Category Archives: Blog

Your blog category

‘ಎಲ್ಲ ಭಾರತೀಯರೂ ನೋಡಬೇಕು’; ‘ಧುರಂಧರ್ 2’ ವೀಕ್ಷಿಸಿದ ಬೆಂಗಳೂರು ಪ್ರೇಕ್ಷಕರು ಏನಂದ್ರು?

‘ಎಲ್ಲ ಭಾರತೀಯರೂ ನೋಡಬೇಕು’; ‘ಧುರಂಧರ್ 2’ ವೀಕ್ಷಿಸಿದ ಬೆಂಗಳೂರು ಪ್ರೇಕ್ಷಕರು ಏನಂದ್ರು?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಮುಂಬೈ, ದೆಹಲಿ ಸೇರಿದಂತೆ ಬೆಂಗಳೂರಿನಲ್ಲೂ ಸಿನಿಮಾ ಅದ್ಭುತವಾಗಿ ಪ್ರದರ್ಶನ ಕಾಣುತ್ತಾ ಇದೆ. ಈ ಸಿನಿಮಾ ನೋಡಿದ ಬೆಂಗಳೂರು ಪ್ರೇಕ್ಷಕರು ಕೂಡ ಖುಷಿಯಾಗಿದ್ದಾರೆ.  ‘ಎಲ್ಲಾ ಭಾರತೀಯರು ನೋಡಬೇಕು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ದೇಶಭಕ್ತರು ನೋಡಲೇಬೇಕಾದ ಸಿನಿಮಾ’ ಎಂದು ಬಣ್ಣಿಸಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸತೊಡಕು ಸಡಗರ: ಮಟನ್ ಬೆಲೆ 1500 ರೂ. ತಲುಪಿದ್ರೂ ಕಮ್ಮಿ ಆಗಿಲ್ಲ ಜನಜಂಗುಳಿ

ಬೆಂಗಳೂರು, ಮಾ.20: ನೆನ್ನೆಯಷ್ಟೇ (ಮಾ.19) ಯುಗಾದಿ ಹಬ್ಬವನ್ನು ರಾಜ್ಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಅದರ ಮರುದಿನವಾದ ಇಂದು, ಹೊಸತೊಡಕು ಆಚರಣೆಗೆ ಜನರು ಭರ್ಜರಿ ಮಾಂಸ ಖರೀದಿಯಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರು, ದೇವನಹಳ್ಳಿ, ಮೈಸೂರು ಮತ್ತು ಮಂಡ್ಯ ಸೇರಿದಂತೆ ಹಲವು ನಗರಗಳಲ್ಲಿ ಮಾಂಸದಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿವೆ. ಹೊಸತೊಡಕಿನ ಹಿನ್ನೆಲೆಯಲ್ಲಿ, ಮಟನ್ ಬೆಲೆ ಒಂದು ಕೆಜಿಗೆ 1000 ರೂ.ನಿಂದ 1500 ರೂ. ವರೆಗೆ ಏರಿಕೆ ಕಂಡಿದೆ. ಬೆಲೆ ಎಷ್ಟೇ ಹೆಚ್ಚಿದ್ದರೂ, ಜನರು ತಮ್ಮ ಸಾಂಪ್ರದಾಯಿಕ ಆಚರಣೆಯನ್ನು ಪೂರೈಸಲು ಉತ್ಸಾಹದಿಂದ ಮಾಂಸ ಖರೀದಿಸುತ್ತಿದ್ದಾರೆ. ಬೆಂಗಳೂರಿನ ಪಾಪಣ್ಣ ಮಟನ್ ಸ್ಟಾಲ್, ದೇವನಹಳ್ಳಿಯ ಎಲಿಯೂರು ಮತ್ತು ಮೈಸೂರಿನ ಕನ್ನೇಗೌಡನ ಕೊಪ್ಪಲ್ ಸೇರಿದಂತೆ ಪ್ರಮುಖ ಮಾಂಸದ ಮಳಿಗೆಗಳಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಮಟನ್ ಖರೀದಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಪ್ರತಿ ವರ್ಷದಂತೆ, ಈ ವರ್ಷವೂ ಕೂಡ ಹೊಸತೊಡಕಿಗೆ ಮಾಂಸದ ಬೇಡಿಕೆ ಹೆಚ್ಚಿದ್ದು, ಜನರು ಸಂಭ್ರಮದಿಂದ ಖರೀದಿಯಲ್ಲಿ ನಿರತರಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟ್ರಂಪ್ ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್

ಜೆರುಸಲೇಂ, ಮಾರ್ಚ್​ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ, ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯವು ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ.

ಅವರ ಪ್ರಕಾರ, ಆರಂಭಿಕ ಹಂತವು ಕ್ಷಿಪಣಿ ದಾಸ್ತಾನುಗಳು, ಡ್ರೋನ್‌ಗಳು ಮತ್ತು ಪರಮಾಣು-ಸಂಬಂಧಿತ ಸ್ವತ್ತುಗಳನ್ನು ನಾಶಪಡಿಸಿತು ಮತ್ತು ನಡೆಯುತ್ತಿರುವ ಹಂತವು ಇರಾನ್ ತನ್ನ ಶಸ್ತ್ರಾಗಾರವನ್ನು ಪುನರ್ನಿರ್ಮಿಸಲು ಅನುವು ಮಾಡಿಕೊಡುವ ಕೈಗಾರಿಕಾ ಸಾಮರ್ಥ್ಯವನ್ನು ಗುರಿಯಾಗಿಸಿಕೊಂಡಿದೆ.

ಎರಡೂ ದೇಶಗಳು ತಮ್ಮ ಸಂಘಟಿತ ಅಭಿಯಾನದ ಮೂಲಕ ಇಡೀ ಜಗತ್ತನ್ನು ರಕ್ಷಿಸುತ್ತಿವೆ, ವ್ಯಾಪಕ ದಾಳಿಗಳು ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ಸಾಮರ್ಥ್ಯಗಳನ್ನು ಬೃಹತ್ ಪ್ರಮಾಣದಲ್ಲಿ ಕುಗ್ಗಿಸಿವೆ. ನೂರಾರು ಲಾಂಚರ್‌ಗಳು ಮತ್ತು ನಿರ್ಣಾಯಕ ಶಸ್ತ್ರಾಸ್ತ್ರ-ಉತ್ಪಾದನಾ ಸೌಲಭ್ಯಗಳು ನಾಶವಾಗಿವೆ ಎಂದು ಅವರು ಹೇಳಿದರು. ಅವರ ಹೇಳಿಕೆಗಳನ್ನು ಸಿಎನ್‌ಎನ್ ವರದಿ ಮಾಡಿದೆ.

ಪ್ರಮುಖವಾದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಅಮೆರಿಕ ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ನೆತನ್ಯಾಹು ಮಾತನಾಡಿದ್ದಾರೆ. ಇರಾನಿನ ಪ್ರಮುಖ ಅನಿಲ ಕ್ಷೇತ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಕೆಲವು ದಾಳಿಗಳು ನಡೆದಿದ್ದು, ಇಂಧನ ಬೆಲೆಗಳು ಗಗನಕ್ಕೇರಿವೆ ಮತ್ತು ಇರಾನ್‌ನ ಅರಬ್ ನೆರೆಹೊರೆಯವರನ್ನು ನೇರವಾಗಿ ಸಂಘರ್ಷಕ್ಕೆ ಎಳೆಯುವ ಅಪಾಯವಿದೆ.

ಮತ್ತಷ್ಟು ಓದಿ: ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ಸಾಗಿಸಲ್ಪಡುವ ಕಾರ್ಯತಂತ್ರದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಹಿಡಿತ ಸಾಧಿಸಿರುವುದರಿಂದ ಜಾಗತಿಕ ಇಂಧನ ಸರಬರಾಜುಗಳು ಈಗಾಗಲೇ ಒತ್ತಡದಲ್ಲಿವೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ತಡರಾತ್ರಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮನವಿ ಮೇರೆಗೆ, ಇರಾನಿನ ಅನಿಲ ಕ್ಷೇತ್ರದ ಮೇಲೆ ಯಾವುದೇ ದಾಳಿಯನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ, ಇರಾನ್‌ನ ಉನ್ನತ ನಾಯಕರು ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ ಮತ್ತು ದೇಶದ ಮಿಲಿಟರಿ ಸಾಮರ್ಥ್ಯಗಳು ತೀವ್ರವಾಗಿ ಕುಸಿದಿವೆ.

ಅಂತಾರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 119 ಡಾಲರ್​​ಗಿಂತ ಸ್ವಲ್ಪ ಹೆಚ್ಚು ಏರಿಕೆಯಾಗಿದೆ. ಯುದ್ಧ ಪ್ರಾರಂಭವಾದಾಗಿನಿಂದ ಇದು ಶೇ.60 ಕ್ಕಿಂತ ಹೆಚ್ಚು. ನೈಸರ್ಗಿಕ ಅನಿಲ ಬೆಲೆಗಳಿಗೆ ಯುರೋಪಿಯನ್ ಮಾನದಂಡವೂ ತೀವ್ರವಾಗಿ ಏರಿತ್ತು ಮತ್ತು ಕಳೆದ ತಿಂಗಳಲ್ಲಿ ಸರಿಸುಮಾರು ದ್ವಿಗುಣಗೊಂಡಿದೆ. ಕತಾರ್, ಸೌದಿ ಅರೇಬಿಯಾ ಮತ್ತು ಯುಎಇ ಇರಾನಿನ ದಾಳಿಯನ್ನು ಖಂಡಿಸಿವೆ. ಇರಾನ್ ಹಿಂದೆ ಸರಿಯುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಯುದ್ಧದ ಸಮಯದಲ್ಲಿ ಇರಾನ್‌ನಲ್ಲಿ 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಅಪಾರ್ಟ್​​ಮೆಂಟ್​​ನ 13ನೇ ಮಹಡಿಯಿಂದ ಹಾರಿದ ವ್ಯಕ್ತಿ, ಫ್ಲಾಟ್​ ಒಳಗೆ ತಾಯಿಯ ಮೃತದೇಹ ಪತ್ತೆ

ಗಾಜಿಯಾಬಾದ್, ಮಾರ್ಚ್​ 20: ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಫ್ಲಾಟ್ ಒಳಗೆ ತಾಯಿಯ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರಿಗೆ ಕರೆ ಮಾಡಿ ಅವರು ಫ್ಲಾಟ್‌ಗೆ ಪ್ರವೇಶಿಸಿದಾಗ, ಹಾಸಿಗೆಯ ಮೇಲೆ ಬಿದ್ದಿದ್ದ ಅವರ ತಾಯಿಯ ಶವ ಕಂಡುಬಂದಿದೆ.

ಮಹಾಗುಣಪುರಂ ಸೊಸೈಟಿಯ ವಸತಿ ಸಂಕೀರ್ಣದಿಂದ 13 ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದ ಬಗ್ಗೆ ಕರೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಅವರು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಆ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ಅವರ ಮಗ ರಾಜ್‌ವೀರ್ (40) ಎಂದು ಗುರುತಿಸಲಾಗಿದೆ. ಅವರು ತಮ್ಮ 70 ವರ್ಷದ ತಾಯಿ ಸತ್ನಮ್ ಕೌರ್ (70) ಅವರೊಂದಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದರು. ಪೊಲೀಸರು ಫ್ಲಾಟ್ ಅನ್ನು ಪ್ರವೇಶಿಸಿದಾಗ, ಸತ್ನಮ್ ಕೌರ್ ಅವರ ದೇಹವು ಹಾಸಿಗೆಯ ಮೇಲೆ ಬಿದ್ದಿರುವುದು ಕಂಡುಬಂದಿದೆ. ದೇಹವು ಸುಮಾರು ಎರಡು ದಿನಗಳಷ್ಟು ಹಳೆಯದಾಗಿ ಕಾಣುತ್ತದೆ ಮತ್ತು ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ವರದಕ್ಷಿಣೆ ಪಡೆದರೂ ತೀರದ ಧನ ದಾಹ, ಸಾಲದಕ್ಕೆ ಅನುಮಾನ: ಪತಿ ಟಾರ್ಚರ್​​ಗೆ ಪತ್ನಿ ಆತ್ಮಹತ್ಯೆ

ಪ್ರಾಥಮಿಕ ತನಿಖೆಯಲ್ಲಿ ರಾಜವೀರ್ ತನ್ನ ಹೆಂಡತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಆಕೆ ಗೌರ್ ಸಿಟಿ -2 ರಲ್ಲಿ ತಮ್ಮ ಮಗುವಿನೊಂದಿಗೆ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರು ಆಗಾಗ ಅವರನ್ನು ಭೇಟಿ ಮಾಡುತ್ತಿದ್ದರೂ, ಕಳೆದ ಎರಡು ದಿನಗಳಿಂದ ಅಲ್ಲಿಗೆ ಹೋಗಿರಲಿಲ್ಲ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಅವರ ಪತ್ನಿ ಆಸ್ಪತ್ರೆಗೆ ತಲುಪಿದ್ದಾರೆ.

ರಾಜ್‌ವೀರ್ ಮೊದಲು ಜ್ಯೋತಿಷ್ಯ ಹೇಳುತ್ತಿದ್ದರು, ಆದರೆ ಆ ಕ್ಷೇತ್ರದಲ್ಲಿ ಯಶಸ್ಸು ಕಾಣದ ಕಾರಣ ಈಗ ಯಾವುದೇ ಕೆಲಸ ಇಲ್ಲದೆ ನಿರುದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಘಟನೆಗಳ ಅನುಕ್ರಮದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ತಾಯಿಯ ಸಾವು ಆತ್ಮಹತ್ಯೆಗೆ ಮುಂಚೆಯೇ ಸಂಭವಿಸಿದೆಯೇ ಮತ್ತು ಎರಡೂ ಸಾವುಗಳು ಯಾವ ಸಂದರ್ಭಗಳಲ್ಲಿ ಸಂಭವಿಸಿವೆ ಎಂದು ತಿಳಿದುಕೊಳ್ಳಲಾಗುತ್ತಿದೆ, ಎರಡೂ ಶವಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕವಿ ನಗರದ ಸಹಾಯಕ ಪೊಲೀಸ್ ಆಯುಕ್ತ ಸೂರ್ಯಬಾಲಿ ಮೌರ್ಯ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದ ಬಿಜೆಪಿ! ಜಾತಿ ಲೆಕ್ಕಾಚಾರ ಹೇಗಿದೆ ಗೊತ್ತೇ?

ದಾವಣಗೆರೆ, ಮಾರ್ಚ್ 20: ದಾವಣಗೆರೆ ದಕ್ಷಿಣದ ಉಪಚುನಾವಣೆ (Davanagere By-Election) ಕಣ ಈಗ ಜಾತಿ ರಾಜಕಾರಣದಿಂದ ರಂಗೇರುವ ಸುಳಿವು ದೊರೆತಿದೆ. ಕಾಂಗ್ರೆಸ್‌ನಲ್ಲಿ (Congress) ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಮುಸ್ಲಿಂ ನಾಯಕರ ನಡುವೆ ಟಿಕೆಟ್ ಫೈಟ್ ಜೋರಾಗಿದೆ. ಇದೇ ಸಮಯವನ್ನು ಸರಿಯಾಗಿ ಬಳಸಿಕೊಂಡಿರುವ ಬಿಜೆಪಿ (BJP), ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದೆ. ಅಹಿಂದ ಸಮುದಾಯಕ್ಕೆ ಮಣೆ ಹಾಕುವ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಕನ್ನ ಹಾಕಲು ತಂತ್ರ ರೂಪಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರ ಎಂದರೆ ಶಾಮನೂರು ಕುಟುಂಬದ ಪ್ರಭಾವದ ಪ್ರದೇಶ. ಆದರೆ ಇದೀಗ ಇಲ್ಲಿ ಅಲ್ಪಸಂಖ್ಯಾತರು ಬಂಡಾಯದ ಸ್ವರ ಎತ್ತಿದ್ದಾರೆ. ‘ನಮ್ಮ ಮತ ಬೇಕು, ಆದರೆ ನಮಗೆ ಅಧಿಕಾರ ಬೇಡವೇ’ ಎಂಬ ಪ್ರಶ್ನೆಯನ್ನು ಮುಸ್ಲಿಂ ಮುಖಂಡರು ಮುಂದಿಟ್ಟಿದ್ದಾರೆ. ಕಾಂಗ್ರೆಸ್ ಲಿಂಗಾಯತ ವರ್ಸಸ್ ಮುಸ್ಲಿಂ ಒಳಜಗಳದಲ್ಲಿ ತೊಡಗಿರುವಾಗ, ಬಿಜೆಪಿ ಶಾಂತವಾಗಿ ತನ್ನ ದಾಳವನ್ನು ಉರುಳಿಸಿದೆ.

ದಾವಣಗೆರೆಯಲ್ಲಿ ನಿರ್ಣಾಯಕವಾಗಿರುವ ಹಿಂದುಳಿದ ವರ್ಗಗಳು ಮತ್ತು ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಈ ಬಾರಿ ಅಹಿಂದ ಸಮುದಾಯದ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇದರ ಮೂಲಕ ಕಾಂಗ್ರೆಸ್ ಮತಗಳನ್ನು ವಿಭಜಿಸಿ, ಶಾಮನೂರು ಕೋಟೆಯನ್ನು ಭೇದಿಸುವುದು ಬಿಜೆಪಿಯ ಲೆಕ್ಕಾಚಾರವಾಗಿದೆ.

ಇನ್ನೂ ಜಿಲ್ಲೆಯಲ್ಲಿ ಬಿಜೆಪಿ ಒಳಗೇ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಬಣ ಮತ್ತು ಶಾಸಕ ಎಂ.ಪಿ. ರೇಣುಕಾಚಾರ್ಯ ಬಣದ ನಡುವೆ ಭಿನ್ನಮತಗಳಿದ್ದವು. ಈ ಹಿನ್ನೆಲೆ ರಾಜ್ಯ ನಾಯಕರು ಎರಡೂ ಬಣಗಳಿಗೂ ಸಮನಾಗಿ ಹೊಂದಿಕೊಂಡಿರುವ ಶ್ರೀನಿವಾಸ್ ದಾಸ್ ಕರಿಯಪ್ಪ ಹೆಸರನ್ನು ಅಂತಿಮಗೊಳಿಸಿ ಒಗ್ಗಟ್ಟು ಸಾಧಿಸಲು ಪ್ರಯತ್ನಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಜಾತಿ ಲೆಕ್ಕಾಚಾರ

ದಾವಣಗೆರೆ ದಕ್ಷಿಣ ಕ್ಷೇತ್ರದ ಜಾತಿ ಲೆಕ್ಕಾಚಾರ ಗಮನಿಸಿದರೆ, ಇಲ್ಲಿ ಅಹಿಂದ ಮತಗಳೇ ಪ್ರಮುಖವಾಗಿವೆ. ಒಟ್ಟು 2,31,674 ಮತದಾರರಿದ್ದಾರೆ. ಇವರಲ್ಲಿ ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಂ – 64,246, ಲಿಂಗಾಯತರು – 37,845, ಎಸ್‌ಟಿ (ನಾಯಕರು) – 31,729, ಎಸ್‌ಸಿ (ಎಲ್ಲಾ ಒಳಜಾತಿಗಳು) – 29,106, ಕುರುಬ – 16,854, ಮರಾಠರು – 14,868, ಉಪ್ಪಾರರು – 8,352, ಜೈನರು – 5,386 ಹಾಗೂ ಇತರ ಸಮುದಾಯಗಳ 23,300 ಮತಗಳಿವೆ.

ಅಹಿಂದ ಸಮುದಾಯವೇ ನಿರ್ಣಾಯಕ

ಈ ಪೈಕಿ ಅಹಿಂದ ಸಮುದಾಯವೇ ನಿರ್ಣಾಯಕವಾಗಿದೆ. ಕಾಂಗ್ರೆಸ್‌ನಲ್ಲಿ ಮುಸ್ಲಿಂ ನಾಯಕರು ಮತ್ತು ಶಾಮನೂರು ಕುಟುಂಬದ ನಡುವೆ ನಡೆಯುತ್ತಿರುವ ಟಿಕೆಟ್ ಪೈಪೋಟಿ ಪಕ್ಷಕ್ಕೆ ತಲೆನೋವಾಗಿದ್ದು, ಈ ಒಳಜಗಳದ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ. ‘ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ’ ಎಂಬಂತೆ ಈ ಬಾರಿ ರಾಜಕೀಯ ಸಮೀಕರಣ ಬದಲಾಗುತ್ತದೆಯೇ ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಒಟ್ಟಿನಲ್ಲಿ, ಕಾಂಗ್ರೆಸ್‌ನ ಒಳಜಗಳ ಮತ್ತು ಲಿಂಗಾಯತ–ಮುಸ್ಲಿಂ ಮತಗಳ ವಿಭಜನೆಯ ಲಾಭ ಪಡೆಯಲು ಬಿಜೆಪಿ ಸಜ್ಜಾಗಿದೆ. ಬಿಜೆಪಿಯ ಈ ಅಹಿಂದ ತಂತ್ರಕ್ಕೆ ಮತದಾರರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ? ಶಾಮನೂರು ಕೋಟೆ ಉಳಿಯುತ್ತದೆಯೇ ಅಥವಾ ಅಹಿಂದ ಅಲೆಗೆ ಉರುಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನಂತರ, ಅದನ್ನು OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು. ಈಗ ಈ ಚಿತ್ರದ ಮುಂದುವರಿದ ಭಾಗವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವುದಿಲ್ಲ. ಬದಲಾಗಿ ಮತ್ತೊಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಆಗಲಿದೆ. ಈ ಮುಂದುವರಿದ ಭಾಗದ ಡಿಜಿಟಲ್ ಹಕ್ಕುಗಳು 150 ಕೋಟಿ ರೂ.ಗಳಿಗೆ ಮಾರಾಟವಾಗಿವೆ. ಇದನ್ನು, ಇದುವರೆಗಿನ ಅತಿದೊಡ್ಡ ಒಪ್ಪಂದವೆಂದು ಪರಿಗಣಿಸಲಾಗುತ್ತಿದೆ.

‘ಧುರಂಧರ್ 2’ ಚಿತ್ರದ ಒಟಿಟಿ ಬಿಡುಗಡೆಗೆ ಇನ್ನೂ ಅಧಿಕೃತ ದಿನಾಂಕವಿಲ್ಲ . ಆದರೆ ಇಂಡಸ್ಟ್ರಿ ಟ್ರೆಂಡ್ಸ್ ಮತ್ತು ಪಿಂಕ್ವಿಲ್ಲಾ, ಇಂಡಿಯಾ ಟುಡೇ ವರದಿಗಳ ಪ್ರಕಾರ, ಚಿತ್ರವು ಥಿಯೇಟ್ರಿಕಲ್ ಬಿಡುಗಡೆಯಾದ 45 ರಿಂದ 60 ದಿನಗಳಲ್ಲಿ ಒಟಿಟಿನಲ್ಲಿ ಸ್ಟ್ರೀಮ್ ಆಗುವ ಸಾಧ್ಯತೆಯಿದೆ. ಇದರರ್ಥ ರಣವೀರ್ ಅವರ ಚಿತ್ರವು ಜೂನ್ ಎರಡನೇ ವಾರದ ವೇಳೆಗೆ ಪ್ರಸಾರ ಕಾಣಬಹುದು.

ಇದನ್ನೂ ಓದಿ: ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

ಈ ಚಿತ್ರದ ಪೇಯ್ಡ್ ಪ್ರಿವ್ಯೂಗೂ ಭಾರಿ ಪ್ರತಿಕ್ರಿಯೆ ಸಿಕ್ಕಿದೆ. ಹಲವು ನಗರಗಳ ಚಿತ್ರಮಂದಿರಗಳು ಪ್ರೇಕ್ಷಕರಿಂದ ತುಂಬಿದ್ದವು. ಪೇಯ್ಡ್ ಪ್ರಿವ್ಯೂ ನಿಂದಲೇ ‘ಧುರಂಧರ್ 2’ ಚಿತ್ರ 43 ಕೋಟಿ ರೂಪಾಯಿಗಳ ಬಂಪರ್ ಕಲೆಕ್ಷನ್ ಗಳಿಸಿದೆ. ಮೊದಲ ದಿನದ ಕಲೆಕ್ಷನ್ 100 ಕೋಟಿ ರೂಪಾಯಿಗಳನ್ನು ದಾಟಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಂಜಯ್ ದತ್, ರಾಕೇಶ್ ಬೇಡಿ, ಸಾರಾ ಅರ್ಜುನ್ ನಟಿಸಿದ್ದಾರೆ.

‘ಧುರಂಧರ್ 2 ಸಿನಿಮಾ ಎಲ್ಲಾ ಕಡೆಗಳಿಂದ ಉತ್ತಮ ವಿಮರ್ಶೆ ಪಡೆದಿದೆ. ಈ ಚಿತ್ರ ಅನೇಕ ಕಡೆಗಳಲ್ಲಿ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿರುವುದು ಚಿತ್ರದ ಹೆಚ್ಚುಗಾರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೀಕಿಸಿ, ಟ್ರೋಲ್ ಮಾಡಿದವರಿಗೆ ಅವಾರ್ಡ್​ ಮೂಲಕ ಉತ್ತರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಅವರು ಅನೇಕ ವಿಷಯಗಳಿಗೆ ಟ್ರೋಲ್ ಆದ ಉದಾಹರಣೆ ಇದೆ. ಈಗ ಅವರು ಟ್ರೋಲ್ ಮಾಡುವ ಎಲ್ಲರಿಗೂ ತಮ್ಮ ಕೆಲಸದ ಮೂಲಕ ಉತ್ತರ ನೀಡಿದ್ದಾರೆ. ತೆಲಂಗಾಣ ಗದ್ದರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಅವಾರ್ಡ್ ಸ್ವೀಕರಿಸಿದರು. ಅಂದರೆ ಅವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿದ್ದು, ಅದನ್ನು ಸಿಎಂ ಕೈಯಿಂದ ಪಡೆದರು. ಈ ಸಂದರ್ಭದಲ್ಲಿ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡರು. ಅವರು ಉತ್ತರಿಸಿದ್ದು ಹಿಗೆ.

‘ಹಿಂದೆ ನಾನು ಟ್ರೋಲ್‌ಗಳನ್ನು ಎದುರಿಸಿದ್ದೆ. ಆದರೆ ಈಗ ರಾಜ್ಯ ಪ್ರಶಸ್ತಿ ಪಡೆದಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದೂ ಗರ್ಲ್ಫ್ರೆಂಡ್ ಚಿತ್ರಕ್ಕಾಗಿ ಪ್ರಶಸ್ತಿ ಪಡೆದಿದ್ದಕ್ಕೆ ತುಂಬಾ ಖುಷಿ ಇದೆ’ ಎಂದು ರಶ್ಮಿಕಾ ಹೇಳಿದರು. ಅವರು ಪಡೆದಿರುವ ಈ ಅವಾರ್ಡ್ ಟ್ರೋಲ್ಗಳಿಗೆ ನೀಡಿದ ಉತ್ತರ ಎಂದು ಪರಿಗಣಿಸಲಾಗಿದೆ.

ರಶ್ಮಿಕಾ ಮಂದಣ್ಣ ಅವರು ಈಗ ತೆಲಂಗಾಣದ ಸೊಸೆಯಾಗಿದ್ದಾರೆ. ಇದಕ್ಕೆ ಅವರಿಗೆ ಖುಷಿ ಇದೆ. ಈ ಖುಷಿಯನ್ನು ವೇದಿಕೆ ಮೇಲೆ ಹೊರಹಾಕಿದರು. ರಶ್ಮಿಕಾ ಮಂದಣ್ಣ ಅವರು ಈಗಲೂ ಟ್ರೋಲ್ ಎದುರಿಸುತ್ತಾರೆ. ಆದರೆ, ಅವರಿಗೆ ಇದು ಅಷ್ಟಾಗಿ ಪ್ರಭಾವ ಬೀರುತ್ತಿಲ್ಲ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹಳದಿ ಶಾಸ್ತ್ರದ ಕಲರ್​ಫುಲ್ ಫೋಟೋ ಗ್ಯಾಲರಿ

‘ರೆವಂತ್ ರೆಡ್ಡಿ ಸರ್, ನಿಮ್ಮ ಕೈಯಿಂದ ಪ್ರಶಸ್ತಿ ಸ್ವೀಕರಿಸುತ್ತಿರುವುದು ತುಂಬಾ ವಿಶೇಷ. ಎಲ್ಲಾ ತೀರ್ಪುಗಾರರಿಗೆ ತುಂಬಾ ಧನ್ಯವಾದಗಳು. ನನ್ನ ಅಭಿನಯಕ್ಕಾಗಿ ಪ್ರಶಸ್ತಿ ಪಡೆದಿರುವುದು ನನಗೆ ತುಂಬಾ ಹೆಮ್ಮೆ ತಂದಿದೆ. ಈ ಪ್ರಶಸ್ತಿ ನನಗೆ ಇನ್ನೂ ಇಂತಹ ಚಿತ್ರಗಳನ್ನು ಮಾಡಲು ಆತ್ಮವಿಶ್ವಾಸ ನೀಡಿದೆ. ಈ ಚಿತ್ರವನ್ನು ರಾಹುಲ್ ರವೀಂದ್ರನ್ ಅವರಿಂದ ಸಾಧ್ಯವಾಯಿತು. ಚಿತ್ರಕ್ಕಾಗಿ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದಗಳು. ನಾನು ಈ ಚಿತ್ರರಂಗಕ್ಕೆ ಬಂದಾಗ, ಎಲ್ಲರೂ ನನ್ನನ್ನು ಮಗಳಂತೆ ನೋಡಿಕೊಂಡರು. ಈಗ ನಾನು ನಿಮ್ಮ ಮುಂದೆ ಸೊಸೆಯಂತೆ ಇದ್ದೇನೆ. ಎಲ್ಲರೂ, ನನ್ನ ನೋಡಿಕೊಳ್ಳಿ’ ಎಂದು ರಶ್ಮಿಕಾ ಹೇಳಿದರು. ರಶ್ಮಿಕಾ ಮಾತನಾಡುತ್ತಿರುವಾಗ, ವಿಜಯ್ ದೇವರಕೊಂಡ ಅವರ ತಾಯಿ ಮತ್ತು ರಶ್ಮಿಕಾ ಅವರ ಅತ್ತೆ ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಬಂಟ್ವಾಳ: ಮಸೀದಿ ಮೆಟ್ಟಿಲೇರಿ ‘ಸೀಯಾಳ’ ಸ್ವೀಕರಿಸಿದ ದೈವ

ಬಂಟ್ವಾಳ, ಮಾ. 20: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮನುಷ್ಯತ್ವ ಮತ್ತು ಧಾರ್ಮಿಕ ಸಹಬಾಳ್ವೆಯ ಸುಂದರ ದೃಶ್ಯವೊಂದು ಅನಾವರಣಗೊಂಡಿದೆ. ಅರಸರ ಕಾಲದ ಪುರಾತನ ಪರಂಪರೆಯಂತೆ, ಮಂಜದಗೋಳಿ ಜಾತ್ರೆಯ ಸಂದರ್ಭದಲ್ಲಿ ದೈವದ ಭಂಡಾರವು ಮಸೀದಿಯ ಮೆಟ್ಟಿಲೇರಿ ಸೀಯಾಳ (ಎಳನೀರು) ಸ್ವೀಕರಿಸುವ ಮೂಲಕ ಸಮಾಜಕ್ಕೆ ಸಾಮರಸ್ಯದ ಸಂದೇಶ ಸಾರಿದೆ. ಪ್ರತಿ ವರ್ಷವೂ ಈ ಆಚರಣೆಗಳು ಇಲ್ಲಿ ನಡೆಯುತ್ತ ಬಂದಿದೆ. ಮುಸ್ಲಿಂ ಧರ್ಮದ ಜನ ದೈವಗಳಿಗೆ ಈ ಮೂಲಕ ವಿಶೇಷ ಗೌರವವನ್ನು ನೀಡುತ್ತಾರೆ.

ಸಜೀಪನಡು ಮೂಲಸ್ಥಾನದಿಂದ ಮಂಜದಗೋಳಿ ಕ್ಷೇತ್ರಕ್ಕೆ ಭಂಡಾರ ಸಾಗುವ ಹಾದಿಯಲ್ಲಿ ಈ ವಿಶಿಷ್ಟ ಆಚರಣೆ ನಡೆಯುತ್ತದೆ. ನಂದಾವರ ಕೇಂದ್ರ ಜುಮಾ ಮಸೀದಿಯ ಪ್ರಮುಖರು ದೈವದ ಭಂಡಾರಕ್ಕೆ ಭಕ್ತಿಯಿಂದ ಸೀಯಾಳ ಅರ್ಪಿಸುತ್ತಾರೆ. ದೈವವು ಮಸೀದಿಯ ನಾಲ್ಕು ಮೆಟ್ಟಿಲುಗಳನ್ನು ಹತ್ತಿ ಈ ಸೇವೆಯನ್ನು ಸ್ವೀಕರಿಸುವುದು ಇಲ್ಲಿನ ವಿಶೇಷವಾಗಿದೆ.

ಇದನ್ನೂ ಓದಿ: ಒಂದು ದಿನ ಮೊದಲೇ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಣೆ: ಮಾ 20ರಂದು ಸಾರ್ವತ್ರಿಕ ರಜೆ ಘೋಷಣೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮಂಜದಗೋಳಿ ಜಾತ್ರೆಯ ಅಂಗವಾಗಿ ನಡೆಯುವ ಈ ಸಂಪ್ರದಾಯವು ಈ ವರ್ಷವೂ (ಮಾರ್ಚ್ 17) ಅತ್ಯಂತ ಶ್ರದ್ಧೆಯಿಂದ ನೆರವೇರಿದೆ. ಇಂದಿನ ಕಾಲಘಟ್ಟದಲ್ಲಿ ಧರ್ಮಗಳ ನಡುವೆ ಗೋಡೆಗಳು ನಿರ್ಮಾಣವಾಗುತ್ತಿರುವಾಗ, ನಂದಾವರದ ಈ ಆಚರಣೆಯು ಸಹಬಾಳ್ವೆ ಮತ್ತು ಪರಸ್ಪರ ಗೌರವಕ್ಕೆ ಮಾದರಿಯಾಗಿದೆ. ಮಸೀದಿ ಹಾಗೂ ದೇವಸ್ಥಾನಗಳ ನಡುವಿನ ಈ ಅವಿನಾಭಾವ ಸಂಬಂಧ ಕರಾವಳಿಯ ಸಾಂಸ್ಕೃತಿಕ ಹೆಮ್ಮೆಯಾಗಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋ ದೈವ ಮಸೀದಿಯ ಬಳಿ ಬಂದು, ನಿಂತು ಎಲ್ಲರಿಗೂ ಅಭಯ ನೀಡುವುದನ್ನು ಕಾಣಬಹುದು. ದೈವ ಬರುವ ಮಾರ್ಗದಲ್ಲಿ ನಿಂತು ಸಾವಿರಾರೂ ಮುಸ್ಲಿಂ ಜನರು ಭಕ್ತಿಯಿಂದ ನೋಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗ್ಯಾಸ್ ಸಿಗದೆ ಸಂಕಷ್ಟದಲ್ಲಿ ಸ್ಟೀಲ್ ವೆಲ್ಡಿಂಗ್, ಕಟ್ಟಿಂಗ್ ಉದ್ಯಮ: ಕೆಆರ್ ಮಾರುಕಟ್ಟೆಯಲ್ಲಿ ಮುಚ್ಚಿಕೊಳ್ತಿವೆ ಒಂದೊಂದೇ ಅಂಗಡಿಗಳು

ಬೆಂಗಳೂರು, ಮಾರ್ಚ್ 20: ಬೆಂಗಳೂರಿನ (Bangalore) ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ (LPG Cylinder) ಅಭಾವ ಕೈ ಮೀರುವ ಹಂತಕ್ಕೆ ಬರುತ್ತಿದೆ. ಉದ್ಯಮಗಳು ಹಳ್ಳಹಿಡಿಯುತ್ತಿವೆ. ಹೋಟೆಲ್, ಪಿಜಿ ಸೇರಿದಂತೆ ಅನೇಕ ಉದ್ಯಮಗಳಿಗೆ ಭಾರೀ ಹೊಡೆತ ಬಿದ್ದಿದೆ. ಇದೀಗ ಸ್ಟೀಲ್ ಇಂಡಸ್ಟ್ರೀಸ್​ಗೂ ಏಟು ಬಿದ್ದಿದ್ದು, ಕೆಆರ್ ಮಾರುಕಟ್ಟೆಯ ಸ್ಟೀಲ್ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳು ಒಂದೊಂದೇ ಆಗಿ ಮುಚ್ಚಿಕೊಳ್ಳುತ್ತಿವೆ.

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಿಗದೆ ನಗರದ ಉದ್ಯಮಗಳು ಅಯೋಮಯಗೊಂಡಿವೆ. ಹೋಟೆಲ್ ಉದ್ಯಮಗಳಿಗೆ, ಗ್ಯಾಸ್ ಇಲ್ಲದಿದ್ದರೂ ಕನಿಷ್ಠ ಎಲೆಕ್ಟ್ರಿಕ್ ಅಥವಾ ಸೌದೆ‌ ಒಲೆಯಲ್ಲಾದರೂ ಆಹಾರ ತಯಾರಿಸಿ ಉದ್ಯಮ ನಡೆಸುವ ಅವಕಾಶ ಇದೆ. ಕೆಲವು ಹೋಟೆಲ್ ಮಾಲೀಕರು ಸೌದೆ ಒಲೆ, ಎಲೆಕ್ಟ್ರಿಕ್ ಒಲೆ ಮೇಲೆ ವ್ಯಾಪಾರ ನಡೆಸುತ್ತಿದ್ದಾರೆ. ಆದರೆ ಗ್ಯಾಸ್ ಸಿಗದೆ ಬೇರೆ ಪರ್ಯಾಯ ಮಾರ್ಗವೇ ಇಲ್ಲದ ಸ್ಟೀಲ್ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಉದ್ಯಮ ಇದೀಗ ಸಂಪೂರ್ಣ ನಷ್ಟದ ಸುಳಿಗೆ ಸಿಲುಕಿದೆ.

400ಕ್ಕೂ ಅಧಿಕ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳಿಗೆ ಕುತ್ತು

ಕೆಆರ್ ಮಾರ್ಕೆಟ್​ನ ಬಿ ಉಸ್ಮಾನ್ ಬೀದಿ ಹಾಗೂ ಅದರ ಸುತ್ತಮುತ್ತ ಬರೋಬ್ಬರಿ 400ಕ್ಕೂ ಅಧಿಕ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳಿವೆ. ಲಘು ಹಾಗೂ ಭಾರೀ ವಾಹನದ ಬಿಡಿ ಭಾಗಗಳ ಜೋಡಣೆ, ಕಬ್ಬಿಣದ ಪ್ಲೇಟ್​ಗಳ‌ ಕಟ್ಟಿಂಗ್ ಸೇರಿದಂತೆ ಕಮರ್ಷಿಯಲ್ ಗ್ಯಾಸ್ ಬಳಸಿಕೊಂಡು ನಡೆಯುವ ಉದ್ಯಮವಿದು. ಇದೇ ಕಾರಣಕ್ಕೆ ಪ್ರತಿ ದಿನ ಲಕ್ಷಾಂತರ ರೂಪಾಯಿ ವಹಿವಾಟು ಇಲ್ಲಿ ನಡೆಯುತ್ತದೆ. ಆದರೆ ಕಳೆದ ಒಂದು ವಾರದಿಂದ ಕಮರ್ಷಿಯಲ್ ಗ್ಯಾಸ್ ಸಿಗದೆ ವಹಿವಾಟು ಸಂಪೂರ್ಣ ಕುಸಿದು ಹೋಗಿದೆ. ಹೋಟೆಲ್​ಗಳಿಗೆ ಗ್ಯಾಸ್ ಇಲ್ಲದಿದ್ದರೆ ಸೌದೆ ಒಲೆಯಾದರೂ ಇದೆ. ನಮಗೆ ಗ್ಯಾಸ್ ಇಲ್ಲದಿದ್ದರೆ ಜೀವನವೇ ನಡೆಯಲ್ಲ ಎನ್ನುತ್ತಿದ್​ದಾರೆ ಇಲ್ಲಿನ ಅಂಗಡಿಗಳ ಮಾಲೀಕರು.

ಇದನ್ನೂ ಓದಿ: ಎಲ್​ಪಿಜಿ ಗ್ಯಾಸ್ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ! ಪೆಟ್ರೋಲ್ ಡೀಸೆಲ್​ಗೂ ಎದುರಾಗಲಿದೆ ಅಭಾವ? ಇಲ್ಲಿದೆ ಬಲವಾದ ಕಾರಣ

ಒಟ್ಟಿನಲ್ಲಿ, ಕಮರ್ಷಿಯಲ್ ಗ್ಯಾಸ್ ಅಭಾವ ಪ್ರತಿ ದಿನ ನಗರದಲ್ಲಿ ನೂರೆಂಟು ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ನಗರದ ಆರ್ಥಿಕ ಏಳಿಗೆಗೆ ಭಾರೀ ಹೊಡೆತ ತಟ್ಟುವುದಂತೂ ಗ್ಯಾರಂಟಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂದರ್ 2’ ಚಿತ್ರದ ಎದುರು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಗಳಿಸಿದ್ದೆಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ಎಷ್ಟು ದೊಡ್ಡ ಸಿನಿಮಾ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ರಿಲೀಸ್ ಆಗಬೇಕು ಎಂದರೆ ಚಿತ್ರದ ಬಗ್ಗೆ ಅಷ್ಟು ಕಾನ್ಫಿಡೆನ್ಸ್ ಇರಬೇಕು. ಡಾರ್ಲಿಂಗ್ ಕೃಷ್ಣ ಅವರಿಗೆ ‘ಲವ್ ಮಾಕ್ಟೇಲ್ 3’ ಚಿತ್ರದ ಬಗ್ಗೆ ಆ ವಿಶ್ವಾಸ ಇದೆ. ಈ ಕಾರಣದಿಂದಲೇ ‘ಧುರಂಧರ್ 2’ ಸಿನಿಮಾ ಎದುರು ‘ಲವ್ ಮಾಕ್ಟೇಲ್ 3’ ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ.

‘ಲವ್ ಮಾಕ್ಟೇಲ್’, ‘ಲವ್ ಮಾಕ್ಟೇಲ್ 2’ ಹಿಟ್ ಆದ ಬಳಿಕ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ಕೃಷ್ಣ ಕೈಗೆತ್ತಿಕೊಂಡರು. ಇದು ಬೇಕಿತ್ತಾ ಎಂದು ಪ್ರಶ್ನೆ ಮಾಡಿದವರು ಅನೇಕರಿದ್ದಾರೆ. ಈ ರೀತಿ ಪ್ರಶ್ನೆ ಮಾಡಿದವರೆಲ್ಲ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ಇಷ್ಟಪಡುತ್ತಿದ್ದಾರೆ. ಈ ಸಿನಿಮಾ ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ. ‘ಧುರಂಧರ್ 2’ ಮಧ್ಯೆಯೂ ಶೋ ಪಡೆದು ಸಿನಿಮಾ ಬೀಗುತ್ತಿದೆ.

ಏಪ್ರಿಲ್ ತಿಂಗಳಲ್ಲಿ ‘ಲವ್ ಮಾಕ್ಟೇಲ್ 3’ ರಿಲೀಸ್ ಆಗಬೇಕಿತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಿದ್ದರಿಂದ ‘ಲವ್ ಮಾಕ್ಟೇಲ್ 3’ ಚಿತ್ರ ಈ ದಿನಾಂಕದಂದು (ಮಾರ್ಚ್ 19) ಬರಲು ಸಿದ್ಧವಾಯ್ತು.ಇದು ನಿಜಕ್ಕೂ ಒಂದು ದೊಡ್ಡ ಚಾಲೆಂಜ್. ಈ ಚಾಲೆಂಜ್​​ನ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಸ್ವೀಕರಿಸಿ ಗೆದ್ದಿದ್ದಾರೆ.

‘ಲವ್ ಮಾಕ್ಟೇಲ್ 3’ ಸಿನಿಮಾ ಮೊದಲ ದಿನ 1.52 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ನೆಟ್ ಕಲೆಕ್ಷನ್ 1.36 ಕೋಟಿ ರೂಪಾಯಿ ಆಗಿದೆ ಎಂದು sacnilk ವರದಿ ಮಾಡಿದೆ. ‘ಧುರಂಧರ್ 2’ ಅಬ್ಬರದ ಮಧ್ಯೆಯೂ ‘ಲವ್ ಮಾಕ್ಟೇಲ್ 3’ ಸಿನಿಮಾ ಬೀಗುತ್ತಿದೆ ಅನ್ನೋದು ವಿಶೇಷ. ‘ಲವ್ ಮಾಕ್ಟೇಲ್ 3’ ಚಿತ್ರದ ಬಜೆಟ್ ಕಡಿಮೆ. ಹೀಗಾಗಿ, ಇದು ಸಿನಿಮಾಗೆ ಸಹಕಾರಿ ಆಗಲಿದೆ.

ಇದನ್ನೂ ಓದಿ: ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ ಆ್ಯಕ್ಷನ್ ಓರಿಯೆಂಟೆಡ್ ಚಿತ್ರ. ಈ ಸಿನಿಮಾ ಎ ಪ್ರಮಾಣಪತ್ರ ಪಡೆದಿದೆ. ಹೀಗಾಗಿ, ಎಲ್ಲಾ ವಯಸ್ಸಿನವರೂ ಸಿನಿಮಾ ನೋಡಲು ಸಾಧ್ಯವಿಲ್ಲ. ಆದರೆ, ‘ಲವ್ ಮಾಕ್ಟೇಲ್ 3’ ಸಿನಿಮಾ ಆ ರೀತಿ ಅಲ್ಲ. ಈ ಕಾರಣಕ್ಕೆ ಸಿನಿಮಾ ‘ಧುರಂಧರ್ 3’ ಚಿತ್ರದ ಎದುರು ರಿಲೀಸ್ ಆದರೂ ಒಳ್ಳೆಯ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link