Category Archives: Blog

Your blog category

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

ಧ್ರುವ ಸರ್ಜಾ (Dhrva Sarja) ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ ಮೂಲಕ ಹಾಡಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ನಿರ್ದೇಶಕ ಪ್ರೇಮ್, ‘ಯಾರೂ ಸಹ ಬೇಕೆಂದು ಅಥವಾ ತಿಳಿದು-ತಿಳಿದು ತಪ್ಪು ಮಾಡುವುದಿಲ್ಲ. ಸಾಕಷ್ಟು ಹಾಡುಗಳನ್ನು ನಾನು ಈ ವರೆಗೆ ಬರೆದಿದ್ದೇನೆ. ತಾಯಿಯ ಬಗ್ಗೆ, ದೇವರ ಬಗ್ಗೆ, ಅಣ್ಣ-ತಮ್ಮ, ಪ್ರೀತಿ ಬಗ್ಗೆ, ಜನಪದ ಹೀಗೆ ಹಲವು ರೀತಿ ಹಾಡು ಬರೆದಿದ್ದೀನಿ. ಜನ ಸಹ ಪ್ರೇಮ್ ಸಿನಿಮಾನಲ್ಲಿ ಒಳ್ಳೆಯ ಹಾಡುಗಳು ಇರುತ್ತವೆ ಎಂದೇ ಸಿನಿಮಾಕ್ಕೆ ಬರುತ್ತಾರೆ. ಅದಕ್ಕೆ ಋಣಿಯಾಗಿ ಇರುತ್ತೇನೆ. ಈ ಹಾಡು (ಸರ್ಸೆ ಸೆರಗು) ಬರೆದಾಗ ನಾನು ಬೇರೊಂದು ದೃಷ್ಟಿಕೋನದಿಂದ ಬರೆದಿದ್ದೆ’ ಎಂದಿದ್ದಾರೆ.

‘ಆ ಹಾಡು ಬರೆಯುವಾಗ ನನ್ನ ದೃಷ್ಟಿಕೋನದಲ್ಲಿ ನಾನು ಬರೆದೆ. ಎಣ್ಣೆ ಬಾಟಲಿ, ಉಪ್ಪಿನಕಾಯಿ ಇದನ್ನು ಕಲ್ಪಿಸಿಕೊಂಡು ಹಾಡು ಬರೆದಿದ್ದೆ. ಬಾಟಲ್​​ನ ಮೇಲೆತ್ತಿ ಎಂದು ಬರೆಯಬೇಕಿತ್ತು ಆದರೆ ಆ ಬಾಟಲಿ ಪದವನ್ನು ನಾನು ಕೊನೆಯಲ್ಲಿ ಬಳಸಿದೆ. ಹಾಡಿನಲ್ಲಿ ಕುತೂಹಲ ಇರಲಿ ಎಂಬ ಕಾರಣಕ್ಕೆ ಹಾಗೆ ಮಾಡಿದೆ. ಆದರೆ ಜನ ಅದನ್ನು ಬೇರೆಯದ್ದೇ ರೀತಿಯಲ್ಲಿ ಅರ್ಥ ಮಾಡಿಕೊಂಡಿದ್ದಾರೆ. ಕೆಲವರು ನನ್ನ ವಿರುದ್ಧ ಕಾಲೆಳೆಯಲು, ಹೀಗಳೆಯಲು ಈ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ. ಲೈಕು, ಕಮೆಂಟಿಗಾಗಿ ವಿಡಿಯೋ ಮಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ’ ಎಂದಿದ್ದಾರೆ ಪ್ರೇಮ್.

ಇದನ್ನೂ ಓದಿ:ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

‘ನಾನು ಈ ವರೆಗೆ ಕೆಟ್ಟ ಅರ್ಥದ ಹಾಡುಗಳನ್ನು ಬರೆದಿಲ್ಲ, ಅದು ನನಗೆ ಬೇಕಾಗಿಯೂ ಇಲ್ಲ. ನಾನು ಬರೆದಿದ್ದ ಅರ್ಥವೇ ಬೇರೆ ಆಗಿತ್ತು. ಇದನ್ನು ಈ ಹಿಂದೆಯೂ ನಾನು ಮೀಡಿಯಾ ಮುಂದೆ ಹೇಳಿದ್ದೇನೆ. ಆದರೆ ಹಾಡು ಕೇಳಿದ ಕೆಲವರಿಗೆ ಹರ್ಟ್ ಆಗಿರಬಹುದು, ಪ್ರೇಮ್ ಹೀಗೆ ಮಾಡಿದ್ದಾರಾ? ಪ್ರೇಮ್ ಈ ಥರಾನ? ಅನಿಸಿರಬಹುದು. ಸಾಹಿತಿ ಆದ ಮೇಲೆ ಎಲ್ಲ ರೀತಿಯಲ್ಲಿಯೂ ಬರೆಯಬೇಕಾಗುತ್ತದೆ. ಆದರೆ ನಾನು ಅಶ್ಲೀಲ ಅರ್ಥದಲ್ಲಿ ಬರೆದಿಲ್ಲ. ನನ್ನಿಂದ ಬೇಸರ ಆಗಿದ್ದರೆ ಕ್ಷಮೆ ಕೇಳುವೆ. ಹಾಡನ್ನು ರೀರೈಟ್ ಮಾಡುವೆ, ಬೇರೆ ರೀತಿ ಬರೆದು ಮತ್ತೆ ಅಪ್​ಲೋಡ್ ಮಾಡುತ್ತೀವಿ, ನಿಮಗೆ ಹರ್ಟ್ ಮಾಡಲು ಇಷ್ಟವಿಲ್ಲ’ ಎಂದಿದ್ದಾರೆ ಪ್ರೇಮ್.

ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ಗೊಂದಲ ಇತ್ತು. ಹಿಂದಿ ಪದಗಳು ಕೆಲವು ನನಗೆ ಇಷ್ಟವಾಗಲಿಲ್ಲ. ಆದರೆ ಭಾಷೆ ಸಮಸ್ಯೆಯಿಂದ ನಾನು ಪ್ರಶ್ನೆ ಮಾಡಲಿಲ್ಲ. ಆದರೆ ಹಿಂದಿ ಹಾಡು ಬರೆದಿರುವ ರತಿ ಬಾಲಮ್ ಅವರು ಎಲ್ಲ ತಪ್ಪನ್ನು ನನ್ನ ಮೇಲೆ ಹೊರಿಸಿದ್ದಾರೆ. ಅಸಲಿಗೆ ನನ್ನ ಹಿಂದಿನ ಹಿಟ್ ಹಾಡುಗಳನ್ನು ಕನ್ನಡದಿಂದ ಹಿಂದಿಗೆ ಬರೆದಿದ್ದು ಅವರೇ. ಆದರೆ ಅವರು ಸಮಜಾಯಿಷಿಕೊಳ್ಳಲಿಲ್ಲ, ಎಲ್ಲ ತಪ್ಪು ನನ್ನ ಮೇಲೆ ಹಾಕಿದರು, ಬಹುಷಃ ಭಯಪಟ್ಟು ನನ್ನ ಮೇಲೆ ಹಾಕಿದ್ದಾರೆ’ ಎಂದಿದ್ದಾರೆ ಪ್ರೇಮ್.

ಇನ್ನು ನಟಿ ನೋರಾ ಫತೇಹಿ ಸ್ಪಷ್ಟನೆ ಬಗ್ಗೆಯೂ ಮಾತನಾಡಿರುವ ಪ್ರೇಮ್, ‘ನೋರಾ ಫತೇಹಿ ಮಾತನಾಡಿರುವುದು ತಪ್ಪು. ಅವರಿಗೆ ಸಾಹಿತ್ಯ ಗೊತ್ತಿತ್ತು. ಸಾಹಿತ್ಯ ಗೊತ್ತಿಲ್ಲದೆ ಯಾವ ನಟರೂ ನಟಿಸುವುದಿಲ್ಲ, ಸಾಹಿತ್ಯ ಗೊತ್ತಿಲ್ಲದೆ ಎಕ್ಸ್​ಪ್ರೆಷನ್ ಹೇಗೆ ಬರುತ್ತೆ? ಅವರು ಹಾಗೆ ಮಾತನಾಡಬಾರದಿತ್ತು. ಈಗ ಆಗಿರುವ ವಿವಾದದಿಂದ ತಪ್ಪಿಸಿಕೊಳ್ಳಲು ಹಾಗೆ ಮಾಡಿದ್ದಾರೆ. ಅನಿಸುತ್ತದೆ. ಇತ್ತೀಚೆಗೆ ನಡೆದ ಆಡಿಯೋ ಪ್ರೋಗ್ರಾಂನಲ್ಲಿ ಸಹ ಅವರು ಹಾಡಿನ ಬಗ್ಗೆ ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ್ದರು. ಆದರೆ ಈಗ ಹೀಗೆ ಮಾತನಾಡುತ್ತಿದ್ದಾರೆ. ಇರಲಿ ನಾನು ಹಾಡನ್ನು ರೀರೈಟ್ ಮಾಡುತ್ತೀನಿ. ಮತ್ತೆ ಅಪ್​​ಲೋಡ್ ಮಾಡುತ್ತೀನಿ’ ಎಂದಿದ್ದಾರೆ ಪ್ರೇಮ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಮಂಗಳೂರು, (ಮಾರ್ಚ್ 18): ಮಂಗಳೂರಿನ ದೈವಸ್ಥಾನವೊಂದರಲ್ಲಿ ನಡೆದ ದೈವ ನರ್ತನ ಸೇವೆ ಇದೀಗ ದೊಡ್ಡ ವಿವಾದಕ್ಕೆ (Mangaluru Daivaradhane Row) ಕಾರಣವಾಗಿದೆ. ಪಂಬದ ಸಮಾಜದ ಸಂಶೋಧಕಿ ಡಾ. ರತಿ‌ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಬಂಟ ದೈವದ ನರ್ತನ ಸೇವೆ ವೇಳೆ ಕ್ರೈಸ್ತ ಧರ್ಮದ ವ್ಯಕ್ತಿಯಿಂದ ದೈವ ನರ್ತನ ಮಾಡಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು. ಶ್ರೀ ಜಾರಂದಾಯ ದೈವಕ್ಕೆ ನಿಯಮಾನುಸಾರ ಪಂಬದ ಸಮುದಾಯದವರೇ ನರ್ತನ ಮಾಡಿದ್ದರೂ‌, ಬಂಟ ದೈವಕ್ಕೆ ಮಾತ್ರ ಅನ್ಯಧರ್ಮದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪ ಕೇಳಿ ಬಂದ ಕೂಡಲೇ ತುಳುನಾಡಿನ ದೈವಾರಾಧನೆ ವಲಯದಲ್ಲಿ ತೀವ್ರ ಚರ್ಚೆ,ವಿರೋಧ,ಸಂಶಯಗಳ ವಾತಾವರಣ ನಿರ್ಮಾಣವಾಯಿತು. ಆದ್ರೆ ಈ ಎಲ್ಲಾ ಆರೋಪಗಳನ್ನು ಈಗ ದೈವ ನರ್ತಕರು ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ದೈವಸ್ಥಾನದ ಆಡಳಿತ ಮಂಡಳಿ ದೈವ ನರ್ತಕ ಗಣೇಶ್ ಪಂಬದರಿಗೆ ನೇಮ ಕಟ್ಟುವ ಜವಾಬ್ದಾರಿ ವಹಿಸಿಕೊಟ್ಟಿದ್ದರು. ಹೀಗಾಗಿ ಅವರೇ ಸ್ಪಷ್ಟನೆ ನೀಡಿದ್ದು ಬಂಟ ದೈವಕ್ಕೆ ನರ್ತನ ಸೇವೆ ಮಾಡಿದ ಸುಶಾಂತ್ ನಮ್ಮದೇ ಪಂಬದ ಸಮುದಾಯದವನು ಎಂದು ಸ್ಪಷ್ಟಪಡಿಸಿದ್ದಾರೆ.

ಸುಶಾಂತ್ ಕ್ರೈಸ್ತನಲ್ಲ, ಅವನ ತಾಯಿ ನಮ್ಮ ಜಾತಿಗೆ ಸೇರಿದವರು. ಮದುವೆಯಾದ ಬಳಿಕ ಹಿಂದೂ ಧರ್ಮ ಪಾಲನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಇವನು ಮೊದಲ ಬಾರಿಗೆ ನರ್ತನ ಮಾಡ್ತಿರುವವನಲ್ಲ ಹಲವು ಕ್ಷೇತ್ರಗಳಲ್ಲಿ ಸೇವೆ ಮಾಡಿದ್ದಾನೆ ಎಂದು ಹೇಳಿದ್ದಾರೆ. ಆರೋಪ ಮಾಡಿದವರ ಮೇಲೆಯೇ ಪ್ರಶ್ನೆ ಎತ್ತಿರುವ ಗಣೇಶ್ ಪಂಬದ ರತಿಯವರ ಕುಟುಂಬವೇ ಇವನ ಸಹೋದರನಿಂದ ಬೇರೆಡೆ ನರ್ತನ ಮಾಡಿಸಿಕೊಂಡಿದೆ ಆಗ ಸಮಸ್ಯೆ ಇರಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ಕ್ಷೇತ್ರಕ್ಕೆ ಯಾವುದೇ ಅಪಚಾರವಾಗಿಲ್ಲ ಎಂದು ಅವರು ಖಡಕ್ ಆಗಿ ಹೇಳಿದ್ದಾರೆ.

ಇದನ್ನೂ ಓದಿ: ತುಳುನಾಡಿನಲ್ಲೇ ದೈವಕ್ಕೆ ಅಪಚಾರ? ಕ್ರಿಶ್ಚಿಯನ್ ಹುಡುಗನಿಂದ ದೈವ ನರ್ತನ ಆರೋಪ!

ಇತ್ತ ಆರೋಪದ ಸಂಕಷ್ಟಕ್ಕೆ ಸಿಲುಕಿರುವ ದೈವ ನರ್ತಕ ಸುಶಾಂತ್ ಪಂಬದ ಭಾವನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಈಗ ಯಾರಿಗೂ ಮುಖ ತೋರಿಸಲು ಆಗುತ್ತಿಲ್ಲ. ಈ ಆರೋಪ ಬಂದ ನಂತರ ಜೀವನವೇ ಬದಲಾಗಿದೆ. ಏಪ್ರಿಲ್ ತಿಂಗಳಲ್ಲಿ ಹಲವಾರು ಕಡೆ ದೈವ ನರ್ತನ ಸೇವೆಗೆ ಕರೆ ಬಂದಿದ್ದರೂ ಈಗ ಎಲ್ಲರೂ ಕರೆ ಮಾಡಿ ಏನು ಮಾಡೋದು. ತಮ್ಮ ಬಳಿ ಜಾತಿ ಪ್ರಮಾಣಪತ್ರವಿದ್ದು ತಾವು ಪಂಬದ ಸಮುದಾಯದವರೇ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ನ್ಯಾಯ ಸಿಗಬೇಕು ಎಂಬುದು ಅವರ ಬೇಡಿಕೆ.

ಇನ್ನೂ ಸುಶಾಂತ್ ತಾಯಿ ಸವಿತಾ ಕೂಡ ಸ್ಪಷ್ಟನೆ ನೀಡಿ ನಾನು ಮೊದಲು ಕ್ರಿಶ್ಚಿಯನ್ ಆಗಿದ್ದರೂ ಮದುವೆಯ ಬಳಿಕ ಹಿಂದೂ ಧರ್ಮಕ್ಕೆ ಸೇರಿದ್ದೇನೆ. ನಾವು ಚರ್ಚ್‌ಗೆ ಹೋಗೋದಿಲ್ಲ, ಮಕ್ಕಳು ಸಹ ಹಿಂದೂ ಧರ್ಮ ಪಾಲನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನನ್ನ ಮಗ ಕ್ರಿಶ್ಚಿಯನ್ ಎಂದು ಸಾಬೀತು ಮಾಡಿದ್ರೆ‌ ದೈವ ನರ್ತನಕ್ಕೆ ಕಳಿಸಲ್ಲ. ಮಂಗಳೂರಿನ ಎಲ್ಲಾ ಚರ್ಚ್‌ಗಳಿಂದ ದಾಖಲೆ ತರಲಿ ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡುವ ಕೆಲಸವನ್ನು‌ ದೈವ ನರ್ತಕರು ಮಾಡಿದ್ದಾರೆ. ಆದ್ರೆ ಇದನ್ನು ದೈವರಾಧಕರು, ಭಕ್ತರು ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಾರ್ಗ ಬದಲಿಸಿ ಮಂಗಳೂರಿಗೆ ಬರುತ್ತಿದೆ ರಷ್ಯಾದ ಮತ್ತೊಂದು ತೈಲ ಟ್ಯಾಂಕರ್‌

ನವದೆಹಲಿ, ಮಾರ್ಚ್ 18: ಚೀನಾಕ್ಕೆ ಹೋಗುತ್ತಿದ್ದ ರಷ್ಯಾದ ತೈಲ (Oil Tanker) ತುಂಬಿದ ಟ್ಯಾಂಕರ್ ದಕ್ಷಿಣ ಚೀನಾದ ಸಮುದ್ರದಲ್ಲಿ ತನ್ನ ದಿಕ್ಕನ್ನು ಬದಲಾಯಿಸಿದೆ. ಆ ಹಡಗು ಯು-ಟರ್ನ್ ಹೊಡೆದು ಈಗ ಭಾರತಕ್ಕೆ ಆಗಮಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿಗೆ ಈ ಹಡಗು ತೈಲವನ್ನು ಹೊತ್ತು ತರುತ್ತಿದೆ. ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಮಧ್ಯೆ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಡಗಿನ ಟ್ರ್ಯಾಕಿಂಗ್ ಡೇಟಾ ಅಫ್ರಾಮ್ಯಾಕ್ಸ್ ಟ್ಯಾಂಕರ್ ಅಕ್ವಾ ಟೈಟಾನ್ ಮಾರ್ಚ್ 21ರಂದು ರಷ್ಯಾದ ಯುರಲ್ಸ್ ಕಚ್ಚಾ ತೈಲದ ಸರಕುಗಳನ್ನು ಹೊತ್ತು ನವಮಂಗಳೂರು ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು ತೋರಿಸಿದೆ.

ಜನವರಿ ಅಂತ್ಯದಲ್ಲಿ ಈ ಹಡಗು ಬಾಲ್ಟಿಕ್ ಸಮುದ್ರದ ಬಂದರಿನಿಂದ ತೈಲವನ್ನು ಲೋಡ್ ಮಾಡಿತ್ತು. ಆರಂಭದಲ್ಲಿ ಆ ಹಡಗು ಚೀನಾದ ರಿಜಾವೊ ಬಂದರಿಗೆ ಹೋಗಬೇಕೆಂದು ಸೂಚಿಸಲಾಗಿತ್ತು. ಆದರೆ, ಇದೀಗ ಆ ಹಡಗು ಯು-ಟರ್ನ್ ತೆಗೆದುಕೊಂಡು ಭಾರತಕ್ಕೆ ಆಗಮಿಸುತ್ತಿದೆ.

ಅಮೆರಿಕ ರಷ್ಯಾದ ಖರೀದಿಗಳನ್ನು ತಾತ್ಕಾಲಿಕವಾಗಿ ಹೆಚ್ಚಿಸಲು ಭಾರತಕ್ಕೆ ಹಸಿರು ನಿಶಾನೆ ತೋರಿಸಿತ್ತು. ಇದಾದ ನಂತರ ಭಾರತೀಯ ಸಂಸ್ಕರಣಾಗಾರರು 30 ಮಿಲಿಯನ್ ಬ್ಯಾರೆಲ್‌ಗಳಷ್ಟು ರಷ್ಯಾದ ತೈಲವನ್ನು ಖರೀದಿಸಿದ್ದರು. ಇದು ಇರಾನ್‌ನಲ್ಲಿನ ಯುದ್ಧದಿಂದಾಗಿ ನಷ್ಟವಾದ ಮಧ್ಯಪ್ರಾಚ್ಯ ಪೂರೈಕೆಗಳನ್ನು ನಿಭಾಯಿಸಲು ಭಾರತಕ್ಕೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಅಂದಿನಿಂದ, ಹೆಚ್ಚಿನ ದೇಶಗಳು ರಷ್ಯಾದಿಂದ ತೈಲ ಖರೀದಿಯನ್ನು ಪುನರಾರಂಭಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌

ವೋರ್ಟೆಕ್ಸಾ ಲಿಮಿಟೆಡ್ ಪ್ರಕಾರ, ರಷ್ಯಾದ ತೈಲವನ್ನು ಸಾಗಿಸುವ 7 ಟ್ಯಾಂಕರ್‌ಗಳು ಚೀನಾದ ಬದಲಾಗಿ ಭಾರತಕ್ಕೆ ಆಗಮಿಸುತ್ತಿವೆ. ತೈಲ ಟ್ಯಾಂಕರ್ ಮೊದಲು ರಷ್ಯಾದ ಕಪ್ಪು ಸಮುದ್ರದ ನೊವೊರೊಸಿಸ್ಕ್‌ನಿಂದ ಪಯಣಿಸಿತ್ತು. ಇದು ಆರಂಭದಲ್ಲಿ ಚೀನಾದ ರಿಝಾವೊ ಬಳಿಯ ನೀರಿನ ಕಡೆಗೆ ಸಾಗುತ್ತಿತ್ತು. ಇದೀಗ ಆ ಹಡಗನ್ನು ಭಾರತಕ್ಕೆ ತಿರುಗಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ 

Source link

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

ನವದೆಹಲಿ, ಮಾರ್ಚ್ 18: ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಗೆ (Hormuz Strait) ತಡೆ ಬಿದ್ದಿದ್ದು, ಗಲ್ಫ್ ರಾಷ್ಟ್ರಗಳಿಂದ ತೈಲ ಮತ್ತಿತರ ಸರಕುಗಳನ್ನು ಹೊತ್ತ ಹಡಗುಗಳು ಹೊರ ಹೋಗಲಾಗದೆ ಸಮುದ್ರದ ನೀರಿನಲ್ಲೇ ನೆಲೆ ನಿಂತಿವೆ. ಈ ಸಮುದ್ರ ಮಾರ್ಗದಿಂದಲೇ ಭಾರತಕ್ಕೆ ಬೇಕಾದ ಹೆಚ್ಚಿನ ಎಲ್​ಪಿಜಿ ಸರಬರಾಜು (LPG supply) ಆಗುವುದು. ದೇಶದಲ್ಲಿ ಎಲ್​ಪಿಜಿಗೆ ಹಾಹಾಕಾರ ನಡೆಯುತ್ತಿರುವಂತೆಯೇ ಹಾರ್ಮುಜ್ ಜಲಸಂಧಿ ಮೂಲಕ ಮೂರು ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಭಾರತವನ್ನು ತಲುಪಿವೆ.

ಈ ಮೂರು ಹೊರತುಪಡಿಸಿ ಇನ್ನೂ 22 ಭಾರತೀಯ ನೌಕೆಗಳು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿವೆ. ಈ 22 ಹಡಗುಗಳಲ್ಲಿ ಒಂದು ಎಲ್​ಎನ್​ಜಿ ಟ್ಯಾಂಕರ್ ಇದೆ. ನಾಲ್ಕು ಹಡುಗಗಳು ಕಚ್ಚಾ ತೈಲ (crude oil) ತುಂಬಿಕೊಂಡಿವೆ. ಒಂದರಲ್ಲಿ ಕೆಮಿಕಲ್ ಮತ್ತಿತರ ಉತ್ಪನ್ನಗಳಿವೆ. ಮೂರು ಕಂಟೇನರ್ ಶಿಪ್​ಗಳಿವೆ. ಎರಡು ಬಲ್ಕ್ ಕ್ಯಾರಿಯರ್​ಗಳಿವೆ. ಎಲ್​ಪಿಜಿ ಹೊತ್ತಿರುವ ಆರು ಹಡಗುಗಳು ಇವೆ.

ಇದನ್ನೂ ಓದಿ: ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ಎಲ್​ಪಿಜಿ ಹೊತ್ತಿರುವ ಆರು ಹಡಗುಗಳಲ್ಲಿ ಒಟ್ಟು 3 ಲಕ್ಷ ಟನ್​ಗಳಷ್ಟು ಗ್ಯಾಸ್ ಇದೆ. ಈಗಾಗಲೇ ಶಿವಾಲಿಕ್, ನಂದಾದೇವಿ ಮತ್ತು ಜಗ್ ಲಾಡ್ಕಿ ಹಡಗುಗಳು ಒಟ್ಟು 1.7 ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್​ಗಳಷ್ಟು ಎಲ್​ಪಿಜಿಯನ್ನು ಭಾರತಕ್ಕೆ ಸಾಗಿಸಿವೆ. ಈಗ ಹಾರ್ಮುಲ್​ನಲ್ಲಿರುವ ಆರು ಹಡಗುಗಳಲ್ಲಿ ಇನ್ನೂ 3 ಲಕ್ಷ ಟನ್​ಗಳಷ್ಟು ಎಲ್​ಪಿಜಿ ಇದೆ.

ಭಾರತಕ್ಕೆ ಎಷ್ಟು ಎಲ್​ಪಿಜಿ ಬೇಕು?

ಭಾರತದಲ್ಲಿ ಸದ್ಯ ಒಂದು ದಿನದಲ್ಲಿ ಸರಾಸರಿಯಾಗಿ 80,000ದಿಂದ 85,000 ಟನ್​ಗಳಷ್ಟು ಎಲ್​ಪಿಜಿ ಬಳಕೆ ಆಗುತ್ತಿದೆ. ಇದರಲ್ಲಿ ಗೃಹಬಳಕೆಗೆಯೇ ಹೆಚ್ಚಿನ ಎಲ್​ಪಿಜಿ ಹೋಗುತ್ತಿದೆ. ಒಂದು ದಿನದಲ್ಲಿ 50-60 ಲಕ್ಷ ಎಲ್​ಪಿಜಿ ಸಿಲಿಂಡರ್​ಗಳನ್ನು ಸರಬರಾಜು ಮಾಡಲಾಗುತ್ತಿದೆ.

ಇದನ್ನೂ ಓದಿ: ಎಲ್​ಪಿಜಿ ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ; ಈ ಗ್ರಾಹಕರಿಗೆ ಮಾತ್ರ ಅನ್ವಯ, ಗಮನಿಸಿ

ಸರ್ಕಾರ ಮಾಡಿರುವ ಅಂದಾಜು ಪ್ರಕಾರ ಮುಂಬರುವ ಹಣಕಾಸು ವರ್ಷದಲ್ಲಿ (2026-27) ಭಾರತದಲ್ಲಿ ಒಂದು ತಿಂಗಳಲ್ಲಿ 29 ಲಕ್ಷ ಟನ್​ಗಳಷ್ಟು ಎಲ್​ಪಿಜಿ ಬೇಕಾಗುತ್ತದೆ. ಸರ್ಕಾರ ದೇಶದೊಳಗೆ ಅಡಗೆ ಅನಿಲ ಉತ್ಪಾದನೆ ಹೆಚ್ಚಿಸಿದರೂ ಒಂದು ತಿಂಗಳಲ್ಲಿ 29-34 ಎಲ್​ಪಿಜಿ ಟ್ಯಾಂಕರ್​ಗಳು ಬೇಕಾಗಬಹುದು ಎಂದು ಮನಿಕಂಟ್ರೋಲ್​ನ ವರದಿ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಮನೆಯಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರ ಬಲೆಗೆ ಬಿದ್ದ ಖರ್ನಾಕ್​​ ಕಳ್ಳ: ಜೈಲಿನಿಂದಲೇ ಬಂದಿದ್ದವ ಮತ್ತೆ ಸೆರೆಮನೆಗೆ

ಬೆಂಗಳೂರು, ಮಾರ್ಚ್​​ 18: ಮದುವೆ ಮನೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ ಆರೋಪಿಯಾಗಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್​​ ಮಾಡಿದ್ದಾರೆ. ಮದುವೆ ಮನೆಗಳಲ್ಲಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ, ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಈ ಖತರ್ನಾಕ್ ಕಳ್ಳನ ಬಂಧನದಿಂದ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ.

ಈ ಪಲ್ಸರ್ ಬಾಬು ದೊಡ್ಡ ದೊಡ್ಡ ಮದುವೆ ಛತ್ರಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದ. ಮದುವೆಗೆ ಬರುವವರ ಗಮನ ಬೇರೆಡೆ ಇರುವಾಗ, ಅದರಲ್ಲೂ ವಿಶೇಷವಾಗಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಮಕ್ಕಳ ಬಳಿ ಇರುವ ಚಿನ್ನಾಭರಣ, ಮೊಬೈಲ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ. ಇದಲ್ಲದೆ, ಮದುವೆ ಮನೆಯಲ್ಲಿರುವ ಕ್ಯಾಮೆರಾ, ಲ್ಯಾಪ್‌ಟಾಪ್ ಮತ್ತು ಬೈಕ್‌ಗಳನ್ನೂ ಕಳ್ಳತನ ಮಾಡುತ್ತಿದ್ದ. ಇದೇ ರೀತಿ ಆರೋಪಿ ಪಲ್ಸರ್ ಬಾಬು ಬರೋಬ್ಬರಿ 19 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರೋದು ತನಿಖೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: ಹಬ್ಬಕ್ಕೆ ಊರಿಗೆ ಹೋಗುವ ಧಾವಂತ; ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಐಷಾರಾಮಿ ಜೀವನ ಮತ್ತು ಮೋಜು ಮಸ್ತಿಗಾಗಿಯೇ ಕಳ್ಳತನ ಮಾಡುತ್ತಿದ್ದ ಈತ, ಪದೇ ಪದೇ ಜೈಲಿಗೆ ಹೋಗಿ ಬರ್ತಿದ್ದ. ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿದ್ದ ಸುಮಾರು 2,000 ಜನರನ್ನು ಬಿಡುಗಡೆ ಮಾಡಲಾಗಿತ್ತು. ಈ ವೇಳೆ ಜೈಲಿನಿಂದ ಹೊರಬಂದಿದ್ದ ಪಲ್ಸರ್ ಬಾಬು, ತನ್ನ ಕಳ್ಳತನದ ಚಾಳಿ ಮುಂದುವರಿಸಿದ್ದ. ಕದ್ದ ಚಿನ್ನಾಭರಣಗಳನ್ನು ಕರಗಿಸಿ ತನಗೆ ಬೇಕಾದಂತೆ ತಿರುಪತಿ ಲಾಕೆಟ್, ಉಂಗುರಗಳನ್ನು ಮಾಡಿಸಿಕೊಂಡು ಶೋಕಿ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಕಾರುಗಳನ್ನು ಖರೀದಿಸಿ ಸುತ್ತಾಡುತ್ತಾ ಮೋಜು ಮಸ್ತಿ ಮಾಡುತ್ತಿದ್ದ ಎನ್ನಲಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಸದಾಶಿವನಗರ ಪೊಲೀಸರು ಆತನಿಂದ ಒಟ್ಟು 42.38 ಲಕ್ಷ ರೂಪಾಯಿ ಮೌಲ್ಯದ 2 ಕಾರುಗಳು, 132 ಗ್ರಾಂ ಚಿನ್ನಾಭರಣ, 7 ಮೊಬೈಲ್‌ಗಳು, 1 ಕ್ಯಾಮೆರಾ, 2 ಲೆನ್ಸ್‌ಗಳು, 2 ಲ್ಯಾಪ್‌ಟಾಪ್‌ಗಳು, 1.20 ಲಕ್ಷ ನಗದು ಮತ್ತು 4 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪಲ್ಸರ್ ಬಾಬು ಬಂಧನದಿಂದ ಸದಾಶಿವನಗರ, ವರ್ತೂರು, ಜಾಲಹಳ್ಳಿ, ಹೆಣ್ಣೂರು ಮತ್ತು ಬಗಲಗುಂಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 8 ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

Source link

ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು, ಮಾರ್ಚ್​​ 18: ಇಬ್ಬರು ಬಾಲಕರು ಒಂದು ವರ್ಷ ಕಷ್ಟಪಟ್ಟು ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam) ತಯಾರಾಗಿದ್ದರು. ಇನ್ನೇನು ಇಂದು ಬೆಳಗ್ಗೆ ನಾವು ಪರೀಕ್ಷೆ ಬರೆಯುತ್ತೇವೆ ಅಂತ ಖುಷಿಯಾಗಿದ್ದರು. ಆದರೆ ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಬಂದ ಅದೊಂದು ಸುದ್ದಿ ಅವರಿಬ್ಬರನ್ನ ಪರೀಕ್ಷೆಗೆ ಕೂರದೇ ಇರುವ ಹಾಗೆ ಮಾಡಿದೆ. ಯಾರದ್ದೋ ಎಡವಟ್ಟಿಗೆ ಇಬ್ಬರು ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆದಿದೆ.

ಹಾಲ್ ಟಿಕೆಟ್​ ಇಲ್ಲದೆ ವಿದ್ಯಾರ್ಥಿಗಳು ಪರದಾಟ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪಬ್ಲಿಕ್ ಶಾಲೆಯಲ್ಲಿ 17 ಮಕ್ಕಳು ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿತ್ತು. ಆದರೆ ನಿನ್ನೆ ಸಂಜೆ ಎಲ್ಲರಿಗೂ ಹಾಲ್ ಟಿಕೆಟ್ ಬಂದಿದ್ದು, ಇಬ್ಬರು ಬಾಲಕರಿಗೆ ಮಾತ್ರ ಬಂದಿಲ್ಲ. ತಮೀಮ್ ಮತ್ತು ಪ್ರಥಮ್ ಪೋಷಕರಿಗೆ ಸಂಜೆ ಕರೆಮಾಡಿದ ಶಾಲಾ ಪ್ರಾಂಶುಲಾರು, ಏನೋ ತಾಂತ್ರಿಕ ಸಮಸ್ಯೆಯಿಂದ ಇಬ್ಬರಿಗೆ ಹಾಲ್ ಟಿಕೆಟ್ ಬಂದಿಲ್ಲ ಅಂತ ಹೇಳಿದ್ದಾರೆ. ಈ ಸುದ್ದಿ ಕೇಳಿ ಪೋಷಕರು ಮತ್ತು ಮಕ್ಕಳಿ ಶಾಕ್ ಆಗಿದೆ. ಆದರೂ ಇಂದು ಬೆಳಗ್ಗೆ ಶಾಲೆಯ ಬಳಿ ಬಂದು ಹಾಲ್ ಟಿಕೆಟ್ ಕೊಡುವಂತೆ ದುಂಬಾಲು ಬಿದ್ದಿದ್ದಾರೆ.

ಇದನ್ನೂ ಓದಿ: ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ತಮ್ಮ ಮಗನಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಪೋಷಕರು ಮತ್ತು ಗ್ರಾಮಸ್ಥರು ಶಾಲೆ ಬಳಿ ಪ್ರತಿಭಟನೆ ನಡೆಸಿದರು. ಶಾಲೆಯ ಪ್ರಾಂಶುಪಾಲ ಹೇಮಂತ್​​ರನ್ನ ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಶಾಲಾ ಆಡಳಿತ ಮಂಡಳಿಯನ್ನ ಕೇಳಿದರೆ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳತ್ತ ಬೊಟ್ಟು ಮಾಡುತ್ತಿದ್ದಾರೆ. ಬಿಇಒ ರಿಜೆಕ್ಟ್ ಮಾಡಿರೋದ್ರಿಂದ ಈ ರೀತಿ ಆಗಿದೆ ಎನ್ನುತ್ತಾರೆ. ಆದರೆ ಇದನ್ನ ಬಿಇಒ ಮಹೇಶ್ ತಳ್ಳಿ ಹಾಕಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುವುದೇನು?

ಶಾಲಾ ಸಿಬ್ಬಂದಿ ಸರಿಯಾಗಿ ಲಾಗಿನ್ ಆಗಿ ವಿದ್ಯಾರ್ಥಿಗಳ ವಿವರವನ್ನು ಭರ್ತಿ ಮಾಡದ್ದರಿಂದಲೇ ಈ ಎಡವಟ್ಟು ಆಗಿದೆ ಎನ್ನೋದು ಶಿಕ್ಷಣ ಇಲಾಖೆ ಅಧಿಕಾರಿಗಳ ವಾದ. ಬಾಲಕ ತಮೀಮ್​ಗೆ ಈಗಾಗಲೇ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಕಳುಹಿಸಲಾಗಿದೆ ಎಂಬಂತೆ ಶಿಕ್ಷಣ ಇಲಾಖೆಯ ವೆಬ್​ ಪೇಜ್​ನಲ್ಲಿ ಮಾಹಿತಿ ದಾಖಲಾಗಿದೆಯಂತೆ. ಹಾಗಾಗಿ ಆತನಿಗೆ ಹಾಲ್ ಟಿಕೆಟ್ ಬಂದಿಲ್ಲ ಎಂಬುದು ಅಧಿಕಾರಿಗಳ ವಾದ. ಆದರೆ ಇತ್ತ ತಮೀಮ್​ 10ನೇ ತರಗತಿಯ ಸಂಪೂರ್ಣ ಶುಲ್ಕ ಪಾವತಿಸಿ ಇಡೀ ಒಂದು ವರ್ಷ ಓದಿದ್ದಾನೆ.

ಅಷ್ಟೇ ಅಲ್ಲದೆ ಈ ಶಾಲೆಗೆ ಕೇವಲ 8ನೇ ತರಗತಿವರಗೆಗೆ ಮಾತ್ರ ಅನುಮತಿ ಇದ್ದು ಇಲ್ಲಿ 9 ಮತ್ತು 10ನೇ ತರಗತಿಯನ್ನ ಅನಧಿಕೃತವಾಗಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಬಗ್ಗೆ ಪೋಷಕರಿಗೆ ತಿಳಿ ಹೇಳಿದ್ದರೂ ಅವರಿಗೆ ಅದು ಅರ್ಥ ಆಗಿಲ್ಲ ಅನ್ನೋದು ಅವರ ವಾದ. ಇಷ್ಟೆಲ್ಲಾ ಆದರೂ ಶಾಲಾ ಆಡಳಿತ ಮಂಡಳಿಯ ಒಬ್ಬನೇ ಒಬ್ಬ ಸದಸ್ಯ ಶಾಲೆಯತ್ತ ಸುಳಿಯಲಿಲ್ಲ. ಪ್ರಾಂಶುಪಾಲರನ್ನ ಮುಂದೆ ಬಿಟ್ಟು ಅವರು ನಾಪತ್ತೆಯಾಗಿದ್ದರು. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ, ವಿಡಿಯೋ ವೈರಲ್

ಯಾರದ್ದೋ ಎಡವಟ್ಟಿಗೆ ಇಬ್ಬರು ಬಾಲಕರ ಒಂದು ವರ್ಷದ ಶಿಕ್ಷಣ ಬಲಿಯಾಗಿದೆ. ಈ ವರ್ಷ ನಡೆಯುವ ಎರಡನೇ ಮತ್ತು ಮೂರನೇ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಅವಕಾಶ ದೊರೆಯುವ ಸಾಧ್ಯತೆಯೂ ಕಡಿಮೆ ಇದೆ. ಹಾಗಾಗಿ ಅಮಾಯಕ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವ ವ್ಯಕ್ತಿಗಳನ್ನ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

ಐಪಿಎಲ್​ಗಾಗಿ (IPL) ಕಾಯುವಿಕೆಗೆ ಅಂತ್ಯ ಹಾಡುವ ಸಮಯ ಬಂದಿದೆ. ಮುಂದಿನ ವಾರದಿಂದ ಕ್ರಿಕೆಟ್ ಅಂಗಳದಲ್ಲಿ ಅಭಿಮಾನಿಗಳ ಗದ್ದಲ ಜೋರಾಗಲಿದೆ. ದೇಶ- ವಿದೇಶದ ಸ್ಟಾರ್ ಆಟಗಾರರು ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸಲು ಸಿದ್ಧರಾಗಿದ್ದಾರೆ. ಐಪಿಎಲ್ ಎಂದರೆ ನಮಗೆಲ್ಲ ನೆನಪಾಗುವುದು ಬ್ಯಾಟರ್​​ಗಳ ಅಬ್ಬರ, ಬೌಲರ್​ಗಳ ದಯಾನೀಯ ಸ್ಥಿತಿ. ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲಿ ಸಾಮಾನ್ಯವಾಗಿದ್ದ ಶತಕಗಳು ಇದೀಗ ಟಿ20 ಮಾದರಿಯಲ್ಲೂ ಸರ್ವೆ ಸಾಮಾನ್ಯವಾಗಿವೆ. ಅದರಲ್ಲೂ ಕೆಲವೇ ಕೆಲವು ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಬ್ಯಾಟ್ಸ್‌ಮನ್​ಗಳು ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ. ಆದಾಗ್ಯೂ ಈ ಹೊಡಿಬಡಿ ಆಟದಲ್ಲೂ ನಿಧಾನಗತಿಯ ಬ್ಯಾಟಿಂಗ್‌ ಮಾಡಿ ಶತಕ ಬಾರಿಸಿದ ಆಟಗಾರರಿದ್ದಾರೆ. ಅವರಲ್ಲಿ ಟಾಪ್ 5 ರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ನೋಡಿ.

ಐಪಿಎಲ್​ನ 5 ನಿಧಾನಗತಿಯ ಶತಕ

ಐಪಿಎಲ್‌ನಲ್ಲಿ ನಿಧಾನಗತಿಯ ಶತಕದ ದಾಖಲೆಯನ್ನು ಮನೀಷ್ ಪಾಂಡೆ ಮತ್ತು ವಿರಾಟ್ ಕೊಹ್ಲಿ ಜಂಟಿಯಾಗಿ ಹೊಂದಿದ್ದಾರೆ. ವಿರಾಟ್ ಕೊಹ್ಲಿ 2024 ರ ಐಪಿಎಲ್​ನಲ್ಲಿ 67 ಎಸೆತಗಳಲ್ಲಿ ಶತಕ ಬಾರಿಸಿದ್ದರು. ವಿರಾಟ್ ಈ ಶತಕವನ್ನು ರಾಜಸ್ಥಾನ ರಾಯಲ್ಸ್ ವಿರುದ್ಧ ಕಲೆಹಾಕಿದ್ದರು. ಹಾಗೆಯೇ 2009 ರ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ ಕನ್ನಡಿಗ ಮನೀಷ್ ಪಾಂಡೆ ಆರ್​ಸಿಬಿ ಪರ 67 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದಾಗ್ಯೂ ಈ ಶತಕದ ಮೂಲಕ ಐಪಿಎಲ್​ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಆಟಗಾರನೆಂಬ ದಾಖಲೆಯನ್ನು ಮನೀಷ್ ಬರೆದಿದ್ದರು. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಮ್ಮ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆಯಾದರೂ ಅವರ ಹೆಸರಿನಲ್ಲಿ ಈ ಅನಗತ್ಯ ದಾಖಲೆ ಇದೆ.

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕೂಡ ಈ ಪಟ್ಟಿಯಲ್ಲಿದ್ದು, 2011 ರ ಐಪಿಎಲ್​ನಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ವಿರುದ್ಧ 66 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಮತ್ತೊಬ್ಬ ಕನ್ನಡಿಗ ಕೆಎಲ್ ರಾಹುಲ್ 2016 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 64 ಎಸೆತಗಳಲ್ಲಿ ಶತಕ ಪೂರೈಸಿದರೆ, ಅಂಬಟಿ ರಾಯುಡು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 62 ಎಸೆತಗಳಲ್ಲಿ ಶತಕ ಬಾರಿಸಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

  • ವಿರಾಟ್ ಕೊಹ್ಲಿ , ಐಪಿಎಲ್ 2024, 67 ಚೆಂಡುಗಳು
  • ಮನೀಶ್ ಪಾಂಡೆ, ಐಪಿಎಲ್ 2009, 67 ಚೆಂಡುಗಳು
  • ಸಚಿನ್ ತೆಂಡೂಲ್ಕರ್, ಐಪಿಎಲ್ 2011, 66 ಚೆಂಡುಗಳು
  • ಕೆಎಲ್ ರಾಹುಲ್, ಐಪಿಎಲ್ 2019, 64 ಎಸೆತಗಳು
  • ಅಂಬಟಿ ರಾಯುಡು, ಐಪಿಎಲ್ 2018, 62 ಎಸೆತಗಳು

ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸ್ ಹೊಡೆಯದ ಐವರು ಆಟಗಾರರಿವರು

ಅತಿ ವೇಗದ ಶತಕದ ದಾಖಲೆ ಯಾರ ಹೆಸರಿನಲ್ಲಿದೆ?

ಏತನ್ಮಧ್ಯೆ, ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕದ ದಾಖಲೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಅಂದಿನಿಂದ, ಈ ದಾಖಲೆ ಹಾಗೆಯೇ ಉಳಿದಿದೆ. ಆದ್ದರಿಂದ, ಈ 19 ನೇ ಆವೃತ್ತಿಯಲ್ಲಿ ಯಾರು ಗೇಲ್ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗುತ್ತಾರೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ugadi 2026 Predictions: ವರ್ಷ ಭವಿಷ್ಯ; ಖ್ಯಾತ ಜ್ಯೋತಿಷಿಯಿಂದ ಯುಗಾದಿ ಮಹತ್ವ ಮತ್ತು ರಾಶಿಗಳ ಫಲಾಫಲಗಳು

ಪ್ರತಿ ವರ್ಷದಂತೆ ಯುಗಾದಿ ಹಬ್ಬವು ಹೊಸ ಸಂವತ್ಸರವನ್ನು ಪ್ರಾರಂಭಿಸುತ್ತದೆ, ಈ ವರ್ಷ ಅಂದರೆ 2026ರ ಯುಗಾದಿಯು ಪರಾಭವ ನಾಮ ಸಂವತ್ಸರದೊಂದಿಗೆ ಪ್ರಾರಂಭವಾಗಲಿದೆ. ಈ ಸಂವತ್ಸರದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ಅವರು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಈ ವರ್ಷ ಅಹಂಕಾರದ ಸೋಲು, ಅಧರ್ಮದ ಪತನ ಮತ್ತು ಧರ್ಮದ ವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷದ ರಾಜ ಗುರು ಆಗಿದ್ದು, ಸತ್ಕಾರ್ಯಗಳು, ಉತ್ತಮ ನಡತೆ, ಮತ್ತು ನ್ಯಾಯದ ಪರಿಪಾಲನೆಗೆ ಒತ್ತು ನೀಡಲಿದೆ. ಆದಾಗ್ಯೂ, ಮಂತ್ರಿ ಕುಜ ಆಗಿರುವುದರಿಂದ ಅಗ್ನಿಭಯ, ಜಲಭಯ, ಗಾಳಿಯ ಹೊಡೆತ ಮತ್ತು ರೋಗ ಪೀಡೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಚಂದ್ರ ಸೇನಾಧಿಪತಿಯಾಗಿದ್ದು, ಉತ್ತಮ ಮಳೆ ಮತ್ತು ಬೆಳೆ ನಿರೀಕ್ಷಿಸಲಾಗಿದೆ. ರೈತಾಪಿ ವರ್ಗಕ್ಕೆ ಉತ್ತಮ ಫಲವಿದ್ದರೂ, ದುಷ್ಟ ಶಕ್ತಿಗಳಿಂದ ರಕ್ಷಣೆ ಪಡೆಯಲು ಎಚ್ಚರ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಮಣಿರತ್ನಂ ಮತ್ತು ಎಆರ್ ರೆಹಮಾನ್ (AR Rahman) ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ ಟ್ರೆಂಡಿಂಗ್​​ನನಲ್ಲಿವೆ. ಆದರೆ ಈಗ ಬರೋಬ್ಬರಿ 34 ವರ್ಷಗಳ ಬಳಿಕ ಈ ಸ್ನೇಹ ಮುರಿದಂತಿದೆ. 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ ಹೊಸ ಸಿನಿಮಾಕ್ಕೆ ಹೊಸ ಸಂಗೀತ ನಿರ್ದೇಶಕನ ಆಯ್ಕೆ ಮಾಡಿದ್ದಾರೆ.

ಮಣಿರತ್ನಂ, ಅವರು ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾಕ್ಕೆ ಯುವ ಸಂಗೀತ ನಿರ್ದೇಶಕರೊಬ್ಬರನ್ನು ಮಣಿರತ್ನಂ ಆಯ್ಕೆ ಮಾಡಿದ್ದಾರೆ. ಮಣಿರತ್ನಂ ಅವರ ಸಿನಿಮಾಕ್ಕೆ 21 ವರ್ಷ ವಯಸ್ಸಿನ ಸಾಯಿ ಅಭಯಂಕರ್ ಅವರು ಸಂಗೀತ ನೀಡಲಿದ್ದಾರೆ. ಯುವ ಸಂಗೀತ ನಿರ್ದೇಶಕನನ್ನು ಮಣಿರತ್ನಂ ಆಯ್ಕೆ ಮಾಡಿದ್ದು, ಇದು ಹಲವರ ಹುಬ್ಬೇರುವಂತೆ ಮಾಡಿದೆ.

ಮಣಿರತ್ನಂ ಅವರು ಕಳೆದ 43 ವರ್ಷಗಳಿಂದಲೂ ಸಿನಿಮಾ ನಿರ್ದೇಶನದಲ್ಲಿ ತೊಡಗಿದ್ದಾರೆ. ಭಾರತದ ಅತ್ಯುತ್ತಮ ಸಿನಿಮಾ ನಿರ್ದೇಶಕರಲ್ಲಿ ಮಣಿರತ್ನಂ ಒಬ್ಬರು. ಇಷ್ಟು ಸುದೀರ್ಘ ಸಿನಿಮಾ ವೃತ್ತಿಯಲ್ಲಿ ಅವರು ಕೆಲಸ ಮಾಡಿರುವುದು ಕೇವಲ ಇಬ್ಬರು ಸಂಗೀತ ನಿರ್ದೇಶಕರ ಜೊತೆಗೆ ಮಾತ್ರವೇ. ಅವರ ಮೊದಲ 10 ಸಿನಿಮಾಗಳಿಗೆ ಇಳಯರಾಜ ಸಂಗೀತ ನೀಡಿದ್ದರು. ಬಳಿಕ 1992 ರ ‘ರೋಜಾ’ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದರು. ಇದೀಗ 34 ವರ್ಷಗಳ ಬಳಿಕ ಸಂಗೀತ ನಿರ್ದೇಶಕರನ್ನು ಮಣಿರತ್ನಂ ಬದಲಿಸುತ್ತಿದ್ದು, ಬಹೊಸ ಸಿನಿಮಾಕ್ಕೆ ಸಾಯಿ ಅಭಯಂಕರ್ ಸಂಗೀತ ನೀಡಲಿದ್ದಾರೆ.

ಇದನ್ನೂ ಓದಿ:ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ಮೆರೆದ ಭಾರತ

ಮಣಿರತ್ನಂ ಅವರ ಈ ಹೊಸ ಸಿನಿಮಾನಲ್ಲಿ ವಿಜಯ್ ಸೇತುಪತಿ ನಾಯಕ, ಸಾಯಿ ಪಲ್ಲವಿ ನಾಯಕಿ. ಈ ಮೊದಲು ವಿಜಯ್ ಸೇತುಪತಿ ಅವರು ಮಣಿರತ್ನಂ ಜೊತೆಗೆ ‘ಚಿಕ್ಕ ಚಿವಂತಿ ವಾನಂ’ ಸಿನಿಮಾನಲ್ಲಿ ನಟಿಸಿದ್ದರು. ಮಣಿರತ್ನಂ ಅವರೊಟ್ಟಿಗೆ ಇದು ಅವರ ಎರಡನೇ ಸಿನಿಮಾ. ಇನ್ನು ನಟಿ ಸಾಯಿ ಪಲ್ಲವಿ ಅವರಿಗೆ ಮಣಿರತ್ನಂ ಜೊತೆಗೆ ಇದು ಮೊದಲನೇ ಸಿನಿಮಾ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link