Category Archives: Blog

Your blog category

ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ – Kannada News | Worms Found in School Meals: Impact of TV9 Report Leads to Supply of Quality Pulses

ಬೆಂಗಳೂರು, ಡಿಸೆಂಬರ್​ 20: ಅನ್ನದಲ್ಲೂ ಹುಳು (maggots), ಸಾಂಬರ್​​ನಲ್ಲೂ ಹುಳು, ಅಕ್ಕಿ, ಬೇಳೆಗಳಲ್ಲೂ ಹುಳುವೋ ಹುಳು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಅಧ್ವಾನ ಎದ್ದಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಕಳಪೆ ಆಹಾರದ ವಿರುದ್ಧ ಟಿವಿ9 ಸಮರ ಸಾರಿದ್ದು, ಶಾಲೆಗಳಲ್ಲಿನ ಕರ್ಮಕಾಂಡವನ್ನೂ ತೆರೆದಿಟ್ಟಿದೆ. ವರದಿ ಇಂಪ್ಯಾಕ್ಟ್ ಬೆನ್ನಲ್ಲೇ ಶಾಲೆಗಳಿಗೆ ಗುಣಮಟ್ಟದ ಬೇಳೆ ಬಂದಿದೆ. ಮತ್ತೊಂದೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಚಿಕ್ಕಮಗಳೂರಲ್ಲೂ ‘ಹುಳು ಊಟದ’ ಕರ್ಮಕಾಂಡ!

ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಟ್ಟೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪೂರೈಸ್ತಿದ್ದ ಊಟದಲ್ಲಿ ಕೂಡ ಹುಳು ಪತ್ತೆ ಆಗಿದೆ. ಇವತ್ತು ಅಡುಗೆ ಮನೆಗೆ ತೆರೆಳಿದ್ದ ಪೋಷಕರು, ಅನ್ನ, ಸಾಂಬರ್​​​ನಲ್ಲಿ ಹುಳು ಕಂಡು ಕೆರಳಿದ್ದಾರೆ. ಆದರೆ ಸರ್ಕಾರದಿಂದ ಬರೋದೆ ಹೀಗೆ ನಾವೇನ್ ಮಾಡೋಣ ಅಂತ ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.

ಶಾಲೆಗೆ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷರ ಭೇಟಿ

ಯಾದಗಿರಿಯ ರಾಮಸಮುದ್ರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ, ಬಿಸಿಯೂಟಕ್ಕೆ ಬಳಸ್ತಿದ್ದ ಅಕ್ಕಿ, ತೊಗರಿ ಬೇಳೆಯಲ್ಲಿ ಹುಳು ತುಂಬಿ ತುಳುಕುತ್ತಿದ್ದವು. ಕೊಯಿಲೂರಿನ ಶಾಲೆಯಲ್ಲೂ ನುಶಿ ಹಾಗೂ ಬಾಲದುಳು ಇರುವ ಗೋಧಿಯನ್ನೇ ಮಕ್ಕಳ ಊಟಕ್ಕೆ ಬಳಕೆ ಮಾಡ್ತಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಇದೀಗ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ರಾಮಸಮುದ್ರದ ಶಾಲೆಗೆ ದಿಢೀರ್​ ಭೇಟಿ ಕೊಟ್ಟು, ಪರಿಶೀಲಿಸಿದರು. ಕಳಪೆ ಗುಣಮಟ್ಟದ ಬೇಳೆ ಪೂರೈಕೆಗೆ ಕಿಡಿಕಾರಿದ್ದು, ವರದಿ ಸಲ್ಲಿಕೆಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಧ್ಯಾಹ್ನದ ಬಿಸಿಯೂಟದ ತುಂಬ ಹುಳಗಳ ರಾಶಿ! ಪೋಷಕರು ಕೆಂಡಾಮಂಡಲ

ಇನ್ನು ಟಿವಿ9 ವರದಿ ಆಧರಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕಲಬುರಗಿಯಲ್ಲಿ ಅಧ್ಯಕ್ಷ ಶಶೀಧರ್ ಕೋಸುಂಬೆ ಪ್ರತಿಕ್ರಿಯಿಸಿದ್ದು, ಟಿವಿ9 ವರದಿ ನೋಡಿ ಎಲ್ಲಾ ಡಿಡಿಪಿಐಗಳಿಗೆ ಸೂಚಿಸಿದ್ದೇನೆ. 3 ದಿನದೊಳಗೆ ಸಮಗ್ರ ವರದಿ ನೀಡಲು ರಾಜ್ಯ ಬಿಸಿಯೂಟ ಯೋಜನೆ ಉಪಕಾರ್ಯರ್ಶಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.

ಟಿವಿ9 ಇಂಪ್ಯಾಕ್ಟ್​: ಶಾಲೆಗೆ ಬಂತು ಗುಣಮಟ್ಟದ ಬೇಳೆ

ತುಮಕೂರಿನ ವಡ್ಡರಹಳ್ಳಿ ಸರ್ಕಾರಿ ಶಾಲೆಯಲ್ಲಿ ಹಾಳಾದ ತೊಗರಿ ಬೇಳೆ ಬಗ್ಗೆ ಟಿವಿ9 ನಿನ್ನೆ ವರದಿ ಪ್ರಸಾರ ಮಾಡಿತ್ತು. ಗುಡಿಪಾಳ್ಯದ ಶಾಲೆಯಲ್ಲಿನ ಬೇಳೆಗೆ ಬಂದ ದುಸ್ಥಿತಿಯನ್ನ ತೆರೆದಿಟ್ಟಿತ್ತು. ಇದೀಗ ಅಕ್ಷರ ದಾಸೋಹ ಅಧಿಕಾರಿಗಳು ಎಚ್ಚೆತ್ತಿದ್ದು, ಶಾಲೆಗಳಿಗೆ ಗುಣಮಟ್ಟದ ತೊಗರಿ ಬೇಳೆ ಪೂರೈಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಹುಳ ಬಿದ್ದಿರೋ ಅಕ್ಕಿ ಬೇಳೆ; TV9 ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಅಸಲಿಯತ್ತು

ಹುಳು ಬಿದ್ದ ತೊಗರಿ ಬೇಳೆಗಳನ್ನು ಅಧಿಕಾರಿಗಳು ಗುತ್ತಿಗೆದಾರರಿಗೆ ವಾಪಾಸ್ ಕಳುಹಿಸಿದ್ದಾರೆ. ಈಗಾಗಲೇ ತುಮಕೂರಿನ ಗುಬ್ಬಿ ಗೇಟ್​​ ಬಳಿಯ ಗೋಡೌನ್​​​ಗೆ 179 ಕ್ವಿಂಟಾಲ್​ ಬೇಳೆ ಬಂದಿದೆ. ಎಲ್ಲಾ ಶಾಲೆಗಳಿಗೆ ಗುಣಮಟ್ಟದ ಬೇಳೆ ವಿತರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆ ಮೂಲಕ ಮಕ್ಕಳು ಹಾಗೂ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಬ್ಯುರೋ ರಿಪೋರ್ಟ್, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ – Kannada News | Karnataka Minister Priyank Kharge targets Union Home Minister Amit Shah in His Social Media Post

ಬೆಂಗಳೂರು, ಡಿಸೆಂಬರ್ 20: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ? ಮತ್ತು ಯಾರ ಅಸಾಮರ್ಥ್ಯದಿಂದ? ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಕರೆದಿರುವ ಪ್ರಿಯಾಂಕ್ ಖರ್ಗೆ ಅದಕ್ಕೆ ಕಾರಣವನ್ನೂ ನೀಡಿದ್ದಾರೆ.

ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು ಕೇಂದ್ರ ಗೃಹ ಸಚಿವರ ವೈಫಲ್ಯವಲ್ಲವೇ? ದೆಹಲಿಯ ಕೆಂಪು ಕೋಟೆ ಬಳಿಯೇ ಸ್ಫೋಟವಾಗುತ್ತದೆ ಎಂದರೆ ಅದು ಕೇಂದ್ರ ಗೃಹ ಸಚಿವರ ಅಸಾಮರ್ಥ್ಯವಲ್ಲವೇ? ಪಹಲ್ಗಾಮ್ ದಾಳಿಯಾಗುವಾಗ ಅಮಿತ್ ಶಾ ಅವರ ಚಾಣಾಕ್ಷತನ ಎಲ್ಲಿ ಅಡಗಿತ್ತು? ವರ್ಷಗಳ ಕಾಲ ಮಣಿಪುರದಲ್ಲಿ ದಂಗೆ ನಡೆಯುತ್ತಿದ್ದುದನ್ನು ಸುಮ್ಮನೆ ನೋಡುತ್ತಾ ಕುಳಿತಿದ್ದನ್ನು ಅಸಾಮರ್ಥ್ಯ ಎನ್ನಬೇಕೋ ಅಥವಾ ಪರಾಕ್ರಮ ಎನ್ನಬೇಕೋ? ಮಹಿಳೆಯರ ಬೆತ್ತಲೆ ಮೆರವಣಿಗೆಯಿಂದ ಇಡೀ ಜಗತ್ತಿನ ಎದುರು ನಮ್ಮ ದೇಶದ ಘನತೆ ಮಣ್ಣುಪಾಲಾದಾಗ ಕಣ್ಮುಚ್ಚಿ ಕುಳಿತಿದ್ದು ಅಸಾಮರ್ಥ್ಯವಲ್ಲದೆ ಇನ್ನೇನು? ಎಂದು ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ

ಅಮಿತ್ ಶಾ ಅವರ ಸಾಮರ್ಥ್ಯ, ಪರಾಕ್ರಮಗಳಿರುವುದು ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುವುದರಲ್ಲಿ ಮತ್ತು ICCಯನ್ನು ಸಮೃದ್ಧಗೊಳಿಸುವುದರಲ್ಲಿ ಮಾತ್ರವೇ? ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ಪ್ರಮೋಷನ್ ಗಾಗಿ, ಅಸ್ತಿತ್ವಕ್ಕಾಗಿ ಅಮಿತ್ ಶಾ ಅವರನ್ನು ಸ್ಪರ್ಧೆಗೆ ಬಿದ್ದವರಂತೆ ಸಮರ್ಥಿಸಿಕೊಳ್ಳುವುದು ರಾಜ್ಯದ ಬಿಜೆಪಿ ನಾಯಕರಿಗೆ ಅನಿವಾರ್ಯ ಎಂಬ ಸಂಗತಿ ನಮಗೂ ತಿಳಿದಿದೆ, ಅದು ಜನತೆಗೂ ತಿಳಿದಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಹಾತ್ಮ ಗಾಂಧಿ, ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ದೇಶ ಕಟ್ಟಿದ ನಾಯಕರ ಬಗ್ಗೆಯೇ ಅಸಂಸದೀಯ ಭಾಷೆಯ ಮೂಲಕ ನಾಲಿಗೆ ಹರಿಬಿಡುವ ಕರ್ನಾಟಕದ ಬಿಜೆಪಿ ನಾಯಕರು ಇಂದು ಅಸಮರ್ಥ ಎಂಬ ಪದವನ್ನು ಸಹಿಸಲಾಗದೆ ಒದ್ದಾಡುತ್ತಿರುವುದು ಅವರ ಶೋಚನಿಯ ಸ್ಥಿತಿಗೆ ಹಿಡಿದ ಕನ್ನಡಿ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ ವಿಬಿಜಿ ರಾಮ್‌ಜಿ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ರಾಷ್ಟ್ರಕ್ಕೆ ಈ ವಿಡಿಯೋ ಸಂದೇಶ ನೀಡಿದ್ದಾರೆ. ಇದರಲ್ಲಿ ಅವರು ನರೇಗಾ ಯೋಜನೆಯ (MNREGA) ಸಾಧನೆಗಳನ್ನು ಎತ್ತಿ ತೋರಿಸಿದ್ದಾರೆ. ಯಾರನ್ನೂ ಸಂಪರ್ಕಿಸದೆ ಕೇಂದ್ರ ಸರ್ಕಾರ ಎಂಎನ್‌ಆರ್‌ಇಜಿಎ ರಚನೆಯನ್ನು ಬದಲಾಯಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸೋನಿಯಾ ಗಾಂಧಿಯವರ ವಿಡಿಯೋ ಸಂದೇಶದ ಹೈಲೈಟ್ಸ್ ಇಲ್ಲಿದೆ.

  1. “ಸಹೋದರ ಸಹೋದರಿಯರೇ… ನಮಸ್ಕಾರ. 20 ವರ್ಷಗಳ ಹಿಂದೆ ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ MNREGA ಕಾನೂನನ್ನು ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು ಎಂದು ನನಗೆ ಇನ್ನೂ ನೆನಪಿದೆ. ಇದು ಒಂದು ಕ್ರಾಂತಿಕಾರಿ ಹೆಜ್ಜೆಯಾಗಿತ್ತು. ಲಕ್ಷಾಂತರ ಗ್ರಾಮೀಣ ಕುಟುಂಬಗಳು ಇದರಿಂದ ಪ್ರಯೋಜನ ಪಡೆದವು. ಇದು ಜೀವನೋಪಾಯದ ಮೂಲವಾಯಿತು. ಅದರಲ್ಲೂ ವಿಶೇಷವಾಗಿ ವಂಚಿತರು, ಶೋಷಿತರು, ಬಡವರು ಮತ್ತು ಅತ್ಯಂತ ಬಡವರಿಗೆ ಇದರಿಂದ ಅನುಕೂಲವಾಯಿತು.
  2. “ಜನರು ತಾಯ್ನಾಡು, ಗ್ರಾಮ, ಮನೆ ಮತ್ತು ಕುಟುಂಬದಿಂದ ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ಈ ಯೋಜನೆಯಿಂದ ನಿಲ್ಲಿಸಲಾಯಿತು. ಉದ್ಯೋಗಕ್ಕೆ ಕಾನೂನುಬದ್ಧ ಹಕ್ಕುಗಳನ್ನು ನೀಡಲಾಯಿತು. ಗ್ರಾಮ ಪಂಚಾಯಿತಿಗಳಿಗೆ ಸಬಲೀಕರಣ ಮಾಡಲಾಯಿತು. MNREGA ಮೂಲಕ, ಭಾರತದಲ್ಲಿ ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವತ್ತ ದೃಢವಾದ ಹೆಜ್ಜೆ ಇಡಲಾಯಿತು.
  3. “ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರವು MNREGA ಅನ್ನು ದುರ್ಬಲಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದೆ. ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳು, ಬಡವರು ಮತ್ತು ಅಂಚಿನಲ್ಲಿರುವವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ. ಕೊವಿಡ್ ಸಮಯದಲ್ಲಿ ಈ ಯೋಜನೆ ಬಡವರಿಗೆ ಜೀವನಾಡಿಯಾಗಿದ್ದರೂ, ಕೇಂದ್ರ ಸರ್ಕಾರದ ಈ ನಿರ್ಧಾರ ತುಂಬಾ ದುರದೃಷ್ಟಕರ.
  4. ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿದ್ದಲ್ಲದೆ ಯಾವುದೇ ಚರ್ಚೆಯಿಲ್ಲದೆ, ಸಮಾಲೋಚನೆಯಿಲ್ಲದೆ ಮತ್ತು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ MNREGA ಯೋಜನೆಯ ರಚನೆಯನ್ನೇ ನಿರಂಕುಶವಾಗಿ ಬದಲಾಯಿಸಲಾಗಿದೆ.
  5. ಈ ಮೂಲಕ ಮೋದಿ ಸರ್ಕಾರವು ದೇಶಾದ್ಯಂತ ಕೋಟ್ಯಂತರ ರೈತರು, ಕಾರ್ಮಿಕರು ಮತ್ತು ಭೂಹೀನರ ಹಿತಾಸಕ್ತಿಗಳ ಮೇಲೆ ದಾಳಿ ಮಾಡಿದೆ ಎಂದು ಅವರು ಹೇಳಿದರು. ಕಳೆದ 11 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಗ್ರಾಮೀಣ ಬಡವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ.
  6. MNREGA ಜಾರಿಗೆ ತರುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ. ಆದರೆ ಇದು ಎಂದಿಗೂ ಪಕ್ಷಕ್ಕೆ ಸಂಬಂಧಿಸಿದ ವಿಷಯವಾಗಿರಲಿಲ್ಲ. ಇದು ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ಯೋಜನೆಯಾಗಿತ್ತು. ಈ ಕಾನೂನನ್ನು ದುರ್ಬಲಗೊಳಿಸುವ ಮೂಲಕ ಮೋದಿ ಸರ್ಕಾರವು ಲಕ್ಷಾಂತರ ರೈತರು, ಕಾರ್ಮಿಕರು ಮತ್ತು ಭೂಹೀನ ಗ್ರಾಮೀಣ ಬಡವರ ಹಿತಾಸಕ್ತಿಗಳ ಮೇಲೆ ದಾಳಿ ಮಾಡಿದೆ. ಈ ದಾಳಿಯನ್ನು ಎದುರಿಸಲು ನಾವೆಲ್ಲರೂ ಸಿದ್ಧರಿದ್ದೇವೆ.
  7. 20 ವರ್ಷಗಳ ಹಿಂದೆ, ನಾನು ನನ್ನ ಬಡ ಸಹೋದರ ಸಹೋದರಿಯರಿಗೆ ಉದ್ಯೋಗ ಹಕ್ಕುಗಳನ್ನು ಪಡೆಯಲು ಹೋರಾಡಿದೆ. ಇಂದಿಗೂ, ಈ ಕರಾಳ ಕಾನೂನಿನ ವಿರುದ್ಧ ಹೋರಾಡಲು ನಾನು ಬದ್ಧಳಾಗಿದ್ದೇನೆ. ನನ್ನಂತಹ ಎಲ್ಲಾ ಕಾಂಗ್ರೆಸ್ ನಾಯಕರು ಮತ್ತು ಲಕ್ಷಾಂತರ ಕಾರ್ಮಿಕರು ಈ ಹೋರಾಟದಲ್ಲಿ ಜೊತೆಯಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya talks about how 45 movie story stuck to him

ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಸಿನಿಮಾ ನಿರ್ದೇಶಕನಾಗಿದ್ದಾರೆ. ಸಂಗೀತ ನಿರ್ದೇಶನ ಅದ್ಭುತವಾಗಿ ನಡೆಯುತ್ತಿರುವಾಗಲೇ ಅವರು ಸಿನಿಮಾ ನಿರ್ದೇಶಕನ ಟೋಪಿ ಧರಿಸಿದ್ದಾರೆ. ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್ನವಾದ ಕತೆ ಎಂಬುದು ತಿಳಿದು ಬರುತ್ತಿದೆ. ಈ ಭಿನ್ನವಾದ ಕತೆ ಅರ್ಜುನ್ ಜನ್ಯಗೆ ಹೊಳೆದಿದ್ದು ಹೇಗೆ? ಟಿವಿ9 ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅರ್ಜುನ್ ಜನ್ಯ, ‘45’ ಕತೆ ಎಂಥಹಾ ಭಾವುಕ ಸನ್ನಿವೇಶದಲ್ಲಿ ತಮಗೆ ಹೊಳೆಯಿತು ಎಂದು ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಒಟಿಟಿಗೆ ಬರಲಿದೆ ಉಪ್ಪಿ ನಟನೆಯ ತೆಲುಗು ಸಿನಿಮಾ: ಬಿಡುಗಡೆ ಯಾವಾಗ? – Kannada News | Upendra Ram Pothineni starrer Andhra King Taluka movie releasing on OTT

ಉಪೇಂದ್ರ (Upendra) ಕನ್ನಡದಲ್ಲಿ ಮಾತ್ರವಲ್ಲ ನೆರೆಯ ತೆಲುಗು ಚಿತ್ರರಂಗದಲ್ಲೂ ಜನಪ್ರಿಯರು. ಸಾಕಷ್ಟು ತೆಲುಗು ಸಿನಿ ಪ್ರಿಯರನ್ನು ಅಭಿಮಾನಿಗಳನ್ನಾಗಿ ಹೊಂದಿದ್ದಾರೆ ಉಪೇಂದ್ರ. ಆಗೊಮ್ಮೆ ಈಗೊಮ್ಮೆ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ ಉಪೇಂದ್ರ. ಇತ್ತೀಚೆಗಷ್ಟೆ ‘ಆಂಧ್ರ ಕಿಂಗ್ ತಾಲೂಕ’ ಹೆಸರಿನ ತೆಲುಗು ಸಿನಿಮಾನಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ಇದೇ ಸಿನಿಮಾ ಒಟಿಟಿಗೆ ಬರುತ್ತಿದೆ.

ತೆಲುಗು ಚಿತ್ರರಂಗದ ಜನಪ್ರಿಯ ನಟ ರಾಮ್ ಪೋತಿನೇನಿ ನಾಯಕನಾಗಿ, ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ ನಟಿಸಿರುವ ‘ಆಂಧ್ರ ಕಿಂಗ್ ತಾಲ್ಲೂಕ’ ಸಿನಿಮಾ ನವೆಂಬರ್ 27ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಈ ಸಿನಿಮಾನಲ್ಲಿ ಉಪೇಂದ್ರ ತೆಲುಗು ಚಿತ್ರರಂಗದ ಸ್ಟಾರ್ ನಟನ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ಸ್ಟಾರ್ ನಟ ಹಾಗೂ ಅಭಿಮಾನಿ ನಡುವಿನ ಕತೆಯನ್ನು ಒಳಗೊಂಡಿತ್ತು. ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಬಹಳ ಒಳ್ಳೆಯ ವಿಮರ್ಶೆಗಳನ್ನು ಗಳಿಸಿತ್ತು, ಸಿನಿಮಾನಲ್ಲಿ ರಾಮ್ ಪೋತಿನೇನಿ, ಭಾಗ್ಯಶ್ರೀ ಮತ್ತು ಉಪೇಂದ್ರ ನಟನೆಗೂ ಸಹ ಮೆಚ್ಚುಗೆ ವ್ಯಕ್ತವಾಗಿತ್ತು.

ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ. ‘ಆಂಧ್ರ ಕಿಂಗ್ ತಾಲೂಕ’ ಸಿನಿಮಾ ಅನ್ನು ಉತ್ತಮ ಮೊತ್ತಕ್ಕೆ ನೆಟ್​​ಫ್ಲಿಕ್ಸ್​ ನವರು ಖರೀದಿ ಮಾಡಿದ್ದಾರೆ. ಸಿನಿಮಾ ಡಿಸೆಂಬರ್ 25ಕ್ಕೆ ಅಂದರೆ ಕ್ರಿಸ್​​ಮಸ್​ ದಿನದಂದು ನೆಟ್​​ಫ್ಲಿಕ್ಸ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ‘ಇಷ್ಟು ದಿನ ಸ್ಟಾರ್ ನಟರ ಬಯೋಪಿಕ್ ನೋಡಿದ್ದೀರ, ಈಗ ಅಭಿಮಾನಿಯ ಬಯೋಪಿಕ್ ನೋಡಿ’ ಎಂದು ‘ಆಂಧ್ರ ಕಿಂಗ್ ತಾಲೂಕ’ದ ಪ್ರಚಾರ ಮಾಡುತ್ತಿದೆ ನೆಟ್​ಫ್ಲಿಕ್ಸ್​.

ಇದನ್ನೂ ಓದಿ:ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

‘ಆಂಧ್ರ ಕಿಂಗ್ ತಾಲೂಕ’ ಸಿನಿಮಾನಲ್ಲಿ ರಾಮ್ ಪೋತಿನೇನಿ ಸಿನಿಮಾ ನಟನ ಅಭಿಮಾನಿಯ ಪಾತ್ರದಲ್ಲಿ ನಟಿಸಿದ್ದಾರೆ. ಭಾಗ್ಯಶ್ರೀ ಬೋರ್ಸೆ ಚಿತ್ರಮಂದಿರ ಮಾಲೀಕನ ಪುತ್ರಿಯ ಪಾತ್ರದಲ್ಲಿ ನಟಿಸಿದ್ದಾರೆ. ಉಪೆಂದ್ರ, ತೆಲುಗು ಚಿತ್ರರಂಗದ ಸ್ಟಾರ್ ನಟ ಸೂರ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಮಹೇಶ್ ಬಾಬು ಪಚ್ಚಿಗೊಲ್ಲ. ಸ್ಟಾರ್ ನಟನಿಂದ ಅಭಿಮಾನಿ ಹಾಗೂ ಅಭಿಮಾನಿ ಒಬ್ಬನಿಂದ ಸ್ಟಾರ್ ನಟ ಹೇಗೆ ಪರಸ್ಪರ ನೆರವಿಗೆ ಬರುತ್ತಾರೆ, ಇಬ್ಬರೂ ಭೇಟಿಯೇ ಆಗದಿದ್ದರೂ ಇಬ್ಬರ ನಡುವಿನ ಬಂಧ, ಅಭಿಮಾನಿಯ ಸವಾಲು, ಸ್ಟಾರ್ ನಟ ಪ್ರೀತಿ ಹೀಗೆ ಹಲವು ವಿಷಯಗಳನ್ನು ಈ ಸಿನಿಮಾ ಒಳಗೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya explains why his 45 movie release postponed many times

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು. ಮೇ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಆದರೆ ನಾನಾ ಕಾರಣಗಳಿಗಾಗಿ ಸಿನಿಮಾ ತಡವಾಗುತ್ತಲೇ ಬಂತು. ಆದರೆ ಸಿನಿಮಾ ಬಿಡುಗಡೆ ತಡವಾಗಿದ್ದು ಏಕೆ ಎಂದು ಅರ್ಜುನ್ ಜನ್ಯ ವಿವರಣೆ ನೀಡಿದ್ದಾರೆ. ಅವರು ಟಿವಿ9ಗೆ ವಿಶೇಷ ಸಂದರ್ಶನ ನೀಡಿ, ಹಲವು ವಿಷಯಗಳ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ಪೊಲೀಸರು ತಲಾಶ್​​ ನಡೆಸಿದ್ದಾರೆ.

2025 ಜುಲೈ 15ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಕೊಲೆ ನಡೆದಿತ್ತು. ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿ ಎರಡು ಬಾರಿ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ವೇಳೆ ಕೊಲೆಗೂ ನನಗೂ ಯಾವುದೇ ಸಂಬಂಧ ಇಲ್ಲ, ಕೊಲೆ ಆರೋಪಿಗಳು ಯಾರು ನನಗೆ ಪರಿಚಯವೇ ಇಲ್ಲ ಅಂತ ಹೇಳಿದ್ದರು.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ, ಬಂಧನ ಭೀತಿ

ಇದರ ಬೆನ್ನಲ್ಲೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್​​​​​ ಅಂದು ಸೂಚನೆ ಕೊಟ್ಟಿತ್ತು. ಆದರೆ ಶುಕ್ರವಾರ ಹೈಕೋರ್ಟ್​ನಲ್ಲಿ ಬಲವಂತದ ಕ್ರಮಕ್ಕೆ ನೀಡಿದ್ದ ತೆರವು ಮಾಡಿದ್ದಲ್ಲದೇ, ಬೈರತಿ ಬಸವರಾಜ್ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಡಿ.22ಕ್ಕೆ ವಿಚಾರಣೆ ಮುಂದೂಡಿದೆ. ಇತ್ತ ಅಲರ್ಟ್ ಆದ ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್​​ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಬೈರತಿ ಬಸವರಾಜ್ ಬಂಧನಕ್ಕಾಗಿ ಮೂರು ವಿಶೇಷ ತಂಡಗಳಿಂದ ತಲಾಶ್: ಪುಣೆಯಲ್ಲಿ ಓಡಾಟ ಪತ್ತೆ

ಯಾವಾಗ ಹೈಕೋರ್ಟ್ ನಿರೀಕ್ಷಣಾ ಜಾಮೀನು ವಜಾ ಆದ ವಿಚಾರ ಗೊತ್ತಾಗುತ್ತಿದ್ದಂತೆ ಬೈರತಿ ಬಸವರಾಜ್​ ತಮ್ಮ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಹೋಗಿದ್ದ ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದನ್ನು ಸೇರಿದಂತೆ ಬೇರೆ ಬೇರೆ ಆಯಾಮದಲ್ಲಿ ಮತ್ತು ರಾಜ್ಯಕ್ಕೆ ಸಂಪರ್ಕಿಸುವ ಟೋಲ್‌ಗಳ ಸಿಸಿಟಿಯನ್ನು ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಕೊನೆಯದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಲೈವ್ ಲೊಕೇಶನ್ ಪತ್ತೆಯಾಗಿದ್ದು, ಆನಂತರ ಮೊಬೈಲ್​ ಸ್ವಿಚ್ ಆಫ್​​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಮಧ್ಯಂತರ ರಿಲೀಫ್

ಬಿಕ್ಲು ಶಿವಪ್ರಕಾಶ್ ಕೊಲೆ ಆರೋಪಿಗಳು ನನಗೆ ಪರಿಚಯನೇ ಇಲ್ಲ ಅಂದಿದ್ದ ಬೈರತಿ ಬಸವರಾಜ್​​ಗೆ ಈಗ ಸಂಕಷ್ಟ ಎದುರಾಗಿದೆ. ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಆರೋಪಿಗಳ ಜೊತೆಗೆ ಬೈರತಿ ಬಸವರಾಜ್ ಸಂಪರ್ಕದಲ್ಲಿ ಇರುವುದು ಪತ್ತೆಯಾಗಿದ್ದು, ಕೆಲ ಮಹತ್ಚದ ಸಾಕ್ಷ್ಯಧಾರ ಲಭ್ಯವಾಗಿದೆ ಎನ್ನಲಾಗುತ್ತಿದೆ. ಬೈರತಿ ಬಸವರಾಜ್ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿರುವುದು ಗೊತ್ತಾಗಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ – Kannada News | United Nations Observes Second World Meditation Day Gurudev Sri Sri Ravi Shankar Delivers Keynote Address

ನವದೆಹಲಿ, ಡಿಸೆಂಬರ್ 20: ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ಎರಡನೇ ವಿಶ್ವ ಧ್ಯಾನ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಒಟ್ಟುಗೂಡಿವೆ. ಜಾಗತಿಕ ಶಾಂತಿ, ಮಾನಸಿಕ ಆರೋಗ್ಯ ಮತ್ತು ನಾಯಕತ್ವಕ್ಕೆ ಧ್ಯಾನದ ಅಗತ್ಯವನ್ನು ಅವು ಪುನರುಚ್ಚರಿಸಿವೆ. ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಪ್ರಾಸ್ತಾವಿಕ ಭಾಷಣ ಮತ್ತು ಧ್ಯಾನದ ಮಾರ್ಗದರ್ಶನವಿತ್ತು. ಇದು ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನವೆಂಬ ಅಭ್ಯಾಸವನ್ನು ವಿಶ್ವದ ಪ್ರಮುಖ ರಾಜತಾಂತ್ರಿಕ ವೇದಿಕೆಯ ಕೇಂದ್ರಕ್ಕೆ ತಂದಿತು.

ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಸೇರಿದಂತೆ ಹಲವು ಸದಸ್ಯ ರಾಷ್ಟ್ರಗಳ ಶಾಶ್ವತ ಪ್ರತಿನಿಧಿಗಳು ಹಾಗೂ ವಿಶ್ವಸಂಸ್ಥೆಯ ವಿವಿಧ ಸಂಸ್ಥೆಗಳು ಒಟ್ಟಾಗಿ ಸೇರಿ ಪ್ರಸ್ತುತ ಕಾಲದ ಜಾಗತಿಕ ಸಾಮಾಜಿಕ, ರಾಜಕೀಯ ಮತ್ತು ಮಾನಸಿಕ ಆರೋಗ್ಯಗಳ ಸವಾಲುಗಳಿಗೆ ಪರಿಹಾರಕ್ಕೆ ಪ್ರಾಚೀನ ಧ್ಯಾನ ಪದ್ಧತಿಯು ಹೇಗೆ ಸಹಾಯಕವೆಂದು ಚರ್ಚಿಸಿದರು.

ಅಮೆರಿಕದ ನ್ಯೂಯಾರ್ಕ್​ನಲ್ಲಿನ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಎರಡನೇ ವಿಶ್ವ ಧ್ಯಾನ ದಿನದ ಅಂಗವಾಗಿ ಆಯೋಜಿಸಲಾದ ‘ಜಾಗತಿಕ ಶಾಂತಿ ಮತ್ತು ಸೌಹಾರ್ದತೆಗಾಗಿ ಧ್ಯಾನ’ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಮತ್ತು ಅದರ ಅಂಗ ಸಂಸ್ಥೆಗಳು ಭಾಗವಹಿಸಿದ್ದವು. ಈ ವೇಳೆ ಜಾಗತಿಕ ಶಾಂತಿ, ಮಾನಸಿಕ ಸುಸ್ಥಿತಿ ಮತ್ತು ನಾಯಕತ್ವದಂತಹ ವಿಷಯಗಳಲ್ಲಿ ಧ್ಯಾನದ ಮಹತ್ತರವಾದ ಪಾತ್ರವನ್ನು ಗುರುತಿಸಲಾಯಿತು. ಈ ಸಂದರ್ಭದಲ್ಲಿ ಆರ್ಟ್​ ಆಫ್ ಲಿವಿಂಗ್​ನ ಸಂಸ್ಥಾಪಕ ಹಾಗೂ ಜಾಗತಿಕ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನ ಭಾಷಣ ಮಾಡಿದ್ದಾರೆ. ಧ್ಯಾನದ ಮಾರ್ಗದರ್ಶನವನ್ನು ನಡೆಸಿಕೊಡುವ ಮೂಲಕ, ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನ ಪದ್ಧತಿಯನ್ನು ವಿಶ್ವದ ಅತ್ಯಂತ ಮಹತ್ವದ ರಾಜತಾಂತ್ರಿಕ ವೇದಿಕೆಯ ಮೂಲಕ ಮುನ್ನೆಲೆಗೆ ತಂದಿದ್ದಾರೆ.

ಇದನ್ನೂ ಓದಿ: ಧ್ಯಾನ ಫ್ಯಾಷನ್ ಅಲ್ಲ, ಇಂದಿನ ಸಮಾಜದ ಅಗತ್ಯ; ಜಿನೀವಾದಲ್ಲಿ ರವಿಶಂಕರ್ ಗುರೂಜಿ ಅಭಿಮತ

ತಮ್ಮ ಭಾಷಣದ ಆರಂಭದಲ್ಲೇ ಗುರುದೇವ ರವಿಶಂಕರ್ ಅವರು ಒಂದು ಸರಳವಾದ ಮತ್ತು ಅರ್ಥಪೂರ್ಣವಾದ ಕಥೆಯನ್ನು ಹಂಚಿಕೊಂಡರು. ‘ಒಮ್ಮೆ ತತ್ವಜ್ಞಾನಿಗಳ ಗುಂಪೊಂದು ಧ್ಯಾನದ ಸಾರವನ್ನು ವಿವರಿಸಲು ಧ್ಯಾನಗುರುವೊಬ್ಬರನ್ನು ಕೇಳಿತು. ಅದಕ್ಕೆ ಗುರುಗಳು, ನೀವು ಅತ್ಯಂತ ಮೌಲ್ಯವಾದ ವಸ್ತುವನ್ನು ಒಂದು ಪಾತ್ರೆಯಲ್ಲಿ ತಂದುಕೊಡಿ ಎಂದರು. ಅವರು ನೀರು, ಮಣ್ಣು, ಎಣ್ಣೆ, ಜೇನು ಮತ್ತು ಹಾಲು ತುಂಬಿದ ಪಾತ್ರೆಗಳೊಂದಿಗೆ ಮರಳಿದರು. ಅವುಗಳನ್ನೆಲ್ಲ ಒಂದೇ ಪಾತ್ರೆಯಲ್ಲಿ ಸುರಿದಾಗ, ಅವರ ಪಾತ್ರೆಗಳು ಖಾಲಿಯಾದವು. ಇದೇ ಧ್ಯಾನ’ ಎಂದು ಗುರುದೇವ ರವಿಶಂಕರ್ ಹೇಳಿದ್ದಾರೆ.

ಈ ಕಥೆಯನ್ನು ವಿವರಿಸಿದ ಗುರುದೇವ ರವಿಶಂಕರ್, ತತ್ವಶಾಸ್ತ್ರಗಳು ಮನಸ್ಸೆಂಬ ಪಾತ್ರೆಯನ್ನು ತುಂಬುತ್ತವೆ. ಆದರೆ ಧ್ಯಾನವು ಚಿಂತನೆಯಾಚೆ ಕರೆದೊಯ್ದು ಅಂತರಂಗದಲ್ಲಿ ಸ್ಪಷ್ಟತೆ ಮತ್ತು ಶಾಂತಿ – ನೆಮ್ಮದಿಯನ್ನು ಅನುಭವಿಸಲು ಅವಕಾಶ ಮಾಡಿಕೊಡುತ್ತದೆ. ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಇಂದಿನ ಜಗತ್ತಿನಲ್ಲಿ, ಧ್ಯಾನವನ್ನು ಅತ್ಯಂತ ತುರ್ತಾಗಿ ಅಭ್ಯಾಸ ಮಾಡಬೇಕಾಗಿದೆ ಎಂದು ಅವರು ಉಲ್ಲೇಖಿಸಿದರು. ವಿಶ್ವದಾದ್ಯಂತ ಸುಮಾರು 500ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಈಗಾಗಲೇ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಗಳಲ್ಲಿ ಧ್ಯಾನವನ್ನು ಅಳವಡಿಸಿಕೊಳ್ಳುತ್ತಿರುವುದನ್ನೂ ಅವರು ಪ್ರಸ್ತಾಪಿಸಿದರು.

ಇದನ್ನೂ ಓದಿ: World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ

ಉಕ್ರೇನ್‌ನಲ್ಲಿನ 8,000ಕ್ಕೂ ಹೆಚ್ಚು ಸೈನಿಕರು ಆಘಾತ ಮತ್ತು ಒತ್ತಡದಿಂದ ಹೊರಬರಲು ಧ್ಯಾನವನ್ನು ಕಲಿತಿದ್ದಾರೆ. ಅದು ಅವರ ಮನೋಬಲವನ್ನು ಮರುಸ್ಥಾಪಿಸಿತು ಎಂದು ಹೇಳಿದ ರವಿಶಂಕರ್ ಗುರೂಜಿ, ಧ್ಯಾನವು ಕೇವಲ ಶಾಲಾ ತರಗತಿಗಳಲ್ಲಿ ಚಿಕಿತ್ಸೆಗಳಲ್ಲಿ ಮಾತ್ರವಲ್ಲದೇ, ಯುದ್ಧಭೂಮಿಯಲ್ಲೂ ಇದರ ಪಾತ್ರ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ರಂದು ವಿಶ್ವ ಧ್ಯಾನ ದಿನವೆಂದು ಅಧಿಕೃತವಾಗಿ ಘೋಷಿಸಿ, ಧ್ಯಾನವನ್ನು ಭಾವನಾತ್ಮಕ ಸ್ಥೈರ್ಯ, ಮಾನಸಿಕ ಆರೋಗ್ಯ ಮತ್ತು ಶಾಂತಿ ಸಾಮರಸ್ಯಕ್ಕೆ ನೆರವಾಗುವ ವಿಶ್ವವ್ಯಾಪಿ ಅನುಸರಿಸಬಹುದಾದ ಪದ್ಧತಿಯಾಗಿ ಗುರುತಿಸಿತ್ತು. ಭಾರತಕ್ಕೆ ದೀರ್ಘಕಾಲದಿಂದ ಪರಿಚಿತವಾಗಿರುವ ಈ ಧ್ಯಾನದ ಪರಂಪರೆ, ಇಂದಿನ ಜಾಗತಿಕ ಸವಾಲುಗಳನ್ನು ಎದುರಿಸಲು ಉಪಯುಕ್ತ ಸಾಧನವಾಗಿ ಜಾಗತಿಕ ಸ್ವೀಕಾರ ಪಡೆಯುತ್ತಿರುವುದನ್ನು ಈ ಘೋಷಣೆ ಪ್ರತಿಬಿಂಬಿಸುತ್ತದೆ.

ಪ್ರತಿನಿಧಿಗಳನ್ನು ಸ್ವಾಗತಿಸಿದ ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಪಿ. ಹರೀಶ್, ಆರ್ಥಿಕ ಅನಿಶ್ಚಿತತೆ, ರಾಜಕೀಯ ಅಸ್ಥಿರತೆ ಮತ್ತು ನಿರಂತರ ಸಂಘರ್ಷಗಳಿಂದ ಒತ್ತಡದಲ್ಲಿರುವ ಜಗತ್ತಿನ ಸ್ಥಿತಿಗತಿಗಳನ್ನು ವಿವರಿಸಿದರು. ಸ್ಪಷ್ಟತೆ, ಆತ್ಮಜ್ಞಾನ ಮತ್ತು ಸಮತೋಲನದ ನಿರ್ಧಾರ ಸಾಮರ್ಥ್ಯವನ್ನು ಬೆಳೆಸುವ ಧ್ಯಾನವನ್ನು ಅವರು ಬಣ್ಣಿಸಿದರು. ರಾಜತಾಂತ್ರಿಕತೆ ಮತ್ತು ನಾಯಕತ್ವದಲ್ಲಿಯೂ ಇದರ ಮಹತ್ವವನ್ನು ಸೂಚಿಸಿದರು.

ವಿವಿಧ ಪ್ರದೇಶಗಳ ಪ್ರತಿನಿಧಿಗಳು ಇದೇ ಅಭಿಪ್ರಾಯವನ್ನು ಹಂಚಿಕೊಂಡರು. ಅಂಡೋರಾದ ರಾಯಭಾರಿ ಜೋನ್ ಫೋರ್ನರ್ ರೋವಿರಾ, ತಮ್ಮ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಧ್ಯಾನವನ್ನು ಅಳವಡಿಸಿಕೊಂಡ ನಂತರ ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಭಾವನಾತ್ಮಕ ಸಾಮರಸ್ಯದಲ್ಲಿ ಕಂಡ ಸುಧಾರಣೆಯನ್ನು ಹಂಚಿಕೊಂಡರು. ಮೆಕ್ಸಿಕೋದ ಉಪ ಶಾಶ್ವತ ಪ್ರತಿನಿಧಿ ರಾಯಭಾರಿ ಅಲಿಸಿಯಾ ಗುಡಲುಪೆ ಬುವೆನೊಸ್ಟ್ರೋ ಮಾಸಿಯು, ಜಾಗತಿಕ ಸೌಹಾರ್ದತೆಗೆ ಆಂತರಿಕ ಶಾಂತಿಯೇ ಅಡಿಪಾಯ ಎಂದು ಹೇಳಿದರು. ನೇಪಾಳದ ರಾಯಭಾರಿ ಲೋಕ್ ಬಹಾದುರ್ ಥಾಪಾ, ಹಿಮಾಲಯ ಪ್ರದೇಶದ ನಾಗರಿಕತೆಯಲ್ಲಿ ಧ್ಯಾನದ ಆಳವಾದ ಬೇರುಗಳನ್ನು ನೆನಪಿಸಿ, ಹವಾಮಾನ ಬದಲಾವಣೆಗಳಿಂದ ಹಿಡಿದು ತಪ್ಪು ತಿಳುವಳಿಕೆಯಂತಹ ಜಾಗತಿಕ ಸಂಕಷ್ಟಗಳನ್ನು ಎದುರಿಸಲು ಧ್ಯಾನ ಸಹಾಯಕ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಣ್ಯರಲ್ಲಿ ಮಹರ್ಷಿ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದ ಡಾ. ರಾಬರ್ಟ್ ಶ್ನೈಡರ್, ಯೋಗಮಾತಾ ಫೌಂಡೇಶನ್‌ನ ಯೋಗಮಾತಾ ಕೈಕೊ ಐಕಾವಾ, ಬ್ರಹ್ಮಕುಮಾರಿ ವಿಶ್ವ ಆಧ್ಯಾತ್ಮಿಕ ವಿಶ್ವವಿದ್ಯಾಲಯದ ಆಡಳಿತ ಮತ್ತು ಆಧ್ಯಾತ್ಮಿಕ ಮುಖ್ಯಸ್ಥೆ ಬಿ.ಕೆ. ಮೋಹಿನಿ ಪಂಜಾಬಿ, ಜೀವನ ವಿಜ್ಞಾನ ಫೌಂಡೇಶನ್ ನೇಪಾಳದ ಎಲ್.ಪಿ. ಭಾನು ಶರ್ಮಾ, ರಟ್ಗರ್ಸ್ ವಿಶ್ವವಿದ್ಯಾಲಯದ ಡಾ. ಲಸಂತ ಚಂದನ ಗುಣತಿಲಕೆ ಹಾಗೂ ವಿಜ್ಞಾನಿ, ‘ಶಾಂತಿಗೆ ವಿಜ್ಞಾನಿಗಳ ಜಾಗತಿಕ ಒಕ್ಕೂಟ’ದ ಅಧ್ಯಕ್ಷ ಮತ್ತು ಟ್ರಾನ್ಸೆಂಡೆಂಟಲ್ ಮೆಡಿಟೇಶನ್ ಚಳವಳಿಯ ನಾಯಕ ಡಾ. ಜಾನ್ ಹ್ಯಾಗೆಲಿನ್ ಸೇರಿದ್ದರು.

ಈ ಕಾರ್ಯಕ್ರಮದ ಅಂತ್ಯದಲ್ಲಿ ಗುರುದೇವ ರವಿಶಂಕರ್ ಅವರು, ರಾಯಭಾರಿಗಳು ಮತ್ತು ಪ್ರತಿನಿಧಿಗಳಿಗೆ 20 ನಿಮಿಷಗಳ ಕಾಲ ಧ್ಯಾನವನ್ನು ಅಭ್ಯಾಸ ಮಾಡಿಸಿದರು. ಇದರಿಂದ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಪರೂಪದ ನಿಶ್ಶಬ್ದ ಕ್ಷಣವೊಂದು ಮೂಡಿತು. ಪ್ರಾಚೀನ ಪರಂಪರೆಯಿಂದ ಹುಟ್ಟಿದ ಈ ಪದ್ಧತಿಯು ಇಂದಿಗೂ ಜಾಗತಿಕ ವೇದಿಕೆಯಲ್ಲಿ ಹೊಸ ಅರ್ಥವನ್ನು ಪಡೆದುಕೊಳ್ಳುತ್ತಿರುವುದಕ್ಕೆ ಈ ಮೌನದ ಕ್ಷಣ ಸಾಕ್ಷಿಯಾಯಿತು.

ಡಿಸೆಂಬರ್ 21ರಂದು ವಿಶ್ವ ಧ್ಯಾನ ದಿನಾಚರಣೆ ನಡೆಯಲಿದೆ. ನ್ಯೂಯಾರ್ಕ್‌ನಿಂದಲೇ ಗುರುದೇವ ರವಿಶಂಕರ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ವಿಶ್ವದಾದ್ಯಂತದ ಧ್ಯಾನವನ್ನು ನೇರ ಪ್ರಸಾರದಲ್ಲಿ ಮಾರ್ಗದರ್ಶನ ಮಾಡಲಿದ್ದು, ಭಾರತ ಸೇರಿದಂತೆ ಜಗತ್ತಿನ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಈ ಸಮೂಹ ಧ್ಯಾನದಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ.

ವಿಜಯ್ ಅವರು ತಮ್ಮ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ. ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ. ಈ ಸಿನಿಮಾ ಅನ್ನು ತಮ್ಮ ರಾಜಕೀಯ ಪಯಣಕ್ಕೆ ಚಿಮ್ಮುಹಲಗೆಯಾಗಿ ವಿಜಯ್ ಬಳಸಲಿದ್ದಾರೆ. ತಾವೆಂಥಹ ಜನನಾಯಕ ಎಂಬುದನ್ನು ಹೇಳಲೆಂದೇ ಈ ಸಿನಿಮಾ ಮಾಡಿದ್ದಾರೆ. ಆದರೆ ಇದೀಗ ವಿಜಯ್ ಅವರ ಈ ಸಿನಿಮಾ ರಾಜಕೀಯಕ್ಕೆ ಸಿನಿಮಾದ ಮೂಲಕವೇ ಉತ್ತರ ನೀಡಲು ಎದುರಾಳಿಗಳು ಸಜ್ಜಾಗಿದ್ದಾರೆ.

ತಮಿಳಿನ ಮತ್ತೊಬ್ಬ ಜನಪ್ರಿಯ ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾ ಜನವರಿ 14ರಂದು ಬಿಡುಗಡೆ ಆಗಬೇಕಿತ್ತು. ಆದರೆ ವಿಜಯ್ ಅವರ ‘ಜನ ನಾಯಗನ್’ಗೆ ಪೆಟ್ಟು ಕೊಡಬೇಕೆಂದು, ಜನವರಿ 10ರಂದೇ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಆಕಾಶ್ ಭಾಸ್ಕರನ್ ಘೋಷಿಸಿದ್ದಾರೆ. ಅಂದಹಾಗೆ ಆಕಾಶ್ ಅವರು ಡಿಎಂಕೆ ಪಕ್ಷದ ಪ್ರಮುಖ ನಾಯಕರ ನಿಕಟ ಸಂಬಂಧಿ ಆಗಿದ್ದಾರೆ.

ಇದನ್ನೂ ಓದಿ:ವಿಜಯ್ ಅಭಿಮಾನಿಗಳ ಓಲೈಸಲು ಹೋಗಿ ಚಿರಂಜೀವಿ ಅಭಿಮಾನಿಗಳ ಎದುರು ಹಾಕಿಕೊಂಡ ಕೀರ್ತಿ ಸುರೇಶ್

‘ಜನ ನಾಯಗನ್’ ರೀತಿ ‘ಪರಾಶಕ್ತಿ’ ಸಿನಿಮಾ ಸಹ ರಾಜಕೀಯ ವಿಷಯವನ್ನು ಹೊಂದಿರುವ ಸಿನಿಮಾ ಆಗಿದೆ. 1952 ಬಿಡುಗಡೆ ಆಗಿದ್ದ ‘ಪರಾಶಕ್ತಿ’ ಸಿನಿಮಾ ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿತ್ತು, ಸಾಮಾಜಿಕ ಕ್ರಾಂತಿಗೆ ಕಾರಣವಾಗಿತ್ತು. ಇದೀಗ ಈ ಸಿನಿಮಾಕ್ಕೂ ‘ಪರಾಶಕ್ತಿ’ ಎಂದೇ ಹೆಸರಿಟ್ಟು, ಹಿಂದಿ ಹೇರಿಕೆ, ಜಾತಿ ಪದ್ಧತಿ ಇತರೆ ರಾಜಕೀಯ ವಿಷಯಗಳನ್ನು ಸಿನಿಮಾನಲ್ಲಿ ಅಳವಡಿಸಲಾಗಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಇದೀಗ ಈ ಸಿನಿಮಾವನ್ನು ವಿಜಯ್ ಅವರ ಸಿನಿಮಾದ ಜೊತೆಗೆ ಬಿಡುಗಡೆ ಮಾಡಲಾಗುತ್ತಿದ್ದು, ವಿಜಯ್ ಅವರಿಗೆ ಸ್ಪರ್ಧೆ ನೀಡಲಾಗುತ್ತಿದೆ.

ಅದಾದ ಒಂದೇ ವಾರಕ್ಕೆ ಅಜಿತ್ ನಟನೆಯ ಹಳೆಯ ಹಿಟ್ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದ್ದು, ಒಟ್ಟಾರೆ ವಿಜಯ್ ಅವರ ಸಿನಿಮಾಕ್ಕೆ ಹೆಚ್ಚು ಚಿತ್ರಮಂದಿರಗಳು ಸಿಗದಂತೆ, ಹೆಚ್ಚು ಜನರ ಅಟೆನ್ಷನ್ ಸಿಗದಂತೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ತಮಿಳುನಾಡು ಚಿತ್ರರಂಗದಲ್ಲಿ ಮತ್ತೊಮ್ಮೆ ಸಿನಿಮಾ ರಾಜಕೀಯ ಶುರುವಾಗಿದೆ. ಗೆಲುವು ಯಾರಿಗೆ ಆಗುತ್ತದೆ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link