ಬೆಂಗಳೂರು, ಮಾರ್ಚ್ 22: ನಿಂತಿದ್ದ ಈಚರ್ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಸಂಚಾರ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ಆಟೋದಲ್ಲಿದ್ದ ಮಣಿಕಂಠ, ಸುರೇಶ್, ಶ್ರೀನಿವಾಸ್ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ವೈಟ್ ಫೀಲ್ಡ್ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.
ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬರ್ತಿದ್ದ ಕ್ಯಾಂಟರ್ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಟೈರ್ ಬ್ಲ್ಯಾಸ್ಟ್ ಆಗಿ ನಿಂತಿತ್ತು. ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ ಚಾಲಕ ಟೈರ್ ಚೇಂಜ್ ಮಾಡುತ್ತಿದ್ದ. ಇದೇ ವೇಳೆ ನಿಂತಿದ್ದ ಕ್ಯಾಂಟರ್ಗೆ ಹಿಂದೆಯಿಂದ ಗೂಡ್ಸ್ ಆಟೋ ಡಿಕ್ಕಿಯಾಗಿದೆ. ಸ್ಥಳಕ್ಕೆ ಡಿಸಿಪಿ ನೇಮಗೌಡ ಮತ್ತು ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆ.ಆರ್.ಪುರಂ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯೋದಯವು ದಿನದ ಪ್ರಾರಂಭವನ್ನು ಸೂಚಿಸುತ್ತದೆ. ನಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ಕಷ್ಟ ಮತ್ತು ಸಂಕಷ್ಟಗಳಿಗೆ ದೇವರ ಮೊರೆ ಹೋಗುವಾಗ, ಸೂರ್ಯ ಭಗವಾನ್ ಸಾಕ್ಷಾತ್ ಕಣ್ಣಿಗೆ ಕಾಣುವ ದೇವರಾಗಿದ್ದಾರೆ. ಸೂರ್ಯನು ಗ್ರಹಗಳ ರಾಜನಾಗಿ, ಇಡೀ ಭೂಮಂಡಲವನ್ನು ಬೆಳಗುವ ಶಕ್ತಿಯಾಗಿದ್ದಾನೆ. ಬೆಳಗ್ಗೆ ಎದ್ದ ತಕ್ಷಣ ಸೂರ್ಯ ನಮಸ್ಕಾರ ಮಾಡುವ ಪದ್ಧತಿ ಹಲವರಿಗೆ ಇದ್ದರೂ, ಅದಕ್ಕಿಂತಲೂ ಸರಳವಾದ ಮತ್ತು ಪರಿಣಾಮಕಾರಿ ವಿಧಾನವೆಂದರೆ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವುದು.
ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವುದರಿಂದ ಅನಾರೋಗ್ಯದ ಸಮಸ್ಯೆಗಳು ನಿವಾರಣೆಯಾಗುತ್ತವೆ, ಹಿತಶತ್ರುಗಳ ಕಾಟ ಕಡಿಮೆಯಾಗುತ್ತದೆ ಮತ್ತು ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ ಎಂದು ನಂಬಲಾಗಿದೆ. ಆದಿತ್ಯ ಸ್ತೋತ್ರ ಮತ್ತು ಆದಿತ್ಯ ಹೃದಯಂ ಪಠಿಸುವಂತೆಯೇ, ಅರ್ಘ್ಯ ಅರ್ಪಣೆ ಕೂಡ ಅಷ್ಟೇ ಶಕ್ತಿಯುತವಾದ ಸರಳ ತಂತ್ರವಾಗಿದೆ. ಈ ಆಚರಣೆಗೆ ಯಾವುದೇ ಅಗರ್ಬತ್ತಿ, ದೀಪ, ಅಲಂಕಾರ, ಹಣ್ಣುಗಳು ಅಥವಾ ನೈವೇದ್ಯದ ಅಗತ್ಯವಿರುವುದಿಲ್ಲ. ಕೇವಲ ಅರ್ಘ್ಯದ ಮೂಲಕವೇ ಎಲ್ಲಾ ಸಂಕಲ್ಪಗಳನ್ನು ಈಡೇರಿಸಿಕೊಳ್ಳುವ ಪ್ರಯತ್ನ ಮಾಡಬಹುದು ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ..
ಮಾರ್ಚ್ 18ರ ಸಂಜೆಯಿಂದ ‘ಧುರಂಧರ್ 2’ ಸಿನಿಮಾಗೆ ಪ್ರೀಮಿಯರ್ ಶೋ ಆರಂಭ ಆಯಿತು. ಅಂದು ಈ ಚಿತ್ರಕ್ಕೆ 43 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಮಾರ್ಚ್ 19ರಂದು ಎಲ್ಲ ಕಡೆಗಳಲ್ಲಿ ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಯಿತು. ಆ ದಿನ 102.55 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶುಕ್ರವಾರ (ಮಾರ್ಚ್ 20) 80.72 ಕೋಟಿ ರೂಪಾಯಿ ಕಮಾಯಿ ಮಾಡಿತು. ಶನಿವಾರ (ಮಾರ್ಚ್ 21) ಬರೋಬ್ಬರಿ 113 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ.
ಒಂದು ಸಿನಿಮಾ ಒಂದೇ ದಿನದಲ್ಲಿ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವುದು ಎಂದರೆ ತಮಾಷೆಯೇ ಅಲ್ಲ. ಟಿಕೆಟ್ ಬೆಲೆ ಏರಿಕೆ ಆಗಿದೆ. ಹಾಗಿದ್ದರೂ ಕೂಡ ಜನರು ಈ ಸಿನಿಮಾವನ್ನು ವೀಕ್ಷಿಸುತ್ತಿದ್ದಾರೆ. ಅನೇಕರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆಗಳು ಕೂಡ ಹೆಚ್ಚಾಗಿವೆ. ಅದರ ನಡುವೆಯೂ ಈ ಸಿನಿಮಾ ಪ್ರತಿ ದಿನ ನೂರಾರು ಕೋಟಿ ರೂಪಾಯಿ ಗಳಿಸುತ್ತಿದೆ.
ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್ಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಮುಂತಾದವರು ‘ಧುರಂಧರ್ 2’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರು ಈ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅನುಪಮ್ ಖೇರ್, ರಿಷಬ್ ಶೆಟ್ಟಿ, ಜೂನಿಯರ್ ಎನ್ಟಿಆರ್, ರವಿತೇಜ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಹೊಗಳಿದ್ದಾರೆ.
ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಸಿನಿಮಾ ಬಗ್ಗೆ ವಿವಾದ ಶುರುವಾಗಿತ್ತು. ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಟೀಕಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಲೋಪಗಳನ್ನು ಮುಚ್ಚಿ ಹಾಕುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಲಾಗಿದೆ ಎಂಬ ಆರೋಪ ಎದುರಾಗಿದೆ. ಮುಂದಿನ ದಿನಗಳಲ್ಲಿ ‘ಧರಂಧರ್ 2’ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷದ ಶುಭ ದಿನವಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದ್ದು, ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಯೋಜನೆಗಳು ಯಶಸ್ವಿಯಾಗುತ್ತವೆ ಮತ್ತು ಹಳೆಯ ಉಳಿತಾಯದಿಂದ ಲಾಭವಿರುತ್ತದೆ. ವೃಷಭ ರಾಶಿಯವರಿಗೆ ಮಾನಸಿಕ ನೆಮ್ಮದಿ, ಹೊಸ ಯೋಜನೆಗಳಿಗೆ ಮನ್ನಣೆ ಮತ್ತು ಗೃಹ ನಿರ್ಮಾಣ ಯೋಗವಿದೆ. ಆದಾಗ್ಯೂ, ವಾಹನ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮವಾಗಿದ್ದು, ಉದ್ಯೋಗದಲ್ಲಿ ಬಡ್ತಿ ಮತ್ತು ಅವಿವಾಹಿತರಿಗೆ ವಿವಾಹ ಯೋಗವಿದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಮಾರ್ಚ್ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಡಿಆರ್ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಕೂಡ ಅಧಿಕಾರಿಗಳು ಅರೆಸ್ಟ್ ಪಡೆದಿದ್ದಾರೆ. ಬಂಧಿತ ಆರೋಪಿಯ ಬೆಂಗಳೂರಿನ ಮನೆಯಲ್ಲಿ ಶೋಧ ನಡೆಸಿದಾಗ 40 ಡೆಬಿಟ್ ಕಾರ್ಡ್ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳು ಪತ್ತೆಯಾಗಿವೆ.
ದೇವನಹಳ್ಳಿ, ಮಾರ್ಚ್ 22: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ ಎಂಬುವವರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
15 ದಿನಗಳ ಪ್ರವಾಸಕ್ಕೆಂದು ಒಂದೇ ಏರಿಯಾದ ಜನರು ಹೊರಟಿದ್ದರು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ ಪ್ರವಾಸದ ಪ್ಲಾನ್ ಮಾಡಿದ್ದ 12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ಪ್ಲೈಟ್ ನಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿತ್ತು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್ಪೋರ್ಟ್ನ ಟರ್ಮಿನಲ್ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ. ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್ನಲ್ಲಿ ಯೂಟರ್ನ್ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರ ದುರ್ಮರಣ ಹೊಂದಿದ್ದಾರೆ.
ಅಪಘಾತದ ಬಗ್ಗೆ ಟಿವಿ9ಗೆ ಸಂಚಾರಿ ವಿಭಾಗ ಎಸಿಪಿ ಪ್ರದೀಪ್ ಪ್ರತಿಕ್ರಿಯಿಸಿದ್ದು, ಟಿಟಿ ವಾಹನ ಏರ್ಪೋರ್ಟ್ಗೆ ಡ್ರಾಪ್ ಕೊಡುವುದಕ್ಕೆಂದು ತೆರಳುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಬರ್ತಿದ್ದ ಚಾಲಕ ವೇಳೆ ರೋಡ್ ಮಿಸ್ ಆಗಿ ಮುಂದೆ ಬಂದಿದ್ದಾನೆ. ರೈಟ್ ಸೈಡ್ ಅಲ್ಲಿ ಇದ್ದ ಟಿಟಿ ಸೆಂಟರ್ ಲೈನ್ಗೆ ಸಡನ್ ಆಗಿ ಬಂದಿದೆ. ಈ ವೇಳೆ ಪಕ್ಕದಲ್ಲಿದ್ದ ಲಾರಿ ಡಿಕ್ಕಿ ಹೊಡೆದಿದೆ. ಒವರ್ ಸ್ಪೀಡ್ ಇದ್ದ ಕಾರಣ ಇಷ್ಟು ದೊಡ್ಡ ಅಪಘಾತವಾಗಿರುವ ಶಂಕೆ ಇದೆ. ಅಪಘಾತದ ನಂತರ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು, ಅದರ ಬದಲಾವಣೆಗಾಗಿ ಪ್ರಯತ್ನಿಸುತ್ತಾ ಇರುವವರಿಗೆ ಮನಸ್ಸಿಗೆ ಹಿಡಿಸುವಂಥ ಮನೆ ದೊರೆಯಲಿದೆ.
ನಿತ್ಯವೂ ಕಾಣುವ ವಿಚಾರಗಳಲ್ಲಿಯೇ ಏನೋ ಬದಲಾವಣೆಗಳು ಆಗುತ್ತಿವೆ ಎಂಬುದು ಗಟ್ಟಿಯಾಗಿ ನಿಮ್ಮ ಮನಸ್ಸಿನಲ್ಲಿ ಬೇರೂರಲಿದೆ. ಮದುವೆಗೆ ಪ್ರಯತ್ನ ಮಾಡುತ್ತಿರುವ ವಿವಾಹ ವಯಸ್ಕರಿಗೆ ಸೂಕ್ತ ಸಂಬಂಧ ದೊರೆಯುವ ಸಾಧ್ಯತೆಗಳು ಇವೆ. ದೂರದ ಊರುಗಳಲ್ಲಿ ಇರುವ ಸಂಬಂಧಿಕರು ಕೆಲವು ವಿಚಾರಗಳಲ್ಲಿ ಸಹಾಯ ಮಾಡುವಂತೆ ನಿಮ್ಮನ್ನು ಕೇಳಿಕೊಳ್ಳಬಹುದು.
ನಿಮ್ಮಿಂದ ಅದು ಮಾಡಲಿಕ್ಕೆ ಸಾಧ್ಯವೇ ಎಂಬುದರ ಬಗ್ಗೆ ಆಲೋಚಿಸಿದ ನಂತರವಷ್ಟೇ ಉತ್ತರವನ್ನು ಹೇಳಿ. ಸರ್ಕಾರಿ ಕೆಲಸ ಮಾಡುತ್ತಿರುವವರಿಗೆ ನಿಯೋಜನೆ ಮೇಲೆ ಹೆಚ್ಚುವರಿಯಾಗಿ ಜವಾಬ್ದಾರಿಗಳನ್ನು ವಹಿಸುವ ಬಗ್ಗೆ ನಿಮಗೆ ಸೂಚನೆ ಬರಬಹುದು. ಆಹಾರ ಪಥ್ಯವನ್ನು ಪಾಲನೆ ಮಾಡುವ ವಿಚಾರದಲ್ಲಿ ಯಾವುದೇ ರಾಜೀ ಮಾಡಿಕೊಳ್ಳಬೇಡಿ. ಮನೆಗೆ ಪೀಠೋಪಕರಣಗಳನ್ನು ಖರೀದಿಸಿ ತರುವುದಕ್ಕೆ ನಿಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ ಬಳಸುವ ಯೋಗ ಇದೆ.
ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು ಪೂರ್ಣ ಮಾಡುವ ಕುರಿತು ತೀರ್ಮಾನ ಮಾಡಲಿದ್ದೀರಿ.
ಉದ್ಯೋಗ ಬದಲಾವಣೆ ಮಾಡಬೇಕು ಎಂದೇನಾದರೂ ಪ್ರಯತ್ನ ಮಾಡುತ್ತಾ ಇರುವವರಿಗೆ ನಿರೀಕ್ಷೆ ಕೂಡ ಮಾಡಿರದಂಥ ವ್ಯಕ್ತಿಗಳಿಂದ ನೆರವು ದೊರೆಯಲಿದೆ. ಈ ಹಿಂದೆ ಹೂಡಿಕೆ ಮಾಡಿದಂಥ ಹಣದ ಪೈಕಿ ಸ್ವಲ್ಪ ಮೊತ್ತವನ್ನು ಹಿಂತೆಗೆದುಕೊಳ್ಳಬೇಕು ಎಂದು ಆಲೋಚನೆ ಶುರು ಆಗಲಿದೆ. ನಿಮ್ಮಲ್ಲಿ ಕೆಲವರು ದ್ವಿಚಕ್ರ ವಾಹನ ಅಥವಾ ಕಾರು ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ, ಇದಕ್ಕಾಗಿ ಹಣವನ್ನು ಅಡ್ವಾನ್ಸ್ ನೀಡುವ ಸಾಧ್ಯತೆ ಸಹ ಇದೆ.
ಗೆಳೆತನದಲ್ಲಿ ಯಾವುದೆಲ್ಲ ಸಹಜ ಎಂದು ಭಾವಿಸಿದ್ದಿರೋ ಅದು ಹಾಗಲ್ಲ ಎಂದೆನಿಸಲಿದೆ. ಅಂತರಂಗದ ವಿಚಾರಗಳನ್ನು ಸಲುಗೆಯ ಕಾರಣಕ್ಕೆ ಹಂಚಿಕೊಳ್ಳಬಾರದು ಎಂಬ ಸಲಹೆಯನ್ನು ಕುಟುಂಬ ಸದಸ್ಯರು ನೀಡಲಿದ್ದು, ಇದು ನಿಮಗೂ ಸರಿ ಎನಿಸಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಿರುವವರು ಆದಾಯದ ಮೂಲಗಳನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.
ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ ಇರುವ ಪುಸ್ತಕಗಳು, ಲ್ಯಾಪ್ ಟಾಪ್ ಅಥವಾ ಟ್ಯಾಬ್ಲೆಟ್ ಇಂಥವುಗಳ ಖರೀದಿಗಾಗಿ ಖರ್ಚು ಮಾಡುವ ಯೋಗ ಇದೆ.
ಸರ್ಕಾರದಿಂದ ಬರಬೇಕಾದ ಟ್ಯಾಕ್ಸ್ ರೀಫಂಡ್ ಸೇರಿದಂತೆ ಇತರ ಯಾವುದೇ ಬಾಕಿ ಇದ್ದರೂ ಅದು ಯಾವಾಗ ಬರಬಹುದು ಎಂಬ ಸುಳಿವು ದೊರೆಯಲಿದೆ. ಗಾಜಿನ ವಸ್ತುಗಳು ಅಥವಾ ಚೂಪಾದ ವಸ್ತುಗಳನ್ನು ಬಳಕೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು. ಹೋಟೆಲ್ ವ್ಯವಹಾರ ನಡೆಸುತ್ತಿರುವವರಿಗೆ ಹಣಕಾಸಿನ ಒತ್ತಡ ಕಾಣಿಸಿಕೊಳ್ಳಬಹುದು.
ಸ್ವಂತ ವ್ಯವಹಾರ- ವ್ಯಾಪಾರ ಆರಂಭ ಮಾಡಬೇಕು ಎಂದು ಹಣಕಾಸು ವ್ಯವಸ್ಥೆ ಮಾಡುತ್ತಿದ್ದೀರಿ ಎಂದಲ್ಲಿ ಅದು ಸಾಧ್ಯವಾಗಲಿದೆ. ವಾಹನ ಖರೀದಿ ಮಾಡುವುದಕ್ಕಾಗಿ ಬ್ಯಾಂಕ್- ಬ್ಯಾಂಕೇತರ ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡಿದ್ದಲ್ಲಿ ಅದು ಸಿಗುವ ಬಗ್ಗೆ ಖಾತ್ರಿ ದೊರೆಯಲಿದೆ. ಈ ಬಗ್ಗೆ ನಿಮಗೆ ಕಾಡುತ್ತಿರುವ ಆತಂಕ ದೂರವಾಗಲಿದೆ.
ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು.
ವೃಷಭ ರಾಶಿ:
ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಇಂದಿನ ಗುರಿಯನ್ನು ಬೇಗ ತಲುಪುವಿರಿ. ಮಕ್ಕಳ ವಿಚಾರಕ್ಕೆ ವಾದಗಳು ಆಡಬಹುದು. ನಿಮ್ಮನ್ನು ವೈಭವೀಕರಿಸಿವುದರಲ್ಲಿ ಅರ್ಥವಿಲ್ಲ. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು. ನಿಮ್ಮರ ಬಗ್ಗೆ ನಿಮಗೆ ಸಕಾರಾತ್ಮಕ ಭಾವವು ಇರದು. ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ.
ಮಿಥುನ ರಾಶಿ:
ಬಾಯಿ ಚಪಲದ ಅಧಿಕವಾಗಿ ಏನನ್ನಾದರೂ ತಿಂದು, ಆರೋಗ್ಯ ಕೆಡುವುದು. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ವ್ಯಯದಷ್ಟೇ ಆದಾಯ ಸಿಕ್ಕರೆ ಖರ್ಚು ಮಾಡಿ. ಮನೆಯವರನ್ನು ಕರೆದುಕೊಂಡು ಪ್ರಯಾಣ ಮಾಡುವಿರಿ. ಆಸ್ತಿಯ ದಾಖಲೆಗಳನ್ನು ಅಧಿಕಾರಿಗಳು ವಿಚಾರಿಸಬಹುದು.
ಕರ್ಕಾಟಕ ರಾಶಿ:
ಗೆಲುವಿಗಾಗಿ ಮಾಡುವ ಹೋರಾಟದ ಫಲ ನಿಮಗೆ ಆರಂಭದಲ್ಲಿಯೇ ಗೊತ್ತಾಗಲಿದೆ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ಬೇಸರದ ಮಾತುಗಳು ಆಪ್ತರ ಮೇಲೆ ಪರಿಣಾಮ ಬೀರುವುದು. ಸಂಬಂಧದಲ್ಲಿ ಮಿತವಾದ ಬಂಧವಿರಲಿ. ಅಗತ್ಯದ ಖರ್ಚುಗಷ್ಟೇ ಪ್ರಾಧಾನ್ಯವಿರಲಿ.
ಸಿಂಹ ರಾಶಿ:
ನಿಮ್ಮದಲ್ಲದ ವೃತ್ತಿಯಲ್ಲಿ ಸೇರಿಕೊಂಡು ತೊಳಲಾಟ ನಡೆಸುವಿರಿ. ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಬಂಧುಗಳು ನಿಮ್ಮ ಬಳಿ ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರಬಹುದು. ಹಿರಿಯರ ಸೇವೆಯಿಂದ ಸಂತೋಷಪಡುವಿರಿ. ಮನಸ್ಸಿನ ಕಿರಿಕಿರಿಯಿಂದ ಕೋಪವು ಬರಬಹುದು.
ಕನ್ಯಾ ರಾಶಿ:
ಸಹೋದರಿಯ ಜೊತೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹನಿರ್ಮಾಣವು ನೀವಂದುಕೊಂಡಷ್ಟು ಸರಳವಾಗಿ ಇರದು. ತಂದೆ ತಾಯಿಯರ ಸೇವೆಯ ಬಗ್ಗೆ ಅಭಿಮಾನ ಬರುವುದು. ಉತ್ತಮ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮ ಮಾತನ್ನು ಕೇಳಲು ಆಸಕ್ತಿ ಇರದು.
ತುಲಾ ರಾಶಿ:
ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ಋಜು ಮಾರ್ಗದಲ್ಲಿ ಇರುವ ನಿಮಗೆ ದಾರಿತಪ್ಪಿಸುವ ಜನರು ಎದುರಾಗಬಹುದು. ರಾಜಕೀಯದಲ್ಲಿ ನಿಮಗೆ ಆಸಕ್ತಿಯು ಇದ್ದರೂ ಪ್ರವೇಶಕ್ಕೆ ಮಾರ್ಗವನ್ನು ಹುಡುಕುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ. ಮಕ್ಕಳ ಮೇಲೆ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಅಸಾಮಾನ್ಯ ಕಾರ್ಯವನ್ನು ಮಾಡಲು ಬಹಳ ಉತ್ಸಾಹವಿರುವುದು.
ವೃಶ್ಚಿಕ ರಾಶಿ:
ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ನಿಮಗೆ ನಕಾರಾತ್ಮಕ ಹಣೆಪಟ್ಟಿಯು ನಿಮಗೆ ಬೀಳಬಹುದು, ಎಚ್ಚರವಿರಲಿ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಸುಖಾಂತ್ಯ ಸಿಗುವುದು. ಅಪರಿಚಿತರು ನಿಮ್ಮಿಂದ ಧನವನ್ನು ಪಡೆಯುವರು. ಅತಿಯಾದ ನಿರೀಕ್ಷೆಯು ಇಂದು ನಿಮ್ಮ ಮನಸ್ಸನ್ನು ಕೆಡಸಬಹುದು. ಮನೆಗೆ ಬಂದ ಅತಿಥಿಯನ್ನು ಸತ್ಕರಿಸುವಿರಿ.
ಧನು ರಾಶಿ:
ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಗೃಹೋಪಯೋಗಿ ವಸ್ತುಗಳನ್ನು ಜಾಣ್ಮೆಯಿಂದ ಮಾರಾಟ ಮಾಡಿದರೆ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಡವಸದೀತು. ನಿಮ್ಮ ಸೋಲನ್ನು ನೀವು ಸಹಜವಾಗಿ ಒಪ್ಪಿಕೊಳ್ಳಲಾರಿರಿ.
ಮಕರ ರಾಶಿ:
ಕಾನೂನಾತ್ಮಕ ಹೋರಾಟದ ತಂತ್ರವನ್ನು ಬದಲಿಸುವಿರಿ. ನಿಮ್ಮ ಮಾತು ಅಹಂಕಾರದಂತೆ ತೋರಬಹುದು. ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನ ಇರದು. ವಾಹನ ಖರೀದಿಯಲ್ಲಿ ಮೋಸವಾಗುವುದು. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ಉದ್ಯೋಗಕ್ಕೆ ಸಮಯವನ್ನು ಕೊಡಲಾಗದು. ಒತ್ತಡವು ಅಧಿಕವಿರಿಲಿ. ಹತ್ತಾರು ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ.
ಕುಂಭ ರಾಶಿ:
ಎಣಿಸಿಕೊಂಡ ಕಾರ್ಯವು ಆಗದೇ ಇರಬಹುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಬರಬಹುದು. ಪ್ರಾಮಾಣಿಕತೆಗೆ ಯೋಗ್ಯವಾದ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಉದ್ಯೋಗವು ನಿಮಗೆ ಸಾಕೆನಿಸಿ ಕೈ ಬಿಡಬಹುದು. ಸ್ವಂತಿಕೆಯನ್ನು ಮೆರೆಯುವ ಸಾಧ್ಯತೆ ಇದೆ. ಮಕ್ಕಳ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾದೀತು.
ಮೀನ ರಾಶಿ:
ಕೊಟ್ಟ ಸಾಲವನ್ನು ಹಿಂಪಡೆಯುವ ಅನಿವಾರ್ಯತೆ ಬರಲಿದೆ. ಅದು ನಿಮಗೆ ಬಹಳ ಕಷ್ಟದ ಸಂಗತಿ. ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ನಿಮ್ಮ ಹಾಸ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಬಹುದು. ನಿಮ್ಮ ಮನಸ್ಸು ಯಾವುದರಲ್ಲಿಯೂ ಸ್ಥಿರವಾಗಿ ಇರದೇ ಬಹಳ ಚಂಚಲವಾಗಿ ಇರುವುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ವೈಧೃತಿ, ಕರಣ : ಗರಜ, ಸೂರ್ಯೋದಯ – 06 – 2 8 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:34, ಯಮಗಂಡ ಕಾಲ 12:31 – 14:02, ಗುಳಿಕ ಕಾಲ 15:33 – 17:04