Category Archives: Blog

Your blog category

ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

Source link

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ ನಂತರ ಬಾಲಕ ಈ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಎಸಿಪಿ ಹಿಮಾನಿ ಮಿಶ್ರಾ ಅವರ ಪ್ರಕಾರ, ಮೃತರನ್ನು ಸೌರಭ್ ಪಟೇಲ್ ಎಂದು ಗುರುತಿಸಲಾಗಿದ್ದು, ಅವರು ಮೈಹಾರ್ ಮೂಲದವರಾಗಿದ್ದು, ನೆಹರು ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಫಾರ್ಮಾ ವಿದ್ಯಾರ್ಥಿಯಾಗಿದ್ದರು. ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

ಘಟನೆ ನಡೆದ ಸಮಯದಲ್ಲಿ, ಸೌರಭ್‌ನ ರೂಮ್‌ಮೇಟ್‌ಗಳು ಮುಂಭಾಗದ ಕೋಣೆಯಲ್ಲಿ ಲ್ಯಾಪ್‌ಟಾಪ್‌ನಲ್ಲಿ ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಅವನು ತನ್ನ ಕುಟುಂಬದೊಂದಿಗೆ ವೀಡಿಯೊ ಕರೆ ಮಾಡಲು ಹೋಗಿದ್ದ.

ಮತ್ತಷ್ಟು ಓದಿ: ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ಆತನ ರೂಮ್ ಮೇಟ್ ನಯನ್ ಮಾತನಾಡಿ, ನಮಗೆ ದೊಡ್ಡ ಶಬ್ದ ಕೇಳಿತ್ತು ಮೊದಲು ಮೊಬೈಲ್ ಫೋನ್ ಸ್ಫೋಟಗೊಂಡಿದೆ ಎಂದು ಭಾವಿಸಿದ್ದೆವು. ನಾವು ಅಡುಗೆಮನೆಗೆ ಬಂದಾಗ ಸೌರಭ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡೆವು. ಅವನು ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಿದರು.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ. ಸೌರಭ್ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ, ಅಷ್ಟೇ ಅಲ್ಲದೆ ಇದು ಇತ್ತೀಚೆಗೆ ಆಕೆಯ ಕುಟುಂಬದ ಗಮನಕ್ಕೆ ಇದು ಬಂದಿತ್ತು.

ಇದರ ನಂತರ, ಅವನ ತಂದೆ ಕಳೆದ 15 ದಿನಗಳಿಂದ ಅವನೊಂದಿಗೆ ಇದ್ದರು. ಸೌರಭ್ ಎಂದಿನಂತೆಯೇ ಒದ್ದ, ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಯಾವುದೇ ಲಕ್ಷಣಗಳೂ ಮುಖದಲ್ಲಿ ಗೋಚರಿಸಿರಲಿಲ್ಲ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಬಗ್ಗೆ ದಿನಕ್ಕೊಂದು ಕುತೂಹಲಕಾರಿ ವಿಚಾರಗಳು ಹೊರಬರುತ್ತಿವೆ. ಇತ್ತೀಚೆಗಷ್ಟೇ ಅಮೆರಿಕದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಸಂಚಲನ ಮೂಡಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಣಬೀರ್ ಕಪೂರ್ (Ranbir Kapoor), ಈ ಸಿನಿಮಾದಲ್ಲಿ ತಾವು ಕೇವಲ ಶ್ರೀರಾಮನ ಪಾತ್ರ ಮಾತ್ರವಲ್ಲದೇ ಪರಶುರಾಮನ ಪಾತ್ರವನ್ನೂ ನಿರ್ವಹಿಸುತ್ತಿರುವುದಾಗಿ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಶ್ರೀರಾಮ ಮತ್ತು ಪರಶುರಾಮ ಇಬ್ಬರೂ ಭಗವಾನ್ ವಿಷ್ಣುವಿನ ಅವತಾರಗಳು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಇದೀಗ ರಣಬೀರ್ ಈ ಇಬ್ಬರೂ ದೈವಿಕ ಪುರುಷರ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಕುರಿತು ಮಾತನಾಡಿದ ರಣಬೀರ್, ‘ಭಗವಾನ್ ವಿಷ್ಣುವಿನ ಅವತಾರಗಳಲ್ಲಿ ಶ್ರೀರಾಮನಿಗಿಂತ ಮೊದಲು ಪರಶುರಾಮರು ಭೂಮಿಗೆ ಬಂದಿದ್ದರು. ಒಬ್ಬ ನಟನಾಗಿ ಈ ಇಬ್ಬರೂ ಮಹಾನ್ ವ್ಯಕ್ತಿಗಳ ಪಾತ್ರವನ್ನು ನಿರ್ವಹಿಸಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಮತ್ತು ಇದು ಸೃಜನಾತ್ಮಕವಾಗಿ ನನಗೆ ತುಂಬಾನೇ ತೃಪ್ತಿ ನೀಡಿದೆ’ ಎಂದು ಹೇಳಿದ್ದಾರೆ.

ಕೇವಲ ದೈಹಿಕ ಬದಲಾವಣೆಯಷ್ಟೇ ಅಲ್ಲದೇ, ಪಾತ್ರದ ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಆಳವನ್ನು ಅರ್ಥಮಾಡಿಕೊಳ್ಳಲು ರಣಬೀರ್ ಸಾಕಷ್ಟು ಶ್ರಮವಹಿಸಿದ್ದಾರೆ. ‘ಪಾತ್ರದ ಬಾಡಿ ಲಾಂಗ್ವೇಜ್‌ಗಿಂತ ಹೆಚ್ಚಾಗಿ, ಅವರ ಉದ್ದೇಶಗಳು ಮತ್ತು ಆಧ್ಯಾತ್ಮಿಕ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಈ ಸಿನಿಮಾದ ಚಿತ್ರೀಕರಣ ಆರಂಭವಾಗುವ ಒಂದು ವರ್ಷದ ಮೊದಲೇ ನಾನು ಈ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅವರಿಬ್ಬರೂ ಏನನ್ನು ಪ್ರತಿನಿಧಿಸುತ್ತಾರೆ ಮತ್ತು ಅವರ ಜೀವನದ ಉದ್ದೇಶಗಳೇನು ಎಂಬುದನ್ನು ಅರಿಯಲು ಪ್ರಯತ್ನಿಸಿದ್ದೇನೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಚಿತ್ರವನ್ನು ಅತ್ಯಂತ ಅದ್ದೂರಿಯಾಗಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಬಳಸಿ ನಿರ್ಮಿಸುತ್ತಿದ್ದಾರೆ. ಇದು ಕೇವಲ ಭಾರತಕ್ಕೆ ಸೀಮಿತವಾಗದೇ ಜಾಗತಿಕ ಪ್ರೇಕ್ಷಕರನ್ನು ತಲುಪುವ ಗುರಿ ಹೊಂದಿದೆ. ಪರಶುರಾಮನ ಪಾತ್ರವು ಚಿತ್ರದಲ್ಲಿ ಅತಿಥಿ ಪಾತ್ರದಂತೆ ಕಾಣಿಸಿಕೊಂಡರೂ, ಕಥೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಒಟ್ಟಿನಲ್ಲಿ, ಶ್ರೀರಾಮನ ಸೌಮ್ಯತೆ ಮತ್ತು ಪರಶುರಾಮನ ಉಗ್ರತೆಯನ್ನು ರಣಬೀರ್ ಕಪೂರ್ ಬೆಳ್ಳಿತೆರೆಯ ಮೇಲೆ ಹೇಗೆ ಪ್ರಸ್ತುತಪಡಿಸಲಿದ್ದಾರೆ ಎಂಬ ಕುತೂಹಲ ಈಗ ಗಗನಕ್ಕೇರಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ‘ರಾಮಾಯಣ: ಪಾರ್ಟ್ 1’ ಸಿನಿಮಾ ಬಿಡುಗಡೆ ಆಗಲಿದೆ. ಯಶ್ ಅವರು ರಾವಣನ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದ್ವಾರಕಾದ ಬಾಡಿಗೆ ಮನೆಯಲ್ಲಿ ಇಬ್ಬರು ಸಹೋದರರ ಶವ ಪತ್ತೆ, ಕೊಲೆ ಶಂಕೆ

ನವದೆಹಲಿ, ಏಪ್ರಿಲ್ 05: ದೆಹಲಿಯ ಉತ್ತಮ್ ನಗರದ ಬಾಡಿಗೆ ಮನೆ(Home)ಯೊಂಂದರಲ್ಲಿ ಇಬ್ಬರು ಸಹೋದರರ ಶವ ಪ್ತತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಪೊಲೀಸ್ ತನಿಖೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಸಂಜೆ 6.55 ರ ಸುಮಾರಿಗೆ ಉತ್ತಮ್ ನಗರ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದ್ವಾರಕಾ ಜಿಲ್ಲೆಗೆ ಸೇರಿದ ಮೋಹನ್ ಗಾರ್ಡನ್‌ನಲ್ಲಿರುವ ಮೆಟ್ರೋ ಪಿಲ್ಲರ್ ಸಂಖ್ಯೆ 743 ರ ಬಳಿಯ ಮನೆಯೊಳಗೆ ಎರಡು ಶವಗಳು ಕಂಡುಬಂದಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್ ತಂಡಗಳು ಅಪರಾಧ ಶಾಖೆಯ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಮೋಹನ್ ಗಾರ್ಡನ್ ನಿವಾಸಿ ದೇವೇಂದರ್ (50) ಮತ್ತು ಹಸ್ತಲ್‌ನ ಜೆಜೆ ಕಾಲೋನಿಯ ನಿವಾಸಿ ಅಮಿತ್ ಕುಮಾರ್ (48) ಎಂದು ಗುರುತಿಸಲಾಗಿದೆ.

ಇಬ್ಬರೂ ಸಹೋದರರಾಗಿದ್ದು, ಇತ್ತೀಚೆಗೆ ಬಾಡಿಗೆಗೆ ಫ್ಲಾಟ್‌ಗೆ ಸ್ಥಳಾಂತರಗೊಂಡಿದ್ದರು.ಕೆಲವೇ ದಿನಗಳ ಮೊದಲು ಇಬ್ಬರೂ ಫ್ಲಾಟ್‌ಗೆ ಸ್ಥಳಾಂತರಗೊಂಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಎರಡೂ ದೇಹಗಳಲ್ಲಿ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ, ಇದು ಸಾವಿಗೆ ಕಾರಣವನ್ನು ಅಸ್ಪಷ್ಟವಾಗಿಸಿದೆ.

ಮತ್ತಷ್ಟು ಓದಿ: ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಶವಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಇದರಿಂದ ಸಾವಿನ ನಿಖರವಾದ ಕಾರಣ ತಿಳಿದುಬರಲಿದೆ.ಯಾವುದೇ ಸಂಭಾವ್ಯ ಸುಳಿವುಗಳನ್ನು ಗುರುತಿಸಲು ಮೃತರ ವೈಯಕ್ತಿಕ ಮತ್ತು ಕುಟುಂಬದ ಹಿನ್ನೆಲೆಯನ್ನು ಪರಿಶೀಲಿಸುವ ಪ್ರಯತ್ನಗಳು ನಡೆಯುತ್ತಿವೆ.

ಮರಣೋತ್ತರ ಪರೀಕ್ಷೆಯ ವರದಿ ಮತ್ತು ನಡೆಯುತ್ತಿರುವ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ನಿಖರವಾದ ಕಾರಣ ಮತ್ತು ಸ್ವರೂಪವನ್ನು ನಿರ್ಧರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!

ಮಡಿಕೇರಿ, ಏಪ್ರಿಲ್​​ 05: ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳಾದರೂ ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನ ಕಳುಹಿಸಲಾಗಿತ್ತು. ಆದ್ರೆ ಶರಣ್ಯಾ ಬೆಟ್ಟದಿಂದ ವಾಪಸ್​​ ಬಾರದ ಕಾರಣ, ಆಕೆಗಾಗಿ ಕಳೆದ ಮೂರು ದಿನಗಳಿಂದ ಶೋಧ ನಡೆಯುತ್ತಿದೆ.

ಬೆಳಿಗ್ಗೆ ಟ್ರೆಕ್ಕಿಂಗ್​​ಗೆಂದು ತೆರಳಿದ್ದವರು ಮಧ್ಯಾಹ್ನ 1.30ರ ವೇಳೆಗೆ ಅರಣ್ಯ ಇಲಾಖೆಯ ಚೆಕ್​​ ಪೋಸ್ಟ್​​ ಬಳಿ ಹಿಂದಿರುಗಬೇಕಿತ್ತು. ಹೀಗಾಗಿ ಶರಣ್ಯಾಳನ್ನು ಕರೆದೊಯ್ಯಲೆಂದು ಹೋಮ್​​ ಸ್ಟೇ ಮಾಲೀಕ ತಮ್ಮ ಸ್ಕೂಟಿ ಸಮೇತ ಸ್ಥಳಕ್ಕೆ ಬಂದಿದ್ದರು. ಆ ಬಳಿಕ ಶರಣ್ಯಾಗೆ ಅವರು ಕರೆ ಮಾಡಿದಾಗ ಮೊದಲು ನಾಟ್ ರೀಚೇಬಲ್ ಬಂದಿದೆ. ಮತ್ತೆರಡು ಬಾರಿ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿದ ಆಕೆ, ತಾನು ದಾರಿ ತಪ್ಪಿದ್ದೇನೆ ಎಂದು ಹೇಳಿದ್ದಾಳೆ. ಅಷ್ಟರಲ್ಲಿ ಫೋನ್ ಕಟ್ ಆಗಿದೆಯಂತೆ. ಅದಾದ ಬಳಿಕ ಫೋನ್​​ ಮತ್ತೆ ಕನೆಕ್ಟ್ ಆಗಿಲ್ಲ. ಕೂಡಲೇ ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದು, ಎಲ್ಲರೂ ಸೇರಿ ಸಂಜೆ ಬೆಟ್ಟದ ಮೇಲೆ ಹೋಗಿದ್ದಾರೆ. ಅದ್ರೆ ಅಲ್ಲೆಲ್ಲೂ ಯುವತಿ ಕಂಡಿಲ್ಲ. ಹಾಗಾಗಿ ಮತ್ತಷ್ಟು ಅರಣ್ಯ ಇಲಾಖೆ, ಪೊಲಿಸ್ ಇಲಾಖೆ ಸಿಬ್ಬಂದಿ ಸೇರಿ ಸ್ಥಳೀಯರೆಲ್ಲರೂ ಯುವತಿಗಾಗಿ ಹುಡುಕಿದ್ದಾರೆ. ಆದ್ರೆ ಎಲ್ಲೂ ಕೂಡ ಆಕೆಯ ಸುಳಿವೇ ಸಿಕ್ಕಿಲ್ಲ. ಈ ಕಾರ್ಯಾಚರಣೆ ಮೂರು ದಿನ ಕಳೆದರೂ ಶರಣ್ಯಾ ಪತ್ತೆ ಮಾತ್ರ ಆಗಿಲ್ಲ.

ಇದನ್ನೂ ಓದಿ: ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ; 4 ತಂಡಗಳಿಂದ ಶೋಧ ಕಾರ್ಯ

ಅರಣ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ನಕ್ಸಲ್ ನಿಗ್ರಹ ಪಡೆಯ 60ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದು, ವಿಚಿತ್ರ ಅಂದ್ರೆ ಶರಣ್ಯಾ ಕಳೆದ 15 ವರ್ಷಗಳಿಂದ ಟ್ರೆಕ್ಕಿಂಗ್ ಹೋಗಿ ಅನುಭವ ಹೊಂದಿರುವ ಯುವತಿ. ಹಾಗಾಗಿ ಆಕೆ ದಾರಿ ಮಿಸ್ ಆಗಿ ನಾಪತ್ತೆಯಾಗುವ ಸಾಧ್ಯತೆ ಕಡಿಮೆ. ಆ ಕಾರಣಕ್ಕೆ ಕಾಡು ಪ್ರಾಣಿಗಳ ದಾಳಿಗೆ ಯುವತಿ ತುತ್ತಾಗಿರಬಹುದಾ ಎಂಬ ಶಂಕೆ ಶುರುವಾಗಿದೆ. ಅದೂ ಅಲ್ಲದೆ ಬೆಟ್ಟದ ದಾರಿ ಬಹಳ ಸ್ಪಷ್ಟವಾಗಿದ್ದು, ಎಲ್ಲಿಯೂ ದಾರಿ ತಪ್ಪುವ ಸಾಧ್ಯತೆ ಇಲ್ಲ. ಹೀಗಿರುವಾಗ ಟ್ರೆಕ್ಕಿಂಗ್ ಅನುಭವ ಇರುವ ಈಕೆ ಹೇಗೆ ದಾರಿ ತಪ್ಪುತ್ತಾಳೆ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಅದೂ ಅಲ್ಲದೆ, ಅರಣ್ಯ ಇಲಾಖೆಯ ಚೆಕ್​ ಪೋಸ್​​ಟ್ ಬಳಿಯ ಸಿಸಿಟಿವಿ ಕೆಲಸ ಮಾಡದೆ ಇರೋದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ವೇಗ ಅತೀ ವೇಗ… ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಭಾರತೀಯ ಯುವ ವೇಗಿಗಳ ಅಬ್ಬರ ಮುಂದುವರಿದಿದೆ. ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ತಂಡದ ಉದಯೋನ್ಮುಖ ವೇಗಿ ಅಶೋಕ್ ಶರ್ಮಾ ಈ ಸೀಸನ್​ನ ಅತಿ ವೇಗದ ಎಸೆತವನ್ನು ಎಸೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಈ ಪಂದ್ಯದ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ 23 ವರ್ಷದ ಅಶೋಕ್ ಶರ್ಮಾ, ತಮ್ಮ ಓವರ್‌ನ ಅಂತಿಮ ಎಸೆತವನ್ನು ರಾಜಸ್ಥಾನ್ ರಾಯಲ್ಸ್‌ನ ಬ್ಯಾಟರ್ ಧ್ರುವ್ ಜುರೆಲ್ ಅವರಿಗೆ ಎಸೆದರು. ಸ್ಪೀಡೋಮೀಟರ್‌ನಲ್ಲಿ ಈ ಎಸೆತದ ವೇಗ ಗಂಟೆಗೆ 154.2 ಕಿ.ಮೀ (154.2 kmph) ಎಂದು ದಾಖಲಾಯಿತು. ಈ ಮೂಲಕ ಅವರು ಈ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅನ್ರಿಕ್ ನೋಕಿಯಾ (150.9 kmph) ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು.

2026ರ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಅಶೋಕ್ ಶರ್ಮಾ ಅವರನ್ನು 90 ಲಕ್ಷ ರೂಪಾಯಿಗಳಿಗೆ ಖರೀದಿಸಿತ್ತು. ಆರಂಭದಲ್ಲಿ ಕೇವಲ ಬ್ಯಾಕ್-ಅಪ್ ಬೌಲರ್ ಎನ್ನಲಾಗಿದ್ದ ಅಶೋಕ್, ಈಗ ತಂಡದ ಪ್ರಮುಖ ಅಸ್ತ್ರವಾಗಿ ಹೊರಹೊಮ್ಮುತ್ತಿದ್ದಾರೆ. ಅವರ ನಿಖರವಾದ ಲೈನ್ ಮತ್ತು ಲೆಂಗ್ತ್ ಜೊತೆಗೆ ಗಂಟೆಗೆ 150 ಕಿ.ಮೀ ಗಿಂತ ಹೆಚ್ಚಿನ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯವು ಎದುರಾಳಿ ಬ್ಯಾಟರ್‌ಗಳಿಗೆ ನಡುಕ ಹುಟ್ಟಿಸುತ್ತಿದೆ.

ಭಾರತೀಯ ವೇಗಿಗಳ ಪಟ್ಟಿಯಲ್ಲಿ ಸ್ಥಾನ:

23 ವರ್ಷದ ಈ ಯುವ ವೇಗಿ ಈಗ ಐಪಿಎಲ್ ಇತಿಹಾಸದಲ್ಲಿ ಅತಿ ವೇಗವಾಗಿ ಬೌಲಿಂಗ್ ಮಾಡಿದ ಮೂರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಉಮ್ರಾನ್ ಮಲಿಕ್ (157 kmph) ಮೊದಲ ಸ್ಥಾನದಲ್ಲಿದ್ದರೆ, ಮಯಾಂಕ್ ಯಾದವ್ (156.7 kmph) ಎರಡನೇ ಸ್ಥಾನದಲ್ಲಿದ್ದಾರೆ.

 

Source link

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ: ಭಾರತದಲ್ಲೇ ಸಾವಿರ ಕೋಟಿ ರೂಪಾಯಿ ಸನಿಹ

ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್ 2’ (Dhurandhar 2) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾಗಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಚಿತ್ರದ ಕಲೆಕ್ಷನ್‌ (Box Office Collection) ಚೆನ್ನಾಗಿಯೇ ಆಗುತ್ತಿದೆ. ಸದ್ಯ ಈ ಚಿತ್ರವು ಭಾರತ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ 985 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ರಣವೀರ್ ಸಿಂಗ್ (Ranveer Singh) ಅವರು ಈ ಸಿನಿಮಾದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ.

ಲೇಟೆಸ್ಟ್ ಮಾಹಿತಿ ಪ್ರಕಾರ, 17ನೇ ದಿನವಾದ ಶನಿವಾರ (ಏಪ್ರಿಲ್ 4) ಈ ಸಿನಿಮಾ 25.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಾರದ ದಿನಗಳಲ್ಲಿ ಸಾಧಾರಣವಾಗಿದ್ದ ಕಲೆಕ್ಷನ್, ಮೂರನೇ ವಾರಾಂತ್ಯದಲ್ಲಿ ಮತ್ತೆ ಪುಟಿದೆದ್ದಿದೆ. ಮೊದಲ ವಾರದ ಅಂತ್ಯಕ್ಕೆ 674.17 ಕೋಟಿ ರೂಪಾಯಿ ಆಗಿತ್ತು. ಎರಡನೇ ವಾರ 263.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.

ಈಗಾಗಲೇ ಭಾರತದ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ದಾಖಲೆಯನ್ನು ‘ಧುರಂಧರ್ 2’ ಹಿಂದಿಕ್ಕಿದೆ. ಯಶ್ ಅಭಿನಯದ ‘ಕೆಜಿಎಫ್: ಚಾಪ್ಟರ್ 2’ (859.70 ಕೋಟಿ), ರಾಜಮೌಳಿ ನಿರ್ದೇಶನ ‘ಆರ್​ಆರ್​ಆರ್​’ (782.20 ಕೋಟಿ) ಮತ್ತು ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ (646 ಕೋಟಿ) ಸಿನಿಮಾಗಳ ಒಟ್ಟು ಗಳಿಕೆಯನ್ನು ‘ಧುರಂಧರ್ 2’ ಸಿನಿಮಾ ಮೀರಿಸಿದೆ.

ಸದ್ಯ ‘ಧುರಂಧರ್ 2’ ಸಿನಿಮಾದ ಮುಂದೆ ಕೆಲವು ದೈತ್ಯ ಸಿನಿಮಾಗಳ ಕಲೆಕ್ಷನ್ ದಾಖಲೆ ಹಾಗೆಯೇ ಇದೆ. ಈ ಮೊದಲು ‘ಬಾಹುಬಲಿ 2’ ಸಿನಿಮಾ 1,030 ಕೋಟಿ ರೂಪಾಯಿ ಗಳಿಸಿತ್ತು. ‘ಪುಷ್ಪ 2’ ಸಿನಿಮಾ 1,234.10 ಕೋಟಿ ರೂಪಾಯಿ ಚಾಚಿಕೊಂಡಿತ್ತು. ಆ ಸಿನಿಮಾಗಳ ದಾಖಲೆಯನ್ನು ‘ಧುರಂಧರ್ 2’ ಸಿನಿಮಾ ಅಳಿಸಿ ಹಾಕುತ್ತಾ ಇಲ್ಲವಾ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: ‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

‘ಧುರಂಧರ್ 2’ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಹಮ್ಜಾ ಎಂಬ ಭಾರತೀಯ ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಪಾಕಿಸ್ತಾನದ ಲಿಯಾರಿ ಗ್ಯಾಂಗ್‌ಗಳ ಒಳಗೆ ನುಗ್ಗಿ, ಅಲ್ಲಿನ ಭೂಗತ ಲೋಕ ಮತ್ತು ಭಾರತದ ಮೇಲೆ ಪ್ರಭಾವ ಬೀರುವ ಭಯೋತ್ಪಾದನಾ ಜಾಲವನ್ನು ಧ್ವಂಸ ಮಾಡುವ ಸಾಹಸಗಾಥೆ ಈ ಚಿತ್ರದಲ್ಲಿದೆ. ಸಿನಿಮಾದ ಮೊದಲ ಭಾಗವು ವಿಶ್ವಾದ್ಯಂತ 1,300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

 

 

Source link

RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

Source link

ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಉದ್ಯಮಿ ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ ಕೇಸ್​​ ವರ್ಗಾವಣೆಗೊಂಡಿತ್ತು. ಈ ಬಗ್ಗೆ ತನಿಖೆಗೆ ಪುಲಕೇಶಿನಗರ ಎಸಿಪಿ ಹಾಗೂ ಪಿಐಗೆ ಅಧಿಕಾರಿಗಳು ಸೂಚಿಸಿದ್ದರು. ಆ ಹಿನ್ನೆಲೆ ಆರೋಪಿ ಕೃಪಲಾನಿಯನ್ನು ಪೊಲೀಸರ ತಂಡವೀಗ ಬಂಧಿಸಿದೆ.

ಅತ್ಯಾಚಾರ ಅಲ್ಲದೇ ಆರೋಪಿ ಮೇಲೆ ಹಲವು ಗಂಭೀರ ಆರೋಪಗಳನ್ನು ಮಹಿಳಾ ಅಧಿಕಾರಿ ಮಾಡಿದ್ದು, ಎಲೆಕ್ಟ್ರಾನಿಕ್ ಬ್ಯುಸಿನೆಸ್ ನಡೆಸುತ್ತಿದ್ದ ಕೃಪಲಾನಿ ಕಸ್ಟಮ್ ಕಣ್ತಪ್ಪಿಸಿ ಸಾಕಷ್ಟು ವ್ಯವಹಾರ ನಡೆಸ್ತಿದ್ದ ಆರೋಪ ಕೇಳಿಬಂದಿದೆ. ಈತನಿಗೆ 9 ವರ್ಷದ ಹಿಂದೆ ಮಹಿಳಾ ಕಸ್ಟಮ್ ಅಧಿಕಾರಿ ಪರಿಚಯವಾಗಿದ್ದು, ಆಕೆ ಜೊತೆಗೆ ಪ್ರೀತಿ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೆ ಮದುವೆ ಆಮೀಷವೊಡ್ಡಿ ಕೆಲಸದ ಕೆಲ ಲೂಪ್ ಹೋಲ್ ತಿಳಿದಿದ್ದ. ಆಕೆ ಬಳಸಿಕೊಂಡು ಕೆಲ ಕಸ್ಟಮ್ ಅಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣ ಕೂಡ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಸ್ಕೆಚ್ ಹಾಕಿದ್ದ ಭೂಗಳ್ಳರು ಅಂದರ್; ಮೂವರು ಅರೆಸ್ಟ್​​

ಈ ಹಿಂದೆ ತನ್ನ ಮಗ ನಾಪತ್ತೆಯಾಗಿದ್ದಾನೆಂದು ಕೃಪಲಾನಿ ತಾಯಿ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದರು. ಆದರೆ ಕೃಪಲಾನಿ ಉದ್ದೇಶ ಪೂರ್ವಕವಾಗಿ ಹೊಟೆಲ್​ನಲ್ಲಿ ಅಡಗಿರೋದು ಈ ವೇಳೆ ಪತ್ತೆ ಆಗಿತ್ತು. ಹೀಗಾಗಿ ಈ ವೇಳೆ ಕೃಪಲಾನಿಗೆ ಕೋರ್ಟ್ ಎರಡು ಲಕ್ಷ ರೂ. ದಂಡ ಕೂಡ ವಿಧಿಸಿತ್ತು. ಇಷ್ಟು ಸಾಲದ್ದಕ್ಕೆ ದಶಕದ ಹಿಂದೆ ಕುಡಿದು ಮಹಿಳಾ ಅಧಿಕಾರಿಗಳ ಜತೆ ಅಸಭ್ಯ ವರ್ತನೆ ಆರೋಪವೂ ಈತನಮೇಲಿದೆ. ಕೃಪಲಾನಿ ಜಾಲಕ್ಕೆ ಸಿಲುಕಿ ಹಲವು ಕಸ್ಟಮ್ಸ್ ಅಧಿಕಾರಿಗಳು ನರಳಿದ್ದಾರೆ ಎನ್ನಲಾಗಿದ್ದು, ಆ ಕಾರಣ ಈತನಿಂದ ಅನ್ಯಾಯವಾಗಿದ್ರೆ ದೂರು ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link