳನ್ನು ಸಕಾರಾತ್ಮಕವಾಗಿ ಎದುರಿಸುವಿರಿ. ಒಂಟಿತನದ ಆಲೋಚನೆಯು ಪೂರ್ಣವಾಗದು. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸಕ್ಕೆ ಕಷ್ಟವಾಗುವುದು. ಆರ್ಥಿಕತೆಯು ನಿಮಗೆ ತೃಪ್ತಿ ಕೊಡುವುದು. ವ್ಯಕ್ತಿತ್ವದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಚಿತ್ರಣವನ್ನು ಬದಲಿಸುವಿರಿ. ಅಪವಾದದಿಂದ ಸಂಘರ್ಷ ಸಾಧ್ಯ. ಸೋಲು ಕಂಡರೂ ನಾಯಕತ್ವದಿಂದ ಮತ್ತೆ ಗೆಲುವು ನಿಮ್ಮದಾಗುತ್ತದೆ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ.
ಇಂದು ಅವಲಂಬನೆ ನಿಮ್ಮ ದುರ್ಬಲತೆಯಾಗಲಿದೆ. ಶತ್ರುಕಾಟ ಗುಪ್ತವಾಗಿ ನಡೆಯುತ್ತದೆ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಇದ್ದರೂ ನಂಬಿಕೆಗೆ ಪರೀಕ್ಷಿಸುವಿರಿ. ಅಪವಾದದ ಮೂಲಕ ಸಂಘರ್ಷ ಸಾಧ್ಯ. ನಿಮಗೆ ಇಂದು ಮುಖ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಾಗದು. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ಅಧಿಕಾರಿ ವರ್ಗದವರು ನಿಮ್ಮ ಮೇಲೆ ಕೋಪಗೊಳ್ಳಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ರಾಜಕೀಯ ಮಾತುಗಳಿಂದ ದೂರವಿರುವುದು ಒಳಿತು. ಸ್ವಾಭಿಮಾನ ಕಾಯ್ದುಕೊಂಡರೆ ಸೋಲನ್ನು ಗೆಲುವಾಗಿ ಮಾಡಬಹುದು. ಲೇಖನ ಸಾಮಗ್ರಿಗಳು ಅಥವಾ ಮುದ್ರಣ ಕೆಲಸಕ್ಕೆ ಸಂಬಂಧಿಸಿದ ಜನರು ಹೊಸ ಉದ್ಯೋಗಗಳನ್ನು ಪಡೆಯುವರು.
ಸೋಲು, ಗೆಲವು ಒಂದೇ ದಿನ ಕಂಡುಬರುವ ಸೂಚನೆ. ಅಪರಿಚಿತ ವ್ಯಕ್ತಿಯಿಂದ ಸಹಾಯ ಸಿಗಬಹುದು. ಶತ್ರುಕಾಟದ ಮಾತುಗಳು ಸಂಘರ್ಷ ಹುಟ್ಟುಹಾಕಬಹುದು. ಅಪವಾದದಿಂದ ಹೆಸರು ಹಾನಿಯಾಗುವ ಸಾಧ್ಯತೆ. ಮಾನಸಿಕ ಅಸಮತೋಲನದಿಂದ ಎಲ್ಲ ಕಾರ್ಯವೂ ಅಸ್ತವ್ಯಸ್ತ ಆಗಬಹುದು. ಸ್ನೇಹಿತರಿಂದ ಸಹಾಯದ ನಿರೀಕ್ಷೆ ಇದ್ದು, ಹುಸಿಯಾಗುವುದು. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ರಾಜಕೀಯ ವಿಷಯಗಳಲ್ಲಿ ತಟಸ್ಥವೇ ಇಂದು ಉತ್ತಮ. ಸ್ವಾಭಿಮಾನ ಉಳಿಸಿಕೊಂಡರೆ ಪರಿಸ್ಥಿತಿ ನಿಮ್ಮತ್ತ ತಿರುಗುತ್ತದೆ. ಸಹೋದರಿಯರು ಮತ್ತು ಸಂಗಾತಿಯ ಬೆಂಬಲ ಪಡೆಯುವಿರಿ. ಧಾರ್ಮಿಕ ಆಚರಣೆಗಳನ್ನು ಶ್ರದ್ಧೆಯಿಂದ ಮಾಡಲು ಅವಕಾಶ ಬರುವುದು.
ಆಕರ್ಷಣೆಯಿಂದ ಹೊಸ ಪರಿಚಯ ಆರಂಭವಾಗಬಹುದು. ಅಪವಾದದಿಂದ ಮನಸ್ತಾಪ ಸಾಧ್ಯ. ಶತ್ರುಕಾಟ ಹೆಚ್ಚಾದರೂ ರಾಜಕೀಯ ಚಟುವಟಿಕೆಯಲ್ಲಿ ಎಚ್ಚರ ಅಗತ್ಯ. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಆರೋಗ್ಯವು ಸಾಮಾನ್ಯವಾಗಿ ಇರಲಿದೆ. ಇಂದು ನಿಮ್ಮ ಕಠಿಣ ಪರಿಶ್ರಮದ ಹೊರತಾಗಿಯೂ ಹಣ ಗಳಿಸುವ ಬಯಕೆ ಅಪೂರ್ಣವಾಗಬಹುದು. ವ್ಯವಹಾರದ ಬಗ್ಗೆ ಹೆಚ್ಚಿನ ಗಮನ ಹರಿಸಿದ ಅನಂತರವೂ ಕೆಲಸ ತಡವಾಗಿ ಪೂರ್ಣಗೊಳ್ಳುತ್ತದೆ. ಸಂಘರ್ಷ ತಪ್ಪಿಸಲು ಮಿತವಾದ ಸಂಭಾಷಣೆ ಮುಖ್ಯ. ಸ್ವಾಭಿಮಾನ ಕಾಯ್ದುಕೊಂಡರೆ ತಾತ್ಕಾಲಿಕ ಸೋಲಿನ ಬಳಿಕ ಗೆಲುವು ಸಾಧ್ಯ. ಅನವಶ್ಯಕ ಅವಲಂಬನೆ ಕಡಿಮೆ ಮಾಡಿರಿ. ಹೊಸ ಸಂಬಂಧದ ಮೂಲಕ ಅದೃಷ್ಟ ಬರಬಹುದು. ಸಾಮಾಜಿಕ ಕಾರ್ಯಕ್ಕೆ ಗೌರವ ನಿಮ್ಮನ್ನು ಅರಸಿ ಬರಲಿದೆ. ಮನೆಯವರು ನಿಮ್ಮ ಗುಣವನ್ನು ಅಪಾರ್ಥ ಮಾಡಿಕೊಂಡಾರು.
ಇಂದು ಶತ್ರುಕಾಟ ಸ್ಪಷ್ಟವಾಗಿ ಗೊತ್ತಾಗಬಹುದು. ಸ್ವಾಭಿಮಾನಕ್ಕೆ ಸವಾಲು ಬಂದರೂ ಹಿಂದೆ ಸರಿಯಬೇಡಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಉಂಟಾಗುತ್ತದೆ. ರಾಜಕೀಯ ವಿಚಾರಗಳು ಸಂಘರ್ಷಕ್ಕೆ ಕಾರಣವಾಗಬಹುದು. ನಿಮಗೆ ಹಿರಿಯರ ಆಸೆಯನ್ನು ಪೂರೈಸಿದ ಸಂತೃಪ್ತಿ ಇರುವುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು. ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ. ಅಪವಾದದ ಭಯ ಇದೆ. ಸೋಲು, ಗೆಲವು ಎರಡೂ ಅನುಭವಿಸಿ ಕೊನೆಗೆ ಧೈರ್ಯವೇ ಜಯ ತರುತ್ತದೆ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ. ಸಾಮಾಜಿಕ ಚಟುವಟಿಕೆಗಳಿಗೆ ಸಮಯವನ್ನು ಕೊಡಲಾಗದೇ ಜನರು ನಿಮ್ಮಿಂದ ದೂರವಿರಬಹುದು.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನುವಾರ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಭ, ಕರಣ : ಬವ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:39 – 18:04, ಯಮಗಂಡ ಕಾಲ 12:26 – 13:50, ಗುಳಿಕ ಕಾಲ 15:15 – 16:39
-ಲೋಹಿತ ಹೆಬ್ಬಾರ್ – 8762924271 (what’s app only)
ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಸಂಬಂಧಗಳಲ್ಲಿನ ತಾಕಲಾಟಗಳಿಂದ ಹೊರಗೆ ಬರುವುದಕ್ಕೆ ಸಾಧ್ಯವಾಗಲಿದೆ. ಹಳೆಯ ವಿಚಾರಗಳು ಮತ್ತೆ ನೆನಪಾಗಲಿವೆ, ಆದರೆ ಅವುಗಳಿಂದ ಪಾಠ ಕಲಿಯುವ ಸಮಯ ಇದು. ಕೆಲಸದ ವಿಷಯದಲ್ಲಿ ಅತಿಯಾದ ಆತುರ ಬೇಡ; ತಾಳ್ಮೆ ಮತ್ತು ಕ್ರಮಬದ್ಧ ಪ್ರಯತ್ನದಿಂದ ಯಶಸ್ಸಿನ ದಾರಿ ತೆರೆದುಕೊಳ್ಳುತ್ತದೆ. ಕುಟುಂಬದ ಒಳಗೆ ಖರ್ಚಿನ ವಿಚಾರದಲ್ಲಿ ಸಣ್ಣ- ಪುಟ್ಟ ಮಾತುಕತೆಗಳು ಆದರೂ ಸಂಯಮದಿಂದ ವರ್ತಿಸಿದರೆ ಸಮಸ್ಯೆಗಳು ಪರಿಹಾರ ಆಗುತ್ತವೆ. ಆರ್ಥಿಕವಾಗಿ ಎಚ್ಚರಿಕೆಯ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯೇ ಈ ದಿನ ನಿಮ್ಮ ಶಕ್ತಿಯಾಗಲಿದೆ.
ಕುಟುಂಬದೊಂದಿಗೆ ಉತ್ತಮವಾದ ಸಮಯವನ್ನು ಕಳೆಯುವ ಯೋಗ ಇದೆ. ನಿಮ್ಮ ಆಲೋಚನೆಗಳು ಹೆಚ್ಚು ಗಹನವಾಗಿ ಇರುತ್ತವೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಎರಡು ಬಾರಿ ಯೋಚಿಸುವ ನಿಮ್ಮ ಗುಣ ನಿಮಗೆ ಲಾಭ ತರುತ್ತದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯವನ್ನು ಗಮನಿಸಿ, ಪ್ರಮುಖ ಜವಾಬ್ದಾರಿ ವಹಿಸುವಂಥ ಸೂಚನೆ ಸಿಗಲಿದೆ. ಆದರೆ ನಿಮ್ಮ ಎದುರಿಗೆ ಪ್ರಶಂಸೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಮೈ ಮರೆಯಬೇಡಿ. ಕಾಲು ನೆಲದ ಮೇಲೆ ಇರಲಿ. ಪ್ರಮುಖವಾದ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮ ಕುಟುಂಬದ ಹಿರಿಯರ ನೀಡುವಂಥ ಸಲಹೆ ಮಹತ್ವದ ದಾರಿ ದೀಪ ಆಗುತ್ತದೆ. ಹಣಕಾಸಿನ ವಿಷಯದಲ್ಲಿ ಅಗತ್ಯವಿಲ್ಲದ ಖರ್ಚು ತಪ್ಪಿಸುವುದು ಒಳಿತು. ಭುಜದ ನೋವು, ಬೆನ್ನಿನ ನೋವು ಇರುವಂಥವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ವಿಶ್ರಾಂತಿ ಅಗತ್ಯ ಇದೆ ಎನಿಸಿದಾಗ ಪಡೆದುಕೊಳ್ಳಿ. ನಿಮ್ಮ ಸಹನೆ ಮತ್ತು ಶಾಂತ ಸ್ವಭಾವ ಸಂತೋಷ ಹಾಗೂ ಯಶಸ್ಸಿನ ದಾರಿ ಮಾಡಿಕೊಡುತ್ತವೆ.
ನಿಮ್ಮ ಒಳಗಿನ ಆತ್ಮವಿಶ್ವಾಸ ದೊಡ್ಡ ಮಟ್ಟದಲ್ಲಿ ಹೆಚ್ಚಾಗಲಿದೆ. ಈ ಹಿಂದೆ ನಿಮಗೆ ಅಸಾಧ್ಯ ಎಂದು ಕಂಡಿದ್ದ ಕೆಲಸ- ಕಾರ್ಯಗಳು ಈಗ ಸಲೀಸಾಗಿ ಮಾಡಿ ಮುಗಿಸುವಂಥ ವಿಶ್ವಾಸ ಮೂಡಲಿದೆ. ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಇಂಥವುಗಳಿಗೆ ನಿಮ್ಮಲ್ಲಿ ಕೆಲವರಿಗೆ ಆಹ್ವಾನ ಬರಲಿದೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಹೊಸ ಜವಾಬ್ದಾರಿಗಳು ಹುಡುಕಿಬರುವ ಸೂಚನೆ ಸಿಗಲಿದೆ. ಅವುಗಳನ್ನು ಯಾವುದೇ ಹಿಂಜರಿಕೆ ಇಲ್ಲದೆ ಸ್ವೀಕರಿಸಿದರೆ ಉತ್ತಮ ಫಲ ಸಿಗುತ್ತದೆ. ಕುಟುಂಬದಲ್ಲಿ ಸಣ್ಣಮಟ್ಟದ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಆದರೆ ನಿಮ್ಮ ಸಮಯೋಚಿತ ಮಾತಿನ ಮೂಲಕವೇ ಸಮಸ್ಯೆಗೆ ಪರಿಹಾರ ನೀಡುತ್ತೀರಿ. ಹಣಕಾಸಿನ ವಿಷಯದಲ್ಲಿ ಆಮೇಲೆ ಮಾಡಿದರಾಯಿತು ಎಂಬ ಧೋರಣೆ ಬೇಡ. ಹಳೆಯ ಬಾಕಿ ಹಣ ವಾಪಸ್ ಬರುವ ಸೂಚನೆ ಇದೆ, ಆ ಕಡೆ ಪ್ರಯತ್ನ ಪಡುವುದು ಮುಖ್ಯ. ಕಣ್ಣಿನ ಆರೋಗ್ಯದ ಕಡೆ ಗಮನ ಇರಲಿ.
ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ ಹಿಡಿಯಲಿದೆ. ನಿಮ್ಮ ಸಾಧನೆಯನ್ನು ಬಾಯಿ ಬಿಟ್ಟು ಹೇಳುವ ಅಗತ್ಯ ಇಲ್ಲದಂತೆ ಸಂಬಂಧಪಟ್ಟವರ ಗಮನಕ್ಕೆ ಬರಲಿದೆ. ಒಂದು ಕೆಲಸಕ್ಕೆ ಇತರರ ಮೇಲೆ ಅವಲಂಬಿತರಾಗುವ ಮೊದಲಿಗೆ ನಿಮ್ಮ ಮನಸ್ಸು ಹೇಳುವ ಮಾತನ್ನು ಸಹ ಕೇಳಿಸಿಕೊಳ್ಳಿ. ಹಣ ಬರುವುದೊಂದೇ ಕೆಲಸದಲ್ಲಿ ಸಿಗುವ ತೃಪ್ತಿ ಅಲ್ಲ ಎಂಬುದು ಈ ದಿನ ಹಲವು ಸಲ ನಿಮಗೆ ಅನಿಸುತ್ತದೆ. ಅದೇ ವೇಳೆ, ಅದರಾಚೆಗೆ ಬೇರೆ ಏನೋ ಇದೆ ಎಂಬ ಹುಡುಕಾಟ ಹೊಸ ಎತ್ತರಕ್ಕೆ ಏರುವುದಕ್ಕೆ ಸ್ಫೂರ್ತಿ ಆಗಲಿದೆ. ಅನುಭವದಿಂದ ನೀವು ಕಲಿತ ಪಾಠವನ್ನು ಅನ್ವಯಿಸಿಕೊಳ್ಳಲು ಪ್ರಯತ್ನಿಸಿ. ಅತ್ಯುತ್ಸಾಹದಲ್ಲಿ ಈ ಹಿಂದೆ ಯಾವಾಗಲೋ ನೀಡಿದ್ದ ಮಾತನ್ನು ಈಡೇರಿಸವುದಕ್ಕೆ ಬಹಳ ಶ್ರಮ ಹಾಕುವಂತೆ ಆಗಲಿದೆ.
ನಿಮಗೆ ಆತ್ಮವಿಶ್ವಾಸ ಇರುವಂಥ ಕೆಲಸ- ಕಾರ್ಯ ಮಾಡುವುದಕ್ಕೂ ಒಂದು ಬಗೆಯ ಹಿಂಜರಿಕೆ ಕಾಡಲಿದೆ. ಯಾವುದಕ್ಕೂ ಇರಲಿ ಸ್ನೇಹಿತರ ಸಲಹೆಯನ್ನು ಕೇಳೋಣ ಎಂಬ ಪರಿಸ್ಥಿತಿ ಉದ್ಭವಿಸುತ್ತದೆ. ‘ನನ್ನಿಂದ ಆದ ಸಹಾಯವನ್ನು ನಿಮಗೆ ಮಾಡಲಾ?’ ಎಂಬ ಪ್ರಶ್ನೆಯನ್ನು ಯಾರಿಗೇ ಕೇಳಬೇಕಾದರೂ ಸಾವಿರ ಬಾರಿ ಆಲೋಚಿಸುವುದು ಒಳ್ಳೆಯದು. ಏಕೆಂದರೆ ಇದೊಂದು ಮಾತು ನಿಮ್ಮ ಇಡೀ ದಿನದ ಸಮಯವನ್ನು ತೆಗೆದುಕೊಂಡು ಬಿಡಬಹುದು. ಸಂಬಂಧಗಳ ವಿಚಾರ ಬಂದಾಗ ಮೌನವಾಗಿ ಇದ್ದುಬಿಡುವುದೇ ಪರಿಹಾರ ಎಂದು ನೀವೇನಾದರೂ ಭಾವಿಸಿದ್ದಲ್ಲಿ ದೀರ್ಘಾವಧಿ ಸಮಸ್ಯೆಗಳನ್ನು ಅನುಭವಿಸುತ್ತೀರಿ. ವಿವಾಹ ವಯಸ್ಸಿನ ಮಕ್ಕಳಿದ್ದು, ಅವರ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಎಂದಾದಲ್ಲಿ ನಿಮ್ಮ ಮನಸ್ಸಿಗೆ ಒಪ್ಪುವಂಥ ಸಂಬಂಧದ ರೆಫರೆನ್ಸ್ ಸ್ನೇಹಿತರ ಮೂಲಕ ಬರಲಿದೆ. ಪ್ರಯಾಣ ಮಾಡುವಂಥವರು ನೀರು- ಆಹಾರದ ಸೇವನೆ ಮೇಲೆ ಸರಿಯಾದ ಗಮನವನ್ನು ನೀಡಿ.
ನೀವು ಕೊಟ್ಟಿದ್ದೇನು ಹಾಗೂ ನಿಮಗೆ ಸಿಕ್ಕಿದ್ದೇನು ಎಂಬ ವಿಚಾರವೇ ಬಹುವಾಗಿ ಕಾಡುತ್ತದೆ. ಇದು ಇನ್ನು ಮುಂದೆ ಹೇಗೆ ನಡೆದುಕೊಳ್ಳಬೇಕು ಎಂಬ ವಿಚಾರದಲ್ಲಿ ಅಳತೆಗೋಲಿನ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಸಿನಿಮಾ, ರೆಸ್ಟೋರೆಂಟ್, ರೆಸಾರ್ಟ್ ಇಂಥ ಕಡೆಗೆ ಕುಟುಂಬದ ಜೊತೆಗೆ ತೆರಳುವಂಥ ಯೋಗ ಇದೆ. ಫ್ಯಾಷನ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಏರಿಕೆ ಆಗುವ ಕೆಲವು ಆಫರ್ ಗಳು ಹುಡುಕಿಕೊಂಡು ಬರಲಿವೆ. ಇನ್ನು ವಿದೇಶದಲ್ಲಿ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ಸ್ನೇಹಿತರು ಅಥವಾ ಸಂಬಂಧಿಗಳಿಂದ ಬಹಳ ಮುಖ್ಯವಾದ ಮಾಹಿತಿ ದೊರೆಯಲಿದ್ದು, ಅದರಿಂದ ಅನುಕೂಲ ಆಗಲಿದೆ. ಆಹಾರ ಪಥ್ಯದಲ್ಲಿ ಜಾಗ್ರತೆಯಿಂದ ಇರಬೇಕು. ವೈದ್ಯರು ಸೂಚಿಸಿದಂಥ ಆಹಾರ ಕ್ರಮವನ್ನು ಕಡ್ಡಾಯವಾಗಿ ಅನುಸರಿಸಿ. ಕ್ರೆಡಿಟ್ ಕಾರ್ಡ್ ಬಳಸಿ ಖರ್ಚು ಮಾಡುತ್ತಾ ಇದ್ದೀರಿ ಅಂತಾದಲ್ಲಿ ಅಗತ್ಯದಷ್ಟು ಮಾತ್ರ ಖರೀದಿ ಮಾಡಿದ್ದೀರಿ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ.
ಯಾವುದು ನಿಮಗೆ ಒತ್ತಡ ಹಾಗೂ ಯಾವುದು ನಿಮ್ಮ ಪರವಾಗಿ ಇರುವ ಸನ್ನಿವೇಶ ಎಂಬುದನ್ನು ನಿರ್ಧರಿಸುವುದಕ್ಕೆ ಸಾಧ್ಯ ಆಗುವುದಿಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ಬಹಳ ಮುಖ್ಯ. ಆರ್ಥಿಕ ಸ್ಥಿತಿಯಲ್ಲಿ ಬದಲಾವಣೆ ಆಗಿದೆ ಎಂಬ ಕಾರಣಕ್ಕೆ ಆಲೋಚನೆಯಲ್ಲಿ- ನಿರ್ಧಾರದಲ್ಲಿಯೂ ನಿಮಗೆ ಅನುಕೂಲ ಆಗುವಂತೆ ನಡೆದುಕೊಂಡಲ್ಲಿ ದೀರ್ಘಾವಧಿಗೆ ಪರಿಣಾಮ ಬೀರುತ್ತದೆ ಎಂಬುದು ನೆನಪಿನಲ್ಲಿ ಇರಲಿ. ಮಕ್ಕಳ ಶಿಕ್ಷಣಕ್ಕೆ ಬೇಕಾದ ಹಣಕಾಸಿನ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧತೆಯನ್ನು ಆರಂಭಿಸುತ್ತೀರಿ. ಆದಾಯಕ್ಕೆ ಬೇಕಾದಂಥ ಮೂಲಗಳನ್ನು ಮಾಡಿಕೊಳ್ಳಲು ಪ್ರಯತ್ನ ಮಾಡಲಿದ್ದೀರಿ. ಮನೆದೇವರ ಪೂಜೆ, ಉತ್ಸವ, ಜಾತ್ರೆ ಇಂಥವುಗಳಿಗೆ ದೇಣಿಗೆಯನ್ನು ನೀಡುವಂಥ ಯೋಗ ನಿಮ್ಮ ಪಾಲಿಗೆ ಒದಗಿ ಬರಲಿದೆ. ಇನ್ನು ಯಾಕೆ, ಏನು ಮತ್ತು ಎಲ್ಲಿ ಈ ರೀತಿ ಪ್ರಶ್ನೆಗಳನ್ನು ಕೇಳದೆ ಯಾವುದೇ ಕೆಲಸ- ಕಾರ್ಯವನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ.
ನಿಮ್ಮ ವಿಶ್ಲೇಷಣೆ, ಯಾವುದೇ ವಿಷಯವನ್ನು ಆಳಕ್ಕೆ ಹೋಗಿ ನೋಡುವ ರೀತಿ ಒಳ್ಳೆ ರಿಟರ್ನ್ಸ್ ನೀಡಲಿದೆ. ನಿಮಗೇ ಕಿರಿಕಿರಿ ಆಗುವಂಥ ಸನ್ನಿವೇಶ ಸಹ ನಿಭಾಯಿಸುವ ರೀತಿಯಲ್ಲಿ ಯಶಸ್ಸು ಪಡೆದುಕೊಳ್ಳುತ್ತೀರಿ. ಸ್ವಂತ ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಹೊಸದರ ಕಡೆಗೆ ಹೊರಳುವಂಥ ಯೋಗ ಇದೆ. ಹೂಡಿಕೆಯಲ್ಲಿ ಸ್ವಲ್ಪ ಭಾಗವನ್ನು ಹಿಂತೆಗೆದುಕೊಂಡು ಕೆಲವು ಪ್ರಯೋಗ ಮಾಡಲು ಮನಸ್ಸು ಮಾಡಲಿದ್ದೀರಿ. ಅದರಲ್ಲೂ ಹೋಟೆಲ್, ಹೋಮ್ ಸ್ಟೇ, ಸರ್ವೀಸ್ ಅಪಾರ್ಟ್ ಮೆಂಟ್ ಇಂಥವುಗಳನ್ನು ಮಾಡುತ್ತಾ ಇರುವವರಿಗೆ ಪ್ರಮುಖವಾದ ತೀರ್ಮಾನವೊಂದನ್ನು ತೆಗೆದುಕೊಳ್ಳಬೇಕಾಗುತ್ತದೆ. ನಿಮಗೆ ವಹಿಸ ಬೇಕೆಂದಿದ್ದ ಕೆಲಸವೊಂದನ್ನು ಕೊನೆ ಕ್ಷಣದಲ್ಲಿ ಬೇರೆಯವರು ಪಡೆದುಕೊಂಡರು ಎಂಬ ಮಾಹಿತಿ ನಿಮ್ಮ ಕಿವಿಗೆ ಬೀಳಲಿದ್ದು, ಇಂಥವುಗಳಿಗೆ ಹೆಚ್ಚು ರಿಯಾಕ್ಟ್ ಮಾಡುವುದಕ್ಕೆ ಹೋಗಬೇಡಿ.
ಸಂಗೀತ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಆದಾಯ ದೊಡ್ಡ ಮಟ್ಟದಲ್ಲಿ ಹೆಚ್ಚಳ ಆಗುವುದಕ್ಕೆ ದಾರಿ ತೆರೆದುಕೊಳ್ಳುತ್ತದೆ. ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವ ವಿವಾಹ ವಯಸ್ಕರಿಗೆ ಸೂಕ್ತ ಸಂಬಂಧ ಹುಡುಕಿಕೊಂಡು ಬರಲಿದೆ. ಮಕ್ಕಳ ಮೇಲೆ ಈ ದಿನ ಸಿಟ್ಟು ಮಾಡಿಕೊಳ್ಳಬೇಡಿ. ಸಾಧ್ಯವಾದಷ್ಟು ಪ್ರೀತಿಯ ಮಾತಿನಿಂದಲೇ ಅವರಿಗೆ ಅರ್ಥ ಮಾಡಿಸುವುದಕ್ಕೆ ಪ್ರಯತ್ನಿಸಿ. ಕೃಷಿಕರು ಜಮೀನಿನಲ್ಲಿ ತಂತಿ- ಬೇಲಿ ಹಾಕಿಸುವುದು, ಬೋರ್ ವೆಲ್ ಕೊರೆಸುವುದು ಇಂಥ ಕೆಲವು ಕೆಲಸ- ಕಾರ್ಯ ಮಾಡಿಸುವುದಕ್ಕೆ ಆಲೋಚನೆ ಮಾಡಲಿದ್ದೀರಿ. ಇದಕ್ಕಾಗಿ ಸಾಲ ಪಡೆದುಕೊಳ್ಳುವ ಆಲೋಚನೆ ಸಹ ಬರಲಿದೆ. ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಉದ್ಯೋಗದ ಆಫರ್ ಹುಡುಕಿಕೊಂಡು ಬರಲಿದೆ. ಅದನ್ನು ಒಪ್ಪಿಕೊಳ್ಳಬೇಕಾ ಬೇಡವಾ ಎಂಬ ವಿಚಾರಕ್ಕೆ ಸ್ವಲ್ಪ ಮಟ್ಟಿಗೆ ಗೊಂದಲ ಏರ್ಪಡಲಿದೆ.
ಲೇಖನ- ಎನ್.ಕೆ.ಸ್ವಾತಿ
ಭಾರತ ಹಾಗೂ ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರ್ಮನ್ ಪಡೆ ನಿರೀಕ್ಷಿತ ಪ್ರದರ್ಶನ ನೀಡಿ ಸರಣಿಯನ್ನು ವಶಪಡಿಸಿಕೊಂಡಿದೆ. ಈಗಾಗಲೇ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಮೂರನ್ನೂ ತಂಡ ಗೆದ್ದಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ 7 ವಿಕೆಟ್ಗಳಿಂದ ಆ ನಂತರ ತಿರುವನಂತಪುರದಲ್ಲಿ ನಡೆದ ಮೂರನೇ ಪಂದ್ಯವನ್ನು ಭಾರತೀಯ ಮಹಿಳಾ ತಂಡ 8 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಇದೀಗ 4ನೇ ಪಂದ್ಯದ ಮೇಲೂ ಹರ್ಮನ್ ಪಡೆ ಕಣ್ಣಿಟ್ಟಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಡಿಸೆಂಬರ್ 28 ರ ಭಾನುವಾರ ನಡೆಯಲಿದೆ.
ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಜಿಯೋ-ಹಾಟ್ಸ್ಟಾರ್ ಅಪ್ಲಿಕೇಶನ್ ಬಳಸಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ನಿಮ್ಮ ಮೊಬೈಲ್ ಫೋನ್ನಲ್ಲಿ ವೀಕ್ಷಿಸಬಹುದು.
ಭಾರತ ತಂಡ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ಜಿ ಕಮಲಿನಿ, ಹರ್ಲೀನ್ ಡಿಯೋಲ್, ಅರುಂಧಾ ರೆಡ್ಡಿ, ಸ್ನೇಹ್ ರೆಡ್ಡಿ.
ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಢಾಕಾ, ಡಿಸೆಂಬರ್ 27: ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ದಾಳಿಯಾಗುವುದು (Attack on minorities) ತೀರಾ ಸಾಮಾನ್ಯವಾಗಿ ಹೋಗಿದೆ. ಆ ದೇಶದ ಅಲ್ಪಸಂಖ್ಯಾತ ಮಾನವ ಹಕ್ಕು ಸಂಸ್ಥೆಯಾದ ಎಚ್ಆರ್ಸಿಬಿಎಂ (HRCBM) ಪ್ರಕಾರ, ಕಳೆದ ವರ್ಷದ ಡಿಸೆಂಬರ್ನಿಂದ ಈ ವರ್ಷದ ಜೂನ್ವರೆಗೆ ಆರು ತಿಂಗಳಲ್ಲಿ ಧರ್ಮನಿಂದನೆ ಆರೋಪದ ಮೇಲೆ ಹಿಂದೂಗಳ ಮೇಲೆ ಹಲ್ಲೆಯಾಗಿರುವ 71ಕ್ಕೂ ಹೆಚ್ಚು ಘಟನೆಗಳು ಸಂಭವಿಸಿವೆಯಂತೆ.
ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿರುವ ರಂಗಪುರ್, ಚಾಂದಪುರ್, ಚತ್ತೋಡಗ್ರಾಮ್, ದಿನಾಜ್ಪುರ್, ಲಾಲ್ಮೋನಿರ್ಹತ್, ಸುನಾಮ್ಗಂಜ್, ಖುಲ್ನಾ, ಕಾಮಿಲ್ಲಾ, ಗಾಜಿಪುರ್, ತಾಂಗೇಲ್, ಸೈಲತ್ ಸೇರಿದಂತೆ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಾಖಲಾದ ಪ್ರಕರಣಗಳನ್ನು ಆಧರಿಸಿ ಈ ವರದಿಯು ಅಂಕಿ ಅಂಶ ನೀಡಿದೆ. ಗಮನಾರ್ಹ ಅಂಶ ಎಂದರೆ ಅಲ್ಲೋ ಇಲ್ಲೋ ಕೆಲವೇ ಕಡೆ ಮಾತ್ರ ಇಂಥ ಘಟನೆಗಳು ನಡೆದಿಲ್ಲ. ಬದಲಾಗಿ, ಬಾಂಗ್ಲಾದೇಶದ ಹೆಚ್ಚಿನ ಪ್ರದೇಶಗಳಲ್ಲಿ, ಮತ್ತು ಬಾರಿ ಬಾರಿ ಈ ಹಲ್ಲೆ ಘಟನೆಗಳು ಸಂಭವಿಸಿವೆ. ಇದನ್ನು ಗಮನಿಸಿದಾಗ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ಅಭದ್ರತೆಯ ಸ್ಥಿತಿ ಇರುವುದು ಕಾಣುತ್ತದೆ ಎಂಬುದು ಮಾನವ ಹಕ್ಕುಗಳ ಈ ವರದಿಯು ಹೇಳುತ್ತದೆ.
ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ದುರುಳರ ಹಿಂಸಾಚಾರಕ್ಕೆ 29 ವರ್ಷದ ಸಾಮ್ರಾಟ್ ಬಲಿ
ಇತ್ತೀಚೆಗೆ ದೀಪ್ ಚಂದ್ರ ದಾಸ್ ಎಂಬ ಹಿಂದೂ ವ್ಯಕ್ತಿಯನ್ನು ಧರ್ಮನಿಂದನೆ (Blasphemy charges) ಆರೋಪದ ಮೇಲೆ ಹಲ್ಲೆ ಮಾಡಿ ಸಜೀವವಾಗಿ ಸುಟ್ಟುಹಾಕಿದ್ದರು. ಆದರೆ, ದೀಪು ಚಂದ್ರ ದಾಸ್ ಯಾವುದೇ ಧರ್ಮನಿಂದನೆ ಮಾಡಿಲ್ಲ ಎಂಬುದು ಬೆಳಕಿಗೆ ಬಂದಿತ್ತು. ಮಾನವ ಹಕ್ಕು ಆಯೋಗದ ವರದಿ ಕೂಡ ಅದು ತಿಳಿಸಿದ 71 ಪ್ರಕರಣಗಳಲ್ಲಿ ಹೆಚ್ಚಿನವುಗಳು ಸುಳ್ಳು ಆರೋಪವೇ ಆಗಿವೆ ಎಂದಿದೆ.
ದೀಪುಚಂದ್ರ ದಾಸ್ನನ್ನು ಸಜೀವವಾಗಿ ಸುಟ್ಟುಹಾಕಿದ ಪ್ರಕರಣವು ಮಲೇಷ್ಯಾ ಸಂಸತ್ನಲ್ಲಿ ಸದ್ದು ಮಾಡಿದೆ. ಅಲ್ಲಿಯ ಅನೇಕ ಸಂಸದರು ಬಾಂಗ್ಲಾದೇಶದ ಹಿಂದೂ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತವಾಗಿ ಸಂಸದರು ಬೆಂಬಲ ಕೊಡುತ್ತಿದ್ದಾರೆ ಎಂದು ಸಂಸದ ಆರ್.ಎಸ್.ಎನ್. ರಾಯರ್ ಅವರು ಹೇಳಿದ್ದಾರೆ. ಹಾಗೆಯೇ, ಬಾಂಗ್ಲಾದೇಶೀ ವೀಸಾ ನೀಡಲು ಮತ್ತು ಮಲೇಷ್ಯಾಗೆ ಬಾಂಗ್ಲಾದೇಶಿಗರ ಪ್ರವೇಶಕ್ಕೆ ನಿರ್ಬಂಧ ಏರುವುದು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅನೇಕ ಸಂಸದರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ
‘ಧಾರ್ಮಿಕ ಗುರುತಿನ ಕಾರಣಕ್ಕೆ ಯಾವುದೇ ವ್ಯಕ್ತಿಯ ಮೇಲೂ ಹಿಂಸಾಚಾರ ಆಗಬಾರದು. ಅಲ್ಪಸಂಖ್ಯಾತರ ಹಕ್ಕು ಮತ್ತು ಸುರಕ್ಷತೆಯನ್ನು ಸದಾ ಕಾಪಾಡಬೇಕು. ಆ ರೀತಿಯ ದ್ವೇಷ ಮತ್ತು ಅಸಹನೆಗೆ ಯಾವುದೇ ಸಮಾಜದಲ್ಲೂ ಜಾಗ ಇರಬಾರದು’ ಎಂದು ಮಲೇಷ್ಯಾ ಸಂಸದರಾದ ರಾಯರ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ