Headlines

ಸಣ್ಣದೊಂದು ಮನಸ್ಥಾಪ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ಗಂಡ

ಕೋಲ್ಕತ್ತಾ, ಮಾರ್ಚ್​ 13: ಸಣ್ಣದೊಂದು ಮನಸ್ಥಾಪಕ್ಕೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ  ಕೊಲೆ(Murder) ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ  ನರ್ಸ್ ಒಬ್ಬರು ಕಾರಿನ ಇಎಂಐ ಪಾವತಿಗೆ ಸಂಬಂಧಿಸಿದ ಜಗಳದಲ್ಲಿ ಪತಿಯ ಕೈಯಿಂದಲೇ ಸಾವನ್ನಪ್ಪಿದ್ದಾರೆ. ಕೂಚ್ ಬೆಹಾರ್‌ನಲ್ಲಿರುವ ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಛಂದಾ ರಾಯ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಛಂದಾ ಮನೆಯಿಂದ ಕೂಗುತ್ತಾ ಹೊರಗೆ ಓಡಿಹೋಗಿದ್ದಳು, ಬೆಂಕಿ ಹೊತ್ತಿಕೊಂಡಿದ್ದರಿಂದ…

Read More

ವಿಚ್ಛೇದನದ ಬಳಿಕ ಹೇಗಿದೆ ಹನ್ಸಿಕಾ ಮನಸ್ಥಿತಿ? ಹೊಸ ಪೋಸ್ಟ್ ಹಾಕಿದ ನಟಿ

ಕನ್ನಡ, ತಮಿಳು ಮೊದಲಾದ ಭಾಷೆಗಳಲ್ಲಿ ನಟಿಸಿದ ಹನ್ಸಿಕಾ ಮೋಟ್ವಾನಿ (Hansika Motwani) ಅವರು ಉದ್ಯಮಿ ಸೊಹೈಲ್ ಖತುರಿಯಾ ಅವರಿಂದ ವಿಚ್ಛೇದನ ಪಡೆದರು. ಮಾರ್ಚ್ 11ರಂದು ಕೋರ್ಟ್ ಇವರಿಗೆ ವಿಚ್ಛೇದನ ನೀಡಿದೆ. ಇಬ್ಬರು ಪರಸ್ಪರ ಸಮ್ಮತಿಸಿ ಬೇರೆ ಆಗಿದ್ದಾರೆ. ಹಾಗಾದರೆ ಡಿವೋರ್ಸ್ ಬಳಿಕ ಹನ್ಸಿಕಾ ಮನಸ್ಥಿತಿ ಹೇಗಿದೆ? ಅದಕ್ಕೆ ಇಲ್ಲಿದೆ ಉತ್ತರ. ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಗಮನ ಸೆಳೆದಿದೆ. ಹನ್ಸಿಕಾ ಅವರು ವಿಚ್ಛೇದನದ ಬಳಿಕ ಇನ್​​​ಸ್ಟಾಗ್ರಾಮ್ ಅಲ್ಲಿ ಸ್ಟೋರಿ ಒಂದನ್ನು ಹಾಕಿದ್ದಾರೆ. ‘Chardi Kala always’ ಎಂದು…

Read More

World Sleep Day 2026: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ

ನಮ್ಮ ಆರೋಗ್ಯಕ್ಕೆ ಊಟ, ನೀರು, ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ (Sleep) ಅಷ್ಟೇ ಮುಖ್ಯ. ಆದ್ರೆ ಇಂದಿನ ಈ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಜನ ಸರಿಯಾಗಿ ನಿದ್ರೆ ಮಾಡುತ್ತಿಲ್ಲ, ಇಡೀ ದಿನ ಮೊಬೈಲ್‌ ಫೋನ್‌ ನೋಡುತ್ತಾ ಸಮಯ ಕಳೆಯುತ್ತಾರೆ. ಹೀಗೆ ಸರಿಯಾಗಿ ನಿದ್ರೆ ಮಾಡದಿದ್ದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ನಿದ್ರೆಯ ಮಹತ್ವವನ್ನು ತಿಳಿಸಲು ಮತ್ತು ಉತ್ತಮ ನಿದ್ರೆ ಪಡೆಯುವುದು ಏಕೆ ಮುಖ್ಯ ಎಂಬುದರ ಕುರಿತು…

Read More

ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!

ಬೆಂಗಳೂರು, ಮಾರ್ಚ್​ 13: ಒಡಿಶಾದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ತಡೆಯುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಗುರುವಾರ ರಾತ್ರೋರಾತ್ರಿ ಒಡಿಶಾ ಶಾಸಕರು ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಇದೀಗ ಅಸ್​ಸಾಂ ಶಾಸಕರೂ ಬಿಡದಿಯ ವಂಡರ್ ಲಾ ರೆಸಾರ್ಟ್ಗೆ ಬಂದಿಳಿದಿದ್ದಾರೆ. ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟಿಗೆ ಇರಿಸಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗುವಂತೆ ಮಾಡಲು ಬೆಂಗಳೂರಿಗೆ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ. ಬಿಡದಿ ಸಮೀಪದ…

Read More

Daily Devotional: ಮನೆಯೊಳಗೆ ಸರಿಯಾಗಿ ಸೂರ್ಯನ ಬೆಳಕು ಬೀಳಬೇಕು ಯಾಕೆ ಗೊತ್ತಾ?

ಮನೆ, ಕಚೇರಿ, ವ್ಯಾಪಾರ ಸ್ಥಳ ಅಥವಾ ದೇವಾಲಯ ಯಾವುದೇ ಆಗಿರಲಿ, ಸೂರ್ಯನ ಬೆಳಕು ಪ್ರವೇಶಿಸುವುದಕ್ಕೆ ಎಲ್ಲರೂ ಗಮನ ನೀಡುತ್ತಾರೆ. ಅನೇಕ ಮನೆಗಳಲ್ಲಿ ದೇವರ ಮನೆ, ಮುಖ್ಯ ಬಾಗಿಲು ಅಥವಾ ಕಚೇರಿಯ ಮುಖ್ಯ ಹಾಲ್‌ನವರೆಗೂ ಸೂರ್ಯನ ಬೆಳಕು ಬರುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸೂರ್ಯರಶ್ಮಿಯ ಪ್ರವೇಶವು ದಿಕ್ಕುಗಳನ್ನು ಅವಲಂಬಿಸಿ ವಿಭಿನ್ನ ಫಲಿತಾಂಶಗಳನ್ನು ನೀಡುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಪೂರ್ವ…

Read More

ಕಾಂಗ್ರೆಸ್​ನಲ್ಲಿ ಗರಿಗೆದರಿದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ…

Read More

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್​  ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್​​ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರನ್ನು ಲೇಡಿ ಗೆಟಪ್​​​ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ (Dry Fruits) ಉದ್ಯಮಕ್ಕೂ ತಟ್ಟಿದ್ದು, ವಿಶೇಷವಾಗಿ ಮಂಗಳೂರಿನ (Mangalore) ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ. ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರಬೇಕಿದ್ದ ಖರ್ಜೂರ ಸೇರಿದಂತೆ ಹಲವು ಒಣಹಣ್ಣುಗಳ ಪೂರೈಕೆ ಅಡಚಣೆಗೆ ಒಳಗಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಶುರುವಾಗಿದೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಭಾರತದ ಪ್ರಮುಖ ಡ್ರೈಫ್ರೂಟ್ಸ್ ಆಮದು ಸಂಸ್ಥೆಯಾದ ‘ರೀಮ್ ಟ್ರೇಡರ್ಸ್’ ಸೇರಿದಂತೆ ಹಲವು ವ್ಯಾಪಾರಿಗಳು ಈಗ ಸಂಕಷ್ಟ…

Read More

ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ

ಅಲ್ಲು ಅರ್ಜುನ್ ಅವರು (Allu Arjun) ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್​​ನ ಹೈದರಾಬಾದ್​​ನಲ್ಲಿ ಆರಂಭಿಸಿದ್ದಾರೆ. ಐಷಾರಾಮಿ ಆಸನ ವ್ಯವಸ್ಥೆ ಹಾಗೂ ಅದ್ಭುತ ಸಿನಿಮಾ ವೀಕ್ಷಣೆ ಅನುಭವ ನೀಡುವ ಈ ಮಲ್ಟಿಪ್ಲೆಕ್ಸ್ ಗುರುವಾರ (ಮಾರ್ಚ್ 12) ಉದ್ಘಾಟನೆ ಆಯಿತು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಈ ಥಿಯೇಟರ್​​ನ ವಾಲ್​​ ಆಫ್ ಫೇಮ್​ ಅಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ ಎಂಬುದು ವಿಶೇಷ. ಈ ಸಂದರ್ಭದ ವಿಡಿಯೋ…

Read More

Bengaluru Air Quality: ಉಡುಪಿ, ಮಂಗಳೂರಿನಲ್ಲಿ ಮತ್ತೊಮ್ಮೆ ಕುಸಿದ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 13: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More