Headlines

ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್

ನವದೆಹಲಿ, ಏಪ್ರಿಲ್ 5: ಟಾಟಾ ಟ್ರಸ್ಟ್ಸ್ ಅಡಿಗೆ ಬರುವ ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ನಿಂದ ವೇಣು ಶ್ರೀನಿವಾಸನ್ (Venu Srinivasan) ಅವರು ಹೊರಬಿದ್ದಿದ್ದಾರೆ. ನಿಯಮಗಳ ಪ್ರಕಾರ ಟ್ರಸ್ಟೀ ಆಗಿ ಕೆಲಸ ಮಾಡಲು ಅರ್ಹತೆ ಹೊಂದಿಲ್ಲ ಎನ್ನುವ ತಕರಾರು ಬಂದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾಜಿ ಟ್ರಸ್ಟೀ ಮೆಹ್ಲೀ ಮಿಸ್ತ್ರಿ ಅವರು ಟ್ರಸ್ಟೀಗಳ ಆಯ್ಕೆ ಅಕ್ರಮವಾಗಿ ಆಗಿದೆ ಎಂದು ಆಕ್ಷೇಪ ಸಲ್ಲಿಕೆ ಮಾಡಿದ್ದರು. ಬಾಯ್ ಹೀರಾಬಾಯ್ ಚಾರಿಟಬಲ್ ಟ್ರಸ್ಟ್​ಗೆ (Bai Hirabai Charitable Trust) ವೇಣು…

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ: ಮರಿಗಳ ಜೊತೆಗೆ ತಾಯಿ ಹುಲಿಯ ದರ್ಶನ

ಚಾಮರಾಜನಗರ, ಏಪ್ರಿಲ್​​ 05: ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

ಬೆಂಗಳೂರು (ಏ. 05): ಅನೇಕ ಜನರು ತಮ್ಮ ಮನೆಗಳಲ್ಲಿ ಮನಿ ಪ್ಲಾಂಟ್ (Money Plant) ಅನ್ನು ಬೆಳೆಸುತ್ತಾರೆ. ಈ ಸಸ್ಯವು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಆಕರ್ಷಕವಾಗಿ ಕಾಣುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಈ ಇಂಡೋರ್ ಪ್ಲಾಂಟ್ ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಅದೃಷ್ಟ ಮತ್ತು ಸಂಪತ್ತು ಬರುತ್ತದೆ ಎಂದು ಭಾರತೀಯ ಸಂಸ್ಕೃತಿಯಲ್ಲಿ ಬಲವಾಗಿ ನಂಬಲಾಗಿದೆ. ವೈಜ್ಞಾನಿಕವಾಗಿ, ಈ ಸಸ್ಯವು ಅದರ ಸುತ್ತಲೂ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ,…

Read More

‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

ಸಿನಿಮಾದ ಅವಧಿ ಎಷ್ಟೇ ದೀರ್ಘವಾಗಿದ್ದರೂ, ಕಥೆ ಪ್ರೇಕ್ಷಕರನ್ನು ಹಿಡಿದಿಡುವಂತಿದ್ದರೆ ಅದು ಯಶಸ್ವಿಯಾಗುತ್ತದೆ ಎಂಬುದನ್ನು ‘ಧುರಂಧರ್’ ಸಿನಿಮಾ ಸಾಬೀತುಪಡಿಸಿದೆ. ಈ ಚಿತ್ರದ ಎರಡು ಭಾಗಗಳ ಒಟ್ಟು ಅವಧಿ 7 ಗಂಟೆಗಳಿಗೂ ಹೆಚ್ಚು. ಆದರೂ ರೋಚಕ ನಿರೂಪಣೆಯಿಂದಾಗಿ ಪ್ರೇಕ್ಷಕರು ಈ ಸಿನಿಮಾವನ್ನು ಸಂಭ್ರಮಿಸಿದರು. ಇದೀಗ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ (Ramayana) ಕೂಡ ಇದೇ ದಾರಿಯಲ್ಲಿ ಸಾಗಲು ಸಿದ್ಧವಾಗುತ್ತಿದೆ. ಎರಡು ಭಾಗಗಳಲ್ಲಿ ಬರುತ್ತಿರುವ ಈ ಸಿನಿಮಾದ ಅವಧಿ 6 ಗಂಟೆ ಇರಲಿದೆ. ನಿರ್ದೇಶಕ ನಿತೇಶ್ ತಿವಾರಿ ಅವರ ಈ ಮಹತ್ವಾಕಾಂಕ್ಷೆಯ…

Read More

ಸಿಎಂ ಸಿದ್ದರಾಮಯ್ಯಗೆ ಹೆಚ್​​.ಡಿ. ಕುಮಾರಸ್ವಾಮಿ ಸವಾಲ್​: ಕೇಂದ್ರ ಸಚಿವ ಹೇಳಿದ್ದೇನು?

ದಾವಣಗೆರೆ, ಏಪ್ರಿಲ್​​ 05: ಜೆಡಿಎಸ್​​ ಬಗ್ಗೆ ಟೀಕಿಸುವ ಸಿಎಂ ಸಿದ್ದರಾಮಯ್ಯ ಅವರು ಪ್ರಾದೇಶಿಕ ಪಕ್ಷವೊಂದನ್ನು ಸ್ಥಾಪಿಸಿ ಚುನಾವಣೆಗೆ ಸ್ಫರ್ಧಿಸಲಿ. ಆಗ ಅವರು ಎಷ್ಟು ಕ್ಷೇತ್ರ ಗೆಲ್ಲುತ್ತಾರೆ ಎಂಬುದು ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಕುಟುಂಬ ರಾಜಕಾರಣದ ವಿಷಯವನ್ನೂ ಪ್ರಸ್ತಾಪಿಸಿದ ಅವರು, ತಮ್ಮ ಕುಟುಂಬದ ರಾಜಕೀಯ ಪ್ರವೇಶವು ಜನರ ಬೆಂಬಲದಿಂದ ಆದದ್ದು, ಆದರೆ ಸಿದ್ದರಾಮಯ್ಯರ ಮಗನ ರಾಜಕೀಯ ಪ್ರವೇಶವು ರಾಜ್ಯದ ಉದ್ದಾರಕ್ಕಲ್ಲ, ಬದಲಿಗೆ ವಸೂಲಿಗಾಗಿ ಎಂದು ಆರೋಪಿಸಿದ್ದಾರೆ. ಜೆಡಿಎಸ್ 40 ಸೀಟುಗಳನ್ನು ಗೆದ್ದಿದ್ದು…

Read More

Video: ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

ಫಾರೂಕಾಬಾದ್, ಮಾರ್ಚ್​ 05: ಮೊಮ್ಮನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್​ನಲ್ಲಿ ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಾರಿನ ಒಳಗೆ ಕುಳಿತ ಬಳಿಕ ಆಕೆ ಮನೆಯ ಗೇಟ್ ಮುಚ್ಚಲು ಹೋಗಿದ್ದರು. ಆಗ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಕಾರು ಹಿಂದಕ್ಕೆ ಚಲಿಸಿತ್ತು. ಇಳಿಜಾರಿದ್ದ ಕಾರಣ ವೇಗವಾಗಿ ಹಿಂದೆ ಬಂದಿದ್ದು, ಮಹಿಳೆ ಕಾರು ಹಾಗೂ ಕಾಂಪೌಂಡ್ ನಡುವೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಥಾರ್ ಸದ್ದು ಮಾಡುತ್ತಾ ಕೆಳಗೆ…

Read More

Weekly job horoscope: ಏಪ್ರಿಲ್ 05ರಿಂದ 11 ರ ವರೆಗಿನ 12 ರಾಶಿಗಳ ಉದ್ಯೋಗ ಭವಿಷ್ಯ ಇಲ್ಲಿದೆ

ಏಪ್ರಿಲ್ 05ರಿಂದ ಏಪ್ರಿಲ್ 11ರವರೆಗೆ ಏಪ್ರಿಲ್ ತಿಂಗಳ ಮೊದಲನೇ ವಾರವಾಗಿದ್ದು ಭವಿಷ್ಯ ಬೇಕಾದ ನಿರ್ಧಾರ, ಉದ್ಯೋಗದಲ್ಲಿ ಬದಲಾವಣೆಯ ಭಯ, ಸಲ್ಲದ ಆರೋಪ ಇತ್ಯಾದಿಗಳು ಸಹಜವಿದ್ದರೂ ಎಂದಿಗಿಂತ ಹೆಚ್ಚು ನಿಮ್ಮ ಅನುಭವಕ್ಕೆ ಬರಲಿದೆ. ನಿಮ್ಮ ಒಳ್ಳೆಯತನವೂ ಕೆಲವೊಮ್ಮೆ ಪ್ರಯೋಜನಕ್ಕೆ ಬಾರದ ಸಮಯ. ​​ಮೇಷ ಈ ವಾರ ಕಚೇರಿಯಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಕಠಿಣ ಪರಿಶ್ರಮಕ್ಕೆ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಸಹೋದ್ಯೋಗಿಗಳೊಂದಿಗೆ ವಾಗ್ವಾದ ಬೇಡ. ತಾಳ್ಮೆಯಿಂದ ಕೆಲಸ ಮುಗಿಸಿ, ಭವಿಷ್ಯಕ್ಕೆ ಒಳ್ಳೆಯ ಅಡಿಪಾಯ ಹಾಕಿಕೊಳ್ಳುವಿರಿ. ​ವೃಷಭ ನಿಮ್ಮ ಕ್ರಿಯಾಶೀಲತೆಗೆ…

Read More

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ…

Read More

iPhone 18 Pro Max: ಡಿಎಸ್ಎಲ್ಆರ್ ತರಹದ ಕ್ಯಾಮೆರಾ: ಐಫೋನ್ 18 ಬಗ್ಗೆ ಹೊರಬಿತ್ತು ಶಾಕಿಂಗ್ ಮಾಹಿತಿ

ಬೆಂಗಳೂರು (ಏ. 05): ವಿಶ್ವಪ್ರಸಿದ್ಧ ಟೆಕ್ ದೈತ್ಯ ಆಪಲ್‌ನಿಂದ (Apple) ಮುಂಬರುವ ಐಫೋನ್ 18 ಪ್ರೊ ಮತ್ತು ಐಫೋನ್ 18 ಪ್ರೊ ಮ್ಯಾಕ್ಸ್ ಮಾದರಿಗಳ ಬಗ್ಗೆ ಒಂದೊಂದೆ ಸೋರಿಕೆಗಳು ಹೊರಬರುತ್ತಿವೆ. ಈ ಬಾರಿ ಕಂಪನಿಯು ಛಾಯಾಗ್ರಹಣ ಸಾಮರ್ಥ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ವರದಿಯಾಗಿದೆ. ಹೊಸ ಕ್ಯಾಮೆರಾ ತಂತ್ರಜ್ಞಾನಗಳು ಮತ್ತು ಡಿಎಸ್‌ಎಲ್‌ಆರ್ ತರಹದ ವೈಶಿಷ್ಟ್ಯಗಳು ಬಳಕೆದಾರರಿಗೆ ನೀಡಲು ಆಪಲ್ ಮುಂದಾಗಿದೆಯಂತೆ. ವರದಿಗಳ ಪ್ರಕಾರ, ಐಫೋನ್ 18 ಪ್ರೊ ಸರಣಿಯು ಹೊಸ 48-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸಂವೇದಕವನ್ನು ಒಳಗೊಂಡಿರುವ ಸಾಧ್ಯತೆಯಿದೆ….

Read More

ಅಪ್ರಾಪ್ತರ ಜೀವಕ್ಕೆ ಕುತ್ತು ತರುತ್ತಿರುವ ಬೈಕ್​​ ಸ್ಟಂಟ್​​: ಮೂರು ವರ್ಷಗಳಲ್ಲಿ 27 ಮಂದಿ ಸಾವು

ಬೆಂಗಳೂರು, ಏಪ್ರಿಲ್​​ 05: ಇತ್ತೀಚೆಗೆ ಯುವಕರು ಬೈಕ್​​ ಸ್ಟಂಟ್, ಅಪಾಯಕಾರಿ ರೀತಿ ವಾಹನ ಚಾಲನೆ​​ ಮಾಡುವಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದಾಗಿ ಅದೆಷ್ಟೋ ಸಾವು-ನೋವುಗಳೂ ಸಂಭವಿಸುತ್ತಿವೆ. ಈ ನಡುವೆ ಬಹಿರಂಗಗೊಂಡಿರುವ ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿದೆ. ಇಂತಹ ದುಸ್ಸಾಹಸ ಮಾಡಲು ತೆರಳಿ ಅಪ್ತಾಪ್ತರೇ ಹೆಚ್ಚಾಗಿ ಬಲಿಯಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ವಾಹನಗಳಿಂದ ಸಂಭವಿಸಿದ ಅಪಘಾತಗಳಲ್ಲಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳ ಸಂಬಂಧ ಅಪ್ರಾಪ್ತರು ಹಾಗೂ ಅವರ ಪೋಷಕರ ವಿರುದ್ಧ 1,805 ಪ್ರಕರಣಗಳನ್ನು ದಾಖಲಿಸಲಾಗಿದ್ದು 1.77 ಕೋಟಿ ರೂಪಾಯಿ…

Read More