Headlines

ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ – Kannada News | South Africa, gunmen kills several people near Johannesburg

ಜೋಹಾನ್ಸ್​ಬರ್ಗ್, ಡಿಸೆಂಬರ್ 21: ಜಗತ್ತಿನ ವಿವಿಧೆಡೆ ಭಯೋತ್ಪಾದನೆ ಮತ್ತು ಅಪರಾಧ ದಾಳಿಗಳು ಹೆಚ್ಚುತ್ತಲೇ ಇವೆ. ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್​ಬರ್ಗ್​ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್​ಡನ್ ಟೌನ್​ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ (gunmen attack) ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್…

Read More

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು

ಬೆಂಗಳೂರು, (ಡಿಸೆಂಬರ್ 21) : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್‌ ಹಾಗೂ ಶೀಟ್‌ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಹೌದು.. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ…

Read More

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು – Kannada News | Foods to eat to relieve stress

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ ಪದ್ಧತಿಗಳು ನಮ್ಮನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸುತ್ತವೆ. ಈ ಒತ್ತಡದ ಕಾರಣದಿಂದ ಖುಷಿ ಖುಷಿಯಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ ಈ ಅತಿಯಾದ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು, ನೆಮ್ಮದಿಯ ಜೀವನ ನಡೆಸಲು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ಸೇವನೆ ಮಾಡುವ…

Read More

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ? – Kannada News | Did Sudeep warns Darshan fans in Hubli program

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದರು. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು…

Read More

ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್ ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ…

Read More

ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಅಮೋಘ ಮುನ್ನಡೆ – Kannada News | BJP led Mahayuti win big in Maharashtra local bodies elections

ಮುಂಬೈ, ಡಿಸೆಂಬರ್ 21: ಮಹಾರಾಷ್ಟ್ರದ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಪಡೆದಿದೆ. ಒಟ್ಟು 246 ನಗರ ಪಾಲಿಕೆ ಹಾಗೂ 42 ನಗರ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ (Maharashtra Urban Local Bodies Elections) ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿವೆ. ಮಹಾಯುತಿ ಮೈತ್ರಿಕೂಟ (Mahayuti) 214 ಸ್ಥಳೀಯ ಸಂಸ್ಥೆಗಳಲ್ಲಿ ಮುನ್ನಡೆ ಹೊಂದಿದೆ. ವಿಪಕ್ಷಗಳ ಕೂಟವಾದ ಮಹಾ ವಿಕಾಸ್ ಆಘಾಡಿ (MVA) ಮುನ್ನಡೆ ಹೊಂದಿರುವುದು ಕೇವಲ…

Read More

ಆನೇಕಲ್ ಸರಣಿ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ – Kannada News | Anekal Container Truck Serial Accident: Drunk Driver Hits more than 20 Vehicles

ಆನೇಕಲ್, ಡಿಸೆಂಬರ್ 21: ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರಿಂದ 14 ಕಿಮೀ ತಪ್ಪಿಸಿಕೊಂಡು ಹೋದ ಲಾರಿ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದಿದ್ದಾನೆ. ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್​​ನ್ಯೂಸ್​​​: ಮುಂದಿನ ವಾರ ಹಣ ಬಿಡುಗಡೆ ಎಂದ ಸಚಿವೆ ಹೆಬ್ಬಾಳ್ಕರ್ – Kannada News | Good News for Gruha Lakshmi Scheme Beneficiaries: Minister Hebbalkar Says Funds to Be Released Next Week

ಬೆಳಗಾವಿ, ಡಿಸೆಂಬರ್​ 21: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್​ನ್ಯೂಸ್​​ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ…

Read More

Vande Bharat Pilot: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪೈಲಟ್‌ ಸಂಬಳ ಎಷ್ಟು? ಆಯ್ಕೆ ಪ್ರಕ್ರಿಯೆ ಮತ್ತು ಜವಾಬ್ದಾರಿ ತಿಳಿಯಿರಿ – Kannada News | Vande Bharat Pilot Salary: How to Become a High Speed Train Driver

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಈಗ ದೇಶಾದ್ಯಂತ ಓಡುತ್ತಿವೆ. ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುವ ಈ ಹೈ-ಸ್ಪೀಡ್ ರೈಲುಗಳನ್ನು ಓಡಿಸುವುದು ಸಾಮಾನ್ಯ ಕೆಲಸವಲ್ಲ. ರೈಲ್ವೆ ಈ ಜವಾಬ್ದಾರಿಗಳನ್ನು ಹೆಚ್ಚು ಕೌಶಲ್ಯಪೂರ್ಣ ಮತ್ತು ಅನುಭವಿ ಪೈಲಟ್‌ಗಳಿಗೆ ಮಾತ್ರ ವಹಿಸುತ್ತದೆ. ಆದ್ದರಿಂದ ವಂದೇ ಭಾರತ್ ಪೈಲಟ್‌ನ ಸಂಬಳ ಎಷ್ಟು? ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ವೃತ್ತಿಜೀವನ ಆರಂಭ: ಒಬ್ಬ ವ್ಯಕ್ತಿಯು ನೇರವಾಗಿ ವಂದೇ ಭಾರತ್ ರೈಲಿಗೆ ಪೈಲಟ್ ಆಗಲು ಸಾಧ್ಯವಿಲ್ಲ. ಇದಕ್ಕಾಗಿ ಒಂದು ವ್ಯವಸ್ಥಿತ…

Read More

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ…

Read More