Category Archives: Blog

Your blog category

ಕೊಟ್ಟ ಮಾತು ಉಳಿಸಿಕೊಂಡ ನಟ ಅಲ್ಲು ಅರ್ಜುನ್: ಭೇಷ್ ಎಂದ ನೆಟ್ಟಿಗರು

ಕೊಟ್ಟ ಮಾತು ಉಳಿಸಿಕೊಂಡ ನಟ ಅಲ್ಲು ಅರ್ಜುನ್: ಭೇಷ್ ಎಂದ ನೆಟ್ಟಿಗರು

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ‘ಪುಷ್ಪ’, ‘ಪುಷ್ಪ 2’ ಸಿನಿಮಾಗಳ ಬಳಿಕ ಅಲ್ಲು ಅರ್ಜುನ್ ರೇಂಜ್ ಭಾರತದ ಗಡಿ ದಾಟಿದೆ. ಇದೀಗ ಭಾರತದ ಸ್ಟಾರ್ ನಿರ್ದೇಶಕರುಗಳು ಒಬ್ಬರಾದ ಬಳಿಕ ಒಬ್ಬರೆಂಬಂತೆ ಅಲ್ಲು ಅರ್ಜುನ್ ಜೊತೆ ಸಾಲುಗಟ್ಟಿ ಸಿನಿಮಾ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ್ನು ಮಾಡಿದ್ದ ಅಲ್ಲು ಅರ್ಜುನ್, ಆ ಕಾರ್ಯವನ್ನು ಜೀವನ ಪರ್ಯಂತ ಮಾಡುವುದಾಗಿ ಹೇಳಿದ್ದರು. ಅದರಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಅಲ್ಲು ಅರ್ಜುನ್.

ಕಳೆದ ತಿಂಗಳ ಅಂತ್ಯದಲ್ಲಿ ಅಂದರೆ ಫೆಬ್ರವರಿ 28ರಂದು ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮಲಕೋಟ ಮಂಡಲದ ವೆಟ್ಲಪಾಲೆಂ ಹೆಸರಿನ ಹಳ್ಳಿಯೊಂದರಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ 22 ಮಂದಿ ಮೃತರಾಗಿ ಹಲವಾರು ಮಂದಿ ಗಾಯಗೊಂಡಿದ್ದರು. ಅವಘಡದಲ್ಲಿ ಮೃತರಾದ ವ್ಯಕ್ತಿಗಳ ಹಿನ್ನೆಲೆ, ಅವರ ಕುಟುಂಬದ ಹಿನ್ನೆಲೆಗಳ ಬಗ್ಗೆ ಆ ನಂತರ ಹಲವು ವರದಿಗಳು ಪ್ರಕಟಗೊಂಡವು. ಇದೇ ಅವಘಡದಲ್ಲಿ ಕಡಿಂಪಲ್ಲಿ ಧನರಾಜು ಹೆಸರಿನ ವ್ಯಕ್ತಿ ಮೃತರಾಗಿದ್ದರು. ಅವರಿಗೆ ಮಗಳೊಬ್ಬಳಿದ್ದು, ಆಕೆ ಬುದ್ಧಿಮಾಂದ್ಯತೆ ಹೊಂದಿದ್ದರು. ಇದ್ದ ಒಬ್ಬ ತಂದೆಯನ್ನು ಕಳೆದುಕೊಂದ್ದ ಕಡಿಂಪಲ್ಲಿ ದುರ್ಗ ಪರಿಸ್ಥಿತಿ ಅಂಧಕಾರದಲ್ಲಿ ಮುಳುಗುವುದರಲ್ಲಿತ್ತು. ಆದರೆ ಅಲ್ಲು ಅರ್ಜುನ್ ಆ ಬಾಲಕಿಗೆ ನೆರವಾಗುವುದಾಗಿ ಘೋಷಿಸಿದರು.

ಆಕೆ ಇರುವವರೆಗೆ ಆಕೆಯ ಜೀವನಕ್ಕಾಗಿ ಪ್ರತಿತಿಂಗಳು 7500 ರೂಪಾಯಿ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದರು. ಅಲ್ಲದೆ ತನ್ನ ಅಭಿಮಾನಿ ಬಳಗಕ್ಕೂ ಸಹ ಕಡಿಂಪಲ್ಲಿ ದುರ್ಗಾಗೆ ನೆರವಾಗುವಂತೆ ಮನವಿ ಮಾಡಿದರು. ಅದರಂತೆ ಇದೀಗ ಕಂಡಿಪಲ್ಲಿ ದುರ್ಗಾರ ಖಾತೆಗೆ ಹಣವನ್ನು ಅಲ್ಲು ಅರ್ಜುನ್ ಹಾಕಿದ್ದಾರೆ. ಕಂಡಿಪಲ್ಲಿ ದುರ್ಗ ಜೀವನ ಪರ್ಯಂತ ಅಲ್ಲು ಅರ್ಜುನ್ ಅವರು ಪ್ರತಿತಿಂಗಳು 7500 ರೂಪಾಯಿ ಹಣವನ್ನು ಹಾಕಲಿದ್ದಾರೆ. ಅಲ್ಲು ಅರ್ಜುನ್ ಅವರು ಒಬ್ಬ ಬುದ್ದಿಮಾಂದ್ಯ ಯುವತಿಯ ಜೀವನಕ್ಕಾಗಿ ಮಾಡುತ್ತಿರುವ ಈ ಮಾನವೀಯ ಸಹಾಯ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ಹಲವರು ಅಲ್ಲು ಅರ್ಜುನ್ ಅವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ವಯಸ್ಸಿಗೆ ಮೀರಿದ ಸಾಧನೆ: ಅಪರೂಪದ ದಾಖಲೆ ಬರೆದ ಅಲ್ಲು ಅರ್ಜುನ್ ಪುತ್ರಿ ಆರ್ಹಾ

ಈ ಹಿಂದೆ ಅಲ್ಲು ಅರ್ಜುನ್ ಅವರ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತದಿಂದ ಒಬ್ಬ ಮಹಿಳೆ ಮೃತಪಟ್ಟು, ಆಕೆಯ ಮಗ ಕೋಮಾಕ್ಕೆ ಜಾರಿದ್ದ. ಅವರಿಗೂ ಸಹ ಅಲ್ಲು ಅರ್ಜುನ್ ಕೋಟ್ಯಂತರ ರೂಪಾಯಿ ಸಹಾಯ ಮಾಡಿದ್ದು ಮಾತ್ರವೇ ಅಲ್ಲದೆ, ಈಗಲೂ ಕೋಮಾನಲ್ಲಿಯೇ ಇರುವ ಆ ಬಾಲಕನ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಅಲ್ಲು ಅರ್ಜುನ್ ಅವರೇ ಭರಿಸುತ್ತಿದ್ದಾರೆ. ಇದು ಮಾತ್ರವೇ ಅಲ್ಲದೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳಲ್ಲಿ ಅಲ್ಲು ಅರ್ಜುನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಸ್ಟಾರ್ ವೇಗಿಗಳಿಗೆ ಇಂಜುರಿ; ಥಂಡಾ ಹೊಡೆದ ತಂಡಗಳು

ಐಪಿಎಲ್ (IPL 2026) ಆರಂಭಕ್ಕೆ ಇನ್ನು ಹೆಚ್ಚು ದಿನಗಳು ಉಳಿದಿಲ್ಲ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿದ್ದು, ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ತಂತ್ರ ರೂಪಿಸುತ್ತಿವೆ. ಆದಾಗ್ಯೂ ಕೆಲವು ತಂಡಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಸ್ಟಾರ್ ವೇಗಿಗಳೇ ಗಾಯದಿಂದ ಬಳಲುತ್ತಿರುವುದು ತಂಡಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೌಲರ್​ಗಳ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ತಂಡಗಳ ಪಟ್ಟಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH), ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಸೇರಿದೆ.

ಹೇಜಲ್‌ವುಡ್ ಬರುವುದು ಯಾವಾಗ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಇದರಿಂದಾಗಿ ಅವರು ಆಶಸ್ ಹಾಗೂ ಟಿ20 ವಿಶ್ವಕಪ್ ಆಡಲು ಸಾಧ್ಯವಾಗಿರಲಿಲ್ಲ. ಇದೀಗ ಐಪಿಎಲ್ ಸಮೀಪಿಸುತ್ತಿದ್ದು, ಅವರು ಐಪಿಎಲ್‌ನಲ್ಲಿ ಆಡುವುದು ಇದುವರೆಗೆ ಖಚಿತವಾಗಿಲ್ಲ. ಕಳೆದ ಬಾರಿ ಆರ್‌ಸಿಬಿಯ ವೇಗದ ದಾಳಿಗೆ ಬಲ ತುಂಬಿದ್ದ ಹೇಜಲ್‌ವುಡ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈ ಬಾರಿ ಅವರ ಲಭ್ಯತೆ ಅನುಮಾನವಾಗಿದೆ.

ಎಸ್​ಆರ್​ಹೆಚ್​ ನಾಯಕನಿಗೆ ಇಂಜುರಿ

ಕಳೆದ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಆಶಸ್ ಟೆಸ್ಟ್ ಪಂದ್ಯದಲ್ಲಿ ಕಮ್ಮಿನ್ಸ್ ಗಾಯಗೊಂಡಿದ್ದರು. ಅಂದಿನಿಂದ ಕಮ್ಮಿನ್ಸ್ ಕ್ರಿಕೆಟ್ ಆಡಿಲ್ಲ. ಇದೀಗ ಕಮ್ಮಿನ್ಸ್ ಐಪಿಎಲ್‌ನಲ್ಲಿ ಆಡುವುದು ಅನುಮಾನವಾಗಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಇಶಾನ್ ಕಿಶನ್​ಗೆ ತಂಡದ ನಾಯಕತ್ವ ವಹಿಸಿದೆ.

ಕೋಲ್ಕತ್ತಾಗೆ ಎರಡೆರಡು ಆಘಾತ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೂ ಸ್ಟಾರ್ ವೇಗಿಗಳ ಇಂಜುರಿ ದೊಡ್ಡ ತಲೆನೋವಾಗಿದೆ. ತಂಡದ ಪ್ರಮುಖ ವೇಗಿಗಳಾದ ಹರ್ಷಿತ್ ರಾಣಾ ಮತ್ತು ಮಥಿಶಾ ಪತಿರಾನ ಗಾಯಗಳಿಂದಾಗಿ ಈ ಆವೃತ್ತಿಯಿಂದಲೇ ಹೊರಗುಳಿದಿದ್ದಾರೆ. ಅಲ್ಲದೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರ ಹಾಕಿದ ಬಳಿಕ ಇದೀಗ ಕೆಕೆಆರ್ ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಸರಬಾನಿಯನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ.

IPL 2026: ವೃತ್ತಿಜೀವನಕ್ಕಾಗಿ ಮಹಾ ತ್ಯಾಗ ಮಾಡಿದ ಯುಜ್ವೇಂದ್ರ ಚಾಹಲ್

ಸಿಎಸ್​ಕೆ ವೇಗಿಗೂ ಗಾಯ

ಇದೀಗ ಐದು ಬಾರಿಯ ಚಾಂಪಿಯನ್‌ ತಂಡ ಸಿಎಸ್​ಕೆಗೂ ಸ್ಟಾರ್ ವೇಗಿಯ ಗಾಯದ ಸಮಸ್ಯೆ ದೊಡ್ಡ ಆಘಾತ ಎದುರಾಗಿದೆ. ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ ಅಥವಾ ಪಂದ್ಯಾವಳಿ ನಂತರವೂ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದರಿಂದಾಗಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ಸಿಎಸ್​ಕೆ ಪಾಳಯಕ್ಕೆ ದೊಡ್ಡ ಆಘಾತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಜೀವನದಲ್ಲಿ ಈ ಮೂರು ವಿಷಯಗಳ ನಿರ್ಲಕ್ಷ್ಯ ಸಲ್ಲದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಮೌಲ್ಯಯುತ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಚಾಣಕ್ಯರ ಈ ಬೋಧನೆಗಳನ್ನು  ಜೀವನದಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಮತ್ತು ಸಮೃದ್ಧ ಜೀವನವನ್ನು ಸಾಗಿಸಬಹುದು ಎಂದು ಹೇಳಲಾಗುತ್ತದೆ. ಇದೇ ರೀತಿ ನೀವು ಕೂಡ ಯಶಸ್ವಿ ಜೀವನವನ್ನು ನಡೆಸಬೇಕೆಂದರೆ, ಈ ಕೆಲವೊಂದು ವಿಚಾರಗಳ ಬಗ್ಗೆ ಅಸಡ್ಡೆ ತೋರುವುದನ್ನು ನಿಲ್ಲಿಸಿ. ಹೌದು ಮುಖ್ಯವಾಗಿ ಜೀವನದ ಈ ಮೂರು ವಿಷಯಗಳನ್ನು ಹಗುರವಾಗಿ ಪರಿಗಣಿಸಿದರೆ, ಮುಂದೊಂದು ದಿನ ವಿಷಾದಪಡಬೇಕಾಗುತ್ತದೆ ಅದೇ ಈ ಅಂಶಗಳ ಮಹತ್ವವನ್ನು ಸಮಯಕ್ಕೆ ಸರಿಯಾಗಿ ಅರ್ಥಮಾಡಿಕೊಂಡರೆ, ಯಶಸ್ವಿ ಜೀವನವನ್ನು ನಡೆಸಬಹುದು. ಹಾಗಿದ್ರೆ ಚಾಣಕ್ಯರು ಹೇಳಿರುವಂತೆ ಯಾವ ಮೂರು ಸಂಗತಿಗಳನ್ನು ಹಗುರವಾಗಿ ಪರಿಗಣಿಸಬಾರದು ಎಂಬುದನ್ನು ನೋಡೋಣ ಬನ್ನಿ.

ಜೀವನದಲ್ಲಿ ವಿಚಾರಗಳನ್ನು ಹಗುರವಾಗಿ ಪರಿಗಣಿಸಬೇಡಿ:

ಸಮಯವನ್ನು ಹಗುರವಾಗಿ ತೆಗೆದುಕೊಳ್ಳುವ ತಪ್ಪನ್ನು ಮಾಡಬೇಡಿ: ಆಚಾರ್ಯ ಚಾಣಕ್ಯರ ಪ್ರಕಾರ,  ಸಮಯವು ನಿಮ್ಮಲ್ಲಿರುವ ಅತ್ಯಂತ ಅಮೂಲ್ಯ ವಸ್ತುಗಳಲ್ಲಿ ಒಂದಾಗಿದೆ. ಒಮ್ಮೆ ಕಳೆದುಹೋದ ಸಮಯವನ್ನು ಎಂದಿಗೂ ಮರಳಿ ಪಡೆಯಲು ಸಾಧ್ಯವಿಲ್ಲ. ಅನೇಕ ಜನರು ಸಮಯವನ್ನು ನಿರ್ಲಕ್ಷಿಸುತ್ತಾರೆ. ಆಗಬೇಕಾದ ಕೆಲಸಗಳನ್ನು ಮುಂದೂಡುತ್ತಲೇ ಇರುತ್ತಾರೆ. ಈ ತಪ್ಪಿನ ಕಾರಣದಿಂದಾಗಿ ಯಶಸ್ಸು ಲಭಿಸುವುದಿಲ್ಲ. ಯಾರು ಸಮಯವನ್ನು ಬುದ್ಧಿವಂತಿಕೆಯಿಂದ ಬಳಸಿದರೆ ಮತ್ತು ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವ ಅಭ್ಯಾಸವನ್ನು ಬೆಳೆಸಿಕೊಂಡರೆ ಮಾತ್ರ ಅವರು ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎನ್ನುತ್ತಾರೆ ಚಾಣಕ್ಯ.

ಜ್ಞಾನ ಮತ್ತು ಶಿಕ್ಷಣವನ್ನು ನಿರ್ಲಕ್ಷಿಸಬೇಡಿ: ಚಾಣಕ್ಯ ನೀತಿಯ ಪ್ರಕಾರ, ವ್ಯಕ್ತಿಯ ದೊಡ್ಡ ಶಕ್ತಿ ಆತನ ಜ್ಞಾನ. ಜ್ಞಾನವನ್ನು ಹೊಂದಿರುವ ವ್ಯಕ್ತಿಯು ಪ್ರತಿಯೊಂದು ಸಂದರ್ಭದಲ್ಲೂ ಬುದ್ಧಿವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಮತ್ತು ಬುದ್ಧಿವಂತ ವ್ಯಕ್ತಿ ಯಾವುದೇ ಕಷ್ಟದಿಂದ ಬೇಕಾದರೂ ಸುಲಭವಾಗಿ ಪಾರಾಗುತ್ತಾರೆ. ಆದರೆ ಹೊಸ ವಿಚಾರಗಳನ್ನು ಕಲಿಯುವ ಮತ್ತು ಜ್ಞಾನವನ್ನು ಪಡೆಯುವ ಬಗ್ಗೆ ಅಸಡ್ಡೆ ತೋರುವವರು ಜೀವನದಲ್ಲಿ ಮುಂದೆ ಬರಲು ಸಾಧ್ಯವೇ ಇಲ್ಲ ಎನ್ನುತ್ತಾರೆ ಆಚಾರ್ಯ ಚಾಣಕ್ಯ. ನೀವು ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ, ಯಾವಾಗಲೂ ಹೊಸ ವಿಚಾರಗಳನ್ನು ಕಲಿಯುವುದರಲ್ಲಿ ಆಸಕ್ತಿಯನ್ನು ಹೊಂದಿರಬೇಕು.

ಇದನ್ನೂ ಓದಿ: ಎರಡು ವೈಯಕ್ತಿಕ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ತಪ್ಪಿಯೂ ಕೂಡ ಶೇರ್‌ ಮಾಡಬಾರದು

ಸಂಬಂಧಗಳ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ: ಯಾವುದೇ ವ್ಯಕ್ತಿಯ ಜೀವನದಲ್ಲಿ ಸಂಬಂಧಗಳು ಪ್ರಮುಖ ಪಾತ್ರ ವಹಿಸುತ್ತವೆ. ಸ್ನೇಹಿತರು, ಅಮ್ಮ, ಅಪ್ಪ, ಹೆಂಡತಿ, ಮಕ್ಕಳು ಕುಟುಂಬ ಈ ಎಲ್ಲಾ ಸಂಬಂಧ ಪ್ರತಿಯೊಬ್ಬರ ಜೀವನದಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಅನೇಕ ಜನರು, ತಮ್ಮ ಕೆಲಸದ ಕಾರಣದಿಂದಾಗಿ ಕುಟುಂಬಕ್ಕೆ ಸಮಯ ಮೀಸಲಿಡಲು ಮರೆತು ಹೋಗುತ್ತಾರೆ ಮತ್ತು ಸಂಬಂಧಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಾರೆ. ಆಚಾರ್ಯ ಚಾಣಕ್ಯರ ಪ್ರಕಾರ, ಸಂಬಂಧಗಳ ಮಹತ್ವವನ್ನು ಅರ್ಥಮಾಡಿಕೊಳ್ಳದ ವ್ಯಕ್ತಿಯು ಮುಂದೆ ಜೀವನದಲ್ಲಿ ಒಂಟಿತನವನ್ನು ಅನುಭವಿಸಬೇಕಾಗುತ್ತದೆ. ಹಾಗಾಗಿ ಕೆಲಸದ ಮಧ್ಯೆಯೂ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬ, ಸ್ನೇಹಿತರೊಂದಿಗೆ ಸಮಯವನ್ನು ಕಳೆಯಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಲ್ಲಿ @TheVibeBandit ಎಂಬ ಖಾತೆ ಹಂಚಿಕೊಂಡಿದೆ. 23 ಸೆಕೆಂಡುಗಳ ಈ ವಿಡಿಯೋವನ್ನು ಈಗಾಗಲೇ ಎಂಟೂವರೆ ಲಕ್ಷ ಜನರು ವೀಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

Source link

Video: ಬಾಯಾರಿದ ಮಂಗಕ್ಕೆ ನೀರು ಕುಡಿಸಿ ಮಾನವೀಯತೆ ಮೆರೆದ ಯುವಕ

ಈ ಸ್ವಾರ್ಥ (selfish) ತುಂಬಿದ ಪ್ರಪಂಚದಲ್ಲಿ ಮಾನವೀಯತೆ, ಬೆಲೆಯಿಲ್ಲ ಎಂಬ ಮಾತಿದೆ. ಸ್ವಾರ್ಥ ಜನರ ನಡುವೆ ಹೃದಯವಂತ ಹಾಗೂ ಸಹಾಯ ಮಾಡುವ ಗುಣವಿರುವ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಹೆಮ್ಮೆಯಾಗುತ್ತದೆ. ನಾವು ಮಾಡುವ ಸಣ್ಣ ಪುಟ್ಟ ಸಹಾಯವು ಕೂಡ ಇನ್ನೊಬ್ಬರ ಜೀವ ಉಳಿಸುತ್ತದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಯುವಕನು (young man) ಮಂಗನಿಗೆ ನೀರು ಕುಡಿಸಿ ಅದರ ಬಾಯಾರಿಕೆ ನೀಗಿಸಿ ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯುವಕನ ಮಾನವೀಯ ಕೆಲಸವನ್ನು ಹಾಡಿಹೊಗಳಿದ್ದಾರೆ.

Manjunath Lokapur ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬಾಯಾರಿದ ಮಂಗವೊಂದು ನೀರಿಗಾಗಿ ಹಪತಪಿಸಿದೆ. ಇದೇ ವೇಳೆ ಯುವಕನು ನಲ್ಲಿ ನೀರು ಕುಡಿಸಿ ಮಂಗನ ಬಾಯಾರಿಕೆ ನೀಗಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

 

ಇದನ್ನೂ ಓದಿ: ಕಾಲೆರಡು ಸ್ವಾಧೀನ ಕಳೆದುಕೊಂಡ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ವ್ಯಕ್ತಿ

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಜೈ ಶ್ರೀರಾಮ್ ಎಂದರೆ, ಮತ್ತೊಬ್ಬರು ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮೂಕ ಪ್ರಾಣಿಗಳಿಗೆ ಸಹಾಯ ಮಾಡುವ ಗುಣ ಇಷ್ಟ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಇರಾನ್ ಹೊಸ ವರಸೆ; ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಕ್ಕೆ ಆಲೋಚನೆ

ನವದೆಹಲಿ, ಮಾರ್ಚ್ 19: ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಗೆ ಮತ್ತು ಬೆದರಿಕೆಗಳಿಗೆ ಬಗ್ಗೆ ಪ್ರತಿರೋಧ ವ್ಯಕ್ತಪಡಿಸುತ್ತಿರುವ ಇರಾನ್ ಇದೀಗ ಹಾರ್ಮುಜ್ ಜಲಸಂಧಿಯನ್ನು (Hormuz Strait) ಪೂರ್ಣವಾಗಿ ಹತೋಟಿಗೆ ತೆಗೆದುಕೊಂಡಿದೆ. ಜಗತ್ತಿನ ಶೇ. 20ಕ್ಕೂ ಹೆಚ್ಚು ತೈಲ ಮತ್ತು ಗ್ಯಾಸ್ ಅನ್ನು ಹಡಗುಗಳ ಮೂಲಕ ಇದೇ ಹಾರ್ಮುಜ್ ಸ್ಟ್ರೇಟ್​ನಿಂದ ಸಾಗಿಸಲಾಗುತ್ತದೆ. ಈಗ ಇದನ್ನೇ ಇರಾನ್ ತನ್ನ ಆದಾಯ ಮೂಲವಾಗಿ ಮಾಡಿಕೊಳ್ಳಲು ಆಲೋಚಿಸಿದೆ. ವರದಿಗಳ ಪ್ರಕಾರ, ಹಾರ್ಮುಜ್ ಜಲಸಂಧಿಯಿಂದ ಅರೇಬಿಯನ್ ಸಮುದ್ರ ಮುಟ್ಟಲು ಹಡಗುಗಳಿಗೆ ಸಾಗಣೆ ಅನುಮತಿ ಶುಲ್ಕ (ಟ್ರಾನ್ಸಿಟ್ ಫೀ) ವಿಧಿಸುವ ಒಂದು ಪ್ರಸ್ತಾಪವನ್ನು ಇರಾನ್ ಪರಿಗಣಿಸುತ್ತಿದೆಯಂತೆ.

ಹಾರ್ಮುಜ್ ಜಲಸಂಧಿಯು ಬಹಳ ಕಿರಿದಾದ ಜಲಮಾರ್ಗವಾಗಿದೆ. ಪರ್ಷಿಯನ್ ಗಲ್ಫ್ ಮತ್ತು ಅರಬ್ಬಿ ಸಮುದ್ರವನ್ನು ಸಂಪರ್ಕಿಸುವ ಜಲಮಾರ್ಗ ಅದು. ಸೌದಿ, ಕತಾರ್ ಇತ್ಯಾದಿ ಗಲ್ಫ್ ರಾಷ್ಟ್ರಗಳಿಂದ ತೈಲ, ಗ್ಯಾಸ್, ಹಾಗೂ ಇತರ ಸರಕುಗಳನ್ನು ಹಡಗುಗಳ ಮೂಲಕ ಇದೇ ಜಲಮಾರ್ಗದಿಂದ ಸಾಗಿಸಲಾಗುತ್ತದೆ. ಇಲ್ಲಿಂದ ಪೂರೈಕೆಯಾಗುವ ತೈಲ ಮತ್ತು ಅನಿಲದ ಮೇಲೆ ಹೆಚ್ಚಿನ ಏಷ್ಯನ್ ದೇಶಗಳು ಅವಲಂಬಿತವಾಗಿವೆ. ಗಲ್ಫ್ ರಾಷ್ಟ್ರಗಳಿಗೂ ಇದು ಪ್ರಮುಖ ಆದಾಯ ಮೂಲವಾಗಿದೆ. ಹೀಗಾಗಿ, ಇರಾನ್ ದೇಶ ಹಾರ್ಮುಜ್ ಜಲಸಂಧಿಯನ್ನು ಇಟ್ಟುಕೊಂಡು ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳಿಗೆ ಮರ್ಮಾಘಾತ ಕೊಡಲು ಅಣಿಗೊಂಡಂತಿದೆ.

ಇದನ್ನೂ ಓದಿ: ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ಒಂದು ಮಾಹಿತಿ ಪ್ರಕಾರ ಹಾರ್ಮುಜ್ ಜಲಮಾರ್ಗದಲ್ಲಿ ಒಂದು ದಿನಕ್ಕೆ 100ರಿಂದ 135 ಹಡಗುಗಳು ಹಾದು ಹೋಗುತ್ತವೆ. ಇದರಲ್ಲಿ 15-20 ತೈಲ ಟ್ಯಾಂಕರ್​ಗಳಿವೆ. ವಿಶ್ವದ ಶೇ. 20ರಷ್ಟು ತೈಲ ಸಾಗಣೆ ಇದೇ ಮಾರ್ಗದಲ್ಲಿ ಆಗುವುದು. ಹೀಗಾಗಿ, ಇರಾನ್​ಗೆ ತನ್ನ ಪ್ರಭಾವ ಮತ್ತು ಶಕ್ತಿ ಹೆಚ್ಚಿಸಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಅಷ್ಟೇ ಅಲ್ಲದೆ ಆಹಾರ ಮತ್ತಿತರೆ ವಸ್ತುವನ್ನು ಹೊತ್ತು ಸಾಗುವ ಎಲ್ಲಾ ದೇಶಗಳ ಹಡಗುಗಳು ಇರಾನ್​ಗೆ ಟೋಲ್ ಮತ್ತು ತೆರಿಗೆ ಪಾವತಿಸುವಂತೆ ಕಾನೂನು ತರುವಂತಹ ಮಸೂದೆಯನ್ನು ರಚಿಸಲಾಗುತ್ತಿದೆ. ಯುದ್ಧ ಮುಗಿದ ಬಳಿಕ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಬಂಧನೆಗಳ ವ್ಯವಸ್ಥೆ ತರಲಾಗುತ್ತದೆ. ತನ್ನ ಮೇಲೆ ನಿಷೇಧ ಹೇರಿದ ದೇಶಗಳಿಗೆ ಜಲನಿರ್ಬಂಧಗಳನ್ನು ಹಾಕಲು ಇರಾನ್​ಗೆ ಅವಕಾಶ ಕೊಡುವಂತಹ ಕಾನೂನು ಇದಾಗಿರುತ್ತದೆ ಎಂದು ಇರಾನ್​ನ ಸರ್ವೋಚ್ಚ ನಾಯಕರಿಗೆ ಸಲಹೆಗಾರರಾದವರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

ಹಾರ್ಮುಜ್ ಜಲಸಂಧಿಯ ಅಗಲ ಕೇವಲ 33 ಕಿಮೀ ಮಾತ್ರವೇ ಇರುವುದು. ಹೀಗಾಗಿ, ಹಡಗುಗಳ ಸಾಗಣೆ ಇಲ್ಲಿ ಅಷ್ಟು ಸುಗಮವಿಲ್ಲ. ಈ ಜಲಸಂಧಿಯನ್ನು ಇರಾನ್ ಮತ್ತು ಓಮನ್ ನಿಯಂತ್ರಿಸುತ್ತವೆ. ಇರಾನ್ ಅನುಮತಿ ಇಲ್ಲದೇ ಯಾವ ಹಡಗುಗಳು ಇಲ್ಲಿ ಸಾಗುವುದು ಕಷ್ಟ. ಸದ್ಯದ ಯುದ್ಧ ಬಿಕ್ಕಟ್ಟಿನಲ್ಲಿ ಇಲ್ಲಿ ಹೊರಹೋಗಲಾಗದೆ ಸ್ಥಗಿತಗೊಂಡಿರುವ ಹಡಗುಗಳ ಸಂಖ್ಯೆ ಸಾವಿರಕ್ಕೂ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೀಗಿತ್ತು ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳ ಯುಗಾದಿ: ಚಿತ್ರಗಳ ನೋಡಿ

Source link

IPL 2026: ವೃತ್ತಿಜೀವನಕ್ಕಾಗಿ ಮಹಾ ತ್ಯಾಗ ಮಾಡಿದ ಯುಜ್ವೇಂದ್ರ ಚಾಹಲ್

Source link

ಯುಗಾದಿಯಂದೇ ಕಾಲಭೈರವೇಶ್ವರ ದೇಗುಲ ಮುಂದೆ ಮಾಟ ಮಂತ್ರ: ಬೆಚ್ಚಿಬಿದ್ದ ಜನರು

ಚಿಕ್ಕಮಗಳೂರು, ಮಾರ್ಚ್​ 19: ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು (black magic) ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ (temple) ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಅದರಲ್ಲೂ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ.

ಯುಗಾದಿ ಹಬ್ಬದ ದಿನವೇ ದೇವಾಲಯದ ಮುಂದೆ ವಾಮಾಚಾರ

ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು ದೇವಸ್ಥಾನಗಳು ಸೇರುತ್ತೆ. ಅದರಲ್ಲಿಯೂ ಗಿರಿಜಾ ಕಲ್ಯಾಣದ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಕಳಸ ಪಟ್ಟಣದ ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನದ ಮುಂಭಾಗದಲ್ಲಿ ವಾಮಾಚಾರ ಮಾಡಲಾಗಿದೆ ಅದು ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿ ಹಬ್ಬದ ದಿನವೇ.

ಇದನ್ನೂ ಓದಿ: ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ತೆಂಗಿನಕಾಯಿ, ಅರಿಶಿನ, ಕುಂಕುಮ, ನಾಣ್ಯ, ನಿಂಬೆ ಹಣ್ಣು ಸೇರಿದಂತೆ ಹಲವು ವಸ್ತುಗಳನ್ನ ಬಳಕೆ ಮಾಡಲಾಗಿದೆ. ದೇವಾಲಯದ ಮುಂಭಾಗದಲ್ಲಿ ನಾಲ್ಕು ಕಲ್ಲುಗಳನ್ನ ಇಟ್ಟು ಪೂಜೆ ಮಾಡಲಾಗಿದೆ. ಹಬ್ಬದ ದಿನ ಪೂಜಾ ಕೈಂಕರ್ಯ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡೋಣ ಅಂತಾ ಮುಂಜಾನೆ ಬಂದ ಅರ್ಚಕರು ವಾಮಾಚಾರ ಕಂಡು ಬೆಚ್ಚಿಬಿದ್ದಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹ

ಇನ್ನು ಕಳಸ ಸಮೀಪದ ಕಂಚಿಕೆರೆ ಕಾಲಭೈರವ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಭಕ್ತರಿದ್ದಾರೆ. ಹೊರ ಜಿಲ್ಲೆ ಸೇರಿದಂತೆ ಸ್ಥಳೀಯರು ಕಾಲಭೈರವನನ್ನ ನಂಬಿ ಪೂಜಿಸುತ್ತಾರೆ. ದೇವಸ್ಥಾನದ ಮುಂದೆಯೇ ವಾಮಾಚಾರ ಮಾಡಿರುವುದರಿಂದ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವೂ ವಾಮಾಚಾರ ನಡೆದ ಕಾಲಭೈರವ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. ಇಂದು ವಾಮಾಚಾರ ಮಾಡಲಾಗಿದೆ. ಕಳಸ ಭಾಗದಲ್ಲಿ ಹರಿಯುವ ಭದ್ರಾ ನದಿಯ ತಟದಲ್ಲಿ ವಾಮಾಚಾರದ ಪ್ರಕರಣ ನಡೆಯುತ್ತಲೇ ಇತ್ತು. ಈಗ ದೇವಸ್ಥಾನದ ಮುಂದೆಯೇ ಮಾಡಿದ್ದಾರೆ. ಅದು ಬಹುತೇಕ ತಡರಾತ್ರಿ ಎರಡರಿಂದ ಮೂರುಗಂಟೆಯೊಳಗೆ ನಡೆದಿರಬಹುದು ಎನ್ನಲಾಗುತ್ತಿದೆ. ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

ದೇವಾಲಯದ ಮುಂಭಾಗದಲ್ಲಿ ವಾಮಾಚಾರ ಮಾಡಿರುವ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿಯವರಾ? ಅಥವಾ ಹೊರ ಭಾಗದವರಾ? ಅನ್ನೋ ಅನುಮಾನ ಸ್ಥಳೀಯರು ಮುಂದಿಟ್ಟಿದ್ದಾರೆ. ಪವಿತ್ರ ಭದ್ರಾ ನದಿ ಹಾಗೂ ಸುತ್ತಮುತ್ತ ಇರುವ ದೇವಸ್ಥಾನಗಳಲ್ಲಿ ಇತ್ತೀಚಿನ ದಿನದಲ್ಲಿ ವಾಮಾಚಾರ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಕಳಸದ ಜನರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link