Category Archives: Blog

Your blog category

ಮರ್ಯಾದೆ ಹತ್ಯೆ: ಮಾನ್ಯಾ ಜತೆ ಮಗುನೂ ಹೋಯ್ತು, ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಅಮ್ಮನೂ ಸೀರಿಯಸ್ – Kannada News | Hubballi honor Killing Case: Mother condition also serious Says manya Husband vivekananda

ಹುಬ್ಬಳ್ಳಿ, (ಡಿಸೆಂಬರ್ 23): ಹುಬ್ಬಳ್ಳಿಯಲ್ಲಿ (Hubballi) ಪ್ರೀತಿಸಿ ಅಂತರ್ಜಾತಿ ಯುವಕನ ಜೊತೆ ವಿವಾಹವಾಗಿದ್ದ ಮಗಳನ್ನೇ ತಂದೆಯೇ ಬರ್ಬರ ಕೊಲೆ  (Hubballi Honor Killing) ಮಾಡಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ವಿರೋಧದ ನಡುವೆಯೂ ದಲಿತ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಕೆರಳಿದ್ದ ತಂದೆ, ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಎಂದು ಯೋಚಿಸದೇ ಮಗಳು ಮಾನ್ಯಗಳನ್ನ ಕೊಚ್ಚಿ ಕೊಂದಿದ್ದಾನೆ. ಅಂತರ್ಜಾತಿಯಾಗಿದ್ದರೂ ಸಹ ಮಾನ್ಯಳ ಪತಿ ವಿವೇಕಾನಂದ ಕುಟುಂಬದವರು ಚೆನ್ನಾಗಿ ನೋಡಿಕೊಂಡಿದ್ದರು. ಆದರೂ ಸಹ ತಂದೆ ಮಗಳನ್ನು ಬಲಿ ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರೀತಿ ಮುಂದೆ ಜಾತಿ ಗೆದ್ದಿದೆ.

ಇದೀಗ ಮಾನ್ಯಗಳ ಜೊತೆ ಆಕೆಯ ಹೊಟ್ಟೆಯಲ್ಲಿದ್ದ ಮಗುವನ್ನೂ ಕಳೆದುಕೊಂಡು ಪತಿ ವಿವೇಕಾನಂದ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾನೆ. ಇನ್ನೊಂದೆಡೆ  ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿವೇಕಾನಂದನ ತಾಯಿ ಸಹ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದು. ಚಿಕಿತ್ಸೆಗೆ ಹಣವಿಲ್ಲದೆ ಕುಟುಂಬ ಕಂಗಾಲಾಗಿದೆ. ಈ ಬಗ್ಗೆ ವಿವೇಕಾನಂದ ಕಣ್ಣೀರಿಡುತ್ತಲೇ ನೋವು ಹಂಚಿಕೊಂಡಿದ್ದಾನೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!

ಭೋಪಾಲ್, ಡಿಸೆಂಬರ್ 23: ಮಧ್ಯಪ್ರದೇಶದ ರಾಯ್‌ಗಾಂವ್ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಸಚಿವೆ ಪ್ರತಿಮಾ ಬಾಗ್ರಿ ಅವರಿಗೆ ಆಘಾತ ಕಾದಿತ್ತು. ಹೊಸದಾಗಿ ನವೀಕರಿಸಿದ ಡಾಂಬರು ರಸ್ತೆ ಮೇಲೆ ಕಾಲಿಡುತ್ತಿದ್ದಂತೆ ಆ ಡಾಂಬರು ಅವರ ಚಪ್ಪಲಿಯ ಜೊತೆಗೇ ಕಿತ್ತು ಬಂದಿತು. ಇದರಿಂದ ಕೋಪಗೊಂಡ ಸಚಿವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಚಿವರ ಕಾಲಿನ ಕೆಳಗೆ ಡಾಂಬರು ಕಿತ್ತು ಬರುತ್ತಿರುವ ಈ ಘಟನೆಯ ವಿಡಿಯೋ ವೈರಲ್ (Viral Video) ಆಗಿದೆ. ಈ ಕಾಮಗಾರಿ ಮಾಡಿದ ಗುತ್ತಿಗೆದಾರರ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಲು ಮತ್ತು ಜವಾಬ್ದಾರಿಯುತ ಸಂಸ್ಥೆಯ ವಿರುದ್ಧ ಕಠಿಣ ದಂಡ ವಿಧಿಸಲು ಸಿವೆ ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ – Kannada News | Union Minister H.D. Kumaraswamy Writes to Railway Minister for Bengaluru–Madgaon Vande Bharat Express

ವಂದೇ ಭಾರತ್​​ ರೈಲು ಆರಂಭಕ್ಕೆ ಹೆಚ್​​ಡಿಕೆ ಮನವಿ

ಬೆಂಗಳೂರು, ಡಿಸೆಂಬರ್​​ 23: ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ರೈಲು ಸಂಚಾರ ಆರಂಭಿಸಿದಲ್ಲಿ ಪ್ರವಾಸೋದ್ಯಮ, ಆರ್ಥಿಕ, ಕೈಗಾರಿಕೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್​​ಡಿಕೆ ಬರೆದ ಪತ್ರದಲ್ಲೇನಿದೆ?

ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳ ಮಾರ್ಗವಾಗಿ ಗೋವಾ ಸಂಪರ್ಕಿಸುವ ಉತ್ತಮ ಹೈ-ಸ್ಪೀಡ್ ರೈಲು ಸಂಚಾರಕ್ಕೆ ಸಾರ್ವಜನಿಕ ವಲಯದಿಂದ ಬೇಡಿಕೆ ಇದೆ. ಘಾಟ್ ವಿಭಾಗದಲ್ಲಿ ವಿದ್ಯುತೀಕರಣ ಪೂರ್ಣಗೊಂಡ ನಂತರ, ಈ ಮಾರ್ಗವು ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಂಚರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸಿದ್ಧವಾಗಲಿದೆ. ಹೀಗಾಗಿ ಹಾಸನ, ಮಂಗಳೂರ ಜಂಕ್ಷನ್, ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಸಂಚರಿಸುವ ಬೆಂಗಳೂರು ಮತ್ತು ಮಡಗಾಂವ್‌​​ (ಗೋವಾ) ಸಂಪರ್ಕಿಸುವ ವಂದೇ ಭಾರತ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸುವಂತೆ ಮನವಿ ಮಾಡುತ್ತೇನೆ. ಈ ಮಾರ್ಗವು ಪ್ರವಾಸಿ, ಯಾತ್ರಿಕ, ಶೈಕ್ಷಣಿಕ ಮತ್ತು ವೃತ್ತಿಪರ ಪ್ರಯಾಣಿಕರನ್ನು ಒಳಗೊಂಡಿದೆ ಎಂದು ಹೆಚ್​​ಡಿಕೆ ತಿಳಿಸಿದ್ದಾರೆ.

ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್​ ಟ್ರೈನ್​ ಏನೇಲ್ಲ ವಿಶೇಷತೆ ಹೊಂದಿದೆ ನೋಡಿ

‘ಕರಾವಳಿ ಭಾಗಕ್ಕೆ ದೊಡ್ಡ ಶಕ್ತಿಯಾಗಲಿದೆ’

ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿಯೂ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಕಲ್ಪನೆ ಭಾರತೀಯ ರೈಲ್ವೆಯಲ್ಲಿ ಪರಿವರ್ತನಾತ್ಮಕ ಕ್ರಾಂತಿಯನ್ನೇ ಉಂಟು ಮಾಡಿದೆ. ಬೆಂಗಳೂರು ಮತ್ತು ನಡುವಿನ ವಂದೇ ಭಾರತ್ ರೈಲು ರಾಜ್ಯಕ್ಕೆ, ಅದರಲ್ಲಿಯೂ ಕರಾವಳಿ ಭಾಗಕ್ಕೆ ದೊಡ್ಡ ಶಕ್ತಿಯಾಗಲಿದೆ ಎಂಬುದು ನನ್ನ ವಿಶ್ವಾಸ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:35 pm, Tue, 23 December 25

Source link

ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್ – Kannada News | Mark Movie actor Kichcha Sudeep interview about Darshan fans controversy

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ಹಾಗಾದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ. ಆ ಎಲ್ಲ ವಿಷಯಗಳಿಗೆ ಸುದೀಪ್ ಅವರು ಈ ಸಂದರ್ಶನದಲ್ಲಿ (Kichcha Sudeep Interview) ಉತ್ತರ ನೀಡಿದ್ದಾರೆ.

ಪೈರಸಿ ಪದ ಬಳಸಿಲ್ಲ ಯಾಕೆ?

‘ನಾನು ಆ ವೇದಿಕೆಯಲ್ಲಿ ಪೈರಸಿ ಎಂಬ ಪದ ಬಳಕೆ ಮಾಡಿಲ್ಲ. ಹಾಗಾದರೆ ಇಡೀ ಚಿತ್ರರಂಗ ರಿಯಾಕ್ಟ್ ಮಾಡಬೇಕಿತ್ತಲ್ಲ. ಮೊದಲು ‘45’ ಚಿತ್ರತಂಡದವರು ರಿಯಾಕ್ಟ್ ಮಾಡಬೇಕಿತ್ತು. ಉಪ್ಪಿ ಸರ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ಗಣೇಶ್, ರಿಷಬ್ ಶೆಟ್ಟಿ, ಯಶ್ ಮುಂತಾದವರೆಲ್ಲ ರಿಯಾಕ್ಟ್ ಮಾಡಬೇಕಿತ್ತು. ನಾನು ಹೇಳಿಕೆ ನೀಡಿದೆ. ಎಲ್ಲಿಂದ ಸೌಂಡು ಬರುತ್ತದೆ ಅಂತ ನೋಡಿದೆ. ಚಿತ್ರರಂಗದಲ್ಲಿ ಒಂದು ಲಕ್ಷ ಜನರು ಇದ್ದಾರೆ. ಯಾರೂ ನಮ್ಮ ಮಾತಿಗೆ ಪ್ರತಿಕ್ರಿಯೆ ನೀಡಿಲ್ಲ. ಪ್ರತಿಕ್ರಿಯೆ ನೀಡಿದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು. ಅಲ್ಲಿ ಮಾತನಾಡಿದ ನನಗೆ ಘನತೆ ಇಲ್ಲವಾ? 30 ವರ್ಷದಿಂದ ಜನರು ನನ್ನನ್ನು ನೋಡಿಲ್ಲವೇ? ಯಾವತ್ತಾದರೂ ನಾನು ತಪ್ಪಾದ ಹೇಳಿಕೆ ನೀಡಿದ್ದೇನಾ? ಯಾವುದಾದರೂ ಕಲಾವಿದರ ಬಗ್ಗೆ ತಪ್ಪಾಗಿ ಮಾತನಾಡಿದ್ದೇನಾ?’

ಆ ರೀತಿ ಮಾತಾಡಿದ್ದಕ್ಕೆ ಕಾರಣ?

‘ಅಂದು ನಾನು ಅಲ್ಲಿ ಮಾತನಾಡುವುದಕ್ಕೂ ಮುನ್ನ ನನಗೆ ಒಂದು ಫೋನ್ ಕರೆ ಬಂದಿತ್ತು. ದುಡ್ಡಿಗಾಗಿ ನಿಮ್ಮ ಸಿನಿಮಾವನ್ನು ಪೈರಸಿ ಮಾಡುತ್ತಿಲ್ಲ. ನಿಮ್ಮ ಸಿನಿಮಾವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ಪೈರಸಿ ಮಾಡಲಿದ್ದಾರೆ ಎಂಬ ಮಾಹಿತಿ ಬಂತು. ಅದರ ವಿರುದ್ಧ ನಾನು ನಿಂತುಕೊಳ್ಳದೇ ಮತ್ತೆ ಯಾರು ಬರಬೇಕು? ಅಂದು ನಾನು ನನ್ನ ಸಂಭ್ರಮವನ್ನು ನಿಲ್ಲಿಸಿ, ಆ ಮಾತನ್ನು ಹೇಳಿದೆ ಎಂದರೆ ಅರ್ಥ ಮಾಡಿಕೊಳ್ಳಿ. ಯಾರು ಕೇಳಿಸಿಕೊಳ್ಳುತ್ತಿದ್ದಾರೋ ಅವರಿಗೆ ನಾನು ಆ ಮಾತನ್ನು ಹೇಳಬೇಕಿತ್ತು. ಅವರಿಗೆ ಅರ್ಥ ಆಗಿದೆ.’

ಆ ಮಾತು ಹೇಳಿದ್ದು ಯಾರಿಗೆ?

‘ಪ್ರಭುದ್ಧತೆ ಇಲ್ಲದೇ ಆವೇಷದಲ್ಲಿ ಏನೇನೋ ಮಾತಾಡುವವನು ನಾನಾಗಿದ್ದರೆ ಈಗಾಗಲೇ ಅನೇಕ ವಿವಾದಗಳಲ್ಲಿ ಸಿಕ್ಕಿಕೊಳ್ಳಬೇಕಿತ್ತು. ಬೇರೆಯವರ ಸಿನಿಮಾದಲ್ಲಿ ತಲೆ ಹಾಕುವ ಉದ್ದೇಶ ನನಗೆ ಇಲ್ಲ. ಇಂಥವರಿಗೆ ಹೇಳಿದ್ದು ಅಂತ ನಾನು ಹೇಳಿಲ್ಲ. ಅಷ್ಟು ಜನ ಕಲಾವಿದರು ಇದ್ದಾರೆ. ಎಲ್ಲರಿಗೂ ಸುದೀಪ್ ಗೊತ್ತು. ಅವರು ಯಾರೂ ಕೂಡ ಪ್ರತಿಕ್ರಿಯಿಸಿಲ್ಲ. ಯಾಕೆ ಪ್ರತಿಕ್ರಿಯಿಸಿಲ್ಲ ಎಂಬುದು ಅವರಿಗೆ ಗೊತ್ತು. ಬೇರೆ ಯಾರದ್ದೂ ಮಾತಿಗೆ ನಾನು ಯಾಕೆ ಪ್ರತಿಕ್ರಿಯೆ ನೀಡಬೇಕು? ನನ್ನ ಹೆಸರು ಹೇಳಿ ಮಾತನಾಡಿದರೆ ನಾನು ಪ್ರತಿಕ್ರಿಯೆ ಕೊಡುತ್ತೇನೆ.

‘ನಮ್ಮ ಸಿನಿಮಾ ಕಾಪಾಡಿಕೊಳ್ಳುವುದು ನಮಗೆ ಮುಖ್ಯ. ನನಗೆ ಅಹಂ ಇಲ್ಲ. ಅದರ ಅವಶ್ಯಕತೆ ನನಗೆ ಇಲ್ಲ. ಸಿನಿಮಾ ಬಿಟ್ಟು ಬೇರೆ ವಿಚಾರಗಳ ಬಗ್ಗೆ ನಾನು ಕೇರ್ ಮಾಡಲ್ಲ. ನನ್ನದು ಸಿಂಪಲ್ ಜೀವನ. ದರ್ಶನ್ ಬಗ್ಗೆ ನೀವು ಬಂದು ಕೇಳಿದಾಗ ನಾನು ಇಂದಿನ ತನಕ ಕೆಟ್ಟದಾಗಿ ಮಾತನಾಡಿಲ್ಲ. ನಾನು ಯಾಕೆ ಯಾರಿಗಾದರೂ ಕೆಟ್ಟದ್ದು ಬಯಸಬೇಕು? ನನ್ನ ಸಿನಿಮಾವನ್ನು ಅದರ ಪಾಡಿಗೆ ಬಿಟ್ಟುಬಿಡಬಹುದಲ್ಲ. ಯಾರು ಮಾಡುತ್ತಿದ್ದಾರೋ ಅವರಿಗೆ ಹೇಳಿದ್ದೇನೆ. ಅದು ಅವರಿಗೆ ತಲುಪಿದೆ. ಅವರನ್ನು ನಾನು ಬಿಡಲ್ಲ.’

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಪೈರಸಿ ವಿರುದ್ಧ ನಿಮ್ಮ ಯುದ್ಧ ಹೇಗೆ?

‘ವಿವಾದ ಮಾಡಲು ನಾನು ಇಲ್ಲಿ ಬಂದಿಲ್ಲ. ನನಗೆ ಆಗಿರುವ ನೋವನ್ನು ಊಹಿಸಿಕೊಳ್ಳಿ. ಪೈರಸಿ ವಿರುದ್ಧ ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ಈಗ ಹೇಳಲ್ಲ. ಪ್ರಯತ್ನ ಮಾಡುತ್ತಿದ್ದೇನೆ. ಯಶಸ್ವಿ ಆಗುತ್ತೇನೋ ಇಲ್ಲವೋ ಗೊತ್ತಿಲ್ಲ. ಯಶಸ್ವಿಯಾದರೆ ಪೈರಸಿ ಜಾಲವನ್ನು ಶೇಕಡ 80ರಷ್ಟು ಅಂತ್ಯಗೊಳಿಸುತ್ತೇವೆ. ಅದಕ್ಕಾಗಿ ಸರ್ಕಾರದಿಂದ ದೊಡ್ಡ ದೊಡ್ಡ ವ್ಯಕ್ತಿಗಳ ಸಹಾಯ ಕೇಳಿದ್ದೇವೆ. ಪ್ರತಿಯೊಬ್ಬರೂ ಅದಕ್ಕೆ ಸಹಕಾರ ಕೊಟ್ಟಿದ್ದಾರೆ.’

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು – Kannada News | Koppal: TV9 Report Impact; Police Constable Suspended for Bringing Bundle of Papers from Complainant

ಕೊಪ್ಪಳ, ಡಿಸೆಂಬರ್​ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್​​​ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್​ಪಿ ರಾಮ್​ ಅರಸಿದ್ದಿ ಕ್ರಮಕೈಗೊಂಡಿದ್ದಾರೆ.  ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೀಕ್ಷಿತ್ ಶೆಟ್ಟಿ ವೇಗಕ್ಕೆ ಬ್ರೇಕ್ ಇಲ್ಲ, ಮತ್ತೊಂದು ಬಿಗ್ ಬಜೆಟ್ ತೆಲುಗು ಸಿನಿಮಾನಲ್ಲಿ ನಟನೆ – Kannada News | Deekshit Shetty to act along with Dulquer Salman and Pooja Hegde

ದೀಕ್ಷಿತ್ ಶೆಟ್ಟಿ(Deekshit Shetty), ತಮ್ಮ ಪ್ರತಿಭೆಯಿಂದ, ಸರಳತೆಯಿಂದ, ಕೆಲಸದ ಮೇಲಿನ ಶ್ರದ್ಧೆಯಿಂದ ಪರಭಾಷೆ ಚಿತ್ರರಂಗದಲ್ಲಿ ಅವಕಾಶ ಮೇಲೆ ಅವಕಾಶಗಳನ್ನು ಪಡೆಯುತ್ತಿರುವ ಕನ್ನಡದ ನಟ. ಕನ್ನಡದ ‘ದಿಯಾ’ ಸಿನಿಮಾ ಮೂಲಕ ಸಿನಿಮಾಕ್ಕೆ ಎಂಟ್ರಿ ಕೊಟ್ಟ ದೀಕ್ಷಿತ್ ಶೆಟ್ಟಿ ಸ್ವಪ್ರತಿಭೆಯಿಂದ ಸಫಲತೆಯ ಮೆಟ್ಟಿಲುಗಳನ್ನು ಒಂದೊಂದಾಗಿ ಏರುತ್ತಾ ಹೋಗುತ್ತಿದ್ದಾರೆ. ಸ್ಟಾರ್ ನಟ ನಾನಿ, ಕೀರ್ತಿ ಸುರೇಶ್ ಜೊತೆಗೆ ‘ದಸರಾ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಕ್ಷಿತ್ ಶೆಟ್ಟಿ, ‘ದಿ ಗರ್ಲ್​​ಫ್ರೆಂಡ್’ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಜೊತೆ ನಟಿಸಿದರು. ಇದೀಗ ಮತ್ತೊಂದು ದೊಡ್ಡ ಸಿನಿಮಾನಲ್ಲಿ ಅವಕಾಶ ಬಾಚಿಕೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ನಟಿಸುತ್ತಿರುವ ಇನ್ನೂ ಹೆಸರಿಡದ ಹೊಸ ಸಿನಿಮಾನಲ್ಲಿ ದೀಕ್ಷಿತ್ ಶೆಟ್ಟಿಗೆ ಪ್ರಮುಖ ಪಾತ್ರವೊಂದು ದೊರೆತಿದೆ. ಸಿನಿಮಾನಲ್ಲಿ ದುಲ್ಕರ್ ಸಲ್ಮಾನ್ ಅವರಿಗೆ ಎದುರು ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದು, ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಪ್ರಾರಂಭವಾಗಿದೆ. ಈ ಸಿನಿಮಾನಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಅವರಿಗೆ ಪ್ರಮುಖ ಪಾತ್ರವೊಂದು ನೀಡಲಾಗಿದೆ. ಈ ಹಿಂದೆ ‘ದಸರಾ’, ‘ದಿ ಗರ್ಲ್​ಫ್ರೆಂಡ್’, ಇನ್ನೂ ಹಲವು ಸಿನಿಮಾಗಳ ಮೂಲಕ ತಮ್ಮ ಪ್ರತಿಭೆ ಸಾರಿರುವ ದೀಕ್ಷಿತ್ ಶೆಟ್ಟಿಗೆ ಮತ್ತೊಂದು ಸುವರ್ಣಾವಕಾಶ ದೊರೆತಿದೆ.

ಇದನ್ನೂ ಓದಿ:ಬೃಂದಾ ಆಚಾರ್ಯ ಮತ್ತು ನಟ ದೀಕ್ಷಿತ್ ಶೆಟ್ಟಿ ಸಖತ್ ಡ್ಯಾನ್ಸ್: ವಿಡಿಯೋ

ದೀಕ್ಷಿತ್ ಶೆಟ್ಟಿ ಹಲವು ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ‘ದಿಯಾ’ದಿಂದ ನಟನೆ ಆರಂಭಿಸಿದ ದೀಕ್ಷಿತ್, ‘ಕೆಟಿಎಂ’, ಸಖತ್ ಸದ್ದು ಮಾಡಿದ ‘ಬ್ಲಿಂಕ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೆ ದೀಕ್ಷಿತ್ ನಟನೆಯ ಹಾಸ್ಯ ಪ್ರಧಾನ ಸಿನಿಮಾ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಹ ಬಿಡುಗಡೆ ಆಗಿ ಗಮನ ಸೆಳೆಯಿತು. ಇವುಗಳ ಜೊತೆಗೆ ಪ್ರಸ್ತುತ ‘ಶೀಘ್ರಮೇವ ಕಲ್ಯಾಣ ಪ್ರಾಪ್ತಿರಸ್ತು’, ‘ಸ್ಟ್ರಾಬೆರ್ರಿ’ ಸಿನಿಮಾಗಳಲ್ಲಿ ದೀಕ್ಷಿತ್ ನಟಿಸುತ್ತಿದ್ದಾರೆ. ತೆಲುಗಿನ ‘ಕಿಂಗ್ ಜಾಕ್ ಕ್ವೀನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಮಲಯಾಳಂನ ‘ಒಪ್ಪೀಸ್’ ಸಿನಿಮಾನಲ್ಲೂ ನಟಿಸುತ್ತಿದ್ದಾರೆ. ಇವುಗಳ ಜೊತೆಗೆ ಇದೀಗ ದುಲ್ಕರ್ ಸಲ್ಮಾನ್ ಅವರ ಹೊಸ ಸಿನಿಮಾ ಸಹ ದೀಕ್ಷಿತ್​​ಗೆ ದೊರೆತಿದೆ.

ದೀಕ್ಷಿತ್ ಶೆಟ್ಟಿ ಅವರು ಈ ಹಿಂದೆ ಟಿವಿ9ಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡಿದ್ದಂತೆ. ಅವರಿಗೆ ಸಿಗುತ್ತಿರುವ ಎಲ್ಲ ಅವಕಾಶಗಳು ಯಾರೋ ಒಬ್ಬರು ರೆಫರ್ ಮಾಡಿ, ಅಂದರೆ ಇವರ ಕೆಲಸ ನೋಡಿದವರು, ಮೆಚ್ಚಿ ಮತ್ತೊಂದು ಸಿನಿಮಾಕ್ಕೆ ತೆಗೆದುಕೊಳ್ಳುತ್ತಾರಂತೆ. ದೀಕ್ಷಿತ್ ಅವರಿಗೆ ಕೆಲಸದ ಮೇಲಿರುವ ಶ್ರದ್ಧೆ, ಶೂಟಿಂಗ್​​ ಸ್ಥಳದಲ್ಲಿ ತೋರುವ ಶಿಸ್ತು, ತನ್ಮಯತೆಯ ಕಾರಣಕ್ಕೆ ಹೆಚ್ಚು ಹೆಚ್ಚು ಅವಕಾಶಗಳು ಸಿಗುತ್ತಿವೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ದಾವಣಗೆರೆ, ಡಿಸೆಂಬರ್​​ 23: ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ದಾವಣಗೆರೆ ರಿಯಲ್ ಎಸ್ಟೇಟ್ ಉದ್ಯಮಿ‌ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು‌ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಶಾಮನೂರ ವೇದಮೂರ್ತಿ(53) ಬಂಧಿತ ವ್ಯಕ್ತಿ. ಬಂಧಿತರಿಂದ ಅಂದಾಜು 10 ಲಕ್ಷ ರೂ ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಒಂದು ಲಕ್ಷ ರೂ. ನಗದು ಹಣ ಸೇರಿದಂತೆ 11 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ವೈಯಲೆಂಟ್ ಅವತಾರದಲ್ಲಿ ವಿಜಯ್ ದೇವರಕೊಂಡ, ವಾವ್ ಎಂದ ರಶ್ಮಿಕಾ – Kannada News | Vijay Deverakonda starts another movie, Rashmika sends best wishes

ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದ ಸ್ಟಾರ್ ನಟ. ಆದರೆ ಕಳೆದ ಕೆಲ ವರ್ಷಗಳಿಂದಲೂ ಗೆಲುವು ಅವರಿಂದ ಬಲು ದೂರವೇ ಉಳಿದಿದೆ. ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರಾದರೂ ಗೆಲುವು ಎಂಬುದು ಅವರ ಪಾಲಿಗೆ ಮರೀಚಿಕೆಯೇ ಆಗಿದೆ. ರೊಮ್ಯಾಂಟಿಕ್, ಆಕ್ಷನ್, ಕೌಟುಂಬಿಕ, ಹಾರರ್, ಕಾಮಿಡಿ ಸಿನಿಮಾ ಹೀಗೆ ಹಲವು ಜಾನರ್​​ನ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಕಳೆದ ಕೆಲ ವರ್ಷಗಳಲ್ಲಿ ನಟಿಸಿದ್ದಾರೆ. ಆದರೆ ಯಾವೊಂದು ಸಿನಿಮಾ ಸಹ ಗೆದ್ದಿಲ್ಲ. ಇದೀಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಪ್ರತಿ ಬಾರಿಯಂತೆ ರಶ್ಮಿಕಾ, ಈ ಬಾರಿಯೂ ತಮ್ಮ ಭಾವಿ ಪತಿಗೆ ಶುಭಾಶಯ ತಿಳಿಸಿದ್ದಾರೆ.

ಇತ್ತೀಚೆಗೆ ಅತಿಯಾದ ವೈಯಲೆನ್ಸ್ ಎಂಬುದು ಸಿನಿಮಾಗಳಲ್ಲಿ ಟ್ರೆಂಡ್ ಆಗಿಬಿಟ್ಟಿದೆ. ಅತಿಯಾದ ಹಿಂಸಾತ್ಮಕ ದೃಶ್ಯಗಳುಳ್ಳ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಸಖತ್ ಹಿಟ್ ಆಗುತ್ತಿವೆ. ‘ಅನಿಮಲ್’, ‘ಮಾರ್ಕೊ’ ಇತ್ತೀಚೆಗೆ ಬಿಡುಗಡೆ ಆದ ‘ಧುರಂಧರ್’ ಇಂಥಹಾ ಸಿನಿಮಾಗಳಲ್ಲಿ ಕೆಲವು. ಇದೀಗ ವಿಜಯ್ ದೇವರೊಕಂಡ ಸಹ ಅದೇ ಫಾರ್ಮುಲಾ ತಮ್ಮದಾಗಿಸಿಕೊಳ್ಳಲು ಮುಂದಾಗಿದ್ದು, ಅತ್ಯಂತ ವೈಯಲೆಂಟ್ ಸಿನಿಮಾನಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ.

ವಿಜಯ್ ದೇವರಕೊಂಡ, ‘ರೌಡಿ ಜನಾರ್ಧನ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಟೀಸರ್ ಇಂದು (ಡಿಸೆಂಬರ್ 23) ಬಿಡುಗಡೆ ಆಗಿದ್ದು, ಟೀಸರ್​​ನಲ್ಲಿ ರಕ್ತವನ್ನು ಮೈಗೆಲ್ಲ ಮೆತ್ತಿಕೊಂಡು ಬರಿಮೈಯಲ್ಲಿ ಕಾಣಿಸಿಕೊಂಡಿದ್ದಾರೆ ವಿಜಯ್ ದೇವರಕೊಂಡ. ಕೈಯಲ್ಲಿ ರಕ್ತ ಮೆತ್ತಿದ ಕತ್ತಿಯೊಂದನ್ನು ಹಿಡಿದು ಅದನ್ನು ಎದುರಾಳಿ ಗುಂಪಿನ ಕಡೆ ಬೀಸುತ್ತಿದ್ದಾರೆ. ಮೀಸೆ ಬಿಟ್ಟುಕೊಂಡು, ತುಸು ಕೂದಲು ಬಿಟ್ಟು 80ರ ದಶಕದ ವಿಲನ್​​ಗಳ ರೀತಿ ಕಾಣುತ್ತಿದ್ದಾರೆ ನಟ ವಿಜಯ್ ದೇವರಕೊಂಡ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಜೈಪುರದಲ್ಲಿ?

ಸಿನಿಮಾದ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ‘ಲೆಟ್ಸ್ ಗೋ…’ ಎಂದು ಉತ್ಸಾಹ ವ್ಯಕ್ತಪಡಿಸಿದ್ದಾರೆ. ‘ರೌಡಿ ಜನಾರ್ಧನ್’ ಸಿನಿಮಾವನ್ನು ತೆಲುಗಿನ ನಿರ್ದೇಶಕ ರವಿ ಕಿರಣ್ ಕೊಲ್ಲ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ‘ಅಶೋಕವನಂ ಲೊ ಅರ್ಜುನ ಕನ್ಯಾಣಂ’, ‘ರಾಜಾವಾರು, ರಾಣಿಗಾರು’, ‘ಲವ್ ಮ್ಯಾರೇಜ್’ ಅಂಥಹಾ ಹಾಸ್ಯಮಯ ಪ್ರೇಮಕತೆಗಳನ್ನು ನಿರ್ದೇಶನ ಮಾಡಿದ್ದ ರವಿ ಕಿರಣ್ ಅವರು ಇದೀಗ ಪಕ್ಕಾ ಆಕ್ಷನ್ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

ವಿಜಯ್ ದೇವರಕೊಂಡ ನಟನೆಯ ‘ಗೀತಾ ಗೋವಿಂದಂ’ ಸಿನಿಮಾದ ಬಳಿಕ ಅವರು ನಟಿಸಿದ ಯಾವೊಂದು ಸಿನಿಮಾ ಸಹ ಹಿಟ್ ಆಗಿಲ್ಲ. ‘ಡಿಯರ್ ಕಾಮ್ರೆಡ್’ ಸಾಧಾರಣ ಹಿಟ್ ಆಗಿದ್ದು ಬಿಟ್ಟರೆ, ‘ಲೈಗರ್’, ‘ಖುಷಿ’, ‘ಟ್ಯಾಕ್ಸಿವಾಲ’, ‘ವರ್ಲ್ಡ್ ಫೇಮಸ್ ಲವ್ವರ್’, ‘ದಿ ಫ್ಯಾಮಿಲಿ ಸ್ಟಾರ್’ ಇನ್ನೂ ಕೆಲವು ಸಿನಿಮಾಗಳು ಒಂದರ ಹಿಂದೆ ಒಂದರಂತೆ ಸೋತಿವೆ. ಇತ್ತೀಚೆಗೆ ಬಂದ ‘ಕಿಂಗ್ಡಮ್’ ಸಿನಿಮಾ ಅಟ್ಟರ್ ಫ್ಲಾಪ್ ಆಗಿದೆ. ಇದೀಗ ‘ರೌಡಿ ಜನಾರ್ಧನ್’ ಸಿನಿಮಾ ಆದರೂ ಗೆಲ್ಲುತ್ತದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಕ್ರಿಕೆಟ್ ಮಂಡಳಿ – Kannada News | U19 Asia Cup: PCB Files ICC Complaint Against India Over Player Conduct

ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ 2025 ರ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ್ದ ಪಾಕಿಸ್ತಾನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟ್ರೋಫಿ ಗೆದ್ದ ಖುಷಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಹಾಗೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾಗಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯದ ಸಮಯದಲ್ಲಿ ಮತ್ತು ನಂತರ ಉಭಯ ತಂಡಗಳ ಆಟಗಾರರ ವರ್ತನೆ ಸಾಕಷ್ಟು ಸುದ್ದಿ ಮಾಡಿತ್ತು. ಎರಡೂ ತಂಡಗಳ ಆಟಗಾರರು ಮೈದಾನದಲ್ಲಿಯೇ ವಾಗ್ವಾದ ನಡೆಸಿದ್ದರು. ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ವಿಚಾರದ ಬಗ್ಗೆ ಐಸಿಸಿ ಬಳಿ ದೂರು ನೀಡಲು ಮುಂದಾಗಿದೆ.

ಐಸಿಸಿಗೆ ದೂರು ನೀಡಲು ಮುಂದಾದ ಪಿಸಿಬಿ

ವಾಸ್ತವವಾಗಿ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ನಡೆದಿದ್ದ ಏಷ್ಯಾಕಪ್ ಸಮಯದಲ್ಲೂ ಉಭಯ ತಂಡಗಳ ನಡುವೆ ಪಂದ್ಯ ನಡೆದಿದ್ದಾಗ ಸಾಕಷ್ಟು ವಿವಾದಗಳು ಸೃಷ್ಟಿಯಾಗಿದ್ದವು. ಪಂದ್ಯದ ಮೊದಲು ಮತ್ತು ನಂತರ ಎರಡೂ ತಂಡಗಳ ಆಟಗಾರರು ಕೈಕುಲುಕಿರಲಿಲ್ಲ. ಹಾಗೆಯೇ ಫೈನಲ್ ಗೆದ್ದಿದ್ದ ಟೀಂ ಇಂಡಿಯಾ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿತ್ತು. ಇದು ಕೂಡ ದೊಡ್ಡ ವಿವಾದವಾಗಿತ್ತು. ಇದರ ಪರಿಣಾಮವಾಗಿ ಟೀಂ ಇಂಡಿಯಾಗೆ ಇದುವರೆಗೂ ಟ್ರೋಫಿ ಸಿಕ್ಕಿಲ್ಲ.

ಇದೆಲ್ಲದರ ನಡುವೆ ಅಂಡರ್ 19 ಏಷ್ಯಾಕಪ್​ನಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅದೇ ಘಟನೆ ಮರುಕಳಿಸಿದೆ. ಅದರಲ್ಲೂ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಬಹಿರಂಗವಾಗಿಯೇ ವಾಗ್ವಾದ ನಡೆಸಿದ್ದರು. ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಭಾರತೀಯ ಯುವ ಆಟಗಾರರು ಫೈನಲ್ ಪಂದ್ಯದ ವೇಳೆ ಪಾಕಿಸ್ತಾನಿ ಆಟಗಾರರನ್ನು ಕೆರಳುವಂತೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ, ನಖ್ವಿ ಅವರು ಈ ವಿಷಯವನ್ನು ಐಸಿಸಿಗೆ ಔಪಚಾರಿಕವಾಗಿ ವರದಿ ಮಾಡುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದ್ದರು. ಹಾಗೆಯೇ ಪಾಕಿಸ್ತಾನ ತಂಡದ ಮಾರ್ಗದರ್ಶಕ ಮತ್ತು ಮಾಜಿ ನಾಯಕ ಸರ್ಫರಾಜ್ ಅಹ್ಮದ್ ಕೂಡ ಭಾರತೀಯ ಆಟಗಾರರ ವರ್ತನೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದು, ಇದು ಆಟದ ಮನೋಭಾವಕ್ಕೆ ವಿರುದ್ಧವಾಗಿದೆ. ಕ್ರಿಕೆಟ್ ಅನ್ನು ಯಾವಾಗಲೂ ಗೌರವ ಮತ್ತು ಕ್ರೀಡಾ ಮನೋಭಾವದಿಂದ ಆಡಬೇಕು ಎಂದಿದ್ದರು. ಇದೀಗ ಪಾಕಿಸ್ತಾನವು ಈ ಬಗ್ಗೆ ಔಪಚಾರಿಕ ದೂರು ದಾಖಲಿಸಿದರೆ, ಐಸಿಸಿ ಮ್ಯಾಚ್ ರೆಫರಿಯ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತದೆ.

ವೈಭವ್-ಆಯುಷ್ ವಾಗ್ವಾದ

ಫೈನಲ್ ಪಂದ್ಯದ ಸಮಯದಲ್ಲಿ, ವೈಭವ್ ಸೂರ್ಯವಂಶಿ ಮತ್ತು ಆಯುಷ್ ಮ್ಹಾತ್ರೆ ಪಾಕಿಸ್ತಾನಿ ಆಟಗಾರರೊಂದಿಗೆ ವಾಗ್ವಾದ ನಡೆಸಿದ್ದರು. ಆಯುಷ್ ಮ್ಹಾತ್ರೆ ಅವರನ್ನು ಪಾಕಿಸ್ತಾನಿ ವೇಗಿ ಅಲಿ ರಜಾ ಔಟ್ ಮಾಡಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಇದರಿಂದ ಕೆರಳಿದ್ದ ಆಯುಷ್‌ ಹಾಗೂ ಅಲಿ ನಡುವೆ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರ ನಂತರ ವೈಭವ್ ಸೂರ್ಯವಂಶಿ ವಿಕೆಟ್ ಪಡೆದಿದ್ದ ಅಲಿ ಮತ್ತೆ ಆಕ್ರಮಣಕಾರಿ ಆಚರಣೆ ನಡೆಸಿದ್ದರು. ಇದು ಕೂಡ ವೈಭವ್ ಸೂರ್ಯವಂಶಿಯನ್ನು ಕೆರಳುವಂತೆ ಮಾಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್ – Kannada News | Good News for Women Employees of Transport Corporations: Department Gives Green Signal for Menstrual Leave

ಬೆಂಗಳೂರು, ಡಿಸೆಂಬರ್​​ 23: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ (Menstrual Leave) ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ ನಾಲ್ಕು ನಿಗಮದ ಮಹಿಳಾ ನೌಕರರಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಗುಡ್ ನ್ಯೂಸ್​​ ಸಿಕ್ಕಿದೆ.

ಆದೇಶದಲ್ಲೇನಿದೆ?

ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿದೆ.

ಇದನ್ನೂ ಓದಿ: ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್

ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 01 ಜನವರಿ 2026ರಿಂದ ಜಾರಿಗೆ ಬರುತ್ತಿದ್ದು, ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಷರತ್ತುಗಳೇನು?

  • ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
  • ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
  • ಈ ರಜೆಯನ್ನು ರಜೆ ಅಥವಾ ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
  • ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸಬಾರದು. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ಅವಕಾಶವಿರುವುದಿಲ್ಲ. ಸಂಬಂಧಪಟ್ಟವರೆಲ್ಲರೂ ಆದೇಶಕ್ಕೆ ತಕ್ಕಂತೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link