Category Archives: Blog

Your blog category

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ – Kannada News | ’45’ Film: Shivarajkumar Team Warns FIR, Strict Action Against Defamation

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ.

‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು ಪಡೆದಿದೆ. ನ್ಯಾಯಾಲಯದ ಮಧ್ಯಂತರ ಆದೇಶದಂತೆ, 45 ಚಿತ್ರದ ಕುರಿತು ಯಾವುದೇ ವ್ಯಕ್ತಿ, ಸಂಸ್ಥೆ, ಚಾನೆಲ್, ಸಾಮಾಜಿಕ ಜಾಲತಾಣದ ಖಾತೆದಾರರು ಅಥವಾ ಸಂಬಂಧಿತ ಪ್ಲಾಟ್‌ಫಾರ್ಮ್‌ಗಳು, ಅವಹೇಳನಕಾರಿ, ಮಾನಹಾನಿಕರ, ಅಪಪ್ರಚಾರಾತ್ಮಕ ವಿಮರ್ಶೆಗಳು ಅಥವಾ ನೆಗೆಟಿವ್ ರೇಟಿಂಗ್‌ಗಳು ಸೇರಿದಂತೆ ಚಿತ್ರಕ್ಕೆ ಹಾನಿಯುಂಟು ಮಾಡುವ ವಿಷಯಗಳನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಅಥವಾ ಹರಡುವುದು ನಿರ್ಬಂಧಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಬರೆಯಲಾಗಿದೆ.

‘ಈಗಾಗಲೇ ಪ್ರಕಟಗೊಂಡಿರುವ ಇಂತಹ ಎಲ್ಲಾ ವಿಷಯಗಳನ್ನು ತೆಗೆದುಹಾಕಿ ನಿಷ್ಕ್ರಿಯಗೊಳಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಸಹ, ಕೆಲವೊಂದು ದುರುದ್ದೇಶಪೂರಿತ ವ್ಯಕ್ತಿಗಳಿಂದ ಚಿತ್ರದ ವಿರುದ್ಧ ಅಪಪ್ರಚಾರದ ಪೋಸ್ಟ್‌ಗಳು ಪ್ರಕಟವಾಗುತ್ತಿರುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಇಂತಹ ಕೃತ್ಯಗಳು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದ್ದು, ನ್ಯಾಯಾಂಗ ನಿಂದನೆಗೆ ಒಳಪಡುವ ಅಪರಾಧವಾಗಿರುತ್ತದೆ’ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ..

‘ಈ ರೀತಿಯ ಅಪಪ್ರಚಾರದಿಂದ ಚಿತ್ರಕ್ಕೆ ಅಥವಾ ನಿರ್ಮಾಪಕರಿಗೆ ಉಂಟಾಗುವ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಹಾಗೂ ಗೌರವ ಹಾನಿಗೆ ಸಂಬಂಧಪಟ್ಟ ವ್ಯಕ್ತಿಗಳು ವೈಯಕ್ತಿಕವಾಗಿ ಸಂಪೂರ್ಣ ಹೊಣೆಗಾರರಾಗಿದ್ದು, ಅವರ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ಅವಕಾಶವಿದೆ. ಅಗತ್ಯವಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲು ತಜ್ಞರ ಅಭಿಪ್ರಾಯ ಪಡೆಯಲಾಗಿದೆ’ ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ಪೈರಸಿ ಮಾಡದಂತೆಯೂ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು? – Kannada News | BJP President BY Vijayendra Reacts On HD Devegowda Statement JDS alone in local body polls, no alliance with BJP

ಬೆಂಗಳೂರು, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ,  (JDS And BJP alliance)ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಸ್ಪಷ್ಟಪಡಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಎಂಪಿ, ಎಂಎಲ್​​ಎಗಳು ಅನ್ಯೂನ್ಯವಾಗಿರಲಿ. ಸ್ಥಳೀಯವಾಗಿ ಚುನಾವಣೆಗಳು ಕೆಳ ಹಂತದ ಕಾರ್ಯಕರ್ತರು ಹೊಡೆದುಕೊಳ್ಳಲಿ ಎಂದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾ‌ನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ

Source link

NCERT Recruitment 2025: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​; NCERT ನಲ್ಲಿ 173 ಬೋಧಕೇತರ ಸಿಬ್ಬಂದಿ ನೇಮಕಾತಿ – Kannada News | NCERT Non Teaching Recruitment 2025: 173 Posts Out! Apply Now!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಬೋಧಕೇತರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗ್ರೂಪ್ ಎ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ (ಡಿಸೆಂಬರ್ 27) ಪ್ರಾರಂಭವಾಗುತ್ತಿದ್ದು, ಜನವರಿ 16, 2026 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು NCERT ಯ ಅಧಿಕೃತ ವೆಬ್‌ಸೈಟ್ ncert.nic.in ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸತಕ್ಕದ್ದು.

ಗ್ರೂಪ್ ಎ ಗೆ 138, ಗ್ರೂಪ್ ಬಿ ಗೆ 26 ಮತ್ತು ಗ್ರೂಪ್ ಸಿ ಗೆ 9 ಸೇರಿದಂತೆ ಒಟ್ಟು 173 ಬೋಧಕೇತರ ಹುದ್ದೆಗಳನ್ನು ಘೋಷಿಸಲಾಗಿದೆ. ಈ ಹುದ್ದೆಗಳಲ್ಲಿ ಸೂಪರಿಂಟೆಂಡಿಂಗ್ ಎಂಜಿನಿಯರ್, ಬಿಸಿನೆಸ್ ಮ್ಯಾನೇಜರ್ ಮತ್ತು ಜೂನಿಯರ್ ಹಿಂದಿ ಅನುವಾದಕ ಸೇರಿದಂತೆ ವಿವಿಧ ಹುದ್ದೆಗಳು ಸೇರಿವೆ. ಪ್ರತಿಯೊಂದು ಹುದ್ದೆಗೆ ಅಗತ್ಯವಿರುವ ಅರ್ಹತೆಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಅಗತ್ಯವಿರುವ ಅರ್ಹತೆ ಏನು?

ಸೂಪರಿಂಟೆಂಡಿಂಗ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ಮಾಹಿತಿ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು ಮತ್ತು ಸಂಬಂಧಿತ ಹುದ್ದೆಯಲ್ಲಿ 12 ವರ್ಷಗಳ ಅನುಭವವನ್ನು ಹೊಂದಿರಬೇಕು. ಜೂನಿಯರ್ ಹಿಂದಿ ಅನುವಾದಕ ಹುದ್ದೆಗೆ, ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹುದ್ದೆಗೆ ವಯಸ್ಸಿನ ಮಿತಿ ಮತ್ತು ಇತರ ಅರ್ಹತೆಗಳ ಕುರಿತು ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • NCERT ನ ಅಧಿಕೃತ ವೆಬ್‌ಸೈಟ್‌(ncert.nic.in) ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಖಾಲಿ ಹುದ್ದೆ ವಿಭಾಗಕ್ಕೆ ಹೋಗಿ.
  • ಬೋಧಕೇತರ ಹುದ್ದೆ 2025 ಅರ್ಜಿ ಸಲ್ಲಿಸಲು ಇಲ್ಲಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಈಗ ನೋಂದಾಯಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ವಿನಂತಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಸಲ್ಲಿಸಿ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಆಯ್ಕೆ ಹೇಗೆ ಮಾಡಲಾಗುತ್ತದೆ?

ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಂದರ್ಶನ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ನೇಮಕಾತಿ ಜಾಹೀರಾತನ್ನು ಪರಿಶೀಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಅಡುಗೆ ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳೇ ಸಾಕು – Kannada News | Drink these drinks to prevent hair loss

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯೋಮಾನದವರು ಸಹ ಕೂದಲು ಉದುರುವಿಕೆ  (hair fall) ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ಕೆಟ್ಟ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಒತ್ತಡ ಇವೆಲ್ಲವೂ ಕೂದಲು ಉದುರುವಿಕೆಗೆ ಮುಖ್ಯ ಕಾರಣ.  ಈ ಕೂದಲು ಉದುರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲು, ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಹಲವರು ವಿವಿಧ ಹೇರ್‌ ಮಾಸ್ಕ್‌, ಎಣ್ಣೆ ಇತ್ಯಾದಿ ಬಾಹ್ಯ ಆರೈಕೆಯ ಮೊರೆ ಹೋಗ್ತಾರೆ. ಇದರ ಜೊತೆಗೆ ಕೂದಲ ಆರೋಗ್ಯಕ್ಕೆ ಆಂತರಿಕ ಪೋಷಣೆಯೂ ಅಷ್ಟೇ ಮುಖ್ಯ. ನಿಮಗೂ ಹೇರ್‌ ಫಾಲ್‌ ಸಮಸ್ಯೆ ಇದ್ದರೆ, ಅಡುಗೆ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಈ ಕೆಲವು ವಸ್ತುಗಳನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ. . ಈ ಪಾನೀಯಗಳು ನೆತ್ತಿಯನ್ನು ಒಳಗಿನಿಂದ ನಿರ್ವಿಷಗೊಳಿಸುವುದಲ್ಲದೆ, ಕೂದಲಿನ ಬೇರುಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತವೆ.

ಕೂದಲು ಉದುರುವ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ:

ಮೆಂತ್ಯ ನೀರು: ಮೆಂತ್ಯವು ಪ್ರೋಟೀನ್ ಮತ್ತು ನಿಕೋಟಿನಿಕ್ ಆಮ್ಲವನ್ನು ಹೊಂದಿದ್ದು, ಇದು ಕೂದಲಿನ ಬೇರುಗಳನ್ನು ಬಲಪಡಿಸಲು ಸಹಕಾರಿ. ಇದಕ್ಕಾಗಿ ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಮತ್ತು ಬೆಳಿಗ್ಗೆ ಅದನ್ನು ಸೋಸಿ ಕುಡಿಯಿರಿ. ಇದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ಮತ್ತು ಹೊಸ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ನೆಲ್ಲಿಕಾಯಿ ಪಾನೀಯ: ನೆಲ್ಲಿ ವಿಟಮಿನ್‌ ಸಿ ಯ ಅತ್ಯುತ್ತಮ ಮೂಲವಾಗಿದ್ದು , ಇದು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ನೆತ್ತಿಯ ಆರೋಗ್ಯವನ್ನು ಸುಧಾರಿಸುತ್ತದೆ. ಒಣ ನೆಲ್ಲಿಕಾಯಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಆ ನೀರು ಕುಡಿಯುವುದರಿಂದ ಕೂದಲು ದಪ್ಪ ಮತ್ತು ಬಲವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಕೊತ್ತಂಬರಿ ನೀರು: ಕೊತ್ತಂಬರಿ ಸೊಪ್ಪು ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಈ ಸೊಪ್ಪನ್ನು ನೀರಿನಲ್ಲಿ ಕುದಿಸಿ, ಸೋಸಿ, ಪ್ರತಿದಿನ ಬೆಳಿಗ್ಗೆ ಕುಡಿಯಿರಿ. ಇದು ರಕ್ತವನ್ನು ಶುದ್ಧೀಕರಿಸುತ್ತದೆ, ನೆತ್ತಿಗೆ ಪೋಷಣೆಯನ್ನು ನೀಡುತ್ತದೆ.

ಅಲೋವೆರಾ ನೀರು: ಅಲೋವೆರಾದಲ್ಲಿ ಕೂದಲಿನ ಕಿರುಚೀಲಗಳನ್ನು ಪುನರುಜ್ಜೀವನಗೊಳಿಸುವ ಕಿಣ್ವಗಳು ಮತ್ತು ಅಮೈನೋ ಆಮ್ಲಗಳಿವೆ. ಪ್ರತಿದಿನ ಬೆಳಿಗ್ಗೆ 2 ಚಮಚ ಅಲೋವೆರಾ ಜೆಲ್ ಅನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕೂದಲಿನ ಆರೋಗ್ಯವನ್ನು ವೃದ್ಧಿಸುತ್ತದೆ.

ಇದನ್ನೂ ಓದಿ: ಅತಿಯಾದ ಕೂದಲು ಉದುರುವ ಸಮಸ್ಯೆಗೆ ನೀವು ಸೇವಿಸುವ ಆಹಾರಗಳು ಕಾರಣ

ತುಳಸಿ ನೀರು: ತುಳಸಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು, ಅದು ನೆತ್ತಿಯ ಆರೋಗ್ಯವನ್ನು ಸುಧಾರಿಸುತ್ತದೆ. ಕೆಲವು ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಪ್ರತಿದಿನ ಬೆಳಿಗ್ಗೆ ಕುಡಿಯುವುದರಿಂದ ಕೂದಲಿನ ಬೇರುಗಳು ಬಲಗೊಳ್ಳುತ್ತವೆ.

ದಾಲ್ಚಿನ್ನಿ ನೀರು: ದಾಲ್ಚಿನ್ನಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ, ಇದು ಪೋಷಕಾಂಶಗಳು ನೆತ್ತಿಯನ್ನು ತಲುಪಲು ಸಹಾಯ ಮಾಡುತ್ತದೆ. ಹಾಗಾಗಿ ದಾಲ್ಚಿನ್ನಿ ತುಂಡನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಆ ನೀರನ್ನು ಕುಡಿಯಿರಿ. ಈ ಪಾನೀಯಗಳ ನಿಯಮಿತ ಸೇವನೆಯಿಂದ ನೈಸರ್ಗಿಕವಾಗಿ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ – Kannada News | Mantralaya Language Row: Telugu Speakers Oppose Kannada Signboard at Temple Entrance

ರಾಯಚೂರು, ಡಿಸೆಂಬರ್​​ 27: ಆಂಧ್ರ ಮತ್ತು ರಾಯಚೂರು ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಾಷಾ ವಿವಾದ ತಟ್ಟಿದೆ. ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ ಎಂಬ ಶ್ಲೋಕದ ಫಲಕಕ್ಕೆ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ್ದರಿಂದ, ಇಲ್ಲಿ ತೆಲುಗು ಭಾಷೆಯಲ್ಲಿ ಫಲಕ ಇರಬೇಕು ಎಂದು ಅವರು ವಾದಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಂಧ್ರಪ್ರದೇಶ ಸಿಎಂ ಮತ್ತು ಉಪಮುಖ್ಯಮಂತ್ರಿಗಳಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಫಲಕ ಇಂದು ನಿನ್ನೆಯದಲ್ಲ, ಹಲವು ವರ್ಷಗಳಿಂದಲೂ ಕನ್ನಡದಲ್ಲಿಯೇ ಇದೆ ಎಂದು ವರದಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ – Kannada News | Pregnant Women Parking Goes Viral: Bengaluru Nexus Mall’s Thoughtful Concept

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದು “ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ” ಎಂಬ ಬೋರ್ಡ್​​ನ್ನು ಕೂಡ ಈ ಪಾರ್ಕಿಂಗ್​ ಸ್ಥಳದಲ್ಲಿ ಹಾಕಲಾಗಿದೆ. ಗುಲಾಬಿ ಥೀಮ್‌ ಮೂಲಕ ಈ ಪಾರ್ಕಿಂಗ್​​ ಸ್ಥಳವನ್ನು ವಿನ್ಯಾಸ ಮಾಡಲಾಗಿದೆ. ಇದು ತುಂಬಾ ವಿಶೇಷವಾಗಿ ಕಂಡು ಬಂದಿದೆ. ದೊಡ್ಡ ಶಾಪಿಂಗ್ ಮಾಲ್​​ನಲ್ಲಿ ಜನ ಹಾಗೂ ವಾಹನ ದಟ್ಟಣೆ ಇರುವುದು ಸಹಜ. ಇದರಿಂದ ಗರ್ಭಿಣಿಯರಿಗೆ ಯಾವುದೇ ತೊಂದರೆ ಆಗಬಾರದು ಎಂದು ಈ ವ್ಯವಸ್ಥೆಯನ್ನು ಮಾಡಲಾಗಿದೆ. ಪಿಂಕ್​​ ಕಲರ್​​​ನಿಂದ ಈ ಪಾರ್ಕಿಂಗ್​​ ಸ್ಥಳವನ್ನು ಅಲಂಕಾರ ಮಾಡಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ದೃಶ್ಯದ ಬಗ್ಗೆ ಅಕ್ಷಯ್ ರೈನಾ ಅದ್ಭುತವಾಗಿ ವಿವರಿಸಿದ್ದಾರೆ. “ತುಂಬಾ ಒಳ್ಳೆಯ ಪರಿಕಲ್ಪನೆ ಮತ್ತು ನನಗೆ ಅದು ತುಂಬಾ ಇಷ್ಟವಾಯಿತು. ಈ ದೃಶ್ಯ ಕಂಡು ಬಂದದ್ದು ನೆಕ್ಸಸ್ ಮಾಲ್​​ನಲ್ಲಿ, ಸಾಂಪ್ರದಾಯಿಕ ಸೌಲಭ್ಯಗಳನ್ನು ಮೀರಿ ಯೋಚಿಸಿದ್ದಕ್ಕಾಗಿ ಮಾಲ್ ಆಡಳಿತ ಮಂಡಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ. ಮಹಿಳೆಯರಿಗೆ, ವಿಶೇಷವಾಗಿ ತಾಯಂದಿರಿಗೆ ಪ್ರತ್ಯೇಕ ಸ್ಥಳವನ್ನು ಇಟ್ಟುಕೊಂಡಿರುವ ಬೆಂಗಳೂರಿನ ನೆಕ್ಸಸ್‌ಮಾಲ್‌ಗಳಿಗೆ ಹ್ಯಾಟ್ಸ್ ಆಫ್. ಭಾರತದ ಇತರ ಎಲ್ಲಾ ಮಾಲ್‌ಗಳು ಇದನ್ನು ಜಾರಿಗೆ ತರಬೇಕು ಎಂದು ಈ ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅನೇಕರು ಈ ವಿಡಿಯೋವನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ತುಂಬಾ ಸಹಾಯಕವಾಗಿದೆ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇದು ಮಾಲ್‌ಗಳ ಜನದಟ್ಟಣೆ ಮತ್ತು ಗೊಂದಲಮಯ ಪಾರ್ಕಿಂಗ್‌ನಲ್ಲಿ ಬಹಳ ಅವಶ್ಯಕವಾದ ಸ್ಥಳವಾಗಿದೆ, ಇದರಿಂದಾಗಿ ತಾಯಂದಿರು ತಮ್ಮ ವಾಹನವನ್ನು ಸುಲಭವಾಗಿ ನಿಲ್ಲಿಸಿ ಮಾಲ್‌ಗೆ ಸುಲಭವಾಗಿ ಹೋಗಬಹುದು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದು ನೋಡಲು ತುಂಬಾ ಹೃದಯಸ್ಪರ್ಶಿಯಾಗಿದೆ ಎಂದು ಇನ್ನೊಬ್ಬರು ಕಮೆಂಟ್​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ ಮಂದಿಗೆ ಶಾಕ್ ನೀಡಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು – Kannada News | Kalaburagi Woman Beaten to Death Over ‘Devil Possession’

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದ ಪಾಪಿಗಳು!

ಕಲಬುರಗಿ, ಡಿಸೆಂಬರ್ 27: ತಂತ್ರಜ್ಞಾನ ಯುಗದಲ್ಲಿಯೂ ಮೂಢನಂಬಿಕೆಗಳ ಅಂಧಕಾರ ಇನ್ನೂ ಜೀವಂತವಾಗಿರುವುದಕ್ಕೆ ಕಲಬುರಗಿಯ (Kalaburagi) ಮಹಿಳೆಯೊಬ್ಬರ ದಾರುಣ ಸಾವು ಸಾಕ್ಷಿಯಾಗಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ.

ಬೇವಿನ ಕಟ್ಟಿಗೆಯಿಂದ ಹಲ್ಲೆ

ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು ಗುರುತಿಸಲಾಗಿದೆ. ಸುಮಾರು ಆರು ವರ್ಷಗಳ ಹಿಂದೆ ಮುಕ್ತಬಾಯಿಗೆ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬುವನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಐದು ವರ್ಷದ ಗಂಡು ಮಗನೂ ಇದ್ದನು. ಇತ್ತೀಚಿನ ದಿನಗಳಲ್ಲಿ ಮುಕ್ತಬಾಯಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿದ ಗಂಡನ ಮನೆಯವರು, ಆಕೆಯ ಮೇಲೆ ಪದೇಪದೇ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗೆ ವೀಡಿಯೋ ನೋಡಿ

ಐದು ವರ್ಷದ ಮಗನ ಎದುರಲ್ಲೇ ಥಳಿತ

ಈ ಬಗ್ಗೆ ಮಾತನಾಡಿದ ಮೃತಳ ತಾಯಿ ತಿಪ್ಪವ್ವ, ಮಗಳಿಗೆ ಯಾವುದೇ ದೆವ್ವ ಹಿಡಿದಿಲ್ಲ. ಅವಳನ್ನು ಹಿಂಸಿಸಬೇಡಿ ಎಂದು ಮನವಿ ಮಾಡಿದರೂ ಆಕೆಯ ಮಾತು ಕೇಳಲಿಲ್ಲ. ನಿನ್ನೆ ಗಂಡ ಮನೆಯಲ್ಲಿ ಇಲ್ಲದ ವೇಳೆ, ಐದು ವರ್ಷದ ಮಗನ ಎದುರಲ್ಲೇ ಮುಕ್ತಬಾಯಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ ಎಂದಿದ್ದಾರೆ. ಹಲ್ಲೆಗೊಳಗಾದ ಮಹಿಳೆಯನ್ನು ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪೂಜೆ, ನದಿ ಸ್ನಾನ ಮಾಡಿಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮುಕ್ತಬಾಯಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ

ಮೃತಳ ಸಹೋದರಿ ಶ್ರೀದೇವಿ, ಇದು ಮೂಢನಂಬಿಕೆಯ ಹೆಸರಿನ ನೇರ ಕೊಲೆ ಎಂದು ಆರೋಪಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಳಂದ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಿಸಿ, ತನಿಖೆಯನ್ನು ಮಹಾರಾಷ್ಟ್ರದ ಮುರುಮ್ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ – Kannada News | Pickle Health Risks: Understanding Side Effects and Safe Consumption

ಉಪ್ಪಿನಕಾಯಿ ಕೇವಲ ಉಪ್ಪು ಮತ್ತು ಮೆಣಸಿನಕಾಯಿ ಮಾತ್ರವಲ್ಲ. ಅದರ ತಯಾರಿಕೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ನಡೆಯುತ್ತವೆ. ಇವುಗಳಲ್ಲಿ ಕೆಲವು ಸಹಜ ಹಾಗೂ ಅಗತ್ಯವಾಗಿದ್ದರೆ, ಕೆಲವು ಅತಿಯಾದಾಗ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಉಪ್ಪಿನಕಾಯಿಯ ಮುಖ್ಯ ಅಂಶವೇ ಸೋಡಿಯಂ ಕ್ಲೋರೈಡ್ (ಉಪ್ಪು). ಇದು ಸೂಕ್ಷ್ಮಾಣುಗಳ ಬೆಳವಣಿಗೆಯನ್ನು ತಡೆಯುವ ಮೂಲಕ ಆಹಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಉಪ್ಪಿನ ಅತಿಸೇವನೆಯಿಂದ ರಕ್ತದೊತ್ತಡ, ಹೃದಯ ಹಾಗೂ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅದೇ ರೀತಿ ವಿನೆಗರ್ ಅಥವಾ ಹುಳಿ ದ್ರಾವಣದಲ್ಲಿರುವ ಎಸಿಟಿಕ್ ಆಮ್ಲ ಮತ್ತು ನಿಂಬೆಹಣ್ಣಿನ ಸಿಟ್ರಿಕ್ ಆಮ್ಲ ಸಂರಕ್ಷಣೆಗೆ ಸಹಾಯಕವಾದರೂ, ಹೆಚ್ಚು ಆಮ್ಲೀಯತೆ ಜಠರದ ಕೆರಳಿಕೆ ಮತ್ತು ಆಸಿಡ್ ಸಮಸ್ಯೆಗಳಿಗೆ ಕಾರಣವಾಗಬಹುದು.

ಮೆಣಸಿನಕಾಯಿಯ ಖಾರಕ್ಕೆ ಕಾರಣವಾಗುವ ಕ್ಯಾಪ್ಸೈಸಿನ್ ಅಲ್ಪ ಪ್ರಮಾಣದಲ್ಲಿ ಉಪಯುಕ್ತವಾದರೂ, ಹೆಚ್ಚಾದರೆ ಗ್ಯಾಸ್ಟ್ರೈಟಿಸ್ ಹಾಗೂ ಹೊಟ್ಟೆಯ ಒಳಪದರಕ್ಕೆ ಹಾನಿ ಉಂಟುಮಾಡಬಹುದು. ಉಪ್ಪಿನಕಾಯಿಯಲ್ಲಿ ಬಳಸುವ ಎಣ್ಣೆಯಲ್ಲಿರುವ ಕೊಬ್ಬುಗಳು (ಟ್ರೈಗ್ಲಿಸರೈಡ್‌ಗಳು) ಅತಿಯಾದಾಗ ಕೊಲೆಸ್ಟ್ರಾಲ್ ಮತ್ತು ಹೃದಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಹಲವು ಉಪ್ಪಿನಕಾಯಿಗಳು ಹುದುಗುವಿಕೆ (ಫರ್ಮೆಂಟೇಶನ್) ಪ್ರಕ್ರಿಯೆ ಮೂಲಕ ತಯಾರಾಗುತ್ತವೆ. ಈ ವೇಳೆ ಲ್ಯಾಕ್ಟಿಕ್ ಆಮ್ಲ ರೂಪುಗೊಳ್ಳುತ್ತದೆ, ಇದು ಸಂರಕ್ಷಣೆಗೆ ಸಹಕಾರಿ. ಆದರೆ ಸರಿಯಾದ ಸ್ವಚ್ಛತೆ ಮತ್ತು ಸಂಗ್ರಹಣೆ ಇಲ್ಲದಿದ್ದರೆ, ಅಪಾಯಕಾರಿ ವಿಷಕಾರಿ ಸಂಯುಕ್ತಗಳು ಕೂಡ ರೂಪುಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ಇತ್ತೀಚಿನ ವಾಣಿಜ್ಯ ಉಪ್ಪಿನಕಾಯಿಗಳಲ್ಲಿ ಸೋಡಿಯಂ ಬೆಂಜೋಯೇಟ್, ಪೊಟ್ಯಾಸಿಯಂ ಸೋರ್ಬೇಟ್ ಮುಂತಾದ ಕೃತಕ ಸಂರಕ್ಷಕಗಳು, ಬಣ್ಣಗಳು ಹಾಗೂ ರುಚಿವರ್ಧಕಗಳು ಸೇರಿರುವುದು ಸಾಮಾನ್ಯ. ಇವುಗಳ ದೀರ್ಘಕಾಲೀನ ಸೇವನೆ ಮಕ್ಕಳಲ್ಲಿ ಅಲರ್ಜಿ, ಅತಿಚಟುವಟಿಕೆ ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಅತಿದೊಡ್ಡ ಅಪಾಯವು ತಪ್ಪಾದ ಸಂಗ್ರಹಣೆಯಿಂದ ಉಂಟಾಗುವ ಅಫ್ಲಾಟಾಕ್ಸಿನ್, ಬೊಟುಲಿನಮ್ ಟಾಕ್ಸಿನ್ ಮುಂತಾದ ವಿಷಗಳಿಂದ. ಇವು ಯಕೃತ್ತಿಗೆ ಹಾನಿ ಉಂಟುಮಾಡುವ ಹಾಗೂ ಜೀವಾಪಾಯಕ್ಕೆ ಕಾರಣವಾಗುವಷ್ಟು ಗಂಭೀರವಾಗಿವೆ. ಹೀಗಾಗಿ, ಉಪ್ಪಿನಕಾಯಿಯನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದಲ್ಲಮಿತಿ ಅತ್ಯಂತ ಮುಖ್ಯ.

ಲೇಖನ: ಡಾ ರವಿಕಿರಣ ಪಟವರ್ಧನ, ಆಯುರ್ವೇದ ವೈದ್ಯರು,ಶಿರಸಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link