ಅಜ್ಜಿಯ ಕೊಲೆ ರಹಸ್ಯ; ನಾಯಿಗಳಿಂದ ಪತ್ತೆಯಾಯ್ತು ಮೊಮ್ಮಗನ ಕ್ರೌರ್ಯ – Kannada News | Andhra Pradesh Man Kills his Grandmother for Gold Dog Squad solved the Murder Case

ವಿಜಯನಗರ, ಡಿಸೆಂಬರ್ 22: ಆಂಧ್ರದ ವಿಜಯನಗರ ಜಿಲ್ಲೆಯಲ್ಲಿ ಚಿನ್ನಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗನ ಕ್ರೌರ್ಯ ಬೆಳಕಿಗೆ ಬಂದಿದೆ. ಭೋಗಾಪುರಂ ಮಂಡಲದ ಮುಡಸಲಪೇಟೆಯಲ್ಲಿ ವೃದ್ಧ ಮಹಿಳೆಯ ಕೊಲೆ (Murder) ಪ್ರಕರಣವನ್ನು ಭೇದಿಸಿರುವ ಪೊಲೀಸರು, ಆರೋಪಿಯಾದ ಆಕೆಯ ಮೊಮ್ಮಗನನ್ನು ಬಂಧಿಸಿದ್ದಾರೆ. ಶ್ವಾನ ದಳದ ಸಾಕ್ಷ್ಯಾಧಾರಗಳಿಂದ ಅನುಮಾನ ಬಲಗೊಂಡಿದ್ದು, ತನಿಖೆಯ ಸಮಯದಲ್ಲಿ ಕೊಲೆಯ ಬಗ್ಗೆ ಸತ್ಯ ಬಯಲಾಗಿದೆ. ಅಜ್ಜಿಯಿಂದ ಕದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಆ ಯುವಕನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 12ರಂದು ವಿಜಯನಗರ ಜಿಲ್ಲೆಯ ಭೋಗಪುರಂ ಮಂಡಲದ ಮುಡಸಲಪೇಟೆ…

Read More

ಅದೇನ್ ಧೈರ್ಯ ಗುರು! ಜಡ್ಜ್​​​ ಸಹಿ ನಕಲು ಮಾಡಿ ಕೋಟ್ಯಂತರ ರೂ ಜಮೀನು ಗುಳುಂ – Kannada News | Anekal Land Fraud: Judge Signature Forged to Grab Property

ಆನೇಕಲ್​, ಡಿಸೆಂಬರ್​ 22: ನಕಲಿ ದಾಖಲೆ ಸೃಷ್ಟಿಸಿ ಜಮೀನು (land) ಕಬಳಿಕೆ ಮಾಡುವವರನ್ನು ನೋಡಿದ್ದೇವೆ. ಆದರೆ ಇಲ್ಲಿ ಒಂದು ಹೆಜ್ಜೆ ಮುಂದೆ ಹೋದ ಆಸಾಮಿಗಳು ನ್ಯಾಯಾಧೀಶರ ಸಹಿಯನ್ನೇ ನಕಲು (Forged) ಮಾಡಿ ವಂಚನೆ ಮಾಡಿದ್ದಾರೆ. ಪತಿಯನ್ನ ಕಳೆದುಕೊಂಡಿದ್ದ ಮಹಿಳೆಯ ಅಮಾಯಕತನವನ್ನೇ ದುರಪಯೋಗ ಪಡಿಸಿಕೊಂಡ ಭೂಗಳ್ಳರು ಕೋಟ್ಯಂತರ ರೂ ಬೆಲೆಬಾಳುವ ಜಾಗವನ್ನ ಗುಳುಂ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ನಕಲಿ ಸಹಿ ಸೃಷ್ಟಿಸಿ ಜಾಗ ಕಬಳಿಕೆ  ಸಿಲಿಕಾನ್ ಸಿಟಿ ಬೆಂಗಳೂರು ನಗರ ಬೆಳೆಯುತ್ತ ಹೋದಂತೆ ಒಂದೊಂದು ಅಡಿಗೂ…

Read More

ಬೆಂಗಳೂರು ಟನಲ್ ರಸ್ತೆ ಟೆಂಡರ್ ಅದಾನಿ ಗ್ರೂಪ್ ಪಾಲು, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ – Kannada News | Adani Group Emerges Lowest Bidder For Bengaluru Tunnel Road As Cost Gap And Policy Debate Intensify

ಬೆಂಗಳೂರು, (ಡಿಸೆಂಬರ್ 22): ಬೆಂಗಳೂರು ಟನಲ್ ಮಾರ್ಗದ (bengaluru tunnel road) ಟೆಂಡರ್ ಅದಾನಿ ಗ್ರೂಪ್​​ (Adani Group) ಪಾಲಾಗುವ ಸಾಧ್ಯತೆಗಳಿವೆ. ಕಾರಣ ಟೆಂಡರ್ ಸಲ್ಲಿಸಿರುವ ಕಂಪನಿಗಳ ಪೈಕಿ ಅದಾನಿ ಗ್ರೂಪ್ ಅತೀ ಕಡಿಮೆ ಬಿಡ್ ಮಾಡಿದೆ. ಬೆಂಗಳೂರು ಟನಲ್ ರಸ್ತೆ ಟೆಂಡರ್ ನಲ್ಲಿ ಅತೀ ಕಡಿಮೆ ಅಂದರೆ 22,267 ಕೋಟಿ ರೂಪಾಯಿಗೆ ಬಿಡ್ ಮಾಡಿದೆ. (ಗ್ರೇಟರ್ ಬೆಂಗಳೂರು ಅಥಾರಿಟಿ(GBA) 17,698 ಕೋಟಿಗೆ ಬಿಡ್ ಸೀಮಿತ ಮಾಡಿತ್ತು. ಆದ್ರೆ, ಜಿಬಿಎ ಕೋಟ್ ಮಾಡಿದ್ದಕ್ಕಿಂತ ಶೇ. 24ರಷ್ಟು ಹೆಚ್ಚಿನ…

Read More

ಏಷ್ಯಾಕಪ್ ಫೈನಲ್​ನಲ್ಲಿ ಭಾರತವನ್ನು ಸೋಲಿಸಿದ ಪಾಕ್ ತಂಡಕ್ಕೆ ಕೋಟಿ ಕೋಟಿ ಬಹುಮಾನ

ದುಬೈನಲ್ಲಿ ನಡೆದ ಅಂಡರ್ 19 ಏಷ್ಯಾಕಪ್ ಫೈನಲ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿದ್ದ ಪಾಕಿಸ್ತಾನ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ಪಾಕಿಸ್ತಾನ ತಂಡಕ್ಕೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ವಿಜೇತ ತಂಡದ ಪ್ರತಿಯೊಬ್ಬ ಆಟಗಾರನಿಗೆ ತಲಾ 1 ಕೋಟಿ ರೂಪಾಯಿಗಳ ವಿಶೇಷ ನಗದು ಬಹುಮಾನವನ್ನು ಘೋಷಿಸಿದ್ದಾರೆ. ಅಂಡರ್​ ಏಷ್ಯಾಕಪ್ ಫೈನಲ್‌ನಲ್ಲಿ ಭಾರತವನ್ನು 191 ರನ್‌ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದ ಯುವ ಪಾಕಿಸ್ತಾನ ತಂಡ, ಸಹಾಯಕ ಸಿಬ್ಬಂದಿಗಳೊಂದಿಗೆ…

Read More

ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು? – Kannada News | We felt it; Asim Munir says divine help saved Pakistan from India during Operation Sindoor

ನವದೆಹಲಿ, ಡಿಸೆಂಬರ್ 22: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಅದಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ಆರಂಭಿಸಿತ್ತು. ಆ ದಾಳಿಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದನಂತೆ. ಈ ರೀತಿಯ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನೀಡಿದ್ದಾರೆ. ಉರ್ದು ಭಾಷೆಯಲ್ಲಿ ಮಾತನಾಡಿರುವ ಅಸಿಮ್ ಮುನೀರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಯಾವಾಗ ಅವರು ಈ ಹೇಳಿಕೆ ನೀಡಿದ್ದು ಎಂಬ ದಿನಾಂಕ ಗೊತ್ತಾಗಿಲ್ಲ. ಈ…

Read More

ಸೈಬರ್ ವಂಚನೆ: ಸುದೀಪ್ ಅಭಿಮಾನಿಗೆ ನಕಲಿ ATS ಬೆದರಿಕೆ, ಲಕ್ಷಾಂತರ ರೂ. ದೋಚಿದ ಸೈಬರ್ ಕಳ್ಳರು – Kannada News | Cyber ​​fraud: Fake ATS threat to Sudeep’s fan, cyber thieves rob lakhs of rupees

ಬೆಂಗಳೂರು, ಡಿ.22: ದಿನೇ ದಿನೇ ಸೈಬರ್ (Cybercrime) ಚೋರರ ಕಾಟ ಹೆಚ್ಚಾಗುತ್ತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಇವರ ವಂಚನೆಗೆ ಬಲಿಯಾಗುತ್ತಿದ್ದಾರೆ. ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಇವರ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಂತಹ ಮೋಸಕ್ಕೆ ಉಪೇಂದ್ರ ದಂಪತಿಗಳು ಕೂಡ ಒಳಗಾಗಿದ್ದರು. ಪೊಲೀಸ್​​​​, ಎನ್​​​ಐಎ ಹೀಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ  ಸೈಬರ್​​​ ಅರೆಸ್ಟ್​​ ಮಾಡಿ ಲಕ್ಷ ಲಕ್ಷ ಹಣ ದೋಚಿರುವ ಅದೆಷ್ಟೊ ಘಟನೆಗಳು ವರದಿಯಾಗಿದೆ. ಇದರ ಬಗ್ಗೆ ದಿನನಿತ್ಯ ಒಂದಲ್ಲ ಒಂದು ಸುದ್ದಿಯಾಗುತ್ತಿದ್ದರೂ…

Read More

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ! – Kannada News | DK Shivakumar Will Be the Next CM before january 15th And Satish Jarkiholi KPCC President Predicted By Bagalkot astrologer Ullas

ಬಾಗಲಕೋಟೆ, (ಡಿಸೆಂಬರ್ 22): ಕರ್ನಾಟಕ ಕಾಂಗ್ರೆಸ್​ನಲ್ಲಿನ (Karnataka Congress) ಗೊಂದಲ ಒಂದೆರಡಲ್ಲ. ಸಿಎಂ ಕುರ್ಚಿ ಆಗ ಬದಲಾಗುತ್ತೆ, ಈಗ ಬದಲಾಗುತ್ತೆ ಎಂಬ ಚರ್ಚೆಗಳು ದಿನ ಕಳೆದಂತೆ ಜೋರಾಗುತ್ತಲೇ ಇವೆ. ಬ್ರೇಕ್ ಫಾಸ್ಟ್​​ ಮೂಲಕ ಬಗೆಹರಿಯಿತು ಎನ್ನುವಷ್ಟರಲ್ಲೇ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ಸಿಎಂ ಕುರ್ಚಿ ಕುದನ ಶುರುವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ (DK Shivakumar) ಮತ್ತೆ ಆ್ಯಕ್ಟೀವ್ ಆಗಿದ್ದು, ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಂತರ ಬಾಗಲಕೋಟೆಯ ಜ್ಯೋತಿಷಿಯೊಬ್ಬರು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ…

Read More

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ…

Read More

7 ತಿಂಗಳ ಗರ್ಭಿಣಿ ಹತ್ಯೆ ಪ್ರಕರಣ: ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು – Kannada News | Dalit Outcry: Hubballi Father Murders 7 Month Pregnant Daughter, Justice for Manya

ಹುಬ್ಬಳ್ಳಿ, ಡಿ.22: ಹುಬ್ಬಳ್ಳಿಯಲ್ಲಿ ನಡೆದ ಭೀಕರ ಘಟನೆಯು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಇದು ಮರ್ಯಾದಾ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ ಮಹಿಳೆಯನ್ನು ಮಾನ್ಯಾ ಎಂದು ಗುರುತಿಸಲಾಗಿದ್ದು, ಇದೀಗ ಆಂಬ್ಯುಲೆನ್ಸ್‌ನಲ್ಲಿ ಆಕೆಯ ದೇಹವನ್ನು ಸಾಗಿಸುವಾಗ ದಲಿತ ಸಂಘಟನೆಗಳ ಕಾರ್ಯಕರ್ತರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಧಿಕ್ಕಾರ, ಧಿಕ್ಕಾರ, ಬೇಕು ಬೇಕು ನ್ಯಾಯ ಬೇಕು,…

Read More

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ನಾಯಕಿಯನ್ನು ಬದಲಾಯಿಸಲು ನಿರ್ಧರಿಸಿದೆ. ಕಳೆದ ಎರಡು ವರ್ಷಗಳಿಂದ ಮೆಗ್ ಲ್ಯಾನಿಂಗ್ ತಂಡದ ನಾಯಕಿಯಾಗಿದ್ದರು. ಆದರೆ ಈಗ ಈ ಜವಾಬ್ದಾರಿಯನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ಗೆ ನೀಡಲಾಗುತ್ತಿದೆ. ಡಿಸೆಂಬರ್ 23 ರಂದು ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ವರದಿಯಾಗಿದೆ. 2 ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಹರಾಜಿಗೂ ಮುನ್ನ ತಂಡದಿಂದ…

Read More