Category Archives: Blog

Your blog category

Chanakya Niti: ಕೌಟುಂಬಿಕ ಕಲಹಗಳಿಗೆ ಮೂಲ ಕಾರಣವೇ ಈ ಅಂಶಗಳು ಎನ್ನುತ್ತಾರೆ ಚಾಣಕ್ಯರು – Kannada News | Chanakya Niti: Chanakya says these mistakes are the main reason for conflicts at home

ಪ್ರತಿಯೊಬ್ಬರಿಗೂ ನೆಮ್ಮದಿಯ ತಾಣ ಮನೆಯೇ ಆಗಿರುತ್ತದೆ. ಆದರೆ ಮನೆಯಲ್ಲಿ ನಡೆಯುವ ಮನಸ್ತಾಪ, ಜಗಳಗಳಿಂದ ಮನೆಯ ನೆಮ್ಮದಿಯೇ ಹಾಳಾಗುತ್ತದೆ. ತಪ್ಪು ಗ್ರಹಿಕೆ, ಮಾತಿಗೆ ಮಾತು ಬೆಳೆಯುವುದು ಇತ್ಯಾದಿ ಸಣ್ಣಪುಟ್ಟ ಕಾರಣಗಳಿಗೆ ವಾಗ್ವಾದ, ಜಗಳಗಳು (conflicts) ಏರ್ಪಡುತ್ತವೆ. ಇದು ಸಂಬಂಧದ ಸಾಮರಸ್ಯವನ್ನೇ ಹಾಳು ಮಾಡುತ್ತವೆ. ಈ ರೀತಿ ಘರ್ಷಣೆಗಳು ಉಂಟಾಗಲು, ಮನೆಯವರ ಮಧ್ಯೆಯೇ ಮನಸ್ತಾಪ ತಲೆದೋರಲು ನಾವು ಮಾಡುವಂತಹ ಕೆಲವೊಂದು ತಪ್ಪುಗಳೇ ಮುಖ್ಯ ಕಾರಣ. ಆ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಬಹುದು, ಕುಟುಂಬ ಸದಸ್ಯರ ಸಾಮರಸ್ಯವನ್ನು ಮತ್ತಷ್ಟು ಬಲಪಡಿಸಬಹುದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಹಾಗಿದ್ರೆ ಕೌಟುಂಬಿಕ ಕಲಹಗಳಿಗೆ ಕಾರಣವಾಗುವ ತಪ್ಪುಗಳು ಯಾವುವು ಎಂಬುದನ್ನು ನೋಡೋಣ.

ಮನೆಯಲ್ಲಾಗುವ ಜಗಳಗಳಿಗೆ ಈ ತಪ್ಪುಗಳೇ ಮುಖ್ಯ ಕಾರಣ:

ಸ್ವಾರ್ಥ ಭಾವನೆ: ನನಗೆ ಮಾತ್ರ ಬೇಕು, ನನ್ನಿಂದಲೇ ಎಲ್ಲಾ, ನನ್ನಿಂದಲೇ ಮನೆ ನಡೆಯುತ್ತಿದೆ ಎಂಬ ಸ್ವಾರ್ಥ ಮತ್ತು ಅಹಂ ಭಾವನೆಯಿಂದ ಮನಸ್ತಾಪಗಳು ತಲೆದೋರುತ್ತವೆ. ಸ್ವಂತ ಲಾಭಕ್ಕಾಗಿ ಮಾತ್ರ ಯೋಚಿಸುವುದರಿಂದ ಕುಟುಂಬದ ಐಕ್ಯತೆ ಹಾಳಾಗುತ್ತದೆ. ಹೀಗಿರುವಾಗ ನಾನು ಎಂಬ ಅಹಂಕಾರವನ್ನು ತ್ಯಜಿಸಿ ನಾವು, ನಮಗಾಗಿ  ಎಂದು ಒಟ್ಟಾಗಿ ಯೋಚಿಸಿದಾಗ ಮಾತ್ರ ಮನೆಯಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಚಾಣಕ್ಯ ಹೇಳಿದ್ದಾರೆ.

ಅಗೌರವ ಮತ್ತು ನಿರ್ಲಕ್ಷ್ಯ: ಅಗೌರವ ತೋರುವುದು, ಮನೆಯವರ ಭಾವನೆಗಳನ್ನು ನಿರ್ಲಕ್ಷಿಸುವುದು, ಅವರ ಭಾವನೆಗಳಿಗೆ ಬೆಲೆ ಕೊಡದಿರುವುದು ಇವೆಲ್ಲವು ಹತಾಶೆ ಮತ್ತು ಕೋಪದ ಭಾವನೆ ಮೂಡಲು ಕಾರಣವಾಗುತ್ತದೆ. ಈ ಕಾರಣದಿಂದಾಗಿ ಸಂಬಂಧದಲ್ಲಿ ಬಿರುಕು ಮೂಡಿ ಮನಸ್ತಾಪಗಳು ಏರ್ಪಡುತ್ತವೆ ಎನ್ನುತ್ತಾರೆ ಚಾಣಕ್ಯ.  ಹೀರುವಾಗ ಮನೆಯವರ ಮಾತನ್ನು ಆಲಿಸುವ ಮತ್ತು ಗೌರವಿಸುವ ಮೂಲಕ ಸಂಬಂಧಗಳನ್ನು ಬಲಪಡಿಸಬಹುದು.

ಸುಳ್ಳು ಮತ್ತು ವಂಚನೆ: ನಂಬಿಕೆಯು ಯಾವುದೇ ಸಂಬಂಧದ ಅಡಿಪಾಯವಾಗಿದೆ. ಹೀಗಿರುವಾಗ ನೀವು ಹೇಳುವ ಸಣ್ಣ ಸುಳ್ಳು, ವಂಚನೆಗಳು ಸಹ ಸಂಬಂಧದಲ್ಲಿ ಬಹುದೊಡ್ಡ ಬಿರುಕನ್ನು ಮೂಡಿಸಬಹುದು. ಚಾಣಕ್ಯನ ಪ್ರಕಾರ, ಸುಳ್ಳು ಮತ್ತು ವಂಚನೆಯು ಕುಟುಂಬಕ್ಕೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ. ಪ್ರಾಮಾಣಿಕತೆ ತುಂಬಿದ ಮನೆಯಲ್ಲಿ ಮಾತ್ರ ಶಾಂತಿ ನೆಲೆಸುತ್ತದೆ.

ಮೂರನೇ ವ್ಯಕ್ತಿಯ ಹಸ್ತಕ್ಷೇಪ: ಮನೆಯ ವಿಷಯಗಳಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡಲು ಅವಕಾಶ ನೀಡುವುದು ಅತ್ಯಂತ ಅಪಾಯಕಾರಿ ಎಂದು ಚಾಣಕ್ಯ ಎಚ್ಚರಿಸಿದ್ದಾರೆ. ಮೂರನೇ ವ್ಯಕ್ತಿ ನಿಮ್ಮ ಮನೆಯ ವಿಷಯಗಳಿಗೆ ಮಧ್ಯಪ್ರವೇಶಿಸಿದಾಗ ಖಂಡಿತವಾಗಿ ಸಮಸ್ಯೆಗಳು ಉದ್ಭವಿಸುತ್ತವೆ, ಮನೆಯವರ ಸಂಬಂಧ ಹಾಳಾಗುತ್ತದೆ. ಈ ರೀತಿಯ ತಪ್ಪುಗಳಾಗದಂತೆ ನೋಡಿಕೊಳ್ಳಿ.

ಅಹಂಕಾರ ಮತ್ತು ಕೋಪ:  ನಾನೇ ಸರಿ, ನಾನು ಬೇರೆಯವರ ಮಾತನ್ನು ಕೇಳುವುದಿಲ್ಲ ಎಂಬ ದುರಹಂಕಾರ ಮತ್ತು ಕ್ಷಣಿಕ ಕೋಪ  ಕುಟುಂಬದ ನೆಮ್ಮದಿಯನ್ನೇ ನಾಶ ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ. ಹಾಗಾಗಿ ಅಹಂಕಾರವನ್ನು ಪಕ್ಕಕ್ಕಿಟ್ಟು ಮನೆಯವರ ಜೊತೆ ತಾಳ್ಮೆಯಿಂದ ಮತ್ತು ಪ್ರೀತಿಯಿಂದ ನಡೆದುಕೊಂಡಾಗ ಮಾತ್ರ ಇಡೀ ಕುಟುಂಬ ಸಂತೋಷದಿಂದಿರಲು ಸಾಧ್ಯ.

ಇದನ್ನೂ ಓದಿ: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಮಾತುಗಳನ್ನು ಪಾಲಿಸಿ   

ಅತಿಯಾದ ನಿರೀಕ್ಷೆಗಳು: ಅತಿಯಾದ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಸಹ ಮನೆಯಲ್ಲಿ ಮನಸ್ತಾಪಗಳು ಉಂಟಾಗಲು ಕಾರಣವಾಗಬಹುದು. ಹೌದು ಮನೆಯವರು ನಾನು ಹೇಳಿದಂತೆಯೇ ನಡೆದುಕೊಳ್ಳಬೇಕು, ನನಗೆ ಅದು ಕೊಡ್ಬೇಕು, ಇದು ಕೊಡ್ಬೇಕು ಅಂತೆಲ್ಲಾ ಅತಿಯಾದ ನಿರೀಕ್ಷೆಗಳನ್ನು ಇಟ್ಟುಕೊಂಡಾಗ ಸಂಬಂಧದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಇದು ನಂತರ ಜಗಳಗಳಿಗೆ ಕಾರಣವಾಗುತ್ತದೆ.

ಹಣದ ಹಿಂದೆ ಓಡುವುದು: ಸಂಬಂಧಕ್ಕೆ ಬೆಲೆ ಕೊಡುವ ಬದಲು ಹಣ, ಆಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ ಕುಟುಂಬದ ನೆಮ್ಮದಿಯೇ ಹಾಳಾಗುತ್ತದೆ. ಮನೆಯಲ್ಲಿ ಶಾಂತಿ ನೆಲೆಸಬೇಕೆಂದರೆ ಕುಟುಂಬ ಮತ್ತು ಸಂಬಂಧಗಳಿಗೆ ಮೊದಲ ಆದ್ಯತೆ ನೀಡಬೇಕು ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ – Kannada News | Chitradruga Bus Accident: Some passengers great escaped form sea bird bus tragedy

ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸಿಬರ್ಡ್​ ಬಸ್ ಗೆ ಲಾಡಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

Source link

Maoists Encounter: ಒಡಿಶಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಐವರು ನಕ್ಸಲರ ಹತ್ಯೆ – Kannada News | Anti naxal operation in Odisha, 5 Maoists killed, 3 rifles recovered

ಭುಬನೇಶ್ವರ್, ಡಿಸೆಂಬರ್ 25: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಕೊಲ್ಲಲಾಗಿದೆ. ಇಂದು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಈ ಎರಡು ದಿನಗಳ ಕಾರ್ಯಾಚರಣೆಯಲ್ಲಿ ಈವರೆಗೆ ಐವರು ಮಾವೋವಾದಿಗಳನ್ನು ಭದ್ರತಾ ಪಡೆಗಳು ಸಾಯಿಸಿವೆ.

ಕಂಧಮಾಲ್ ಜಿಲ್ಲೆಯಲ್ಲಿರುವ ಬಹುತೇಕ ಕಾಡು ಪ್ರದೇಶಗಳು ನಕ್ಸಲರಿಗೆ ಅಡಗುದಾಣದಂತಿವೆ. ವಿಶೇಷ ಗುಪ್ತಚರ ಘಟಕದಿಂದ ನಕ್ಸಲರ ಇರುವಿಕೆಯ ಸುಳಿವು ಪಡೆದ ಭದ್ರತಾ ಪಡೆಗಳು ದೊಡ್ಡ ಕಾರ್ಯಾಚರಣೆಯನ್ನೇ ರೂಪಿಸಿದವು. ಅದಕ್ಕಾಗಿ 23 ತಂಡಗಳು, 20 ವಿಶೇಷ ಕಾರ್ಯಾಚರಣೆ ತಂಡ (ಎಸ್​ಒಜಿ), ಎರಡು ಸಿಆರ್​ಪಿಎಫ್ ತಂಡಗಳು ಮತ್ತು ಒಂದು ಬಿಎಸ್​ಎಫ್ ತಂಡ ಹೀಗೆ ವಿವಿಧ ತಂಡಗಳೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಯೋಜಿಸಲಾಯಿತು.

ಇದನ್ನೂ ಓದಿ: ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ

ಕಂಧಮಾಲ್ ಮತ್ತು ಗಂಜಾಮ್ ಜಿಲ್ಲೆಯ ವಿವಿಧ ಕಡೆ ಈ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದವು. ಈ ವೇಳೆ, ನಕ್ಸಲರು ಮುಖಾಮುಖಿಯಾಗಿ ಗುಂಡಿನ ಚಕಮಕಿ ನಡೆದಿದೆ. ಒಟ್ಟು ಐವರು ನಕ್ಸಲರು ಹತರಾಗಿದ್ದಾರೆ.

ಸಮವಸ್ತ್ರ ಧರಿಸಿದ್ದ ನಾಲ್ವರು ಮಾವೋವಾದಿಗಳ ಶವ ಸಿಕ್ಕಿದೆ. ಈ ನಾಲ್ವರಲ್ಲಿ ಇಬ್ಬರು ಮಹಿಳೆಯರೂ ಇದ್ದಾರೆ. ಈ ನಾಲ್ವರು ಮೃತ ನಕ್ಸಲರಿಂದ ಮೂರು ವಿವಿಧ ರೈಫಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಒಬ್ಬ ನಕ್ಸಲನನ್ನು ಗಣೇಶ್ ಯೂಕೆ ಎಂದು ಗುರುತಿಸಲಾಗಿದೆ. ಈತ ಒಡಿಶಾದ ನಕ್ಸಲ್ ಕಾರ್ಯಾಚರಣೆಯ ಮುಖ್ಯಸ್ಥ ಹಾಗೂ ಕೇಂದ್ರೀಯ ಸಮಿತಿ ಸದಸ್ಯನೂ ಆಗಿದ್ದ ಎನ್ನಲಾಗಿದೆ. ಇನ್ನುಳಿದ ಮೃತ ನಕ್ಸಲರ ಗುರುತು ಇನ್ನಷ್ಟೇ ಸಿಗಬೇಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? – Kannada News | When will Virat Kohli and Rohit Sharma play next?

ವಿಜಯ ಹಝಾರೆ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್​ಗೆ ಮರಳಿದ್ದಾರೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ಜೈಪುರದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದ್ದರು. ವಿಶೇಷ ಎಂದರೆ ಈ ಇಬ್ಬರು ದಿಗ್ಗಜರು ಮೊದಲ ಮ್ಯಾಚ್​ನಲ್ಲೇ ಶತಕ ಸಿಡಿಸಿದ್ದಾರೆ.

  • ಆಂಧ್ರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 131 ರನ್ ಬಾರಿಸಿದ್ದಾರೆ.
  • ಸಿಕ್ಕಿಂ ವಿರುದ್ಧದ ಮ್ಯಾಚ್​ನಲ್ಲಿ ಮುಂಬೈ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ 94 ಎಸೆತಗಳನ್ನು ಎದುರಿಸಿದ ಹಿಟ್​ಮ್ಯಾನ್ 9 ಭರ್ಜರಿ ಸಿಕ್ಸ್ ಹಾಗೂ 18 ಫೋರ್​ಗಳೊಂದಿಗೆ 155 ರನ್ ಬಾರಿಸಿದ್ದಾರೆ.

ಅಂದರೆ 15 ವರ್ಷಗಳ ಬಳಿಕ ದೇಶೀಯ ಏಕದಿನ ಪಂದ್ಯವಾಡಿದ ವಿರಾಟ್ ಕೊಹ್ಲಿ ಭರ್ಜರಿ ಸೆಂಚುರಿಯೊಂಧಿಗೆ ಅಬ್ಬರಿಸಿದ್ದಾರೆ. ಮತ್ತೊಂದೆಡೆ 7 ವರ್ಷಗಳ ಬಳಿಕ ವಿಜಯ ಹಝಾರೆ ಪಂದ್ಯವಾಡಿದ ರೋಹಿತ್ ಶರ್ಮಾ ಕೂಡ ಶತಕದೊಂದಿಗೆ ಮಿಂಚಿದ್ದಾರೆ. ಈ ಅಬ್ಬರದೊಂದಿಗೆ ಇಬ್ಬರು ದಿಗ್ಗಜರು ತಮ್ಮ ಫಾರ್ಮ್​ ಅನ್ನು ಮುಂದುವರೆಸಿದ್ದಾರೆ.

ಮತ್ತೆ ಕಣಕ್ಕಿಳಿಯುವುದು ಯಾವಾಗ?

ವಿಜಯ ಹಝಾರೆ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಡಿಸೆಂಬರ್ 26 ರಂದು ನಡೆಯಲಿರುವ ದ್ವಿತೀಯ ಪಂದ್ಯದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಏಕೆಂದರೆ ಬಿಸಿಸಿಐ, ಟೀಮ್ ಇಂಡಿಯಾ ಆಟಗಾರರಿಗೆ ವಿಜಯ ಹಝಾರೆ ಟೂರ್ನಿಯಲ್ಲಿ ಕನಿಷ್ಠ 2 ಪಂದ್ಯಗಳನ್ನಾಡುವಂತೆ ಸೂಚಿಸಲಾಗಿದೆ. ಹೀಗಾಗಿ ಶುಕ್ರವಾರ ನಡೆಯಲಿರುವ ದ್ವಿತೀಯ ಸುತ್ತಿನ ಪಂದ್ಯಗಳಲ್ಲೂ ರೋ-ಕೊ ಜೋಡಿ ಮತ್ತೆ ಕಣಕ್ಕಿಳಿಯಲಿದ್ದಾರೆ.

  • ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಮುಂಬೈ ಮತ್ತು ಉತ್ತರಾಖಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವುದು ಖಚಿತ.
  • ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ದೆಹಲಿ ಮತ್ತು ಗುಜರಾತ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಎರಡು ಮ್ಯಾಚ್​ಗಳ ಬಳಿಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಏಕೆಂದರೆ ಜನವರಿ 11 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಶುರುವಾಗಲಿದ್ದು, ಅದಕ್ಕೂ ಮುನ್ನ ಸಂಪೂರ್ಣ ವಿಶ್ರಾಂತಿ ಪಡೆದು ಹಿಟ್​ಮ್ಯಾನ್, ಕಿಂಗ್ ಕೊಹ್ಲಿ ಜೋಡಿ ಮತ್ತೆ ಅಭ್ಯಾಸಕ್ಕೆ ಮರಳುವ ಸಾಧ್ಯತೆಯಿದೆ.

Source link

SBI Recruitment 2025: SBIನಲ್ಲಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು! – Kannada News | SBI SCO Recruitment 2025: Last Date Extended for 996 Graduate Officer Posts!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಪದವೀಧರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ SCO ಹುದ್ದೆಯ ನೋಂದಣಿ ಗಡುವನ್ನು ವಿಸ್ತರಿಸಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಜನವರಿ 5 ರವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ .

ಅರ್ಹತೆ ಮತ್ತು ವಯಸ್ಸಿನ ಮಿತಿ:

ಎಸ್‌ಬಿಐ ಹೊರಡಿಸಿದ ಅಧಿಕೃತ ಹುದ್ದೆಯ ಅಧಿಸೂಚನೆಯ ಪ್ರಕಾರ, ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹುದ್ದೆಗೆ ಅನುಗುಣವಾಗಿ ವಯಸ್ಸಿನ ಮಿತಿ ಬದಲಾಗುತ್ತದೆ. ಅರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಬ್ಯಾಂಕ್ ನೀಡುವ ನೇಮಕಾತಿ ಜಾಹೀರಾತನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದಾಗ್ಯೂ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವ್ಯಕ್ತಿಗಳ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ಪಡೆದಿರುತ್ತಾರೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ವೃತ್ತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • SBI SCO ನೋಂದಣಿ ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
  • ವಿವರಗಳನ್ನು ನಮೂದಿಸಿ ನೋಂದಾಯಿಸಿ ಮತ್ತು ಫಾರ್ಮ್ ಅನ್ನು ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಸಲ್ಲಿಸಿ.

ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ವೈಯಕ್ತಿಕ/ದೂರವಾಣಿ/ವಿಡಿಯೋ ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನವು 100 ಅಂಕಗಳನ್ನು ಹೊಂದಿರುತ್ತದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತೆಯನ್ನು ನಿರ್ಧರಿಸಲಾಗುತ್ತದೆ. ನಂತರ ಯಶಸ್ವಿ ಅಭ್ಯರ್ಥಿಗಳು ದಾಖಲೆ ಪರಿಶೀಲನೆ ಸೇರಿದಂತೆ ಮುಂದಿನ ಆಯ್ಕೆ ಪ್ರಕ್ರಿಯೆಗೆ ಮುಂದುವರಿಯುತ್ತಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ.

ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ ಪ್ರಕಾರ ಏಕ-ಶಿಕ್ಷಕ ಶಾಲೆಗಳ ಸಂಖ್ಯೆ ಹಾಸನದಲ್ಲಿಯೇ ಹೆಚ್ಚಾಗಿವೆ. ನಂತರದ ಸ್ಥಾನವನ್ನು ತುಮಕೂರು ಪಡೆದಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರವು 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿದ್ದು, ಇದು ಕಳೆದ ವರ್ಷ ನೇಮಕಗೊಂಡ ಅತಿಥಿ ಶಿಕ್ಷಕರಿಗಿಂತ ಹೆಚ್ಚು ಎಂದು ಈಗಾಗಲೇ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ; ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​

ಏಕ-ಶಿಕ್ಷಕ ಶಾಲೆಗಳ ಪೈಕಿ ಕೆಲವೊಂದರಲ್ಲಿ ವಿದ್ಯಾರ್ಥಿಗಳ ಸಂಖ್ಯೆ 30ಕ್ಕಿಂತ ಹೆಚ್ಚಿದ್ದು, ಇವುಗಳಲ್ಲಿ ಬಹುಪಾಲು ಪ್ರಾಥಮಿಕ ಶಾಲೆಗಳಾಗಿವೆ. ಈ ಶಿಕ್ಷಕರು 1ರಿಂದ 5ನೇ ತರಗತಿಗಳವರೆಗೆ ಪಾಠ ಮಾಡಬೇಕಾಗಿರುವುದರಿಂದ, ಎಲ್ಲ ಮಕ್ಕಳನ್ನೂ ಒಂದೇ ತರಗತಿಯಲ್ಲಿ ಸೇರಿಸಿ ಪಾಠ ಮಾಡುವುದರ ಹೊರತು ಅವರಿಗೆ ಬೇರೆ ಆಯ್ಕೆಯಿಲ್ಲ. ಆದರೆ ಒಬ್ಬ ಶಿಕ್ಷಕನಿಗೆ ಎಲ್ಲ ತರಗತಿಗಳನ್ನು ನಿರ್ವಹಿಸುವುದು ಅಸಾಧ್ಯ. ಇದು ಮಕ್ಕಳ ಕಲಿಕೆಯ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಅತಿ ಹೆಚ್ಚು ಏಕ-ಶಿಕ್ಷಕ ಶಾಲೆಗಳಿರುವ ಜಿಲ್ಲೆಗಳು

  • ಹಾಸನ – 586
  • ತುಮಕೂರು – 426
  • ಕೋಲಾರ – 347
  • ಚಿಕ್ಕಬಳ್ಳಾಪುರ – 334

ಅತಿ ಕಡಿಮೆ ಏಕ-ಶಿಕ್ಷಕ ಶಾಲೆಗಳಿರುವ ಜಿಲ್ಲೆಗಳು

  • ಧಾರವಾಡ – 26
  • ಬೆಂಗಳೂರು ಉತ್ತರ – 39
  • ವಿಜಯನಗರ – 45
  • ಗದಗ – 46

188 ಶಾಲೆಗಳಲ್ಲಿ ಶೂನ್ಯ ದಾಖಲಾತಿ!

ವಿಧಾನಪರಿಷತ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 188 ಸರ್ಕಾರಿ ಶಾಲೆಗಳಲ್ಲಿ ಒಂದೂ ಪ್ರವೇಶವಾಗಿಲ್ಲ. ಇದರಲ್ಲಿ 160 ಕಿರಿಯ ಪ್ರಾಥಮಿಕ ಶಾಲೆಗಳು, 25 ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು 3 ಪ್ರೌಢಶಾಲೆಗಳಿವೆ. ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ತುಮಕೂರಿನಲ್ಲಿ 45 ಇದ್ದು, ನಂತರ ಕಲಬುರಗಿ 21, ಕೋಲಾರ 20, ಕೊಪ್ಪಳ 18 ಮತ್ತು ಬೀದರ್​​ನಲ್ಲಿ 17 ಇವೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Exploring Leech Therapy’s Role in Cancer Care

ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಕಾಯಿಲೆಗಳಿಂದ ಜನ ಬಳಲುತ್ತಿದ್ದಾರೆ. ಇದಕ್ಕೆ ಈಗಿನವರ ಜೀವನಶೈಲಿಯೇ ಕಾರಣವಾಗಿರಬಹುದು. ಕೆಲವು ರೋಗಗಳನ್ನು ಮನೆಮದ್ದಿನಿಂದ ಇನ್ನು ಕೆಲವನ್ನು ವೈದ್ಯರ ಸಲಹೆ ಮತ್ತು ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಆದರೆ ಕೆಲವು ರೋಗಗಳ ಇಲಾಜಿಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಅದರಲ್ಲಿಯೂ ಅವುಗಳನ್ನು ಬುಡದಿಂದ ಕಿತ್ತು ಹಾಕುವುದರ ಜೊತೆಗೆ ದೇಹದ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗದಂತೆ ನೋಡಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಈ ರೀತಿ ರೋಗಗಳನ್ನು ವಾಸಿ ಮಾಡಲು ಪರಿಣಾಮಕಾರಿ ಉಪಚಾರಗಳಲ್ಲಿ ಜಿಗಣೆ ಚಿಕಿತ್ಸೆಯೂ (Leech Therapy’s) ಒಂದು. ಇದು ಅನೇಕ ರೋಗಗಳಿಂದ ಮುಕ್ತಿ ಪಡೆಯಲು ಸಹಕಾರಿಯಾಗಿದೆ. ಆದರೆ ಇದನ್ನು ಯಾವ ಕಾಯಿಲೆಗಳ ಇಲಾಜಿಗೆ ಬಳಕೆ ಮಾಡಲಾಗುತ್ತದೆ, ಕ್ಯಾನ್ಸರ್ ತಡೆಯಲು ಜಿಗಣೆ ಚಿಕಿತ್ಸೆಯನ್ನು ಬಳಸಬಹುದೇ ಎಂಬ ಅನುಮಾನಗಳಿರುತ್ತದೆ ಅಂತವರು ಈ ಸ್ಟೋರಿ ಮೂಲಕ ಮಾಹಿತಿ ಪಡೆಯಬಹುದು.

ಜಿಗಣೆ ಚಿಕಿತ್ಸೆ ಹೇಗೆ ನಡೆಯುತ್ತದೆ?

ಈ ಜಿಗಣೆ ಥೆರಪಿಯಲ್ಲಿ ಜೀವಂತ ಹುಳವನ್ನು ಬಳಸಲಾಗುತ್ತದೆ. ಚಿಕಿತ್ಸೆಯ ಸಮಯದಲ್ಲಿ, ಇದು ದೇಹಕ್ಕೆ ಅಂಟಿಕೊಳ್ಳುತ್ತದೆ. ಬಳಿಕ ಅವು ರಕ್ತದಿಂದ ಕಲ್ಮಶಗಳನ್ನು ಹೀರಿಕೊಳ್ಳುತ್ತವೆ. ದೇಹದ ಮೇಲೆ 15- 20 ನಿಮಿಷಗಳ ಕಾಲ ಇರಿಸಿ ತೆಗೆಯಲಾಗುತ್ತದೆ. ನರಹುಲಿ, ಮೊಡವೆ ಸೇರಿದಂತೆ ನಾನಾ ರೀತಿಯ ಸಮಸ್ಯೆಗೆ ಇದು ಪರಿಣಾಮಕಾರಿಯಾಗಿದೆ.

ಜಿಗಣೆ ಚಿಕಿತ್ಸೆ ಯಾವ ಕಾಯಿಲೆಗಳಿಗೆ ಪ್ರಯೋಜನಕಾರಿ?

  • ಕೀಲು ನೋವು, ಸಂಧಿವಾತ
  • ಚರ್ಮ ರೋಗಗಳು
  • ರಕ್ತ ಪರಿಚಲನೆ ಸಮಸ್ಯೆ
  • ಮೈಗ್ರೇನ್‌ಗೆ ಸಹಾಯ ಮಾಡುತ್ತದೆ
  • ತಲೆನೋವಿಗೆ ಉಪಯುಕ್ತ
  • ಉರಿಯೂತದಿಂದ ಪರಿಹಾರ ಪಡೆಯಲು ಪ್ರಯೋಜನಕಾರಿ

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಜಿಗಣೆ ಚಿಕಿತ್ಸೆಯು ಕ್ಯಾನ್ಸರ್ ಗುಣಪಡಿಸಬಹುದೇ?

ಜಿಗಣೆ ಥೆರಪಿಯಿಂದ ಕ್ಯಾನ್ಸರ್‌ ಗುಣಪಡಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಉಬ್ಬುವುದು, ನೋವು, ಗಡ್ಡೆಗಳು ಮತ್ತು ಊತದಂತಹ ರೋಗಲಕ್ಷಣಗಳಿಂದ ಪರಿಹಾರ ಪಡೆಯಲು ಇದರ ಬಳಕೆ ಪರಿಣಾಮಕಾರಿಯಾಗಿದೆ. ಅದರಲ್ಲಿಯೂ ಇಲ್ಲಿಯವರೆಗೆ, ಜಿಗಣೆ ಚಿಕಿತ್ಸೆಯು ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸುತ್ತದೆ ಎಂದು ತೋರಿಸುವ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಬೇಕಾದಲ್ಲಿ ನೀವು ಇದನ್ನು ಪ್ರಯತ್ನಿಸಬಹುದು.

ಜಿಗಣೆ ಥೆರಪಿ ಯಾರಿಗೆ ಒಳ್ಳೆಯದಲ್ಲ ?

ರಕ್ತಹೀನತೆ, ರಕ್ತಸ್ರಾವದ ಅಸ್ವಸ್ಥತೆಗಳು ಅಥವಾ ದುರ್ಬಲಗೊಂಡ ರೋಗನಿರೋಧಕ ಶಕ್ತಿ ಇರುವವರಿಗೆ ಇದು ಹಾನಿಕಾರಕವಾಗಬಹುದು. ಜಿಗಣೆ ಚಿಕಿತ್ಸೆಯನ್ನು ನಿರ್ಧರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್ – Kannada News | Bangalore Power Cut on December 26: Electricity Outage in These Areas Due to BESCOM Maintenance

ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಡಿಸೆಂಬರ್ 26, 2025ರಂದು ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜತೆಗೆ, ಎಕ್ಸ್​ ಸಂದೇಶದ ಮೂಲಕವೂ ಮಾಹಿತಿ ನೀಡಿದೆ.

ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ಪವರ್ ಕಟ್?

ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕಗ್ಗೇನಹಳ್ಳಿ ಸಬ್‌ಸ್ಟೇಷನ್‌ನ 9-7 ಫೀಡರ್ ವ್ಯಾಪ್ತಿಯಲ್ಲಿ ಕೇಬಲ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವುದರಿಂದ ಈ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರದು.

ಯಾವೆಲ್ಲ ಏರಿಯಾಗಳಲ್ಲಿ ಪವರ್ ಕಟ್?

ವಿದ್ಯುತ್ ವ್ಯತ್ಯಯಕ್ಕೆ ಒಳಪಡುವ ಪ್ರದೇಶಗಳಲ್ಲಿ ನಾರ್ಥ್ ಗೇಟ್ 1, 2, 3, ಎಂಬಾಸಿ, ಫೀಲಿಪ್ಸ್ ಕಂಪನಿ, ದ್ವಾರಕನಗರ, ಬಾಬಾನಗರ, ಕಗ್ಗೇನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಬಾಗಲೂರು ಕ್ರಾಸ್, ಮಟ್ಟು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಸೇರಿವೆ.

ಇದನ್ನೂ ಓದಿ: Viral: ಪವರ್ ಕಟ್ ನೆಪ ಹೇಳಿ ಕಚೇರಿ ಕೆಲಸದಿಂದ ತಪ್ಪಿಸಿಕೊಂಡ ಉದ್ಯೋಗಿಯನ್ನು ತರಾಟೆಗೆ ತೆಗೆದುಕೊಂಡ ಮ್ಯಾನೇಜರ್

ನಿರ್ವಹಣಾ ಕಾರ್ಯ ಪೂರ್ಣಗೊಂಡ ನಂತರ ವಿದ್ಯುತ್ ಸರಬರಾಜು ಪುನಃ ಆರಂಭಿಸಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’ – Kannada News | Kannada Films Block BookMyShow Ratings: Mark and 45 Use Court Order to Combat Hate Reviews

ಬುಕ್ ಮೈ ಶೋ ಮೊದಲಾದ ರೇಟಿಂಗ್ ನೋಡಿ ಜನರು ಸಿನಿಮಾ ವೀಕ್ಷಿಸಲು ತೆರಳೋದು ಸಾಮಾನ್ಯ. ಆದರೆ, ಈಗ ಅದಕ್ಕೆ ಬ್ರೇಕ್ ಬೀಳುತ್ತಿದೆ. ಬುಕ್ ಮೈ ಶೋನಲ್ಲಿ ಬರೋ ರೇಟಿಂಗ್ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷದ ಕಾರಣಕ್ಕೆ ಅನೇಕರು ಸುಳ್ಳು ರೇಟಿಂಗ್ ಕೊಟ್ಟ ಉದಾಹರಣೆ ಇದೆ. ಇದೇ ಕಾರಣದಿಂದ ಸಿನಿಮಾ ತಂಡದವರು ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ‘45’ (45 Movie) ಹಾಗೂ ‘ಮಾರ್ಕ್’ ಟೀಂ ಇದೇ ತಂತ್ರ ಉಪಯೋಗಿಸಿದೆ.

ಡಿಸೆಂಬರ್ 11ರಂದು ತೆರೆಗೆ ಬಂದ ‘ಡೆವಿಲ್’ ತಂಡದವರು ನೆಗೆಟಿವ್ ವಿಮರ್ಶೆ ಸಿಗೋ ಭಯದಲ್ಲಿ ಕೋರ್ಟ್​​ನಿಂದ ಆರ್ಡರ್ ತಂದಿದ್ದರು. ಇದನ್ನು ಬುಕ್ ಮೈ ಶೋ ಆ್ಯಪ್​ಗೆ ಸಲ್ಲಿಕೆ ಮಾಡಿದ್ದರು. ಇದರ ಅನುಸಾರ ಬುಕ್ ಮೈ ಶೋನವರು ರೇಟಿಂಗ್ ನೀಡುವ ಆಯ್ಕೆಯನ್ನು ನಿಷ್ಕ್ರಿಯ ಗೊಳಿಸಿದ್ದರು. ಈಗ ‘ಮಾರ್ಕ್’ ಹಾಗೂ ‘45’ ಸಿನಿಮಾ ಕೂಡ ಇದೇ ತಂತ್ರ ಉಪಯೋಗಿಸಿದೆ.

‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಪರಭಾಷಾ ಕಲಾವಿದರೂ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು, ‘45’ ಸಿನಿಮಾದಲ್ಲಿ ಉಪೇಂದ್ರ, ಶಿವರಾಜ್​ಕುಮಾರ್, ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ. ಈ ಎರಡೂ ಸಿನಿಮಾಗಳು ದೊಡ್ಡ ಬಜೆಟ್​​ನಲ್ಲಿ ರೆಡಿ ಆಗಿವೆ. ಹೀಗಾಗಿ ಎರಡೂ ಚಿತ್ರಕ್ಕೆ ಗಳಿಕೆ ತುಂಬಾನೇ ಮುಖ್ಯವಾಗಿದೆ.

45- ಮಾರ್ಕ್ ಸಿನಿಮಾಗೆ ಬರಲ್ಲ ರೇಟಿಂಗ್ ಆಪ್ಶನ್

ದ್ವೇಷದ ಕಾರಣಕ್ಕೆ ಸಿನಿಮಾಗೆ ನೆಗೆಟಿವ್ ವಿಮರ್ಶೆ ಹಬ್ಬಿಸೋ ಭಯ ತಂಡವನ್ನು ಕಾಡಿದೆ. ಈ ಕಾರಣದಿಂದ ತಂಡದವರು ಕೋರ್ಟ್​​ನಿಂದ ಆರ್ಡರ್ ತಂದಿದೆ. ಮುಂದಿನ ದಿನಗಳಲ್ಲಿ ದೊಡ್ಡ ಬಜೆಟ್​​ ಸಿನಿಮಾಗಳು ಇದೇ ಟ್ರೆಂಡ್ ಫಾಲೋ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಮಾರ್ಕ್’ ಹಾಗೂ ‘45’ ಎರಡೂ ಕನ್ನಡದ ಸಿನಿಮಾಗಳು. ಈ ಚಿತ್ರಗಳು ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಸಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಎರಡೂ ಸಿನಿಮಾಗೆ ಉತ್ತಮ ಟಾಕ್ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:45 pm, Thu, 25 December 25

Source link

Viral: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ – Kannada News | Losses in the industry due to Covid; Businessman takes up Rapido driving career

ಜೀವನ ಎಂದ ಮೇಲೆ ಏರಿಳಿತಗಳು ಸಹಜ. ಬದುಕು ಕೆಲವೊಮ್ಮೆ ಒಂದರ ಮೇಲೆ ಒಂದರಂತೆ ಹೊಡೆತಗಳನ್ನು ತಂದೊಡ್ದುತ್ತದೆ. ಎಲ್ಲವನ್ನು ಎದುರಿಸಿ ನಿಲ್ಲಬೇಕು ಅಷ್ಟೇ. ಹೌದು, ಹೋಟೆಲ್ ಮ್ಯಾನೇಜ್ ಮೆಂಟ್ ಪದವಿ ಮಾಡಿ, ಸ್ಟಾರ್ಟ್‌ಅಪ್ (startup) ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದ ಉದ್ಯಮಿಗೆ ಕೋವಿಡ್ ಹೊಡೆತ ತಂದೊಟ್ಟಿತು. ಇದಾದ ಬಳಿಕ ಬದುಕಿಗಾಗಿ ಅವಲಂಬಿಸಿದ್ದು ರ‍್ಯಾಪಿಡೋ ಚಾಲಕ ವೃತ್ತಿ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದ ಚಿರಾಗ್ (Chiraag) ಎಂಬ ವ್ಯಕ್ತಿಗೆ ಈ ಚಾಲಕನ ಬದುಕಿನ ಕಥೆ ಕೇಳಿ ಶಾಕ್‌ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಉದ್ಯಮಿಯಾಗಿದ್ದ ವ್ಯಕ್ತಿ ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡದ್ದನ್ನು ಕೇಳಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಚಿರಾಗ್ (Chiraaag) ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಚಿರಾಗ್ ಚಾಲಕನನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದು ಈ ವೇಳೆ ಚಾಲಕನಾಗಿರುವ ವ್ಯಕ್ತಿಯ ಬದುಕಿನ ಅಸಲಿ ಕಥೆ ಹೊರಬಿದ್ದಿದೆ. ಈ ವ್ಯಕ್ತಿಯೂ ಅಮಿಟಿ ವಿಶ್ವವಿದ್ಯಾಲಯದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಅಧ್ಯಯನ ಮಾಡಿದ್ದು, ಇವರ ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಂತೆ. ನಿವೃತ್ತಿಯ ಬಳಿಕ ಕುಟುಂಬವು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಜೀವನವು ಉತ್ತಮ ರೀತಿಯಲ್ಲಿ ಸಾಗುತ್ತಿತ್ತು. ಹೀಗಿರುವಾಗ ಮಹಾಮಾರಿ ಕೋವಿಡ್ 19 ಈ ವ್ಯಕ್ತಿಯ ಬದುಕನ್ನೇ ಅಲ್ಲೋಲ್ಲ ಕಲ್ಲೋಲವಾಗಿಸಿತ್ತಂತೆ. ಹೀಗಾಗಿ ಕೆಲಸಗಾರರ ಸಂಬಳ, ಬ್ಯಾಂಕ್ ಸಾಲ ಸೇರಿ ಸರಿ ಸುಮಾರು 13-14 ಕೋಟಿ ರೂಪಾಯಿ ನಷ್ಟವಾಯಿತು ಎಂದು ಹೇಳಿಕೊಂಡಿದ್ದಾನೆ.

ವೈರಲ್ ಪೋಸ್ಟ್ ಇಲ್ಲಿದೆ

ಹೀಗಾಗಿ ಮತ್ತೆ ಉದ್ಯಮದಲ್ಲಿ ಚೇತರಿಸಿಕೊಳ್ಳುವುದು ಅಸಾಧ್ಯವಾಯಿತು. ಕೈಯಲ್ಲಿದ್ದ ಐದು ಲಕ್ಷ ರೂಪಾಯಿಯಲ್ಲಿ ನಾಲ್ಕು ಲಕ್ಷ  ರೂ ಗೆಳೆಯನೊಂದಿಗೆ ಹೂಡಿಕೆ ಮಾಡಿ ಮತ್ತೊಮ್ಮೆ ಸ್ಟಾರ್ಟ್‌ಅಪ್ ಆರಂಭಿಸಿದ್ದು, ಆದರೆ ಮತ್ತೆ ನಷ್ಟವಾಯಿತು. ಕೈಯಲ್ಲಿ ಹಣವಿಲ್ಲದೇ ತನ್ನ ಬಳಿ ಒಂದೇ ಒಂದು ಬೈಕ್ ಎಂದು ತನ್ನ ರ‍್ಯಾಪಿಡೋ ಚಾಲಕ ತನ್ನ ಬದುಕಿನ ಬಗ್ಗೆ ಹೇಳಿಕೊಂಡಿದ್ದಾನೆ.

ಈ ಬೈಕ್ ಇಟ್ಟುಕೊಂಡು ರ‍್ಯಾಪಿಡೋ ಚಾಲಕನಾಗಿ ಈ ವೃತ್ತಿಯನ್ನು ಆರಂಭಿಸಿದೆ. ನಾನು ಯಾವುದನ್ನು ಬಿಟ್ಟುಕೊಡುತ್ತಿಲ್ಲ. ನಾನು ಇನ್ನೂ ದೇವರನ್ನು ನಂಬುತ್ತೇನೆ. ಕೊನೆಯ ಬಾರಿಗೆ ಪ್ರಯತ್ನಿಸುತ್ತೇನೆ. ನಾನು ಬಿಟ್ಟುಕೊಡುವ ಮೊದಲು ಇನ್ನೊಂದು ಹೊಡೆತ ಎಂದು ಹೇಳುತ್ತಿದ್ದಂತೆ ಈ ಪ್ರಯಾಣಿಕನ ಕಣ್ಣು ಒದ್ದೆಯಾಗಿದೆ. ನನಗೆ ಏನು ಹೇಳಬೇಕೆಂದು ತಿಳಿಯಲಿಲ್ಲ. ಸುಮ್ಮನೆ ಕುಳಿತೆ, ಆದರೆ ಅವರ ಮಾತು ನನ್ನ ಹೃದಯ ಮುಟ್ಟಿತು. ಜೀವನ ಕೆಲವೊಮ್ಮೆ ಅನ್ಯಾಯ ಮಾಡುತ್ತದೆ ಎಂದು ರ‍್ಯಾಪಿಡೋ ಚಾಲಕನ ಬದುಕಿನ ಕಥೆಯ ಕೇಳಿ ಪ್ರಯಾಣಿಕನು ಬೇಸರ ವ್ಯಕ್ತಪಡಿಸಿದ್ದಾನೆ.

ಇದನ್ನೂ ಓದಿ:ಜೀವನಕ್ಕಾಗಿ ಆಟೋನೇ ಆಧಾರ; ಇದು ದೈಹಿಕ ನ್ಯೂನತೆ ಮೆಟ್ಟಿನಿಂತ ವ್ಯಕ್ತಿಯ ಕಥೆ

ಈ ಪೋಸ್ಟ್ ಇದುವರೆಗೆ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ವ್ಯಕ್ತಿಯ ಕಥೆ ನನಗೂ ತುಂಬಾ ನೋವುಂಟು ಮಾಡಿತು.. ಬದುಕು ನಿಜಕ್ಕೂ ಅನಿಶ್ಚಿತ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬದುಕಿನಲ್ಲಿ ಒಳ್ಳೆಯದಾಗುತ್ತೆ, ತಾಳ್ಮೆ ಇರಲಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಕೋವಿಡ್ ಅನೇಕ ಕುಟುಂಬಗಳನ್ನು ಆರ್ಥಿಕವಾಗಿ ನಾಶ ಮಾಡಿತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link