Category Archives: Blog

Your blog category

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ – Kannada News | PM Narendra Modi Attends Christmas Prayer at Cathedral Church of the Redemption in Delhi

ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಂದೇಶದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ.

(ವಿಡಿಯೋ ಕೃಪೆ: ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಖಾತೆ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಾರ್ಮಿಕವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು? – Kannada News | DK Sureshs Cryptic Post Amidst Karnataka Power Tussle Sparks Debate

ಬೆಂಗಳೂರು, ಡಿಸೆಂಬರ್​​ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಅಧಿಕಾರ ರಾಜಕೀಯದ ನಡುವೆ, ಡಿ.ಕೆ. ಸುರೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಾರ್ಮಿಕ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪಾಟೀಲ ಪುಟ್ಟಪ್ಪನವರ ಹೇಳಿಕೆಯಾದ ‘ಗುರಿಯನ್ನ ಬೇಗ ತಲುಪಬೇಕು ಅನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು’ ಎಂಬ ವಾಕ್ಯವನ್ನು ಡಿ.ಕೆ. ಸುರೇಶ್ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಯಾರನ್ನು ಉದ್ದೇಶಿಸಿದೆ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ – Kannada News | 45 Kannada Movie director Arjun Janya reaction to fans funny reviews

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಇದೇ ಮೊದಲ ಬಾರಿಗೆ ‘45’ ಸಿನಿಮಾ (45 Kannada Movie) ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಮೊದಲ ದಿನ ಸಿನಿಮಾ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ವಿಮರ್ಶೆ ತಿಳಿಸಿದ್ದಾರೆ. ‘ಅರ್ಜುನ್ ಜನ್ಯ ಅವರು ಇದು ತಮ್ಮ ಮೊದಲ ಸಿನಿಮಾ ಅಂತ ಸುಳ್ಳು ಹೇಳಿದ್ದಾರೆ. ಮೊದಲ ಸಿನಿಮಾದಲ್ಲಿ ಯಾರೂ ಕೂಡ ಇಷ್ಟು ಚೆನ್ನಾಗಿ ಮಾಡೋಕೆ ಆಗಲ್ಲ. ಮೊದಲ ಸಿನಿಮಾ ಅಂತ ಹೇಳಿದ್ದಕ್ಕೆ ಅವರ ವಿರುದ್ಧ ನಾನು ಪೊಲೀಸ್ ಕಂಪ್ಲೇಂಟ್ ಕೊಡುತ್ತೇನೆ’ ಎಂದು ಅಭಿಮಾನಿಯೊಬ್ಬರು ಹೇಳಿದ್ದರು. ಅದಕ್ಕೆ ಅರ್ಜುನ್ ಜನ್ಯ ಪ್ರತಿಕ್ರಿಯಿಸಿದ್ದಾರೆ. ‘ಆ ವಿಡಿಯೋ ನಾನು ನೋಡಿದೆ. ಅವರು ಬಹಳ ಕ್ಯೂಟ್ ಆಗಿ ಹೇಳಿದ್ದಾರೆ. ಅದಕ್ಕಾಗಿ ಧನ್ಯವಾದಗಳು. ಆ ವಿಮರ್ಶೆಯನ್ನು ಅವರು ತಮಾಷೆಯಾಗಿ ಹೇಳಿರಬಹುದು. ಆದರೆ ಬಹಳ ಸತ್ಯವಾಗಿ ಹೇಳಿದ್ದಾರೆ. ಮೂವರು ಸ್ಟಾರ್ ನಟರು ಇರುವ ಸಿನಿಮಾವನ್ನು ನಾನು ಹೆಂಗೆಂಗೋ ಮಾಡೋಕೆ ಆಗಲ್ಲ. ಬ್ಯಾಲೆನ್ಸ್ ಮಾಡುವ ದೊಡ್ಡ ಜವಾಬ್ದಾರಿ ನನ್ನ ಮೇಲಿತ್ತು’ ಎಂದು ಅರ್ಜುನ್ ಜನ್ಯ ಅವರು ಹೇಳಿದ್ದಾರೆ. ಶಿವರಾಜ್​ಕುಮಾರ್ (Shivarajkumar), ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗರ್ಭಿಣಿಯರೇ… ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ – Kannada News | Stay Warm in Pregnancy: Research on Baby’s Weight Link

ಚಳಿ (Cold) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ವಾತಾವರಣದಲ್ಲಿ, ಗರ್ಭಿಣಿಯರು (Pregnancy) ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇತ್ತೀಚೆಗೆ ಪ್ರಕಟವಾದ ಅಂತರಾಷ್ಟ್ರೀಯ ಸಂಶೋಧನೆಯೊಂದು ಗರ್ಭಾವಸ್ಥೆಯಲ್ಲಿ ಶೀತಕ್ಕೆ ಅತಿಯಾಗಿ ಒಡ್ಡಿಕೊಳ್ಳುವುದರಿಂದ ಶಿಶುವಿನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಬಹಿರಂಗಪಡಿಸಿದೆ. ಈ ಸಂಶೋಧನೆಯು ಪಬ್‌ಮೆಡ್‌ನಲ್ಲಿ ಪ್ರಕಟವಾದ ವೈಜ್ಞಾನಿಕ ಅಧ್ಯಯನ ಮತ್ತು ಇತರ ಜಾಗತಿಕ ಆರೋಗ್ಯ ಸಂಸ್ಥೆಗಳ ಡೇಟಾವನ್ನು ಆಧರಿಸಿದ್ದು ಗರ್ಭಿಣಿಯರು ಈ ಕುರಿತು ತಿಳಿಯುವುದು ಅನಿವಾರ್ಯವಾಗಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ ಪ್ರಮುಖ ಅಂಶವಾಗಬಹುದು ಎಂದು ಸಂಶೋಧಕರು ಹೇಳುತ್ತಿದ್ದು ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಚಳಿಯ ವಾತಾವರಣ ಮಗುವಿನ ತೂಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಸಂಶೋಧನೆಯ ಪ್ರಕಾರ, ಗರ್ಭಾವಸ್ಥೆಯಲ್ಲಿ ತುಂಬಾ ಚಳಿಯಿದ್ದರೆ, ಕೆಲವು ಸಂದರ್ಭಗಳಲ್ಲಿ, ಜನನದ ಸಮಯದಲ್ಲಿ ಮಗುವಿನ ತೂಕವು ಸಾಮಾನ್ಯಕ್ಕಿಂತ ಕಡಿಮೆಯಿರಬಹುದು. ತಾಪಮಾನದಲ್ಲಿನ ನಿರಂತರ ಕುಸಿತ ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ. ಅದರಲ್ಲಿಯೂ ಎರಡನೇ ಮತ್ತು ಮೂರನೇ ತ್ರೈಮಾಸಿಕಗಳಲ್ಲಿ ಹವಾಮಾನದ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಇದು ಎಲ್ಲರಿಗೂ ಒಂದೇ ರೀತಿಯಾಗಿರಬೇಕೆಂದಿಲ್ಲ. ಆದರೆ ಪರಿಸರ, ಆರೋಗ್ಯ ಸ್ಥಿತಿಗಳಂತಹ ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ಸಂಶೋಧಕರು ಸ್ಪಷ್ಟಪಡಿಸಿದ್ದಾರೆ. ದತ್ತಾಂಶದ ಆಧಾರದ ಮೇಲೆ, ಚಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಜನಿಸಿದ ಕೆಲವು ಶಿಶುಗಳು ಸಾಮಾನ್ಯಕ್ಕಿಂತ ಕಡಿಮೆ ತೂಕವನ್ನು ಹೊಂದಿರುವುದು ಕಂಡುಬಂದಿದೆ.

ಮಗುವಿನಲ್ಲಿ ಯಾವ ರೀತಿಯ ಸಮಸ್ಯೆಗಳು ಕಂಡುಬರಬಹುದು?

ಆರ್‌ಎಂಎಲ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಡಾ. ಸಲೋನಿ ಚಡ್ಡಾ ಅವರ ಪ್ರಕಾರ, ಕಡಿಮೆ ಜನನ ತೂಕದೊಂದಿಗೆ ಜನಿಸಿದ ಶಿಶುಗಳು ಆರಂಭದಲ್ಲಿ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬಹುದು. ಸಂಶೋಧನೆಯ ಪ್ರಕಾರ, ಅಂತಹ ಮಕ್ಕಳು ಸೋಂಕುಗಳಿಗೆ ಹೆಚ್ಚು ಒಳಗಾಗುತ್ತಾರೆ ಮತ್ತು ಅವುಗಳಿಗೆ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ಅಷ್ಟೇ ಅಲ್ಲ, ಕೆಲವರಲ್ಲಿ ಉಸಿರಾಟದ ತೊಂದರೆ, ದೌರ್ಬಲ್ಯ ಅಥವಾ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ತೊಂದರೆ ಉಂಟಾಗಬಹುದು. ಕೆಲವು ಸಂದರ್ಭಗಳಲ್ಲಿ, ನಂತರದ ದಿನಗಳಲ್ಲಿ ಬೆಳವಣಿಗೆಯ ಸಮಸ್ಯೆ ಕೂಡ ಕಂಡುಬರಬಹುದು. ಆದರೆ ಸಮಯೋಚಿತ ಆರೈಕೆ ಇಂತಹ ಅಪಾಯಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ಯಾವ ರೀತಿ ಕಾಳಜಿ ವಹಿಸಬೇಕು?

  • ಚಳಿಗಾಲದಲ್ಲಿ ನಿಮ್ಮ ದೇಹವನ್ನು ಯಾವಾಗಲೂ ಬೆಚ್ಚಗಿಟ್ಟುಕೊಳ್ಳಿ.
  • ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ.
  • ನಿಯಮಿತವಾಗಿ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಿ.
  • ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡುವುದನ್ನು ಮರೆಯಬೇಡಿ.
  • ಶೀತ, ಜ್ವರ ಅಥವಾ ಯಾವುದೇ ಇತರ ಅಸ್ವಸ್ಥತೆಯನ್ನು ನಿರ್ಲಕ್ಷಿಸಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​ – Kannada News | 22 Private Colleges Under Mangaluru University to Shut Down Due to Decline in Student Admissions

ಮಂಗಳೂರು, ಡಿಸೆಂಬರ್​​ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ‌ ಈ ಕಾಲೇಜುಗಳು ಬಂದ್​​ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ.

ಮುಚ್ಚಲಿರುವ ಕಾಲೇಜುಗಳು:

  1. ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು ಸುರತ್ಕಲ್
  2. ಅಂಜುಮನ್ ಪ್ರಥಮ ದರ್ಜೆ ಕಾಲೇಜು, ಮಂಗಳೂರು
  3. ಅಮೃತ ಕಾಲೇಜು, ಪಡೀಲ್
  4. ಸಿಲಿಕಾನ್ ಕಾಲೇಜ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್, ಕೊಂಚಾಡಿ
  5. ಮೊಗ್ಲಿಂಗ್ ಇನ್ಸ್ಟಿಟ್ಯೂಟ್ ಆಫ್ ಜರ್ಮನ್ ಲ್ಯಾಂಗ್ವೇಜ್, ಬಲ್ಮಠ
  6. ಸಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಮಂಗಳೂರು
  7. ರೊಸಾರಿಯೊ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಬೋಳಾರ
  8. ಕರಾವಳಿ ಕಾಲೇಜ್ ಆಫ್ ಎಜುಕೇಶನ್
  9. ಪ್ರೇಮಕಾಂತಿ ಕಾಲೇಜ್ ಆಫ್ ಎಜುಕೇಶನ್
  10. ಸೇಪಿಯೆನ್ಶಿಯ ಬೆಥನಿ ಪ್ರಥಮ ದರ್ಜೆ ಕಾಲೇಜು, ನೆಲ್ಯಾಡಿ
  11. ಶಾರದಾ ಮಹಿಳಾ ಕಾಲೇಜು, ಸುಳ್ಯ
  12. ರಾಮಕುಂಜೇಶ್ವರ ಕಾಲೇಜು
  13. ಹಝ್ರತ್ ಸಯ್ಯದ್ ಮದನಿ ಮಹಿಳಾ ಕಾಲೇಜು, ಉಳ್ಳಾಲ
  14. ಸೇಂಟ್ ಸೆಬಾಸ್ಟಿಯನ್ ಕಾಲೇಜ್ ಆಫ್ ಕಾಮರ್ಸ್
  15. ಸೇಂಟ್ ಥಾಮಸ್ ಕಾಲೇಜು, ಬೆಳ್ತಂಗಡಿ
  16. ಮಾರ್ ಇವಾನಿಯೋಸ್ ಕಾಲೇಜು, ಕಡಬ
  17. ಮಾಧವ ಪೈ ಕಾಲೇಜು, ಮಣಿಪಾಲ
  18. ಮೂಕಾಂಬಿಕಾ ಪ್ರಥಮ ದರ್ಜೆ ಕಾಲೇಜು, ಬೈಂದೂರು
  19. ವರಸಿದ್ಧಿ ವಿನಾಯಕ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
  20. ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಐರೋಡಿ ಉಡುಪಿ
  21. ವಿದ್ಯಾನಿಕೇತನ ಪ್ರಥಮ ದರ್ಜೆ ಕಾಲೇಜು‌, ಕಾಪು
  22. ಕೃಷ್ಣಭಾಯಿ ವಾಸುದೇವ್ ಶೆಣೈ ಸ್ಮಾರಕ ಕಾಲೇಜು, ಕಟಪಾಡಿ

ಇದನ್ನೂ ಓದಿ: ಪೋಷಕರೇ ಗಮನಿಸಿ; ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ತೀವ್ರ ಕೊರತೆ ಉಂಟಾಗಿದ್ದು, ಬಹುತೇಕ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿ ಕಾರ್ಯ ನಿರ್ವಹಿಸಬೇಕಾದ ಸ್ಥಿತಿ ಉದ್ಭವಿಸಿರುವ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು. ಹಳೆಯ ವಿಶ್ವವಿದ್ಯಾಲಯಗಳು ತೀವ್ರ ಅಧ್ಯಾಪಕರ ಕೊರತೆ ಎದುರಿಸುತ್ತಿದ್ದರೆ, ಹೊಸದಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯಗಳು ಪರ್ಯಾಪ್ತ ಬೋಧಕರು ಅಥವಾ ಸರ್ಕಾರಿ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಹೊಸ ವಿಶ್ವವಿದ್ಯಾಲಯಗಳು ಶುಲ್ಕವನ್ನು ಭಾರಿಯಾಗಿ ಹೆಚ್ಚಿಸಬೇಕಾದ ಪರಿಸ್ಥಿತಿ ಉಂಟಾಗಿ, ವಿದ್ಯಾರ್ಥಿಗಳ ದಾಖಲಾತಿಯೂ ಕಡಿಮೆಯಾಗುತ್ತಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Personality Test: ಕಣ್ಣಿನ ಬಣ್ಣದಿಂದ ತಿಳಿಯಬಹುದು ವ್ಯಕ್ತಿಯ ವ್ಯಕ್ತಿತ್ವದ ರಹಸ್ಯ – Kannada News | Personality Test: Find out what your personality secret is based on your eye color

ವ್ಯಕ್ತಿತ್ವ ಪರೀಕ್ಷೆImage Credit source: vecteezy

ಸಾಮಾನ್ಯವಾಗಿ ನಾವೆಲ್ಲರೂ ನಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು, ಗುಣಸ್ವಭಾವ ಹೇಗಿದೆ ಎಂಬುದನ್ನು ತಿಳಿಯಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗಿಣಿಶಾಸ್ತ್ರ, ಹಸ್ತಶಾಸ್ತ್ರ ಇತ್ಯಾದಿಗಳನ್ನು ಅವಲಂಬಿಸುತ್ತೇವೆ. ಇದು ಮಾತ್ರವಲ್ಲದೆ ಕಣ್ಣು, ಕಿವಿ, ಮೂಗು, ಹಣೆ, ಪಾದದ ಆಕಾರ, ಕೈಬೆರಳುಗಳ ಆಕಾರ ಮೂಲಕವೂ ಸ್ವತಃ ನಾವೇ ನಮ್ಮ ವ್ಯಕ್ತಿತ್ವ (Personality) ಹೇಗಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಬಹುದು. ಅದೇ ರೀತಿ ಕಣ್ಣಿನ ಬಣ್ಣದ ಮೂಲಕವೂ ವ್ಯಕ್ತಿಯ ಸ್ವಭಾವ, ನಡವಳಿಕೆ ಹೇಗಿದೆ ಎಂಬುದನ್ನು ಪರೀಕ್ಷಿಸಬಹುದು. ಬಹುತೇಕರ ಕಣ್ಣಿನ ಬಣ್ಣ ಕಪ್ಪಾಗಿದ್ದರೆ ಇನ್ನೂ ಕೆಲವರ ಕಣ್ಣು ಕಂದು, ನೀಲಿ, ಹಸಿರು ಬಣ್ಣದ್ದಾಗಿರುತ್ತದೆ. ಇಂದಿನ ಈ ಪರ್ಸನಾಲಿಟಿ ಟೆಸ್ಟ್‌ನಲ್ಲಿ ಕಣ್ಣಿನ ಬಣ್ಣದ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ.

ಕಣ್ಣಿನ ಬಣ್ಣದ ಮೂಲಕ ವ್ಯಕ್ತಿತ್ವದ ರಹಸ್ಯವನ್ನು ತಿಳಿಯಿರಿ:

ಕಪ್ಪು ಬಣ್ಣ: ಹೆಚ್ಚಿನ ಜನರು ಕಪ್ಪು ಬಣ್ಣದ ಕಣ್ಣುಗಳನ್ನು ಹೊಂದಿರುತ್ತಾರೆ. ಕಪ್ಪು ಕಣ್ಣುಗಳನ್ನು ಹೊಂದಿರುವ ತುಂಬಾನೇ ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ. ಅವರು ತಮ್ಮ ಕೆಲಸದಲ್ಲಿ ಬಹಳ ನುರಿತರು. ಇವರು ಏನೇ ಮಾಡಿದರೂ, ಅದನ್ನು ಪೂರ್ಣ ಹೃದಯದಿಂದ ಮಾಡುತ್ತಾರೆ ಮತ್ತು ತಮ್ಮ ಕೆಲಸವನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಮುಂಚಿತವಾಗಿಯೇ ಯೋಜಿಸುತ್ತಾರೆ. ಇವರು ತಮ್ಮ ಕಠಿಣ ಪರಿಶ್ರಮದ ಮೂಲಕವೇ ಉನ್ನತ ಸ್ಥಾನಕ್ಕೆ ಏರುತ್ತಾರೆ. ಇಷ್ಟು ಮಾತ್ರವಲ್ಲದೆ ಇವರು ತಮ್ಮ ಸಂಗಾತಿಯ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿರುತ್ತಾರೆ. ಮತ್ತು ಇವರು ನಂಬಿಕೆಗೆ ಅರ್ಹರು.

ಕಂದು ಕಣ್ಣುಗಳು: ಕಂದು ಬಣ್ಣದ ಕಣ್ಣುಗಳನ್ನು ಹೊಂದಿರುವ ಜನರು ಸ್ವಾಭಾವಿಕವಾಗಿ ತುಂಬಾ ಒಳ್ಳೆಯವರು. ಅವರಿಗೆ ಜನರನ್ನು ಹೇಗೆ ಆಕರ್ಷಿಸಬೇಕೆಂದು ಬಹಳ ಚೆನ್ನಾಗಿ ತಿಳಿದಿದೆ. ಅಲ್ಲದೆ ಇತರರು ಇವರತ್ತ ಬಲು ಸುಲಭವಾಗಿ ಆಕರ್ಷಿತರಾಗುತ್ತಾರೆ. ಇವರು ಎಲ್ಲಾ ಕಷ್ಟಗಳನ್ನು ಬಹಳ ಬುದ್ಧಿವಂತಿಕೆಯಿಂದ ಎದುರಿಸುತ್ತಾರೆ, ತುಂಬಾ ಸೃಜನಶೀಲರಾದ ಇವರು ಯಾವಾಗಲೂ ಹೊಸ ವಿಷಯಗಳನ್ನು ಕಲಿಯುವಲ್ಲಿ ತುಂಬಾನೇ ಆಸಕ್ತಿಯನ್ನು ಹೊಂದಿರುತ್ತಾರೆ. ಅಲ್ಲದೆ ಇವರು ಜೀವನದಲ್ಲಿ ಪ್ರೀತಿಗೆ ಹೆಚ್ಚಿನ ಮಹತ್ವವನ್ನು ನೀಡುವ ವ್ಯಕ್ತಿಗಳಾಗಿದ್ದಾರೆ.

ಬೂದು ಬಣ್ಣದ ಕಣ್ಣುಗಳು:  ಬೂದು ಬಣ್ಣದ ಕಣ್ಣುಗಳನ್ನು ಹೊಂದಿರುವವರು ತುಂಬಾ ಮುಕ್ತ ಮನಸ್ಸಿನವರು. ಅವರು ತಮ್ಮ ಜೀವನದಲ್ಲಿ ಸ್ವಾತಂತ್ರ್ಯವನ್ನು ಆನಂದಿಸುತ್ತಾರೆ. ಅವರು ತಮ್ಮ ಕುಟುಂಬ ಸದಸ್ಯರೊಂದಿಗೆಯೂ ಇದೇ ರೀತಿಯ ವಾತಾವರಣವನ್ನು ಕಾಯ್ದುಕೊಳ್ಳುತ್ತಾರೆ. ನೇರ ಸ್ವಭಾವದ ವ್ಯಕ್ತಿಗಳಾದ ಇವರು ಯಾರ ಬಗ್ಗೆಯೂ ಬೆನ್ನ ಹಿಂದೆ ಮಾತನಾಡುವುದಿಲ್ಲ.

ನೀಲಿ ಕಣ್ಣುಗಳು: ನೀಲಿ ಬಣ್ಣದ ಕಣ್ಣುಗಳನ್ನು ಹೊಂದಿರುವ ಜನರು ತಮ್ಮ ಜೀವನದಲ್ಲಿ ಸ್ಥಿರತೆಯನ್ನು ಬಯಸುತ್ತಾರೆ ಮತ್ತು ಇತರರಿಗೆ ಸಹಾಯ ಮಾಡಲು ಇಷ್ಟಪಡುವವರಾಗಿರುತ್ತಾರೆ. ಆದರೆ ಕೆಲವೊಮ್ಮೆ, ಇತರರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ, ಅವರು ತಮ್ಮನ್ನು ತಾವು ಹಾನಿ ಮಾಡಿಕೊಳ್ಳುತ್ತಾರೆ. ಇದರ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕು.

ಇದನ್ನೂ ಓದಿ: ನಿಮ್ಮ ಜೀವನದಲ್ಲಿನ ದೊಡ್ಡ ದೌರ್ಬಲ್ಯ ಯಾವುವು ಎಂಬುದನ್ನು ತಿಳಿಸುತ್ತೆ ಚಿತ್ರ

ಹಸಿರು ಕಣ್ಣುಗಳು:  ಹಸಿರು ಕಣ್ಣುಗಳನ್ನು ಹೊಂದಿರುವ ಜನರು ತುಂಬಾ ಕುತೂಹಲ ಸ್ವಭಾವದ ವ್ಯಕ್ತಿಗಳು ಮತ್ತು ಬುದ್ಧಿವಂತರು. ಅವರು ಯಾವಾಗಲೂ ಏನನ್ನಾದರೂ ತಿಳಿದುಕೊಳ್ಳಲು, ರಹಸ್ಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ ಮತ್ತು ತಮ್ಮ ಬುದ್ಧಿವಂತಿಕೆಯಿಂದ ಅದರಲ್ಲಿ ಯಶಸ್ಸನ್ನೂ ಸಹ ಸಾಧಿಸುತ್ತಾರೆ. ಅಲ್ಲದೆ ಇವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಉತ್ಸಾಹವನ್ನು ಹೊಂದಿರುತ್ತಾರೆ. ಜೀವನವನ್ನು ಚೆನ್ನಾಗಿ ಆನಂದಿಸಲು ಬಯಸುವ ವ್ಯಕ್ತಿಗಳು ಇವರು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪದೇ ಪದೇ ಕರೆಂಟ್​​ ತೆಗೆಯುತ್ತಿದ್ದ ಪವರ್​​ ಅಧಿಕಾರಿಗಳಿಗೆ ಶಾಕ್​​ ಕೊಟ್ಟ ಶಾಸಕ – Kannada News | MLA Virendra Jati Disconnects Officials’ Electricity in Haridwar After Power Cuts

ಹರಿದ್ವಾರ, ಡಿ25: ಅಧಿಕಾರಿಗಳು ಜನರನ್ನು ಗೋಳಾಡಿಸುವುದನ್ನು ನೋಡಿರಬಹುದು, ಆದರೆ ಒಬ್ಬ ಜನಪ್ರತಿನಿಧಿಯನ್ನು ಅಧಿಕಾರಿಗಳು ಆಟ ಆಡಿಸುವುದನ್ನು ನೋಡಿರಲು ಸಾಧ್ಯವಿಲ್ಲ. ಶಾಸಕರೊಬ್ಬರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರ (Haridwar) ಜಿಲ್ಲೆಯ ಝಬ್ರೆಡಾದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ ಅವರು, ಪ್ರತಿದಿನ ತನ್ನ ಏರಿಯಾದಲ್ಲಿ ವಿದ್ಯುತ್ ಕಡಿತದಿಂದ ಬೇಸತ್ತು. ತಾವೇ ವಿದ್ಯುತ್ ಕಂಬ ಹತ್ತಿ ಇಲಾಖೆಯ ಮೂವರು ಅಧಿಕಾರಿಗಳ ಮನೆಯ ವಿದ್ಯುತ್ ಕಡಿತಗೊಳಿಸಿದ್ದಾರೆ. ವಿದ್ಯುತ್ ಕಡಿತದ ಕುರಿತು ವಿದ್ಯುತ್ ಇಲಾಖೆಯು ಶಾಸಕರ ವಿರುದ್ಧ ರೂರ್ಕಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಂಡ ಮೂವರಲ್ಲಿ ವಿದ್ಯುತ್ ಇಲಾಖೆಯ ಮುಖ್ಯ ಎಂಜಿನಿಯರ್ ಕೂಡ ಒಬ್ಬರು ಎಂದು ಹೇಳಲಾಗಿದೆ.

ಶಾಸಕ ವೀರೇಂದ್ರ ಜಾತಿ ತಮ್ಮ ಬೆಂಬಲಿಗರ ಸಹಾಯದಿಂದ ಏಣಿ ಮತ್ತು ಕತ್ತರಿಯನ್ನು ಹಿಡಿದುಕೊಂಡ ಅಧಿಕಾರಿಗಳ ಮನೆಯ ಮುಂದೆ ಇರುವ ವಿದ್ಯುತ್​​ ಕಂಬ ಮುಂದೆ ಬಂದಿದ್ದಾರೆ. ಮೊದಲು ಬೋಟ್ ಕ್ಲಬ್‌ನಲ್ಲಿರುವ ಸೂಪರಿಂಟೆಂಡಿಂಗ್ ಎಂಜಿನಿಯರ್ ವಿವೇಕ್ ರಜಪೂತ್ ಅವರ ಅಧಿಕೃತ ನಿವಾಸದ ಹೊರಗಿನ ವಿದ್ಯುತ್ ಕಂಬವನ್ನು ಹತ್ತಿ ಅವರ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇದಾದ ನಂತರ, ಶಾಸಕರು ಮುಖ್ಯ ಎಂಜಿನಿಯರ್ ಅನುಪಮ್ ಸಿಂಗ್ ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್ ವಿನೋದ್ ಪಾಂಡೆ ಅವರ ಅಧಿಕೃತ ನಿವಾಸದ ಬಳಿ ಇರುವ ವಿದ್ಯುತ್​​ ಕಂಬ ಹತ್ತಿ ವಿದ್ಯುತ್​​​ ಕಟ್​​ ಮಾಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಶಾಸಕರು, “ನಮ್ಮ ಏರಿಯಾದಲ್ಲಿ ದಿನಕ್ಕೆ ಐದರಿಂದ ಎಂಟು ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಮತ್ತು ವ್ಯಾಪಾರದಲ್ಲಿ ಗಮನಾರ್ಹ ನಷ್ಟ ಉಂಟಾಗುತ್ತಿದೆ. ವಿದ್ಯುತ್ ಕಡಿತದ ವಿಷಯದ ಬಗ್ಗೆ 10 ದಿನಗಳಿಂದ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ರು, ಯಾವುದೇ ಕ್ರಮ ತೆಗೆದಿಕೊಂಡಿಲ್ಲ. ಈಗ ಅವರ ಮನೆಯಲ್ಲಿ ಒಂದು ಗಂಟೆ ಕರೆಂಟ್​​​ ಇಲ್ಲದಕ್ಕೆ ಹೇಗೆ ನರಳಾಡಿದ್ದಾರೆ. ಪ್ರತಿದಿನ ನಮ್ಮ ಏರಿಯಾದಲ್ಲಿ ಜನ ಗಂಟೆಗಟ್ಟಲೆ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಇನ್ನು ಶಾಸಕರು ಹೀಗೆ ಮಾಡಿದಕ್ಕೆ ಶಾಸಕರ ವಿರುದ್ಧ ಇಲಾಖೆ ನೀಡಿದ ದೂರಿನಲ್ಲಿ, ನಮಗೆ ತಿಳಿಸದೆ, ತಪ್ಪಾಗಿ ವಿದ್ಯುತ್​​ ಕಡಿತ ಮಾಡಿದ್ದಾರೆ. ಸರಿಯಾದ ರೀತಿಯಲ್ಲಿ ಕರೆಂಟ್​​​ ತೆಗೆದಿಲ್ಲ. ಇದು ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಇದು ನಿಯಮಗಳ ಉಲ್ಲಂಘನೆ ಮಾತ್ರವಲ್ಲದೆ, ಸರ್ಕಾರಿ ಕೆಲಸದಲ್ಲಿ ನೇರ ಹಸ್ತಕ್ಷೇಪವೂ ಆಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು – Kannada News | Bigg Boss Kannada new promo: Kavya cried because of Bigg Boss order

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ಎಲ್ಲ ಸ್ಪರ್ಧಿಗಳ ಪೋಷಕರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿಗೆ, ಕಾವ್ಯಾ ಮನೆಯವರ ಬಗ್ಗೆ ಭಯ ಇತ್ತು. ಇದೀಗ ಕಾವ್ಯಾ ಮನೆಯವರು ಸಹ ಬಂದಿದ್ದಾರೆ. ಆದರೆ ಮನೆಗೆ ಬಂದವರೇ ಬಿಗ್​​ಬಾಸ್ ನಿಯಮವನ್ನು ಮುರಿದಿದ್ದಾರೆ. ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ ಹೊರಗೆ ಕರೆಸಿಕೊಂಡಿದ್ದಾರೆ. ಇದರಿಂದ ಕಾವ್ಯಾ ಕಣ್ಣೀರು ಹಾಕಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​ – Kannada News | Chikkaballapur KSRTC Bus Theft, MP Gang Member Arrested, 55 Lakh Recovered

ಚಿಕ್ಕಬಳ್ಳಾಪುರ, ಡಿಸೆಂಬರ್​​ 25: ಊಟಕ್ಕೆ ನಿಲ್ಲಿಸಿದ್ದ ವೇಳೆ ಬೆಂಗಳೂರು-ಹೈದರಾಬಾದ್​​ KSRTC ಎಸಿ ಸ್ಲೀಪರ್​​ ಬಸ್​ನಲ್ಲಿದ್ದ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಹುಡಿಬಂಡೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳು ಎಸ್ಕೇಪ್​​ ಆಗಿದ್ದು, ಕಳುವಾಗಿದ್ದ ಹಣವನ್ನ ಬಂಧಿತನಿಂದ ಜಪ್ತಿ ಮಾಡಲಾಗಿದೆ. ಎಲ್ಲ ಆರೋಪಿಗಳು ಮಧ್ಯಪ್ರದೇಶ ಮೂಲದವರು ಎಂಬುದು ತನಿಳೆ ವೇಳೆ ಬಯಲಾಗಿದೆ.

ಪ್ರಕರಣ ಸಂಬಂಧ ಮಧ್ಯ ಪ್ರದೇಶದಲ್ಲಿ ಆರೋಪಿ ಅಸ್ಲಂ ಖಾನ್ ಎಂಬಾತನನ್ನು ಬಂಧಿಸಲಾಗಿದ್ದು, ಕದ್ದ ಹಣವನ್ನೂ ರಿಕವರಿ ಮಾಡಲಾಗಿದೆ. ಈತನಿಗೆ ಕೃತ್ಯವೆಸಗಲು ಸಹಕಾರ ನೀಡಿದ್ದ ಮಧ್ಯ ಪ್ರದೇಶದ್ದೇ ಮೂಲದವರಾದ ಮನೀರ್ ಖಾನ್, ಅಭ್ಯಾಖಾನ್ ಮತ್ತು ಶೇರು ಪರಾರಿಯಾಗಿದ್ದಾರೆ. ಬಸ್​​ನಲ್ಲಿ ಪ್ರಯಾಣಿಸುವವರ ಬೆಲೆಬಾಳುವ ವಸ್ತು, ಚಿನ್ನಾಭರಣ, ಹಣ ಕಳ್ಳತನ ಮಾಡುವುದೇ ಈ ಗ್ಯಾಂಗ್​​ ಕಾಯಕವಾಗಿತ್ತು. ಕಳ್ಳತನ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದ ಜಿಲ್ಲೆಯ ಬೀಚಗಾನಹಳ್ಳಿ ಕ್ರಾಸ್ ಬಳಿ ಬಾಡಿಗೆಗೆ ಇವರು ರೂಮ್ ಕೂಡ​​ ಪಡೆದಿದ್ದರು. ಕದ್ದ ಹಣವನ್ನು ಇಲ್ಲೇ ಇಟ್ಟು ಆರೋಪಿಗಳು ಮಧ್ಯಪ್ರದೇಶಕ್ಕೆ ತೆರಳಿದ್ದರು. ಹೀಗಾಗಿ ಹಣ ಸೇಫ್​​ ಆಗಿ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​; ಕಳುವಾಗಿದ್ದು ಅರ್ಧಕೋಟಿ ಹಣ!

ಘಟನೆ ಏನು?

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ ಬ್ಯಾಗ್​​ ತೆಗೆದುಕೊಂಡು ಹೋಗಿರುವ ಬಗ್ಗೆ ಸಹ ಪ್ರಯಾಣಿಕರು ಮಾಹಿತಿ ನೀಡಿದ್ದರು. ಘಟನೆ ಬಗ್ಗೆ ವೆಂಕಟೇಶ್ವರ್​ ರಾವ್ ಅವರ ದೂರಿನ ಬೆನ್ನಲ್ಲೇ ಪೊಲೀಸರು ತನಿಖೆಗೆ ಇಳಿದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’ ಎಂದಿದ್ದಾರೆ. ‘45’ ಸಿನಿಮಾವನ್ನು ಶಿವಣ್ಣ ವಿಶ್ಲೇಷಿಸಿರುವ ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link