Category Archives: Blog

Your blog category

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು – Kannada News | Man was brutally beaten for coughing in front of the house in Ramanagar, Later died in Hospital

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ.

ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು

ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ ಎನ್ನಲಾಗಿದೆ. ಈ ವೇಳೆ ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿದಂತೆ ಇತರರು ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ತಕ್ಷಣ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ – Kannada News | Married woman physically harassed by father in law police complaint lodged

ಬೆಂಗಳೂರು, ಫೆಬ್ರವರಿ 11: ನನ್ನ ಆಸೆ ಈಡೇರಿಸು ಎಂದು ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಥಣಿಸಂಧ್ರದ ಪ್ರತಿಷ್ಟಿತ ಸ್ಕೂಲ್ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಆಕೆಯ ಗಂಡನ ತಂದೆ, ಕಾವಲ್ ಬೈರಸಂಧ್ರದ ಶಾಲೆಯೊಂದರ ಫೌಂಡರ್ ಆಗಿರುವ ವ್ಯಕ್ತಿ ಕಿರುಕುಳ ನೀಡಿರುವ ಬಗ್ಗೆ ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲೆಂದರಲ್ಲಿ ಲೈಂಗಿಕ ಕಿರುಕುಳ ಆರೋಪ

2007ರಲ್ಲಿ ಮದುವೆಯಾಗಿದ್ದ ಸಂತ್ರಸ್ತೆಗೆ ಆರಂಭದಲ್ಲಿ ಜೀವನ ಚೆನ್ನಾಗಿಯೇ ಇತ್ತು. ಆದರೆ ಬರ ಬರುತ್ತಾ ಮಾವನ ಕಾಟ ಶುರುವಾಗಿದೆ. 2005ರಲ್ಲಿ ಪತ್ನಿಯ ಸಾವಿನ ಬಳಿಕ ಆರೋಪಿ 2006ರಲ್ಲಿ ಎರಡನೇ ಮದುವೆಯಾಗಿದ್ದ. ಹೀಗಿದ್ದರೂ ಸೊಸೆಯ ಮೇಲೆ ಕಣ್ಣು ಹಾಕಿದ್ದ ಈತ, ಆಕೆಯ ಜೊತೆ ಅನುಚಿತ ವರ್ತನೆ ತೋರಲು ಶುರುಮಾಡಿದ್ದಾನೆ. ಪಕ್ಕದ ಅಪಾರ್ಟ್​​ಮೆಂಟ್​​ನಲ್ಲಿಯೇ ವಾಸವಿದ್ದ ಈತ, ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇರುವ ಸಮಯ ನೋಡಿಕೊಂಡು ಬಂದು ಆಕೆಗೆ ಲೈಂಗಿಕ ದೌರ್ಜನ್ಯ ನೀಡಲಾರಂಭಿಸಿದ್ದ. ಅಸಭ್ಯ ಪದಗಳನ್ನು ಮಾತನಾಡುವ ಜೊತೆಗೆ ಬಲವಂತಾಗಿ ಬಟ್ಟೆ ಬಿಚ್ಚಲು ಯತ್ನಿಸುತ್ತಿದ್ದ. 2020ರಿಂದಲೇ ಮಾವನ ಈ ರೀತಿಯ ವರ್ತನೆಗಳು ಆರಂಭವಾಗಿತ್ತು. ಆದ್ರೆ ಭಯಭೀತಳಾಗಿದ್ದ ಸಂತ್ರಸ್ತೆ ಎಲ್ಲವೂ ಸರಿಹೋಗಬಹುದೆಂದು ಸುಮ್ಮನಿದ್ದಳು. ಆದರೆ ಆಕೆ ಮತ್ಮತು ಮಕ್ಕಳಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಮಹಿಳೆ ಮೇಲೆ ಹಲ್ಲೆಯನ್ನೂ ನಡೆಸಿದ್ದ. ಬಳಿಕ ಅಪಾರ್ಟ್​​ಮೆಂಟ್​​ನ ಲಿಫ್ಟ್​​, ಸ್ಕೂಲ್​​ ಕ್ಯಾಬಿನ್​​ನಲ್ಲಿಯೂ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ  ಆರೋಪಿಸಲಾಗಿದೆ.

ಇದನ್ನೂ ಓದಿ: ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ; ತನಿಖೆ ವೇಳೆ ಸ್ಫೋಟಕ ಅಂಶ ಬಯಲಿಗೆ

ಮಾವನ ಕಾಟಕ್ಕೆ ಬೇಸತ್ತ ಈಕೆ ಅಂತಿಮವಾಗಿ ವಿಷಯವನ್ನು ಪತಿಗೆ ತಿಳಿಸಿದ್ದು, ಯಾಕೆ ಹೀಗೆ ಮಾಡುತ್ತಿದ್ದೀಯಾ ಎಂದು ಅವರೂ ಪ್ರಶ್ನಿಸಿದ್ದರು. ಬಳಿಕ ಹಿರಿಯರಿಂದ ಈ ಬಗ್ಗೆ ಬುದ್ಧಿಯನ್ನೂ ಹೇಳಿಸಲಾಗಿತ್ತು. ಕೆಲ ದಿನ ಸುಮ್ಮನಾಗಿದ್ದ ಆರೋಪಿ ಮತ್ತೆ ಹಳೇ ಚಾಳಿ ಮುಂದುವರಿಸಿದ್ದಾನೆ. ಸೊಸೆಯ ಸೌಂದರ್ಯದ ಬಗ್ಗೆ ಪತ್ರ ಬರೆದು ತಂದು ಆಕೆಯ ಮುಂದೆಯೇ ಓದ್ತಿದ್ದ ಈತ, ಲೈಂಗಿಕ ಕಿರುಕುಳ ನೀಡಿ ನಂತರ ಆ ಪತ್ರವನ್ನ ತಾನೇ ಇಟ್ಟುಕೊಳ್ಳುತ್ತಿದ್ದ. ಇತ್ತೀಚೆಗ ಸಂತ್ರಸ್ತೆಯ ಮೈಕೈ ಮುಟ್ಟಿ ಆರೋಪಿ ಕಿರುಕುಳ ನೀಡಿದ್ದು, ಈ ವೇಳೆ ಆಕೆ ವಿರೋಧ ವ್ಯಕ್ತಪಡಿಸಿದ ಕಾರಣ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಮಾವನ ವಿರುದ್ಧ ಕೊನೆಗೂ ಸೊಸೆ ಪೊಲೀಸರಿಗೆ ದೂರು ನೀಡಿದ್ದಾಳೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್ – Kannada News | R Ashwin Backed Pak’s Usman Tariq Bowling Action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬ ರೀತಿಯ ಬೌಲಿಂಗ್​ಗೆ ಶೈಲಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಭಾರತೀಯ ಕ್ರಿಕೆಟಿಗ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನಿಸಿದ್ದಾರೆ.

“ಫುಟ್​ಬಾಲ್ ಆಟಗಾರರಿಗೆ ಪೆನಾಲ್ಟಿ ರನ್-ಅಪ್ ಸಮಯದಲ್ಲಿ ನಿಲ್ಲಲು ಅವಕಾಶ ನೀಡುವುದಿಲ್ಲ. ಇದು ಹೇಗೆ ಸರಿ? ಆಕ್ಷನ್ – ಎಲ್ಲವೂ ಒಳ್ಳೆಯದು. ಆದರೆ ಈ ವಿರಾಮ? ಅದು ಕೂಡ ಚೆಂಡೆಸೆಯುವ ಮುನ್ನ. ಇದು ಗಂಭೀರ ವಿಷಯ, ಇದನ್ನೆಲ್ಲಾ ಮುಂದುವರೆಸಲು ಅನುಮತಿಸಬಾರದು!” ಎಂಬಾರ್ಥದಲ್ಲಿ ಶ್ರೀವಾಸ್ತವ್ ಗೋಸ್ವಾಮಿ X ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ರವಿಚಂದ್ರನ್ ಅಶ್ವಿನ್, “ಫುಟ್​ಬಾಲ್​ನಲ್ಲಿ ಇದನ್ನು ಅನುಮತಿಸುವುದಿಲ್ಲ ಎಂಬುದನ್ನು ಒಪ್ಪಿಕೊತ್ತೇನೆ! ಆದರೆ ಬ್ಯಾಟರ್ ತನ್ನ ಸ್ಟಾನ್ಸ್ ತೆಗೆದುಕೊಂಡ ನಂತರ, ಅಂಪೈರ್ ಅಥವಾ ಬೌಲರ್‌ಗೆ ತಿಳಿಸದೆ ಸ್ವಿಚ್ ಹಿಟ್ ಅಥವಾ ರಿವರ್ಸ್ ಶಾಟ್ ಹೊಡೆಯಲು ಅನುಮತಿಸಲಾಗುತ್ತದೆ.

ಬ್ಯಾಟರ್​ಗೆ ಹೀಗೆ ಅನುಮತಿಸಬಹುದಾದರೆ, ನಿರ್ಬಂಧಗಳು ಬೌಲರ್‌ಗೆ ಮಾತ್ರ ಏಕೆ ಸೀಮಿತವಾಗಿವೆ?. ವಾಸ್ತವವಾಗಿ ಬೌಲರ್ ಅಂಪೈರ್‌ಗೆ ತಿಳಿಸದೆ ತಾನು ಬೌಲ್ ಮಾಡುವ ತೋಳನ್ನು ಬದಲಾಯಿಸಲು ಅನುಮತಿಸಲಾಗುವುದಿಲ್ಲ!  ಮೊದಲು ಆ ನಿಯಮವನ್ನು ಬದಲಾಯಿಸಬೇಕು” ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ.

ಈ ಮೂಲಕ ಪಾಕಿಸ್ತಾನ್ ಸ್ಪಿನ್ನರ್​ನ ಲೇಟ್ ಎಸೆತಗಳನ್ನು ರವಿಚಂದ್ರನ್ ಅಶ್ವಿನ್ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಅಂದರೆ ಇಲ್ಲಿ ಬ್ಯಾಟರ್​ಗಳು ಚೆಂಡೆಸೆದ ಬಳಿಕ ಯಾವುದೇ ರೀತಿಯಲ್ಲೂ ಬೇಕಿದ್ದರೂ ಬ್ಯಾಟ್ ಬೀಸಬಹುದು. ಉದಾಹರಣೆಗೆ ರೈಟ್ ಹ್ಯಾಂಡ್ ಬ್ಯಾಟರ್, ಚೆಂಡು ಬರುವಾಗ ಲೆಫ್ಟ್ ಹ್ಯಾಂಡ್ ಆಗಿ ಬ್ಯಾಟ್ ಬೀಸಲು ಅವಕಾಶವಿದೆ.

ಆದರೆ ಬೌಲರ್​ಗಳಿಗೆ ಇಂತಹ ಯಾವುದೇ ಆಯ್ಕೆ ಇಲ್ಲ. ಒಂದು ವೇಳೆ ಬೌಲರ್ ಬಲಗೈ ಬದಲು ಎಡಗೈನಲ್ಲಿ ಚೆಂಡೆಸೆಯಲು ಮುಂದಾದರೆ ಅಂಪೈರ್​ಗೆ ತಿಳಿಸಬೇಕು. ಅದೇ ಬ್ಯಾಟರ್​ ಸ್ವಿಚ್ ಹಿಟ್ ಅಥವಾ ರಿವರ್ಸ್ ಸ್ವೀಪ್ ಮಾಡುತ್ತೇನೆ ಎಂಬುದನ್ನು ಅಂಪೈರ್​ಗೆ ತಿಳಿಸುವ ಅವಶ್ಯಕತೆಯಿಲ್ಲ. ಅಂದರೆ ಇಲ್ಲಿ ಬ್ಯಾಟರ್ ಕೂಡ ತನ್ನ ಬ್ಯಾಟಿಂಗ್ ಶೈಲಿಯನ್ನು ಬದಲಿಸುವುದಲ್ಲವೇ? ಇದಾಗ್ಯೂ ಎಲ್ಲಾ ನಿಯಮಗಳು ಬೌಲರ್​ಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಅಶ್ವಿನ್ ಪ್ರಶ್ನಿಸಿದ್ದಾರೆ.

ಇತ್ತ ವಿಭಿನ್ನ ಶೈಲಿಯ ಬೌಲಿಂಗ್ ಮೂಲಕ ಉಸ್ಮಾನ್ ತಾರಿಖ್ ಈಗಾಗಲೇ ಸಂಚಲನ ಸೃಷ್ಟಿಸಿದ್ದಾರೆ. ಅದರಲ್ಲೂ ಲೇಟ್ ಎಸೆತಗಳ ಮೂಲಕ ಬ್ಯಾಟರ್​​ನ ಮೂವ್​ಮೆಂಟ್​ ಗ್ರಹಿಸುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೆ ಶ್ರೀವಾಸ್ತವ್ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಆದರೆ ಉಸ್ಮಾನ್ ತಾರಿಖ್​ಗೂ ಮುನ್ನವೇ ರವಿಚಂದ್ರನ್ ಅಶ್ವಿನ್ ಕ್ರಿಕೆಟ್ ಅಂಗಳದಲ್ಲಿ ಇಂತಹ ಲೇಟ್ ಎಸೆತಗಳನ್ನು ಎಸೆದಿದ್ದರು ಎಂಬುದೇ ಸತ್ಯ. 2013 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಇಂಗ್ಲೆಂಡ್ ತಂಡಕ್ಕೆ 6 ರನ್ ಬೇಕಿದ್ದಾಗ ಅಶ್ವಿನ್ ಲೇಟ್ ಎಸೆತದ ಮೂಲಕ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ಇದೀಗ ಉಸ್ಮಾನ್ ತಾರಿಖ್​ಗೆ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೇ ಅಶ್ವಿನ್ ಅವರ ಈ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Source link

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು – Kannada News | Truck Driver’s Timely Brake Saves Youths Riding Atop Moving SUV in Haryana

ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು.  ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್​ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ ಟ್ರಕ್​ ಚಕ್ರ ಹತ್ತುವುದಂತೂ ಪಕ್ಕಾ ಆಗಿತ್ತು. ಅಪಘಾತದ ವಿಡಿಯೋ ಇಲ್ಲಿದೆ ನೊಡಿ. ಹರಿಯಾಣ ನೋಂದಣಿಯ ವಾಹನ ಅದಾಗಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

2 ಕಂತು ಇಎಂಐ ಕಟ್ಟಿಲ್ಲವೆಂದು ಜೆಸಿಬಿಯನ್ನೇ ಹರಾಜು ಹಾಕಿದ ಬ್ಯಾಂಕ್: 10 ದಿನಗಳಿಂದ ಧರಣಿ ನಡೆಸುತ್ತಿರುವ ತಾಯಿ-ಮಗ – Kannada News | Mother and Son Protest Outside HDFC Bank in Chikkamagaluru After JCB Seized and Auctioned Over EMI Default

ಬ್ಯಾಂಕ್ ಎದುರು ಧರಣಿ ನಡೆಸುತ್ತಿರುವ ತಾಯಿ-ಮಗImage Credit source: tv9

ಚಿಕ್ಕಮಗಳೂರು, ಫೆಬ್ರವರಿ 11: ಕೇವಲ ಎರಡು ಕಂತು ಇಎಂಐ (EMI) ತಡವಾದ ಕಾರಣ ಜೆಸಿಬಿ ವಾಹನವನ್ನು ಸೀಜ್ ಮಾಡಿ ಹರಾಜು ಮಾಡಲಾಗಿದೆ ಎಂದು ಆರೋಪಿಸಿ ತಾಯಿ ಮತ್ತು ಮಗ ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿರುವ ಹೆಚ್​ಡಿಎಫ್​ಸಿ (HDFC) ಬ್ಯಾಂಕ್ ಮುಂದೆ ಹತ್ತಿ ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಚಿಕ್ಕಮಗಳೂರು (Chikkamagaluru) ತಾಲೂಕಿನ ಗೌಡನಹಳ್ಳಿ ಗ್ರಾಮದ ಮಂಜುನಾಥ್ ಅವರು ಜೆಸಿಬಿ ಖರೀದಿಸಲು ಐದು ವರ್ಷಗಳ ಅವಧಿಗೆ HDFC ಬ್ಯಾಂಕ್‌ನಿಂದ ಸುಮಾರು 29 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಈ ವೇಳೆ 7 ಲಕ್ಷ ರೂಪಾಯಿ ಮುಂಗಡವಾಗಿ ಪಾವತಿಸಿ, ಉಳಿದ ಹಣವನ್ನು ತಿಂಗಳ EMI ರೂಪದಲ್ಲಿ ಕಟ್ಟುತ್ತಿದ್ದರು. ಸುಮಾರು ಒಂದು ವರ್ಷ ಆರು ತಿಂಗಳು ನಿಯಮಿತವಾಗಿ ಕಂತು ಕಟ್ಟಿದ ಬಳಿಕ, ಎರಡು ತಿಂಗಳು ಕಂತು ತಡವಾದ ಹಿನ್ನೆಲೆ ಮೂರನೇ ತಿಂಗಳಲ್ಲಿ ಬ್ಯಾಂಕ್ ಜೆಸಿಬಿಯನ್ನು ಸೀಜ್ ಮಾಡಿದೆ ಎಂದು ಆರೋಪಿಸಲಾಗಿದೆ.

ಸಾಲದ ಅವಧಿ ಬಾಕಿ ಇರುವಾಗಲೇ ಬ್ಯಾಂಕ್ ಜೆಸಿಬಿಯನ್ನು ಹರಾಜು ಮೂಲಕ ಮಾರಾಟ ಮಾಡಿರುವುದಾಗಿ ಮಂಜುನಾಥ್ ಆರೋಪಿಸಿದ್ದಾರೆ. ಸಂಪೂರ್ಣ ಬಾಕಿ ಇರುವ 22.5 ಲಕ್ಷ ರೂಪಾಯಿ ಪಾವತಿಸಿ ವಾಹನವನ್ನು ಪಡೆದುಕೊಳ್ಳಬಹುದು ಎಂದು ಬ್ಯಾಂಕ್ ಹೇಳಿದ್ದರೂ, ಹಣ ತೆಗೆದುಕೊಂಡು ಹೋದಾಗಲೇ ಜೆಸಿಬಿ ಮಾರಾಟವಾಗಿದೆ ಎಂದು ಆರೋಪಿಸಲಾಗಿದೆ.

ಜೆಸಿಬಿ ಮಾರಾಟವಾದ ಬಳಿಕವೂ ಬ್ಯಾಂಕ್‌ಗೆ ಇನ್ನೂ 1.75 ಲಕ್ಷ ರೂಪಾಯಿ ಬಾಕಿ ಇದ್ದು ಅದನ್ನು ಪಾವತಿಸುವಂತೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಮಂಜುನಾಥ್ ಕುಟುಂಬ ಆರೋಪಿಸಿದೆ. ಸಂಪೂರ್ಣ ಹಣ ಪಾವತಿಸಲು 15 ದಿನಗಳ ಅವಧಿ ನೀಡಿದರೂ, ಆ ಅವಧಿ ಪೂರ್ಣಗೊಳ್ಳುವ ಮುನ್ನವೇ ಜೆಸಿಬಿಯನ್ನು ಮಾರಾಟ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಸಿಬಿಯೇ ತಮ್ಮ ಜೀವನಕ್ಕೆ ಆಧಾರವಾಗಿದ್ದು, ಅದನ್ನು ವಾಪಸ್ ನೀಡುವಂತೆ ಒತ್ತಾಯಿಸಿ ಮಂಜುನಾಥ್ ಹಾಗೂ ಅವರ ತಾಯಿ ಕಳೆದ 10 ದಿನಗಳಿಂದ ಬ್ಯಾಂಕ್ ಮುಂದೆ 24 ಗಂಟೆಗಳೂ ಧರಣಿ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಸಹ ಬ್ಯಾಂಕ್ ಮುಂದೆ ಮಲಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ

ಜೆಸಿಬಿಯ ಮೌಲ್ಯಕ್ಕಿಂತ ಕಡಿಮೆ ದರಕ್ಕೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬ, ತಮ್ಮ ಜೆಸಿಬಿಯನ್ನು ವಾಪಸ್ ನೀಡಿ ಬಾಕಿ ಹಣವನ್ನು ಕಟ್ಟಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ HDFC ಬ್ಯಾಂಕ್ ವಿರುದ್ಧ ಸ್ಥಳೀಯರಲ್ಲೂ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಸದ್ಯ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕ ವಿರುದ್ಧ ಸ್ಪಿನ್ನಾಸ್ತ್ರ ಬಳಸಿದ ಪಾಕಿಸ್ತಾನ್ – Kannada News | T20 World Cup 2026: Pakistan Beat USA First Time

ಟಿ20 ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಕೊಲಂಬೊದ ಎಸ್​ಎಸ್​ಸಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಪರ ಸಾಹಿಬ್​ಝಾದ ಫರ್ಹಾನ್ 41 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 6 ಫೋರ್​ ಒಳಗೊಂಡಂತೆ ಒಟ್ಟು 73 ರನ್ ಚಚ್ಚಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 190 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವನ್ನು ಕಟ್ಟಿ ಹಾಕಲು ಪಾಕಿಸ್ತಾನ್ ಸ್ಪಿನ್ನಾಸ್ತ್ರ ಬಳಸಿದ್ದು ವಿಶೇಷ. ಅಂದರೆ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ 20 ಓವರ್​ಗಳಲ್ಲಿ 16 ಓವರ್​ಗಳನ್ನು ಸ್ಪಿನ್ನರ್​ಗಳಿಂದಲೇ ಹಾಕಿಸಿದ್ದರು. ಈ ಮೂಲಕ ಯುಎಸ್​ಎ ತಂಡವನ್ನು 20 ಓವರ್​ಗಳಲ್ಲಿ 158 ರನ್​ಗಳಿಗೆ ನಿಯಂತ್ರಿಸುವಲ್ಲಿ ಪಾಕಿಸ್ತಾನ್ ಯಶಸ್ವಿಯಾಗಿದ್ದಾರೆ.

ವಿಶೇಷ ಎಂದರೆ ಪಾಕಿಸ್ತಾನ್ ತಂಡವು ಟಿ20 ಪಂದ್ಯದಲ್ಲಿ 16 ಓವರ್​ಗಳನ್ನು ಸ್ಪಿನ್ನರ್​ನಿಂದ ಹಾಕಿಸುತ್ತಿರುವುದು ಇದು 2ನೇ ಬಾರಿ. ಇದಕ್ಕೂ ಮುನ್ನ 2012 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಪಿನ್ನರ್​ಗಳಿಂದ 18 ಓವರ್​ಗಳನ್ನು ಮಾಡಿಸಲಾಗಿತ್ತು. ಇದೀಗ 14 ವರ್ಷಗಳ ಬಳಿಕ ಮತ್ತೊಮ್ಮೆ ಪಾಕ್ ತಂಡವು ಸ್ಪಿನ್ನಾಸ್ತ್ರ ಪ್ರಯೋಗಿಸಿದ್ದಾರೆ. ಈ ಸ್ಪಿನ್ನಾಸ್ತ್ರದ ಮೂಲಕ ಯುಎಸ್​ಎ ವಿರುದ್ಧ 32 ರನ್​ಗಳ ಜಯ ಸಾಧಿಸಿದೆ.

 

Source link

ಜನ ಒಳಗಿದ್ದಾಗಲೇ ಪುರಸಭೆ ಕಟ್ಟಡಕ್ಕೆ ಬೀಗ ಜಡಿದು ಹೋದ ನೌಕರ: ಸಿಬ್ಬಂದಿ ಒಳಗೇ ಲಾಕ್! – Kannada News | Udupi Planning Authority Staff Locked Inside Kapu Municipal Office After Door Shut by Mistake

ಉಡುಪಿ, ಫೆಬ್ರವರಿ 11: ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಜನಾ ಪ್ರಾಧಿಕಾರದ ಸಿಬ್ಬಂದಿಯನ್ನು ಕಚೇರಿ ಒಳಗೆಯೇ ಲಾಕ್ ಮಾಡಿದ ಅಚಾತುರ್ಯ ಮಂಗಳವಾರ ಸಂಜೆ ನಡೆದಿದೆ. ಇದರಿಂದಾಗಿ ಕೆಲಕಾಲ ಆತಂಕ ಹಾಗೂ ಗೊಂದಲ ಉಂಟಾಯಿತು. ಕಾಪು ಪುರಸಭೆ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಯೋಜನಾ ಪ್ರಾಧಿಕಾರದ ಕಚೇರಿಗೆ ತೆರಳಲು ಒಂದೇ ದ್ವಾರ ಇದ್ದು, ಪ್ರತಿದಿನ ಸಂಜೆ 5.30ರಿಂದ 6 ಗಂಟೆಯೊಳಗೆ ಪುರಸಭೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕುವ ಪದ್ಧತಿ ಇದೆ. ಸಾಮಾನ್ಯವಾಗಿ ಬೀಗ ಹಾಕುವ ಮೊದಲು ಒಳಗೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಮಾಹಿತಿ ನೀಡಲಾಗುತ್ತದೆ.

ಆದರೆ, ನಿಯಮಿತವಾಗಿ ಬೀಗ ಹಾಕುವ ನೌಕರ ಮಂಗಳವಾರ ಅನಾರೋಗ್ಯದಿಂದ ರಜೆ ಮಾಡಿದ್ದ ಹಿನ್ನೆಲೆ ಮತ್ತೊಬ್ಬ ಸಿಬ್ಬಂದಿ ಬೀಗ ಹಾಕಿದ್ದಾನೆ. ಈ ವೇಳೆ ಪ್ರಥಮ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಯೋಜನಾ ಪ್ರಾಧಿಕಾರದ ಸಿಬ್ಬಂದಿ ಇರುವುದನ್ನು ಗಮನಿಸದೆ ಮುಖ್ಯದ್ವಾರಕ್ಕೆ ಬೀಗ ಹಾಕಲಾಗಿದೆ. ಕೆಲಸ ಮುಗಿಸಿ ಹೊರಬರಲು ಬಂದ ಸಿಬ್ಬಂದಿ ಮುಖ್ಯದ್ವಾರದ ಬಳಿ ಬೀಗ ಹಾಕಿರುವುದನ್ನು ಕಂಡು ಬೆಚ್ಚಿಬಿದ್ದರು. ತಕ್ಷಣವೇ ಪೊಲೀಸರಿಗೆ ಕರೆ ಮಾಡಿ, ಪುರಸಭೆ ಮುಖ್ಯಾಧಿಕಾರಿಗೂ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪುರಸಭೆ ನೌಕರರು ಸ್ಥಳಕ್ಕೆ ಬಂದು ಬೀಗ ತೆರೆಯುವ ಮೂಲಕ ಒಳಗಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ – Kannada News | Father disguised as a butterfly to greet daughter at wedding

ತಾಯಿಯು ತನ್ನ ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಅಪ್ಪ ಅಂದ್ರೆನೇ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ತಂದೆ ಇಲ್ಲದ ಮಗಳು ತನ್ನ ಮದುವೆಯ ದಿನ ಅಪ್ಪನು ಹೇಳಿದ ಮಾತಿನಂತೆ ನಡೆದದ್ದನ್ನು ಕಂಡು ಭಾವುಕಳಾಗಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಿಮ್ಮನ್ನು ಹಾರೈಸಲು ಬಂದಿದ್ದಾರೆ ಎಂದು ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಸೈನ್ಸ್ ಗರ್ಲ್’ (@sciencegirl) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್‌ಗೆ ‘ಪ್ರೀತಿ ಎಂಬುದು ಕಣ್ಣಿಗೆ ಕಾಣದ ರೂಪದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಶೀರ್ಷಿಕೆ ನೀಡಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಹೊಸದಾಗಿ ಮದುವೆಯಾದ ಜೋಡಿ ವೇದಿಕೆಯ ಮೇಲೆ ನಿಂತಿರುವುದನ್ನು ಕಾಣಬಹುದು. ಹಾರಿಬಂದ ಚಿಟ್ಟೆಯೊಂದು ವಧುವಿನ ಸುತ್ತಲೂ ಸುಳಿದು, ಆಕೆಯ ಕೈಯಲ್ಲಿದ್ದ ಹೂವಿನ ಬೊಕ್ಕೆಯ ಮೇಲೆ ಕುಳಿತಿದೆ.. ಆ ಬಳಿಕ ತಲೆಯ ಮೇಲೆ ಧರಿಸಿದ್ದ ದುಪಟ್ಟಾದ ಮೇಲೆ ಕುಳಿತು ಆಶೀರ್ವಾದ ಮಾಡಿದ್ದಂತೆ ಕಾಣಿಸುತ್ತಿದೆ. ಇದೇ ವೇಳೆ ಚಿಟ್ಟೆಯ ರೂಪದಲ್ಲಿ ತಂದೆ ಬಂದಿದ್ದಾರೆ ಎಂದು ನೆನೆದು ವಧು ಭಾವುಕಳಾಗಿದ್ದಾಳೆ. ಆಕೆಯ ಪತಿಯೂ ಚಿಟ್ಟೆಯನ್ನು ಓಡಿಸುತ್ತಿರುವ ದೃಶ್ಯವನ್ನು ಕಾಣಬಹುದು

ಇದನ್ನೂ ಓದಿ: ಮಗಳ ಭವಿಷ್ಯಕ್ಕಾಗಿ ತಂದೆಯ ಹೋರಾಟ; ತನ್ನ ಆಟೋದಲ್ಲಿ ಮಗಳನ್ನು ಮಲಗಿಸಿ ಆಟೋ ಓಡಿಸುವ ವ್ಯಕ್ತಿ

ಈ ವಿಡಿಯೋ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದ್ದು, ಒಬ್ಬ ಬಳಕೆದಾರ, ದೈಹಿಕವಾಗಿ ಅಪ್ಪ ಇಲ್ಲದಿದ್ದರೂ ಮಾನಸಿಕವಾಗಿ ಅಪ್ಪ ಜೀವಂತ ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಪ್ಪನ ಆಗಮನ ಮಗಳಿಗೆ ಎಷ್ಟು ಖುಷಿ ತಂದಿದ್ದೆ ಎನ್ನುವುದನ್ನು ಆಕೆಯ ಕಣ್ಣೀರೇ ಹೇಳುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅಪ್ಪನ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು! – Kannada News | Vijayanagara PWD Officials Trapped by Lokayukta for rs 1 Lakh Bribe

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ.

ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್ ಹಾಗೂ ಅಕೌಂಟೆಂಟ್ ಮಾರುತಿ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಮಹೇಶ್ ಹಲಗೇರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್ ಛಲವಾದಿ ನೇತೃತ್ವದಲ್ಲಿ ಪಿಐಗಳಾದ ರಾಜೇಶ್ ಲಮಾಣಿ, ಅಮರೇಶ್ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಟ್ರ್ಯಾಪ್ ನಡೆಸಿ, ಲಂಚದ ಹಣ ಸ್ವೀಕರಿಸುವಾಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈ ಮೊದಲೂ ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕಿದ್ದ ಅಧಿಕಾರಿಗಳು

ಕಳೆದ ತಿಂಗಳು ಕಲಬುರಗಿಯಲ್ಲಿ ಕಮಲಾಪುರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಶಶಿಕುಮಾರ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದರು. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಪುಟ್ಟ ಕಿಶನ್ ರಾಥೋಡ್ ಅವರಿಂದ 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿತ್ತು. ಈ ಕುರಿತು ಕಿಶನ್ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಹಣ ಸ್ವೀಕರಿಸುವ ಕ್ಷಣದಲ್ಲೇ ಶಶಿಕುಮಾರ್ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು.

ಇದನ್ನೂ ಓದಿ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಇನ್ನೊಂದು ಪ್ರಕರಣದಲ್ಲಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಪ್ರಕರಣದಲ್ಲಿ ಬೆದರಿಕೆ ಹಾಕಿ ಒಟ್ಟು 5 ಲಕ್ಷ ರೂ. ಬೇಡಿಕೆ ಇಟ್ಟಿದ್ದರೆಂದು ದೂರಿನಲ್ಲಿ ಉಲ್ಲೇಖವಾಗಿತ್ತು. ಈಗಾಗಲೇ 1 ಲಕ್ಷ ರೂ. ಪಡೆದಿದ್ದ ಅವರು, ಉಳಿದ ಹಣ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

Source link