ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು – Kannada News | A Gang Arrested In Bengaluru Who Escaped after Murder of rowdy sheeter Mahesh at Pandavapura
ಮಂಡ್ಯ, (ಡಿಸೆಂಬರ್ 18): ಬೆದರಿಕೆ ಹಾಕಿದ್ದ ರೌಡಿ ಶೀಟರ್ ನನ್ನೇ (rowdy sheeter )ಹತ್ಯೆ ಮಾಡಲಾಗಿದೆ. ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅಮೃತಿ ಗ್ರಾಮದ ಬಳಿ ಕಳೆದ ನವೆಂಬರ್ 29ರಂದು ರೌಡಿ ಶೀಟರ್ ಮಹೇಶ್ ಎಂಬಾತನ ಭೀಕರ ಹತ್ಯೆ ಮಾಡಲಾಗಿದ್ದು, ತಲೆಮರಿಸಿಕೊಂಡಿದ್ದ ಹಂತಕರು ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸವರಾಜು, ಶಶಾಂಕ್, ಹೇಮಂತ್ ಕುಮಾರ್, ಸುಮಂತ್ ಬಂಧಿತರು. ಈ ಸ್ನೇಹಿತರ ಗುಂಪಿಗೆ ರೌಡಿ ಶೀಟರ್ ಮಹೇಶ್, ಕೆಲ ಹಲವು ದಿನಗಳಿಂದ ಟಾರ್ಚರ್ ಕೊಡುತ್ತಾ ಕೊನೆಗೆ ಕೊಲೆ ಬೆದರಿಕೆ…