ಬಾಲಿವುಡ್ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಅಭಿನಂದನೆಗಳ ಕಮೆಂಟ್ ಬಂದಿದೆ. ಸೋನಾಕ್ಷಿ ಸಿನ್ಹಾ ಅವರ ಯೂಟ್ಯೂಬ್ ಚಾನೆಲ್ (Sonakshi Sinha YouTube Channel) ಕೇವಲ ಸಿನಿಮಾ ಪ್ರಚಾರಕ್ಕೆ ಸೀಮಿತವಾಗಿಲ್ಲ. ಬದಲಿಗೆ, ಅವರು ತಮ್ಮ ವೈಯಕ್ತಿಕ ಜೀವನ ಮತ್ತು ಆಸಕ್ತಿಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.
ಕೋಲಾರ, ಮಾರ್ಚ್ 27: ನಗರದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಎಂ.ಜಿ.ರಸ್ತೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಆಯೋಜಿಸಿದ್ದ 10ನೇ ವರ್ಷದ ರಾಮೋತ್ಸವ ಸಮಾರಂಭ ಇದಾಗಿತ್ತು. ಈ ಸಂದರ್ಭದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಯತ್ನಾಳ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ನಾಗಲಾಪುರ ಮಠದ ತೇಜೇಶಲಿಂಗ ಶಿವಚಾರ್ಯ ಸ್ವಾಮಿಜಿ, ಶ್ರೀರಾಮಸೇನೆಯ ಶ್ರೀನಿವಾಸ್ ಗುರೂಜಿ ಸೇರಿದಂತೆ ಹಲರು ಉಪಸ್ಥಿತರಿದ್ದರು. ವಿಜಯಪುರ ಶಾಸಕರನ್ನು ನೋಡಲು ಜನಸಾಗರವೇ ಕಾರ್ಯಕ್ರಮಕ್ಕೆ ಹರಿದುಬಂದಿತ್ತು.
ಲಡಾಖ್, ಮಾರ್ಚ್ 27: ಲಡಾಖ್ನ ಜೋಜಿಲಾ ಪಾಸ್ನಲ್ಲಿ ಸಂಭವಿಸಿದ ಹಿಮಪಾತದಲ್ಲಿ (Ladakh avalanche) 7 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಜನರು ಹಿಮಪಾತದಿಂದ ಹೂತುಹೋಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5 ವಾಹನಗಳು ಭಾರೀ ಹಿಮದ ಅಡಿಯಲ್ಲಿ ಹೂತುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಹಠಾತ್ ಮತ್ತು ತೀವ್ರವಾದ ಹಿಮಪಾತವು ಹಲವಾರು ವಾಹನಗಳನ್ನು ಆವರಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಪ್ರಯತ್ನಗಳು ಮುಂದುವರೆದಿವೆ. ಗ್ಯಾಂಡರ್ಬಾಲ್ ಪೊಲೀಸರು, ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ, ಸಿಕ್ಕಿಬಿದ್ದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
This evening, a massive avalanche struck Zoji La Pass, Srinagar–Leh Highway, Ladakh, India.
ಜೋಜಿಲಾ ಪಾಸ್ ಹಿಮಾಲಯದಲ್ಲಿರುವ ಒಂದು ಎತ್ತರದ ಪರ್ವತ ಮಾರ್ಗವಾಗಿದ್ದು, ಇದು ಕಾಶ್ಮೀರ ಕಣಿವೆಯನ್ನು ಲಡಾಖ್ನೊಂದಿಗೆ ಸಂಪರ್ಕಿಸುತ್ತದೆ. ಇದು ಶ್ರೀನಗರ ಮತ್ತು ಲೇಹ್ ನಡುವಿನ ರಾಷ್ಟ್ರೀಯ ಹೆದ್ದಾರಿ 1ರಲ್ಲಿದೆ. ಇದು ಸುಮಾರು 3,528 ಮೀಟರ್ ಎತ್ತರದಲ್ಲಿದೆ. ಇದು ಲಡಾಖ್ಗೆ ನಾಗರಿಕ ಸಾರಿಗೆ ಮತ್ತು ಮಿಲಿಟರಿ ಸರಬರಾಜು ಮಾರ್ಗಗಳಿಗೆ ಪ್ರಮುಖ ಮಾರ್ಗವಾಗಿ ಕಾರ್ಯನಿರ್ವಹಿಸುತ್ತದೆ.
Heard the unfortunate news of an avalanche at Zoji La. I have directed the DC & SSP of Kargil to visit the spot immediately and mobilise relief and rescue operations.
All government agencies including disaster relief forces and BRO have been put on high alert.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಲಡಾಖ್ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ, “ಜೋಜಿಲಾದಲ್ಲಿ ಹಿಮಪಾತದ ದುರದೃಷ್ಟಕರ ಸುದ್ದಿ ಕೇಳಿದೆ. ಕಾರ್ಗಿಲ್ನ ಡಿಸಿ ಮತ್ತು ಎಸ್ಎಸ್ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಜ್ಜುಗೊಳಿಸಲು ನಾನು ನಿರ್ದೇಶಿಸಿದ್ದೇನೆ. ವಿಪತ್ತು ಪರಿಹಾರ ಪಡೆಗಳು ಮತ್ತು ಬಿಆರ್ಒ ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ” ಎಂದು ಎಕ್ಸ್ನಲ್ಲಿ ಬರೆದ ಪೋಸ್ಟ್ನಲ್ಲಿ ಬರೆದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೋಲಾರ/ಮಂಡ್ಯ, ಮಾರ್ಚ್ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್ನಲ್ಲಿದ್ದ ಯುವಕರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಾಲಾ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ
ಅಪಘಾತವಾದ ವಾಹನಗಳು
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿರುವ ಶಾಲಾ ಬಸ್ ಮತ್ತು ಖಾಸಗಿ ಬಸ್ ನಡುವಿನ ಅಪಘಾತದಲ್ಲಿ ಶಾಲಾ ಬಸ್ನಲ್ಲಿದ್ದ 12 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ಬಸ್ ಮದ್ದೂರು ಪಟ್ಟಣದ ಮರಿಯಪ್ಪ ಶಾಲೆಗೆ ಸೇರಿದ್ದು ಎಂದು ತಿಳಿದುಬಂದಿದೆ. ಮಕ್ಕಳಿಗೆ ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಗೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದ ಕುರಿತು ಮಾಹಿತಿ ಪಡೆದ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.ಮದ್ದೂರು ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ.
ಚನ್ನಪಟ್ಟಣದ ಹರಿಸಂದ್ರ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಕೊಂಡಾಪುರ ಗ್ರಾಮದ ವಿಕಾಸ್(23) ಜೀವ ಕಳೆದುಕೊಂಡಿದ್ದಾರೆ. ಗಾಯಗೊಂಡ ಇಬ್ಬರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮುರ್ಷಿದಾಬಾದ್, ಮಾರ್ಚ್ 27: ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್ ಜಿಲ್ಲೆಯ ರಘುನಾಥಗಂಜ್ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಅನೇಕ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಹೆಚ್ಚಿದ ಉದ್ವಿಗ್ನತೆಯನ್ನು ತೋರಿಸುವ ಹಲವಾರು ವೀಡಿಯೊಗಳು ವೈರಲ್ ಆಗಿವೆ.
ಪರಿಸ್ಥಿತಿ ಎಷ್ಟು ಉದ್ವಿಗ್ನಗೊಂಡಿತ್ತೆಂದರೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಉದ್ವಿಗ್ನತೆ ಉಂಟಾಗಿರುವುದರಿಂದ ಪಟ್ಟಣದಲ್ಲಿ ಭಾರೀ ಪೊಲೀಸ್ ನಿಯೋಜನೆ ಮುಂದುವರೆದಿದೆ. ಇದಲ್ಲದೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ತಂಡಗಳನ್ನು ಸಹ ನಿಯೋಜಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಆನೇಕಲ್, ಮಾರ್ಚ್ 27: ಭಾವನೇ ಬಾಮೈದನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದು, ಈ ಘಟನೆ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಮ್ಮ ಮಗನನ್ನು ಅಳಿಯ ಶ್ರೀನಿವಾಸ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಮಗ ಮತ್ತು ಶ್ರೀನಿವಾಸ್ನ ತಂಗಿ ಕೋಮಲ್ ಇಬ್ಬರು ಓಡಿಹೋಗಿ ಹೈದರಾಬಾದ್ನಲ್ಲಿ ಒಂದು ತಿಂಗಳು ಇದ್ದು, ಬಳಿಕ ವಾಪಸ್ ಬಂದಿದ್ದರು. ಕೊಲೆ ನಡೆದ ರಾತ್ರಿ, ನವೀನ್ ಮತ್ತು ಶ್ರೀನಿವಾಸ್ ಸೇರಿದಂತೆ ನಾಲ್ವರು ಬಂದು ಮಗನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಾಯಿ ಹೇಳಿದ್ದಾರೆ.
2026 ರ ಐಪಿಎಲ್ (IPL 2026), ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದೊಂದಿಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸುಮಾರು ಒಂದು ವರ್ಷದ ಬಳಿಕ ಚಿನ್ನಸ್ವಾಮಿ ಮೈದಾನ ಕ್ರಿಕೆಟ್ ಪಂದ್ಯವನ್ನು ಆಯೋಜಿಸುತ್ತಿದೆ. ಹೀಗಾಗಿ ಬೆಂಗಳೂರಿನ ಕ್ರಿಕೆಟ್ ಪ್ರಿಯರು ಕೂಡ ಈ ಪಂದ್ಯಕ್ಕೆ ಕಾತುರದಿಂದ ಕಾದಿದ್ದಾರೆ. ಹೀಗಾಗಿ ಈ ಪಂದ್ಯ ನಡೆಯುವ ಚಿನ್ನಸ್ವಾಮಿ ಮೈದಾನ ಯಾರಿಗೆ ಹೆಚ್ಚು ನೆರವು ನೀಡಲಿದೆ? ಮತ್ತು ಪಂದ್ಯದ ದಿನ ಬೆಂಗಳೂರಿನ ಹವಾಮಾನ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.
ಪಿಚ್ ಯಾರಿಗೆ ಸಹಕಾರಿ?
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಸಮತಟ್ಟಾಗಿರುತ್ತದೆ. ಅಂದರೆ ಈ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿರಲಿದೆ. ಚೆಂಡು ಉತ್ತಮ ಬೌನ್ಸ್ ಮತ್ತು ವೇಗದೊಂದಿಗೆ ಬ್ಯಾಟ್ಗೆ ಚೆನ್ನಾಗಿ ಬರುತ್ತದೆ. ಮೈದಾನವು ತುಂಬಾ ಚಿಕ್ಕದಾಗಿರುವುದರ ಜೊತೆಗೆ ಔಟ್ಫೀಲ್ಡ್ ವೇಗವಾಗಿರುತ್ತದೆ. ಹೀಗಾಗಿ ಈ ಮೈದಾನದಲ್ಲಿ ರನ್ ಮಳೆ ಹರಿಯುವುದು ಖಚಿತ. ಆದಾಗ್ಯೂ, ಈ ಮೈದಾನದಲ್ಲಿ ಇಬ್ಬನಿ ಫಲಿತಾಂಶದ ಮೇಲೆ ಪ್ರಮುಖ ಪಾತ್ರವಹಿಸುತ್ತದೆ. ಸಂಜೆಯ ಇಬ್ಬನಿಯು ಚೇಸಿಂಗ್ ತಂಡಕ್ಕೆ ಅನುಕೂಲಕರವಾಗಿರುತ್ತದೆ, ಆದ್ದರಿಂದ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡುವುದನ್ನು ನಿರೀಕ್ಷಿಸಬಹುದು.
ಬೆಂಗಳೂರಿನ ಹವಾಮಾನ ಹೇಗಿರಲಿದೆ?
ಮಾರ್ಚ್ 28 ರಂದು ಬೆಂಗಳೂರಿನಲ್ಲಿ ಹವಾಮಾನ ಪಂದ್ಯಕ್ಕೆ ಅನುಕೂಲಕರವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಆದಾಗ್ಯೂ ಕಳೆದ ವಾರ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿತ್ತು. ಹೀಗಾಗಿ ಬೆಂಗಳೂರಿನಲ್ಲಿ ಯಾವಾಗ ಹವಾಮಾನ ಬದಲಾಗುತ್ತದೆ ಎಂದು ಹೇಳುವುದು ಕಷ್ಟ. ಆದರೆ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನದಂದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಶನಿವಾರ ಸಂಜೆ ಬೆಂಗಳೂರಿನ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆರ್ದ್ರತೆಯು ಶೇಕಡಾ 67 ರಷ್ಟಿರಬಹುದು.
ಏಪ್ರಿಲ್ 5ರ ವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯಪುರ, ಮೈಸೂರು, ವಿಜಯಪುರ, ಮೈಸೂರು, ವಿಜಯಪುರದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ಸುನಾಮಿ ಎಬ್ಬಿಸಿದೆ. ಚಿತ್ರಮಂದಿರಗಳಲ್ಲಿ ದಾಖಲೆ ಬರೆಯುತ್ತಿರುವ ಈ ಸಿನಿಮಾ ಈಗ ಅನಿರೀಕ್ಷಿತ ಟ್ವಿಸ್ಟ್ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆಯಲ್ಲಿ ಕೂಡ ‘ಧುರಂಧರ್’ ಸಿನಿಮಾದ ಪಾತ್ರಗಳ ಹೆಸರನ್ನು ಪ್ರಸ್ತಾಪಿಸಲಾಗಿದೆ! ಇದಕ್ಕೆ ಸಂಬಂಧಿಸಿದ ಒಂದು ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಪ್ರಶ್ನೆ ಪತ್ರಿಕೆಯನ್ನು (Accounts Question Paper) ನೋಡಿದ ನೆಟ್ಟಿಗರು ಹತ್ತಾರು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಫೋಟೋವೊಂದು ಸಖತ್ ವೈರಲ್ ಆಗುತ್ತಿದೆ. ಅಕೌಂಟ್ಸ್ ವಿಷಯದ ಪ್ರಶ್ನೆಪತ್ರಿಕೆಯಲ್ಲಿ ಶಿಕ್ಷಕರು ಸಿನಿಮಾದ ಪಾತ್ರಗಳನ್ನು ಬಳಸಿ ಲೆಕ್ಕದ ಪ್ರಶ್ನೆಗಳನ್ನು ಸಿದ್ಧಪಡಿಸಿದ್ದಾರೆ. ಇದನ್ನು ಹಂಚಿಕೊಂಡಿರುವ ನೆಟ್ಟಿಗರೊಬ್ಬರು, ‘ಧುರಂಧರ್ ಎಷ್ಟು ವೈರಲ್ ಆಗಿದೆ ಎಂದರೆ, ಅಕೌಂಟ್ಸ್ ಸರ್ ಕೂಡ ಈ ಸಿನಿಮಾದ ಫ್ಯಾನ್ ಆಗಿದ್ದಾರೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಸಾಮಾನ್ಯವಾಗಿ ಅಕೌಂಟ್ಸ್ ಪರೀಕ್ಷೆ ಎಂದರೆ ವಿದ್ಯಾರ್ಥಿಗಳಿಗೆ ಸ್ವಲ್ಪ ಒಣ ವಿಷಯ ಎನಿಸುವುದು ಸಹಜ. ಆದರೆ ಇಲ್ಲಿ ಶಿಕ್ಷಕರು ಸಿನಿಮಾದ ಪಾತ್ರಗಳಾದ ಹಮ್ಜಾ ಅಲಿ ಮಜಾರಿ, ರೆಹಮಾನ್ ಡಕಾಯತ್ ಮತ್ತು ಉಜೈರ್ ಬಲೋಚ್ ಅವರ ಹೆಸರುಗಳನ್ನು ಪ್ರಶ್ನೆಗಳಲ್ಲಿ ಬಳಸಿದ್ದಾರೆ. ಒಂದು ಪ್ರಶ್ನೆಯಲ್ಲಿ ‘ರೆಹಮಾನ್ 2025ರ ಡಿಸೆಂಬರ್ 5ರಂದು ನಿಧನರಾದರು’ ಎಂದು ಉಲ್ಲೇಖಿಸಿ ಅದರ ಆಧಾರದ ಮೇಲೆ ಲೆಕ್ಕ ಮಾಡಲು ಹೇಳಲಾಗಿದೆ. ಶಿಕ್ಷಕರ ಈ ಕ್ರಿಯೇಟಿವ್ ಐಡಿಯಾಗೆ ನೆಟ್ಟಿಗರು ಫಿದಾ ಆಗಿದ್ದಾರೆ.
ಮಾರ್ಚ್ 19ರಂದು ತೆರೆಕಂಡ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ರಣವೀರ್ ಸಿಂಗ್ ಜೊತೆಗೆ ಆರ್. ಮಾಧವನ್, ಸಂಜಯ್ ದತ್, ಅರ್ಜುನ್ ರಾಮ್ಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಅನೇಕ ಸೆಲೆಬ್ರಿಟಿಗಳು ಫಿದಾ ಆಗಿದ್ದಾರೆ.
ಕೇವಲ 7 ದಿನಗಳಲ್ಲಿ ಈ ಸಿನಿಮಾ ವಿಶ್ವದಾದ್ಯಂತ ಅಂದಾಜು 1 ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ. ಸಿನಿಮಾದ ಚಿತ್ರಕಥೆ ಮತ್ತು ಭರ್ಜರಿ ಆ್ಯಕ್ಷನ್ ದೃಶ್ಯಗಳು ಪ್ರೇಕ್ಷಕರಿಗೆ ಇಷ್ಟ ಆಗಿವೆ. ಶಾಲಾ-ಕಾಲೇಜಿನ ಪರೀಕ್ಷೆಯಲ್ಲೂ ಈ ಸಿನಿಮಾದ ಪಾತ್ರಗಳು ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಜನಪ್ರಿಯತೆ ಎಷ್ಟರ ಮಟ್ಟಿಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಮಂಗಳೂರು, ಮಾರ್ಚ್ 27: ಉಡುಪಿ ಜಿಲ್ಲೆಯ ವಿವಿಧ ಮೀನುಗಾರರ ಸ್ವಸಹಾಯ ಗುಂಪುಗಳ ಹೆಸರಲ್ಲಿ ವಂಚನೆಯಿಂದ ಪಡೆದ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ, ಮಂಗಳೂರು ಉಪ ವಲಯ ಜಾರಿ ನಿರ್ದೇಶನಾಲಯವು (ED) 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ, ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಶ್ರೀಮತಿ ಬೇಬಿ, ಹರೀಶ್, ಪಿ. ರಾಮದಾಸ್ ಮತ್ತು ರಾಮಕೃಷ್ಣ ಪಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಲ ಮನ್ನಾ ಯೋಜನೆಯನ್ನು ಬಳಸಿಕೊಂಡು ಅನರ್ಹ ಮೀನುಗಾರರ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡಿದ್ದಕ್ಕಾಗಿ ಶ್ರೀಮತಿ ಬೇಬಿ ಕೊಟಾರಿ, ಹರೀಶ್ ಖಾರ್ವಿ, ರಾಮದಾಸ ಖ್ರಾವಿ ಮತ್ತು ರಾಮಕೃಷ್ಣ ದೇವಾಡಿಗ ವಿರುದ್ಧ ಇತ್ತೀಚೆಗೆ ಉಡುಪಿಯ ಬೈಂದೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ದಾಖಲಾಗಿದ್ದ ಎಫ್ಐಆರ್ ಆಧಾರದ ಮೇಲೆ ಇದೀಗ ಇಡಿ ತನಿಖೆ ಆರಂಭಿಸಿದೆ.
ಇ.ಡಿ ಟ್ವೀಟ್
ED, Mangalore Sub Zonal Office has filed a Prosecution Complaint on 27.03.2026, under PMLA, 2002, before the Hon’ble Special Court for PMLA cases at Mangalore, against M/s. Mookambika Rural Development Trust, Smt. Baby, Harish, P. Ramdas and Ramakrishna P, in connection with the… pic.twitter.com/zQMJN8UyMi
ಆರೋಪಿಗಳು 2017-18ರ ಹಣಕಾಸು ವರ್ಷದಲ್ಲಿ ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮೂಲಕ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿವಿಧ ಸ್ವಸಹಾಯ ಗುಂಪುಗಳಿಗೆ ಸಾಲ ನೀಡಿದ್ದಾರೆ. ಸಾಲದ ಕಂತಿನ ಮೊತ್ತವನ್ನು ಬ್ಯಾಂಕಿನಲ್ಲಿ ಸಂಗ್ರಹಿಸಿಟ್ಟು ಬಳಿಕ ಮರುಪಾವತಿ ಮಾಡಲು ಸಹಾಯ ಮಾಡಿದ್ದರು ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.
ಆದಾಗ್ಯೂ, ಆರೋಪಿಗಳು ಸ್ವಸಹಾಯ ಗುಂಪುಗಳು ನೀಡಿದ ಸಂಪೂರ್ಣ ಮರುಪಾವತಿ ಮೊತ್ತವನ್ನು ಹಾಗೆಯೇ ಠೇವಣಿ ಇಡಲು ವಿಫಲರಾಗಿದ್ದು ಮತ್ತು ಕಂತುಗಳ ಒಂದು ಭಾಗದ ಮೊತ್ತವನ್ನು ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವ ಮೂಲಕ ಸ್ವಸಹಾಯ ಗುಂಪುಗಳಿಗೆ ಮೋಸ ಮಾಡಿದ್ದರು.
ಇನ್ನು ಈ ಸ್ವಸಹಾಯ ಗುಂಪುಗಳ ವಂಚನೆಯನ್ನು ಮುಚ್ಚಿಹಾಕಲು ಆರೋಪಿಗಳು ಯುಬಿಐ ಬ್ಯಾಂಕ್ ವ್ಯವಸ್ಥಾಪಕ ರಾಮಕೃಷ್ಣ ಪಿ ಸಹಭಾಗಿತ್ವದಲ್ಲಿ, ರಾಜ್ಯ ಸರ್ಕಾರ ಮೀನುಗಾರ ಸ್ವಸಹಾಯ ಗುಂಪುಗಳಿಗಾಗಿ ಪರಿಚಯಿಸಿದ ಸಾಲ ಮನ್ನಾ ಯೋಜನೆಯಡಿಯಲ್ಲಿ, ಸರಿಯಾದ ದಾಖಲೆಗಳಿಲ್ಲದೆ 58 ಅನರ್ಹ ಸ್ವಸಹಾಯ ಗುಂಪುಗಳಿಗೆ ಸಾಲ ಮನ್ನಾ ಅರ್ಜಿ ಸಲ್ಲಿಸಿದ್ದರು. ಆ ಮೂಲಕ ಆರೋಪಿಗಳು 1.66 ಕೋಟಿ ರೂ.ಗಳಷ್ಟು ಅಕ್ರಮ ಆದಾಯ ಗಳಿಸಿದ್ದರು ಮತ್ತು ಇದರ ಒಂದು ಭಾಗವನ್ನು ಅನರ್ಹ ಸ್ವಸಹಾಯ ಗುಂಪುಗಳ ಸಾಲಗಳನ್ನು ವಸೂಲಿ ಮಾಡಲು ಬಳಸಿಕೊಂಡಿದ್ದು, ಉಳಿದ ಹಣವನ್ನು ವಿವಿಧೋದ್ದೇಶಗಳಿಗೆ ಬಳಸಿಕೊಂಡಿದ್ದಾರೆ.
ಮೀರತ್, ಮಾರ್ಚ್ 27: ಮೀರತ್ನ ಸರ್ರಾಫಾ ಮಾರುಕಟ್ಟೆಗೆ ಬಂದಿದ್ದ ವಕೀಲರೊಬ್ಬರು ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದೀರಿ ಎಂದು ಜಗಳ ಆರಂಭಿಸಿದ ಅಲ್ಲಿನ ಅಂಗಡಿಯ ವ್ಯಾಪಾರಿಯೊಬ್ಬರು ಬಳಿಕ ಆ ವಕೀಲರಿಗೆ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ. ತಮ್ಮ ಮೇಲಾದ ಹಲ್ಲೆಯನ್ನು ವಕೀಲರು ಪ್ರತಿಭಟಿಸಿದಾಗ ಅವರನ್ನು ಕೆಳಗೆ ಬೀಳಿಸಿ ಥಳಿಸಲಾಯಿತು. ಅವರ ಮೂಗಿನ ಮೂಳೆ ಮುರಿದಿದೆ. ಈ ಇಡೀ ಘಟನೆ ಸಿಸಿಟಿವಿಯಲ್ಲಿ (Viral Video) ಸೆರೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ