ಅಮೃತವರ್ಷಿಣಿ ರಜಿನಿ ಅವರು ಈಗ ಪತಿ ಅರುಣ್ ಜೊತೆ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಈ ಶೋ ಸಖತ್ ಫನ್ ಆಗಿದೆ. ಈ ಶೋನಲ್ಲಿ ಅರುಣ್ ಹಾಗೂ ರಜಿನಿಗೆ ಅದ್ದೂರಿ ಸ್ವಾಗತ ಸಿಕ್ಕಿತು. 10 ಜೋಡಿಗಳ ಜೊತೆ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಶೋನಲ್ಲಿ ರಜಿನಿ ಅವರನ್ನು ಭುಜದ ಮೇಲೆ ಇಟ್ಟುಕೊಂಡು ಬಸ್ಕಿ ತೆಗೆದಿದ್ದಾರೆ ಅರುಣ್. ಇದನ್ನು ನೋಡಿ ಜಡ್ಜ್ಗಳು ಕೂಡ ಕಂಗಾಲಾದರು. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.
ಲಕ್ನೋ, ಏಪ್ರಿಲ್ 06: ಯುವಕನೊಬ್ಬ ತನ್ನ ಗೆಳತಿಯ ಕತ್ತು ಸೀಳಿ ಕೊಲೆ(Murder) ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಯ ಪ್ರಿಯಕರ ಮತ್ತವನ ಸ್ನೇಹಿತರು ಸೇರಿ ಈ ಕೃತ್ಯವೆಸಗಿದ್ದಾರೆ. ಇಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಆಕೆಗಿನ್ನು 17 ವರ್ಷ ವಯಸ್ಸು. ಶನಿವಾರ ರಾತ್ರಿ ಡಿಯೋರಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನೌತನ್ ಹಥಿಯಾಗಢ ಗ್ರಾಮದ ನಿವಾಸಿ ಅಂಜಲಿಯನ್ನು ಶಿವಂ ಸಿಂಗ್ ಮತ್ತು ಅವರ ಸಹಚರರು ಆಕೆಯನ್ನು ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ, ಬಾಲಕಿ ತನ್ನ ತಂಗಿ ಮತ್ತು ಸಹೋದರನೊಂದಿಗೆ ಸಹೋದರ್ ಪಟ್ಟಿ ಚೌಕ್ ಬಳಿ ಮೊಬೈಲ್ ಫೋನ್ ರಿಪೇರಿ ಮಾಡಿಸಲೆಂದು ಹೋಗಿದ್ದರು. ಬೈಕ್ನಲ್ಲಿ ಬಂದ ಇಬ್ಬರು ಯುವಕರು ಅವರನ್ನು ಥಳಿಸಲು ಶುರುಮಾಡಿದ್ದರು.
ಚಾಕುವನ್ನು ನೋಡಿ ಮಕ್ಕಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ, ಆರೋಪಿಗಳು ಅವರನ್ನು ಗೋಧಿ ಹೊಲಕ್ಕೆ ಓಡಿಸಿ, ಬಾಲಕಿಯನ್ನು ಹಿಡಿದು, ಆಕೆಯ ಕುತ್ತಿಗೆಗೆ ಇರಿದಿದ್ದಾರೆ. ಸಹೋದರ ತಮ್ಮ ಮನೆಯ ಕಡೆಗೆ ಓಡಲು ಪ್ರಯತ್ನಿಸಿದಾಗ, ದಾಳಿಕೋರರು ಬಾಲಕಿಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಕುಟುಂಬಸ್ಥರು ಸ್ಥಳಕ್ಕೆ ತಲುಪುವ ಹೊತ್ತಿಗೆ ಬಾಲಕಿ ಮೃತಪಟ್ಟಿದ್ದರು. ನಂತರ, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಕಳೆದ ನಾಲ್ಕು ವರ್ಷಗಳಿಂದ ಹುಡುಗಿ ಮತ್ತು ಸಿಂಗ್ ನಡುವೆ ಸಂಬಂಧವಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಸಿಂಗ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕುಟುಂಬದ ದೂರಿನ ಆಧಾರದ ಮೇಲೆ, ಸಿಂಗ್ ಮತ್ತು ಅವರ ಸಹಚರನ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿ ಕೊಲೆ ಪ್ರಕರಣ ದಾಖಲಿಸಲಾಗಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಈ ಪಂದ್ಯದ ನಡುವೆ ಆರ್ಸಿಬಿ ತಂಡದ ಬ್ಯಾಟರ್ ದೇವದತ್ ಪಡಿಕ್ಕಲ್ ನೀಡಿದ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ.
ನಾನು ಔಟ್ ಆಗಿದ್ದೇ ಒಳ್ಳೆದಾಯ್ತು!
ಈ ಪಂದ್ಯದ ಮಧ್ಯಂತರ ವಿರಾಮದ ವೇಳೆ ಮಾತನಾಡಿದ ದೇವತ್ ಪಡಿಕ್ಕಲ್, “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಆ ಸಮಯದಲ್ಲಿ ಔಟ್ ಆಗಿದ್ದೇ ಒಂದು ರೀತಿಯಲ್ಲಿ ಒಳ್ಳೆದಾಯ್ತು ಅನಿಸುತ್ತಿದೆ. ಯಾಕೆಂದರೆ, ನಾನು ಔಟ್ ಆದ ಮೇಲೆ ಆಗಮಿಸಿದ ಟಿಮ್ ಡೇವಿಡ್ ಅಬ್ಬರಿಸಿದ ರೀತಿ ಮತ್ತು ಬ್ಯಾಟಿಂಗ್ ಮಾಡಿದ ವೇಗ ನಿಜಕ್ಕೂ ಅದ್ಭುತವಾಗಿತ್ತು,” ಎಂದು ಮುಗುಳ್ನಗುತ್ತಾ ತಮ್ಮ ಸಹ ಆಟಗಾರನ ಆಟವನ್ನು ಕೊಂಡಾಡಿದ್ದಾರೆ.
ವಿರಾಟ್ ಕೊಹ್ಲಿ ಔಟಾದ ಬಳಿಕ ಕ್ರೀಸ್ಗೆ ಆಗಮಿಸಿದ ದೇವದತ್ ಪಡಿಕ್ಕಲ್ ಆರಂಭದಲ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದರು. ಇದಾದ ಬಳಿಕ ಬಿರುಸಿನಿಂದ ಬ್ಯಾಟ್ ಬೀಸಿದ ಪಡಿಕ್ಕಲ್ 29 ಎಸೆತಗಳಲ್ಲಿ 50 ರನ್ ಬಾರಿಸಿ ಔಟಾದರು.
ಇತ್ತ ಪಡಿಕ್ಕಲ್ ಔಟಾದ ನಂತರ ಕ್ರೀಸ್ಗೆ ಬಂದ ಟಿಮ್ ಡೇವಿಡ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು. 15ನೇ ಓವರ್ನಿಂದ ಬ್ಯಾಟಿಂಗ್ ಆರಂಭಿಸಿದ ಟಿಮ್ ಡೇವಿಡ್ ಸಿಎಸ್ಕೆ ಬೌಲರ್ಗಳನ್ನು ಮನಬಂದಂತೆ ದಂಡಿಸಿದರು.
ಕೇವಲ 25 ಎಸೆತಗಳನ್ನು ಎದುರಿಸಿದ ಟಿಮ್ ಡೇವಿಡ್ 8 ಭರ್ಜರಿ ಸಿಕ್ಸರ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 70 ರನ್ ಬಾರಿಸಿದರು. ಅಲ್ಲದೆ ರಜತ್ ಪಾಟಿದಾರ್ (48* ರನ್, 19 ಎಸೆತ) ಜೊತೆಗೂಡಿ ಕೊನೆಯ 6 ಓವರ್ಗಳಲ್ಲಿ ಬರೋಬ್ಬರಿ 99 ರನ್ ಚಚ್ಚಿದರು. ಈ ಮೂಲಕ ಆರ್ಸಿಬಿ ತಂಡ 20 ಓವರ್ಗಳಲ್ಲಿ 250 ರನ್ ಕಲೆಹಾಕಿತು.
ಭರ್ಜರಿ ದಾಖಲೆ:
ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ RCB ಈ ಸೀಸನ್ನ ಗರಿಷ್ಠ ಮೊತ್ತವಾದ 250/3 ರನ್ಗಳನ್ನು ದಾಖಲಿಸಿತು. ಇದು ಐಪಿಎಲ್ ಇತಿಹಾಸದಲ್ಲಿ ಸಿಎಸ್ಕೆ ವಿರುದ್ಧ ದಾಖಲಾದ ಅತ್ಯಧಿಕ ಮೊತ್ತವೂ ಹೌದು.
ಪಂದ್ಯದ ಫಲಿತಾಂಶ:
ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್ಗಳಿಗೆ ಆಲೌಟ್ ಆಗುವ ಮೂಲಕ 43 ರನ್ಗಳ ಸೋಲೊಪ್ಪಿಕೊಂಡಿತು. ಆರ್ಸಿಬಿ ಪರ ಭುವನೇಶ್ವರ್ ಕುಮಾರ್ (3/41) ಅಮೋಘ ಬೌಲಿಂಗ್ ಪ್ರದರ್ಶಿಸಿ, ಐಪಿಎಲ್ನಲ್ಲಿ 200 ವಿಕೆಟ್ ಪಡೆದ ಮೊದಲ ವೇಗಿ ಎಂಬ ಇತಿಹಾಸ ಬರೆದರು.
ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ.
ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ ಬಾರಿ ಗೆದ್ದು ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಈಗ ದಳಪತಿ ವಿಜಯ್ ಅವರು ಚುನಾವಣೆ ಪ್ರಚಾರ ಒಂದರಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ಒಂದು ಫನ್ ಘಟನೆ ನಡೆದಿದೆ. ವಿಜಯ್ ಅವರು ಹೋದಲ್ಲೆಲ್ಲ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಈಗಲೂ ಹಾಗೆಯೇ ಆಗಿದೆ. ಅವರು ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದರು ಮತ್ತು ಅಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು.
ಈ ರೀತಿ ಅಭಿಮಾನಿಗಳು ನೆರೆದಿರುವಾಗ ವಿಜಯ್ ಕಡೆಗೆ ಹೂವಿನ ಹಾರವನ್ನು ಎಸೆಯಲಾಯಿತು. ಅದನ್ನು ಭದ್ರತಾ ಸಿಬ್ಬಂದಿ ಹಿಡಿದುಕೊಂಡರು. ಆ ಬಳಿಕ ಅವರತ್ತ ಕನ್ನಡಕ ಎಸೆಲಾಯಿತು. ಇದನ್ನು ಅವರು ಚೆಂದ ಮಾಡಿ ಹಿಡಿದುಕೊಂಡರು, ಮತ್ತು ಸ್ಟೈಲಿಶ್ ಆಗಿ ಹಾಕಿಕೊಂಡರು. ಜೊತೆಗೆ ಕನ್ನಡಕವನ್ನು ಕೊಟ್ಟವನ ಕಡೆ ನೋಡಿದರು. ಈ ವಿಡಿಯೋ ಗಮನ ಸೆಳೆದಿದೆ.
ದಳಪತಿ ವಿಜಯ್ ಅವರ ಜನ ನಾಯಗನ್ ಸಿನಿಮಾ ಇನ್ನೂ ರಿಲೀಸ್ ಆಗಿಲ್ಲ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾಗೆ ಈವರೆಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿಲ್ಲ. ಇದು ಚಿತ್ರತಂಡಕ್ಕೆ ತಲೆಬಿಸಿ ತಂದಿದೆ. ಮುಂದೇನು ಎನ್ನುವ ಪ್ರಶ್ನೆ ಕಾಡುವಂತೆ ಮಾಡಿದೆ. ಚುನಾವಣೆ ಮುಗಿದ ಬಳಿಕ ಈ ಸಿನಿಮಾ ರಿಲೀಸ್ ಆಗಬಹುದು ಎಂದು ಊಹಸಿಲಾಗಿದೆ.
ಆ್ಯಂಕ್ ಅನುಶ್ರೀ (Anushree) ಅವರು ಹಲವು ಕಷ್ಟಗಳನ್ನು ನೋಡಿ ಇಲ್ಲಿವರೆಗೆ ಬಂದಿದ್ದಾರೆ. ಹಲವು ಏರಿಳಿತಗಳನ್ನು ಅವರು ಕಂಡಿದ್ದಾರೆ. ಅವರು ತುಂಬಾನೇ ಕಷ್ಟಪಟ್ಟು ಇಲ್ಲಿವರೆಗೆ ಬಂದಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಇದೆಲ್ಲವನ್ನೂ ಅವರು ಮೆಟ್ಟಿ ನಿಂತಿದ್ದಾರೆ. ಆದಾಗ್ಯೂ ಅವರಲ್ಲಿ ಒಂದು ಬೇಸರ ಇದೆ. ಈ ವಿಷಯವಾಗಿ ಅನುಶ್ರೀ ಅವರು ಮಾತನಾಡಿದ್ದಾರೆ.
ಆರ್ಜೆ ಮಯೂರ್ ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಹೊಂದಿದ್ದು ಇದಕ್ಕೆ , ‘ಗೋಲ್ಡನ್ ಕ್ಲಾಸ್ ವಿತ್ ಮಯೂರ’ ಎಂದು ಹೆಸರು ಇಟ್ಟುಕೊಂಡಿದ್ದಾರೆ. ಅನುಶ್ರೀ ಅವರು ಸದಾ ಸಂದರ್ಶನ ಮಾಡುತ್ತಿರುವವರು. ಅವರು ಈಗ ಸಂದರ್ಶನ ನೀಡಿದ್ದಾರೆ. ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಮಹಿಳಾ ಸೆಲೆಬ್ರಿಟಿಗಳು ಅಥವಾ ಚಿತ್ರರಂಗ ಯಾವುದೇ ಹೀರೋಯಿನ್ಗಳು ಇರಲಿ ಅವರು ಹೊಸ ಕಾರು ಖರೀದಿ ಮಾಡಿದರು, ಮನೆ ಖರೀದಿ ಮಾಡಿದರು ಎಂದರೆ ಅದನ್ನು ಬೇರೆಯದೇ ರೀತಿಯಲ್ಲಿ ನೋಡಲಾಗುತ್ತದೆ ಎಂಬುದು ಅನುಶ್ರೀ ಅಭಿಪ್ರಾಯ. ಈ ಅಭಿಪ್ರಾಯವನ್ನು ಅವರು ಓಪನ್ ಆಗಿ ಹೊರಹಾಕಿದರು.
‘ಅನುಶ್ರೀನೇ ಯಾಕೆ ಅಂತ ಅಲ್ಲ, ಮಹಿಳೆಯರೇ ಟಾರ್ಗೆಟ್ ಯಾಕೆ ಅನ್ನೋದು ಪ್ರಶ್ನೆ. ಮಯೂರ 1 ಕೋಟಿ ರೂಪಾಯಿ ಮನೆ ಖರೀದಿ ಮಾಡಿದ್ರು ಅಂದ್ರೆ ಅದು ಸಾಧನೆ. ಆದರೆ, ಅನುಶ್ರೀ ಮನೆ ತೆಗೆದುಕೊಂಡ್ರೆ ಅದು ಸಾಧನೆ ಅಲ್ಲ, ಬೇರೆನೆ’ ಎಂದು ಅನುಶ್ರೀ ಅವರು ವಿವರಿಸಿದರು.
ಫಿಸಿಕಲ್ ರೇಪ್ ಬೇರೆ, ಮೆಂಟಲ್ ರೇಪ್ ಕೂಡ ಇದೆ. ಕೆಲವರು ಸೈಕೋಗಳು ಕೆಟ್ಟ ರೀತಿಯಲ್ಲಿ ಮಾತನಾಡುತ್ತಾರೆ. ಕೆಟ್ಟ ಕೆಟ್ಟ ಕಮೆಂಟ್ಗಳನ್ನು ಹಾಕುತ್ತಾರೆ. ಕರ್ಕೊಂಡು ಹೋಗಿ ಕಾರಪುಡಿ ಹಾಕಬೇಕು ಎಂದೆಲ್ಲ ಹೇಳುತ್ತಾರೆ. ಈ ರೀತಿಯ ಶಬ್ದಗಳು, ಈ ರೀತಿಯ ಪದಗಳು ನೋವು ತರಿಸುತ್ತವೆ ಎಂದು ಅನುಶ್ರೀ ಬೇಸರ ಹೊರಹಾಕಿದರು.
ಅನುಶ್ರೀ ಅವರು ನೇರ ಮಾತುಗಳಿಗೆ ಖ್ಯಾತಿ ಪಡೆದವರು. ಅವರು ಏನೇ ಆದರೂ ಅದನ್ನು ಓಪನ್ ಆಗಿ ಹೇಳುತ್ತಾರೆ. ತಮಗೆ ಬರುವ ಟೀಕೆ ಬಗ್ಗೆ ಅವರು ಹಲವು ಬಾರಿ ನೇರ ಮಾತುಗಳಲ್ಲಿ ವಿವರಣೆ ನೀಡಿದ್ದು ಇದೆ. ಈಗ ಅವರು ಈಗ ಹೊಸ ವಿಷಯದ ಬಗ್ಗೆ ಮಾತನಾಡಿದ್ದಾರೆ.
ಒಡಿಶಾ, ಏಪ್ರಿಲ್ 06: ವ್ಯಕ್ತಿಯೊಬ್ಬ ಹಸು(Cow)ವಿನ ಕಾಲನ್ನು ಟ್ರಕ್ಗೆ ಕಟ್ಟಿ ದರದರನೆ ಎಳೆದೊಯ್ದ ಪರಿಣಾಮ ಅದರ ಕಾಲೇ ಕಿತ್ತು ಬಂದಿರುವ ಅಮಾನವೀಯ ಘಟನೆ ಒಡಿಶಾದ ಮಯೂರ್ಭಂಜ್ನಲ್ಲಿ ನಡೆದಿದೆ. ಟ್ರಕ್ ಚಾಲಕನೊಬ್ಬ ಹಸುವನ್ನು ತನ್ನ ವಾಹನದ ಹಿಂದೆ ಕಟ್ಟಿ ಹಲವಾರು ಮೀಟರ್ಗಳಷ್ಟು ಎಳೆದುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ-49 ರಲ್ಲಿ ಈ ಘಟನೆ ನಡೆದಿದ್ದು, ಚಾಲಕನನ್ನು ತಕ್ಷಣ ಬಂಧಿಸಿ ಭಾರೀ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಸುವಿನ ಹಿಂಗಾಲುಗಳನ್ನು ಹಗ್ಗದಿಂದ ಕಟ್ಟಿ ಟ್ರಕ್ನ ಹಿಂಭಾಗಕ್ಕೆ ಕಟ್ಟಲಾಗಿತ್ತು. ನಂತರ ರಸ್ತೆಯ ಉದ್ದಕ್ಕೂ ಎಳೆದೊಯ್ದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೈರಲ್ ಆಗುತ್ತಿದೆ. ಹಸುವಿನ ಒಂದು ಕಾಲು ಕಾಣೆಯಾಗಿದ್ದು, ದೇಹವು ತೀವ್ರವಾಗಿ ವಿರೂಪಗೊಂಡಿತ್ತು.
ಪೊಲೀಸರ ಪ್ರಾಥಮಿಕ ಹೇಳಿಕೆಗಳು ಕ್ರೌರ್ಯಕ್ಕೆ ಕಾರಣವಾದ ಘಟನೆಗಳ ಸಂಕೀರ್ಣ ಅನುಕ್ರಮವನ್ನು ಸೂಚಿಸುತ್ತವೆ. ಆರಂಭದಲ್ಲಿ ಹಸುವಿಗೆ ಅದೇ ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ಆ ಹಸು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಕ್ಕಿಯ ನಂತರ, ಸ್ಥಳೀಯರು ಚಾಲಕನಿಗೆ ಮೃತದೇಹವನ್ನು ಅಲ್ಲಿಂದ ತೆರವುಗೊಳಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ಸರಿಯಾದ ವಿಲೇವಾರಿ ಸೇವೆಗಳ ಮೂಲಕ ದೇಹವನ್ನು ಸ್ಥಳಾಂತರಿಸುವ ಬದಲು, ಚಾಲಕ ಪ್ರಾಣಿಯನ್ನು ತನ್ನ ಟ್ರಕ್ಗೆ ಜೋಡಿಸಿ ಸ್ಥಳದಿಂದ ದೂರ ಎಳೆದುಕೊಂಡು ಹೋಗಿದ್ದಾನೆ.
ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲು ಅನೇಕ ನಿವಾಸಿಗಳು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದು, ಪ್ರಾಣಿ ಕಲ್ಯಾಣ ಕಾನೂನುಗಳ ಪ್ರಕಾರ ನ್ಯಾಯ ಒದಗಿಸಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.
ನಟಿ ಸಪ್ತಮಿ ಗೌಡ ಅವರು ಇತ್ತೀಚೆಗೆ ಒಂದು ಆಂದೋಲನ ಆರಂಭಿಸಿದ್ದರು. ಪಾರಾಜಿಗಳು ಒಪ್ಪಿಗೆ ಇಲ್ಲದೆ ಬೇಕಾಬಿಟ್ಟಿ ವಿಡಿಯೋ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ವೈರಲ್ ಮಾಡುತ್ತಿದ್ದರು. ಇದನ್ನು ಸಪ್ತಮಿ ಗೌಡ ಅವರು ಖಂಡಿಸಿದ್ದರು. ಇದಕ್ಕೆ ಅನೇಕ ನಟಿಯರು ಬೆಂಬಲ ಸೂಚಿಸಿದ್ದರು. ಈಗ ಬಾಲಿವುಡ್ ಅಲ್ಲೂ ಇದೇ ರೀತಿ ಆಂದೋಲನ ಶುರುವಾಗುವ ಸೂಚನೆ ಸಿಕ್ಕಿದೆ.
ಕನ್ನಡಕ್ಕಿಂತ ಹಿಂದಿಯಲ್ಲಿ ಪಾಪರಾಜಿ ಸಂಸ್ಕೃತಿ ಮೊದಲು ಬಂದಿದೆ. ಅಲ್ಲಿನ ನಟಿಯರು ಅನೇಕ ಬಾರಿ ಈ ಬಗ್ಗೆ ತಕರಾರರು ತೆಗೆದಿದ್ದಾರೆ. ಈಗ ಜಾನ್ವಿ ಕಪುರ್ ಅವರು ಈ ಬಗ್ಗೆ ಓಪನ್ ಆಗಿ ಮಾತನಾಡಿದ್ದಾರೆ. ದೇಹದ ಕೆಲವು ಭಾಗಗಳನ್ನು ಜೂಮ್ ಮಾಡೋದು ಸರಿ ಅಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ.
‘ಪಾಪರಾಜಿ ಜೊತೆ ಇತ್ತೀಚೆಗೆ ನಾನು ಮಾತನಾಡಿದೆ. ನಾವು ಒಂದು ನಿರ್ದಿಷ್ಟ ರೀತಿಯಲ್ಲಿ ಉಡುಗೆ ತೊಟ್ಟಿರುತ್ತೇವೆ. ಹಾಗಂದ ಮಾತ್ರಕ್ಕೆ ಅವರು ನಿರ್ದಿಷ್ಟ ದೇಹದ ಭಾಗಗಳನ್ನು ಮಾತ್ರ ಜೂಮ್ ಮಾಡಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ಅವರು ಹಣ ಮಾಡಿಕೊಳ್ಳಲು, ವೀವ್ಸ್ ಪಡೆದುಕೊಳ್ಳಲು ಮಹಿಳೆಯ ದೇಹವನ್ನು ಮಾರಾಟ ಮಾಡುತ್ತಿದ್ದಾರೆ’ ಎಂದು ಜಾನ್ವಿ ಆಕ್ರೋಶ ಹೊರಹಾಕಿದ್ದಾರೆ.
‘ಗ್ರಾಹಕರಂತೆ ಕಾಣುತ್ತಿತ್ತು, ಆದರೆ ವಿಷಯವು ದೊಡ್ಡದಾಗಿದೆ – ಇದು ಬಳಕೆಯ ಬಗ್ಗೆ. ಜಾಗತಿಕವಾಗಿ, ಮಹಿಳೆಯರನ್ನು ವಸ್ತುನಿಷ್ಠವಾಗಿ ಚಿತ್ರಿಸುವ ವಿಷಯವು ಹೆಚ್ಚು ಬಳಕೆಯಲ್ಲಿದೆ. ಅದಕ್ಕಾಗಿಯೇ ಅದು ನಿರಂತರವಾಗಿ ಪ್ರಸಾರವಾಗುತ್ತಿದೆ. ನೀವು ಗ್ಲಾಮರ್ನಲ್ಲಿ ಸಾರ್ವಜನಿಕ ವ್ಯಕ್ತಿಯಾಗಿರುವುದರಿಂದ, ಅದು ನಿಮಗೆ ಹೆಚ್ಚು ಸಂಭವಿಸುತ್ತದೆ’ ಎಂದಿದ್ದಾರೆ.
‘ಮಹಿಳೆಯರನ್ನು ಕೆಟ್ಟದಾಗಿ ತೋರಿಸೋದು ವಿಶ್ವ ಮಟ್ಟದಲ್ಲಿ ನಡೆಯುತ್ತಿದೆ. ಇದನ್ನು ನೋಡುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಅದು ಪ್ರಸಾರ ಆಗುತ್ತಲೇ ಇರುತ್ತದೆ. ಅದರಲ್ಲೂ ಸೆಲೆಬ್ರಿಟಿ ಆದರೆ, ಈ ರೀತಿಯ ತೊಂದರೆ ಹೆಚ್ಚು’ ಎಂದು ಅವರು ಹೇಳಿದ್ದಾರೆ.
‘ನಾನು ಯಾವುದಕ್ಕೆ ಒಪ್ಪಿಗೆ ನೀಡಿದ್ದೇನೆ ಎಂಬುದನ್ನು ಪ್ರತಿ ಹಂತದಲ್ಲೂ ನೀವು ಕೇಳಬೇಕು. ನಾನು ‘ಭೀಗಿ ಸಾದಿ’ ಎಂಬ ಹಾಡನ್ನು ಮಾಡಿದ್ದೇನೆ. ಅಲ್ಲಿ ನಾನು ಒದ್ದೆಯಾದ ಸೀರೆಯಲ್ಲಿ ಡ್ಯಾನ್ಸ್ ಮಾಡಿದ್ದೇನೆ. ಯಾರಾದರೂ ಅದನ್ನು ಆಕರ್ಷಕ ಎಂದುಕೊಂಡರೆ ನನಗೆ ತೊಂದರೆ ಇಲ್ಲ. ಆದರೆ ಸಮ್ಮತಿಯಿಲ್ಲದೆ ಯಾರನ್ನಾದರೂ ತಪ್ಪಾಗಿ ತೋರಿಸುವುದು ಸರಿ ಅಲ್ಲ’ ಎಂದಿದ್ದಾರೆ ಅವರು.
ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.
“ನಿನ್ನೆ ವೈರಲ್ ಆಗಿರುವ ವಿಡಿಯೋಗಳು ಸುಮಾರು ಒಂದು ವರ್ಷದ ಹಿಂದಿನವು. ಆರೋಪಿ ಮುಪಿಜ್ ಮಿಯಾನವರ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ. ಆತ ಹೇಳಿದಂತೆ ನಾನು ವಿಡಿಯೋದಲ್ಲಿ ಮಾತನಾಡದಿದ್ದರೆ ಆ ದೃಶ್ಯಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆತನ ಒತ್ತಾಯಕ್ಕೆ ಮಣಿದು ನಾನು ಅಂದು ಆತನ ಪರವಾಗಿ ವಿಡಿಯೋ ಮಾಡಿದ್ದೆ. ಆದರೆ ಈಗ ಅದನ್ನೇ ಬಳಸಿಕೊಂಡು ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಯುವತಿ ಅಳಲು ತೋಡಿಕೊಂಡಿದ್ದಾರೆ.
ಇನ್ನು ವಿಡಿಯೋ ವೈರಲ್ ಮಾಡುವ ಹಿಂದೆ ಸ್ಥಳೀಯ ಕಾಂಗ್ರೆಸ್ ಮುಖಂಡನ ಕೈವಾಡವಿದೆ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾರೆ. “ಅಣ್ಣಾ, ನನಗೆ ಅನ್ಯಾಯವಾದಾಗ ಬಂದು ನನ್ನ ನೋವನ್ನು ಒಮ್ಮೆಯೂ ಕೇಳದ ನೀವು, ಈಗ ಹಳೆ ವಿಡಿಯೋಗಳನ್ನು ವೈರಲ್ ಮಾಡಿಸುತ್ತಿದ್ದೀರಿ. ನಿಮ್ಮ ಮನೆಯವರಿಗೆ ಅಥವಾ ನಿಮ್ಮ ಮಗಳಿಗೆ ಹೀಗಾಗಿದ್ದರೆ ನೀವು ಸುಮ್ಮನಿರುತ್ತಿದ್ದೀರಾ?” ಎಂದು ಯುವತಿ ಆಕ್ರೋಶಭರಿತವಾಗಿ ಪ್ರಶ್ನಿಸಿದ್ದಾರೆ.
ಕೇಶ್ವಾಪುರ ಠಾಣೆಯಲ್ಲಿ ಮುಪಿಜ್ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಈ ಹಿಂದೆ ಜಿಮ್ ಟ್ರೈನರ್ ಸಮೀರ್ ಮುಲ್ಲಾ ಪ್ರಕರಣದ ಬೆನ್ನಲ್ಲೇ ಈ ಎರಡನೇ ಪ್ರಕರಣ ಬೆಳಕಿಗೆ ಬಂದಿರುವುದು ನಗರದಲ್ಲಿ ಆತಂಕ ಮೂಡಿಸಿದೆ. ಹಳೆಯ ವಿಡಿಯೋಗಳನ್ನು ಬಳಸಿ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸಲಾಗುತ್ತಿದೆ ಎಂದು ಸಂತ್ರಸ್ತೆಯ ಪರವಾಗಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಮೇಲೆ ಅಲ್ಲಿ ಕೇವಲ ರನ್ಗಳ ಮಳೆ ಮಾತ್ರವಲ್ಲ, ಆಟಗಾರರ ನಡುವಿನ ವಾಕ್ಸಮರವೂ ಅಷ್ಟೇ ಜೋರಾಗಿರುತ್ತದೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂತಹದ್ದೇ ಒಂದು ಘಟನೆ ಅಭಿಮಾನಿಗಳ ಗಮನ ಸೆಳೆಯಿತು. ಸಿಎಸ್ಕೆ ವೇಗಿ ಖಲೀಲ್ ಅಹ್ಮದ್ ಮತ್ತು ಆರ್ಸಿಬಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು.
ಪಂದ್ಯದ ಮೂರನೇ ಓವರ್ನಲ್ಲಿ ಖಲೀಲ್ ಅಹ್ಮದ್ ಎಸೆದ ವೇಗದ ಎಸೆತವೊಂದನ್ನು ಹೊಡೆಯಲು ವಿರಾಟ್ ಕೊಹ್ಲಿ ವಿಫಲರಾದರು. ಈ ವೇಳೆ ಕೊಹ್ಲಿ ಹತ್ತಿರ ಬಂದ ಖಲೀಲ್ ಏನೋ ಅಂದಿದ್ದಾರೆ. ಇದರಿಂದ ಕೆರಳಿದ ವಿರಾಟ್ ಕೊಹ್ಲಿ, ಕೂಡಲೇ ಖಲೀಲ್ ಅವರ ಕಣ್ಣಲ್ಲಿ ಕಣ್ಣಿಟ್ಟು ದಿಟ್ಟಿಸಿ ನೋಡಿ ತಕ್ಕ ಪ್ರತ್ಯುತ್ತರ ನೀಡಿದರು. ಅಂಪೈರ್ ಮಧ್ಯಪ್ರವೇಶಿಸುವವರೆಗೂ ಇಬ್ಬರ ನಡುವೆ ಕಾವೇರಿದ ಚರ್ಚೆ ನಡೆಯಿತು.
ಬ್ಯಾಟ್ ಮೂಲಕವೇ ಉತ್ತರ ನೀಡಿದ ಕೊಹ್ಲಿ:
ಬೌಲರ್ ಕೆಣಕಿದರೆ ಸುಮ್ಮನೆ ಕೂರುವ ಆಟಗಾರ ಕೊಹ್ಲಿಯಲ್ಲ ಎಂಬುದು ಮತ್ತೊಮ್ಮೆ ಸಾಬೀತಾಯಿತು. ಮುಂದಿನ ಓವರ್ನಲ್ಲಿ ಮ್ಯಾಟ್ ಹೆನ್ರಿ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಅದ್ಭುತವಾದ ‘ನೋ-ಲುಕ್’ (No-look) 85 ಮೀಟರ್ಗಳ ಸಿಕ್ಸರ್ ಸಿಡಿಸುವ ಮೂಲಕ ಮೈದಾನದಲ್ಲಿದ್ದ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಇದು ಖಲೀಲ್ ಅವರ ಸ್ಲೆಡ್ಜಿಂಗ್ಗೆ ಕೊಹ್ಲಿ ನೀಡಿದ ಉತ್ತರವಾಗಿತ್ತು.
ಅದುವರೆಗೂ ತದೇಕಚಿತ್ತದಿಂದ ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿ ಕೆಣಕಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದರು. ಅಲ್ಲಿಂದ ಶುರುವಾದ ಆರ್ಸಿಬಿ ತಂಡದ ಸಿಡಿಲಬ್ಬರ ನಿಂತದ್ದು 20ನೇ ಓವರ್ನಲ್ಲಿ. ಅಂದರೆ ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ಗೆ ಒತ್ತು ನೀಡಿದ ಕೊಹ್ಲಿಯನ್ನು ಕೆಣಕಿ ಚೆನ್ನೈ ಸೂಪರ್ ಕಿಂಗ್ಸ್ ದೊಡ್ಡ ತಪ್ಪು ಮಾಡಿತು.
ಪರಿಣಾಮ ವಿರಾಟ್ ಕೊಹ್ಲಿ 18 ಎಸೆತಗಳಲ್ಲಿ 28 ರನ್ ಬಾರಿಸಿ ಆರ್ಸಿಬಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ಸಿಡಿಲಬ್ಬರವನ್ನು ಮುಂದುವರೆಸುವ ಮೂಲಕ ಆರ್ಸಿಬಿ 20 ಓವರ್ಗಳಲ್ಲಿ 250 ರನ್ ಕಲೆಹಾಕಿತು. ಇದನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್ಗಳಲ್ಲಿ 207 ರನ್ಗಳಿಸಿ, 43 ರನ್ಗಳಿಂದ ಸೋಲೊಪ್ಪಿಕೊಂಡಿತು.
ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 97ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)