Category Archives: Blog

Your blog category

Viral: ಬಾಸ್‌ನಿಂದ ಕಾಲ್ ಬಂದದ್ದೇ ತಡ ಮೆಟ್ರೋದೊಳಗೆ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತ ಯುವಕ

Viral: ಬಾಸ್‌ನಿಂದ ಕಾಲ್ ಬಂದದ್ದೇ ತಡ ಮೆಟ್ರೋದೊಳಗೆ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತ ಯುವಕ

ದೆಹಲಿ, ಮಾರ್ಚ್ 16: ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (employees) ಅನುಭವಿಸುವ ಒತ್ತಡ ಹೇಳಲಾಗದು. ಕೆಲಸ ಮಾಡದೇ ಇದ್ದರೆ ವಿಧಿಯಿಲ್ಲ ಎನ್ನುವ ಕಾರಣಕ್ಕೆ ಎಷ್ಟೇ ಕಷ್ಟವಾದ್ರೂ ಉದ್ಯೋಗ ಬಿಡಲ್ಲ. ಇದಕ್ಕೆ ಉದಾಹರಣೆಯಂತಿದ್ದಾನೆ ಈ ಯುವಕ. ಜನದಟ್ಟಣೆಯಿಂದ ತುಂಬಿದ ದೆಹಲಿ (Delhi) ಮೆಟ್ರೋದ ಬೋಗಿಯೊಳಗೆ ಯುವಕನೊಬ್ಬ ಲ್ಯಾಪ್ ಟಾಪ್ ತೆರೆದು ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದಾನೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ.

@kuxh101 ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ದೆಹಲಿ ಮೆಟ್ರೋದ ಬೋಗಿಯೊಳಗೆ ಕಿಕ್ಕಿರಿದ ಕಂಪಾರ್ಟ್‌ಮೆಂಟ್‌ನ್ನು ಕಾಣಬಹುದು. ಆಫೀಸ್ ಕಾಲ್ ಸ್ವೀಕರಿಸಿದ ಬಳಿಕ ಯುವಕ ಕೆಲಸದಲ್ಲಿ ತೊಡಗಿಕೊಂಡಿರುವುದು ಕಂಡುಬಂದಿದೆ. ಯುವಕನೊಬ್ಬ ಲ್ಯಾಪ್‌ಟಾಪ್‌ನ್ನು ತೊಡೆಯ ಮೇಲೆ ಇರಿಸಿಕೊಂಡು ನೆಲದ ಮೇಲೆ ಕುಳಿತಿರುವುದನ್ನು ಕಾಣಬಹುದು. ಇನ್ನೊಂದು ಕೈಯಲ್ಲಿ ಫೋನ್ ಹಿಡಿದುಕೊಂಡಿದ್ದಾನೆ.

ವೈರಲ್ ಪೋಸ್ಟ್ ಇಲ್ಲಿದೆ

ಈ ಪೋಸ್ಟ್ ಹಂಚಿಕೊಂಡ ಬಳಕೆದಾರ, ಈ ವ್ಯಕ್ತಿಯನ್ನು ಮೆಟ್ರೋದಲ್ಲಿ ನೋಡಿದೆ. ಮ್ಯಾನೇಜರ್‌ನಿಂದ ಕರೆ ಬಂತು, ತಕ್ಷಣವೇ ತನ್ನ ಲ್ಯಾಪ್‌ಟಾಪ್ ತೆರೆದು, ನೆಲದ ಮೇಲೆ ಕುಳಿತು ತನ್ನ ಕೆಲಸವನ್ನು ಮುಗಿಸಲು ಪ್ರಾರಂಭಿಸಿದನು ಎಂದು ಶಿರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಈ ಪೋಸ್ಟ್ 2 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮೆಟ್ರೋವನ್ನು ಕೆಲಸದ ಸ್ಥಳವಾಗಿ ಮಾಡಿಕೊಂಡರು ಎಂದರೆ, ಮತ್ತೊಬ್ಬರು, ಇದೇ ಕಾರಣಕ್ಕೆ ನಾನು ಓದುವುದನ್ನೇ ಬಿಟ್ಟೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಭಾನುವಾರ ಕೂಡ ಕೆಲಸನಾ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಅವರು ಇತ್ತೀಚೆಗೆ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಅವರು ವಿವಾಹದಲ್ಲಿ ಭಾಗಿ ಆಗಿದ್ದು. ಚೆನ್ನೈನಲ್ಲಿ ನಡೆದ ವಿವಾಹದಲ್ಲಿ ದಳಪತಿ ವಿಜಯ್ ಜೊತೆ ತ್ರಿಷಾ ಹಾಜರಿ ಹಾಕಿದ್ದರು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ತ್ರಿಷಾ ಮತ್ತೊಂದು ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಹಾಗಂತ ಈ ಮದುವೆಯಲ್ಲಿ ವಿಜಯ್ ಹಾಜರಿ ಹಾಕಿಲ್ಲ. ತಮ್ಮ ಆಪ್ತ ಬಳಗದವರ ಜೊತೆ ತ್ರಿಷಾ ಕಾಣಿಸಿಕೊಂಡಿದ್ದಾರೆ.

ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ಅವರು ನಿರ್ಮಾಪಕ ರವಿ ಭಾಗ್ಚಂದ್ಕಾ ಜೊತೆ ಮದುವೆ ಆದರು. ಮುಂಬೈನಲ್ಲಿ ಮಾರ್ಚ್ 14ರಂದು ಈ ಮದುವೆ ನಡೆಯಿತು. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದರು. ಇದರಲ್ಲಿ ತ್ರಿಷಾ ಕೃಷ್ಣನ್ ಕೂಡ ಒಬ್ಬರು. ತ್ರಿಷಾ ಅವರು ವಿವಾಹದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ತ್ರಿಷಾ ಜೊತೆ ಪಾರ್ಥಿಬನ್ ಮಗಳು ಕೀರ್ತನಾ ಕೂಡ ಇದ್ದರು ಎಂಬುದು ವಿಶೇಷ. ಪಾರ್ಥಿಬನ್ ತಮಿಳು ನಟ. ಅವರ ಜೊತೆ ಕೀರ್ತನಾ ಕಾಣಿಸಿಕೊಂಡರೆ ಸಮಸ್ಯೆ ಏನು ಎಂಬ ಪ್ರಶ್ನೆ ಅನೇಕರಿಗೆ ಬರಬಹುದು. ಅದಕ್ಕೂ ಉತ್ತರ ಇದೆ. ಇತ್ತೀಚೆಗೆ ವಿಜಯ್ ಜೊತೆ ತ್ರಿಷಾ ಕಾಣಿಸಿಕೊಂಡಾಗ ಪಾರ್ಥಿಬನ್ ಅವರು ಇದನ್ನು ಟೀಕೆ ಮಾಡಿದ್ದರು. ‘ತ್ರಿಷಾ ಸ್ವಲ್ಪ ದಿನ ಮನೆಯಲ್ಲಿರೋದು ಉತ್ತಮ’ ಎಂಬರ್ಥದಲ್ಲಿ ಮಾತನಾಡಿದ್ದರು.

ಈ ಘಟನೆ ಬೆನ್ನಲ್ಲೇ ತ್ರಿಷಾ ಅವರು ಪಾರ್ಥಿಬನ್ ಮನೆಯವರ ಜೊತೆ ಕಾಣಿಸಿಕೊಂಡಿದ್ದು ವಿಶೇಷ. ಸೋಶಿಯಲ್ ಮೀಡಿಯಾದಲ್ಲಿ ತ್ರಿಷಾ ಫೋಟೋ ಹಚಿಕೊಂಡಿದ್ದು, ಅವರು ನವ ದಂಪತಿಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ಈ ಮದುವೆಯಲ್ಲಿ ನಿರ್ದೇಶಕ ಮಣಿರತ್ನಂ ಅವರನ್ನು ತ್ರಿಷಾ ಭೇಟಿ ಮಾಡಿದರು. ಈ ಮೊದಲು ಇಬ್ಬರೂ ‘ಪೊನ್ನಿಯನ್ ಸೆಲ್ವನ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಫೋಟೋ ವೈರಲ್ ಆದ ಬೆನ್ನಲ್ಲೇ ‘ವಿಜಯ್ ಮದುವೆಗೆ ಬಂದಿಲ್ಲವೇ’ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಮೂಲಕ ಮಣಿರತ್ನಂ ಅವರು ತ್ರಿಷಾ ಕಾಲೆಳೆದಿದ್ದಾರೆ. ಇನ್ನೂ ಕೆಲವರು ವೈರಿಗಳ ಮಗಳ ಜೊತೆ ತ್ರಿಷಾ ಪೋಸ್ ಕೊಟ್ಟಿದ್ದಾರೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ಟೆಕ್ ಉದ್ಯೋಗಗಳಿಗೆ ಮುಗಿಬೀಳುತ್ತಿದ್ದಾರೆ ಜನ! ರಿಕ್ರೂಟರ್ ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್​ 16: ಐಟಿ ಸಿಟಿಗೆ ಉದ್ಯೋಗ ಹುಡುಕಿ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆದರೆ ಕೆಲಸ ಅರಸಿ ಬರುವ ಆಕಾಂಕ್ಷಿಗಳ ಮಧ್ಯೆ ಸ್ಪರ್ಧೆ ತೀವ್ರವಾಗಿದ್ದು, ಈ ಬಗ್ಗೆ ಬೆಂಗಳೂರಿನ (Bengaluru) ರಿಕ್ರೂಟರ್ ಒಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 15 ದಿನಗಳಲ್ಲಿ ಸಾವಿರಾರು ಮಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರ ಕುರಿತು ಪೋಸ್ಟ್ ಮಾಡಿರುವ ಅವರು, ಒಂದು ಕೆಲಸ ದಕ್ಕಿಸಿಕೊಳ್ಳಲು ಎದುರಾಗುವ ಸ್ಪರ್ಧೆ ಇದುವೇ ಎಂದು ಬರೆದುಕೊಂಡಿದ್ದಾರೆ.

15 ದಿನಗಳಲ್ಲಿ 30 ಸಾವಿರಕ್ಕೂ ಹೆಚ್ಚು ಅರ್ಜಿಗಳು

ನಗರದಲ್ಲಿ ಟೆಕ್ ಉದ್ಯೋಗಗಳಿಗಾಗಿ ಸ್ಪರ್ಧೆ ದಿನೇ ದಿನೇ ಹೆಚ್ಚುತ್ತಿದ್ದು, ವಿಶೇಷವಾಗಿ MERN ಮತ್ತು ರಿಯಾಕ್ಟ್ ಡೆವಲಪರ್ ಹುದ್ದೆಗಳಿಗೆ ಭಾರೀ ಪ್ರಮಾಣದಲ್ಲಿ ಅಭ್ಯರ್ಥಿಗಳು ಅರ್ಜಿ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಕಳೆದ 15 ದಿನಗಳಲ್ಲಿ ಮಾತ್ರ ಸುಮಾರು 34,742 ಮಂದಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಕುರಿತು ಮಾಹಿತಿ ಹಂಚಿಕೊಂಡಿರುವ ರಿಕ್ರೂಟರ್ ನಾರಾಯಣಿ ಗುರುನಾಥನ್ ಎಕ್ಸ್ ಪೋಸ್ಟ್ ಮಾಡಿ, ಕೇವಲ 15 ದಿನಗಳಲ್ಲಿ MERN ಮತ್ತು React ಉದ್ಯೋಗಗಳಿಗೆ 34 ಸಾವಿರಕ್ಕೂ ಹೆಚ್ಚು ಮಂದಿ ಅರ್ಜಿ ಹಾಕಿದ್ದಾರೆ. ಉದ್ಯೋಗಕ್ಕೆ ಅರ್ಜಿ ಹಾಕುವಾಗ ಎದುರಾಗುವ ಸ್ಪರ್ಧೆ ಇದುವೆ ಎಂದು ಹೇಳಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ನೆಟ್ಟಿಗರ ರಿಯಾಕ್ಷನ್ ಹೇಗಿತ್ತು?

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಹಲವರು ಬೆಂಗಳೂರು ಟೆಕ್ ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧೆ ಎಷ್ಟು ಹೆಚ್ಚಾಗಿದೆ ಎಂಬುದನ್ನು ತಮ್ಮ ಅನುಭವಗಳ ಮೂಲಕ ಹಂಚಿಕೊಂಡಿದ್ದಾರೆ. ಕೆಲವರು ಉದ್ಯೋಗ ಸುಳ್ಳು ಅರ್ಜಿ ಹಾಕುವವರ ಸಂಖ್ಯೆಯೂ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ. ಒಬ್ಬ ಬಳಕೆದಾರ ನಮ್ಮ ಕಂಪನಿಯಲ್ಲಿ 500ಕ್ಕೂ ಹೆಚ್ಚು ರೆಸ್ಯೂಮ್ ಬಂದರೂ, ಕೆಲಸಕ್ಕೆ ಬೇಕಾದ ಅರ್ಹ ತಿಳುವಳಿಕೆ ಹಲವರಲ್ಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಒಟ್ಟಾರೆ, ಟೆಕ್ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚಿದ್ದರೂ, ಅದೇ ಮಟ್ಟದಲ್ಲಿ ಸ್ಪರ್ಧೆಯೂ ಹೆಚ್ಚುತ್ತಿರುವುದು ಈ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮ್ಯಾಚ್ ಫಿಕ್ಸಿಂಗ್ ಅನುಮಾನ ಹುಟ್ಟುಹಾಕಿದ ಪಾಕ್ ವೇಗಿ

ಪಾಕಿಸ್ತಾನದ ನ್ಯಾಷನಲ್ ಟಿ20 ಕಪ್‌ ಟೂರ್ನಿಯಲ್ಲಿ ಅಸಾದ್ ಅಖ್ತರ್ (Asad Akhtar) ಎಸೆದ ಎಸೆತವು ಇದೀಗ ಮ್ಯಾಚ್ ಫಿಕ್ಸಿಂಗ್ ಅನುಮಾನಕ್ಕೆ ಕಾರಣವಾಗಿದೆ. ಪೇಶಾವರದ ಅರ್ಬಾಬ್ ನಿಯಾಜ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಾಹೋರ್ ಹಾಗೂ ಕರಾಚಿ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಕರಾಚಿ ತಂಡದ ವೇಗಿ ಅಸಾದ್ ಅಖ್ತರ್ ಎಸೆತವು ಇದೀಗ ಅನುಮಾನಕ್ಕೆ ಕಾರಣವಾಗಿದೆ. ಏಕೆಂದರೆ ಈ ಅಸಾದ್  ಚೆಂಡೆಸೆದಾಗ ಅವರ ಕಾಲು ಕ್ರೀಸ್‌ಗಿಂತ ಸುಮಾರು ಒಂದು ಅಡಿಗಿಂತಲೂ ಹೆಚ್ಚು ಮುಂದೆ ಹೋಗಿತ್ತು.

ಅಂದರೆ ಮೇಲ್ನೋಟಕ್ಕೆ ಅಸಾದ್ ಅಖ್ತರ್ ಉದ್ದೇಶಪೂರ್ವಕವಾಗಿಯೇ ನೋ ಬಾಲ್ ಎಸೆದಿದ್ದಾರೆ ಕಂಡು ಬರುತ್ತದೆ. ಏಕೆಂದರೆ ಸ್ಪರ್ಧಾತ್ಮಕ ಕ್ರಿಕೆಟ್ ಆಡುವ ಯಾವುದೇ ಬೌಲರ್ ಇಷ್ಟೊಂದು ದೂರ ಕಾಲಿಟ್ಟು ಚೆಂಡೆಸುವುದಿಲ್ಲ.

ಆದರೆ ಅಸಾದ್ ಅಖ್ತರ್ ಕ್ರೀಸ್​ನಿಂದ ತುಂಬಾ ದೂರನೇ ಕಾಲಿಡುವ ಮೂಲಕ ನೋ ಬಾಲ್ ಮಾಡಿರುವುದು ಕಂಡು ಬಂದಿದೆ. ಹೀಗಾಗಿಯೇ ಇದು ಉದ್ದೇಶಪೂರ್ವಕ ನೋ ಬಾಲ್ ಎಂಬ ಅನುಮಾನವನ್ನು ಹುಟ್ಟು ಹಾಕಿದೆ.

ಇನ್ನು ಈ ಪಂದ್ಯದಲ್ಲಿ ಅಸಾದ್ ಅಖ್ತರ್ ಕೇವಲ ಒಂದು ಓವರ್ ಮಾತ್ರ ಬೌಲಿಂಗ್ ಮಾಡಿದ್ದರು. ಆ ಓವರ್‌ನಲ್ಲಿ ನೀಡಿದ್ದು ಬರೋಬ್ಬರಿ 21 ರನ್​ಗಳು. ಅದರಲ್ಲಿ ಎರಡು ನೋ-ಬಾಲ್ ಮತ್ತು ಎರಡು ವೈಡ್‌ಗಳು ಸೇರಿದ್ದವು.

ಅಂದರೆ ಇಲ್ಲಿ ಅಸಾದ್ ಮನಃಪೂರ್ವಕವಾಗಿಯೇ 2 ನೋ ಬಾಲ್ ಹಾಗೂ 2 ವೈಡ್​ಗಳನ್ನು ಎಸೆದಿದ್ದಾರೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದಾರೆ.

ಅಮಿರ್ ನೋ ಬಾಲ್​ಗೆ ಹೋಲಿಕೆ:

ಅಸಾದ್ ಅಖ್ತರ್ ಎಸೆದಿರುವ ನೋ-ಬಾಲ್ ಅನ್ನು ನೋಡಿದ ಅಭಿಮಾನಿಗಳು, 2010ರಲ್ಲಿ ಮೊಹಮ್ಮದ್ ಅಮಿರ್ ಎಸೆದಿದ್ದ ವಿವಾದಾತ್ಮಕ ನೋ-ಬಾಲ್‌ಗೆ ಹೋಲಿಸಿ ‘ಸ್ಪಾಟ್ ಫಿಕ್ಸಿಂಗ್’ ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

2010 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಮಿರ್ ಸ್ಪಾಟ್ ಫಿಕ್ಸಿಂಗ್ ಮಾಡಿಕೊಂಡು ನೋ ಬಾಲ್ ಎಸೆದಿದ್ದರು. ಈ ವೇಳೆ ಅವರ ಕಾಲುಗಳು ಕ್ರೀಸ್​ನಿಂದ ಬಲು ದೂರವಿತ್ತು.

ಇದೀಗ ಅಸಾದ್ ಅಖ್ತರ್ ಕೂಡ ಇದೇ ಮಾದರಿಯಲ್ಲಿ ನೋ ಬಾಲ್ ಎಸೆದಿದ್ದಾರೆ. ಹೀಗಾಗಿ ಈ ನೋ ಬಾಲ್​ ಅನ್ನು ಅಮಿರ್ ಅವರ ಸ್ಪಾಟ್ ಫಿಕ್ಸಿಂಗ್ ನೋ ಬಾಲ್​ಗೆ ಹೋಲಿಸಲಾಗುತ್ತಿದೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇನ್ನು ಈ ಪಂದ್ಯದಲ್ಲಿ ಅಸಾದ್ ಅಖ್ತರ್ ದುಬಾರಿಯಾದರೂ, ಕರಾಚಿ ತಂಡವು ಈ ಪಂದ್ಯವನ್ನು 57 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರಾಚಿ 20 ಓವರ್​ಗಳಲ್ಲಿ 206 ರನ್​ಗಳಿಸಿದರೆ, ಲಾಹೋರ್ ತಂಡವು 17.3 ಓವರ್​ಗಳಲ್ಲಿ 149 ರನ್​ಗಳಿಸಿ ಆಲೌಟ್ ಆಗಿದೆ.

 

 

Source link

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ.

ಸದನದಲ್ಲಿ ಸಚಿವ ಪರಮೇಶ್ವರ್ ಉತ್ತರಗಳನ್ನು ಮಂಡಿಸುತ್ತಿದ್ದ ವೇಳೆ ವಿಪಕ್ಷಗಳ ಸದಸ್ಯರಿಂದ ಟೀಕೆ ವ್ಯಕ್ತವಾಗಿದೆ. ಕಲಾಪ ಆರಂಭದಿಂದಲೂ ಸಚಿವರಿಂದನಿರೀಕ್ಷಿತ ಉತ್ತರ ಬಂದಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ‌ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತಾ ವಿಪಕ್ಷ ನಾಯಕ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಚಿವರ ವಿರುದ್ಧ ಸ್ಪೀಕರ್ ಖಾದರ್​ ಅಸಮಾಧಾನ ಹೊರಹಾಕಿದ್ದಾರೆ. ಸದನದಲ್ಲಿ ಎಲ್ಲಾ ಶಾಸಕರೂ ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗಲ್ಲ. ಗಮನ ಸೆಳೆಯುವ ಸೂಚನೆಗೂ ಸಚಿವರು ಉತ್ತರ ಕೊಡಲ್ಲ. 3 ಸಲ ಸಚಿವರಿಗೆ ಹೇಳಿದರೂ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಖಾರವಾಗಿ ಹೇಳುವ ಮೂಲಕ ಆಡಳಿತ ಪಕ್ಷಕ್ಕೆ ಸ್ಪೀಕರ್​​ ಖಾದರ್​​ ಬಿಸಿ ಮುಟ್ಟಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಸಭಾತ್ಯಾಗ ಮಾಡಿದ್ದಾರೆ. ಪ್ರತಿದಿನವೂ ಶೇ. 10-30 ಲಿಖಿತ ಪ್ರಶ್ನೆಗಳಿಗೆ ಮಾತ್ರ ಉತ್ತರ ಕೊಡುತ್ತಿದ್ದಾರೆ. ಸರ್ಕಾರ ಹೆಣದಂತಾಗಿದ್ದು, ಸಿಎಂ ಹಿಡಿತ ಕಳೆದುಕೊಂಡಿದ್ದಾರೆ. ಸಚಿವರು ಸದನಕ್ಕೆ ಬರುತ್ತಿಲ್ಲ. ಯಾರು ಸಿಎಂ ಅಂತಾ ತೀರ್ಮಾನ ಆಗದಿರುವ ಕಾರಣ ಈ ರೀತಿ ಆಗುತ್ತಿದೆ. ಸ್ಪೀಕರ್ ನೊಂದು ಹೊರ ಹೋಗಿರುವುದು ಸರ್ಕಾರಕ್ಕೆ ಚಾಟಿ ಏಟು ನೀಡಿದಂತಾಗಿದೆ. ಸ್ಪೀಕರ್ ನಡೆಯನ್ನು ಸ್ವಾಗತಿಸುತ್ತೇವೆ. ಸರ್ಕಾರ ಬದುಕಿದ್ದರೆ ಸಿಎಂ ಬಂದು ಕ್ಷಮೆ ಕೇಳಬೇಕು. ಮಾನ, ಮಾರ್ಯಾದೆ ಇದ್ದರೆ ಸಚಿವರು ರಾಜೀನಾಮೆ ಕೊಟ್ಟು ಹೋಗಬೇಕು ಎಂದು ತಿವಿದಿದ್ದಾರೆ. ವಿಧಾನಸಭೆ ಇತಿಹಾಸದಲ್ಲಿಯೇ ಸರ್ಕಾರದ ಧೋರಣೆ ಖಂಡಿಸಿ ಸ್ಪೀಕರ್ ಪೀಠ ಬಿಟ್ಟು ಹೊರ ಹೋಗಿದ್ದಾರೆ. ಇದು ಆಘಾತಕಾರಿಯಾಗಿದ್ದು, ಸಿಎಂ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. 40 ದಿನದ ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರವೇ ಬರುವುದಿಲ್ಲ. ಸ್ಪೀಕರ್ ತೆಗೆದುಕೊಂಡಿರುವ ನಿರ್ಣಯಕ್ಕೆ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕ ಸುನಿಲ್​​ ಕುಮಾರ್​​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.

ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ, ಭಾರತದ ಹಡಗುಗಳಿಗೆ ಇರಾನ್ ಒಪ್ಪಿಗೆ ಕೊಟ್ಟಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಜೈಶಂಕರ್ ಅವರು ಈ ಸ್ಪಷ್ಟನೆ ಕೊಟ್ಟಿದ್ದು, ಇರಾನ್ ಮಾಡಿರುವ ಸಹಾಯಕ್ಕೆ ಬದಲಾಗಿ ಭಾರತ ಮತ್ತೇನೂ ನೆರವು ಕೊಟ್ಟಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

‘ಇದು ವಿನಿಮಯದ ವಿಚಾರ ಅಲ್ಲ. ಭಾರತ ಮತ್ತು ಇರಾನ್ ನಡುವೆ ಸಂಬಂಧ ಮೊದಲಿಂದಲೂ ಇದೆ. ಇದರ ಆಧಾರದ ಮೇಲೆ ನಾನು ಮಾತುಕತೆ ನಡೆಸುತ್ತಿದ್ದೇನೆ. ಈ ಮಾತುಕತೆಯು ಕೆಲ ಫಲ ಕೊಟ್ಟಿದೆ. ಈ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಮಾತುಕತೆಯಿಂದ ಫಲ ದೊರಕುತ್ತಿದೆ ಎಂದಾದರೆ ಸಹಜವಾಗಿ ನಾನು ಅದೇ ನಿಟ್ಟಿನಲ್ಲಿ ಮುಂದುವರಿಯುತ್ತೆನೆ’ ಎಂದು ಸಚಿವರು ತಿಳಿಸಿದ್ದಾರೆ.

‘ಇವು ಇನ್ನೂ ಆರಂಭಿಕ ದಿನಗಳಷ್ಟೇ. ನಮ್ಮ ಇನ್ನೂ ಹಲವು ಹಡಗುಗಳು ಅಲ್ಲಿವೆ. ಈಗ ಎರಡು ಹಡಗುಗಳನ್ನು ಬಿಟ್ಟಿರುವುದು ಸ್ವಾಗತಾರ್ಹ ಬೆಳವಣಿಗೆ. ಹಾಗೆಯೇ, ಮಾತುಕತೆ ಮುಂದುವರಿಯುತ್ತಿರುವುದೂ ಹೌದು’ ಎಂದು ಜೈಶಂಕರ್ ವಿವರಿಸಿದ್ದಾರೆ.

ಇದನ್ನೂ ಓದಿ: ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಇರಾನ್ ಅಧ್ಯಕ್ಷ ಮಸೂದ್ ಪೆಜೆಶಕಿಯನ್ ಜೊತೆ ಮಾತನಾಡಿ, ಇಂಧನ ಮತ್ತು ಸರಕುಗಳ ಸಾಗಣೆ ವಿಚಾರವನ್ನು ಚರ್ಚಿಸಿದ್ದಾರೆ. ಅದೇ ವೇಳೆ, ಇರಾನ್​ನಿಂದ ತಡೆ ಎದುರಿಸುತ್ತಿರುವ ಹಾರ್ಮುಜ್ ಜಲಸಂಧಿ ಮೂಲಕ ಎಲ್​ಪಿಜಿ ಹೊತ್ತ ಎರಡು ಭಾರತೀಯ ಟ್ಯಾಂಕರ್​ಗಳು ಅರೇಬಿಯನ್ ಸಮುದ್ರ ಪ್ರವೇಶಿಸಿ ಭಾರತವನ್ನು ತಲುಪುತ್ತಿವೆ ಎನ್ನಲಾಗುತ್ತಿದೆ. ಶಿವಾಲಿಕ್ ಮತ್ತು ನಂದಾದೇವಿ ಹೆಸರಿನ ಈ ಹಡಗುಗಳು ಇನ್ನೆರಡು ದಿನದೊಳಗೆ ಮುಂದ್ರಾ ಮತ್ತು ಕಾಂಡ್ಲಾ ಪೋರ್ಟ್​ಗಳಿಗೆ ಬರುವ ನಿರೀಕ್ಷೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ

Source link

ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಇವು ಕ್ಯಾನ್ಸರ್​​ ತವರು ಮನೆ ಎಂದ ಡಾಕ್ಟರ್ಸ್​​!

ಬೆಂಗಳೂರು, ಮಾರ್ಚ್​​ 16: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದ ಜನರೀಗ ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವೈದ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕ್ಯಾನ್ಸರ್, ಟಿಬಿ, ಅಸ್ತಮಾ ಸೇರಿದಂತೆ ನೂರಾರು ರೋಗಗಳಿಗೆ ಇವೇ ತವರುಮನೆ ಎಂದು ಎಚ್ಚರಿಸಿದ್ದಾರೆ. ಸೌದೆಯಿಂದ ಹೊರ ಬರುವ ಹೊಗೆ ಲಂಗ್ಸ್ ಕ್ಯಾನ್ಸರ್, ಟಿಬಿ, ಬ್ರೆಸ್ಟ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಈ ಹೊಗೆಯಲ್ಲಿ ಬೆಂಜೀನ್ ಮತ್ತು ಪಾಲಿ ಸೈಕ್ಲಿಕ್ ಆರೋಮ್ಯಾಟಿಕ್ ಹೈಡ್ರೋಕಾರ್ಬನ್​​ಗಳು ಹೊರ ಹೊಮ್ಮುತ್ತವೆ ಎಂದು ತಿಳಿಸಿದ್ದಾರೆ. ಆದರೆ ಇವು ಅಲ್ಪ ಕಾಲದಲ್ಲಿ ದೊಡ್ಡ ಪರಿಣಾಮ ಬೀರಲ್ಲ. ಬದಲಾಗಿ ದೀರ್ಘ ಕಾಲದಲ್ಲಿ ಸೌದೆ ಒಲೆಗಳ ಬಳಕೆ ಮಾರಕ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ಅಡುಗೆ ಮಾಡಲು ಸಾಧ್ಯವಾದಷ್ಟು ಒಣ ಸೌದೆ ಬಳಸಿ, ಹಸಿ ಸೌದೆಗಳ ಬಳಕೆ ಬೇಡ. ಇದರಿಂದ ಸಂಭಾವ್ಯ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ.

ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ. ‘ಡ್ಯಾನ್ಸಿಂಗ್ ಮಿಸೈಲ್’ ಎಂದರೇನು? ಡ್ಯಾನ್ಸಿಂಗ್ ಮಿಸೈಲ್ ಸೆಜ್ಜಿಲ್ ಇದರ ವಿಶೇಷ ಏನು ಎಂಬ ಮಾಹಿತಿ ಇಲ್ಲಿದೆ.

ಸೆಜ್ಜಿಲ್ ಕ್ಷಿಪಣಿ ಎಂದರೇನು?

ಸೆಜ್ಜಿಲ್-2 ಇರಾನ್​ನಲ್ಲೇ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿರುವ ಎರಡು ಹಂತಗಳ ಘನ ಇಂಧನ (Solid Fuel) ಬಳಸುವ ಮಧ್ಯಮ ದೂರದ ಬಾಲಿಸ್ಟಿಕ್ ಕ್ಷಿಪಣಿಯಾಗಿದೆ. ಈ ಕ್ಷಿಪಣಿಯ ಅಂದಾಜು ವ್ಯಾಪ್ತಿ ಸುಮಾರು 2,000 ಕಿಲೋಮೀಟರ್ ಆಗಿದ್ದು, ಸುಮಾರು 700 ಕಿಲೋಗ್ರಾಂ ತೂಕದ ಪೇಲೋಡ್ ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.

ಡ್ಯಾನ್ಸಿಂಗ್ ಮಿಸೈಲ್ ಹೆಸರು ಯಾಕೆ ಬಂತು?

ಈ ಕ್ಷಿಪಣಿಯು ಗುರಿಯತ್ತ ಸಾಗುತ್ತಿರುವಾಗ ಚುರುಕಾಗಿ ದಿಕ್ಕು ಬದಲಾಯಿಸುವ ಸಾಮರ್ಥ್ಯ ಹೊಂದಿದೆ. ಅಲ್ಲದೆ, ಶತ್ರುಗಳ ರೇಡಾರ್ ಕಣ್ತಪ್ಪಿಸಿ ನೆಗೆಯಬಲ್ಲದ್ದಾಗಿದೆ. ಛಂಗನೆ ದಿಕ್ಕು ಬದಲಾಯಿಸಿ ರೇಡಾರ್​ಗಳ ಕಣ್ತಪ್ಪಿಸಿ ನೆಗೆಯಬಲ್ಲದ್ದಾದ್ದರಿಂದ ಇದಕ್ಕೆ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಬಂದಿದೆ.

ಅಮೆರಿಕದ ಸೆಂಟರ್ ಫಾರ್ ಸ್ಟ್ರಾಟಜಿಕ್ ಆ್ಯಂಡ್ ಇಂಟರ್​​ನ್ಯಾಷನಲ್ ಸ್ಟಡೀಸ್(CSIS) ಮಾಹಿತಿಯ ಪ್ರಕಾರ, ಸೆಜ್ಜಿಲ್ ಕ್ಷಿಪಣಿ ಸುಮಾರು 18 ಮೀಟರ್ ಉದ್ದ, 1.25 ಮೀಟರ್ ವ್ಯಾಸ ಹೊಂದಿದ್ದು, ಸುಮಾರು 23,600 ಕಿಲೋಗ್ರಾಂ ತೂಕವಿದೆ.

ಘನ ಇಂಧನ ಬಳಸುವ ಕ್ಷಿಪಣಿಯಾದ್ದರಿಂದ ಹಳೆಯ ಶಹಾಬ್ ಮಿಸೈಲ್​ನಂಥ ದ್ರವ ಇಂಧನ ಕ್ಷಿಪಣಿಗಳಿಗಿಂತ ಇದು ಬೇಗ ಸಿದ್ಧಪಡಿಸಿ ಉಡಾಯಿಸಲು ಸಾಧ್ಯವಾಗುತ್ತದೆ.

ಸೆಜ್ಜಿಲ್ ಕ್ಷಿಪಣಿಯ ವಿನ್ಯಾಸ ಕಾರ್ಯ 1990ರ ದಶಕದ ಆರಂಭದಲ್ಲೇ ಪ್ರಾರಂಭಗೊಂಡಿತ್ತು. ಮೊದಲ ಪರೀಕ್ಷಾ ಉಡಾವಣೆ 2008ರಲ್ಲಿ ನಡೆದಿದ್ದು, ಆಗ ಕ್ಷಿಪಣಿ ಸುಮಾರು 800 ಕಿಲೋಮೀಟರ್ ದೂರದ ಗುರಿ ತಲುಪಿತ್ತು. ನಂತರ 2009ರ ಮೇ ತಿಂಗಳಲ್ಲಿ ಎರಡನೇ ಪರೀಕ್ಷೆ ನಡೆಸಿ ಗೈಡೆನ್ಸ್ ಆ್ಯಂಡ್ ನ್ಯಾವಿಗೇಶನ್ ವ್ಯವಸ್ಥೆಯನ್ನು ಸುಧಾರಿಸಲಾಯಿತು. 2009ರಿಂದ ಬಳಿಕ ಇನ್ನೂ ನಾಲ್ಕು ಪರೀಕ್ಷಾರ್ಥ ಉಡಾವಣೆಗಳು ನಡೆದಿದ್ದು, ಆರನೇ ಪರೀಕ್ಷೆಯಲ್ಲಿ ಕ್ಷಿಪಣಿ ಸುಮಾರು 1,900 ಕಿಲೋಮೀಟರ್ ದೂರ ಇಂಡಿಯನ್ ಓಷನ್ ಕಡೆಗೆ ಪ್ರಯಾಣಿಸಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ರಕ್ಷಣೆ: ಭಾರತದ ನೆರವಿಗೆ ಅಮೆರಿಕ ಯಾಚನೆ?

ಮಧ್ಯಪ್ರಾಚ್ಯದಲ್ಲಿ ಯುದ್ಧೋನ್ಮಾದ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸೆಜ್ಜಿಲ್ ಕ್ಷಿಪಣಿಯ ಬಳಕೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ಯಾವುದೇ ಸೆಲೆಬ್ರಿಟಿ ಹೊರಗೆ ಕಾಣಿಸಿಕೊಂಡರೆ ಸಾಕು, ಅವರನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗಾಗದಂತೆ ತಡೆಯಲು ಭದ್ರತಾ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗೋದಿಲ್ಲ. ಈಗ ಕಾಜೋಲ್ ಅವರಿಗೆ ಹಾಗೆಯೇ ಆಗಿದೆ. ಅವರು ಬಾಲಿವುಡ್ ನಟಿ. ಅಜಯ್ ದೇವಗನ್ ಪತ್ನಿ. ಅವರು ಬರುತ್ತಾರೆ ಎಂದರೆ ಸಾಕಷ್ಟು ಭದ್ರತೆ ನೀಡಲಾಗುತ್ತದೆ. ಆದಾಗ್ಯೂ ಅಭಿಮಾನಿಗಳು ಮುತ್ತಿಕೊಂಡರು. ಕೊನೆಗೆ ಅವರು ಕಷ್ಟಪಟ್ಟು ಕಾರನ್ನು ಏರಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link