Category Archives: Blog

Your blog category

BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of India Apprentice Recruitment 2025: 400 Posts, Apply Online by Jan 10!

ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್‌ ಹುದ್ದೆಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಅಂದರೆ ಡಿಸೆಂಬರ್ 25 ರಿಂದ ಪ್ರಾರಂಭವಾಗಿದೆ. ಬ್ಯಾಂಕ್ 400 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.bank.in ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 ಎಂದು ನಿಗದಿಪಡಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸ್ಟ್ರೀಮ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅವರು 01.04.2021 ಮತ್ತು 01.12.2025 ರ ನಡುವೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿದಾರರ ವಯಸ್ಸು 20 ರಿಂದ 28 ವರ್ಷಗಳ ನಡುವೆ ಇರಬೇಕು. ಅರ್ಜಿದಾರರು 02.12.1997 ಕ್ಕಿಂತ ಮೊದಲು ಮತ್ತು 01.12.2005 ಕ್ಕಿಂತ ನಂತರ ಜನಿಸಿರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗದವರಿಗೆ 800 ರೂ. ಜೊತೆಗೆ GST ಅರ್ಜಿ ಶುಲ್ಕ. SC/ST/ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ 600 ರೂ. ಜೊತೆಗೆ GST ಅರ್ಜಿ ಶುಲ್ಕ. ಅಂಗವಿಕಲರ ವರ್ಗಕ್ಕೆ 400 ರೂ. ಜೊತೆಗೆ GST ಶುಲ್ಕ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬೇಕು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

  • bankofindia.bank.in ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ ವೃತ್ತಿ ಟ್ಯಾಬ್‌ಗೆ ಹೋಗಿ.
  • ಅಪ್ರೆಂಟಿಸ್ ಹುದ್ದೆಯ ಅಧಿಸೂಚನೆ ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
  • ಈಗ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಿ.

BOI ಅಪ್ರೆಂಟಿಸ್ ಹುದ್ದೆಯ 2025 ಅಧಿಸೂಚನೆ ಪಿಡಿಎಫ್ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯು ಒಟ್ಟು 100 ಅಂಕಗಳನ್ನು ಹೊಂದಿರುವ 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು 90 ನಿಮಿಷಗಳ ಅವಧಿಯದ್ದಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ – Kannada News | Last Video of Bengaluru To gokarna seabird bus Before Accident at Chitradruga

ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್​ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್​ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್​ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು ಸೀಬರ್ಡ್ ಬಸ್ ಕೊನೆ ಕ್ಷಣದ ದೃಶ್ಯ ಇಲ್ಲಿದೆ ನೋಡಿ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

Source link

Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ – Kannada News | Chitradurga Bus Tragedy: Five Passengers, Including a Child and the Lorry Driver Died

ಚಿತ್ರದುರ್ಗ, ಡಿಸೆಂಬರ್​​ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಸ್ಲೀಪರ್​​ ಬಸ್​​ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಸೇರಿ ಬಸ್​​ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್​​​ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಿತ್ರದುರ್ಗ, ಶಿರಾ, ಹಿರಿಯೂರು ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಯಿ ಮಗು ದಾರುಣ ಸಾವು

ಇನ್ನು ಅಪಘಾತದಲ್ಲಿ ಬದುಕುಳಿದ ಒಬ್ಬೊಬ್ಬ ಪ್ರಯಾಣಿಕರ ಕತೆಯೂ ರೋಚಕವಾಗಿದೆ. ಒಂದೇ ಐಟಿ ಕಂಪನಿಯ 6 ಮಂದಿ ಸಹೋದ್ಯೋಗಿಗಳು ಬೆಂಕಿಯ ಕೆನ್ನಾಲೆಯ ನಡುವೆ ಸಿಲುಕಿ ಒದ್ದಾಡಿದ್ದಾರೆ. ಕವಿತಾರ ಮದುವೆ ನಿಗದಿಯಾಗಿರುವ ಹಿನ್ನೆಲೆ ಬ್ಯಾಚುಲರ್​​ ಪಾರ್ಟಿಗೆಂದು ಇವರು ಗೋಕರ್ಣಕ್ಕೆ ತೆರಳುತ್ತಿದ್ದರು. ಅಲ್ಲಿನ ಖಾಸಗಿ ರೆಸಾರ್ಟ್​​ನಲ್ಲಿ ಪಾರ್ಟಿಯೂ ನಿಗದಿಯಾಗಿತ್ತು. ಕ್ರಿಸ್ಮಸ್​ ರಜೆ ಹಿನ್ನೆಲೆ ತಂಡವೇ ಗೋಕರ್ಣಕ್ಕೆ ಹೊರಟಿತ್ತು. ಆ ಪೈಕಿ ಬಿಂದು ಮತ್ತು ಆಕೆಯ 5 ವರ್ಷದ ಮಗುಗ್ರೇಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳುಗಳಾದ ಶಶಾಂಕ್​​ ಮತ್ತು ಸಂಧ್ಯಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: ಸೀಬರ್ಡ್ ಬಸ್ ದುರಂತ; ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದ ಮಾನಸ ಐಡಿಯಲ್ಲಿ ನಾಲ್ಕು ಜನರಿಗೆ ಟಿಕೆಟ್​​ ಬುಕ್​​ ಆಗಿತ್ತು. ಬೆಂಗಳೂರು ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮಾನಸ ಪಿಜಿಯಲ್ಲಿ ವಾಸವಿದ್ದರು. ತಮ್ಮ ಜೊತೆಗೆ ಇದ್ದ ನವ್ಯಾ, ಮಿಲನ ಸೇರಿ ಅಭಿಷೇಕ್​​ ಎಂಬವರ ಜೊತೆ ಗೋಕರ್ಣ ಪ್ರವಾಸಕ್ಕೆ ಹೊರಟಿದ್ದರು. ಮಾನಸಾಗೆ ಮದುವೆಯೂ ನಿಗದಿಯಾಗಿದ್ದು, ಅದಕ್ಕಾಗಿ ಆಭರಣವನ್ನೂ ಕುಟುಂಬ ಖರೀದಿಸಿತ್ತು. ಆದ್ರೆ ವಿಧಿಯಾಟಕ್ಕೆ ಹಸೆಮಣೆ ಏರುವ ಮುನ್ನವೇ ಅವರು ಮಸಣ ಸೇರಿದ್ದಾರೆ.

ನ್ನು ಬಸ್​​ ಹೊತ್ತಿ ಉರಿಯುತ್ತಿದ್ದ ವೇಳೆ ಏನು ಮಾಡಬೇಕೆಂದು ತೋಚದೆ ಕೆಲವರು ಬಸ್​​ನಿಂದ ಹೊರಗಡೆ ಹಾರಿದ ಪರಿಣಾಮ ಅವರ ಪ್ರಾಣ ಉಳಿದಿದೆ. ಇಬ್ಬರು ಬಸ್​​ನಿಂದ ಜಿಗಿಯುವ ದೃಶ್ಯ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ.  ಬುಕಿಂಗ್​​ ಮಾಡಿದ ಪ್ರಯಾಣಿಕರು ಮಾತ್ರವಲ್ಲದೆ ಮಾರ್ಗ ಮಧ್ಯೆ ಬಸ್​​ ಹತ್ತಿದ ಇಬ್ಬರು ಕೂಡ ಬಸ್​​ನಲ್ಲಿ ಇದ್ದರು ಎಂಬುದು ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:38 pm, Thu, 25 December 25

Source link

ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ? – Kannada News | Rukmini Vasanth wants to became a veterinarian but came to Movie industry

ರುಕ್ಮಿಣಿ ವಸಂತ್ (Rukmini Vasanth) ಪ್ರಸ್ತುತ ದಕ್ಷಿಣ ಭಾರತದ ಸ್ಟಾರ್ ನಟಿ. ತಮ್ಮ ನಟನೆ ಮತ್ತು ಸೌಂದರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ರುಕ್ಮಿಣಿ ವಸಂತ್. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಬಾಲಿವುಡ್​​ಗೂ ಸಹ ರುಕ್ಮಿಣಿ ವಸಂತ್ ಕಾಲಿಡುತ್ತಿದ್ದಾರೆ. ಆದರೆ ರುಕ್ಮಿಣಿ ಅವರಿಗೆ ನಟಿ ಆಗುವ ಆಸೆಯೇ ಇರಲಿಲ್ಲ, ಬೇರೆ ಏನೋ ಆಗುವ ಆಸೆ ಇತ್ತು.

ಬಹುತೇಕರಿಗೆ ಗೊತ್ತಿರುವಂತೆ ಭಾರತೀಯ ಸೇನೆಯ ಹೆಮ್ಮೆಯ ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿ ರುಕ್ಮಿಣಿ ವಸಂತ್. ಎಳವೆಯಿಂದ ವಿದ್ಯಾಭ್ಯಾಸದಲ್ಲಿಯೂ ಮುಂದಿದ್ದರಂತೆ ರುಕ್ಮಿಣಿ. ಬಹಳ ವರ್ಷ ಅವರಿಗೆ ತಾವು ಪಶು ವೈದ್ಯರಾಗಬೇಕು ಎಂಬ ಆಸೆ ಇತ್ತಂತೆ. ಪ್ರಾಣಿ ಪ್ರೇಮಿ ಆಗಿದ್ದ ರುಕ್ಮಿಣಿ ಅವರಿಗೆ ತಾವು ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ವೈದ್ಯೆ ಆಗಬೇಕು ಎಂಬ ಆಸೆಯಿತ್ತಂತೆ. ಆದರೆ ಬರ ಬರುತ್ತಾ, ಆ ಕೆಲಸ ಎಷ್ಟು ಕಷ್ಟ ಎಂದು ಅರಿವಾಗಿ ಆ ಆಸೆ ಕೈಬಿಟ್ಟರಂತೆ ನಟಿ.

ಇದನ್ನೂ ಓದಿ:ರುಕ್ಮಿಣಿ ವಸಂತ್ ಮೇಕಪ್ ಹೀಗೆ ನಡೆಯುತ್ತೆ: ವಿಡಿಯೋ ನೋಡಿ

ಅದರ ಬಳಿಕ ಫ್ಯಾಷನ್ ಡಿಸೈನರ್ ಆಗುವ ಆಸೆ ಮೂಡಿತಂತೆ. ಆದರೆ ಆ ಆಸೆಯೂ ಕಮರಿ ಕೊನೆಗೆ ನಟನೆಯತ್ತ ಮನಸ್ಸು ಹೊರಳಿದೆ. ಬಳಿಕ ಅವರು ಲಂಡನ್​​ನ ಪ್ರತಿಷ್ಠಿತ ಡ್ರಾಮಾ ಶಾಲೆಯಾದ ರಾಡಾನಲ್ಲಿ ಅಡ್ಮೀಷನ್ ಪಡೆದರು. ಅಲ್ಲಿ ಹಲವು ವರ್ಷ ಕಲಿತು ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಮೊದಲಿಗೆ ‘ಬೀರ್​​ಬಲ್’ ಸಿನಿಮಾನಲ್ಲಿ ನಟಿಸಿದರು. ಅದರ ಬಳಿಕ ಮತ್ತೊಂದು ಸಿನಿಮಾ ಒಪ್ಪಿಕೊಂಡರಾದರೂ ಅದು ಕೋವಿಡ್ ಕಾರಣಕ್ಕೆ ನಿಂತು ಹೋಯ್ತು. ಬಳಿಕ ಇನ್ನು ಚಿತ್ರರಂಗದಲ್ಲಿ ಉಳಿವಿಲ್ಲ ಎಂದುಕೊಂಡಾಗ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾನಲ್ಲಿ ಅವಕಾಶ ದೊರೆಯಿತು. ಬಳಿಕ ನಡೆದಿದ್ದೆಲ್ಲ ಇತಿಹಾಸ.

ಅಂದಹಾಗೆ ರುಕ್ಮಿಣಿ ಅವರು ನಟಿಯಾಗುವಲ್ಲಿ ಅವರ ತಾಯಿಯ ಪಾತ್ರ ಮಹತ್ವದ್ದಂತೆ. ರುಕ್ಮಿಣಿ ಅವರ ತಾಯಿ ಸ್ವತಃ ನೃತ್ಯ ಕಲಾವಿದೆ. ಅದ್ಭುತವಾಗಿ ನೃತ್ಯ ಮಾಡುವ ಜೊತೆಗೆ ನಾಟಕ ರಚನೆ, ನಿರ್ದೇಶನ ಸಹ ಮಾಡುತ್ತಿದ್ದರಂತೆ. ಎಳವೆಯಲ್ಲಿ ಕೆಲವು ನಾಟಕಗಳಲ್ಲಿಯೂ ರುಕ್ಮಿಣಿ ನಟಿಸಿದ್ದರು. ಬಳಿಕ ತಾಯಿಯ ಮಾರ್ಗದರ್ಶನದಲ್ಲಿ ನೃತ್ಯವನ್ನೂ ಕಲಿತರು. ರಾಡಾನಲ್ಲಿ (ರಾಯಲ್ ಅಕಾಡೆಮಿ ಆಫ್ ಡ್ರಾಮಾ ಆರ್ಟ್ಸ್) ಅಡ್ಮೀಷನ್ ಪಡೆಯುವಲ್ಲಿ ತಾಯಿಯ ಬೆಂಬಲವೂ ಸಾಕಷ್ಟಿದೆ ಎಂದು ರುಕ್ಮಿಣಿ ಇತ್ತೀಚೆಗಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಅಂದಹಾಗೆ ರುಕ್ಮಿಣಿ ವಸಂತ್ ಅವರು ಬೆಂಗಳೂರಿನಲ್ಲಿ ಬ್ಯಾಲೆ ಡ್ಯಾನ್ಸ್ ಸಹ ಕಲಿತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಫಾಕ್ಸ್​ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ – Kannada News | On Foxconn, Rahul Gandhi says Karnataka set an Example, union minister Vaishnaw gives cheeky reply

ನವದೆಹಲಿ, ಡಿಸೆಂಬರ್ 25: ಬೆಂಗಳೂರಿನ ಬಳಿ ಫಾಕ್ಸ್​ಕಾನ್ ಬೃಹತ್ ಘಟಕ ಸ್ಥಾಪಿಸಿ 9 ತಿಂಗಳಲ್ಲಿ 30,000 ಮಂದಿಯನ್ನು ನೇಮಕಾತಿ ಮಾಡಿಕೊಂಡ ಸುದ್ದಿಯನ್ನು ಹಂಚಿಕೊಂಡು, ಕರ್ನಾಟಕದ ಮಾದರಿ ಹಾಕಿಕೊಟ್ಟಿದೆ ಎಂದಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇದು ಮೇಕ್ ಇನ್ ಇಂಡಿಯಾ ಯೋಜನೆ ಫಲ ಎಂದು ನೆನಪಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಧನ್ಯವಾದ ಎಂದು ರಾಹುಲ್ ಗಾಂಧಿಗೆ (Rahul Gandhi) ಪರೋಕ್ಷವಾಗಿ ಟಾಂಟ್ ಕೊಟ್ಟಿದ್ದಾರೆ ಕೇಂದ್ರ ಸಚಿವರು.

ರಾಹುಲ್ ಗಾಂಧಿ ಹೇಳಿದ್ದೇನು?

‘ಕೇವಲ 8-9 ತಿಂಗಳಲ್ಲಿ 30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಭಾರತದಲ್ಲಿ ಈವರೆಗೂ ಇಷ್ಟು ವೇಗದಲ್ಲಿ ಫ್ಯಾಕ್ಟರಿ ನೇಮಕಾತಿ ಆಗಿದ್ದಿಲ್ಲ. ಇದು ಕೇವಲ ಅಂಕಿ ಅಂಶ ಅಲ್ಲ. ಪರಿವರ್ತನಾತ್ಮಕ ಉದ್ಯೋಗ ಸೃಷ್ಟಿ ಇದು. ಈ ಘಟಕದಲ್ಲಿ ಶೇ. 80ರಷ್ಟು ಮಹಿಳೆಯರೇ ಇರುವುದು, ಅದರಲ್ಲೂ 19-24ರ ವಯಸ್ಸಿನಲ್ಲಿರುವ, ಮೊದಲ ಬಾರಿಗೆ ಕೆಲಸ ಮಾಡುತ್ತಿರುವ ಯುವತಿಯರೇ ಇದ್ದಾರೆ. ಹೀಗಾಗಿ, ಈ ಉದ್ಯೋಗಸೃಷ್ಟಿ ಇನ್ನೂ ಪ್ರಬಲವೆನಿಸುತ್ತದೆ’ ಎಂದು ಕಾಂಗ್ರೆಸ್ ನಾಯಕ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್

‘ಈ ಮಟ್ಟದಲ್ಲಿ ಮತ್ತು ವೇಗದಲ್ಲಿ ಉತ್ಪಾದನಾ ವಲಯ ಬೆಳೆಯಬಲ್ಲಂತಹ ಇಕೋಸಿಸ್ಟಂ ಅನ್ನು ನಿರ್ಮಿಸುವ ಮೂಲಕ ಕರ್ನಾಟಕವು ಒಂದು ಮಾದರಿ ಹಾಕಿಕೊಟ್ಟಿದೆ. ಗೌರವದ ಕೆಲಸ ಮತ್ತು ಸರ್ವರಿಗೂ ಅವಕಾಶ.. ಇಂಥ ಭಾರತವನ್ನು ನಾವು ಕಟ್ಟಬೇಕಿರುವುದು’ ಎಂದು ರಾಹುಲ್ ಗಾಂಧಿ ಕರೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಅಶ್ವಿನಿ ವೈಷ್ಣವ್, ‘ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಯೋಜನೆಯ ಯಶಸ್ಸನ್ನು ಗುರುತಿಸಿದ್ದಕ್ಕೆ ಧನ್ಯವಾದ. ನೀವು ಗಮನಿಸಿದಂತೆ, ನಮ್ಮ ಪ್ರಧಾನಿಗಳ ದೃಷ್ಟಿಯಂತೆ ನಾವು ಉತ್ಪಾದಕ ಆರ್ಥಿಕತೆಯಾಗಿ ಬೆಳೆಯುತ್ತಿದ್ದೇವೆ’ ಎಂದಿದ್ದಾರೆ.

ಸಚಿವ ಅಶ್ವಿನಿ ವೈಷ್ಣವ್ ಅವರ ಎಕ್ಸ್ ಪೋಸ್ಟ್

ಇದನ್ನೂ ಓದಿ: ಒಡಿಶಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಐವರು ನಕ್ಸಲರ ಹತ್ಯೆ

ದೇವನಹಳ್ಳಿ ಬಳಿ 300 ಎಕರೆ ಪ್ರದೇಶದಲ್ಲಿ ಫಾಕ್ಸ್​ಕಾನ್​ನ ಮ್ಯಾನುಫ್ಯಾಕ್ಚರಿಂಗ್ ಯೂನಿಟ್ ಅನ್ನು ಸ್ಥಾಪಿಸಲಾಗಿದೆ. ಇಲ್ಲಿ 50,000 ಮಂದಿ ಉದ್ಯೋಗಿಗಳು ಕೆಲಸ ಮಾಡುವಷ್ಟು ವಿಶಾಲವಾಗಿದೆ. ವರ್ಷಕ್ಕೆ ಇಲ್ಲಿ ಎರಡು ಕೋಟಿ ಐಫೋನ್​ಗಳನ್ನು ಅಸೆಂಬ್ಲಿಂಗ್ ಮಾಡಬಹುದು. ಫಾಕ್ಸ್​ಕಾನ್ ಇಲ್ಲಷ್ಟೇ ಅಲ್ಲದೆ, ತಮಿಳುನಾಡಿನಲ್ಲಿ ಎರಡು ಘಟಕಗಳನ್ನು ಹೊಂದಿದೆ. ಆ್ಯಪಲ್ ಕಂಪನಿಯ ಐಫೋನ್​ಗಳನ್ನು ಭಾರತದಲ್ಲಿ ಫಾಕ್ಸ್​ಕಾನ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗಳು ಅಸೆಂಬ್ಲಿಂಗ್ ಮಾಡಿಕೊಡುತ್ತವೆ. ಚೀನಾದಲ್ಲಿ ಈಗಲೂ ಹೆಚ್ಚಿನ ಐಫೋನ್ ತಯಾರಿಕೆ ಆಗುತ್ತದಾದರೂ ಸದ್ಯ ಭಾರತದಲ್ಲಿ ತಯಾರಾಗುತ್ತಿರುವ ಐಫೋನ್​ಗಳ ಸಂಖ್ಯೆ ಶೇ. 20 ಮುಟ್ಟಿರುವುದು ಗಮನಾರ್ಹ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ – Kannada News | Nidhi Agerwal Attire Row: Actor Shivaji Blames Victim, Sparks Outrage

ಹೈದರಾಬಾದ್‌ ಮಾಲ್​​ನಲ್ಲಿ ನಡೆದ ‘ರಾಜಾ ಸಾಬ್’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್​​ವಾಲ್ (Nidhi Agerwal) ಭಾಗಿ ಆಗಿದ್ದರು. ಈ ವೇಳೆ ನಟಿಯ ಮೇಲೆ ಅಲ್ಲಿದ್ದ ಜನರು ಮುಗಿಬಿದ್ದಿದ್ದರು.ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಈ ಘಟನೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ‘ನಟಿಯರು ಸಾಧಾರಣ ಉಡುಗೆ ತೊಡಬೇಕು’ ಎಂದಿದ್ದಾರೆ. ಈ ಹೇಳಿಕೆ ನಟಿಗೆ ಬೇಸರ ಮೂಡಿಸಿದೆ.

ಡಿಸೆಂಬರ್ 17 ರಂದು ಹೈದರಾಬಾದ್‌ನ ಲುಲು ಮಾಲ್‌ನಲ್ಲಿ ರಾಜಾ ಸಾಬ್‌ನ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಿಧಿ ಚಿತ್ರತಂಡದೊಂದಿಗೆ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಊಹೆಗೂ ಮೀರಿದ ಸಂಖ್ಯೆಯಲ್ಲಿ ಜನರು ಸೇರಿದ್ದರು.ಈವೆಂಟ್ ಮುಗಿದ ಬಳಿಕ ನಟಿ ಅಲ್ಲಿಂದ ಹೊರ ಬರಲು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಸಾಕಷ್ಟು ಜನರು ಅವರ ದೇಹವನ್ನು ಟಚ್ ಮಾಡಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಯಿತು.
ಶಿವಾಜಿ ಪ್ರತಿಕ್ರಿಯೆ..

ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರೋ ಶಿವಾಜಿ, ‘ನಿಧಿಯ ಉಡುಗೆ ಜನಸಮೂಹವನ್ನು ಕೆರಳಿಸಿತು’ ಎಂದು ನೇರವಾಗಿ ಅವರ ಉಡುಗೆ ಬಗ್ಗೆ ಆರೋಪ ಮಾಡಿದ್ದಾರೆ. ‘ಸಾಯಿ ಪಲ್ಲವಿ, ಅನುಷ್ಕಾ, ಸೌಂದರ್ಯ, ಭೂಮಿಕಾ ಮೊದಲಾದವರನ್ನು ಯಾರಾದರೂ ಟಚ್​ ಮಾಡಿದ್ದಾರಾ? ಏಕೆಂದರೆ ಅವರು ಸರಿಯಾಗಿ ಬಟ್ಟೆ ಹಾಕುತ್ತಾರೆ’ ಎಂದಿದ್ದಾರೆ ಶಿವಾಜಿ.

ಇದನ್ನೂ ಓದಿ: ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

‘ಯಾರೂ ಪ್ರಚೋದಿಸಬೇಡಿ. ನೀವು ಹಾಗೆ ಮಾಡಿದಾಗ ಪುರುಷರು ನಿಮ್ಮನ್ನು ಮುಟ್ಟಬಹುದು ಎಂದು ಭಾವಿಸುತ್ತಾರೆ. ನಿಮಗೆ ಹೇಗೆ ಅನಿಸುತ್ತದೆಯೋ ಹಾಗೆ ಉಡುಗೆ ಧರಿಸಿ. ಆದರೆ,ನಾನು ನಿಜವನ್ನು ಹೇಳುತ್ತಿದ್ದೇನೆ’ ಎಂದಿದ್ದಾರೆ ಅವರು.

ನಟಿಯ ಪ್ರತಿಕ್ರಿಯೆ

ಈ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ನಿಧಿ, ‘ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಲುಲು ಮಾಲ್ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡು, ‘ಸಂತ್ರಸ್ತೆಯನ್ನು ದೂಷಿಸುವುದು ತಪ್ಪು’ ಎಂರ್ಥದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್ – Kannada News | Shivarajkumar reaction to Darshan and Kichcha Sudeep fans war in Kannada Film Industry

ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ (Darshan) ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ (Fans War) ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು. ಯಾರ ಭಾವನೆಗಳ ಜೊತೆಗೂ ಆಟ ಆಡಬಾರದು. ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಬದುಕೋಣ, ಬದುಕೋಕೆ ಬಿಡೋಣ ಎಂಬ ಭಾವನೆ ಎಲ್ಲರಿಗೂ ಇರಬೇಕು. ಸಮಾಜ ಇಷ್ಟೇ. ನಾವು ಎಷ್ಟು ದಿನ ಇರುತ್ತೇವೆ? ಅಷ್ಟು ದಿನ ನಾವೆಲ್ಲರೂ ಅನ್ಯೋನ್ಯವಾಗಿ ಹೊಂದಿಕೊಂಡು ಇರಬೇಕು’ ಎಂದು ಶಿವರಾಜ್​ಕುಮಾರ್ (Shivarajkumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಭೆಗೆ ಆಹ್ವಾನವಿಲ್ಲ: ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ – Kannada News | Power Tussle In Karnataka Congress: DK Shivakumar Talks about CM Siddaramaiah participate In cwcc Meeting after mallikarjun kharge met

ಬೆಂಗಳೂರು, (ಡಿಸೆಂಬರ್ 25): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದ್ರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಕೆಶಿ, ಇಂದು (ಡಿಸೆಂಬರ್ 25) ಬೆಂಗಳೂರಿನಲ್ಲಿ ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಡಿಸೆಂಬರ್ 27ರಂದು ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆ ಇದ್ದು, ಸಿಡಬ್ಲ್ಯುಸಿ ಸಭೆಗೆ ನನ್ನನ್ನು ಕರೆದಿಲ್ಲ. ಕರೆದರೆ ನಾನು ಹೋಗುತ್ತೇನೆ. ಸಿಎಂ ಸಿದ್ದರಾಮಯ್ಯರನ್ನು ಸಿಡಬ್ಲ್ಯುಸಿ ಸಭೆಗೆ ಕರೆದ ಮಾಹಿತಿ ಇದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಹೋಗುತ್ತಾರೆ ಎಂದರು.  ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ – Kannada News | Kakanur SBI Robbery: Two More Arrested; Police Seize Gold and Cash

ಬಾಗಲಕೋಟೆ, ಡಿಸೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್​​ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಘಟನೆ ಏನು?

2025ರ ಸೆಪ್ಟೆಂಬರ್​​ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್​​ಬಿಐ ಲಾಕರ್​​ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು. ಸಿಸಿ ಕ್ಯಾಮರಾಗಳಿಗೆ ಸ್ಪ್ರೇ ಹೊಡೆದು, ಮೊಬೈಲ್​​ ಬಳಕೆ ಮಾಡದೆ, ಫಿಂಗರ್​​ ಪ್ರಿಂಟ್​​ ಕೂಡ ಸಿಗದ ರೀತಿಯಲ್ಲಿ ಆರೋಪಿಗಳು ಬ್ಯಾಂಕ್​​ನಲ್ಲಿ ಕಳವು ಮಾಡಿದ್ದರು. ಕಳ್ಳತನ ನಡೆಸುವ ಆರು ತಿಂಗಳ ಹಿಂದೆಯೇ ಬ್ಯಾಂಕ್​​ಗೆ ಬಂದು ಹೇಗೆ ಕನ್ನ ಹಾಕಬಹುದು ಎಂದು ತಂತ್ರ ರೂಪಿಸಿದ್ದರು.

ಇದನ್ನೂ ಓದಿ: ಬ್ಯಾಂಕ್​ಗಳ​ ರಾಬರಿ ಪ್ರಕರಣ; ಅಂತಾರಾಜ್ಯ ಕಳ್ಳರು ಅಂದರ್​

ಈವರೆಗೆ ನಾಲ್ವರು ಆರೋಪಿಗಳ ಬಂಧನ

ಬಂಧಿತ ಆರೋಪಿಗಳಿಂದ 25 ಲಕ್ಷ 90 ಸಾವಿರ ಮೌಲ್ಯದ ಚಿನ್ನಾಭರಣ, ಹಣ, ಕಳ್ಳತನಕ್ಕೆ ಬಳಸಿದ್ದ ಕಾರು, ಗ್ಯಾಸ್ ಕಟರ್, ಕಂಟ್ರಿಮೇಡ್ ಗನ್, ಎರಡು ಜೀವಂತ‌ಗುಂಡು, ರಾಡ್ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ಬಾಗಲಕೋಟೆ ಜಿಲ್ಲಾ ಪೊಲೀಸರು ಉತ್ತರ‌ ಪ್ರದೇಶದ ಕಕ್ರಾಳ ಗ್ರಾಮದ ಮಹಮ್ಮದ ನವಾನ್ ಹಾಗೂ ಕಮರುಲ್‌ಖಾನ್ ಎಂಬವರನ್ನು ಬಂಧಿಸಿದ್ದರು. ಒಟ್ಟು ನಾಲ್ವರು ಆರೋಪಿಗಳಿಂದ 62 ಲಕ್ಷ 20 ಸಾವಿರ ಮೌಲ್ಯದ 472.20 ಗ್ರಾಂ ಚಿನ್ನಾಭರಣ ಸೇರಿ ಹಣ ಜಪ್ತಿ ಮಾಡಲಾಗಿದೆ. ಆರೋಪಿಗಳು ಬೇರೆ ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇವರಿಗೆ ಜೈಲಿನಲ್ಲಿ ಪರಸ್ಪರ ಪರಿಚಯವಾಗಿತ್ತು ಎಂದು ಪೊಲೀಸ್​​ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ – Kannada News | Sagittarius 2026 Yearly Horoscope: Predictions and Remedies by Dr Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಧನುಸ್ಸು ರಾಶಿಯವರಿಗೆ ಮಹತ್ವದ ಬದಲಾವಣೆಗಳನ್ನು ತರಲಿದೆ. ವರ್ಷದ ಆರಂಭದಲ್ಲಿ ಆರ್ಥಿಕವಾಗಿ ಉತ್ತಮ ಲಾಭಗಳಿದ್ದು, ಜೂನ್ ಎರಡರವರೆಗೆ ಈ ಶುಭ ಫಲಗಳು ಮುಂದುವರೆಯಲಿವೆ. ನಂತರ ಗುರು ಗ್ರಹವು ಸಪ್ತಮ ಸ್ಥಾನದಿಂದ ಅಷ್ಟಮ ಸ್ಥಾನಕ್ಕೆ ಪ್ರವೇಶಿಸಲಿದೆ. ಇದು ಸಾಲಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಯಶಸ್ಸು ಮತ್ತು ಬ್ಯಾಂಕ್ ಸಾಲಗಳನ್ನು ತೀರಿಸುವ ಯೋಗವನ್ನು ತರುತ್ತದೆ. ಅಷ್ಟಮದಲ್ಲಿ ಗುರು ಇರುವುದು ವಿಪರೀತ ರಾಜಯೋಗಕ್ಕೆ ಕಾರಣವಾಗಬಹುದು.

ಆದರೆ, ಶನಿಯು ಅರ್ಧಾಷ್ಟಮ ಸ್ಥಾನದಲ್ಲಿದ್ದು, ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು, ತಾಯಿಯ ಆರೋಗ್ಯ ಮತ್ತು ವಾಹನ, ಮನೆ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಿಳಂಬವನ್ನು ಉಂಟುಮಾಡಬಹುದು. ರಾಹು ಮೂರರಿಂದ ಎರಡಕ್ಕೆ ಮತ್ತು ಕೇತು ಒಂಬತ್ತರಿಂದ ಎಂಟಕ್ಕೆ ಸಂಚರಿಸುವುದರಿಂದ ಧೈರ್ಯ ಹೆಚ್ಚುತ್ತದೆ, ಉನ್ನತ ಶಿಕ್ಷಣ, ತಂದೆಯ ಆಶೀರ್ವಾದ ಮತ್ತು ಪಿತ್ರಾರ್ಜಿತ ಆಸ್ತಿ ವಿಷಯಗಳಲ್ಲಿ ಶುಭವಾಗಲಿದೆ. ವೃತ್ತಿಪರವಾಗಿ ಸರ್ಕಾರಿ ನೌಕರರಿಗೆ ಲಾಭ, ಖಾಸಗಿ ಉದ್ಯೋಗಸ್ಥರಿಗೆ ಜವಾಬ್ದಾರಿಗಳು ಹೆಚ್ಚಲಿವೆ. ವಿವಾಹ ಯೋಗ, ಮಕ್ಕಳ ಪ್ರಗತಿ ಮತ್ತು ರಾಜಕೀಯ ವ್ಯಕ್ತಿಗಳಿಗೆ ಅಧಿಕಾರ ಪ್ರಾಪ್ತಿಯು ಈ ವರ್ಷದ ಪ್ರಮುಖ ಅಂಶಗಳಾಗಿವೆ. ಮಾನಸಿಕ ಶಾಂತಿ ಮತ್ತು ನೆಮ್ಮದಿ ವರ್ಷದ ಮಧ್ಯಭಾಗದಲ್ಲಿ ದೊರೆಯಲಿದೆ. ಆರೋಗ್ಯದ ಕಡೆ ಗಮನಹರಿಸುವುದು ಮತ್ತು ಅನ್ನದಾನ ಮಾಡುವುದು ಶುಭ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link