ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ – Kannada News | India tables final trade proposal to US, demands tariff cut to 15pc and wants Agriculture out of negotiation

ನವದೆಹಲಿ, ಡಿಸೆಂಬರ್ 26: ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ (India US trade deal) ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನಗಳು ಫಲಪ್ರದವಾಗುವಂತೆ ಕಾಣುತ್ತಿವೆ. ಸರ್ವಸಮ್ಮತವಾದ ಮತ್ತು ನ್ಯಾಯಯುತವಾದ ಒಪ್ಪಂದದತ್ತ ಸಾಗುತ್ತಿದ್ದೇವೆ ಎಂದು ಸಂಧಾನದ ನೇತೃತ್ವದ ವಹಿಸಿರುವ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಭಾರವು ತನ್ನ ಒಪ್ಪಂದ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆಯಂತೆ. ಟ್ಯಾರಿಫ್ ಕಡಿತಗೊಳಿಸಬೇಕು, ಕೃಷಿ ಸಂಬಂಧಿತ ಉತ್ಪನ್ನಗಳನ್ನು ಈ ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಸಲ್ಲಿಸಿರುವ ಪ್ರಸ್ತಾವದಲ್ಲಿರುವ ಪ್ರಮುಖ ಅಂಶ. ಶೇ….

Read More

ಕುಡಿದ ಮತ್ತಲ್ಲಿ ಕಿರಿಕ್​​: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ! – Kannada News | Drunken Brawl Turns Fatal, Laborer Killed Over Verbal Spat in Kolar

ಕೋಲಾರ, ಡಿಸೆಂಬರ್​​ 26: ಕುಡಿದ ಮತ್ತಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್​​ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರದ ವೇಮಗಲ್​ ಕೈಗಾರಿಕಾ ಪ್ರದೇಶದ ಬಳಿ ಇರುವ ಕುರುಗಲ್ ಗೇಟ್​ನಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಸಂದೀಪ್​ ಸಿಂಗ್ ಮೃತ ದುರ್ದೈವಿಯಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಕುರುಗಲ್ ಗೇಟ್ ಬಳಿ ಕಾರ್ಮಿಕ ಸಂದೀಪ್ ಸಿಂಗ್​, ಅಡುಗೆ ಕೆಲಸ ಮಾಡುತ್ತಿದ್ದ ಬಳ್ಳಾರಿ ಮೂಲದ ರಾಜಾ ರೆಡ್ಡಿ, ಲೇಬರ್ ಕಾಂಟ್ರಾಕ್ಟ್ ಏಜೆಂಟ್ ಆಗಿದ್ದ ಅನಿರುದ್ ಮತ್ತು ಬೆಂಗಳೂರು ಮೂಲದ…

Read More

ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು – Kannada News | Congress Leaders should stop pretending and start acknowledging reality Pralhad Joshi Hits Back

ನವದೆಹಲಿ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಬಗ್ಗೆ ರಾಹುಲ್ ಗಾಂಧಿ ಟೀಕಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹ ಅದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಇಬ್ಬರೂ ವಾಸ್ತವವನ್ನು ಒಪ್ಪಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ದೇಶದಲ್ಲಿ ಫಾಕ್ಸ್‌ಕಾನ್‌ನಂತಹ ಜಾಗತಿಕ ಪ್ರಮುಖ ಕಂಪನಿಗಳ ವಿಸ್ತರಣೆಗೆ ಕೇಂದ್ರ ಪ್ರೋತ್ಸಾಹಿಸುತ್ತಿದೆ. ಕರ್ನಾಟಕದಲ್ಲಿ ಸಹ ಈ ಕಾರ್ಖಾನೆಯನ್ನು ಸ್ಥಾಪಿಸಲು ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಭೂಮಿ ಹಂಚಿಕೆ ಮಾಡಲಾಗಿತ್ತು ಎಂಬುದನ್ನು…

Read More

IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ – Kannada News | India Women Dominate Sri Lanka in 3rd T20I: Series Win Secured in Thiruvananthapuram

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ಮಹಿಳಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ಮಹಿಳಾ ತಂಡವು ಏಕಪಕ್ಷೀಯ ಗೆಲುವು ಸಾಧಿಸಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರನೇ ಟಿ20 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಗೆಲುವಿನಲ್ಲಿ ರೇಣುಕಾ ಸಿಂಗ್, ದೀಪ್ತಿ ಶರ್ಮಾ ಮತ್ತು ಶೆಫಾಲಿ ವರ್ಮಾ ಪ್ರಮುಖ ಪಾತ್ರವಹಿಸಿದರು. ಈ ಮೂವರ ಅದ್ಭುತ ಪ್ರದರ್ಶನದಿಂದಾಗಿ ಹರ್ಮನ್ ಪಡೆ ಸರಣಿಯಲ್ಲಿ 3-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್…

Read More

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…

Read More

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು – Kannada News | Accountant carrying Rs 85 lakh on scooter robbed by bikers on Delhi–Lucknow highway

ನವದೆಹಲಿ, ಡಿಸೆಂಬರ್ 26: ದೆಹಲಿ- ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ಅಕೌಂಟೆಂಟ್​​ ಬಳಿ ಇದ್ದ 85 ಲಕ್ಷ ರೂ. ಹಣವನ್ನು ಬೈಕ್ ಸವಾರರು ದೋಚಿದ್ದಾರೆ. ಈ ಸಿನಿಮೀಯ ದರೋಡೆ (Robbery) ಹೈವೇಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಆತನ ಬಳಿ ಇದ್ದ ದುಡ್ಡಿನ ಚೀಲವನ್ನು ಕಸಿದುಕೊಂಡಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ…

Read More

ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ – Kannada News | Mysuru Sculptor Arun Yogiraj Carved the Statue of Late Shamanur Shivashankarappa

ಮೈಸೂರು, ಡಿಸೆಂಬರ್​ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್…

Read More

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ – Kannada News | BBK 12 contestant Spandana Somanna parents talk about her childhood

ನಟಿ ಸ್ಪಂದನಾ ಸೋಮಣ್ಣ (Spandana Somanna) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಿರುತೆರೆ ಧಾರಾವಾಹಿಗಳ ಮೂಲಕವೂ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರ ರಿಯಲ್ ಲೈಫ್ ಬಗ್ಗೆ ಅಭಿಮಾನಿಗಳಿಗೆ ಹೆಚ್ಚೇನೂ ತಿಳಿದಿಲ್ಲ. ಈ ವಾರ ಬಿಗ್ ಬಾಸ್ (BBK 12) ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಫ್ಯಾಮಿಲಿ ಸದಸ್ಯರು ಬಿಗ್ ಬಾಸ್ ಮನೆಗೆ ಬಂದು ಮಾತನಾಡುತ್ತಿದ್ದಾರೆ. ಸ್ಪಂದನಾ ಅವರ ಪೋಷಕರು ಕೂಡ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ. ಮಗಳ ಬಾಲ್ಯದಲ್ಲಿ ನಡೆದ…

Read More

VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ – Kannada News | Virat Kohli’s Vijay Hazare Blitz: Century, 77 Runs and Rs 10K Prize Controversy

ಬಿಸಿಸಿಐ (BCCI) ಆದೇಶದಂತೆ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಎರಡು ಪಂದ್ಯಗಳನ್ನಾಡಿದ ಕಿಂಗ್ ಕೊಹ್ಲಿ, ಆಡಿದ ಎರಡರಲ್ಲೂ ಅಮೋಘ ಪ್ರದರ್ಶನ ನೀಡಿದರು. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ (Virat Kohli), ಎರಡನೇ ಪಂದ್ಯದಲ್ಲಿ 77 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಕೊಹ್ಲಿಯ ಈ ಅರ್ಧಶತಕದ ನೆರವಿನಿಂದ ಡೆಲ್ಲಿ ತಂಡ ಗುಜರಾತ್ ವಿರುದ್ಧದ ಈ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡಿದಲ್ಲದೆ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿತು. ಈ ಪಂದ್ಯದೊಂದಿಗೆ…

Read More

ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ – Kannada News | KETRA Urges Tourism Minister to Reopen Wildlife Safaris

ಬೆಂಗಳೂರು, ಡಿಸೆಂಬರ್​​ 27: ಬಂಡೀಪುರ ಮತ್ತು ನಾಗರಹೊಳೆಗಳಲ್ಲಿ ಸಫಾರಿಗಳ ಪುನರಾರಂಭಕ್ಕೆ ಒತ್ತಾಯಿಸಿ ಕರ್ನಾಟಕ ಇಕೋ-ಟೂರಿಸಂ ರೆಸಾರ್ಟ್ಸ್ ಅಸೋಸಿಯೇಷನ್ (KETRA) ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆದಿದೆ. ಸಫಾರಿ ಸ್ಥಗಿತವಾಗಿರುವುದರಿಂದ ಉಂಟಾಗುತ್ತಿರುವ ಆರ್ಥಿಕ ಹಾನಿ ಮತ್ತು ಉದ್ಯೋಗ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದು, ಅಗತ್ಯವಿರುವ ಹೆಚ್ಚುವರಿ ಸುರಕ್ಷತಾ ಕ್ರಮಗಳೊಂದಿಗೆ ಸಫಾರಿಯನ್ನ ಮತ್ತೆ ಆರಂಭಿಸಬೇಕೆಂದು ಆಗ್ರಹಿಸಿದೆ. ಮನವಿ ಪತ್ರದಲ್ಲಿ ಏನಿದೆ? ನವೆಂಬರ್‌ನಿಂದ ರಾಜ್ಯದಲ್ಲಿ ವನ್ಯಜೀವಿ ಸಫಾರಿಗಳನ್ನು ಸ್ಥಗಿತಗೊಳಿಸಿರುವುದರಿಂದ ಹಲವು ರೀತಿಯ ಸಮಸ್ಯೆಗಳು ಉದ್ಭವಿಸಿವೆ. ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಇರುವ ಪ್ರವಾಸೋದ್ಯಮದ ಉಚ್ಚ…

Read More