ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ
ದೆಹಲಿ, ಮಾರ್ಚ್ 13: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದ್ದು, ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಗಿದೆ. ಆ ಬೆನ್ನಲ್ಲೇ ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು,…