Category Archives: Blog

Your blog category

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 18: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಮೃತಪಟ್ಟಿದ್ದಾರೆ. ಗುಪ್ತಚರ ಇಲಾಖೆಯ ಎಸ್ಮಾಯಿಲ್ ಖತೀಬ್ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ದೃಢಪಡಿಸಿದ್ದಾರೆ. ಈ ದಾಳಿಯನ್ನು ಅವರು “ಹೇಡಿತನದ ಹತ್ಯೆ” ಎಂದು ಕರೆದಿದ್ದಾರೆ. ಇಸ್ರೇಲ್ ತನ್ನ ಪಡೆಗಳು ಟೆಹ್ರಾನ್ ಮೇಲೆ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿ ನಡೆಸಿ ಸಚಿವ ಎಸ್ಮಾಯಿಲ್ ಅವರನ್ನು ಹತ್ಯೆ ಮಾಡಿವೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ (Iran War) ಕೂಡ ಈ ಬಗ್ಗೆ ದೃಢಪಡಿಸಿದೆ.

ಇರಾನ್‌ನಾದ್ಯಂತ ಇತ್ತೀಚೆಗೆ ನಡೆದ ಪ್ರತಿಭಟನೆಗಳಲ್ಲಿ ಎಸ್ಮಾಯಿಲ್ ಖತೀಬ್ ಮಹತ್ವದ ಪಾತ್ರ ವಹಿಸಿದ್ದಾರೆ. ಪ್ರತಿಭಟನಾಕಾರರ ಬಂಧನ ಮತ್ತು ಹತ್ಯೆ ಸೇರಿದಂತೆ ಪ್ರಮುಖ ನಿರ್ಧಾರಗಳಲ್ಲಿ ಅವರು ಪಾತ್ರ ವಹಿಸಿದ್ದರು. ಅವರು ಇಸ್ರೇಲಿಗಳು ಮತ್ತು ಅಮೆರಿಕನ್ನರ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಮುನ್ನಡೆಸಿದ್ದಾರೆ ಎಂದು ಐಡಿಎಫ್ ಹೇಳಿತ್ತು.

ಇದನ್ನೂ ಓದಿ: ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಎಸ್ಮಾಯಿಲ್ ಖತೀಬ್ ಒಬ್ಬ ಶಿಯಾ ಧರ್ಮಗುರು. ಅವರು ಇರಾನ್‌ನ ನ್ಯಾಯಾಂಗ ಮತ್ತು ಗುಪ್ತಚರ ಸಚಿವಾಲಯದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರು. ಅವರು 1980ರ ದಶಕದಲ್ಲಿ ಇರಾನ್-ಇರಾಕ್ ಯುದ್ಧದ ಸಮಯದಲ್ಲಿ ಕ್ರಾಂತಿಕಾರಿ ಗಾರ್ಡ್‌ನಲ್ಲಿಯೂ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ಯುದ್ಧದಲ್ಲಿ ಗಾಯಗೊಂಡಿದ್ದರು.

ಇದನ್ನೂ ಓದಿ: ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ಮೆರೆದ ಭಾರತ

ಫೆಬ್ರವರಿ 28ರಂದು ಇರಾನ್ ಮೇಲೆ ಯುಎಸ್-ಇಸ್ರೇಲ್ ದಾಳಿಗಳನ್ನು ನಡೆಸಿ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕೊಂದ ನಂತರ ಶುರುವಾದ ಯುದ್ಧವು ಎರಡು ವಾರಗಳಿಗೂ ಹೆಚ್ಚು ಕಾಲದಿಂದ ಉಲ್ಬಣಗೊಳ್ಳುತ್ತಿದೆ. ಅಂದಿನಿಂದ ಎರಡೂ ಕಡೆಯವರು ಪ್ರತೀಕಾರದ ದಾಳಿಗಳನ್ನು ನಡೆಸಿದ್ದು, ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Source link

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಬೆಂಗಳೂರು, (ಮಾರ್ಚ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ

‘ಸ್ಪೈಡರ್​​ಮ್ಯಾನ್’ (Spiderman) ವಿಶ್ವದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಸೂಪರ್ ಹೀರೋ ಸಿನಿಮಾ ಸರಣಿಗಳಲ್ಲಿ ಪ್ರಮುಖವಾದ ಸಿನಿಮಾ. ‘ಸ್ಪೈಡರ್​​ಮ್ಯಾನ್​’ನ ಹಲವು ಆವೃತ್ತಿಗಳು ಹಾಲಿವುಡ್​​ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್​​ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಹೊಸ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ.

‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೆಸರಿನ ಸಿನಿಮಾ ಇದಾಗಿದ್ದು, ಟ್ಯಾಗ್​ಲೈನ್​​ನಲ್ಲಿಯೇ ಇರುವಂತೆ, ಸ್ಪೈಡರ್​ಮ್ಯಾನ್ ಪಾಲಿಗೆ ಇದು ಸಂಪೂರ್ಣ ಹೊಸ ದಿನವೇ ಆಗಿದೆ. ಈ ಹಿಂದಿನ ‘ಸ್ಪೈಡರ್ ಮ್ಯಾನ್: ನೋ ವೇ ಹೋಮ್’ ಕ್ಲೈಮ್ಯಾಕ್ಸ್​​ನಲ್ಲಿ ಪೀಟರ್ ಪಾರ್ಕರ್ (ಸ್ಪೈಡರ್​ಮ್ಯಾನ್) ಜಗತ್ತು ಉಳಿಸಲು ತ್ಯಾಗ ಮಾಡಿದ್ದು, ಇದೇ ಕಾರಣಕ್ಕೆ ಅವನ ಗರ್ಲ್​​ಫ್ರೆಂಡ್, ಆತ್ಮೀಯ ಗೆಳೆಯ ಎಲ್ಲರು ಪೀಟರ್ ಪಾರ್ಕರ್ ಅನ್ನು ಮರೆತುಬಿಟ್ಟಿದ್ದಾರೆ, ಆದರೆ ಪೀಟರ್​​ಗೆ ಮಾತ್ರ ಎಲ್ಲರ ನೆನಪು ಇದೆ. ಈಗ ಬಿಡುಗಡೆ ಆಗಿರುವ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾನಲ್ಲಿ ಅದೇ ಕತೆ ಮುಂದುವರೆದಿದೆ.

ಈಗ ಬಿಡುಗಡೆ ಆಗಿರುವ ಟ್ರೈಲರ್​​ನಲ್ಲಿ ತೋರಿಸಿರುವಂತೆ ಪೀಟರ್​​ನ ಪ್ರೇಯಸಿ ಮತ್ತು ಆಪ್ತ ಮಿತ್ರರು ಪೀಟರ್ ಅನ್ನು ಮರೆತಿದ್ದಾರೆ. ಪೀಟರ್​​ನ ಪ್ರೇಯಸಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದಾಳೆ. ಆದರೆ ಪೀಟರ್ ಆಕೆಯ ಜೀವನಕ್ಕೆ ಮತ್ತೆ ಎಂಟ್ರಿ ಕೊಡುವ ಪ್ರಯತ್ನ ಮಾಡುತ್ತಿದ್ದಾನೆ. ಇದರ ನಡುವೆ ಪೀಟರ್​​ನ ತನ್ನ ಸೂಪರ್ ಹೀರೋ ಶಕ್ತಿಗಳನ್ನು ಸಹ ಕಳೆದುಕೊಳ್ಳುತ್ತಿದ್ದಾನೆ. ಹಳೆಯ ಹಲವು ವಿಲನ್​​ಗಳು ಈಗ ಒಮ್ಮೆಲೆ ಪೀಟರ್ ಅಥವಾ ಸ್ಪೈಡರ್​​ಮ್ಯಾನ್ ಮೇಲೆ ದಾಳಿ ಮಾಡುತ್ತಿದ್ದಾರೆ. ಹೀಗೆ ಹಲವು ಅಂಶಗಳು ಈಗ ಬಿಡುಗಡೆ ಆಗಿರುವ ಟ್ರೈಲರ್​​ನಲ್ಲಿ ಇವೆ.

ಇದನ್ನೂ ಓದಿ:Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

ಈಗ ಬಿಡುಗಡೆ ಆಗಿರುವ ಟ್ರೈಲರ್‌ನಲ್ಲಿನ ವಿಷಯವೆಂದರೆ ಪೀಟರ್‌ನ ಶರೀರದಲ್ಲಿ ಬದಲಾವಣೆ ಆಗುತ್ತಿದೆ ಪೀಟರ್, ರೇಷ್ಮೆಗೂಡಿನ ಒಳಗೆ ಎಚ್ಚರಗೊಳ್ಳುವ ದೃಶ್ಯವಿದೆ. ಅಲ್ಲದೆ, ಅವನು ವೆಬ್-ಶೂಟರ್ ಬಳಸಲಾಗದೆ ಬಿದ್ದು ಹೋಗುವ ದೃಶ್ಯವಿದೆ. ಮತ್ತೊಂದು ದೃಶ್ಯದಲ್ಲಿ ತನ್ನ ಮಣಿಕಟ್ಟಿನಿಂದಲೇ ನೇರವಾಗಿ ಜೇಡರ ಬಲೆಯನ್ನು ಬಿಡುತ್ತಿರುವ ದೃಶ್ಯವೂ ಇದೆ. ಹಳೆಯ ಟೋಬಿ ಮ್ಯಾಗೈರ್ ಸ್ಪೈಡರ್​ಮ್ಯಾನ್​​ನಲ್ಲಿ ನಾಯಕ ಬರಿಗೈನಿಂದಲೇ ವೆಬ್ ಶೂಟರ್​​ಗಳನ್ನು ಬಿಡುತ್ತಿದ್ದ.

ಈ ಹೊಸ ಸಿನಿಮಾದಲ್ಲಿ ಮಾರ್ವೆಲ್‌ನ ಇತರ ಪ್ರಮುಖ ಪಾತ್ರಗಳಾದ ಹಲ್ಕ್ ಅಥವಾ ಬ್ರೂಸ್ ಬ್ಯಾನರ್ ಮತ್ತು ಪನಿಶರ್ ಕಾಣಿಸಿಕೊಂಡಿದ್ದಾರೆ. ಪೀಟರ್ ತನ್ನ ದೇಹದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಬ್ರೂಸ್ ಬ್ಯಾನರ್ ಬಳಿ ಸಹಾಯ ಕೇಳಲು ಹೋಗುವ ದೃಶ್ಯವನ್ನು ಟ್ರೈಲರ್​​ನಲ್ಲಿ ತೋರಿಸಲಾಗಿದೆ. ಸ್ಪೈಡರ್​​ಮ್ಯಾನ್ ಈ ಸಿನಿಮಾನಲ್ಲಿ ಆಧುನಿಕ ಸೂಟ್ ಬದಲಿಗೆ ತಾನೇ ಹೊಲೆದಿದ್ದ ಹಳೆಯ ಸೂಟ್ ಬಳಸುತ್ತಿದ್ದಾನೆ. ಸಿನಿಮಾನಲ್ಲಿ ಸಾಕಷ್ಟು ವಿಲನ್​​ಗಳು ಸಹ ಇದ್ದಾರೆ. ಹಳೆಯ ಶತ್ರು ಸ್ಕಾರ್ಪಿಯಾನ್ ಅಂತಿಮವಾಗಿ ತನ್ನ ಪೂರ್ಣ ರೂಪದಲ್ಲಿ ಮರಳಿದ್ದಾನೆ. ಜೊತೆಗೆ ‘ಟಾಂಬ್‌ಸ್ಟೋನ್’ ಎಂಬ ಭೂಗತ ಪಾತಕಿ ಸಹ ಇದ್ದಾನೆ. ಇವುಗಳ ಜೊತೆಗೆ ಕೆಲವು ಜಪಾನಿ ಸಮುರಾಯ್​ಗಳು ಇದ್ದಾರೆ. ಸ್ವತಃ ಸ್ಪೈಡರ್​​ಮ್ಯಾನ್ ಸಹ ರಾಕ್ಷಸನ ರೂಪ ತಾಳುವ ದೃಶ್ಯವೂ ಸಹ ಇದೆ.

ಒಟ್ಟಾರೆ ‘ಸ್ಪೈಡರ್​​ಮ್ಯಾನ್ : ಬ್ರ್ಯಾಂಡ್ ನ್ಯೂ ಡೇ’ ಸಿನಿಮಾದ ಟ್ರೈಲರ್ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ. ಸಿನಿಮಾನಲ್ಲಿ ಮಾಮೂಲಿನಂತೆ ನಾಯಕನಾಗಿ ಟಾಮ್ ಹಾಲೆಂಡ್ ನಟಿಸಿದ್ದಾರೆ. ನಾಯಕಿ ಜೆಂಡೆಯಾ. ಸಿನಿಮಾ ಜುಲೈ 31ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯುಗಾದಿಯಂದು ಅಧಿಕಾರಿಗಳ ಕಡ್ಡಾಯ ಹಾಜರಿಗೆ ಸೂಚನೆ: ರಂಜಾನ್​​ ದಿನ ಸಭೆ ಕರಿಯಬಹುದಿತ್ತಲ್ಲವೇ ಎಂದ ಬಿಜೆಪಿ ಶಾಸಕ

ಬೆಂಗಳೂರು, ಮಾರ್ಚ್​ 18: ವಿಧಾನಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಾಕಿ ಹಿನ್ನೆಲೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಯುಗಾದಿ (Ugadi) ಹಬ್ಬದ‌ ರಜೆಯನ್ನು ಕಡಿತಗೊಳಿಸಲಾಗಿದೆ. ಆ ಮೂಲಕ ಹಬ್ಬದ‌ ದಿನವೂ ಕಡ್ಡಾಯ ಹಾಜರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೂಚನೆ ನೀಡಿದ್ದಾರೆ.

ಯುಗಾದಿ ಹಬ್ಬದ‌ ದಿನವೂ ಕಡ್ಡಾಯ ಹಾಜರಿಗೆ ಸೂಚನೆ

ಕರ್ನಾಟಕ ವಿಧಾನ ಸಭೆ ಅಧಿವೇಶನಕ್ಕೆ ಸಂಬಂಧಿಸಿದಂತೆ ಮಾರ್ಚ್​​ 23ರಂದು ಕಂದಾಯ ಇಲಾಖೆಗೆ ಸಂಬಂಧಪಟ್ಟ ಪ್ರಶ್ನೆಗಳು ಬಾಕಿಯಿರುವುದರಿಂದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಇವರ ಸೂಚನೆ ಮೇರೆಗೆ ಮುಜರಾಯಿ, ಭೂ ಮಂಜೂರಾತಿ-1, ಭೂ ಮಂಜೂರಾತಿ-2, ಭೂ ಮಂಜೂರಾತಿ-3, ಸೇವೆಗಳು-3, ಭೂ ಕಂದಾಯ, ಭೂ ಮಾಪನ, ಭೂಮಿ, ಭೂಸುಧಾರಣಾ ಕೋಶ ಒಟ್ಟು 9 ಶಾಖೆಗಳಿಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಮಾರ್ಚ್​​ 19ರಂದು ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ವಿಧಾನ ಸಭೆ ಬಾಕಿಯಿರುವ ಪ್ರಶ್ನೆಗಳಿಗೆ ಉತ್ತರಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​​ ಜೊತೆಗಿನ ಮದುವೆ ಹಿಂಸಾತ್ಮಕವಾಗಿದ್ದರಿಂದ ವಿಚ್ಚೇದನ: ಖರ್ಗೆ ಹೇಳಿಕೆಗೆ ದೇವೇಗೌಡರ ಕೌಂಟರ್​

ಮೊನ್ನೆಯಷ್ಟೇ ಸರ್ಕಾರದ ಕಡೆಯಿಂದ ಉತ್ತರ ಬಾರದೇ ಇರುವುದಕ್ಕೆ ಸ್ಪೀಕರ್ ಅಸಮಾಧಾನಗೊಂಡಿದ್ದರು. ಸ್ಪೀಕರ್ ಕಿಡಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯರಿಂದ 9 ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್​​ ಕೊಟ್ಟ ಕಾರಣಕ್ಕೆ ಹಿರಿಯ ಅಧಿಕಾರಿಗಳು ಕೆಳಹಂತದ ಸಿಬ್ಬಂದಿಗಳಿಗೆ ಹಬ್ಬದ ಖುಷಿ ಇಲ್ಲದಂತೆ ಮಾಡಿದ್ದಾರೆ. ಒಂದು ರೀತಿಯಲ್ಲಿ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ ಹಾಗಾಗಿದೆ.

ಸರ್ಕಾರದ ನಡೆಗೆ ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯ

ಇನ್ನು ಈ ಬಗ್ಗೆ ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಮತ್ತೊಮ್ಮೆ ತನ್ನ ವಿವೇಚನಾ ಕೊರತೆಯನ್ನು ಪ್ರದರ್ಶಿಸಿದ ಸರ್ಕಾರ. ನಾಳೆ, ಗುರುವಾರ 19.3.26. ನಮ್ಮ ನಾಡಿನಲ್ಲಿ ಚಾಂದ್ರಮಾನ ಯುಗಾದಿ ಹಬ್ಬ. ಎಲ್ಲಾ ಹಿಂದೂಗಳು ಆಚರಿಸುವ ದೊಡ್ಡ ಹಬ್ಬ. ನಮ್ಮ ಹೊಸ ಸಂವತ್ಸರದ ವರುಷದ ಆರಂಭ.

ಈ ಹಬ್ಬದ ದಿನವೇ ಸಭೆಗೆ ಹಾಜರಿರಬೇಕೆಂದು ಕಂದಾಯ ಇಲಾಖೆಯಿಂದ ಸೂಚನೆಯ ಪತ್ರ ಕೊಟ್ಟಿರುವುದು ಯಾವ ಮನಸ್ಥಿತಿ ತೋರುತ್ತದೆ? ನಾಡಿದ್ದು, ಶುಕ್ರವಾರ ಅಥವಾ ಶನಿವಾರ ಈ ಸಭೆ ಕರಿಯಬಹುದಿತ್ತಲ್ಲವೇ? ಓ! ಮರೆತಿದ್ದೆ. ಶುಕ್ರವಾರ, ಶನಿವಾರ ರಂಜಾನ್ ಅಲ್ಲವೇ? ಅಂದು ಕರೆದರೆ ಈ ಸರ್ಕಾರ ಜಾತ್ಯತೀತವಾಗುವುದಿಲ್ಲ.

ಇದನ್ನೂ ಓದಿ: ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಯುಗಾದಿ ಹಬ್ಬದ ದಿನವೇ ರಜೆ ದಿನವಾಗಿದ್ದರೂ ಸರ್ಕಾರಿ ಅಧಿಕಾರಿಗಳನ್ನು ಕರೆಯುವುದು ನಿಜವಾದ ಜಾತ್ಯತೀತತೆ! ವಾಹ್! ಕರ್ನಾಟಕ ಸರ್ಕಾರದ ಈ ನಡೆಗೆ ಭೇಷ್ ಅನ್ನಬೇಕೋ ಅಥವಾ ಛೀ ಅನ್ನಬೇಕೋ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Hockey World Cup 2026: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ಫೆಬ್ರವರಿ 15 ರಂದು ನಡೆದ ಟಿ20 ವಿಶ್ವಕಪ್ ಲೀಗ್ ಹಂತದ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಎರಡು ದೇಶಗಳ ತಂಡಗಳು ಪರಸ್ಪರ ಎದುರುಬದುರಾಗುತ್ತಿವೆ. ಆದರೆ ಈ ಬಾರಿ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ಕ್ರಿಕೆಟ್ ಮೈದಾನದಲ್ಲಿ ಅಲ್ಲ. ಬದಲಿಗೆ ಹಾಕಿ ಮೈದಾನದಲ್ಲಿ. 2026 ರ ಎಫ್‌ಐಎಚ್ ಹಾಕಿ ವಿಶ್ವಕಪ್ (Hockey World Cup 2026) ಪಂದ್ಯಾವಳಿ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿದೆ. ಪಂದ್ಯಾವಳಿ ಆಗಸ್ಟ್ 15 ರಂದು ಪ್ರಾರಂಭವಾಗಿ ಆಗಸ್ಟ್ 30 ರಂದು ಮುಕ್ತಾಯಗೊಳ್ಳಲಿದೆ. ಈ ಪಂದ್ಯಾವಳಿಗಾಗಿ ತಂಡಗಳನ್ನು ಗುಂಪುಗಳಾಗಿ ವಿಂಗಡಿಸಲಾಗಿದೆ. ಪುರುಷ ಮತ್ತು ಮಹಿಳಾ ತಂಡಗಳನ್ನು ತಲಾ 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರ ಪ್ರಕಾರ, ಪ್ರತಿ ಗುಂಪಿನಲ್ಲಿ 4 ತಂಡಗಳಿವೆ.

ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ

2026 ರ ಹಾಕಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಕ್ರಿಕೆಟ್‌ನಲ್ಲಿರುವಂತೆಯೇ ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಜೊತೆಗೆ, ಈ ಡಿ ಗುಂಪಿನಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ಸೇರಿವೆ. ಗುಂಪು ಡಿ ಯಲ್ಲಿರುವ ಎಲ್ಲಾ ತಂಡಗಳ ಪಂದ್ಯಗಳನ್ನು ನೆದರ್‌ಲ್ಯಾಂಡ್ಸ್‌ನಲ್ಲಿ ಆಯೋಜಿಸಲಾಗುತ್ತದೆ.

ಮಹಿಳಾ ತಂಡ ಯಾವ ಗುಂಪಿನಲ್ಲಿ?

ಮಹಿಳಾ ಹಾಕಿ ತಂಡವು ಗ್ರೂಪ್ ಡಿ ನಲ್ಲಿ ಸ್ಥಾನ ಪಡೆದಿದೆ. ಈ ಗ್ರೂಪ್ ಡಿ ನಲ್ಲಿ ಚೀನಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಸೇರಿವೆ. ಭಾರತದ ಮಹಿಳಾ ಹಾಕಿ ತಂಡದ ಪಂದ್ಯಗಳು ಕೂಡ ನೆದರ್ಲ್ಯಾಂಡ್ಸ್​ನಲ್ಲಿಯೇ ನಡೆಯಲಿವೆ.

ಯಾವ ತಂಡಗಳು ಯಾವ ಗುಂಪಿನಲ್ಲಿವೆ?

  • ಗುಂಪು ಎ: ನೆದರ್ಲ್ಯಾಂಡ್ಸ್, ಅರ್ಜೆಂಟೀನಾ, ನ್ಯೂಜಿಲೆಂಡ್ ಮತ್ತು ಜಪಾನ್
  • ಗುಂಪು ಬಿ: ಬೆಲ್ಜಿಯಂ, ಜರ್ಮನಿ, ಫ್ರಾನ್ಸ್ ಮತ್ತು ಮಲೇಷ್ಯಾ.
  • ಗುಂಪು ಸಿ: ಆಸ್ಟ್ರೇಲಿಯಾ, ಸ್ಪೇನ್, ಐರ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ
  • ಗುಂಪು ಡಿ: ಇಂಗ್ಲೆಂಡ್, ಭಾರತ, ಪಾಕಿಸ್ತಾನ ಮತ್ತು ವೇಲ್ಸ್

ಮಹಿಳಾ ವಿಭಾಗ

  • ಗುಂಪು ಎ: ನೆದರ್ಲ್ಯಾಂಡ್ಸ್, ಆಸ್ಟ್ರೇಲಿಯಾ, ಚಿಲಿ ಮತ್ತು ಜಪಾನ್.
  • ಗುಂಪು ಬಿ: ಅರ್ಜೆಂಟೀನಾ, ಜರ್ಮನಿ, ಅಮೆರಿಕ ಮತ್ತು ಸ್ಕಾಟ್ಲೆಂಡ್.
  • ಗುಂಪು ಸಿ: ಬೆಲ್ಜಿಯಂ, ಸ್ಪೇನ್, ನ್ಯೂಜಿಲೆಂಡ್ ಮತ್ತು ಐರ್ಲೆಂಡ್.
  • ಗುಂಪು ಡಿ: ಚೀನಾ, ಇಂಗ್ಲೆಂಡ್, ಭಾರತ ಮತ್ತು ದಕ್ಷಿಣ ಆಫ್ರಿಕಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಗಾಜಿಯಾಬಾದ್, ಮಾರ್ಚ್ 18: ರಜೆ ನಿರಾಕರಿಸಿದ ಕಾರಣದಿಂದ ಮತ್ತು ಸಂಬಳವನ್ನು ಕಡಿತ ಮಾಡಿದ್ದರಿಂದ ಕೋಪಗೊಂಡ ಸೆಕ್ಯುರಿಟಿ ಗಾರ್ಡ್ ಬ್ಯಾಂಕ್ ಮ್ಯಾನೇಜರ್​ಗೆ ಗುಂಡಿಕ್ಕಿ ಕೊಂದಿದ್ದಾರೆ. ಗಾಜಿಯಾಬಾದ್‌ನ ಗಡಿಯ ಸಮೀಪವಿರುವ ಬಲರಾಮ್ ನಗರದಲ್ಲಿರುವ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ) ಶಾಖೆಯಲ್ಲಿ ಸೋಮವಾರ (ಮಾರ್ಚ್ 17) ಮಧ್ಯಾಹ್ನ ಈ ಘಟನೆ ನಡೆದಿದೆ.

ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ಬಿಹಾರದ ಪಾಟ್ನಾದ ಅಭಿಷೇಕ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸಾಹಿಬಾಬಾದ್ ಬಳಿಯ ಭೋಪ್ರಾದಲ್ಲಿ ಎತ್ತರದ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಶಂಕಿತ ಗಾರ್ಡ್ ಅನ್ನು ಹತ್ತಿರದ ಬಾಗ್‌ಪತ್ ಜಿಲ್ಲೆಯ ಮನ್ಸೂರ್‌ಪುರದ ನಿವಾಸಿ ರವೀಂದರ್ ಹೂಡಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸೋಮವಾರ ಮಧ್ಯಾಹ್ನ 1.15ರ ಸುಮಾರಿಗೆ ನಡೆದಿದೆ. ಈ ಘಟನೆಯ ನಂತರ ಸೆಕ್ಯುರಿಟಿ ಗಾರ್ಡ್ ಮತ್ತು ಅವರ ಸಹಚರರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ

ಮಾಜಿ ಸೈನಿಕ ರವೀಂದ್ರ ಹೂಡಾ ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ, ಸೋಮವಾರ (ಮಾರ್ಚ್ 16) ಮಧ್ಯಾಹ್ನ 1.15ರ ಸುಮಾರಿಗೆ ಅವರು ಮ್ಯಾನೇಜರ್ ಅಭಿಷೇಕ್ ಕುಮಾರ್ ಅವರ ಕ್ಯಾಬಿನ್‌ಗೆ ನುಗ್ಗಿದರು. ಅವರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ವಲ್ಪ ಸಮಯದ ನಂತರ, ವ್ಯವಸ್ಥಾಪಕರ ಕೊಠಡಿಯಿಂದ ಗುಂಡೇಟಿನ ಶಬ್ದಗಳು ಕೇಳಿಬಂದವು. ಬ್ಯಾಂಕ್ ಸಿಬ್ಬಂದಿ ತಕ್ಷಣ ಪರಿಶೀಲಿಸಲು ಓಡಿಹೋದಾಗ ಮ್ಯಾನೇಜರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Source link

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಕೊಪ್ಪಳ, (ಮಾರ್ಚ್ 18): ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ ಬೃಹತ್ ಮೀನು ಬಿದ್ದಿದೆ. ಸುಮಾರು 15ರಿಂದ 20 ಕೆಜಿ ತೂಕದ ಮೀನು ಸಿಕ್ಕಿದ್ದು, ಫುಲ್ ಖುಷ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದೆ. ಬೆಳಿಗ್ಗೆ ಬಿಸಿಲು ಸಂಜೆಯಾಗುತ್ತಿದ್ದಂತೆ ತಂಪಾದ ವಾತಾವರಣ ಇನ್ನು ಕೆಲವು ಕಡೆಗಳಲ್ಲಿ ಮಳೆ ಇರುವುದರಿಂದ ದೇಹಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕರಲ್ಲಿ ಒಣ ಕೆಮ್ಮಿನ (Dry Cough) ಸಮಸ್ಯೆ ಹೆಚ್ಚಾಗುತ್ತಿದೆ. ಹವೆಯಲ್ಲಿ ಇರುವ ಧೂಳು, ಹೊಗೆ, ಸಣ್ಣ ಸಣ್ಣ ಕಣಗಳು ಮತ್ತು ಮಾಲಿನ್ಯ ಕೆಮ್ಮನ್ನು ಪ್ರೇರೇಪಿಸುತ್ತವೆ. ಅದರಲ್ಲಿಯೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ತಡೆಯದಿದ್ದರೆ ಇದು ದೀರ್ಘಕಾಲದವರೆಗೆ ಮುಂದುವರಿಯಬಹುದು ಮತ್ತು ದೈನಂದಿನ ಜೀವನದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು. ಮಾತನಾಡಲು, ಕೆಲಸ ಮಾಡಲು ಮತ್ತು ನಿದ್ರೆ ಮಾಡಲು ಸಹ ತೊಂದರೆ ಉಂಟಾಗಬಹುದು. ಆದ್ದರಿಂದ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಕೆಲವು ಸರಳ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.

ಒಣ ಕೆಮ್ಮು ಎಷ್ಟು ದಿನ ಇರುತ್ತದೆ?

ತಜ್ಞರ ಪ್ರಕಾರ, ಒಣ ಕೆಮ್ಮು ಒಮ್ಮೆ ಆರಂಭವಾದರೆ ಸಾಮಾನ್ಯವಾಗಿ ಒಂದು ಅಥವಾ ಎರಡು ವಾರಗಳ ವರೆಗೆ ಮುಂದುವರಿಯಬಹುದು. ಇದು ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಕಾರಣಗಳ ಮೇಲೆ ಅವಲಂಬಿತವಾಗಿರುತ್ತದೆ. ಇದರ ಪ್ರಮುಖ ಲಕ್ಷಣಗಳಲ್ಲಿ ಗಂಟಲಿನಲ್ಲಿ ಕರಕರೆ ಅಥವಾ ಉರಿ ಭಾವನೆ, ನಿರಂತರ ಕೆಮ್ಮು, ಗಂಟಲು ಒಣಗಿದಂತಾಗುವುದು ಮತ್ತು ಮಾತನಾಡುವಾಗ ತೊಂದರೆ ಅನುಭವಿಸುವುದು ಸೇರಿವೆ. ಹಲವು ಸಂದರ್ಭಗಳಲ್ಲಿ ರಾತ್ರಿ ವೇಳೆ ಕೆಮ್ಮು ಹೆಚ್ಚಾಗುತ್ತದೆ, ಇದರಿಂದ ನಿದ್ರೆ ಸರಿಯಾಗಿ ಮಾಡಲು ಸಾಧ್ಯವಾಗುವುದಿಲ್ಲ. ಕೆಲವರಿಗೆ ಎದೆ ಭಾಗದಲ್ಲಿ ಸಣ್ಣ ಒತ್ತಡ ಅಥವಾ ಜಡತ್ವವೂ ಕಾಣಿಸಬಹುದು. ಒಣ ಕೆಮ್ಮು ದೀರ್ಘಕಾಲ ಮುಂದುವರಿದರೆ ಅಥವಾ ಜ್ವರ, ಉಸಿರಾಟದ ತೊಂದರೆ ಅಥವಾ ದುರ್ಬಲತೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಸಮಸ್ಯೆಯನ್ನು ನಿಯಂತ್ರಿಸಬಹುದು.

ಇದನ್ನೂ ಓದಿ: ಪದೇ ಪದೇ ಒಣ ಕೆಮ್ಮು ಬರುವುದಕ್ಕೆ ಈ ಮನೆಮದ್ದನ್ನು ಪ್ರಯತ್ನಿಸಿ

ಹೇಗೆ ತಡೆಗಟ್ಟುವುದು?

ಒಣ ಕೆಮ್ಮಿನಿಂದ ಮುಕ್ತಿ ಪಡೆಯಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಸಮತೋಲನ ಆಹಾರ ಸೇವಿಸಬೇಕು, ವಿಟಮಿನ್ ಮತ್ತು ಖನಿಜಾಂಶಗಳು ಸಮೃದ್ಧವಾಗಿರಬೇಕು. ದಿನಪೂರ್ತಿ ಸಾಕಷ್ಟು ನೀರು ಕುಡಿಯುವುದು ಮತ್ತು ಗಂಟಲು ಒಣಗದಂತೆ ನೋಡಿಕೊಳ್ಳುವುದು ಅಗತ್ಯ. ತಣ್ಣನೆಯ ಪದಾರ್ಥಗಳು ಮತ್ತು ಧೂಳು-ಮಾಲಿನ್ಯದಿಂದ ದೂರವಿರಬೇಕು. ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಸಹಾಯಕವಾಗಬಹುದು. ಇದಲ್ಲದೆ, ಬಿಸಿ ನೀರಿನ ಆವಿಯನ್ನು ತೆಗೆದುಕೊಳ್ಳುವುದು ಮತ್ತು ಉಪ್ಪು ನೀರಿನಿಂದ ಗಾರ್ಗ್ಲ್ ಕೂಡ ಉಪಯುಕ್ತ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಅನ್ನು ಸಂಪೂರ್ಣವಾಗಿ ಮುಗಿಸಿಬಿಡಬೇಕು; ಮತ್ತೆ ಸಿಡಿದೆದ್ದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 18: “ಭಯೋತ್ಪಾದಕ ದೇಶವಾದ ಇರಾನಿನಲ್ಲಿ ಉಳಿದಿರುವುದನ್ನು ಎಲ್ಲವನ್ನೂ ನಾವು ಮುಗಿಸಿದರೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಬಳಸುವ ದೇಶಗಳೂ ಅದಕ್ಕೆ ಕೈಜೋಡಿಸಿದರೆ ಏನಾಗುತ್ತದೆ ಎಂದು ನಾನು ಯೋಚಿಸುತ್ತಿದ್ದೇನೆ. ಈ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಅನ್ನು “ಮುಗಿಸಿಬಿಡಲು” ಸೂಚಿಸಿದ್ದಾರೆ. ಮತ್ತು ಅಮೆರಿಕ-ಇಸ್ರೇಲ್ ದಾಳಿಗಳ ನಂತರ ಟೆಹ್ರಾನ್ ಅದನ್ನು ಮುಚ್ಚಿದ ನಂತರ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಅವಲಂಬಿಸಿರುವ ರಾಷ್ಟ್ರಗಳನ್ನು ಈ ಮಾರ್ಗವನ್ನು ಸುರಕ್ಷಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇರಾನ್‌ನ ಸುಪ್ರೀಂ ನಾಯಕ ಮತ್ತು ಇತರ 40 ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಿದ ನಂತರವೂ ಅಮೆರಿಕ ಮತ್ತು ಇಸ್ರೇಲ್ ಇರಾನ್‌ ಮೇಲೆ ಇನ್ನೂ ದಾಳಿ ನಡೆಸುವ ಯೋಚನೆಯಲ್ಲೇ ಇವೆ. ಯುದ್ಧ ನಡೆಯುತ್ತಿರುವ ಕಳೆದ 20 ದಿನಗಳಲ್ಲಿ ಇಸ್ರೇಲ್ ಮತ್ತು ಅಮೆರಿಕ ಆಡಳಿತವನ್ನು ದುರ್ಬಲಗೊಳಿಸಲು ಹೊಸ ಯೋಜನೆಯನ್ನು ರೂಪಿಸಿವೆ. ಈ ಯೋಜನೆಯು ಮೊದಲು ಇರಾನ್‌ನಲ್ಲಿ ದಂಗೆಯನ್ನು ನಿಗ್ರಹಿಸಿದ ಆರೋಪ ಹೊತ್ತಿರುವ ಇರಾನಿನ ನಾಯಕರನ್ನು ಕೊಲ್ಲುವ ಗುರಿಯನ್ನು ಹೊಂದಿದೆ. ಈಗಾಗಲೇ ಇಸ್ರೇಲ್ ಇರಾನಿನ ಸುಪ್ರೀಂ ಸೆಕ್ಯುರಿಟಿ ಕೌನ್ಸಿಲ್‌ನ ಮುಖ್ಯಸ್ಥ ಅಲಿ ಲಾರಿಜಾನಿ, ಬಸಿಜ್ ಫೋರ್ಸ್‌ನ ಮುಖ್ಯಸ್ಥ ಗುಲಾಮ್ ಸೊಲೈಮಾನಿ ಮತ್ತು ಗುಪ್ತಚರ ಸಚಿವ ಇಸ್ಮಾಯಿಲ್ ಕಟೈಬ್ ಅವರನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

ಇರಾನ್ ಜಾಗತಿಕ ಆರ್ಥಿಕತೆಯನ್ನು ನಿಯಂತ್ರಿಸುವ ಎಲ್ಲಾ ಇರಾನಿನ ನೆಲೆಗಳ ಮೇಲೆಯೂ ಅಮೆರಿಕ ದಾಳಿ ಮಾಡಲು ಉದ್ದೇಶಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದರ ಬಗ್ಗೆ ಸುಳಿವು ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಅವಲಂಬಿಸಿರುವ ರಾಷ್ಟ್ರಗಳು ಪ್ರಮುಖ ಹಡಗು ಮಾರ್ಗವನ್ನು ಸುರಕ್ಷಿತಗೊಳಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಟ್ರಂಪ್ ಒತ್ತಾಯಿಸಿದ್ದಾರೆ. ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ಜಂಟಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ಕೆಲವು ವಾರಗಳ ನಂತರ ಅವರ ಹೇಳಿಕೆಗಳು ಬಂದಿವೆ. ಈ ಯುದ್ಧದಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸುಮಾರು 1,300 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನಮ್ಮನ್ನು ಕೇಳಿ ಈ ಯುದ್ಧ ಆರಂಭಿಸಿಲ್ಲ: ಟ್ರಂಪ್‌ಗೆ ನ್ಯಾಟೋ ರಾಷ್ಟ್ರಗಳ ಶಾಕ್; ಏಕಾಂಗಿಯಾದ ಅಮೆರಿಕ?

ಮಾರ್ಚ್ 1ರಿಂದ ಇರಾನ್ ಹಾರ್ಮುಜ್ ಜಲಸಂಧಿಯನ್ನು ಪರಿಣಾಮಕಾರಿಯಾಗಿ ಮುಚ್ಚಿದೆ. ಇದು ನಿರ್ಣಾಯಕ ತೈಲ ಸಾಗಣೆ ಕಾರಿಡಾರ್ ಅನ್ನು ಅಡ್ಡಿಪಡಿಸಿದೆ. ಟ್ರಂಪ್ ಚೀನಾ ಸೇರಿದಂತೆ ಮಿತ್ರರಾಷ್ಟ್ರಗಳು ಮಧ್ಯಪ್ರವೇಶಿಸಿ ಜಲಮಾರ್ಗವನ್ನು ಮತ್ತೆ ತೆರೆಯಲು ಸಹಾಯ ಮಾಡುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ 

Source link

ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

ನಟ ವಿನೋದ್ ರಾಜ್ (Vinod Raj) ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿನೋದ್ ರಾಜ್, ಇದೀಗ ಭಾವೈಕ್ಯತೆಯನ್ನು ಸಾರಿದ್ದಾರೆ. ವಿನೋದ್ ರಾಜ್ ಅವರು ರಂಜಾನ್​​ನ ಸಮಯದಲ್ಲಿ ಮಸೀದಿಗಳಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿದ್ದು, ಮುಸ್ಲಿಂ ಗೆಳೆಯರೊಡನೆ ಮಾತನಾಡಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದಿದ್ದಾರೆ. ವಿನೋದ್ ಅವರು ಮಸೀದಿಗಳಲ್ಲಿ ಹಣ್ಣು-ಹಂಪು ವಿತರಣೆ ಮಾಡಿರುವ ವಿಡಿಯೋಗಳು ಇಲ್ಲಿವೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link