Category Archives: Blog

Your blog category

Chanakya Niti: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಅನುಸರಿಸಿ

Chanakya Niti: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಅನುಸರಿಸಿ

ಜೀವನದಲ್ಲಿ (life) ಹ್ಯಾಪಿ ಆಗಿರ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಆದರೆ ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರು ಒತ್ತಡದಲ್ಲಿಯೇ ಜೀವನವನ್ನು ನಡೆಸುತ್ತಿದ್ದಾರೆ. ಹೌದು ಹೆಚ್ಚಿನವರಿಗೆ ಇಂದು ಸಂತೋಷವನ್ನು ಕಂಡುಕೊಳ್ಳುವುದೇ ಬಹುದೊಡ್ಡ ಸವಾಲಾಗಿದೆ. ನೀವು ಕೂಡ ಇದೇ ರೀತಿ ಜೀವನದಲ್ಲಿ ಶಾಂತಿ ಮತ್ತು ಸಂತೋಷವನ್ನು ಬಯಸುತ್ತಿದ್ದೀರಾ? ಹಾಗಿದ್ರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ತಪ್ಪದೆ ಪಾಲಿಸಿ. ಇದರಿಂದ ನೀವು ಖಂಡಿತವಾಗಿ ಜೀವನದಲ್ಲಿ ಖುಷಿ ಖುಷಿಯಾಗಿರಬಹುದು.

ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಗೊತ್ತಾ?

ಹಿಂದಿನ ಘಟನೆಗಳ ಬಗ್ಗೆ ವಿಷಾದಿಸಬೇಡಿ: ಭೂತಕಾಲವನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ  ಅನೇಕ ಜನರು ತಮ್ಮ ಹಿಂದಿನ ತಪ್ಪುಗಳು ಅಥವಾ ಕೆಟ್ಟ ಸಮಯಗಳ ಬಗ್ಗೆ ಯೋಚಿಸಿ, ತಮ್ಮ ವರ್ತಮಾನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.  ಹಾಗಾಗಿ ಈ ಅಭ್ಯಾಸವನ್ನು ತ್ಯಜಿಸಬೇಕು. ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ಆಗಿ ಹೋದಂತಹ ಘಟನೆಗಳನ್ನು ಮರೆತು ವರ್ತಮಾನದಲ್ಲಿ ಬದುಕಲು ಕಲಿಯುವುದು ತುಂಬಾ ಮುಖ್ಯ ಎಂದಿದ್ದಾರೆ ಚಾಣಕ್ಯ.

ನಿಮ್ಮ ದೌರ್ಬಲ್ಯವನ್ನು ಯಾರಿಗೂ ಹೇಳಬೇಡಿ: ಜೀವನದಲ್ಲಿನ ನೆಮ್ಮದದಿ ಹಾಳಾಗಲು ಪ್ರಮುಖ ಕಾರಣವೆಂದರೆ ನಮ್ಮ ವೈಯಕ್ತಿಕ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದು. ಚಾಣಕ್ಯರ ಪ್ರಕಾರ, ನಮ್ಮ ದೌರ್ಬಲ್ಯಗಳನ್ನು ಯಾರಿಗೂ ಬಹಿರಂಗಪಡಿಸಬಾರದು ಏಕೆಂದರೆ ಜನರು ಅವುಗಳನ್ನು ಅಪಹಾಸ್ಯ ಮಾಡಬಹುದು ಅಥವಾ ಅವುಗಳ ಲಾಭ ಪಡೆಯಬಹುದು. ನಿಮ್ಮ ರಹಸ್ಯಗಳನ್ನು ಯಾರಿಗೂ ಹೇಳದೆ ನಿಮ್ಮಲ್ಲಿಯೇ ಇಟ್ಟುಕೊಳ್ಳುವುದರಿಂದ ಅನಗತ್ಯ ಮಾನಸಿಕ ಒತ್ತಡವನ್ನು ತಪ್ಪಿಸಬಹುದು.

ಇದನ್ನೂ ಓದಿ: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಮಾತುಗಳನ್ನು ಪಾಲಿಸಿ

ಫಲಿತಾಂಶಗಳ ಬಗ್ಗೆ ಚಿಂತಿಸದೆ ಕೆಲಸ ಮಾಡಿ: ನಾವು ಕೆಲಸದ ಬಗ್ಗೆ ಯೋಚಿಸುವುದಕ್ಕಿಂತ ಫಲಿತಾಂಶಗಳ ಬಗ್ಗೆ ಹೆಚ್ಚು ಯೋಚಿಸಿದಾಗ ಒತ್ತಡ ಉಂಟಾಗುತ್ತದೆ. ಇದರಿಂದ ಮನಸ್ಸಿನ ನೆಮ್ಮದಿಯೇ ಹಾಳಾಗುತ್ತದೆ. ಹಾಗಾಗಿ ಕಠಿಣ ಪರಿಶ್ರಮದ ಮೇಲೆ ಮಾತ್ರ ಗಮನಹರಿಸಿ. ಫಲಿತಾಂಶದ ಬಗ್ಗೆ ಚಿಂತಿಸುವುದನ್ನು  ಬಿಟ್ಟಾಗ, ನಿಮ್ಮ ಮನಸ್ಸು ಸ್ವಯಂಚಾಲಿತವಾಗಿ ಶಾಂತವಾಗುತ್ತದೆ ಮತ್ತು ನೀವು ಕೆಲಸ ಮಾಡಲು ಹೆಚ್ಚು ಒಲವು ತೋರುತ್ತೀರಿ, ಸಂತೋಷವಾಗಿಯೂ ಇರುತ್ತೀರಿ.

ದುರಾಸೆ ಮತ್ತು ನಿರೀಕ್ಷೆಗಳಿಂದ ದೂರವಿರಿ: ನಿರೀಕ್ಷೆಯೇ ಮಾನವನ ಅತೃಪ್ತಿ ಮತ್ತು ನೋವಿಗೆ  ದೊಡ್ಡ ಕಾರಣ ಎನ್ನುತ್ತಾರೆ ಚಾಣಕ್ಯ.  ನಾವು ಇತರರಿಂದ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಾಗ ಮತ್ತು ಅವುಗಳನ್ನು ಅವರು ಪೂರೈಸದಿದ್ದಾಗ, ನಮ್ಮ ಮನಸ್ಸಿಗೆ ತುಂಬಾನೇ ನೋವಾಗುತ್ತದೆ.  ಇದರೊಂದಿಗೆ ದುರಾಸೆಯೂ ಸಹ ನಮ್ಮ ಸಂತೋಷವನ್ನು ಕಿತ್ತುಕೊಳ್ಳುತ್ತದೆ.  ಹಾಗಾಗಿ ನಿಮ್ಮಲ್ಲಿರುವದರಲ್ಲಿ ಸಂತೋಷವಾಗಿರಲು ಕಲಿಯಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾರ್ಚ್ 17ರೊಳಗೆ ಇರಾನ್‌ನಿಂದ 92,700 ಮೆಟ್ರಿಕ್ ಟನ್ ಎಲ್‌ಪಿಜಿ ಬರಲಿದೆ; ಕೇಂದ್ರ ಸರ್ಕಾರ ಭರವಸೆ

ನವದೆಹಲಿ, ಮಾರ್ಚ್ 14: ದೇಶದಲ್ಲಿ ಎಲ್​ಪಿಜಿ ಸಂಗ್ರಹದಲ್ಲಿ ಯಾವುದೇ ಕೊರತೆಯಿಲ್ಲ. ಪಶ್ಚಿಮ ಏಷ್ಯಾದ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ (LPG Shortage) ಸಾಕಷ್ಟು ಪೂರೈಕೆ ಭಾರತದಲ್ಲಿ ಲಭ್ಯವಿದೆ. ಜನರು ವಿನಾಕಾರಣ ಆತಂಕಕ್ಕೊಳಗಾಗಿ ಬುಕಿಂಗ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತವು ವಿಶ್ವದ ಎರಡನೇ ಅತಿದೊಡ್ಡ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಖರೀದಿದಾರ ರಾಷ್ಟ್ರವಾಗಿದ್ದು, ಇದರಲ್ಲಿ ಶೇ. 90ರಷ್ಟು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಬರುತ್ತದೆ.

ಪರ್ಷಿಯನ್ ಕೊಲ್ಲಿಯಲ್ಲಿ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಭಾರತೀಯ ಧ್ವಜ ಹೊಂದಿರುವ ಒಟ್ಟು 24 ಹಡಗುಗಳು ಇದ್ದವು. ಈ ಪೈಕಿ ‘ಶಿವಾಲಿಕ್’, ‘ನಂದಾ ದೇವಿ’ ಹಡಗುಗಳು LPG ಸಾಗಿಸುತ್ತಿವೆ. ಇವು ನಿನ್ನೆ ತಡರಾತ್ರಿ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿವೆ. ಈ ಹಡಗುಗಳಲ್ಲಿ ಸುಮಾರು 92,700 ಮೆಟ್ರಿಕ್ ಟನ್ LPG ಸಾಗಿಸಲಾಗುತ್ತಿದೆ. ಇವು ಕ್ರಮವಾಗಿ ಗುಜರಾತ್‌ನ ಮುಂದ್ರಾ, ಕಾಂಡ್ಲಾ ಬಂದರು ತಲುಪಲಿವೆ. ಮಾರ್ಚ್ 16 ಮತ್ತು ಮಾರ್ಚ್ 17ರಂದು ಇವು ಭಾರತದ ಬಂದರು ತಲುಪುವ ನಿರೀಕ್ಷೆಯಿದೆ. ಪರ್ಷಿಯನ್ ಕೊಲ್ಲಿಯಲ್ಲಿ ಇನ್ನೂ ಭಾರತದ 22 ಹಡಗುಗಳು ಇವೆ. ಇವುಗಳಲ್ಲಿ 611 ಭಾರತೀಯ ನಾವಿಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಹಡಗು ಸಾಗಣೆ ಸಚಿವಾಲಯದ ಅಧಿಕಾರಿ ರಾಜೇಶ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ ಕೂಡ ಮಾತನಾಡಿದ್ದು, “ಭಾರತದಲ್ಲಿ ಸಾಕಷ್ಟು ಪ್ರಮಾಣದ ಕಚ್ಚಾ ತೈಲ ಪೂರೈಕೆ ಇದೆ. ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಯಾವುದೇ ಇಂಧನದ ಕೊರತೆ ಕಂಡುಬಂದಿಲ್ಲ. ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಿದೆ” ಎಂದು ಹೇಳಿದ್ದಾರೆ. ಭಾರತವು ತನ್ನ ಅಗತ್ಯಗಳನ್ನು ಪೂರೈಸಲು ದೇಶೀಯವಾಗಿ ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಉತ್ಪಾದಿಸುತ್ತದೆ ಎಂದು ತಿಳಿಸಿದ್ದಾರೆ.

“ದೇಶದಲ್ಲಿ ಸಾಕಷ್ಟು ಕಚ್ಚಾ ತೈಲದ ಸ್ಟಾಕ್ ಇದೆ. ಜನರು ಆತಂಕದಿಂದ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುವುದನ್ನು ನಿಲ್ಲಿಸಿ. ಅಗತ್ಯವಿದ್ದಾಗ ಮಾತ್ರ ಬುಕ್ ಮಾಡಿ. ರಾಜ್ಯ ಸರ್ಕಾರಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ವಿಲೇವಾರಿ ಮಾಡಲಾಗಿದೆ. 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ವಿತರಣೆ ಪ್ರಾರಂಭವಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಬ್ಲಾಕ್ ಮಾರ್ಕೆಟ್ ಮತ್ತು ಸಂಗ್ರಹವನ್ನು ನಿಯಂತ್ರಿಸಲು ವಿವಿಧ ರಾಜ್ಯ ಸರ್ಕಾರಗಳು ಹಲವೆಡೆ ದಾಳಿ ಮತ್ತು ತಪಾಸಣೆಗಳನ್ನು ನಡೆಸುತ್ತಿವೆ. ನಾಗರಿಕರು ಆನ್​ಲೈನ್ ಮೂಲಕ ಸಿಲಿಂಡರ್‌ಗಳನ್ನು ಬುಕ್ ಮಾಡಬೇಕು. ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಷಾರ್..! ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್ ಬಳಸುವವರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು, (ಮಾರ್ಚ್ 14): ಇಸ್ರೆಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ (War) ಭಾರತದ (India) ಮೇಲೂ ಪರಿಣಾಮ ಬೀರುತ್ತಿದೆ. ಗಲ್ಫ್ ರಾಷ್ಟ್ರಗಳಿಂದ ಬರುತ್ತಿದ್ದ ವಸ್ತುಗಳು ನಿಂತುಕೊಂಡಿವೆ. ಅದರಲ್ಲೂ ಮುಖ್ಯವಾಗಿ ಕಚ್ಚಾ ತೈಲ ಆಮದು ಕಡಿಮೆಯಾಗಿದೆ. ಇದರಿಂದ ಗ್ಯಾಸ್ ಸಿಲಿಂಡರ್ (LPG cylinders) ಅಭಾವ ಉಂಟಾಗಿದೆ. ಕರ್ನಾಟದಲ್ಲೂ (Karnataka) ಸಹ ಕಮರ್ಷಿಯಲ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿರುವ ಬೆನ್ನಲ್ಲೇ ಹೋಟೆಲ್ ಉದ್ಯಮ ಕಂಗಾಲಾಗಿದೆ. ಇನ್ನು ಹೋಟೆಲ್, ರೆಸ್ಟೋರೆಂಟ್ ಉದ್ಯಮವನ್ನ ನಂಬಿಕೊಂಡ ವ್ಯಾಪಾರ ವಹಿವಾಟಿಗೂ ತೀವ್ರ ಹೊಡೆತ ಬಿದ್ದಿದ್ದು, ಕೆಲ ಕಡೆ ಗೃಹಬಳಕೆ ಸಿಲಿಂಡರ್​ ಬಳಸಲಾಗುತ್ತಿದ್ದು, ಈ ಸಂಬಂಧ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (karnataka food and civil supplies department) ದಾಳಿ ನಡೆಸಿ ಇದುವರೆಗೆ ಒಟ್ಟು 316 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದೆ.

ಈ ಸಂಬಂಧ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಂದು (ಮಾರ್ಚ್ 14) ಪ್ರಕಟಣೆ ಹೊರಡಿಸಿದ್ದು, ಕೆಲ ಕಡೆ ಗೃಹಬಳಕೆ ಸಿಲಿಂಡರ್​ ಬಳಸಲಾಗುತ್ತಿದ್ದು, ಈ ಸಂಬಂಧ ರಾಜ್ಯ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಒಟ್ಟು 316 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶ ಪಡೆದುಕೊಂಡಿದ್ದಾರೆ. ಇನ್ನು ಗೃಹಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ಗೃಹ ಬಳಕೆ ಸಿಲಿಂಡರ್​​ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಸಂಬಂಧ ಬೆಂಗಳೂರಿನ ಪೀಣ್ಯದಲ್ಲಿ 45, ಚಿಕ್ಕಜಾಲದಲ್ಲಿ 209, ಶಿವಮೊಗ್ಗದಲ್ಲಿ 3, ಯಾದಗಿರಿ-46, ದಾವಣಗರೆಯಲ್ಲಿ 13 ಸಿಲಿಂಡರ್​​ಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ. ಜೊತೆಗೆ ಅವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಕೆಜಿಎಫ್​​ನಲ್ಲಿ ಅಕ್ರಮ ರಿಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜೆನ್ಸಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಣಿಜ್ಯ ಬಳಕೆಯ ಸಿಲಿಂಡರ್​​ಗಳ ಒಟ್ಟು ಶೇ.20ರಷ್ಟು ಸಿಲಿಂಡರ್​ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟೀನ್​, ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿ, ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್​ಗಳನ್ನು ವಿತರಿಸಲು ಆಹಾರ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ರಾಜ್ಯದೆಲ್ಲೆಡೆ 14.2 kgಯ ಗೃಹ ಬಳಕೆಯ ಒಟ್ಟು 3,86,363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6,371 ಸಿಲಿಂಡರ್​ಗಳನ್ನ ವಿತರಿಸಲಾಗಿದೆ. ಗೃಹ ಬಳಕೆಯ ಸಿಲಿಂಡರ್​ಗಳ ಉಪಯೋಗಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಆಹಾರ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಗ್ಯಾಸ್​ ಬುಕ್ಕಿಂಗ್ ಬಗ್ಗೆ ಇರಲಿ ಎಚ್ಚರ

ಗ್ಯಾಸ್ ಸಿಲಿಂಡರ್​ಗಳ ಕೊರತೆಯನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ಕಿರಾತಕರು, ಗ್ಯಾಸ್ ಏಜೆನ್ಸಿಗಳ ಸೋಗಿನಲ್ಲಿ ಲಿಂಕ್​​ಗಳನ್ನು ಕಳುಹಿಸಿ ವಂಚಿಸುವ ಸಾಧ್ಯತೆಯಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ಆತಂಕಗೊಳ್ಳುತ್ತಿರುವ ನಾಗರಿಕರೂ ಗೃಹ ಬಳಕೆಯ ಸಿಲಿಂಡರ್​ಗಳಿಗಾಗಿ ಗ್ಯಾಸ್ ಬುಕ್ ಮಾಡುತ್ತಿದ್ಧಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ಖದೀಮರು, ಗ್ಯಾಸ್ ಏಜೆನ್ಸಿಗಳ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸುವ ಸಾಧ್ಯತೆಯಿದೆ. ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇರಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತೊರೆದ ಅನುಭವಿ

Source link

‘ಗಬ್ಬರ್ ಸಿಂಗ್’ ನೆನಪಿಸುತ್ತಿದೆ ‘ಉಸ್ತಾದ್ ಭಗತ್ ಸಿಂಗ್’: ಟ್ರೈಲರ್ ಬಿಡುಗಡೆ

ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ದೊಡ್ಡ ಹಿಟ್ ನೀಡಿದ ‘ಗಬ್ಬರ್ ಸಿಂಗ್’ ಸಿನಿಮಾದ ಹಾಸ್ಯಮಯ ಪೊಲೀಸ್ ಪಾತ್ರಧಾರಿ ಪಾತ್ರವೇ ‘ಉಸ್ತಾದ್ ಭಗತ್ ಸಿಂಗ್’ನಲ್ಲಿಯೂ ಇರಲಿದೆ ಎಂಬುದನ್ನು ಟ್ರೈಲರ್ ಸ್ಪಷ್ಟವಾಗಿ ಹೇಳುತ್ತಿದೆ.

ಪವನ್ ಕಲ್ಯಾಣ್ ಮತ್ತು ಹರೀಶ್ ಶಂಕರ್ ‘ಗಬ್ಬರ್ ಸಿಂಗ್’ ಅಂತಹ ಬ್ಲಾಕ್‌ಬಸ್ಟರ್ ಸಿನಿಮಾ ನೀಡಿದ್ದ ಈ ಜೋಡಿ. ಇದೇ ಜೋಡಿ ಈಗ ‘ಉಸ್ತಾದ್ ಭಗತ್ ಸಿಂಗ್’ ಮೂಲಕ ಮತ್ತೆ ಒಂದಾಗಿದೆ, ಆದರೆ ಹಳೆಯ ಫಾರ್ಮುಲಾನಲ್ಲಿಯೇ ಹೊಸ ಸಿನಿಮಾ ಮಾಡಿದ್ದಾರೆ ಎಂಬುದು ದಟ್ಟವಾಗಿ ಟ್ರೈಲರ್​​ನಲ್ಲಿ ಕಾಣುತ್ತಿದೆ. ಆದರೆ ಇದೇ ರೀತಿಯ ಪವನ್ ಅನ್ನು ನೋಡಲು ಅಭಿಮಾನಿಗಳು ಸಹ ಕಾತರದಿಂದಿದ್ದರು, ಹಾಗಾಗಿ ಈಗ ಬಿಡುಗಡೆ ಆಗಿರುವ ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಆಕಾಶಕ್ಕೆ ಏರಿಸಿದೆ.

ಟ್ರೈಲರ್​​ನಲ್ಲಿ ಪವನ್ ಕಲ್ಯಾಣ್ ಮತ್ತೊಮ್ಮೆ ಖಾಕಿ ತೊಟ್ಟು ಅಬ್ಬರಿಸಿದ್ದಾರೆ. ಟ್ರೈಲರ್‌ನಲ್ಲಿ ಅವರ ಮ್ಯಾನರಿಸಂ, ಸ್ಟೈಲ್ ಮತ್ತು ಖಡಕ್ ಡೈಲಾಗ್‌ಗಳು ಅಭಿಮಾನಿಗಳಿಗೆ ಹಳೆಯ ‘ಗಬ್ಬರ್ ಸಿಂಗ್’ ನೆನಪಿಸುತ್ತಿವೆ. ಹರೀಶ್ ಶಂಕರ್ ಅವರು ಪವನ್ ಕಲ್ಯಾಣ್​​ಗೆ ಕೆಲವು ಪವರ್​​ಫುಲ್ ಡೈಲಾಗ್​​ಗಳನ್ನು ನೀಡಿದ್ದಾರೆ. ‘ಈ ಸಲ ಕೇವಲ ಮನರಂಜನೆ ಮಾತ್ರವಲ್ಲ, ಯುದ್ಧವೂ ಇರುತ್ತದೆ’ ಎಂಬ ಡೈಲಾಗ್‌ ವೈರಲ್ ಆಗುವುದು ಪಕ್ಕಾ. ಮಾತ್ರವಲ್ಲದೆ ಪವನ್ ಅವರು ಸಖತ್ ಕಾಮಿಡಿ ಸಹ ಮಾಡಿದಂತಿದ್ದಾರೆ. ಅದರಲ್ಲೂ ‘ಗಬ್ಬರ್ ಸಿಂಗ್’ ಶೈಲಿಯ ಕಾಮಿಡಿ ಪ್ರೇಕ್ಷಕರಿಗೆ ಪಕ್ಕಾ ಹಿಡಿಸಲಿದೆ.

ಇದನ್ನೂ ಓದಿ:ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ಸಿನಿಮಾಕ್ಕೆ ದೇವಿಶ್ರೀ ಪ್ರಸಾದ್ ಹಾಡುಗಳಿಗೆ ಸಂಗೀತ ನೀಡಿದ್ದರೆ ಹಿನ್ನೆಲೆ ಸಂಗೀತವನ್ನು ಎಸ್ ತಮನ್ ನೀಡಿದ್ದಾರೆ. ಸಿನಿಮಾದ ಟ್ರೈಲರ್​​ನಲ್ಲಿ ತೋರಿಸಿರುವಂತೆ ಪವನ್ ಕಲ್ಯಾಣ್ ಹಾಡೊಂದರಲ್ಲಿ ಸಖತ್ ಆಗಿ ಡ್ಯಾನ್ಸ್ ಸಹ ಮಾಡಿದ್ದಾರೆ. ಅಸಲಿಗೆ ಪವನ್ ಕಲ್ಯಾಣ್​​ಗೆ ಡ್ಯಾನ್ಸ್ ಎಂದರೆ ಆಗುವುದಿಲ್ಲ ಆದರೆ ಈ ಸಿನಿಮಾನಲ್ಲಿ ಅವರು ಡ್ಯಾನ್ಸ್ ಮಾಡಿದ್ದಾರೆ. ಸಿನಿಮಾದ ಟ್ರೈಲರ್​​ನಲ್ಲಿ ಪವನ್ ಕಲ್ಯಾಣ್ ಹೊರತಾಗಿ ಶ್ರೀಲೀಲಾ ಬಹಳ ಗಮನ ಸೆಳೆಯುತ್ತಿದ್ದಾರೆ. ಮುದ್ದು-ಮುದ್ದಿ ಯುವತಿಯಾಗಿ ಅವರು ಸಖತ್ ಆಗಿ ಕಾಣುತ್ತಿದ್ದಾರೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ತಮಿಳಿನ ಸೂಪರ್ ಹಿಟ್ ಚಿತ್ರ ‘ತೆರಿ’ಯ ರೀಮೇಕ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಖಾತ್ರಿ ಇಲ್ಲ. ಸಿನಿಮಾದ ಟ್ರೈಲರ್, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಳ್ಳೆಯ ಪ್ರಚಾರ ದೊರಕಿಸಿಕೊಡುವ ಸಂಭವ ಇದೆ. ಮಾರ್ಚ್ 19ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಿನ್ನದಾಸೆಗೆ ವೃದ್ಧೆಯನ್ನೇ ಹತ್ಯೆಗೈದು ಕಥೆ ಕಟ್ಟಿದ್ದ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅರೆಸ್ಟ್

ತುಮಕೂರು, ಮಾರ್ಚ್​​ 14: ಆ ಕೊಲೆ ಇಡಿ ಊರನ್ನೇ ಬೆಚ್ಚಿಬೀಳಿಸಿತ್ತು. ಒಂಟಿಯಾಗಿ ವಾಸವಿದ್ದ ವೃದ್ಧೆಯ ಸಾವು (kill) ಹತ್ತಾರು ಅನುಮಾನ ಹುಟ್ಟುಹಾಕಿತ್ತು. ಮನೆ ಬಾಗಿಲು ತೆಗೆದ ಪೊಲೀಸರಿಗೆ ಶವದ ಸುತ್ತ ಚೆಲ್ಲಿದ ಖಾರದ ಪುಡಿ, ಮದ್ಯದ ಬಾಟಲ್​​ಗಳು ದರೋಡೆಕೋರರ ಕಥೆ ಹೇಳುತ್ತಿದ್ದರೆ, ಹಂತಕ ಬಿಟ್ಟು ಹೋಗಿದ್ದ ಅದೊಂದು ಕ್ಲ್ಯೂ ಪರಿಚಯಸ್ಥನಿಂದಲೇ ನಡೆದ ಕೃತ್ಯ ಎನ್ನುವುದು ಬಯಲು ಮಾಡಿತ್ತು.

ನಡೆದದ್ದೇನು?

ಮಾರ್ಚ್​​ 10ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಒಂಟಿಯಾಗಿ ವಾಸವಿದ್ದ ನಾಗಮ್ಮ ಎಂಬ ವೃದ್ಧೆ ತನ್ನ ಮನೆಯೊಳಗೆ ಕೊಲೆಯಾಗಿದ್ದರು. ಬೀಗ ಹಾಕಿದ್ದ ಮನೆಯೊಳಗೆ ಉಸಿರುಗಟ್ಟಿಸಿ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾದ ಶವದ ಮೇಲೆ ಖಾರದ ಪುಡಿ ಎರಚಲಾಗಿತ್ತು. ಮನೆಯ ಹಿತ್ತಲಿನ ಜಾಗದಲ್ಲಿ ಮದ್ಯದ ಬಾಟಲ್ ಹಾಗೂ ಮೂರು ಗ್ಲಾಸ್​ಗಳನ್ನು ಇಡಲಾಗಿತ್ತು. ಜೊತೆ ಅಪರಿಚಿತರ ಚಪ್ಪಲಿ ಮನೆ ಬಾಗಿಲ ಮುಂದಿತ್ತು. ಇದನ್ನು ಕಂಡವರು ಯಾರೋ ಮೂವರು ದರೋಡೆಕೋರರು ಸಂಚು ಮಾಡಿ ಮನೆ ದೋಚುವಾಗ ವೃದ್ಧೆಯ ಹತ್ಯೆಗೈದ ಅನುಮಾನ ಮೂಡಿತ್ತು. ಇದೇ ಮಾದರಿ ಪ್ರಕರಣ ದಾಖಲಿಸಿಕೊಂಡ ಹುಲಿಯೂರುದುರ್ಗ ಪೊಲೀಸರು, ತನಿಖೆ ವೇಳೆ ಸಿಕ್ಕ ಅದೊಂದು ಕ್ಲ್ಯೂನಿಂದ ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ ಎಂಬುವುದನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ಆರೋಪಿಯನ್ನು ಬಂಧಿಸಿದ್ದಾರೆ.

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಹತ್ಯೆ

ಮುತ್ತುರಾಜ್​​​ ಬಂಧಿತ ಆರೋಪಿ. ಮುತ್ತುರಾಜ್ ಉಜ್ಜಿನಿ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ. ಜೊತೆಗೆ ಸ್ಥಳೀಯ ಸಂಘ ಸಂಸ್ಥೆಯೊಂದರಲ್ಲಿ ಪ್ರಸ್ತುತ ಸಕ್ರಿಯ ವ್ಯಕ್ತಿ. ರಾಜಕೀಯವಾಗಿ ಗುರುತಿಸಿಕೊಂಡಿರುವ ಈತನಿಗೆ ಜೂಜಾಟದ ಚಟ. ಈ ಚಟದಿಂದಲೇ ತನ್ನ ಬಳಿ ಇದ್ದ ಹಣ ಎಲ್ಲಾ ಕಳೆದುಕೊಂಡು ಬರೋಬ್ಬರಿ ಒಂದುವರೆ ಕೋಟಿ ರೂ ಸಾಲ ಮಾಡಿಕೊಂಡಿದ್ದಾನಂತೆ.

ಇದನ್ನೂ ಓದಿ: ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!

ಒಂದು ಕಾಲದಲ್ಲಿ ಉತ್ತಮ ರೇಷ್ಮೆ ಕೃಷಿಕನಾಗಿದ್ದ ಈತ. ನಂತರದಲ್ಲಿ ಕುಡಿತಕ್ಕೆ ದಾಸನಾಗಿದ್ದ. ಈ ಹಿಂದೆ ಇದೇ ರೀತಿ ನಾಗಮ್ಮ ಬಳಿ 50 ಸಾವಿರ ರೂ ಸಾಲ ಪಡೆದಿದ್ದ. ಈತ ಒಂದುವರೆ ವರ್ಷ ಕಳೆದರೂ ಹಣ ವಾಪಾಸ್ ನೀಡಿರಲಿಲ್ಲ. ಇದೇ ವಿಚಾರಕ್ಕೆ ಒಮ್ಮೆ ಕ್ಲಾಸ್ ತೆಗೆದುಕೊಂಡಿದ್ದ ನಾಗಮ್ಮ ಬಡ್ಡಿ ಬಿಟ್ಟು ಬಾಕಿ ಇರುವ ಅಸಲನ್ನೇ ಕೊಟ್ಟು ಬಿಡು ಎಂದಿದ್ದರು. ಆದರೆ ಹಣ ಕೊಡಲು ಪರದಾಡಿದ ಈತ ಆಕೆಯ ಮೈಮೇಲಿದ್ದ ಚಿನ್ನದ ಆಭರಣದ ಮೇಲೆ ಕಣ್ಣು ಹಾಕಿದ್ದ. ಅದರಂತೆ ಒಂದು ವಾರ ಯೋಚಿಸಿ ಸಿನಿಮಾ ಮಾದರಿ ಪ್ಲ್ಯಾನ್ ಮಾಡಿ ವೃದ್ಧೆ ಹತ್ಯೆಗೈದಿದ್ದ.

ತಾನೇ ವೃದ್ಧೆಗೆ ಕರೆ ಮಾಡಿ ಬಾಕಿ ಹಣ ಕೊಡುವುದಾಗಿ ಹೇಳಿ ಸೋಮವಾರ ಸಂಜೆ 7 ಗಂಟೆಗೆ ಬಂದಿದ್ದ ಮುತ್ತುರಾಜ್, ಮನೆ ಬಳಿ ಯಾರು ಇಲ್ಲದನ್ನು ಗಮನಿಸಿದ್ದ. ನಂತರ ಮನೆ ಒಳಗೆ ಬಂದು ಮಾತು ಆರಂಭಿಸಿದ ಎರಡು ನಿಮಿಷದಲ್ಲೇ ಆಕೆ ಮೇಲೆ ಹಲ್ಲೆ ಮಾಡಿ ಬಳಿಕ ಸೀರೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದಿದ್ದ. ನಂತರ ದರೋಡೆಕೋರರ ಕೃತ್ಯದಂತೆ ಬಿಂಬಿಸಲು ಮನೆಯಲ್ಲಿ ಖಾರದ ಪುಡಿ ಎರಚಿ, ರಸ್ತೆಯಲ್ಲಿ ಬಿದಿದ್ದ ಮದ್ಯದ ಬಾಟಲ್, ಗ್ಲಾಸ್​ಗಳನ್ನಿಟ್ಟು ಕಥೆ ಸೃಷ್ಟಿಸಿ ಪರಾರಿಯಾಗಿದ್ದ. ಆದರೆ ಈ ವೇಳೆ ತಾನೇ ಮನೆ ಬೀಗ ಹಾಕಿಕೊಂಡು ಹೋಗಿದ್ದು, ಇದು ಪರಿಚಯಸ್ಥನ ಕೃತ್ಯ ಎನ್ನುವುದು ಪೊಲೀಸರಿಗೆ ಗೊತ್ತಾಗಿತ್ತು.

ಇದನ್ನೂ ಓದಿ: 76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ

ಇನ್ನು ಕೃತ್ಯ ಬಳಿಕ ಚಿನ್ನವನ್ನು ತನ್ನೂರಿನ ತೋಟದ ತೆಂಗಿನ ಮರದ ಪೊಟರೆಯೊಳಗೆ ಬಚ್ಚಿಟ್ಟಿದ್ದ. ಆದರೆ ಹುಲಿಯೂರುದುರ್ಗ ಪೊಲೀಸರು ಸಿಕ್ಕ ಕ್ಲ್ಯೂ ಆಧರಿಸಿ ತನಿಖೆ ಚುರುಕುಗೊಳಿಸಿದ್ದು, ಕೊಲೆ ಮಾಡಿ ಊರಿನಲ್ಲೇ ಓಡಾಡಿಕೊಂಡಿದ್ದ ಹಂತಕನನ್ನು ಬಂಧಿಸಿದ್ದಾರೆ. ಸದ್ಯ ನಾಗಮ್ಮಗೆ ಕೊಡಬೇಕಾದ ಬಾಕಿ ಹಣ ಕೊಡಲಾಗದೇ ಕೊಲೆ ಮಾಡಿದ್ದು, ತನಗೆ ಅವಶ್ಯಕವಾಗಿದ್ದ ಜೂಜಾಟಕ್ಕೆ ಹಾಗೂ ಬೇರೊಬ್ಬರ ಬಳಿ ಪಡೆದಿದ್ದ ಸಾಲ ತೀರಿಸಲು ಕೃತ್ಯ ಎಸಗಿರುವುದು ಮೇಲ್ನೊಟಕ್ಕೆ ಕಂಡುಬಂದಿದೆ. ಆದರೆ ಇದನ್ನು ಹೊರತು ಪಡಿಸಿ ಬೇರೆ ಕಾರಣ ಇತ್ತಾ ಎನ್ನುವುದನ್ನು ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಆರ್​ಸಿಬಿಯ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಡಿಕೆ; ಕೊಹ್ಲಿಗಿಲ್ಲ ನಾಯಕತ್ವ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೊದಲ 20 ಪಂದ್ಯಗಳ ವೇಳಾಪಟ್ಟಿಯ ಪ್ರಕಾರ, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಮೊದಲ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹದ ನಡುವೆ ತಂಡದ ಮಾಜಿ ಆಟಗಾರ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಆರ್​ಸಿಬಿಯ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ. ದಿನೇಶ್ ಕಾರ್ತಿಕ್ ಹೆಸರಿಸಿರುವ ತಂಡದಲ್ಲಿ ಕಿಂಗ್ ಕೊಹ್ಲಿ (Virat Kohli) ಇದ್ದಾರೆಯಾದರೂ, ತಂಡವನ್ನು ಚಾಂಪಿಯನ್ ಮಾಡಿದ ರಜತ್ ಪಾಟಿದರ್​ಗೆ ನಾಯಕತ್ವ ನೀಡಿದ್ದಾರೆ.

ಡಿಕೆ ತಂಡಕ್ಕೆ ರಜತ್ ನಾಯಕ

ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್ ಅವರನ್ನು ತಮ್ಮ ತಂಡದ ನಾಯಕನನ್ನಾಗಿ ಆಯ್ಕೆ ಮಾಡಲು ಕಾರಣವೂ ಇದೆ. ಅದೆನೆಂದರೆ ಬರೋಬ್ಬರಿ 17 ವರ್ಷಗಳಿಂದ ಒಂದೇ ಒಂದು ಐಪಿಎಲ್ ಟ್ರೋಫಿ ಗೆಲ್ಲದ ಆರ್​ಸಿಬಿ, ರಜತ್ ಪಾಟಿದರ್ ನಾಯಕನಾದ ಮೊದಲ ಆವೃತ್ತಿಯಲ್ಲೇ ತನ್ನ ಟ್ರೋಫಿ ಬರವನ್ನು ನೀಗಿಸಿಕೊಂಡಿತ್ತು. ಹೀಗಾಗಿ ಆರ್​ಸಿಬಿಯ ಈ ಐತಿಹಾಸಿಕ ಗೆಲುವಿನಲ್ಲಿ ನಾಯಕನಾಗಿ ರಜತ್ ಪಾಟಿದಾರ್ ವಹಿಸಿದ ಪಾತ್ರವನ್ನು ಶ್ಲಾಘಿಸಿರುವ ಕಾರ್ತಿಕ, ‘ವಿರಾಟ್ ಕೊಹ್ಲಿ ಹಲವು ವರ್ಷಗಳ ಕಾಲ ತಂಡವನ್ನು ಮುನ್ನಡೆಸಿ ಯಶಸ್ವಿಯಾಗಿದ್ದಾರೆ. ಆದರೆ ರಜತ್ ಪಾಟಿದಾರ್ ತಂಡಕ್ಕೆ ಕಪ್ ನೀಡಿದ ನಾಯಕ. ಬ್ಯಾಟ್ಸ್‌ಮನ್ ಆಗಿ ಅವರು ಕಡಿಮೆ ಅವಧಿಯಲ್ಲಿ ಮಾಡಿದ ಪ್ರಭಾವ ಅಸಾಧಾರಣವಾಗಿದೆ’ ಎಂದು ಕಾರ್ತಿಕ್ ವಿವರಿಸಿದ್ದಾರೆ.

ಬ್ಯಾಟಿಂಗ್ ಕ್ರಮಾಂಕ ಹೇಗಿದೆ?

ಉಳಿದಂತೆ ತಂಡದ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಹೊಸ ಪ್ರಯೋಗ ಮಾಡಿರುವ ಡಿಕೆ, ‘ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಮತ್ತು ಫಾಫ್ ಡು ಪ್ಲೆಸಿಸ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಸ್ಥಾನ ಪಡೆದರೆ, ನಾಯಕ ರಜತ್ ಪಾಟಿದಾರ್ ನಾಲ್ಕನೇ ಸ್ಥಾನವನ್ನುನ ಪಡೆದುಕೊಂಡಿದ್ದಾರೆ. ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ ಐದನೇ ಸ್ಥಾನ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಆರನೇ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದಾರೆ. ಕೃನಾಲ್ ಪಾಂಡ್ಯ ಆಲ್ ರೌಂಡರ್ ಕೋಟಾದಲ್ಲಿ ಸ್ಥಾನ ಪಡೆದಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು?

ಬೌಲಿಂಗ್ ವಿಭಾಗದಲ್ಲಿ ಅನುಭವಿ ಮತ್ತು ಹೊಸಬರ ಮಿಶ್ರಣವಿದೆ. ಆರ್‌ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದಿರುವ ಯುಜ್ವೇಂದ್ರ ಚಾಹಲ್ ಮತ್ತು ಹರ್ಷಲ್ ಪಟೇಲ್‌ಗೆ ಸ್ಥಾನ ನೀಡಲಾಗಿದೆ. ವೇಗದ ಬೌಲಿಂಗ್ ಜವಾಬ್ದಾರಿಗಳನ್ನು ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹೇಜಲ್‌ವುಡ್‌ಗೆ ವಹಿಸಲಾಗಿದೆ. ಆರ್​ಸಿಬಿ ಕಪ್ ಗೆಲ್ಲುವಲ್ಲಿ ಹೇಜಲ್‌ವುಡ್ ಪ್ರಮುಖ ಪಾತ್ರ ವಹಿಸಿದ್ದರಿಂದ ಅವರನ್ನು ತಂಡದಲ್ಲಿ ಸೇರಿಸಲಾಗಿದೆ ಎಂದು ಡಿಕೆ ಹೇಳಿಕೊಂಡಿದ್ದಾರೆ.

IPL 2026: 49, 158.. ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್; ಕೆರಳಿ ಕೆಂಡವಾದ ಫ್ಯಾನ್ಸ್

ದಿನೇಶ್ ಕಾರ್ತಿಕ್ ಸಾರ್ವಕಾಲಿಕ ಆರ್​ಸಿಬಿ ಪ್ಲೇಯಿಂಗ್ 11: ಕ್ರಿಸ್ ಗೇಲ್, ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಎಬಿ ಡಿವಿಲಿಯರ್ಸ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಜೋಶ್ ಹೇಜಲ್‌ವುಡ್,

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಂಗಡ ತೆರಿಗೆ ಪಾವತಿಯ ಇ-ಮೇಲ್ ಬರುತ್ತಿದೆಯಾ? ಆದಾಯ ತೆರಿಗೆ ಇಲಾಖೆಯ ಸ್ಪಷ್ಟೀಕರಣ ಇಲ್ಲಿದೆ

ನವದೆಹಲಿ, ಮಾರ್ಚ್ 14: ಕಳೆದೆರಡು ದಿನಗಳಿಂದ ಅನೇಕ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ತೆರಿಗೆದಾರರಿಗೆ ಮುಂಗಡ ತೆರಿಗೆಯ ಬಗ್ಗೆ ಆದಾಯ ತೆರಿಗೆ (Income Tax) ಇಲಾಖೆಯಿಂದ ಇಮೇಲ್‌ಗಳು ಬರುತ್ತಿವೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಚರ್ಚೆಯೂ ಶುರುವಾಗಿದೆ. ಹೀಗಾಗಿ, ಮುಂಗಡ ತೆರಿಗೆ ಇ-ಅಭಿಯಾನದ ಅಡಿಯಲ್ಲಿ ಕಳುಹಿಸಲಾದ ಇ-ಮೇಲ್‌ಗಳ ಕುರಿತು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣವನ್ನು ನೀಡಿದೆ. ‘ಮಹತ್ವದ ವಹಿವಾಟುಗಳ’ ಬಗ್ಗೆ ನಕಲಿ ಮುಂಗಡ ತೆರಿಗೆ ಪಾವತಿಯ ಇ-ಮೇಲ್​ಗಳು ಕೆಲವರಿಗೆ ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

ಆದಾಯ ತೆರಿಗೆ ಇಲಾಖೆಯು ಪ್ರಸ್ತುತ ಮುಂಗಡ ತೆರಿಗೆ ಇ-ಅಭಿಯಾನವನ್ನು ನಡೆಸುತ್ತಿದೆ. ಈ ಅಭಿಯಾನದ ಅಡಿಯಲ್ಲಿ, ಜನರು ತಮ್ಮ ಮುಂಗಡ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಅವರು ಮಾಡಿದ ಪ್ರಮುಖ ಹಣಕಾಸು ವಹಿವಾಟುಗಳನ್ನು ನೆನಪಿಸಲಾಗುತ್ತದೆ. ಈ ಸ್ವಯಂಚಾಲಿತ ಪ್ರಕ್ರಿಯೆಯಲ್ಲಿ ಒಂದು ಪ್ರಮುಖ ತಾಂತ್ರಿಕ ದೋಷ ಸಂಭವಿಸಿದೆ. ಇದರ ಪರಿಣಾಮವಾಗಿ, ಅನೇಕ ತೆರಿಗೆದಾರರು ತಮ್ಮ ಹಣಕಾಸಿನ ವಹಿವಾಟುಗಳ ಬಗ್ಗೆ ವಾಸ್ತವಕ್ಕೆ ಯಾವುದೇ ಸಂಬಂಧವಿಲ್ಲದ ಡೇಟಾ ಮತ್ತು ವಿವರಗಳನ್ನು ಪಡೆದಿದ್ದಾರೆ. ಈ ದೋಷವು ಎಲ್ಲ ತೆರಿಗೆ ದಾಖಲೆಗಳನ್ನು ಹೊಂದಿರುವ ಮತ್ತು ನಿಯಮಗಳಿಗೆ ಅನುಸಾರವಾಗಿ ತಮ್ಮ ಎಲ್ಲಾ ತೆರಿಗೆಗಳನ್ನು ಪಾವತಿಸಿದವರಲ್ಲಿಯೂ ಸಹ ಭಯವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

2026-27 (ಹಣಕಾಸು ವರ್ಷ 2025-26)ರಲ್ಲಿ ನಡೆಯುತ್ತಿರುವ ಮುಂಗಡ ತೆರಿಗೆ ಇ-ಅಭಿಯಾನದ ಭಾಗವಾಗಿ ಕೆಲವು ತೆರಿಗೆದಾರರು ಕೈಗೊಂಡ ‘ಮಹತ್ವದ ವಹಿವಾಟುಗಳ’ ಬಗ್ಗೆ ತಪ್ಪಾದ ವಿವರಗಳನ್ನು ಹೊಂದಿರುವ ಇಮೇಲ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಅದನ್ನು ನಿರ್ಲಕ್ಷ್ಯಿಸಿ. ಈ ದೋಷವನ್ನು ತಮ್ಮ ಗಮನಕ್ಕೆ ತಂದಿದ್ದಕ್ಕಾಗಿ ತೆರಿಗೆದಾರರಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಇದರಿಂದ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಇದನ್ನೂ ಓದಿ: ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ

“ಕೆಲವು ತೆರಿಗೆದಾರರು ಮುಂಗಡ ತೆರಿಗೆ ಇ-ಅಭಿಯಾನದ ಭಾಗವಾಗಿ ಅವರು ಕೈಗೊಂಡ ‘ಮಹತ್ವದ ವಹಿವಾಟುಗಳ’ ಬಗ್ಗೆ ತಪ್ಪಾದ ವಿವರಗಳನ್ನು ಹೊಂದಿರುವ ಇಮೇಲ್‌ಗಳನ್ನು ಸ್ವೀಕರಿಸಿದ್ದಾರೆ. ನಮ್ಮ ಸೇವಾ ಪೂರೈಕೆದಾರರೊಂದಿಗೆ ಸಮನ್ವಯದಿಂದ ಈ ವಿಷಯವನ್ನು ಪರಿಹರಿಸಲು ನಾವು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ. ಹಿಂದಿನ ಇಮೇಲ್ ಸಂವಹನವನ್ನು ನಿರ್ಲಕ್ಷಿಸಿ. ಇ-ಫೈಲಿಂಗ್ ಪೋರ್ಟಲ್ ಮೂಲಕ ಪ್ರವೇಶಿಸಬಹುದಾದ ಪೋರ್ಟಲ್‌ನಲ್ಲಿರುವ ಇ-ಕ್ಯಾಂಪೇನ್ ಟ್ಯಾಬ್ ಮೂಲಕ ತಮ್ಮ ವಹಿವಾಟಿನ ವಿವರಗಳನ್ನು ಪರಿಶೀಲಿಸಬಹುದು” ಎಂದು ತೆರಿಗೆದಾರರಿಗೆ ಸಲಹೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲ, ಮಾರ್ಚ್​​ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link