Category Archives: Blog

Your blog category

ಬೆಂಗಳೂರಿನಲ್ಲಿ ಶೂಟೌಟ್: ವಿಚ್ಛೇದನ ಕೋರ್ಟ್​​​​​ನಲ್ಲಿರುವಾಗಲೇ ಹೆಂಡ್ತಿಯನ್ನ ಗುಂಡಿಕ್ಕಿ ಕೊಂದ ಪತಿ – Kannada News | A man shots his wife dead on a busy road In Bengaluru after she asking divorce

ಬೆಂಗಳೂರು, (ಡಿಸೆಂಬರ್ 23):  ಗಂಡ ಹೆಂಡತಿ (Husband And Wife) ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಹೆಂಡತಿ ಜೊತೆ ಜಗಳ ತೆಗೆದ ಪತಿ ಏಕಾಏಕಿ ಗನ್‌ ತೆಗೆದು ಹೆಂಡತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್‌ ಬಳಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡು ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಮಹಿಳೆಯನ್ನು ಭುವನೇಶ್ವರಿ ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಬಾಲ ಮುರುಗನ್ ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಚ್ಛೇದನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ಬರುತ್ತಿರುವಾಗಲೇ ಬಾಲ ಮುರುಗನ್, ನಡುರಸ್ತೆಯಲ್ಲೇ ಹೆಂಡತಿ ಭುವನೇಶ್ವರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಈ ಶೂಟೌಟ್​​​ನಿಂದ ಬಸವೇಶ್ವರ ನಗರವೇ ಬೆಚ್ಚಿಬಿದ್ದಿದೆ.

ಹೆಂಡ್ತಿ ಮೇಲೆ ಅನುಮಾನಪಟ್ಟು ಶೂಟ್​

ಬಾಲಮುರುಗನ್​ ಹಾಗೂ ಭುವನೇಶ್ವರಿ 2011ರಲ್ಲಿ ಮದುವೆಯಾಗಿದ್ದು, ಬಳಿಕ ತಮಿಳುನಾಡಿನ ಸೇಲಂನಿಂದ ಬಂದು ಬೆಂಗಳೂರಿನ ರಾಜಾಜಿನಗರದಲ್ಲಿ ಎರಡು ಮಕ್ಕಳೊಂದಿಗೆ ನೆಲೆಸಿದ್ದರು. ಬಾಲಮುರುಗನ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಭುವನೇಶ್ವರಿ ಬ್ಯಾಂಕ್ ಉದ್ಯೋಗಿ ಆಗಿದ್ದರು.ಆದ್ರೆ, ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ಆಗಾಗ ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತು ಭುವನೇಶ್ವರಿ, ವಿಚ್ಛೇದನ ಕೇಳಿದ್ದಳು. ಇದಕ್ಕೆ ಮುರುಗನ್ ಒಪ್ಪಿರಲಿಲ್ಲ. ಕೊನೆಗೆ ಭುವನೇಶ್ವರಿ 2024ರಲ್ಲಿ ಮುರುಗನ್​​ನಿಂದ ದೂರವಾಗಿ ಕೆಪಿ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದರು. ಬಳಿಕ ಅವರು ಡಿವೋರ್ಸ್‌ ಗಾಗಿ ಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕೋರ್ಟ್​​ ಮುರುಗನ್​​ಗೆ ನೋಟಿಸ್ ನೀಡಿತ್ತು. ಅದರಂತೆ ಮುರುಗನ್ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇತ್ತ ಭುವನೇಶ್ವರಿ ಸಹ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ವಿಚಾರಣೆ ಮುಗಿಸಿ ಕೋರ್ಟ್​​​ನಿನಿಂದ ಇಬ್ಬರು ಆಚೆ ಬಂದಿದ್ದರು.

ಇದನ್ನೂ ಓದಿ: ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ!

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ತೀವ್ರ ಸ್ವರೂಪ ಹೋಗಿದೆ. ಇದರಿಂದ ಆಕ್ರೋಶಗೊಂಡ ಪತಿ ಮುರುಗನ್, ನಡು ರಸ್ತೆಯಲ್ಲೇ ಗನ್ ತೆಗೆದು ಪತ್ನಿ ಭುವನೇಶ್ವರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಭುವನೇಶ್ವರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಹೆಂಡ್ತಿಗೆ ಶೂಟ್ ಮಾಡಿ ಪೊಲೀಸ್ ಠಾಣೆಗೆ

ಹೆಂಡತಿ ಮೇಲೆ ಗುಂಡು ಹಾರಿಸಿದ ಬಳಿಕ ಮುರುಗನ್​ ನೇರವಾಗಿ ಮಾಗಡಿ ರಸ್ತೆ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ಕೂಡಲೇ ಪೊಲಿಸರು, ಶೂಟೌಟ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅನೈತಿಕ ಸಂಬಂಧ ಅನುಮಾನ ಹಾಗೂ ಡಿವೋರ್ಸ್​​ ಕೇಳಿರುವುದಕ್ಕೆ ಕೊಂದಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಇನ್ನು ಆರೋಪಿ ಪಿಸ್ತೂಲನ್ನು ಅಕ್ರಮವಾಗಿ ತರಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆಯೂ  ತನಿಖೆ ಕೈಗೊಂಡಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್ – Kannada News | Surprise Visit to Wedding Monkey jumps on bride during kanyadaan ritual watch viral video

ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ರಿಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿದ್ದರು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್​​ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋವನ್ನು (Viral Video) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್ – Kannada News | BJP leader harasses visually challenged woman in Madhya Pradesh jabalpur

ಜಬಲ್ಪುರ, ಡಿಸೆಂಬರ್ 23: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿಯೊಬ್ಬರು ದೃಷ್ಟಿಹೀನ ಮಹಿಳೆಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ವೇಳೆ ಮಹಿಳಾ ನಾಯಕಿ ದೃಷ್ಟಿಹೀನ ಮಹಿಳೆಯ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಬಿಜೆಪಿ ನಾಯಕಿ ಆ ದೃಷ್ಟಿಹೀನ ಮಹಿಳೆಗೆ ನೀನು ಮುಂದಿನ ಜನ್ಮದಲ್ಲೂ ಕುರುಡಿಯಾಗೇ ಹುಟ್ಟುತ್ತೀಯ ಎಂದು ಹೇಳುವುದನ್ನು ಕೇಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಳೆಯ ಹವಾಮಾನ: ರಾಜ್ಯದ ಹಲವೆಡೆ ಚಳಿ, ಇರಲಿದೆ ಮಂಜಿನ ಅಬ್ಬರ – Kannada News | Tomorrow Weather: Severe cold wave expected in South and North Interior Karnataka tomorrow, heavy fog in Bengaluru

ಬೆಂಗಳೂರು, ಡಿಸೆಂಬರ್​​ 23: ರಾಜ್ಯದಾದ್ಯಂತ ನಾಳೆಯೂ ಚಳಿಯ ಪ್ರಭಾವ ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬೆಳಗಿನ ಜಾವ ತೀವ್ರ ಚಳಿ ಹಾಗೂ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಲ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ. ದಿನದ ಹೊತ್ತಿನಲ್ಲಿ ಒಳಹವೆ ಇರಲಿದ್ದು, ತಾಪಮಾನ ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆಯೇ ಇರಲಿದೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಾತಾವರಣ ಸಾಮಾನ್ಯವಾಗಿರಲಿದ್ದು, ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಕಡಿಮೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಬೆಳಿಗ್ಗೆ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ನಾಳೆ ಮಳೆಯ ಸಾಧ್ಯತೆ ಕಡಿಮೆ ಇದ್ದು, ಚಳಿ ಮತ್ತು ಮಂಜು ಬಹುತೇಕ ಜಿಲ್ಲೆಗಳಲ್ಲಿ ಕಂಡುಬರಲಿದೆ.

ಬೀದರ್​​ನಲ್ಲಿ ಕನಿಷ್ಠ 10.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

ಬಾಗಲಕೋಟೆ 12.1 ಡಿಗ್ರಿ ಸೆಲ್ಸಿಯಸ್​​, ಬಳ್ಳಾರಿ 13.8 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 11.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 14.1 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 13.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 15.2 ಡಿಗ್ರಿ ಸೆಲ್ಸಿಯಸ್, ಬೀದರ್ 10.4 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 12.6 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 13.8 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 13 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 14 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 19.1 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 14.6 ಡಿಗ್ರಿ ಸೆಲ್ಸಿಯಸ್, ಧಾರವಾಡ 12.6 ಡಿಗ್ರಿ ಸೆಲ್ಸಿಯಸ್, ಗದಗ 13.2 ಡಿಗ್ರಿ ಸೆಲ್ಸಿಯಸ್, ಹಾಸನ 12.8 ಡಿಗ್ರಿ ಸೆಲ್ಸಿಯಸ್, ಹಾವೇರಿ 13.5 ಡಿಗ್ರಿ ಸೆಲ್ಸಿಯಸ್, ಕಲಬುರಗಿ 11.9 ಡಿಗ್ರಿ ಸೆಲ್ಸಿಯಸ್, ಕೊಡಗು 13 ಡಿಗ್ರಿ ಸೆಲ್ಸಿಯಸ್, ಕೋಲಾರ 13 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 12.4 ಡಿಗ್ರಿ ಸೆಲ್ಸಿಯಸ್, ಮಂಡ್ಯ 13.2 ಡಿಗ್ರಿ ಸೆಲ್ಸಿಯಸ್, ಮೈಸೂರು 12.8 ಡಿಗ್ರಿ ಸೆಲ್ಸಿಯಸ್, ರಾಯಚೂರು 13.6 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 13.7 ಡಿಗ್ರಿ ಸೆಲ್ಸಿಯಸ್, ತುಮಕೂರು 13 ಡಿಗ್ರಿ ಸೆಲ್ಸಿಯಸ್, ಉಡುಪಿ 19 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ 16.5 ಡಿಗ್ರಿ ಸೆಲ್ಸಿಯಸ್, ವಿಜಯಪುರ 12.7 ಡಿಗ್ರಿ ಸೆಲ್ಸಿಯಸ್, ವಿಜಯನಗರ 13.3 ಡಿಗ್ರಿ ಸೆಲ್ಸಿಯಸ್ ಮತ್ತು ಯಾದಗಿರಿಯಲ್ಲಿ 13.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ನಿನ್ನೆ ಬೆಳಿಗ್ಗೆ 8.30ರಿಂದ ಇಂದು ಬೆಳಿಗ್ಗೆ 8.30ರ ಅವಧಿಯಲ್ಲಿ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:01 pm, Tue, 23 December 25

Source link

ರೈತರ ಬದುಕಿನಲ್ಲಿ ಚೆಲ್ಲಾಟ: ಮೆಕ್ಕೆಜೋಳ ಬೆಳೆಗಾರರ ಪಾಲಿಗೆ ವಿಲನ್ ಆದ ಸರ್ಕಾರ – Kannada News | Dharwad Maize Farmers in Crisis: Support Price Delay Hits Hard

ಧಾರವಾಡ, ಡಿಸೆಂಬರ್​​ 23: ರೈತ (farmer) ದೇಶದ ಬೆನ್ನೆಲುಬು ಅಂತಾ ಹೇಳುತ್ತಲೇ ಬರುವ ಸರಕಾರ ಮತ್ತೊಂದೆಡೆ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನೂ ಮಾಡುತ್ತಲೇ ಇರುತ್ತೆ. ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಮೆಕ್ಕೆಜೋಳ (Maize) ಚೆನ್ನಾಗಿ ಬಂದಿದೆ. ಇದರಿಂದಾಗಿ ರೈತರು ಖುಷಿಯಾಗುವ ಹೊತ್ತಿಗೆ ಮಾರುಕಟ್ಟೆಯಲ್ಲಿ ದರ ಕುಸಿತ ಕಂಡು, ರೈತರು ಕಂಗಾಲಾಗಿ ಹೋದರು. ಇದೇ ಕಾರಣಕ್ಕೆ ಬೆಂಬಲ ಬೆಲೆ ಅಡಿ ಮೆಕ್ಕೆಜೋಳವನ್ನು ಖರೀದಿಸುವಂತೆ ಹೋರಾಟ ಶುರುವಾಯಿತು. ಇದಕ್ಕೆ ಮಣಿದ ಸರಕಾರ ಖರೀದಿಯೇನೋ ಆರಂಭಿಸಿತು. ಆದರೆ ಅಲ್ಲಿಯೂ ಆಟವಾಡುವ ಮೂಲಕ ರೈತರ ಪಾಲಿಗೆ ಸರಕಾರ ವಿಲನ್ ಆಗಿ ಪರಿವರ್ತನೆಯಾಗಿದೆ.

50 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಗೆ ಆದೇಶ

ರೈತರ ಹೋರಾಟಕ್ಕೆ ಮಣಿದು ಬೆಂಬಲ ಬೆಲೆ ಅಡಿ 50 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದರೂ, ಜಿಲ್ಲೆಯಲ್ಲಿ ಫಸಲಿನ ಖರೀದಿ ನಡೆಯದಿರುವುದರಿಂದ ರೈತರು ಚಿಂತಿತರಾಗಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ 24 ಸಾವಿರ, ನವಲಗುಂದ 18 ಸಾವಿರ, ಕುಂದಗೋಳ 17 ಸಾವಿರ, ಧಾರವಾಡ 9 ಸಾವಿರ, ಹುಬ್ಬಳ್ಳಿ ಶಹರ, ಗ್ರಾಮೀಣ ಸೇರಿ 7 ಸಾವಿರ ಹಾಗೂ ಅಳ್ಳಾವರ, ಅಣ್ಣಿಗೇರಿಯಲ್ಲಿ 2500 ತಲಾ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಬಿತ್ತನೆ ಮಾಡಿದಾಗಿನಿಂದ ಮಳೆ ಕಾಡುತ್ತ ಬಂದಿತ್ತು.

ಇದನ್ನೂ ಓದಿ: ಕರ್ನಾಟಕ ರೈತರಿಗೆ ಗುಡ್​​ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು

ಸಂಕಷ್ಟದ ಮಧ್ಯೆಯೂ ಮೆಕ್ಕೆಜೋಳ ಬೆಳೆದ ರೈತರಿಗೆ ದರ ಕುಸಿತದಿಂದಾಗಿ ಬರ ಸಿಡಿಲು ಬಡಿದಂತಾಯಿತು. ದರ ಕುಸಿತದಿಂದ ಕಂಗಾಲಾದ ರೈತರು ಬೆಂಬಲಬೆಲೆ ಅಡಿ ಮೆಕ್ಕೆಜೋಳ ಖರೀದಿಸುವಂತೆ ಹೋರಾಟ ಆರಂಭಿಸಿದರು. ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, ಮೊದಲಿಗೆ ತಲಾ ರೈತರಿಂದ 5 ಕ್ವಿಂಟಾಲ್ ಖರೀದಿಗೆ ಆದೇಶಿಸಿತು. ಇದು ರೈತರನ್ನು ಕೆರಳಿಸಿತು. ಮತ್ತೆ ಹೋರಾಟ ಹೆಚ್ಚಾಗಿದ್ದರಿಂದ ಸರ್ಕಾರ 20 ಕ್ವಿಂಟಾಲ್ ಖರೀದಿಗೆ ಮುಂದಾಯಿತು. ಇದಕ್ಕೂ ತೃಪ್ತರಾಗದ ರೈತರು ಹೆದ್ದಾರಿ ತಡೆದು ಹೋರಾಟ ನಡೆಸಲು ಮುಂದಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ, ಡಿ. 7 ರಂದೇ ಪ್ರತಿ ರೈತರಿಂದ 50 ಕ್ವಿಂಟಾಲ್‌ ಖರೀದಿಗೆ ಆದೇಶಿಸಿದೆ. ಆದರೆ ಆ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ.

ಈಗಾಗಲೇ ಧಾರವಾಡದ ರಾಯಾಪುರದ ಕೆಎಂಎಫ್ ಪಶು ಆಹಾರ ರೈತರಿಂದ ತಲಾ 20 ಕ್ವಿಂಟಾಲ್ ಖರೀದಿ ನಡೆಯುತ್ತಿದೆ. ಆದರೆ, ಸಾವಿರಾರು ರೈತರಿಗೆ ಇನ್ನೂ ನೋಂದಣಿ, ಮಾರಾಟ ಸಾಧ್ಯವಾಗಿಲ್ಲ. ಕಾಳು ಇಟ್ಟುಕೊಂಡು ಖರೀದಿ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ಪಕ್ಕದ ಗದಗ, ಹಾವೇರಿ ಜಿಲ್ಲೆಯಲ್ಲಿ ಪ್ರತಿ ರೈತರಿಂದ 50 ಕ್ವಿಂಟಾಲ್ ಖರೀದಿ ನಡೆಯುತ್ತಿದೆ. ಆದರೆ, ಆದೇಶವಾಗಿ 15 ದಿನ ಕಳೆಯುತ್ತ ಬಂದರೂ ಧಾರವಾಡ ಜಿಲ್ಲೆಯಲ್ಲಿ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ.

ಮುಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಕ್ವಿಂಟಾಲ್‌ಗೆ 1800 ರೂ. ವರೆಗೆ ದರ ಇದೆ. ಮಾರಾಟಕ್ಕೆ ಮುಂದಾದರೆ ಕ್ವಿಂಟಾಲ್‌ಗೆ ಕನಿಷ್ಠ 400ರಿಂದ 500 ರೂ.ವರೆಗೆ ನಷ್ಟವಾಗುತ್ತದೆ. ಹಾಗಂತ ರಾಶಿ ಮಾಡಿದ ಬಹಳ ದಿನಗಳವರೆಗೆ ಕಾಳು ಇಡುವಂತಿಲ್ಲ. ಇಷ್ಟೆಲ್ಲಾ ಆದರೂ ಸರಕಾರದ ಆದೇಶಕ್ಕೆ ಬೆಲೆ ಇಲ್ಲದಂತಾಗಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರತಿಕ್ರಿಯಿಸಿದ್ದು, ಹಲವಾರು ದಿನಗಳ ಹಿಂದೆಯೇ ಈ ಬಗ್ಗೆ ಆದೇಶವಾಗಿದೆ. ಪ್ರತಿಯೊಬ್ಬ ರೈತರಿಂದ ಗರಿಷ್ಠ 50 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಬೆಳಗಾವಿ ಅಧಿವೇಶನದಲ್ಲಿಯೇ ಸಿಎಂ ಅವರು ಹೇಳಿದ್ದಾರೆ. ಈ ಬಗ್ಗೆ ಸರಕಾರದಿಂದ ಆದೇಶವೂ ಬಂದಿದೆ. ಕೆಲ ರೈತರಿಗೆ ಈ ಬಗ್ಗೆ ಮಾಹಿತಿ ಇಲ್ಲದೇ ಇರೋದ್ರಿಂದ ಗೊಂದಲವುಂಟಾಗಿದೆ. ಈ ಬಗ್ಗೆ ಎಲ್ಲಗೂ ಗಮನ ಹರಿಸಬೇಕು ಅಂತಾ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ

ಆರಂಭದಿಂದಲೂ ಮೆಕ್ಕೆಜೋಳ ಬೆಳೆಗಾರರು ಸಂಕಷ್ಟಗಳನ್ನು ಎದುರಿಸುತ್ತಲೇ ಬಂದಿದ್ದಾರೆ. ಪ್ರತಿಕೂಲ ಹವಾಮಾನದ ವಿರುದ್ಧ ಹೋರಾಡಿ, ತಮ್ಮ ಬೆಳೆಯನ್ನು ಉಳಿಸಿಕೊಳ್ಳುವಲ್ಲಿಯೇನೋ ರೈತರು ಸಫಲರಾಗಿದ್ದಾರೆ. ಆದರೆ ಮಾರುಕಟ್ಟೆ ಲಾಬಿ ಹಾಗೂ ಇನ್ನಿತರ ಹೊಡೆತಗಳನ್ನು ತಡೆದುಕೊಳ್ಳುವಲ್ಲಿ ಸೋಲುತ್ತಿದ್ದಾರೆ. ಒಟ್ಟಿನಲ್ಲಿ ಮೆಕ್ಕೆಜೋಳ ಬೆಳೆಗಾರರು ಸರಕಾರದ ತೀವ್ರ ನಿರ್ಲಕ್ಷದಿಂದಾಗಿ ಹೈರಾಣಾಗಿರುವುದು ಮಾತ್ರ ವಿಪರ್ಯಾಸದ ಸಂಗತಿಯೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:17 pm, Tue, 23 December 25

Source link

ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು? – Kannada News | Vijayalakshmi Darshan talks with husband about fans war after Kichcha Sudeep Hubballi statement

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿಜಯಲಕ್ಷ್ಮಿ (Vijayalakshmi Darshan) ಭೇಟಿ ಮಾಡಿ ಬಂದಿದ್ದಾರೆ. ಹುಬ್ಬಳಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ನೀಡಿದ ಹೇಳಿಕೆ ಬಳಿಕ ಶುರು ಆಗಿರುವ ಫ್ಯಾನ್ಸ್ ವಾರ್ ಕುರಿತು ದರ್ಶನ್ ಅವರಿಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿ ಬಂದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ನಡುವೆ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ.

ಮಂಗಳವಾರ (ಡಿಸೆಂಬರ್ 23) ಮಧ್ಯಾಹ್ನ 3.50ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ ಮತ್ತು ದಿನಕರ್ ತೂಗುದೀಪ ಅವರು ದರ್ಶನ್ ಭೇಟಿ ಮಾಡಿ ಅರ್ಧ ಗಂಟೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವಿನ ವಾರ್ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿಯಲ್ಲಿ ‘ಮಾರ್ಕ್’ ಸಿನಿಮಾ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ‘ಯುದ್ದಕ್ಕೆ ಸಿದ್ಧ’ ಎಂಬ ಹೇಳಿಕೆ ನೀಡಿದ ನಂತರ ಶುರುವಾದ ಫ್ಯಾನ್ಸ್ ವಾರ್ ಸೇರಿದಂತೆ ಹೊರಗಡೆ ಸದ್ಯಕ್ಕೆ ಇರುವ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ. ಆದರೆ ನಟ ದರ್ಶನ್ ಅವರು, ‘ಯಾವುದಕ್ಕೂ ಹೆಚ್ಚು ತಲೆ ಕೆಸಿಕೊಳ್ಳಬೇಡಿ. ನಮಗೂ ಒಳ್ಳೆಯ ಸಮಯ ಬರುತ್ತದೆ. ಅಲ್ಲಿಯವರೆಗೆ ಕಾಯಬೇಕು’ ಎಂದು ಶಾಂತವಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.

‘ದಿ ಡೆವಿಲ್’ ಸಿನಿಮಾದ ಬಗ್ಗೆ ದರ್ಶನ್ ಅವರು ಅಪ್ಡೇಟ್ ಕೇಳಿದ್ದಾರೆ. ಸಿನಿಮಾ ಕಲೆಕ್ಷನ್‌ ಸೇರಿದಂತೆ ಫ್ಯಾನ್ಸ್ ಸಪೋರ್ಟ್ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ತೂಗುದೀಪ ತಿಳಿಸಿದ್ದಾರೆ ಎನ್ನಲಾಗಿದೆ. ಪತಿ ಭೇಟಿ ಮಾಡಿ ಕೆಲ ಹೊತ್ತಿನಲ್ಲಿಯೇ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಪತಿ ಭೇಟಿ ಬಳಿಕ ಮನಸ್ಸಿನ ದುಗುಡ ದೂರವಾಗಿ ಸಂತೋಷವಾಗಿರುವ ರೀತಿಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ? ಉತ್ತರ ನೀಡಿದ ಕಿಚ್ಚ ಸುದೀಪ್

ಒಟ್ಟಿನಲ್ಲಿ ಹುಬ್ಬಳ್ಳಿಯ ಯುದ್ದಕ್ಕೆ ಸಿದ್ದ ಎಂಬ ಸಂದೇಶಕ್ಕೆ ಕಿಚ್ಚ ಸುದೀಪ್ ಸ್ಪಷ್ಟನೆ ನಡುವೆ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ದಚ್ಚು-ಕಿಚ್ಚನ ಫ್ಯಾನ್ಸ್ ವಾರ್​ಗೆ ಬ್ರೇಕ್ ಬೀಳುತ್ತಾ ಎಂಬುದನ್ನು ಕಾದುನೋಡಬೇಕಿದೆ. ಡಿಸೆಂಬರ್ 25ರಂದು ಸುದೀಪ್ ಅವರ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಲಿದೆ. ಎಂದು ಫ್ಯಾನ್ಸ್ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಕೂಡ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:33 pm, Tue, 23 December 25

Source link

Ashes 2025: ಸತತ ಆರು ದಿನ ಮದ್ಯ ಸೇವನೆ; ಇಂಗ್ಲೆಂಡ್‌ ಆಟಗಾರರ ವಿರುದ್ಧ ತನಿಖೆಗೆ ಆದೇಶ – Kannada News | Ashes Debacle: England Cricket Team’s 6 Day Alcohol Binge Allegations

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ (England vs Australia) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಆಶಸ್ (Ashes) ಸರಣಿ ಇದುವರೆಗೆ ಏಕಪಕ್ಷೀಯವಾಗಿ ನಡೆದಿದೆ. ನಡೆದಿರುವ 3 ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾವೇ ಜಯದ ನಗೆ ಬೀರಿದೆ. ಇತ್ತ ಈ ಪ್ರವಾಸದಲ್ಲಾದರೂ ಆಸ್ಟ್ರೇಲಿಯಾವನ್ನು ಮಣಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್‌ ಸೋತು ಸುಣ್ಣವಾಗಿದೆ. ಈ ರೀತಿಯ ಅವಮಾನಕರ ಸೋಲಿನ ನಡುವೆಯೂ ಇಂಗ್ಲೆಂಡ್‌ ಆಟಗಾರರ ಮೇಲೆ ಗಂಭೀರವಾದ ಆರೋಪವೊಂದು ಕೇಳಿಬಂದಿದ್ದು, ಕಾಂಗರೂಗಳ ನಾಡಲ್ಲಿ ಆಂಗ್ಲ ಆಟಗಾರರು ಸತತ 6 ದಿನ ಮದ್ಯ ಸೇವನೆ ಮಾಡಿದ ಆರೋಪ ಕೇಳಿಬಂದಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಕೂಡ ತನಿಖೆಗೆ ಆದೇಶಿಸಿದೆ.

6 ದಿನಗಳ ಕಾಲ ಮದ್ಯ ಸೇವನೆ

ಗಬ್ಬಾದಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಸೋತ ನಂತರ ಇಂಗ್ಲೆಂಡ್ ತಂಡವು ಸತತ ಆರು ದಿನಗಳ ಕಾಲ ಮದ್ಯ ಸೇವಿಸಿದೆ ಎಂದು ವರದಿಯಾಗಿದೆ. ಈ 6 ದಿನಗಳಲ್ಲಿ ಮೊದಲ 4 ದಿನಗಳನ್ನು ನೂಸಾ ಎಂಬ ಸಣ್ಣ ಪಟ್ಟಣದಲ್ಲಿ ಕಳೆದಿದ್ದ ಇಂಗ್ಲೆಂಡ್‌ ತಂಡ, ಅಲ್ಲಿ ಪಾರ್ಟಿ ಮಾಡಿರುವುದಾಗಿ ವರದಿಯಾಗಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವುದಾಗಿ ಇಂಗ್ಲಿಷ್ ತಂಡದ ನಿರ್ದೇಶಕ ರಾಬ್ ಕೀ ಹೇಳಿದ್ದಾರೆ.

ಆಟಗಾರರ ಪರ ಬ್ಯಾಟ್ ಬೀಸಿದ ರಾಬ್ ಕೀ

ಆಟಗಾರರು ಮದ್ಯ ಸೇವಿಸಿರುವ ಆರೋಪದ ಬಗ್ಗೆ ಮಾತನಾಡಿರುವ ತಂಡದ ನಿರ್ದೇಶತಕ ರಾಬ್ ಕೀ, ‘ಆಟಗಾರರು ತಮ್ಮ ಮಿತಿಯೊಳಗೆ ಇರಬೇಕೆಂದು ತಾನು ಆಶಿಸುತ್ತೇನೆ. ಆದಾಗ್ಯೂ ತಂಡದ ಆಟಗಾರರು ನೂಸಾ ಪಟ್ಟಣಕ್ಕೆ ಹೋಗಿರಲಿಲ್ಲ. ಆದರೆ ನಮ್ಮ ಆಟಗಾರರು ಹೊರಗೆ ಹೋಗಿ ಅತಿಯಾಗಿ ಕುಡಿದಿದ್ದಾರೆಂದು ವರದಿಯಾಗಿರುವುದರಿಂದ ಈ ಬಗ್ಗೆ ಖಂಡಿತವಾಗಿಯೂ ತನಿಖೆ ನಡೆಸಲಾಗುವುದು. ಅಂತರರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರರು ಅತಿಯಾಗಿ ಕುಡಿಯುವುದು ಸೂಕ್ತವಲ್ಲ. ಆದ್ದರಿಂದ, ಈ ಆರೋಪದ ಬಗ್ಗೆ ತನಿಖೆ ಮಾಡದಿದ್ದರೆ ಅದು ತಪ್ಪಾಗಲಿದೆ.

ಕಳೆದ ಎರಡು ಮೂರು ದಿನಗಳಿಂದ ಈ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದೆ. ಇದು ನಿಜವಾಗಿದ್ದರೆ, ಅದು ಸ್ವೀಕಾರಾರ್ಹವಲ್ಲ. ನಾನು ಮದ್ಯಪಾನ ಮಾಡುವುದಿಲ್ಲ, ಆದರೆ ಕುಡಿಯುವ ಸಂಸ್ಕೃತಿ ಯಾರಿಗೂ ಸಹಾಯ ಮಾಡುವುದಿಲ್ಲ ಎಂದು ನಾನು ನಂಬುತ್ತೇನೆ. ಆಟಗಾರರು ಭೋಜನದ ಜೊತೆಗೆ ಒಂದು ಲೋಟ ವೈನ್ ಸೇವಿಸುವುದು ಸರಿ, ಆದರೆ ಅದಕ್ಕಿಂತ ಹೆಚ್ಚು ಕುಡಿಯುವುದು ಸರಿಯಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:36 pm, Tue, 23 December 25

Source link

ಮುಸ್ಲಿಂ ದೇಶದಲ್ಲಿ 4500 ವರ್ಷ ಪ್ರಾಚೀನ ಸೂರ್ಯ ದೇವಾಲಯ ಪತ್ತೆ; ಎಲ್ಲಿದೆ ಈ ದೇವಸ್ಥಾನ? – Kannada News | 4500 Year Old Ancient Sun Temple Discovered in Egypt Viral News

ನವದೆಹಲಿ, ಡಿಸೆಂಬರ್ 23: ಈಜಿಪ್ಟ್ ದೇಶದ ರಾಜಧಾನಿ ಕೈರೋ ಬಳಿ ನಡೆದ ಪುರಾತತ್ತ್ವ ಶಾಸ್ತ್ರದ ಉತ್ಖನನ ನಡೆದಿದ್ದು, ಇದು ಪ್ರಪಂಚದಾದ್ಯಂತದ ಇತಿಹಾಸಕಾರರು ಮತ್ತು ವಿಜ್ಞಾನಿಗಳ ಗಮನ ಸೆಳೆದಿದೆ. ಪುರಾತತ್ತ್ವಜ್ಞರು ಸೂರ್ಯ ದೇವರಿಗೆ ಮೀಸಲಾಗಿರುವ 4,500 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು (Temple) ಕಂಡುಹಿಡಿದಿದ್ದಾರೆ. ಐದನೇ ರಾಜವಂಶದ ಫೇರೋ ರಾಜ ನೆಸೆರೆ ದೇವಾಲಯದಲ್ಲಿ ಕೆಲಸ ಮಾಡುತ್ತಿರುವ ಜಂಟಿ ಇಟಾಲಿಯನ್ ಮತ್ತು ಪೋಲಿಷ್ ಪುರಾತತ್ತ್ವ ಶಾಸ್ತ್ರದ ಕಾರ್ಯಾಚರಣೆಯಿಂದ ಈ ಆವಿಷ್ಕಾರವನ್ನು ಮಾಡಲಾಗಿದೆ.

ಈಜಿಪ್ಟ್ ತನ್ನ ಪಿರಮಿಡ್‌ಗಳು, ಮಮ್ಮಿಗಳು ಮತ್ತು ಸಮಾಧಿಗಳಿಗೆ ಹೆಸರುವಾಸಿಯಾಗಿದೆ. ಆದರೆ, ಈ ಸೂರ್ಯ ದೇವಾಲಯದ ಆವಿಷ್ಕಾರವು ಪ್ರಾಚೀನ ಈಜಿಪ್ಟ್‌ನಲ್ಲಿ ಜೀವನ, ಶಕ್ತಿ ಮತ್ತು ಆಕಾಶ ಶಕ್ತಿಗಳು ಎಷ್ಟು ಆಳವಾಗಿ ಮುಖ್ಯವಾಗಿದ್ದವು ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: ಹಿಂದೂ ದೇವಾಲಯದ ಧ್ವಂಸಕ್ಕೆ ಭಾರತ ಕಳವಳ; ಯುದ್ಧ ನಿಲ್ಲಿಸುವಂತೆ ಥೈಲ್ಯಾಂಡ್, ಕಾಂಬೋಡಿಯಾಕ್ಕೆ ಒತ್ತಾಯ

ತಜ್ಞರ ಪ್ರಕಾರ, ಈ ದೇವಾಲಯವು ಈಜಿಪ್ಟ್‌ನ ಐದನೇ ರಾಜವಂಶದ (ಕ್ರಿ.ಪೂ. 2465-2323) ಕಾಲದ್ದಾಗಿದೆ. ಇದನ್ನು ಕ್ರಿ.ಪೂ. 2420ರಿಂದ 2389ರವರೆಗೆ ಆಳಿದ ದೊರೆ ಫರೋ ನೆಸೆರೆ I ನಿರ್ಮಿಸಿದ್ದಾನೆಂದು ನಂಬಲಾಗಿದೆ. ಆ ಸಮಯದಲ್ಲಿ, ಸೂರ್ಯ ದೇವರು ರಾ ಬ್ರಹ್ಮಾಂಡದ ಸೃಷ್ಟಿಕರ್ತ ಎಂದು ಪರಿಗಣಿಸಲಾಗಿತ್ತು. ಅದಕ್ಕಾಗಿಯೇ ಸೂರ್ಯ ದೇವಾಲಯಗಳು ಕೇವಲ ಪೂಜಾ ಸ್ಥಳಗಳಾಗಿರಲಿಲ್ಲ. ಅವು ಶಕ್ತಿ ಮತ್ತು ನ್ಯಾಯಸಮ್ಮತತೆಯ ಸಂಕೇತಗಳೂ ಆಗಿದ್ದವು. ಈ ಆವಿಷ್ಕಾರವು ರಾಜಕೀಯ, ಧರ್ಮ ಮತ್ತು ದೇವರುಗಳು ಹೆಣೆದುಕೊಂಡಿವೆ ಎಂಬುದಕ್ಕೆ ಪುರಾವೆಗಳನ್ನು ಒದಗಿಸುತ್ತದೆ.

ಉತ್ಖನನದ ಸಮಯದಲ್ಲಿ ದೇವಾಲಯದ ಒಳಗೆ ಕಲ್ಲಿನ ಮೇಲೆ ಕೆತ್ತಿದ ಧಾರ್ಮಿಕ ಕ್ಯಾಲೆಂಡರ್ ಕೂಡ ಕಂಡುಬಂದಿದೆ. ಇದು ಸೋಕರ್, ಮಿನ್ ಮತ್ತು ರಾ ಜೊತೆ ಸಂಬಂಧಿಸಿದ ಹಬ್ಬಗಳನ್ನು ಉಲ್ಲೇಖಿಸುತ್ತದೆ. ಅತ್ಯಂತ ಆಸಕ್ತಿದಾಯಕ ವಿಷಯವೆಂದರೆ ದೇವಾಲಯದ ಛಾವಣಿಯನ್ನು ನಕ್ಷತ್ರಗಳು ಮತ್ತು ಗ್ರಹಗಳನ್ನು ಅಧ್ಯಯನ ಮಾಡಲು ಬಳಸಲಾಗುತ್ತಿತ್ತು. ಈ ಸೂರ್ಯ ದೇವಾಲಯವು ಕೇವಲ ಧಾರ್ಮಿಕ ಸ್ಥಳವಾಗಿರಲಿಲ್ಲ. ಇದು ಪ್ರಾಚೀನ ಈಜಿಪ್ಟ್‌ನಲ್ಲಿ ಖಗೋಳಶಾಸ್ತ್ರದ ಪ್ರಮುಖ ಕೇಂದ್ರವಾಗಿತ್ತು ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ಈಜಿಪ್ಟಿನವರು ಆಕಾಶ, ಸಮಯ ಮತ್ತು ಹವಾಮಾನದ ಬಗ್ಗೆಯೂ ತಿಳಿದಿದ್ದರು ಎಂಬುದು ಇದರರ್ಥ.

ಇದನ್ನೂ ಓದಿ: Video: ಚೀನಾದಲ್ಲಿ ಸುಮಾರು 1500 ವರ್ಷಗಳಷ್ಟು ಹಳೆಯ ದೇವಾಲಯಕ್ಕೆ ಬೆಂಕಿ

ಈ ದೇವಾಲಯವು ಸುಮಾರು 10,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಇದರ ಭವ್ಯತೆಯು ಬಿಳಿ ಸುಣ್ಣದ ಕಲ್ಲಿನ ಕೆತ್ತನೆಗಳು, ಗ್ರಾನೈಟ್ ಸ್ತಂಭಗಳು, ಉದ್ದವಾದ ಕಾರಿಡಾರ್‌ಗಳು ಮತ್ತು ಛಾವಣಿಗೆ ಕರೆದೊಯ್ಯುವ ಮೆಟ್ಟಿಲುಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ಪ್ರಾಚೀನ ಈಜಿಪ್ಟಿನ ಸೆನೆಟ್ಕಾ ಮಡಿಕೆಗಳು, ಬಿಯರ್ ಗ್ಲಾಸ್‌ಗಳು ಮತ್ತು ಮರದ ತುಣುಕುಗಳು ಸಹ ದೇವಾಲಯದಲ್ಲಿ ಕಂಡುಬಂದಿವೆ.

4,500 ವರ್ಷಗಳಷ್ಟು ಹಳೆಯದಾದ ಈ ಸೂರ್ಯ ದೇವಾಲಯವು ಈಜಿಪ್ಟ್ ಕೇವಲ ಸಮಾಧಿಗಳ ನಾಗರಿಕತೆ ಎಂಬ ಕಲ್ಪನೆಯನ್ನು ಪ್ರಶ್ನಿಸುತ್ತದೆ. ಪ್ರಾಚೀನ ಈಜಿಪ್ಟ್ ಜೀವನ, ಶಕ್ತಿ, ವಿಜ್ಞಾನ ಮತ್ತು ಬ್ರಹ್ಮಾಂಡದ ಆಳವಾದ ತಿಳುವಳಿಕೆಯನ್ನು ಹೊಂದಿರುವ ಹೆಚ್ಚು ಅಭಿವೃದ್ಧಿ ಹೊಂದಿದ ಸಂಸ್ಕೃತಿಯಾಗಿತ್ತು ಎಂಬುದನ್ನು ಈ ಆವಿಷ್ಕಾರವು ಬಹಿರಂಗಪಡಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ತಾಯಿ, ಮಗು ರಕ್ಷಣೆ – Kannada News | Krishna River Suicide Attempt: Mother and Child Rescued by 112 Police in Chikpadasalgi

ಬಾಗಲಕೋಟೆ, ಡಿಸೆಂಬರ್​ 23: ಎರಡು ವರ್ಷದ ಗಂಡು ಮಗುವಿನ ಸಮೇತ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ (Suicide Attempt) ತಾಯಿಯನ್ನು 112 ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ (Chikkapadasalagi) ಬ್ರಿಡ್ಜ್ ಬಳಿ ನಡೆದಿದೆ. ಸುರೇಖಾ ಭಜಂತ್ರಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ. ಸದ್ಯ ಮಹಿಳೆಯನ್ನು ಸಾವಳಗಿ ಠಾಣೆಗೆ  ಕರೆತಂದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನಡೆದಿದ್ದೇನು?

ಸುರೇಖಾ ಭಜಂತ್ರಿ ತಮ್ಮ ಎರಡು ವರ್ಷದ ಗಂಡು ಮಗುವಿನ ಸಮೇತ ಚಿಕ್ಕಪಡಸಲಗಿ ಕೃಷ್ಣಾ ನದಿ ಬ್ರಿಡ್ಜ್​ನಿಂದ ಹಾರಲು ಮುಂದಾಗಿದ್ದರು. ಈ ವೇಳೆ ಮಲ್ಲು ಕಲ್ಯಾಣಿ ಎಂಬ ಸ್ಥಳೀಯರು ಗಮನಿಸಿ 112 ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದಿದ್ದಾರೆ.

ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್​ನಿಂದಲೇ​​​ ನೀಚ ಕೃತ್ಯ

ಸದ್ಯ ಮಹಿಳೆ ವಿಚಾರಣೆ ನಡೆಸಿರುವ ಪೊಲೀಸರು ಗಂಡನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಠಾಣೆಗೆ ಬಂದ ಪತಿ ತಮ್ಮ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಕುಟುಂಬ ಕಲಹದಿಂದ ಬೇಸತ್ತು ವ್ಯಕ್ತಿ ನೇಣಿಗೆ ಶರಣು

ಕುಟುಂಬ ಕಲಹದಿಂದ ಮಾನಸಿಕವಾಗಿ ಮನನೊಂದಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್​​: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ

ಪಟ್ಟಣದ ರೇಷ್ಮೆ ಹುರಿ ಘಟಕದ ಆವರಣದಲ್ಲಿ ಚಿಂತಾಮಣಿ ಮೂಲದ ಕಲ್ಯಾಣ್ ಕುಮಾರ್ ( 35 ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ ಕೆಲ ದಿನಗಳಿಂದ ಮನೆಯಲ್ಲಿ ಜಗಳ ಮಾಡಿಕೊಂಡು ಕೌಟುಂಬಿಕ ಕಲಹದಿಂದ ಮನನೊಂದಿದ್ದು ಮೂರು ದಿನಗಳ ಹಿಂದೆ ವಿಜಯಪುರಕ್ಕೆ ಬಂದು ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಶವವನ್ನ ಕಂಡ ಸ್ಥಳಿಯರು ವಿಜಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ ವಿಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡ ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ – Kannada News | Chanakya Niti: Follow these tips from Chanakya before taking a loan

 

ಆಚಾರ್ಯ ಚಾಣಕ್ಯರು (Acharya Chanakya)  ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಹಣಕಾಸು, ಆರ್ಥಿಕ ವಿಷಯಗಳ ಬಗ್ಗೆಯೂ ಸಾಕಷ್ಟು ವಿಚಾರಗಳ ಹೇಳಿಕೊಟ್ಟಿದ್ದಾರೆ.  ಹೌದು ಹಣಕ್ಕೆ ಸಂಬಂಧಿಸಿದ ಯೋಜನೆಗಳು ಹೇಗಿರಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬಾರದು? ಹಣವನ್ನು ಹೇಗೆ ಉಳಿಸುವುದು? ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಸಾಲ ತೆಗೆದುಕೊಳ್ಳುವಾಗ ಮತ್ತು ಸಾಲ ಕೊಡುವಾಗ ಒಂದಷ್ಟು ವಿಚಾರಗಳ ಬಗ್ಗೆ ಮೊದಲೇ ತಿಳಿದುಕೊಳ್ಳಬೇಕು ಎಂದಿದ್ದಾರೆ. ಅದೇನೆಂಬುದರ ಸಂಪೂರ್ಣ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಸಾಲ ತೆಗೆದುಕೊಳ್ಳುವ ಮುನ್ನ ಯೋಚಿಸಿ:

ಸಾಲ ತೆಗೆದುಕೊಳ್ಳುವ ಮೊದಲು, ನಿಮ್ಮ ಅಗತ್ಯತೆಗಳು ಮತ್ತು ಸಾಮರ್ಥ್ಯಗಳನ್ನು ನಿರ್ಣಯಿಸುವುದು ಬಹಳ ಮುಖ್ಯ. ನಿಜವಾಗಿಯೂ ಸಾಲದ ಅಗತ್ಯವಿರುವವರು ಮತ್ತು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವ ಸಾಮರ್ಥ್ಯವಿರುವವರು ಮಾತ್ರ ಸಾಲವನ್ನು ತೆಗೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳುತ್ತಾರೆ. ಅತಿಯಾದ ಖರ್ಚು ಅಥವಾ ತೆಗೆದುಕೊಂಡ ಸಾಲವನ್ನು ತೀರಿಸದೆ ಇರುವುದು ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟವನ್ನು ಉಂಟುಮಾಡಬಹುದು. ಇದಲ್ಲದೆ, ಸಾಲವನ್ನು ತೆಗೆದುಕೊಳ್ಳುವ ಮೊದಲು ಸಾಲದ ಮೂಲವನ್ನು ಪರಿಗಣಿಸುವುದು ಮುಖ್ಯ. ವಿಶ್ವಾಸಾರ್ಹ ಮೂಲಗಳಿಂದ ಸಾಲವನ್ನು ತೆಗೆದುಕೊಳ್ಳಬೇಕು. ಬ್ಯಾಂಕ್, ಹಣಕಾಸು ಸಂಸ್ಥೆ ಅಥವಾ ವಿಶ್ವಾಸಾರ್ಹ ಸ್ನೇಹಿತರಿಂದ ಸಾಲ ಪಡೆಯುವುದು ಯಾವಾಗಲೂ ಸುರಕ್ಷಿತವಾಗಿದೆ ಎನ್ನುತ್ತಾರೆ ಚಾಣಕ್ಯ.

ಇದನ್ನೂ ಓದಿ: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ವಿಚಾರಗಳನ್ನು ಅನುಸರಿಸಿ

ಸಾಲ ನೀಡುವಾಗ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳು:

ಹಣವನ್ನು ಸಾಲ ನೀಡುವ ಮೊದಲು, ಆ ವ್ಯಕ್ತಿಯು ವಿಶ್ವಾಸಾರ್ಹ ವ್ಯಕ್ತಿಯೇ ಮತ್ತು ಸಾಲವನ್ನು ಮರು ಪಾವತಿಸಲು ಸಮರ್ಥನೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ ಎಂದು ಚಾಣಕ್ಯ ಹೇಳುತ್ತಾರೆ. ಹಣವನ್ನು ಸಾಲವಾಗಿ ನೀಡುವಾಗ  ಆತುರಪಡಬಾರದು, ಭಾವನೆಗಳಿಗೆ ಬಲಿಯಾಗಬಾರದು ಬದಲಿಗೆ ಯೋಚಿಸಬೇಕು ಮತ್ತು ವಿಶ್ವಾಸಾರ್ಹ ವ್ಯಕ್ತಿಗೆ ಮಾತ್ರ ಸಾಲವನ್ನು ನೀಡಬೇಕು. ಸರಿಯಾದ ಯೋಜನೆಗಳಿಲ್ಲದೆ ಯಾರಿಗಾದರೂ ಹಣವನ್ನು ಸಾಲವಾಗಿ ನೀಡುವುದು ಸಂಬಂಧಗಳು ಹಾಳಾಗಲು ಮತ್ತು ಮತ್ತು ಆರ್ಥಿಕ ನಷ್ಟಗಳಿಗೆ ಕಾರಣವಾಗಬಹುದು. ಇದಲ್ಲದೆ ನೀವು ನೀಡಿದ  ಸಾಲಕ್ಕೆ ಲಿಖಿತ ದಾಖಲೆಗಳನ್ನು ಹೊಂದಿಸಿಕೊಳ್ಳುವುದು ಬಹಳ ಮುಖ್ಯ. ಹೀಗೆ ಮಾಡುವುದರಿಂದ ಭವಿಷ್ಯದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ  ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

google-site-verification: google357e77c267c33613.html