Category Archives: Blog

Your blog category

IPL 2026: ಲೀಗ್ ಹಂತದಲ್ಲಿ ಮತ್ತೆ ಮುಖಾಮುಖಿಯಾಗಲ್ಲ ಆರ್​ಸಿಬಿ- ಸಿಎಸ್​ಕೆ..!

IPL 2026: ಲೀಗ್ ಹಂತದಲ್ಲಿ ಮತ್ತೆ ಮುಖಾಮುಖಿಯಾಗಲ್ಲ ಆರ್​ಸಿಬಿ- ಸಿಎಸ್​ಕೆ..!

ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಇರುವಷ್ಟೇ ಮಹತ್ವ ಐಪಿಎಲ್‌ನಲ್ಲಿ (IPL) ಆರ್​ಸಿಬಿ ಹಾಗೂ ಸಿಎಸ್​ಕೆ (RCB vs CSK) ನಡುವಿನ ಪಂದ್ಯಕ್ಕೆ ಇರುತ್ತದೆ. ಈ ಉಭಯ ತಂಡಗಳ ಮುಖಾಮುಖಿಯನ್ನು ನೋಡಲು ಅಭಿಮಾನಿಗಳು ವರ್ಷಗಳಿಂದ ಕಾದು ಕುಳಿತಿರುತ್ತಾರೆ. ಹಾಗೆಯೇ ಪಂದ್ಯಗಳು ನಡೆದಾಗ ಕ್ರೀಡಾಂಗಣಗಳು ತುಂಬಿ ತುಳುಕುತ್ತಿರುತ್ತವೆ. ಇದನ್ನು ಗಮನಿಸಿಯೇ ಬಿಸಿಸಿಐ, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಸಿಎಸ್‌ಕೆ ನಡುವೆ ಎರಡು ಪಂದ್ಯಗಳನ್ನು ಆಯೋಜನೆ ಮಾಡುತ್ತದೆ. ಇದರಿಂದ ಅಭಿಮಾನಿಗಳು ಎರಡು ಬಾರಿ ಈ ತಂಡಗಳ ನಡುವಿನ ಮುಖಾಮುಖಿ ನೋಡಲು ಸಾಧ್ಯವಾಗುತ್ತದೆ. ಆದರೆ ಈ ಬಾರಿ ಅದು ಸಾಧ್ಯವಾಗುವುದಿಲ್ಲ. ಹಾಗಿದ್ದರೆ, ಈ ಬಾರಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಲೀಗ್ ಹಂತದಲ್ಲಿ ಕೇವಲ ಒಂದು ಪಂದ್ಯ ನಡೆಯಲು ಕಾರಣವೇನು ಎಂಬುದನ್ನು ನೋಡುವುದಾದರೆ..

ಮೇಲೆ ಹೇಳಿದಂತೆ 2026 ರ ಐಪಿಎಲ್‌ನ ಲೀಗ್ ಹಂತದಲ್ಲಿ ಆರ್​ಸಿಬಿ ಮತ್ತು ಸಿಎಸ್‌ಕೆ ಒಮ್ಮೆ ಮಾತ್ರ ಮುಖಾಮುಖಿಗಲಿವೆ. ಅದರಂತೆ ನಡೆದ ಪಂದ್ಯದಲ್ಲಿ ಆರ್​ಸಿಬಿ, ಸಿಎಸ್‌ಕೆ ತಂಡವನ್ನು ಹೀನಾಯವಾಗಿ ಮಣಿಸಿದೆ. ಸಿಎಸ್​ಕೆ ತಂಡದ ಪ್ರದರ್ಶನವನ್ನು ನೋಡಿದರೆ, ಈ ಸೀಸನ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವ ಸಾಧ್ಯತೆಗಳಿಲ್ಲ. ಒಂದು ವೇಳೆ ಸಿಎಸ್​ಕೆ ಉಳಿದ ಎಲ್ಲಾ ಪಂದ್ಯಗಳನ್ನು ಗೆದ್ದು ನಾಕೌಟ್ ಸುತ್ತಿಗೆ ಅರ್ಹತೆ ಪಡೆದರೆ, ಆಗ ಉಭಯ ತಂಡಗಳ ನಡುವೆ ಪಂದ್ಯ ನಡೆಯಬಹುದು. ಆದರೆ ಸಿಎಸ್​ಕೆ ಆ ಹಂತಕ್ಕೆ ಹೋಗುವ ಸಾಧ್ಯತೆಗಳು ಗೋಚರಿಸುತ್ತಿಲ್ಲ.

ಪ್ಲೇ ಆಫ್ ಸುತ್ತಿನಲ್ಲಿ ಮುಖಾಮುಖಿ ಹೇಗೆ ಸಾಧ್ಯ?

ಆದಾಗ್ಯೂ ಎಲ್ಲಾ ಆಡೆತಡೆಗಳನ್ನು ನಿವಾರಿಸಿ ಸಿಎಸ್​ಕೆ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದರೆ, ಆಗ ಆರ್​ಸಿಬಿ ವಿರುದ್ಧ ಪಂದ್ಯವನ್ನಾಡಬಹುದಾಗಿದೆ. ಅದು ಹೇಗೆ ಎಂದರೆ, ಲೀಗ್ ಹಂತ ಮುಗಿದ ಬಳಿಕ ಅಂಕಪಟ್ಟಿಯಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ಮೊದಲ ಎರಡು ಸ್ಥಾನಗಳಲ್ಲಿದ್ದರೆ, ಆಗ ಎರಡು ತಂಡಗಳು ಕ್ವಾಲಿಫೈಯರ್ 1 ಆಡಲಿವೆ. ಹಾಗೆಯೇ ಆರ್​ಸಿಬಿ ಹಾಗೂ ಸಿಎಸ್​ಕೆ ಪಾಯಿಂಟ್‌ ಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದರೆ ಆಗ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಗಲಿವೆ.

ಇದರ ಹೊರತಾಗಿ ಆರ್​ಸಿಬಿ ಅಂಕಪಟ್ಟಿಯಲ್ಲಿ ಅಗ್ರ ಎರಡಲ್ಲಿ ಸ್ಥಾನ ಪಡೆದು, ಕ್ವಾಲಿಫೈಯರ್ 1 ರಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರೆ, ಇತ್ತ ಸಿಎಸ್​ಕೆ ಅಂಕಪಟ್ಟಿಯಲ್ಲಿ ಮೂರು ಅಥವಾ ನಾಲ್ಕನೇ ಸ್ಥಾನ ಪಡೆದು, ಎಲಿಮಿನೇಟರ್ ಗೆದ್ದು, ಕ್ವಾಲಿಫೈಯರ್ 2 ರಲ್ಲೂ ಗೆದ್ದರೆ ಆಗ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಆರ್​ಸಿಬಿ ಅಂಕಪಟ್ಟಿಯಲ್ಲಿ ಅಗ್ರ 2 ರಲ್ಲಿ ಸ್ಥಾನ ಪಡೆದು ಕ್ವಾಲಿಫೈಯರ್ 1 ರಲ್ಲಿ ಸೋತರೆ, ಇತ್ತ ಸಿಎಸ್​ಕೆ ಅಂಕಪಟ್ಟಿಯಲ್ಲಿ ಅಗ್ರ ಮೂರು ಅಥವಾ ನಾಲ್ಕರಲ್ಲಿ ಸ್ಥಾನ ಪಡೆದು ಎಲಿಮಿನೇಟರ್​ನಲ್ಲಿ ಗೆದ್ದರೆ, ಆಗ ಉಭಯ ತಂಡಗಳು ಕ್ವಾಲಿಫೈಯರ್ 2 ರಲ್ಲಿ ಮುಖಾಮುಖಿಗಲಿವೆ.

ಲೀಗ್ ಹಂತದಲ್ಲಿ ಒಂದು ಪಂದ್ಯ ಏಕೆ?

ಇನ್ನು ಈ ಸೀಸನ್​ನಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಕೇವಲ ಒಂದು ಪಂದ್ಯ ನಡೆದಿದ್ದು ಏಕೆ ಎಂಬುದನ್ನು ನೋಡುವುದಾದರೆ.. ಪ್ರತಿ ಬಾರಿಯಂತೆ ಈ ಬಾರಿಯೂ ಬಿಸಿಸಿಐ, 10 ತಂಡಗಳನ್ನು ತಲಾ 5 ತಂಡಗಳ ಎರಡು ವರ್ಚುವಲ್ ಗುಂಪುಗಳಾಗಿ ವಿಂಗಡಿಸಿದೆ. ಅದರಂತೆ ಲೀಗ್ ಹಂತದಲ್ಲಿ ನಡೆಯುವ 70 ಪಂದ್ಯಗಳಲ್ಲಿ ಪ್ರತಿಯೊಂದು ತಂಡವು ತಲಾ 14 ಪಂದ್ಯಗಳನ್ನು ಆಡುತ್ತದೆ. ಅದರಲ್ಲಿ ತಲಾ ಒಂದು ಪಂದ್ಯವನ್ನು ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಿದರೆ, ತಲಾ 2 ಪಂದ್ಯಗಳನ್ನು ಇನ್ನೊಂದು ಗುಂಪಿನಲ್ಲಿರುವ 5 ತಂಡಗಳ ವಿರುದ್ಧ ಆಡಲಿದೆ.

ಕೇವಲ 11 ಕೋಟಿಗೆ ಐವರು ಮ್ಯಾಚ್ ವಿನ್ನರ್ಸ್​; ಆರ್​ಸಿಬಿ ಲೆಕ್ಕಾಚಾರಕ್ಕೆ ಥಂಡಾ ಹೊಡೆದ ಉಳಿದ ಫ್ರಾಂಚೈಸಿಗಳು

2 ಗುಂಪುಗಳಲ್ಲಿ ಯಾವ್ಯಾವ ತಂಡಗಳಿವೆ

ಇಲ್ಲಿ ಬಿಸಿಸಿಐ, ಎಲ್ಲಾ 10 ತಂಡಗಳನ್ನು ತಲಾ ಐದು ಗುಂಪುಗಳಾಗಿ ವಿಂಗಡಿಸಿದೆ. ಅದರಂತೆ ಗುಂಪು 1 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (5), ಕೋಲ್ಕತ್ತಾ ನೈಟ್ ರೈಡರ್ಸ್ (3), ರಾಜಸ್ಥಾನ್ ರಾಯಲ್ಸ್ (1), ರಾಯಲ್ ಚಾಲೆಂಜರ್ಸ್ ಬೆಂಗಳೂರು (1) ಮತ್ತು ಪಂಜಾಬ್ ಕಿಂಗ್ಸ್ ಗುಂಪು ಎ ನಲ್ಲಿ ಸ್ಥಾನ ಪಡೆದರೆ, ಗುಂಪು ಬಿಯಲ್ಲಿ ಮುಂಬೈ ಇಂಡಿಯನ್ಸ್ (5), ಸನ್‌ರೈಸರ್ಸ್ ಹೈದರಾಬಾದ್ (1), ಗುಜರಾತ್ ಟೈಟಾನ್ಸ್ (1), ದೆಹಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿವೆ.

ಮೇಲೆ ಹೇಳಿದಂತೆ ಆರ್​ಸಿಬಿ ತನ್ನ ಗುಂಪಿನಲ್ಲಿರುವ ಇತರ ತಂಡಗಳ ವಿರುದ್ಧ ಅಂದರೆ, ಸಿಎಸ್​ಕೆ,ಕೆಕೆಆರ್, ರಾಜಸ್ಥಾನ್ ಹಾಗೂ ಪಂಜಾಬ್ ವಿರುದ್ಧ ತಲಾ ಒಂದೊಂದು ಪಂದ್ಯವನ್ನು ಲೀಗ್ ಹಂತದಲ್ಲಿ ಆಡಲಿದೆ. ಇನ್ನು ಬಿ ಗುಂಪಿನಲ್ಲಿರುವ ಮುಂಬೈ, ಸನ್‌ರೈಸರ್ಸ್, ಗುಜರಾತ್, ಡೆಲ್ಲಿ ಹಾಗೂ ಲಕ್ನೋ ವಿರುದ್ಧ ತಲಾ 2 ಪಂದ್ಯಗಳನ್ನು ಆಡಲಿದೆ. ಹೀಗಾಗಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿರುವ ಸಿಎಸ್​ಕೆ ಹಾಗೂ ಆರ್​ಸಿಬಿ ಈ ಬಾರಿ ಲೀಗ್ ಹಂತದಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!

ನವದೆಹಲಿ, ಏಪ್ರಿಲ್ 6: ವಿಕ್ಸ್ ಚಾಕೋಲೇಟ್ ಖರೀದಿ ಮಾಡಲು ಅಂಗಡಿಗೆ ಬಂದ ಕಳ್ಳನೊಬ್ಬ ಅಂಗಡಿಯ ಮಾಲೀಕಳ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡಿದ್ದಾನೆ. ದಿನಸಿ ಅಂಗಡಿಯಲ್ಲಿ ನಡೆದ ಈ ಚಿನ್ನದ ಸರ ಕಿತ್ತುಕೊಂಡ ಘಟನೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಕಳ್ಳನ ಮುಖವೂ ಸ್ಪಷ್ಟವಾಗಿ ದಾಖಲಾಗಿದೆ. ಸಂಜೆ ದಿನಸಿ ಅಂಗಡಿಗೆ ಬಂದ ಅಪರಿಚಿತನೊಬ್ಬ ವಿಕ್ಸ್ ಚಾಕೋಲೇಟ್​ಗಳನ್ನು ಕೇಳಿದ. ಇದಕ್ಕೆ ಅಂಗಡಿಯಲ್ಲಿದ್ದ ಮಹಿಳೆ ಅವನಿಗೆ ವಿಕ್ಸ್ ಕೊಟ್ಟಳು. ಆಗ ಚಿಲ್ಲರೆ ಹಣ ನೀಡಲು ಹತ್ತಿರ ಬಂದ ಆ ಕಳ್ಳ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಟ್ ಮಾಡಿಕೊಂಡು ಓಡಿದ್ದಾನೆ. ಆತ ದಿಢೀರೆಂದು ಈ ರೀತಿ ಮಾಡಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಗಂಡನನ್ನು ಕರೆದಿದ್ದಾಳೆ. ನಂತರ ಕುಟುಂಬ ಸದಸ್ಯರು ಹೊರಬಂದು ಕಳ್ಳನನ್ನು ಹಿಡಿಯಲು ಓಡಿಹೋಗಿದ್ದಾರೆ. ಆದರೆ, ಕಳ್ಳ ತಪ್ಪಿಸಿಕೊಂಡಿದ್ದಾನೆ. ಇದು ಎಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್​​ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು, ಏಪ್ರಿಲ್​​ 06: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (Byrathi Basavaraj) ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಶುರುವಾಗಿದೆ.

ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್‌ 6 ತಿಂಗಳ ಬಳಿಕ ಬಲೆಗೆ ಬಿದ್ದಿದ್ದರು. ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರಾತ್ರಿ ಪೊಲೀಸರು ಭೈರತಿಯನ್ನು ಬಂಧಿಸಿದ್ದರು. ನಂತರ ಸಿಐಡಿಗೆ ಹಸ್ತಾಂತರಿಸಲಾಗಿತ್ತು.

ಇದನ್ನೂ ಓದಿ: Byrathi Basavaraj Release: ಸೆಂಟ್ರಲ್‌ ಜೈಲಿನಿಂದ ಬಿಜೆಪಿ ಶಾಸಕ ಬೈರತಿ ಬಸವರಾಜ್ ರಿಲೀಸ್‌

7 ದಿನ ಸಿಐಡಿ ಕಸ್ಟಡಿಗೆ ನೀಡಿ 42ನೇ ACJM ಕೋರ್ಟ್​ ಜಡ್ಜ್ ಆದೇಶ ಹೊರಡಿಸಿತ್ತು. 7 ದಿನಗಳ ಕಾಲ ಸಿಐಡಿ ಅಧಿಕಾರಿಗಳು 258 ಪ್ರಶ್ನೆಗಳನ್ನು ಮಾಡಿದ್ದರು. ಈ ವೇಳೆ ಬಹುತೇಕ ಪ್ರಶ್ನೆಗಳಿಗೆ ಶಾಸಕರು ಗೊತ್ತಿಲ್ಲ ಎಂದು ಉತ್ತರವನ್ನೇ ನೀಡಿದ್ದರು. ಇದರ ಜೊತೆಗೆ ಶಾಸಕರ ಎರಡು ಮೊಬೈಲ್​ಗಳು ಕೂಡ ಸಿಐಡಿ ಜಪ್ತಿ ಮಾಡಿತ್ತು. ಮಾರ್ಚ್​ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಬೆನ್ನಲ್ಲೇ ಸೆಂಟ್ರಲ್‌ ಜೈಲಿನಿಂದ ಶಾಸಕ ಭೈರತಿ ಬಸವರಾಜ್ ಬಿಡುಗಡೆ ಆಗಿದ್ದರು.

ಪ್ರಕರಣದ ಹಿನ್ನೆಲೆ

ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆ ಕಳೆದ ವರ್ಷ ಜುಲೈ 15ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್​ಗಳಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿತ್ತು. ಮೃತನ ತಾಯಿ ಭೈರತಿ ಬಸವರಾಜ್ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ಎಫ್​ಐಆರ್ ದಾಖಲಾಗುತ್ತಿದ್ದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಬಂಧನದಿಂದ ಮಧ್ಯಂತರ ರಕ್ಷಣೆ ಪಡೆದ ಭೈರತಿ ಬಸವರಾಜ್ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದರು. ಆದರೆ ಪ್ರಯಾಗ್ ರಾಜ್​ಗೆ ತನ್ನ ಜೊತೆಯಲ್ಲೇ ಪ್ರಯಾಣಿಸಿದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಯಾರೆಂಬುದೇ ಗೊತ್ತಿಲ್ಲವೆಂದು ಹೇಳಿಕೆ ನೀಡಿದ್ದರು. ಈ ವೇಳೆ ಭೈರತಿ ಬಸವರಾಜ್‌ ತಗ್ಲಾಕಿಕೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ನಟಿ ಶ್ರುತಿ ಹರಿಹರನ್

ನಟಿ ಶ್ರುತಿ ಹರಿಹರನ್ (Sruthi Hariharan) ಅವರು ಸಿನಿಮಾಗಳ ಆಯ್ಕೆಯಲ್ಲಿ ಬಹಳ ಚ್ಯೂಸಿ. ವಯಸ್ಸು ಆಗುತ್ತಿದ್ದಂತೆಯೇ ಇನ್ನೂ ಉತ್ತಮವಾದ ಪಾತ್ರಗಳು ಸಿಗುತ್ತಿವೆ ಎಂಬ ಖುಷಿ ಅವರಿಗೆ ಇದೆ. ‘ಲೈಫ್ ಚೆನ್ನಾಗಿ ನಡೆಯುತ್ತಿದೆ. ಇನ್ನೊಂದು ಬಿಸ್ನೆಸ್ ಕೂಡ ಶುರು ಮಾಡಿದ್ದೇನೆ. ಮನೆ, ಮಗು, ಸಿನಿಮಾ ಜೊತೆ ಬ್ಯುಸಿ ಆಗಿದ್ದೇನೆ. ಎನ್​ಹೆಚ್​ 66 ಸಿನಿಮಾ ಕೂಡ ನನಗೆ ಚಾಲೆಂಜಿಂಗ್ ಆಗಿದೆ. 15 ವರ್ಷಗಳಲ್ಲಿ ಅಂದಾಜು 40 ಪಾತ್ರ ಮಾಡಿರುತ್ತೇನೆ. ಆದರೆ ಅವುಗಳಿಗಿಂತ ಡಿಫರೆಂಟ್ ಆಗಿರುವ ಪಾತ್ರ ಈ ಸಿನಿಮಾದಲ್ಲಿ ನನಗೆ ಸಿಕ್ಕಿದೆ. ಪ್ರತಿ ಬಾರಿ ಈ ರೀತಿಯ ಚಾಲೆಂಜಿಂಗ್ ಪಾತ್ರ ಸಿಕ್ಕಾಗ ನಮ್ಮ ಕೆಲಸವನ್ನು ನಾವು ಸರಿಯಾಗಿ ಮಾಡಬೇಕು ಎಂಬ ಪ್ಯಾಷನ್​ನೊಂದಿಗೆ ನಾನು ಕೆಲಸ ಶುರು ಮಾಡುತ್ತೇನೆ. ನಾನು ಕಲಾವಿದೆ. ಸ್ಟಾರ್ ಅಲ್ಲ. ಕಲಾವಿದರಿಗೆ ಸಾವಿಲ್ಲ. ಪಾತ್ರಗಳು ಬರುತ್ತಾ ಇರುತ್ತವೆ’ ಎಂದು ಶ್ರುತಿ ಹರಿಹರನ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದುವೆ ಬಳಿಕ ಮೊದಲ ಬಾರಿ ತವರಿಗೆ ಬಂದ ರಶ್ಮಿಕಾ: ಮಗಳಿಗೆ ಬಂಗಲೆ ಗಿಫ್ಟ್ ಕೊಟ್ಟ ತಂದೆ

ಸ್ಯಾಂಡಲ್‌ವುಡ್‌ನಿಂದ ಬಣ್ಣದ ಬದುಕು ಆರಂಭಿಸಿ ಬಳಿಕ ನ್ಯಾಷನಲ್ ಕ್ರಶ್ ಆಗಿ ಮಿಂಚಿದ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿಜಯ್ ದೇವರಕೊಂಡ (Vijay Deverakonda) ಜೊತೆ ಮದುವೆ ಮಾಡಿಕೊಂಡಿದ್ದರು. ಈಗ ಪತಿಯ ಜೊತೆ ಅವರು ಮೊದಲ ಬಾರಿಗೆ ತವರಿಗೆ ಆಗಮಿಸಿದ್ದಾರೆ. ಮದುವೆಯಾದ ನಂತರ ಇದೇ ಮೊದಲ ಬಾರಿಗೆ ರಶ್ಮಿಕಾ (Rashmika Mandanna) ಅವರು ಕೊಡಗಿನ (Kodagu) ವಿರಾಜಪೇಟೆಗೆ ಭೇಟಿ ನೀಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅವರು ತವರಿಗೆ ಬಂದಿದ್ದಾರೆ. ಅವರಿಗೆ ತಂದೆಯಿಂದ ಭರ್ಜರಿ ಉಡುಗೊರೆ ಸಿಕ್ಕಿದೆ.

ಭಾನುವಾರ (ಏಪ್ರಿಲ್ 5) ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬವಿತ್ತು. ಈ ವಿಶೇಷ ದಿನವನ್ನು ಆಚರಿಸಲು ರಶ್ಮಿಕಾ ಮತ್ತು ವಿಜಯ್ ಅವರು ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದಲ್ಲಿರುವ ಕದನೂರಿನ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಮದುವೆಯ ನಂತರ ಮೊದಲ ಬಾರಿಗೆ ಮಗಳು ಮತ್ತು ಅಳಿಯ ಮನೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಶ್ಮಿಕಾ ತಂದೆ ಮದನ್ ಮಂದಣ್ಣ ಅವರು ಮನೆಯನ್ನು ವಿಶೇಷವಾಗಿ ನವೀಕರಣಗೊಳಿಸಿದ್ದರು.

ಹುಟ್ಟುಹಬ್ಬದ ಅಂಗವಾಗಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ದಂಪತಿ ಕೊಡಗಿನ ಆರಾಧ್ಯ ದೈವ, ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿರುವ ಪಾಡಿ ಇಗ್ಗುತ್ತಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದರು. ಯಾವುದೇ ಸೆಲೆಬ್ರಿಟಿ ಹಮ್ಮಿಲ್ಲದೆ ಸಾಮಾನ್ಯರಂತೆ ದೇವಸ್ಥಾನಕ್ಕೆ ಆಗಮಿಸಿದ ಈ ಜೋಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿದ್ದ ಭಕ್ತರು ನೆಚ್ಚಿನ ನಟ-ನಟಿಯನ್ನು ಒಟ್ಟಾಗಿ ಕಂಡು ಅಚ್ಚರಿ ವ್ಯಕ್ತಪಡಿಸಿದರು.

ರಶ್ಮಿಕಾ ಅವರ ಈ ಬಾರಿಯ ಹುಟ್ಟುಹಬ್ಬಕ್ಕೆ ತಂದೆ ಮದನ್ ಮಂದಣ್ಣ ಕಡೆಯಿಂದ ಅತ್ಯಮೂಲ್ಯ ಉಡುಗೊರೆ ಸಿಕ್ಕಿದೆ. ಕದನೂರು ಬಳಿಯಿರುವ ಸುಸಜ್ಜಿತ ‘ಸೆರೆನಿಟಿ’ ಬಂಗಲೆಯನ್ನು ಮದನ್ ಮಂದಣ್ಣ ಅವರು ಮಗಳು ರಶ್ಮಿಕಾಗೆ ಗಿಫ್ಟ್ ನೀಡಿದ್ದಾರೆ. ಈಗಾಗಲೇ ವಿರಾಜಪೇಟೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಬಂಗಲೆಯ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಧಿಕೃತವಾಗಿ ರಶ್ಮಿಕಾ ಅವರ ಹೆಸರಿಗೆ ಆಸ್ತಿ ವರ್ಗಾವಣೆಯಾಗಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ

ಮದುವೆಗೂ ಮುಂಚೆಯೇ ರಶ್ಮಿಕಾ ಮಂದಣ್ಣ ಅವರು ಹೈದರಾಬಾದ್​ನಲ್ಲಿ ಸೆಟ್ಲ್ ಆಗಿದ್ದರು. ತೆಲುಗು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಅವರು ಹೆಚ್ಚು ಬ್ಯುಸಿ ಆಗಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ‘ರಣಬಾಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ವಿಜಯ್ ದೇವರಕೊಂಡ ಮೇಕಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆರ್​ಬಿಐ ಎಂಪಿಸಿ ಸಭೆ ಶುರು; ಬಡ್ಡಿ ದರ ಇಳಿಯುತ್ತಾ? ಏಪ್ರಿಲ್ 8ರಂದು ನಿರ್ಧಾರ

ನವದೆಹಲಿ, ಏಪ್ರಿಲ್ 6: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿಯ ದ್ವೈಮಾಸಿಕ ಸಭೆ ಇವತ್ತು ಆರಂಭವಾಗಿದೆ. ಜಾಗತಿಕ ಪರಿಸ್ಥಿತಿ ಬಹಳ ಬಿಗಡಾಯಿಸಿದ ಕ್ಲಿಷ್ಟಕರ ಸಂದರ್ಭದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ತೆಗೆದುಕೊಳ್ಳಲಾಗುವ ನಿರ್ಧಾರಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮೂರು ದಿನಗಳ ಕಾಲ ನಡೆಯುವ ಈ ಸಭೆಯ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಏಪ್ರಿಲ್ 8ರಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದ್ದಾರೆ.

ಜಾಗತಿಕ ಕಚ್ಛಾ ತೈಲ ಬೆಲೆ ಬಹಳ ಎತ್ತರಕ್ಕೆ ಹೋಗಿದೆ. ಪಶ್ಚಿಮ ಏಷ್ಯಾ ಪ್ರದೇಶ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಜಗತ್ತಿನ ಹೆಚ್ಚಿನ ದೇಶಗಳು ಇದರ ಪರಿಣಾಮ ಎದುರಿಸುತ್ತಿವೆ. ಭಾರತಕ್ಕೂ ಬಹಳ ಬಾಧೆಯಾಗಿದೆ. ಜನಸಾಮಾನ್ಯರಿಗೆ ಹೊರೆಯಾಗಬಾರದೆಂದು ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಏರಿಕೆಯನ್ನು ತಡೆ ಹಿಡಿದಿದೆ. ಇಂಥ ಪರಿಸ್ಥಿತಿಯಲ್ಲಿ ಆರ್​ಬಿಐ ಮುಂದೆ ಬಹಳ ದೊಡ್ಡ ಸವಾಲುಗಳು ಇವೆ ಎನ್ನುವುದು ನಿಜ. ಎಂಪಿಸಿ ಸಭೆಯಲ್ಲಿ ತೆಗೆದುಕೊಳ್ಳುವ ಒಂದೊಂದು ನಿರ್ಧಾರದ ಹಿಂದೆಯೂ ಸಾಕಷ್ಟು ಪರಾಮರ್ಶೆಗಳು ನಡೆಯುತ್ತವೆ ಎನ್ನುವ ಆಶಯ ಇದೆ.

ಇದನ್ನೂ ಓದಿ: ಎಐ ಕಾಲದಲ್ಲಿ ಎಂಜಿನಿಯರ್ ಜಪ ಬಿಡಿ, ನೀವು ಊಹಿಸಲೂ ಕಷ್ಟವಾದ ನಾನಾ ಉದ್ಯಮಗಳು ಸೃಷ್ಟಿಯಾಗುತ್ತವಂತೆ

ಬಡ್ಡಿದರ ಇಳಿಸುತ್ತಾ ಸಮಿತಿ?

ಎಸ್​ಬಿಐ ರಿಸರ್ಚ್ ಸಂಸ್ಥೆ ಪ್ರಕಾರ ಆರ್​ಬಿಐ ಈ ಬಾರಿಯೂ ರಿಪೋ ದರದಲ್ಲಿ ಬದಲಾವಣೆ ಮಾಡದಿರುವ ಸಾಧ್ಯತೆ ಇದೆ. ಹಣದುಬ್ಬರ ಏರುಗತಿಯಲ್ಲಿರುವುದರಿಂದ ಬಡ್ಡಿ ದರ ಇಳಿಸುವುದು ಮತ್ತಷ್ಟು ಅಪಾಯ ತಂದುಕೊಂಡಂತಾಗಬಹುದು. ಈ ಕಾರಣಕ್ಕೆ ರಿಪೋ ದರವನ್ನು ಶೇ. 5.25ರಲ್ಲೇ ಮುಂದುವರಿಸಬಹುದು ಎನ್ನುವ ಅಭಿಪ್ರಾಯಗಳಿವೆ.

ಕಳೆದ ಮೂರು ವರ್ಷದಲ್ಲಿ ಆರ್​ಬಿಐ ತನ್ನ ರಿಪೋ ದರವನ್ನು 125 ಮೂಲಾಂಕಗಳಷ್ಟು ಇಳಿಸಿದೆ. 2023ರ ಫೆಬ್ರುವರಿಯಲ್ಲಿ ಶೇ. 6.50ರಷ್ಟು ರಿಪೋ ದರ ಇತ್ತು. 2025ರ ಡಿಸೆಂಬರ್ ವೇಳೆಗೆ ನಾಲ್ಕೈದು ಬಾರಿ ರಿಪೋ ದರ ಇಳಿಕೆಯಾಗಿ ಶೇ. 5.25ಕ್ಕೆ ಬಂದು ನಿಂತಿದೆ. 2026ರ ಫೆಬ್ರುವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲಿ ಬಡ್ಡಿದರದ ಯಥಾಸ್ಥಿತಿ ಉಳಿಸಲಾಯಿತು. ಈ ಬಾರಿಯೂ ಅದೇ ಮುಂದುವರಿಯಬಹುದು.

ಇದನ್ನೂ ಓದಿ: ಬೆಂಗಳೂರಿಂದ ರಸ್ತೆ ಮೂಲಕ ಮುಂಬೈಗೆ ಕೇವಲ 5.5 ಗಂಟೆ ಪ್ರಯಾಣ; ಇದು ಎಕ್ಸ್​ಪ್ರೆಸ್​ವೇ ಮ್ಯಾಜಿಕ್

ಬಡ್ಡಿದರ ಯಥಾಸ್ಥಿತಿಯಲ್ಲಿ ಇರುವ ನಿರೀಕ್ಷೆಯಲ್ಲಿ ಬ್ಯಾಂಕುಗಳ ಬಡ್ಡಿದರದಲ್ಲಿ ಸ್ಥಿರತೆ ಸಿಕ್ಕಿದೆ. ಗೃಹ ಸಾಲ ಪಡೆಯುವ ಗ್ರಾಹಕರಿಗೂ ನಿರ್ದಿಷ್ಟತೆ ಸಿಕ್ಕಂತಾಗಿದೆ. ಈ ಹಂತದಲ್ಲಿ ಆರ್​ಬಿಐನಿಂದ ರಿಪೋ ದರದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: 0,0,0,0,0,0.. 14 ಪಂದ್ಯಗಳಲ್ಲಿ 6 ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ

Source link

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶದ ಬಗ್ಗೆ ಬಿಗ್​ ಅಪ್​ಡೇಟ್, ವಿದ್ಯಾರ್ಥಿಗಳಿಗೆ-ಪೋಷಕರಿಗೆ ನಿರಾಸೆ

ಬೆಂಗಳೂರು, (ಏಪ್ರಿಲ್ 06): ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Puc Exam Result) ನಾಳೆ(ಏ.7) ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದ್ರೆ, ನಾಳೆ(ಏಪ್ರಿಲ್ 7) ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನಿರಾಸೆಯಾಗಿದೆ.

ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಪ್ರತಿವರ್ಷಕ್ಕಿಂತ ಈ ಬಾರಿ ಬೇಗ ರಿಸಲ್ಟ್ ಕೊಡುತ್ತಾರೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದರು.  ಆದರೆ ಇದೀಗ ಎಕ್ಸಾಂ ಬೋರ್ಡ್ ಅಧಿಕಾರಿಗಳು ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ. ಇನ್ನೂ ಯಾವಾಗ ಫಲಿತಾಂಶ ಪ್ರಕಟಿಸಬೇಕು ಎನ್ನುವ ಕುರಿತು ದಿನಾಂಕ ನಿಗದಿಪಡಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ಆನ್​ಲೈನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ

ಮಾರ್ಚ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಕಾರ್ಯ ಚುರುಕಿನಿಂದ ಸಾಗಿತ್ತು. ಆದರೆ, ಈಗ ಕೊನೆಯ ಕ್ಷಣದಲ್ಲಿ ಮೌಲ್ಯಮಾಪನ ಪ್ರಕ್ರಿಯೆಯ ಸಣ್ಣ ಪುಟ್ಟ ಕೆಲಸಗಳು ಬಾಕಿ ಇರುವುದರಿಂದ ಫಲಿತಾಂಶದ ದಿನಾಂಕ ಮುಂದೂಡಲ್ಪಟ್ಟಿದ್ದು,  ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಇನ್ನು ಫಲಿತಾಂಶ ಯಾವಾಗ? ಏನು ಅಂತ ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ.  ಇದರಿಂದ ಗೊಂದಲ ಸೃಷ್ಟಿಯಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತುಮಕೂರು: ಸಾರ್ವಜನಿಕರಿಗೆ ಬಿತ್ತು ತೆರಿಗೆ ಬರೆ; ಪಾಲಿಕೆಯ ಹೊಸ ನೀತಿಗೆ ಜನ ಕಂಗಾಲು

ತುಮಕೂರು, ಏಪ್ರಿಲ್​ 06: ಸದ್ಯ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಹೊಡೆತ ಎಲ್ಲೆಡೆ ತಟ್ಟಿದೆ. ಅನಿಲ ಅಭಾವದಿಂದ ಜನ ತತ್ತರಿಸಿದ್ದಾರೆ. ಅತ್ತ ಅಡುಗೆ ಅನಿಲ ಕೊರತೆ ಉಂಟಾದರೆ, ಇತ್ತ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ಮಧ್ಯೆ ಮುಂದೇನಾಗುತ್ತೋ ಎಂಬ ಆತಂಕದಲ್ಲಿರುವ ತುಮಕೂರು (tumakuru) ನಗರದ ಜನರಿಗೆ ಪಾಲಿಕೆ ಈಗ ಶಾಕ್ ಕೊಟ್ಟಿದೆ. ತುಮಕೂರು ಮಹಾನಗರ ಪಾಲಿಕೆ ತೆರಿಗೆ ದರವನ್ನು (tax hike) ದಿಢೀರ್ ಏರಿಕೆ ಮಾಡಿದೆ. ಯುಜಿಡಿ, ನೀರಿನ ತೆರಿಗೆ ಸೇರಿದಂತೆ ಹಲವು ಶುಲ್ಕಗಳಲ್ಲಿ ಭಾರೀ ಏರಿಕೆಯಾಗಿದ್ದು, ಜನ ಕಂಗಾಲಾಗಿದ್ದಾರೆ.

ಮಹಾನಗರ ಪಾಲಿಕೆಯಿಂದ ದಿಢೀರ್ ತೆರಿಗೆ ದರ ಹೆಚ್ಚಳ

ತುಮಕೂರು ನಗರದ ಜನರಿಗೆ ಪಾಲಿಕೆಯಿಂದ ತೆರಿಗೆ ಶಾಕ್ ಎದುರಾಗಿದೆ. ಕಳೆದ 10 ವರ್ಷಗಳಿಂದ ಏರಿಕೆಯಾಗದ ಯುಜಿಡಿ ಮತ್ತು ನೀರಿನ ತೆರಿಗೆ ದರವನ್ನು ಮಹಾನಗರ ಪಾಲಿಕೆ ಈ ವರ್ಷ ದಿಢೀರ್ ಹೆಚ್ಚಳ ಮಾಡಿದೆ. ಈ ಮೂಲಕ 2026-27ನೇ ಸಾಲಿನ ಆಸ್ತಿ ತೆರಿಗೆಯ ಮೇಲೂ ಶೇಕಡ 5ರಷ್ಟು ಹೆಚ್ಚಳ ಮಾಡಲಾಗಿದ್ದು, ಏಪ್ರಿಲ್ 1ರಿಂದಲೇ ಹೊಸ ದರ ಜಾರಿಯಾಗಿದೆ. ಆದರೆ ಜನರಿಗೆ ತುಮಕೂರು ಮಹಾನಗರ ಪಾಲಿಕೆಯ ಈ ಲೆಕ್ಕಾಚಾರವೇ ಕಂಗಾಲಾಗಿಸಿದೆ.

ಇದನ್ನೂ ಓದಿ: ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ಯುಜಿಡಿ ತೆರಿಗೆ 480 ರೂ ಇಂದ ನೇರವಾಗಿ 1,440 ರೂ.ಗೆ ಏರಿಕೆಯಾಗಿದೆ. ಇದೇ ರೀತಿ ನೀರಿನ ತೆರಿಗೆ 2,400 ರೂ, ಇಂದ 3,600 ರೂ. ಗೆ ಹೆಚ್ಚಳ ಕಂಡಿದೆ. ಖಾತಾ ವರ್ಗಾವಣೆ ಶುಲ್ಕವೂ 100 ರೂಪಾಯಿಯಿಂದ 200 ರೂಪಾಯಿಗೆ ಡಬಲ್ ಆಗಿದೆ. ದಿಢೀರ್ ಏರಿಕೆಯ ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಒಂದು ಕಡೆ ಹಣ ಕೊಡುತ್ತೇವೆ ಅಂತ ಹೇಳಿ ಗ್ಯಾರಂಟಿ ಯೋಜನೆ ಅಂತ ಎರಡು ಸಾವಿರ ರೂ ಕೊಟ್ಟು, ಇನ್ನೊಂದು ಕಡೆ ತೆರಿಗೆ ರೂಪದಲ್ಲಿ ನಮ್ಮಿಂದಲೇ ಹಣ ವಾಪಸ್ ಪಡೆಯುತ್ತಿದ್ದಾರೆ. ಪಾಶ್ಚಿಮಾತ್ಯದ ಯುದ್ಧ ಪರಿಸ್ಥಿತಿ, ಬೆಲೆ ಏರಿಕೆ ಸಮಸ್ಯೆಗಳ ನಡುವೆ ಈ ತೆರಿಗೆ ಹೆಚ್ಚಳ ಸರಿಯಲ್ಲ ಎಂದು ಚಾಂದ್ ಪಾಷ ಎನ್ನುವವರು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಾಲಿಕೆ ಆಯುಕರು ಹೇಳುವುದೇನು?

ಮಹಾನಗರ ಪಾಲಿಕೆ ಆಯುಕ್ತೆ ಶುಭ ಅವರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. 10 ವರ್ಷಗಳಿಂದ ಏರಿಕೆಯಾಗದ ಯುಜಿಡಿ ಮತ್ತು ನೀರಿನ ತೆರಿಗೆ ದರವನ್ನು ಸರ್ಕಾರದ ನಿಯಮದಂತೆ ಈ ವರ್ಷ ಹೆಚ್ಚಿಸಲಾಗಿದೆ ಎಂದಿದ್ದಾರೆ. ಜೊತೆಗೆ, ಪ್ರತಿ ವರ್ಷದಂತೆ ಶೇಕಡ 5ರಷ್ಟು ಆಸ್ತಿ ತೆರಿಗೆ ಏರಿಕೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ ತಿಂಗಳಲ್ಲೇ ತೆರಿಗೆ ಪಾವತಿಸಿದರೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ಒಟ್ಟಾರೆ, ತೆರಿಗೆ ಏರಿಕೆಗೆ ಕಾರಣ ಕೊಟ್ಟ ಪಾಲಿಕೆ ಕಡ್ಡಾಯ ಪಾವತಿಗೆ ಸೂಚಿಸಿದ್ದು, ಏಪ್ರಿಲ್​ ವಿನಾಯಿತಿಯ ಲೆಕ್ಕಾಚಾರ ನೀಡಿದೆ. ಆದರೆ ತೆರಿಗೆ ಹೆಚ್ಚಳದ ಬಳಿಕ ಕೊಟ್ಟ ಈ ಆಫರ್ ಜನರಿಗೆ ನುಂಗಲಾರದ ತುತ್ತಾಗಿದ್ದು, ಪಾಲಿಕೆಯ ಚಿಂತನೆಗೆ ಜನ, ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್, ಪಿಜ್ಜಾ ಕೊಡ್ತಾರೆ!

ಕೊಲ್ಕತ್ತಾ, ಏಪ್ರಿಲ್ 6: ಭಾರತೀಯ ಭಕ್ತಿ, ಚೀನಾದ ಸಂಪ್ರದಾಯದ ಸಂಗಮವಾಗಿರುವ ಕೊಲ್ಕತ್ತಾದ ‘ಚೀನಾ ಕಾಳಿ ದೇವಸ್ಥಾನ’ದಲ್ಲಿ ಪಿಜ್ಜಾ ಮತ್ತು ನೂಡಲ್ಸ್​ ಅನ್ನೇ ಪ್ರಸಾದವಾಗಿ ನೀಡಲಾಗುತ್ತದೆ. ಹಲವು ದಶಕಗಳ ಹಿಂದೆ ಚೀನಾದಿಂದ ಇಲ್ಲಿ ನೆಲೆಸಿ ಬಂಗಾಳಿ ಸಂಸ್ಕೃತಿಯನ್ನು ಸ್ವೀಕರಿಸಿದವರು ಈ ದೇವಾಲಯವನ್ನು (Kali Temple) ನಿರ್ಮಿಸಿದರು. ಈ ಮಂದಿರ ವೈವಿಧ್ಯತೆಯಲ್ಲಿ ಏಕತೆಗೆ ಸಾಕ್ಷಿಯಾಗಿದೆ. ನೂಡಲ್ಸ್ ಮತ್ತು ಸೂಪ್ ಅನ್ನು ನೈವೇದ್ಯವಾಗಿ ನೀಡುವ ಈ ವಿಚಿತ್ರ ಪದ್ಧತಿಯ ಹಿಂದಿನ ವಿಷಯಗಳ ಕುರಿತಾದ ಮಾಹಿತಿ ಇಲ್ಲಿದೆ.

ಸಾಮಾನ್ಯವಾಗಿ ನಾವು ದೇವಸ್ಥಾನಗಳಿಗೆ ಹೋದಾಗ ನಮಗೆ ಲಡ್ಡು, ಪುಳಿಯೋಗರೆ, ಪೋಹಾ ಅಥವಾ ಹಣ್ಣುಗಳನ್ನು ಪ್ರಸಾದವಾಗಿ ನೀಡಲಾಗುತ್ತದೆ. ಆದರೆ ಈ ಒಂದು ದೇವಸ್ಥಾನದಲ್ಲಿ, ನೂಡಲ್ಸ್, ಮೊಮೊಸ್, ಪಾಸ್ತಾ ಮತ್ತು ಪಿಜ್ಜಾವನ್ನು ದೇವಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಇದು ವಿಚಿತ್ರವೆನಿಸಬಹುದು ಆದರೆ ಇದು ಅಕ್ಷರಶಃ ನಿಜ. ಕೊಲ್ಕತ್ತಾದ ಚೈನಾಟೌನ್ ಎಂದು ಕರೆಯಲ್ಪಡುವ ಟ್ಯಾಂಗ್ರಾ ಪ್ರದೇಶದಲ್ಲಿ ನೆಲೆಗೊಂಡಿರುವ ಚೈನಾ ಕಾಳಿ ದೇವಸ್ಥಾನದ ವಿಶೇಷತೆಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: Global Shiva Temples: ಭಾರತದ ಹೊರಗೂ ಮೊಳಗುತ್ತಿದೆ ಹರಹರ ಮಹಾದೇವ ಘೋಷ; ಇವು ಜಗತ್ತಿನ ಪ್ರಸಿದ್ಧ 5 ಶಿವ ದೇವಾಲಯಗಳು

ಈ ದೇವಾಲಯವು ಕೆಲವು ದಶಕಗಳ ಇತಿಹಾಸವನ್ನು ಹೊಂದಿದೆ. ಈ ದೇವಾಲಯವನ್ನು ಕೋಲ್ಕತ್ತಾದ ಟ್ಯಾಂಗ್ರಾ ಪ್ರದೇಶದಲ್ಲಿ ನೆಲೆಸಿದ ಚೀನೀ ಸಮುದಾಯದ ಸದಸ್ಯರು ನಿರ್ಮಿಸಿದ್ದಾರೆ. ಅವರು ಚರ್ಮದ ಉದ್ಯಮದಲ್ಲಿ ಕೆಲಸ ಮಾಡುತ್ತಾ ಇಲ್ಲಿ ನೆಲೆಸಿದರು. ಬಳಿಕ ಸ್ಥಳೀಯ ಬಂಗಾಳಿ ಸಂಸ್ಕೃತಿಯನ್ನು ಅಳವಡಿಸಿಕೊಂಡರು. ಕಾಳಿ ದೇವಿಯ ಬಗ್ಗೆ ಅಪಾರ ಭಕ್ತಿಯನ್ನು ಬೆಳೆಸಿಕೊಂಡರು. ಅವರು ತಮ್ಮ ಸಂಪ್ರದಾಯಗಳು ಮತ್ತು ಸ್ಥಳೀಯ ಭಕ್ತಿಯನ್ನು ಸೇರಿಸುವ ಮೂಲಕ ಈ ವಿಶಿಷ್ಟ ದೇವಾಲಯವನ್ನು ವಿನ್ಯಾಸಗೊಳಿಸಿದರು. ಹೀಗಾಗಿಯೇ ಈ ಮಂದಿರದಲ್ಲಿ ಭಕ್ತರು ತಮ್ಮ ನೆಚ್ಚಿನ ಚೌಮೀನ್, ಮೊಮೊಸ್, ನೂಡಲ್ಸ್, ಸೂಪ್ ಮತ್ತು ಪಿಜ್ಜಾಗಳನ್ನು ದೇವಿಗೆ ನೈವೇದ್ಯವಾಗಿ ಅರ್ಪಿಸುತ್ತಾರೆ. ಪೂಜೆಯ ನಂತರ ಅದೇ ಪದಾರ್ಥಗಳನ್ನು ಪ್ರಸಾದವಾಗಿ ಭಕ್ತರಿಗೆ ವಿತರಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವದ ಏಕೈಕ ಸ್ತ್ರೀ ರೂಪದ ಹನುಮಂತನ ದೇವಾಲಯ; ಇಲ್ಲಿನ ವಿಗ್ರಹದ ರಹಸ್ಯವೇನು ಗೊತ್ತೇ?

ಈ ದೇವಾಲಯವು ಕಾಳಿ ಮತ್ತು ಶಿವನ ವಿಗ್ರಹಗಳನ್ನು ಹೊಂದಿದೆ. ಪುರೋಹಿತರು ಮಂತ್ರಗಳನ್ನು ಪಠಿಸಿ, ಆರತಿಗಳನ್ನು ಮಾಡುವ ಮೂಲಕ ಧೂಪ ಮತ್ತು ದೀಪಗಳನ್ನು ಅರ್ಪಿಸುತ್ತಾರೆ. ಭಕ್ತಿಯು ಧಾರ್ಮಿಕ ಮತ್ತು ರಾಷ್ಟ್ರೀಯ ಗಡಿಗಳನ್ನು ಹೇಗೆ ಮೀರುತ್ತದೆ ಎಂಬುದಕ್ಕೆ ಈ ದೇವಾಲಯವು ಜೀವಂತ ಸಾಕ್ಷಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link