Category Archives: Blog

Your blog category

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಬೆಂಗಳೂರು, ಮಾ.25: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ (Pre-monsoon showers) ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆಯೂ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಮಳೆಯ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮರಗಳು ಅಥವಾ ವಿದ್ಯುತ್ ಕಂಬಗಳು ಬೀಳುವ ಸಂಭವವಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಬೆಳೆಗಳಿಗೆ ಹಾನಿಯಾಗದಂತೆ ರೈತರು ಮುಂಜಾಗ್ರತೆ ವಹಿಸುವುದು ಉತ್ತಮ.

ಇದನ್ನೂ ಓದಿ: ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ಬೆಂಗಳೂರು, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ತೆರೆದ ಮೈದಾನ, ಮರಗಳ ಕೆಳಗೆ ಅಥವಾ ಜಲಮೂಲಗಳ ಹತ್ತಿರ ಇರಬೇಡಿ. ಸುಭದ್ರವಾದ ಕಟ್ಟಡಗಳ ಒಳಗೆ ಆಶ್ರಯ ಪಡೆಯಿರಿ ಎಂದು ಹವಾಮಾನ ಇಲಾಖೆ ಹೇಳಿದೆ. ವಾಹನಗಳನ್ನು ಮರಗಳ ಕೆಳಗೆ ನಿಲ್ಲಿಸಬೇಡಿ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಭದ್ರಪಡಿಸಿಕೊಳ್ಳಿ. ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡಿ ಎಂದು ಮುನ್ನಚ್ಚರಿಕೆಯನ್ನು ನೀಡಿದ್ದಾರೆ.

ದಿನ ಮಳೆಯ ಸಾಧ್ಯತೆ ಗುಡುಗು, ಮಿಂಚು ಬಿರುಗಾಳಿ ವೇಗ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ ಕ್ರಮಗಳು
1 ಸಾಧಾರಣ ಹೌದು 30-40 ಕಿ.ಮೀ. ಇಲ್ಲ ತೆರೆದ ಮೈದಾನ, ಮರಗಳ ಕೆಳಗೆ ಇರಬೇಡಿ
2 ಹೆಚ್ಚಿದ ಮಳೆ ಹೌದು 40-50 ಕಿ.ಮೀ. ಕೆಲವು ಕಡೆ ಸುಭದ್ರ ಕಟ್ಟಡಗಳ ಒಳಗೆ ಆಶ್ರಯ ಪಡೆಯಿರಿ
3 ಸಾಧಾರಣ ಹೌದು 30-40 ಕಿ.ಮೀ. ಇಲ್ಲ ವಾಹನಗಳನ್ನು ಮರಗಳ ಕೆಳಗೆ ನಿಲ್ಲಿಸಬೇಡಿ
4 ಕಡಿಮೆಯಾಗುವ ಮಳೆ ಹೌದು 20-30 ಕಿ.ಮೀ. ಇಲ್ಲ ಮಳೆಯ ಸಮಯದಲ್ಲಿ ಜಲಮೂಲಗಳ ಹತ್ತಿರ ಇರಬೇಡಿ
5 ಕಡಿಮೆ ಹೌದು 10-20 ಕಿ.ಮೀ. ಇಲ್ಲ ಅನಿವಾರ್ಯವಿದ್ದರೆ ಮಾತ್ರ ಹೊರಗೆ ಹೋಗಿ

ಇನ್ನು ಇಂದು (ಮಾ.25) ಬೆಂಗಳೂರು ನಗರದಲ್ಲಿ ಸಂಜೆ ಹೊತ್ತಿಗೆ ಕೆಲವೊಂದು ಕಡೆ ಮಳೆಯಾಗುವ ಸಾಧ್ಯತೆಗಳು ಇದೆ. ಗರಿಷ್ಠ 33°C ಮತ್ತು ಕನಿಷ್ಠ 20°C ದಾಖಲಾಗುವ ಸಾಧ್ಯತೆಯಿದೆ. ಗಂಟೆಗೆ 10 ಕಿ.ಮೀ ವೇಗದಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸಲಿದೆ. ರಾಜ್ಯದ ಇತರ ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

IPL 2026: ಆರ್​ಸಿಬಿ, ಆರ್​ಆರ್ ಮಾರಾಟದಿಂದ ಬಿಸಿಸಿಐಗೆ ಹರಿದು ಬಂತು ಸಾವಿರ ಕೋಟಿಗೂ ಅಧಿಕ ಆದಾಯ

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಲೀಗ್​ನ ಎರಡು ಚಾಂಪಿಯನ್‌ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ನೇತೃತ್ವದ ಕನ್ಸಾರ್ಟಿಯಂ 15000 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ ಜಂಟಿಯಾಗಿ 16,660 ಕೋಟಿ ರೂ.ಗೆ ಖರೀದಿ ಮಾಡಿವೆ. ಈ ಎರಡು ತಂಡಗಳ ಮಾರಾಟದಿಂದ ಬಿಸಿಸಿಐಗೂ (BCCI) ಸಾವಿರ ಕೋಟಿಗೂ ಅಧಿಕ ಮೊತ್ತದ ಲಾಭ ಬಂದಿದೆ.

ಬಿಸಿಸಿಐಗೆ 1,583 ಕೋಟಿ

ಐಪಿಎಲ್‌ ನಿಯಮಗಳ ಪ್ರಕಾರ, ಒಂದು ತಂಡದ ಮಾಲೀಕರು ಬದಲಾದಾಗ, ತಂಡವನ್ನು ಖರೀದಿಸಿದ ಮೊತ್ತದ ಶೇಕಡಾ 5 ರಷ್ಟು ಮೊತ್ತವನ್ನು ಶುಲ್ಕವಾಗಿ ಬಿಸಿಸಿಐ ಮಂಡಳಿಯಲ್ಲಿ ಠೇವಣಿ ಇಡಬೇಕು. ಈ ನಿಯಮದ ಪ್ರಕಾರ, 16,660 ಕೋಟಿ ರೂಪಾಯಿಗಳಿಗೆ ಮಾರಾಟವಾದ ಆರ್​ಸಿಬಿ ಶುಲ್ಕದ ರೂಪದಲ್ಲಿ 833 ಕೋಟಿ ರೂಪಾಯಿಗಳನ್ನು ಬಿಸಿಸಿಐನಲ್ಲಿ ಠೇವಣಿ ಇಡಬೇಕಾಗಿದೆ. ಹಾಗೆಯೇ 15,000 ಕೋಟಿ ರೂಪಾಯಿಗಳಿಗೆ ಮಾರಾಟವಾದ ರಾಜಸ್ಥಾನ ರಾಯಲ್ಸ್ ಕೂಡ 750 ಕೋಟಿ ರೂಪಾಯಿಗಳನ್ನು ಠೇವಣಿ ರೂಪದಲ್ಲಿ ಇಡಬೇಕಾಗಿದೆ. ಇದರರ್ಥ ಈ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 1,583 ಕೋಟಿ ರೂಪಾಯಿಗಳನ್ನು ಪಡೆದಿದೆ.

ಅತ್ಯಂತ ದುಬಾರಿ ತಂಡ ಆರ್‌ಸಿಬಿ

ಮಾರ್ಚ್ 24, ಭಾರತೀಯ ಕ್ರಿಕೆಟ್ ಮತ್ತು ಐಪಿಎಲ್‌ಗೆ ಐತಿಹಾಸಿಕ ದಿನವಾಗಿತ್ತು. ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸರಿಸುಮಾರು ₹31,000 ಕೋಟಿಗೆ ಮಾರಾಟವಾದವು. 16,660 ಕೋಟಿಗೆ ಮಾರಾಟವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಕ್ರಿಕೆಟ್ ತಂಡ ಎನಿಸಿಕೊಂಡಿತು. ಇತ್ತ 15000 ಕೋಟಿಗೆ ಮಾರಾಟವಾದ ರಾಜಸ್ಥಾನ ರಾಯಲ್ಸ್ ಎರಡನೇ ಅತ್ಯಂತ ದುಬಾರಿ ತಂಡ ಎನಿಸಿಕೊಂಡಿದೆ.

456 ಕೋಟಿಯಿಂದ 16,600 ಕೋಟಿವರೆಗೆ; 18 ವರ್ಷಗಳಲ್ಲಿ ಆರ್​ಸಿಬಿಯನ್ನು ಆಳಿದವರಿವರು

2 ತಂಡಗಳ ಹೊಸ ಮಾಲೀಕರು ಯಾರು?

ಆರ್‌ಸಿಬಿ ಫ್ರಾಂಚೈಸಿಯನ್ನು ಆದಿತ್ಯ ಬಿರ್ಲಾ ಗ್ರೂಪ್, ಅಮೇರಿಕನ್ ಕ್ರೀಡಾ ಹೂಡಿಕೆದಾರ ಡೇವಿಡ್ ಬ್ಲಿಟ್ಜರ್ ಮತ್ತು ಅಮೇರಿಕನ್ ಖಾಸಗಿ ಇಕ್ವಿಟಿ ಸಂಸ್ಥೆ ಬ್ಲಾಕ್‌ಸ್ಟೋನ್ ಜಂಟಿಯಾಗಿ ಖರೀದಿಸಿವೆ. ಕಳೆದ ವರ್ಷ ಐಪಿಎಲ್ 2025 ಪ್ರಶಸ್ತಿಯನ್ನು ಗೆದ್ದ ಕೆಲವೇ ತಿಂಗಳುಗಳ ನಂತರ ಆರ್‌ಸಿಬಿಯ ಹಿಂದಿನ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಫ್ರಾಂಚೈಸಿಯನ್ನು ಮಾರಾಟಕ್ಕೆ ಇಟ್ಟಿತು. ರಾಜಸ್ಥಾನ್ ರಾಯಲ್ಸ್‌ಗೆ ಸಂಬಂಧಿಸಿದಂತೆ, ಕಲ್ ಸೋಮಾನಿ ಅವರ ಗುಂಪು ತಂಡವನ್ನು 15,000 ಕೋಟಿಗೆ ಖರೀದಿಸಿದೆ. ಈ ಒಪ್ಪಂದವು ಐಪಿಎಲ್ 2026 ರ ನಂತರ ಜಾರಿಗೆ ಬರಲಿದೆ ಮತ್ತು ಮುಂಬರುವ ಆವೃತ್ತಿಯ ಅಂತ್ಯದವರೆಗೆ ಮನೋಜ್ ಬಾಜಪೇಯಿ ತಂಡದ ಮಾಲೀಕರಾಗಿ ಉಳಿಯಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಇರಾನ್ ಮೇಲೆ ಇಸ್ರೇಲ್ ದಾಳಿ (Israel Attack) ನಿಂತಿಲ್ಲ. ಇಂದು ಇರಾನ್​ನ ಬುಶೆಹ್ರ್ ಪರಮಾಣು ಸ್ಥಾವರದ ಬಳಿಯ ದಾಳಿ ಇರುವ ರಿಯಾಕ್ಟರ್ ಘಟಕದ ಬಳಿಗೆ ಇಸ್ರೇಲ್​ನ ಕ್ಷಿಪಣಿ ಬಂದು ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಕೂಡ ಇಸ್ರೇಲ್​ನ ಪವರ್ ಪ್ಲಾಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗಿದೆ. ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಇತ್ತೀಚೆಗೆ ನಡೆದ ದಾಳಿಯು ಕಾರ್ಯಾಚರಣಾ ರಿಯಾಕ್ಟರ್ ಘಟಕದ ಬಳಿಗೆ ಅಪ್ಪಳಿಸಿದೆ ಎಂದು ರಷ್ಯಾದ ರಾಜ್ಯ ಪರಮಾಣು ಸಂಸ್ಥೆ ರೊಸಾಟಮ್ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.

ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

Source link

ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿರುವ ‘ಲವ್ ಮಾಕ್ಟೆಲ್ 3’ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್ 2’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳ ಅಬ್ಬರದ ನಡುವೆಯೂ ಸಹ ‘ಲವ್ ಮಾಕ್ಟೆಲ್ 3’ ಯಶಸ್ಸು ಗಳಿಸುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ರಾಘವೆಂದ್ರ ನಾಯಕ್ ಅವರುಗಳು ಡಾರ್ಲಿಂಗ್ ಕೃಷ್ಣ ಅವರು ನಮ್ಮ ಕತೆ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಅಪ್ಪ-ಮಗಳ ಬಂಧದ ಬಗ್ಗೆ ಕತೆಯನ್ನು ‘ಲವ್ ಮಾಕ್ಟೆಲ್ 3’ ಸಿನಿಮಾ ಹೊಂದಿದ್ದು, ಸಿನಿಮಾದ ಕತೆಯನ್ನು ಡಾರ್ಲಿಂಗ್ ಕೃಷ್ಣ ಅವರೇ ಬರೆದಿದ್ದಾರೆ. ಆರೋಪ ಬಂದ ಬೆನ್ನಲ್ಲೆ ಇದೀಗ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅವರುಗಳು ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹೇಳಿದ್ದೇನು? ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ! ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಬಳ್ಳಾರಿ, ಮಾ.25: ನಗರದ ಮೋತಿ ವೃತ್ತದ ಬಳಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಬಸ್‌ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಸ್ ವೇಗವಾಗಿ ಸಾಗಿ, ರಸ್ತೆ ಬದಿಯಲ್ಲಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ನಂತರ ಹಣ್ಣಿನ ಅಂಗಡಿ, ಟೀ ಅಂಗಡಿ ನುಗ್ಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಫ್ರೂಟ್ಸ್ ಅಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ. ಅಲ್ಲದೆ, ಅಪಘಾತಕ್ಕೆ ಸಿಲುಕಿದ ಆಟೋರಿಕ್ಷಾ ಕೂಡ ಜಖಂಗೊಂಡಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದು ದೊಡ್ಡ ಅನಾಹುತವನ್ನು ತಪ್ಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳ್ಳಾರಿ ನಗರ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ನಿಖರ ಕಾರಣಗಳ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಇಳಿಕೆಯ ಹಾದಿ ಬಿಟ್ಟ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು, ಮಾರ್ಚ್ 25: ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ ಸುಮಾರು 600 ರೂಗಳಷ್ಟು ಏರಿಕೆ ಪಡೆದಿದೆ. ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 13,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಸಮೀಪಕ್ಕೆ ದೌಡಾಯಿಸಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಏರಿದರೆ, ಕೆಲವೆಡೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆ ಆಗಿದೆ. ಒಂದು ಗ್ರಾಮ್​ಗೆ 15-20 ರೂಗಳಷ್ಟು ಬೆಲೆ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,34,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 25ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,667 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,445 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,526 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,667 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,445 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,445 ರೂ
  • ಚೆನ್ನೈ: 13,600 ರೂ
  • ಮುಂಬೈ: 13,445 ರೂ
  • ದೆಹಲಿ: 13,460 ರೂ
  • ಕೋಲ್ಕತಾ: 13,445 ರೂ
  • ಕೇರಳ: 13,445 ರೂ
  • ಅಹ್ಮದಾಬಾದ್: 13,450 ರೂ
  • ಜೈಪುರ್: 13,460 ರೂ
  • ಲಕ್ನೋ: 13,460 ರೂ
  • ಭುವನೇಶ್ವರ್: 13,445 ರೂ

ಇದನ್ನೂ ಓದಿ: ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (13,279 ರುಪಾಯಿ)
  • ದುಬೈ: 492.75 ಡಿರಾಮ್ (12,606 ರುಪಾಯಿ)
  • ಅಮೆರಿಕ: 139.50 ಡಾಲರ್ (13,108 ರುಪಾಯಿ)
  • ಸಿಂಗಾಪುರ: 182.70 ಸಿಂಗಾಪುರ್ ಡಾಲರ್ (13,419 ರುಪಾಯಿ)
  • ಕತಾರ್: 490 ಕತಾರಿ ರಿಯಾಲ್ (12,621 ರೂ)
  • ಸೌದಿ ಅರೇಬಿಯಾ: 499 ಸೌದಿ ರಿಯಾಲ್ (12,493 ರುಪಾಯಿ)
  • ಓಮನ್: 52.30 ಒಮಾನಿ ರಿಯಾಲ್ (12,761 ರುಪಾಯಿ)
  • ಕುವೇತ್: 40.31 ಕುವೇತಿ ದಿನಾರ್ (12,350 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?

ಬಾಲಿವುಡ್‌ನಲ್ಲಿ ಸದ್ಯ ಆ್ಯಕ್ಷನ್ ಸಿನಿಮಾಗಳದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಮತ್ತು ಅದರ ಸೀಕ್ವೆಲ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿವೆ. ಇಂತಹ ಅಬ್ಬರದ ಆ್ಯಕ್ಷನ್ ಸಿನಿಮಾಗಳ ನಡುವೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲ’ (Bhooth Bangla) ಚಿತ್ರ ಯಾವ ರೀತಿ ವಿಭಿನ್ನವಾಗಿರಲಿದೆ ಎಂಬುದನ್ನು ಸ್ವತಃ ಅಕ್ಷಯ್ ವಿವರಿಸಿದ್ದಾರೆ. ‘ನಮ್ಮದು ಧುರಂಧರ್ ರೀತಿ ಅಡಲ್ಟ್ ಸಿನಿಮಾ ಅಲ್ಲ’ ಎಂದು ಅಕ್ಷಯ್ ಕುಮಾರ್ (Akshay Kumar) ಅವರು ಹೇಳಿದ್ದಾರೆ.

ಇತ್ತೀಚೆಗೆ ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಕ್ಷಯ್ ಕುಮಾರ್, ‘ಧುರಂಧರ್ ಸಿನಿಮಾ ಅದ್ಭುತವಾಗಿದೆ, ನಾನು ಅದನ್ನು ನೋಡಿದ್ದೇನೆ. ಆದರೆ ನಮ್ಮ ಸಿನಿಮಾ ಭೂತ್ ಬಂಗ್ಲ ಸಂಪೂರ್ಣವಾಗಿ ವಿಭಿನ್ನವಾಗಿದೆ. ಧುರಂಧರ್ ವಯಸ್ಕರಿಗಾಗಿ ಮಾಡಿದ ಸಿನಿಮಾ. ಆದರೆ ಭೂತ್ ಬಂಗ್ಲ ಮಕ್ಕಳು ಮತ್ತು ಕುಟುಂಬದವರಿಗಾಗಿ ಮಾಡಲ್ಪಟ್ಟಿದೆ. ನಾವು ಸಿನಿಮಾ ಮಾಡುವಾಗ ಸದ್ಯದ ಟ್ರೆಂಡ್ ಏನಿದೆ ಎಂದು ಯೋಚಿಸಲಿಲ್ಲ. ಕಥೆ ಚೆನ್ನಾಗಿದೆಯೇ ಇಲ್ಲವೇ ಎಂಬುದನ್ನಷ್ಟೇ ಗಮನಿಸಿದ್ದೇವೆ’ ಎಂದಿದ್ದಾರೆ.

ಅನೇಕ ವರ್ಷಗಳ ನಂತರ ನಿರ್ದೇಶಕ ಪ್ರಿಯದರ್ಶನ್ ಮತ್ತು ಅಕ್ಷಯ್ ಕುಮಾರ್ ‘ಭೂತ್ ಬಂಗ್ಲ’ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಜೋಡಿ ಈ ಹಿಂದೆ ಹಲವು ಕ್ಲಾಸಿಕ್ ಕಾಮಿಡಿ ಸಿನಿಮಾಗಳನ್ನು ನೀಡಿದೆ. ಪ್ರಿಯದರ್ಶನ್ ಕೂಡ ಅಕ್ಷಯ್ ಮಾತುಗಳಿಗೆ ಧ್ವನಿಗೂಡಿಸಿದ್ದಾರೆ. ‘ಜನರು ಧುರಂಧರ್ ಅಥವಾ ಬಾರ್ಡರ್ 2 ನಂತಹ ಆ್ಯಕ್ಷನ್ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಆದರೆ ಆ ಗದ್ದಲದ ನಡುವೆ ಒಂದು ವಿರಾಮ ಬೇಕೆನಿಸಿದಾಗ ಭೂತ್ ಬಂಗ್ಲದಂತಹ ಕಾಮಿಡಿ ಸಿನಿಮಾ ಖುಷಿ ನೀಡುತ್ತದೆ’ ಎಂದು ಅವರು ಹೇಳಿದ್ದಾರೆ.

ಪ್ರಿಯದರ್ಶನ್ ಅವರು ತಮ್ಮ ಸಿನಿಮಾಗಳಲ್ಲಿ ಎಂದಿಗೂ ಅಶ್ಲೀಲತೆ ಅಥವಾ ದ್ವಂದ್ವಾರ್ಥದ ಸಂಭಾಷಣೆಗಳನ್ನು ಬಳಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ‘ಯಾವುದೇ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ನನ್ನ ಸಿನಿಮಾ ನೋಡಬಹುದು. ನಾನು ಎಂದಿಗೂ ಪೋಷಕರು ಮುಜುಗರ ಪಡುವಂತೆ ಸಿನಿಮಾ ಮಾಡುವುದಿಲ್ಲ. ಇದು ಶುದ್ಧ ಮನರಂಜನೆಯ ಚಿತ್ರ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ನೋಡಿ: ರುಂಡ ಇಲ್ಲದ ವ್ಯಕ್ತಿ ಜೊತೆ ಅಕ್ಷಯ್ ಕುಮಾರ್

‘ಭೂತ್ ಬಂಗ್ಲ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆಗೆ ಪರೇಶ್ ರಾವಲ್, ರಾಜ್‌ಪಾಲ್ ಯಾದವ್, ಟಬು ಮತ್ತು ವಮಿಕಾ ಗಬ್ಬಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಳೆಯ ಕಾಮಿಡಿ ಗ್ಯಾಂಗ್ ಮತ್ತೆ ಒಂದಾಗಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಚಿತ್ರವು ಏಪ್ರಿಲ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆ್ಯಕ್ಷನ್ ಸಿನಿಮಾಗಳ ಅಬ್ಬರದ ನಡುವೆ ಈ ಹಾರರ್-ಕಾಮಿಡಿ ಸಿನಿಮಾ ಪ್ರೇಕ್ಷಕರನ್ನು ಎಷ್ಟು ನಗಿಸಲಿದೆ ಎಂದು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್​​ಜಿ ಮನವಿ ಮೇರೆಗೆ ಸಿನಿಮಾದ ನಿರ್ಮಾಪಕರಿಗೆ ಮದ್ರಾಸ್ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.

ಡಿಸೆಂಬರ್ 16, 2024 ರಂದು ಕಲೈಪುಲಿ ಎಸ್. ತನು ಅವರ ‘ವಿ ಕ್ರಿಯೇಷನ್ಸ್’ ಮತ್ತು ಬೆಂಗಳೂರಿನ ‘ಕೆಆರ್‌ಜಿ ಸ್ಟುಡಿಯೋಸ್’ ನಡುವೆ ‘ಮ್ಯಾಕ್ಸ್’ ಚಿತ್ರದ ಕರ್ನಾಟಕ ವಿತರಣಾ ಹಕ್ಕುಗಳ ಕುರಿತು ಒಪ್ಪಂದವಾಗಿತ್ತು. ಕೆಆರ್‌ಜಿ ಸ್ಟುಡಿಯೋಸ್ ಚಿತ್ರದ ಆದಾಯ ಮತ್ತು ವೆಚ್ಚದ ಸರಿಯಾದ ಲೆಕ್ಕಪತ್ರಗಳನ್ನು ನೀಡಿಲ್ಲ ಮತ್ತು ತಮಗೆ ಬರಬೇಕಾದ ಬಾಕಿ ಹಣವನ್ನು ಪಾವತಿಸಿಲ್ಲ ಎಂದು ಆರೋಪಿಸಿ ತನು ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಸಿವಿಲ್ ಮೊಕದ್ದಮೆ ಹೂಡಿದ್ದರು. ಅಲ್ಲದೆ, 18% ಬಡ್ಡಿಯೊಂದಿಗೆ ಬಾಕಿ ಹಣ ಮತ್ತು 1 ಕೋಟಿ ರೂ. ನಷ್ಟಪರಿಹಾರಕ್ಕೂ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಈ ವಿವಾದ ಸೆಟಲ್ ಆಗುವವರೆಗೆ ಕೆಆರ್​ಜಿ ಸ್ಟುಡಿಯೋಸ್ ನಿರ್ಮಿಸಿರುವ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಸಹ ಮನವಿ ಮಾಡಿದ್ದರು.

ಇದನ್ನೂ ಓದಿ:‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?

ಕೆಆರ್‌ಜಿ ಸ್ಟುಡಿಯೋಸ್ ಈ ಮೊಕದ್ದಮೆಯನ್ನು ಮದ್ರಾಸ್ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುವುದನ್ನು ವಿರೋಧಿಸಿತ್ತು. ಒಪ್ಪಂದದ ಪತ್ರವನ್ನು ಬೆಂಗಳೂರಿನಲ್ಲಿ ಖರೀದಿಸಲಾಗಿತ್ತು, ಒಪ್ಪಂದ ನಡೆದಿದ್ದು ಸಹ ಕರ್ನಾಟಕದಲ್ಲಿಯೇ. ಚಿತ್ರವು ಪ್ರಮುಖವಾಗಿ ಕನ್ನಡ ಭಾಷೆಯದ್ದಾಗಿದೆ. ಒಪ್ಪಂದದ ಪ್ರಕಾರ ಯಾವುದೇ ವಿವಾದವಿದ್ದರೂ ಅದು ಬೆಂಗಳೂರಿನ ನ್ಯಾಯಾಲಯಗಳ ವ್ಯಾಪ್ತಿಗೆ ಬರಬೇಕು ಎಂದು ಕೆಆರ್​ಜಿ ಒತ್ತಾಯಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಒಂದು ಕುತೂಹಲಕಾರಿ ಅಂಶ ಬೆಳಕಿಗೆ ಬಂದಿತು. ಒಪ್ಪಂದದ ಪತ್ರದಲ್ಲಿ ‘ಬೆಂಗಳೂರು’ ಎಂಬ ಪದವನ್ನು ಹೊಡೆದು ಹಾಕಿ ಅದರ ಜಾಗದಲ್ಲಿ ‘ಚೆನ್ನೈ’ ಎಂದು ಬರೆಯಲಾಗಿತ್ತು. ಇದರ ಪಕ್ಕದಲ್ಲಿ ಕಲೈಪುಲಿ ತನು ಅವರ ಸಹಿ ಇತ್ತಾದರೂ, ಕೆಆರ್‌ಜಿ ಸ್ಟುಡಿಯೋಸ್ ಪ್ರತಿನಿಧಿಗಳ ಸಹಿ ಇರಲಿಲ್ಲ. ಈ ಬದಲಾವಣೆಯನ್ನು ತಮಗೆ ತಿಳಿಸದೆ ಮಾಡಲಾಗಿದೆ ಎಂದು ಕೆಆರ್‌ಜಿ ಸ್ಟುಡಿಯೋಸ್ ವಾದಿಸಿತ್ತು.

ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ಅವರು ಕೆಆರ್‌ಜಿ ಸ್ಟುಡಿಯೋಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು. ಒಪ್ಪಂದದ ಪ್ರಕಾರ ಹಣವನ್ನು ಚೆನ್ನೈನಲ್ಲಿರುವ ಕಲೈಪುಲಿ ಎಸ್ ತನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಿರುವುದರಿಂದ, ವಿವಾದದ ಒಂದು ಭಾಗ ಚೆನ್ನೈನಲ್ಲಿ ನಡೆದಂತಾಗುತ್ತದೆ. ಹೀಗಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಕೇಸ್ ನಡೆಸಲು ಅವಕಾಶ ನೀಡಿದರು. ಆದರೆ ಇದನ್ನು ವಿರೋಧಿಸಿ ಕೆಆರ್​​ಜಿ ಈಗ ಅರ್ಜಿ ಹಾಕಿದ್ದು, ಇದಕ್ಕೆ ಸಂಬಂಧಿಸಿದಂತೆ ಕಲೈಪುಲಿ ಅವರಿಗೆ ನೊಟೀಸ್ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ನಿಗದಿಪಡಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮನೆಯಲ್ಲಿ ಪಿಎನ್​ಜಿ ಕನೆಕ್ಷನ್ ಇದ್ದರೂ ಬಳಸದಿದ್ದರೆ ಎಲ್​ಪಿಜಿ ಪೂರೈಕೆ ಸ್ಥಗಿತ; ಸರ್ಕಾರದಿಂದ ಎಚ್ಚರಿಕೆ

ನವದೆಹಲಿ, ಮಾರ್ಚ್ 25: ಕೇಂದ್ರ ಸರ್ಕಾರ ಅಗತ್ಯವಿರುವಷ್ಟು ಇಂಧನ ಹಾಗೂ ಎಲ್​ಪಿಜಿ ಸಂಗ್ರಹವಿದೆ ಎಂದು ಹೇಳಿಕೆ ನೀಡುತ್ತಿದ್ದರೂ ಎಲ್​ಪಿಜಿ (LPG) ಬುಕ್ ಮಾಡಿದ ಹಲವು ದಿನಗಳ ಬಳಿಕ ಸಿಲಿಂಡರ್​ಗಳು ಸಿಗುತ್ತಿವೆ. ಇದೆಲ್ಲದರ ನಡುವೆ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಒಂದುವೇಳೆ ನಿಮ್ಮ ಮನೆಯಲ್ಲಿ ಪೈಪ್ಡ್ ಗ್ಯಾಸ್ (ಪಿಎನ್​ಜಿ) ಕನೆಕ್ಷನ್ ಇದ್ದರೂ ನೀವು ಅದನ್ನು ಬಳಸದಿದ್ದರೆ ನಿಮ್ಮ ಎಲ್​ಪಿಜಿ ಪೂರೈಕೆ ಕೂಡ ಕಟ್ ಆಗುತ್ತದೆ. ಪಿಎನ್​ಜಿ ಹಾಗೂ ಎಲ್​ಪಿಜಿ ಎರಡನ್ನೂ ಬಳಸುವಂತಿಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ನಿಮ್ಮ ಏರಿಯಾದಲ್ಲಿ ಪೈಪ್​ಲೈನ್ ಇದ್ದರೂ ನೀವು ಸಂಪರ್ಕ ಪಡೆಯದಿದ್ದರೆ 3 ತಿಂಗಳೊಳಗೆ ಸಂಪರ್ಕ ಪಡೆಯಲು ಗಡುವು ನೀಡಲಾಗಿದೆ. ಈ ಕುರಿತು ನೋಟಿಸ್ ಮೂಲಕ ಆ ಮನೆಯ ಗಮನಕ್ಕೆ ತಂದ 3 ತಿಂಗಳ ನಂತರ ಆ ಮನೆಗಳಿಗೆ ಎಲ್​ಪಿಜಿ ಪೂರೈಕೆಯನ್ನು ನಿಲ್ಲಿಸಲಾಗುತ್ತದೆ.

ಗ್ರಾಹಕರು ಪೈಪ್ಡ್ ನೈಸರ್ಗಿಕ ಅನಿಲ (PNG)ದ ಕನೆಕ್ಷನ್ ಇದ್ದರೂ ಬಳಸದಿದ್ದರೆ 3 ತಿಂಗಳ ನಂತರ ಆ ಮನೆಗಳಿಗೆ LPG ಸಿಲಿಂಡರ್‌ಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಪೈಪ್‌ಲೈನ್ ಗ್ಯಾಸ್ ಜಾಲದ ವಿಸ್ತರಣೆಯನ್ನು ವೇಗಗೊಳಿಸಲು ಮತ್ತು ಒಂದೇ ಇಂಧನ ಮೂಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳು PNG ಅನ್ನು ಅಳವಡಿಸಿಕೊಳ್ಳಲು ಸರ್ಕಾರ ಪ್ರೋತ್ಸಾಹಿಸುತ್ತಿದೆ. ಇದನ್ನು ಪೈಪ್‌ಲೈನ್‌ಗಳ ಮೂಲಕ ಅಡುಗೆಮನೆಯ ಬರ್ನರ್‌ಗಳಿಗೆ ನೇರವಾಗಿ ಸರಬರಾಜು ಮಾಡಲಾಗುತ್ತದೆ. ಇದು ಗ್ಯಾಸ್ ಬುಕಿಂಗ್ ರೀಫಿಲ್ಲಿಂಗ್ ಅಗತ್ಯವನ್ನು ನಿವಾರಿಸುತ್ತದೆ. ಪೈಪ್‌ಲೈನ್‌ಗಳಿಲ್ಲದ ಪ್ರದೇಶಗಳಿಗೆ LPG ಅನ್ನು ಪೂರೈಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ಪೈಪ್‌ಲೈನ್‌ಗಳನ್ನು ಹಾಕಲು ಅನುಮತಿಗಳನ್ನು ಇನ್ನು ನಿಗದಿತ ಸಮಯದೊಳಗೆ ನೀಡಬೇಕು. ಒಂದುವೇಳೆ ನೀವು ಅನುಮತಿ ನೀಡದಿದ್ದರೆ ಅವುಗಳನ್ನು ಅನುಮೋದಿಸಲಾಗಿದೆ ಎಂದೇ ಪರಿಗಣಿಸಲಾಗುತ್ತದೆ. ಅಧಿಕಾರಿಗಳು ಸೂಚಿಸಿದ ಶುಲ್ಕಗಳನ್ನು ಮೀರಿ ಹೆಚ್ಚುವರಿ ಶುಲ್ಕಗಳನ್ನು ವಿಧಿಸುವುದನ್ನು ನಿಷೇಧಿಸಲಾಗಿದೆ. ವಸತಿ ಸಂಕೀರ್ಣಗಳಲ್ಲಿ 3 ಕೆಲಸದ ದಿನಗಳಲ್ಲಿ ಒಳಗೆ ಪ್ರವೇಶವನ್ನು ನೀಡಬೇಕು, ಪಿಎನ್​ಜಿಗೆ ಸಂಬಂಧಿಸಿದ ಯಾವುದೇ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ ಎಂದು ಕೂಡ ಸರ್ಕಾರ ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link