Category Archives: Blog

Your blog category

ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ – Kannada News | 45 Movie And Devil Movie Releasing today Here is The live video

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ಅಭಿನಯಿಸಿದ್ದಾರೆ. ಈ ಎರಡೂ ಚಿತ್ರಗಳು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ವಿಮರ್ಶೆ ಏನು? ಸಿನಿಮಾ ನೋಡಿದವರು ಯಾವ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ ಎಂಬುದರ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ – Kannada News | Karnataka Weather Alert: Bengaluru Cold, Fog, Disruptions Expected

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru winter weather) ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ ಇರಲಿದೆ. ಬೆಳಿಗ್ಗಿನ ಹೊತ್ತು ತಂಪಾಗಿದ್ದು, ತಾಪಮಾನ ಸುಮಾರು 17°C (63°F) ಇರಲಿದೆ. ಮುಂದಿನ 7 ದಿನಗಳಲ್ಲಿ ಮಂಜು ಬೀಳಲಿದೆ. ರಾತ್ರಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 26°C (79°F) ತಲುಪುವ ನಿರೀಕ್ಷೆಯಿದೆ , ಕನಿಷ್ಠ ತಾಪಮಾನವು ಸುಮಾರು 15°C (59°F) ಇರುತ್ತದೆ. ಡಿಸೆಂಬರ್ ತಿಂಗಳ ಸರಾಸರಿ ತಾಪಮಾನದ ವ್ಯಾಪ್ತಿಯು 16°C ನಿಂದ 28°C (60°F ನಿಂದ 82°F) ವರೆಗೆ ಇರುತ್ತದೆ. ಪ್ರಸ್ತುತ ತಾಪಮಾನವು ಈ ವ್ಯಾಪ್ತಿಯಲ್ಲಿಯೇ ಇರಲಿದೆ. ದಿನವು ಬಹುತೇಕ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ, ಮಳೆಯಾಗುವ ಸಾಧ್ಯತೆ ಕಡಿಮೆ ಇರುತ್ತದೆ, ಇದರಿಂದಾಗಿ ಹಗಲಿನಲ್ಲಿ ಸಾಕಷ್ಟು ಬಿಸಿಲು ಇರುತ್ತದೆ.

ಉತ್ತರ, ಮಧ್ಯ, ದಕ್ಷಿಣ ಒಳನಾಡು ಹಾಗೂ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಇನ್ನು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ ಎಂದು ಹೇಳಲಾಗಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಚಳಿ ಅಧಿಕವಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ರಾಯಚೂರು, ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ಒಣ ಹವೆ ಇರಲಿದೆ. ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ತಂಪಾದ ವಾತಾವರಣ ಇರಲಿ. ಹಾಗಾಗಿ ಮುಂಜಾನೆ ಹೊತ್ತು ವಾಹನ ಸವಾರರು ಸ್ವಲ್ಪ ಎಚ್ಚರದಿಂದ ಇರುವಂತೆ ಹೇಳಿದ್ದಾರೆ. ಹಾಗೂ ಇಂದು ರೈಲ್ವೆ, ವಿಮಾನ ಹಾರಾಟಕ್ಕೂ ಅಡಚಣೆಯಾಗುವ ಸಾಧ್ಯತೆ ಇದೆ. ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಜತೆಗೆ ಚಳಿಯೂ ತೀವ್ರಗೊಳಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | Karnataka Script History With Record Breaking Run Chase

ಏಕದಿನ ಪಂದ್ಯದಲ್ಲಿ 400 ಕ್ಕಿಂತಲೂ ಅಧಿಕ ರನ್​ಗಳನ್ನು ಚೇಸ್ ಮಾಡಿ ಗೆದ್ದಿರುವುದು ಕೇವಲ 2 ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಸೌತ್ ಆಫ್ರಿಕಾ. ಇನ್ನು ಎರಡನೇ ತಂಡ ಕರ್ನಾಟಕ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಬೃಹತ್ ಮೊತ್ತ ಬೆನ್ನತ್ತಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಜಾರ್ಖಂಡ್ ಶಿಖರ್ ಮೋಹನ್ 44 ರನ್ ಬಾರಿಸಿದರೆ, ವಿರಾಟ್ ಸಿಂಗ್ 88 ರನ್ ಕಲೆಹಾಕಿದ್ದರು.

ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಇಶಾನ್ ಕಿಶನ್ ಕರ್ನಾಟಕ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 33 ಎಸೆತಗಳಲ್ಲಿ ಶತಕ ಮೂಡಿಬಂತು. ಅಷ್ಟೇ ಅಲ್ಲದೆ 39 ಎಸೆತಗಳನ್ನು ಎದುರಿಸಿದ ಇಶಾನ್ 14 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 125 ರನ್ ಬಾರಿಸಿದರು.

ಇಶಾನ್ ಕಿಶನ್ ಅವರ ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಜಾರ್ಖಂಡ್ ತಂಡವು 50 ಓವರ್​​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 412 ರನ್​ ಕಲೆಹಾಕಿತು.

ವಿಶ್ವ ದಾಖಲೆಯ ಚೇಸಿಂಗ್:

413 ರನ್​ಗಳ ಕಠಿಣ ಗುರಿ ಪಡೆದ ಕರ್ನಾಟಕ ತಂಡಕ್ಕೆ ಆರಂಭಿಕರಾದ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 114 ರನ್ ಪೇರಿಸಿ ಮಯಾಂಕ್ ಅಗರ್ವಾಲ್ (54) ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಕರುಣ್ ನಾಯರ್ 29 ರನ್​ಗಳ ಕೊಡುಗೆ ನೀಡಿದರು. ಇನ್ನು ಸ್ಮರಣ್ ರವಿಚಂದ್ರನ್ 27 ರನ್​ಗಳಿಸಿದರು. ಇದಾಗ್ಯೂ ಮತ್ತೊಂದೆಡೆ ದೇವದತ್ ಪಡಿಕ್ಕಲ್ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ್ದರು.

ಇನ್ನು ಕೃಷ್ಣನ್ ಶ್ರೀಜಿತ್ (38) ಜೊತೆಗೂಡಿ ಪಡಿಕ್ಕಲ್ ತಂಡದ ಮೊತ್ತವನ್ನು 250 ರನ್​​ಗಳ ಗಡಿದಾಟಿದರು. ಇದರ ಬೆನ್ನಲ್ಲೇ ದೇವದತ್ ಪಡಿಕ್ಕಲ್ ತಮ್ಮ ಭರ್ಜರಿ ಶತಕವನ್ನೂ ಸಹ ಪೂರೈಸಿದರು.

ಶ್ರೀಜಿತ್ ಔಟಾದ ಬೆನ್ನಲ್ಲೇ ಆಗಮಿಸಿದ ಅಭಿನವ್ ಮನೋಹರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 40 ಓವರ್​ ಆಗುವಷ್ಟರಲ್ಲಿ ಕರ್ನಾಟಕ ತಂಡದ ಸ್ಕೋರ್ 300 ರ ಗಡಿದಾಟಿತು.

ಆದರೆ ಕರ್ನಾಟಕ ತಂಡವು 325 ರನ್​ಗಳಿದ್ದ ವೇಳೆ ಭರ್ಜರಿ ಹೊಡೆತಕ್ಕೆ ಮುಂದಾಗಿ ದೇವದತ್ ಪಡಿಕ್ಕಲ್ ವಿಕೆಟ್ ಒಪ್ಪಿಸಿದರು. ಇದರೊಂದಿಗೆ 118 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 147 ರನ್​ ಬಾರಿಸಿದ್ದ ಪಡಿಕ್ಕಲ್ ಇನಿಂಗ್ಸ್ ಅಂತ್ಯವಾಯಿತು.

ಈ ಹಂತದಲ್ಲಿ ಜೊತೆಗೂಡಿದ ಅಭಿನವ್ ಮನೋಹರ್ (56) ಹಾಗೂ ಧ್ರುವ್ ಪ್ರಭಾಕರ್ (40) ಬಿರುಸಿನ ಬ್ಯಾಟಿಂಗ್​ನೊಂದಿಗೆ 47.3 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಕರ್ನಾಟಕ ತಂಡವು 15 ಎಸೆತಗಳು ಬಾಕಿಯಿರುವಂತೆ 413 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದರೊಂದಿಗೆ ಲಿಸ್ಟ್ ಎ (ಏಕದಿನ ಕ್ರಿಕೆಟ್​) ಪಂದ್ಯದಲ್ಲಿ 400+ ರನ್​ ಚೇಸ್ ಮಾಡಿದ ವಿಶ್ವದ ಎರಡನೇ ತಂಡವೆಂಬ ವಿಶ್ವ ದಾಖಲೆಯನ್ನು ಕರ್ನಾಟಕ ತಂಡ ತನ್ನದಾಗಿಸಿಕೊಂಡಿತು. ಅಷ್ಟೇ ಅಲ್ಲದೆ ವಿಜಯ ಹಝಾರೆ ಟೂರ್ನಿಯಲ್ಲಿ ಅತ್ಯಧಿಕ ರನ್ ಚೇಸ್ ಮಾಡಿ ಗೆದ್ದ ಹೆಗ್ಗಳಿಕೆಗೂ ಪಾತ್ರವಾಯಿತು.

ಇದಕ್ಕೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ 384 ರನ್​ಗಳನ್ನು ಬೆನ್ನತ್ತಿರುವುದು ಸರ್ವಶ್ರೇಷ್ಠ ದಾಖಲೆಯಾಗಿತ್ತು. 2011 ರಲ್ಲಿ ಗೋವಾ ನೀಡಿದ 384 ರನ್​ಗಳನ್ನು ಗುರಿಯನ್ನು ಆಂಧ್ರ ಪ್ರದೇಶ್ ತಂಡ ಚೇಸ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದರು.  ಇದೀಗ 413 ರನ್​ಗಳ ಚೇಸಿಂಗ್​ನೊಂದಿಗೆ ಕರ್ನಾಟಕ ತಂಡ ಹೊಸ ದಾಖಲೆ ನಿರ್ಮಿಸಿದೆ.

ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಧ್ರುವ್ ಪ್ರಭಾಕರ್, ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಅಭಿಲಾಷ್ ಶೆಟ್ಟಿ.

ಇದನ್ನೂ ಓದಿ: ವೈಭವ್ ಆರ್ಭಟಕ್ಕೆ ದಾಖಲೆಗಳೇ ಧೂಳೀಪಟ..!

ಜಾರ್ಖಂಡ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ನಾಯಕ), ಕುಮಾರ್ ಕುಶಾಗ್ರಾ, ಶಿಖರ್ ಮೋಹನ್, ಉತ್ಕರ್ಷ್ ಸಿಂಗ್, ವಿರಾಟ್ ಸಿಂಗ್, ರಾಬಿನ್ ಮಿಂಝ್, ಅನುಕುಲ್ ರಾಯ್, ಶುಭ್ ಶರ್ಮಾ, ಸೌರಭ್ ಶೇಖರ್, ಸುಶಾಂತ್ ಮಿಶ್ರಾ, ವಿಕಾಶ್ ಸಿಂಗ್.

Source link

ಹೃತಿಕ್ ಮನೆಯಲ್ಲಿ ಮದುವೆ ಸಂಭ್ರಮ; ತಂದೆ, ಮಕ್ಕಳ ಜೊತೆ ಹಾಡಿ ಕುಣಿದ ನಟ – Kannada News | Hrithik Roshan Dances with Kids at Cousin Ishaan’s Wedding; Saba Azad Hospitalized

ನಟ ಹೃತಿಕ್ ರೋಷನ್ ಮನೆಯಲ್ಲಿ ಈಗ ಹಬ್ಬದ ವಾತಾವರಣವಿದೆ. ಏಕೆಂದರೆ ಅವರ ಸೋದರಸಂಬಂಧಿ ಇಶಾನ್ ರೋಷನ್ ಇತ್ತೀಚೆಗೆ ವಿವಾಹವಾದರು. ಈ ವಿವಾಹದ ವಿವಿಧ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ವೀಡಿಯೊಗಳಲ್ಲಿ ಒಂದರಲ್ಲಿ, ಹೃತಿಕ್ ಮತ್ತು ಅವರ ತಂದೆ ರಾಕೇಶ್ ರೋಷನ್ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿರುವುದು ಕಂಡು ಬಂದಿದೆ. ಅಭಿಮಾನಿಗಳು ಹೃತಿಕ್ ಡ್ಯಾನ್ಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಹೃತಿಕ್ ವೇದಿಕೆ ಮೇಲೆ ಅನೇಕ ಬಾರಿ ಡ್ಯಾನ್ಸ್ ಮಾಡಿದ್ದಾರೆ. ಆದರೆ, ಮಕ್ಕಳೊಂದಿಗೆ ನೃತ್ಯ ಮಾಡುತ್ತಿರುವುದು ಇದೇ ಮೊದಲು. ಮದುವೆ ಸಮಾರಂಭದಲ್ಲಿ, ಹೃತಿಕ್ ತಮ್ಮ ಇಬ್ಬರು ಮಕ್ಕಳಾದ ರೆಹಾನ್ ಮತ್ತು ಹೃದಾನ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬರುತ್ತದೆ. ಈ ವೀಡಿಯೊ ಪ್ರೇಕ್ಷಕರ ವಿಶೇಷ ಗಮನ ಸೆಳೆದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೊದಲ್ಲಿ, ಹೃತಿಕ್ ರೆಹಾನ್ ಮತ್ತು ಹೃದಾನ್ ಜೊತೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದು. ಅವರ ಸೋದರ ಸೊಸೆ ಸುರಾನಿಕಾ ಸೋನಿ ಮತ್ತು ಸೋದರಸಂಬಂಧಿ ಪಶ್ಮಿನಾ ರೋಷನ್ ಕೂಡ ನೃತ್ಯದಲ್ಲಿ ಭಾಗವಹಿಸಿದ್ದಾರೆ. ಈ ವೀಡಿಯೊದಲ್ಲಿ, ಹೃತಿಕ್ ‘ಇಷ್ಕ್ ತೇರಾ ತಡ್ಪಾವೆ’ ಹಾಡಿಗೆ ನೃತ್ಯ ಮಾಡಡಿದ್ದಾರೆ.

ಹೃತಿಕ್ ಮಕ್ಕಳೊಂದಿಗೆ ನೃತ್ಯ ಮಾಡುವುದನ್ನು ನೋಡಿ ಅಭಿಮಾನಿಗಳು ತುಂಬಾ ಸಂತೋಷಪಟ್ಟಿದ್ದಾರೆ. ‘ಹೃತಿಕ್ ಅವರ ಮಕ್ಕಳು ಎಲ್ಲಾ ಒಳ್ಳೆಯ ವಿಷಯಗಳನ್ನು ಆನುವಂಶಿಕವಾಗಿ ಪಡೆದಿದ್ದಾರೆ’ ಎಂದು ಒಬ್ಬರು ಬರೆದಿದ್ದಾರೆ.

ಮತ್ತೊಂದೆಡೆ, ಈ ವಿವಾಹದ ಗೊಂದಲದ ನಡುವೆ, ಹೃತಿಕ್ ರೋಷನ್ ಅವರ ಗೆಳತಿ ಮತ್ತು ನಟಿ ಸಬಾ ಆಜಾದ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಆಸ್ಪತ್ರೆಯ ಹಾಸಿಗೆಯ ಮೇಲೆ ತಮ್ಮ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಫೋಟೋದಲ್ಲಿ, ಅವರು ತಮ್ಮ ಕೈಗೆ ಸಲೈನ್ ಹಚ್ಚಿಕೊಂಡಿರುವುದು ಕಂಡುಬರುತ್ತದೆ. ‘ಹೊರಗಿನಿಂದ ಏನನ್ನೂ ತಿನ್ನಬೇಡಿ. ನಾನು ನನ್ನ ಸಹೋದರನ ಮದುವೆಯನ್ನು ತಪ್ಪಿಸಿಕೊಳ್ಳುತ್ತಿದ್ದೆ’ ಎಂದು ಅವರು ಫೋಟೋದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಹೃತಿಕ್ ಆಯ್ತು ಈಗ ಶಾರುಖ್ ಖಾನ್ ಜೊತೆ ನಟಿಸಲಿದ್ದಾರಾ ಜೂ ಎನ್​​ಟಿಆರ್?

ಇಶಾನ್ ರೋಷನ್ ಕುಟುಂಬದ ಮದುವೆಯಲ್ಲಿ ಹೃತಿಕ್ ಅವರ ಮಾಜಿ ಪತ್ನಿ ಸುಸೇನ್ ಖಾನ್ ಕೂಡ ಹಾಜರಿದ್ದರು. ಸುಸಾನೆ ಖಾನ್ ತನ್ನ ಗೆಳೆಯ ಅಲಿ ಗೋನಿ ಜೊತೆ ಮದುವೆಗೆ ಆಗಮಿಸಿದ್ದರು. ವಿಚ್ಛೇದನದ ನಂತರವೂ ಹೃತಿಕ್ ಮತ್ತು ಸುಸಾನೆ ಖಾನ್ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ, ಸಬಾ ಮತ್ತು ಸುಸಾನೆ ಕೂಡ ಒಳ್ಳೆಯ ಸ್ನೇಹಿತರು ಎಂದು ಕಂಡುಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:47 am, Thu, 25 December 25

Source link

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್ – Kannada News | Horrific Chitradurga Bus Accident: Driver Jumps Out Through Window, Conductor Makes Narrow Escape

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್‌ನಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಇದ್ದರು. ಗಾಯಗೊಂಡ 21 ಮಂದಿಯನ್ನು ಹಿರಿಯೂರು ಮತ್ತು ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಕುರಿತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿಗೆ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕಾಮಿಡಿ ವಿಷಯದಲ್ಲಿ ಗಿಲ್ಲಿನ ತೆಗಳಿದ್ದ ಧನುಷ್​​ಗೆ ತಾಯಿಯಿಂದಲೇ ಮುಖಭಂಗ – Kannada News | Bigg Boss Kannada: Dhanush’s Mother Praises Gilli’s Comedy, Embarrassing Her Son

ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ವಿವಿಧ ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಆಗಮಿಸಿ ಸ್ಪರ್ಧಿಗಳಿಗೆ ಹುರುಪು ತುಂಬುತ್ತಾ ಇದ್ದಾರೆ. ಈಗ ಧನುಷ್​​ಗೆ ತಾಯಿಯಿಂದಲೇ ಮುಖಭಂಗ ಆಗಿದೆ. ಗಿಲ್ಲಿ ಕಾಮಿಡಿ ವಿಷಯದಲ್ಲಿ ಯಾವಾಗಲೂ ಧನುಷ್ ತಕರಾರರು ತೆಗೆಯುತ್ತಲೇ ಇದ್ದರು. ಗಿಲ್ಲಿಯನ್ನು ನಾಮಿನೇಟ್ ಮಾಡಲು ಧನುಷ್ ಕೊಡುತ್ತಿದ್ದ ಕಾರಣಗಳೇ ಇದಾಗಿತ್ತು. ಆದರೆ, ಗಿಲ್ಲಿಗೆ ಧನುಷ್ ತಾಯಿ ಮೆಚ್ಚುಗೆ ಸೂಚಿಸಿದರು.

ಧನುಷ್ ಅವರು ಯಾವಾಗಲೂ ಗಿಲ್ಲಿ ಬಗ್ಗೆ ಕಂಪ್ಲೇಂಟ್ ಮಾಡುತ್ತಲೇ ಬರುತ್ತಿದ್ದಾರೆ. ಗಿಲ್ಲಿ ಉತ್ತಮವಾಗಿ ಆಡೋದಿಲ್ಲ, ಹಾಸ್ಯದ ಮೂಲಕ ಎಲ್ಲರಿಗೂ ನೋವುಂಟು ಮಾಡುತ್ತಾನೆ ಎಂದೆಲ್ಲ ಹೇಳುತ್ತಿದ್ದರು. ಆದರೆ, ಹೊರಗಿನ ಪ್ರಪಂಚ ಗಿಲ್ಲಿಯನ್ನು ನೋಡುತ್ತಿರುವ ರೀತಿಯೇ ಬೇರೆ ಎನ್ನೋದು ಧನುಷ್​​ಗೆ ಈಗ ಅರ್ಥವಾದಂತೆ ಇದೆ. ಅದು ಕೂಡ ಧನುಷ್ ತಾಯಿ ಕಡೆಯಿಂದಲೇ ಎಂಬುದು ವಿಶೇಷ.

ಧನುಷ್ ತಾಯಿ ಗಿಲ್ಲಿಯನ್ನು ಹಾಡಿ ಹೊಗಳಿದ್ದಾರೆ. ‘ಗಿಲ್ಲಿ ಕಾಮಿಡಿ ನಂಗೆ ತುಂಬಾನೇ ಇಷ್ಟ ಆಗುತ್ತದೆ’ ಎಂದು ಮನಸಾರೆ ಹೇಳಿದ್ದಾರೆ. ಆಗ ಧನುಷ್​​ಗೆ ಏನು ಹೇಳಬೇಕು ಎನ್ನುವುದು ಗೊತ್ತಾಗಿಲ್ಲ. ‘ಗಿಲ್ಲಿ ಇಲ್ಲದಿದ್ದರೆ ನಿಮಗೆಲ್ಲ ಬೇಸರ ಆಗುತ್ತಿತ್ತು. ಧನುಷ್ ಈ ಮನೆಯಲ್ಲಿ ಇಲ್ಲದೆ ಇದ್ದಿದ್ದರೆ ನನ್ನೆಲ್ಲ ವೋಟ್​​ನ ಗಿಲ್ಲಿಗೆ ಹಾಕುತ್ತಿದ್ದೆ’ ಎಂಬುದನ್ನು ಕೂಡ ಉಲ್ಲೇಖ ಮಾಡಿದ್ದಾರೆ ಧನುಷ್ ತಾಯಿ. ಈ ಹೊಗಳಿಕೆಯಿಂದ ಗಿಲ್ಲಿ ಖುಷಿಯಾದರು. ಧನುಷ್ ತಾಯಿ ಮಾತು ಇಡೀ ಮನೆಯವರಿಗೆ ಇದು ಅಚ್ಚರಿ ಎನಿಸಿದೆ.

ಇದನ್ನೂ ಓದಿ: ಕಾವ್ಯ ಎದುರಲ್ಲೇ ಗಿಲ್ಲಿ ಹಣೆಬರಹ ತೆರೆದಿಟ್ಟ ಧನುಷ್: ಅಶ್ವಿನಿ ಸೈಲೆಂಟ್ ಆಗಿದ್ದೇಕೆ?

ಸಾಮಾನ್ಯವಾಗಿ ಯಾವುದೇ ಸ್ಪರ್ಧಿಗಳ ಕುಟುಂಬದವರು ಬಂದವರು ತಮ್ಮ ಮಕ್ಕಳನ್ನು ಹೊಗಳುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಮಕ್ಕಳ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಈ ಸಂದರ್ಭದಲ್ಲಿ ಬೇರೆಯವರನ್ನು ಹೊಗಳಿದರೆ ಅವರ ಆಟಕ್ಕೆ ಮೈಲೇಜ್ ಸಿಗುತ್ತದೆ ಎಂಬುದು ಗೊತ್ತಿದೆ. ಆದಾಗ್ಯೂ ಈ ಕೆಲಸವನ್ನು ಧನುಷ್ ತಾಯಿ ಮಾಡಿರುವುದು ಅನೇಕರ ಮೆಚ್ಚುಗೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ದೇವರ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಎಚ್ಚರ: ಈ ಕ್ರಮ ಪಾಲಿಸಲು ಮರೆಯಬೇಡಿ – Kannada News | Devotional Tattoos: Understanding the Vows and Cautions

ದೇವರ ಟ್ಯಾಟೂಗಳ ಮಹತ್ವ ಮತ್ತು ಅವುಗಳನ್ನು ಹಾಕಿಸಿಕೊಳ್ಳುವಾಗ ಅನುಸರಿಸಬೇಕಾದ ಸೂಕ್ಷ್ಮ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಹದ ಮೇಲೆ ದೇವರ ವಿಗ್ರಹಗಳು, ದೇವತಾ ಮೂರ್ತಿಗಳು, ಓಂಕಾರ, ಸ್ವಸ್ತಿಕ್, ಶ್ರೀ ಚಕ್ರದಂತಹ ಚಿಹ್ನೆಗಳನ್ನು ಟ್ಯಾಟೂ ಹಾಕಿಸಿಕೊಳ್ಳುವುದು ಸಾಮಾನ್ಯವಾಗಿದೆ. ಇದು ಭಕ್ತಿಯ ಒಂದು ಸಂಕೇತವಾಗಿ ಕಂಡುಬಂದರೂ, ಶಾಸ್ತ್ರಗಳ ಪ್ರಕಾರ ಈ ದೇಹವು ಮಲ-ಮೂತ್ರಗಳಿಂದ ಕೂಡಿದ ದೇಹ ಎಂಬ ಅರಿವಿರಬೇಕು.ದೇಹದ ಮೇಲೆ ದೇವರ ಚಿತ್ರಗಳನ್ನು ಹಾಕಿಸಿಕೊಳ್ಳುವುದು ಆ ದೈವಿಕ ಶಕ್ತಿಯನ್ನು ದೇಹದೊಳಕ್ಕೆ ಆವಾಹನೆ ಮಾಡಿಕೊಳ್ಳುವ ಸಂಕೇತವಾಗಿದೆ. ಇದನ್ನು ಒಂದು ದೀಕ್ಷೆಯ ಸಮಾನವೆಂದು ಪರಿಗಣಿಸಬೇಕು. ಟ್ಯಾಟೂ ಹಾಕಿಸಿಕೊಂಡ ನಂತರ ನಾವು ಆ ಭಗವಂತನ ಸ್ವರೂಪಕ್ಕೆ ತಕ್ಕಂತೆ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ದುಶ್ಚಟಗಳು ಮತ್ತು ದುರ್ಬುದ್ಧಿಗಳನ್ನು ತ್ಯಜಿಸಿ, ಮನಸ್ಸು ಮತ್ತು ದೇಹವನ್ನು ಶುದ್ಧವಾಗಿಟ್ಟುಕೊಳ್ಳುವ ಸಂಕಲ್ಪದಿಂದ ಹಾಕಿಸಿಕೊಂಡರೆ ಶುಭ ಫಲಗಳು ದೊರೆಯುತ್ತವೆ. ಕೇವಲ ತೋರ್ಪಡಿಕೆಗಾಗಿ ಹಾಕಿಸಿಕೊಂಡರೆ ಅದು ಶುಭವನ್ನು ತರಲಾರದು ಎಂದು ತಿಳಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 25 Decembe: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ – Kannada News | Astrology Predictions 25.12.2025: Dr. Basavaraj Guruji on Zodiac Influences

ಅಕ್ಷಯ್​ ಪಲ್ಲಮಜಲು​​ |

Updated on:Dec 25, 2025 | 7:10 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25ರ ದಿನಭವಿಷ್ಯವನ್ನು ನೀಡಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ರಾಶಿಚಕ್ರ ಚಿಹ್ನೆಗಳ ಮೇಲೆ ಗ್ರಹಗಳ ಸಂಚಾರದಿಂದಾಗುವ ಪ್ರಭಾವಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ವ್ಯಾಪಾರ, ಅದೃಷ್ಟ ಸಂಖ್ಯೆ, ದಿಕ್ಕು ಮತ್ತು ಬಣ್ಣಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ.

Published on: Dec 25, 2025 07:10 AM

Source link

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು – Kannada News | Chitradurga Bus Accident Near Gorlattu Cross in Hiriyur Taluk: Most Victims from Gokarna

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ 3 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Bus Accident) ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್​​ನಲ್ಲಿದ್ದವರ ಪೈಕಿ ಹೆಚ್ಚಿನವರು ಗೋಕರ್ಣದವರಾಗಿದ್ದು, ಹೀಗಾಗಿ ಮೃತಪಟ್ಟವರಲ್ಲಿ ಹೆಚ್ಚಿನವರು ಗೋಕರ್ಣದವರೇ ಇರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಹೊರಟಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಬಸ್‌, ಶಿವಮೊಗ್ಗ ಮತ್ತು ಹೊನ್ನಾವರ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತೆರಳುತ್ತಿತ್ತು. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಆಸನಗಳು ಕಾಯ್ದಿರಿಸಲಾಗಿದ್ದು, 25 ಪ್ರಯಾಣಿಕರು ಗೋಕರ್ಣಕ್ಕೆ, ಇಬ್ಬರು ಕುಮಟಾಕ್ಕೆ ಮತ್ತು ಇಬ್ಬರು ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದರು.

ಅಪಘಾತದ ಮಾಹಿತಿ ದೊರೆತ ತಕ್ಷಣ ಚಿತ್ರದುರ್ಗ ಜಿಲ್ಲೆಯ ಡಿವೈಎಸ್ಪಿ ಶಿವಕುಮಾರ್, ರೂರಲ್ ಇನ್ಸ್‌ಪೆಕ್ಟರ್ ಆನಂದ್, ಇನ್ಸ್‌ಪೆಕ್ಟರ್ ಗುಂಡಪ್ಪ, ಹಾಗೂ ಚಿತ್ರದುರ್ಗ ಎಸ್.ಪಿ. ರಣದೀಪ್ ಮಂಡಾರು ಮತ್ತು ತುಮಕೂರಿನ ಎಸ್.ಪಿ. ಅಶೋಕ್ ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಗಳನ್ನು ನಡೆಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು. 9 ಮಂದಿ ಗಾಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಹಿರಿಯೂರು, ಶಿರಾಗೆ ಸಮೀಪದ ಆಸ್ಪತ್ರೆಗಳಿಗೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಿಸಲ್ಪಟ್ಟವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ 30 ಕಿಲೋಮೀಟರ್‌ ಟ್ರಾಫಿಕ್ ಜಾಮ್

ದುರಂತ ಸಂಭವಿಸಿದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿಲೋಮೀಟರ್‌ಗಳಷ್ಟು ಉದ್ದಕ್ಕೆ ಸಂಚಾರ ದಟ್ಟಣೆ ಉಂಟಾಗಿದೆ. ಮುಂಬೈಗೆ ಸಂಪರ್ಕ ಕಲ್ಪಿಸುವ ಈ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮತ್ತು ಸುಟ್ಟು ಕರಕಲಾದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ. ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಘಟನೆಗೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ

ಬಸ್​​ನಲ್ಲಿ 15 ಮಹಿಳೆಯರು ಹಾಗೂ 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಮಂಜುನಾಥ್​, ಸಂಧ್ಯಾ, ಶಶಾಂಕ್​, ದಿಲೀಪ್​, ಪ್ರೀತೀಶ್ವರನ್​, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್​, ಮಾನಸ, ಮಿಲನಾ, ಹೇಮರಾಜ್​ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್​, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್​, ಹೆಚ್​.ಕಿರಣ್ ಪಾಲ್​, ಎಂ.ಕೀರ್ತನ್​​, ಜಿ.ನಂದಿತಾ, ಹೆಚ್​.ದೇವಿಕಾ, ಮೇಘರಾಜ್​, ಎಸ್​.ಎನ್​.ಮಸ್ರತ್​ಉನ್ನೀಸಾ, ಸಯಿದ್ ಜಮೀರ್​​ ಗೌಸ್​, ಎಸ್​ಗಗನಶ್ರೀ, ರಶ್ಮಿ ಮಹಲೆ, ಆರ್​.ರಕ್ಷಿತಾ ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದವರು ಎನ್ನಲಾಗಿದೆ. ಮೃತರ ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:15 am, Thu, 25 December 25

Source link

ವೈಭವ್ ಆರ್ಭಟಕ್ಕೆ ದಾಖಲೆಗಳೇ ಧೂಳೀಪಟ..!

Source link