ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿಸಿದ ಬ್ಯಾಂಕ್: ಹೇಗೆ ಗೊತ್ತಾ?
ಹಾಸನ, (ಮಾರ್ಚ್ 14): ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ (Sakleshpura canara bank) ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು (Loan) ಕೆನರಾ ಬ್ಯಾಂಕ್ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ ಕೆಲವು ದಿನಗಳ ನಂತರ ಇನ್ನೂ 9.34 ಪೈಸೆ ಸಾಲ ಬಾಕಿ ಇದ್ದು ತಕ್ಷಣವೇ ಮರುಪಾವತಿಸುವಂತೆ ನೋಟಿಸ್ ನೀಡಿದ್ದಲ್ಲದೆ ಪದೇಪದೆ ಕರೆ ಮಾಡುತ್ತಿದ್ದರು….