ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.
ವಯಸ್ಸಾದ ಮೇಲೆ ದೊಡ್ಡವರು ಕೂಡ ಮಕ್ಕಳ ರೀತಿ ಎಂಬುದು ಸುಳ್ಳಲ್ಲ, ಹೇಗೆ ಚಿಕ್ಕವರಿದ್ದಾಗ ಸ್ವಲ್ಪ ದೂರ ನಡೆದಾಕ್ಷಣ ಅಮ್ಮಾ ಎತ್ಕೋ ನಡಿಯೋಕೆ ಆಗ್ತಿಲ್ಲ ಎಂದು ಮಕ್ಕಳು ಹೇಳ್ತಾರೋ ಹಾಗೆಯೇ ವೃದ್ಧಾಪ್ಯದಲ್ಲಿ ಕೂಡ ಪೋಷಕರಿಗೆ ಹಾಗೆಯೇ ಆಗುತ್ತೆ. ಆಗ ಮಕ್ಕಳು ಕೂಡ ಅವರ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ವ್ಯಕ್ತಿಯೊಬ್ಬರು ರೈಲ್ವೆ ನಿಲ್ದಾಣದಲ್ಲಿ ತಾಯಿಯನ್ನು ಬೆನ್ನ ಮೇಲೆ ಹೊತ್ತು ನಡೆಯುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ.
ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರು ಅಹಮದಾಬಾದ್ನ ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದರು. ಆದರೆ ಶಿವಂ ದುಬೆ ಮಾತ್ರ ರೈಲು ನಿಲ್ದಾಣದತ್ತ ತೆರಳಿದ್ದರು. ಅಷ್ಟೇ ಅಲ್ಲದೆ ಮುಂಜಾನೆ ಟ್ರೈನ್ ಹತ್ತುವ ಮೂಲಕ ಮುಂಬೈಗೆ ಬಂದಿಳಿದಿದ್ದರು. ಅಂದರೆ ವಿಶ್ವಕಪ್ ಗೆದ್ದ ಬಳಿಕ ದುಬೆ ಯಾರಿಗೂ ಗೊತ್ತಾಗದಂತೆ ರೈಲಿನಲ್ಲಿ ಪ್ರಯಾಣಿಸಿರುವುದು ಇದೀಗ ಬಹಿರಂಗವಾಗಿದೆ.
ನ್ಯೂಝಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 96 ರನ್ಗಳ ಅಮೋಘ ಜಯ ಸಾಧಿಸಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಸಂಭ್ರಮದಲ್ಲಿದ್ದರು. ಅದರಲ್ಲೂ ಟ್ರೋಫಿಯೊಂದಿಗೆ ಹೋಟೆಲ್ ರೂಮ್ಗೆ ತೆರಳಿದ್ದ ಭಾರತೀಯ ಆಟಗಾರರು ಸಖತ್ತಾಗೇ ಎಂಜಾಯ್ ಮಾಡಿದ್ದರು.
ಆದರೆ ಮಧ್ಯ ರಾತ್ರಿ ಕಳೆಯುತ್ತಿದ್ದಂತೆ ಶಿವಂ ದುಬೆ ಮಾತ್ರ ಬ್ಯಾಗ್ ಪ್ಯಾಕ್ ಮಾಡಿಕೊಂಡಿದ್ದರು. ಅಲ್ಲದೆ ಮುಂಬೈಗೆ ತೆರಳಲು ವಿಮಾನವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎಲ್ಲಾ ವಿಮಾನಗಳು ಫುಲ್ ಬುಕ್ ಆಗಿದ್ದವು.
ಇತ್ತ ಹೇಗಾದರೂ ಮಾಡಿ ಬೇಗನೆ ಮನೆಗೆ ಹೋಗಿ ತಮ್ಮ ಮಕ್ಕಳೊಂದಿಗೆ ವಿಶ್ವಕಪ್ ಗೆಲುವನ್ನು ಸಂಭ್ರಮಿಸಬೇಕೆಂಬ ಆಸೆ ಶಿವಂ ದುಬೆಗಿತ್ತು. ಹೀಗಾಗಿ ವಿಮಾನಕ್ಕಾಗಿ ಕಾಯುವ ಬದಲು ಮುಂಜಾನೆಯ ರೈಲೇ ಉತ್ತಮ ಎಂದು ಅವರು ನಿರ್ಧರಿಸಿದರು.
ಅದರಂತೆ ಅಹಮದಾಬಾದ್ನಿಂದ ಮುಂಬೈಗೆ ಮುಂಜಾನೆ 5.10 ಕ್ಕೆ ಟ್ರೈನ್ ಹತ್ತಿದ್ದಾರೆ. ಜನರಿಗೆ ಗುರುತು ಸಿಗದಂತೆ ದುಬೆ ಕ್ಯಾಪ್, ಮಾಸ್ಕ್ ಮತ್ತು ಫುಲ್ ಸ್ಲೀವ್ ಟೀ ಶರ್ಟ್ ಧರಿಸಿ ಪ್ಪರ್ ಬರ್ತ್ ಏರಿ ಕುಳಿತಿದ್ದಾರೆ.
ಇದರ ನಡುವೆ ಟಿಕೆಟ್ ಪರೀಕ್ಷಕರು (TC) ಪ್ರಯಾಣಿಕರ ಪಟ್ಟಿಯಲ್ಲಿ ಶಿವಂ ದುಬೆ ಹೆಸರನ್ನು ನೋಡಿ, “ಇವರು ಕ್ರಿಕೆಟರ್ ಶಿವಂ ದುಬೆ ಅವರಾ?” ಎಂದು ಕೇಳಿದ್ದಾರೆ.
ತಕ್ಷಣವೇ ಕೆಳಗಿನ ಸೀಟ್ನಲ್ಲಿ ಕೂತಿದ್ದ ಅವರ ಪತ್ನಿ ಅಂಜುಮ್ ಖಾನ್, “ಅಯ್ಯೋ ಇಲ್ಲ ಇಲ್ಲ, ಅವರು ಇಲ್ಲಿಗೆ ಯಾಕೆ ಬರುತ್ತಾರೆ? ಶಿವಂ ದುಬೆ ರೈಲಿನಲ್ಲಿ ಪ್ರಯಾಣಿಸುತ್ತಾರಾ? ಇವರು ಬೇರೆಯವರು ಎಂದಿದ್ದಾರೆ. ಇದನ್ನು ನಂಬಿ ಟಿಸಿ ಕೂಡ ಮುಂದೆ ಹೋಗಿದ್ದಾರೆ.
ಕೊನೆಗೆ ಮುಂಬೈನ ಬೋರಿವಲಿ ನಿಲ್ದಾಣದಲ್ಲಿ ಇಳಿದಾಗ, ಅಲ್ಲಿನ ಪೊಲೀಸರು ಶಿವಂ ದುಬೆ ಅವರನ್ನು ಸುರಕ್ಷಿತವಾಗಿ ಮನೆ ತಲುಪಿಸಿದ್ದಾರೆ.
ಇದೀಗ ಟಿ20 ವಿಶ್ವಕಪ್ ಗೆದ್ದ ಬಳಿಕ ಕೂಡ ಸಿಂಪಲ್ ಆಗಿ ರೈಲಿನಲ್ಲಿ ಪ್ರಯಾಣಿಸಿರುವ ಶಿವಂ ದುಬೆಯ ಜರ್ನಿ ಸ್ಟೋರಿ ವೈರಲ್ ಆಗಿದ್ದು, ಅವರ ಸರಳತೆ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ.
ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ನಲ್ಲಿ ಆರು ಆರೋಪಿಗಳ ಹೇಳಿಕೆ ದಾಖಲು ಮಾಡಲಾಗಿದೆ. ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂಬ ವಿಷಯ ಬಹಿರಂಗವಾಗಿದೆ.
ಎಲ್ಲರೂ ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಓಪನ್ ಮಾಡಿದ್ದರು ಎಂಬ ವಿಷಯ ಗೊತ್ತಾಗಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ಟಾರ್ಗೆಟ್ ಮಾಡಿ ಬಂಧಿತರು ಕೆಟ್ಟ ರೀತಿಯಲ್ಲಿ ಫೋಟೋ ಹಾಕಿ ಕಾಮೆಂಟ್ ಮಾಡಿದ್ದರು ಎಂಬುದು ತಿಳಿದು ಬಂದಿದೆ. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ಅನ್ನು ವಶಪಡಿಸಿಕೊಂಡು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಕಾಮೆಂಟ್ ಮಾಡಿದ 12 ಐಡಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಕಂಪನಿಗಳಿಗೆ ಪತ್ರ ಬರೆಯಲಾಗಿದ್ದು, ಇನ್ನಷ್ಟೇ ಅವರಿಂದ ಉತ್ತರ ಬರಬೇಕಿದೆ. ಸದ್ಯ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸೋದಾಗಿ ಉಲ್ಲೇಖ ಮಾಡಲಾಗಿದೆ.
ಇತ್ತ ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ಗೆ ಜಾಮೀನು ಸಲ್ಲಿಕೆ ಮಾಡಿದ್ದಾರೆ. ಮಾರ್ಚ್ 24ಕ್ಕೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕಾಮೆಂಟ್ ಮಾಡಿದ ತಪ್ಪಿಗೆ 66 ದಿನಗಳಿಂದ ಆರು ಆರೋಪಿಗಳು ಜೈಲಿನಲ್ಲಿದ್ದಾರೆ.
ಬೆಂಗಳೂರು, ಮಾರ್ಚ್ 12: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 155ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 90 ಇದ್ದು,ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಂಡಂತಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ಬೆಂಗಳೂರು, ಮಾರ್ಚ್ 12: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.
ಎಲ್ಲೆಲ್ಲಿ ಒಣ ಹವೆ?
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಮಾರ್ಚ್ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ
ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.
ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ (Hansika) ಈಗ ಸುದ್ದಿಯಲ್ಲಿದ್ದಾರೆ. ಅವರು ಉದ್ಯಮಿ ಸೊಹೈಲ್ ಕತುರಿಯಾ ಜತೆ ಡಿವೋರ್ಸ್ ಪಡೆದಿದ್ದಾರೆ. ಕೋರ್ಟ್ ಅವರಿಗೆ ಡಿವೋರ್ಸ್ ನೀಡಲು ಒಪ್ಪಿಗೆ ಕೊಟ್ಟಿದೆ 2022ರಲ್ಲಿ ಸಾಕಷ್ಟು ಅದ್ದೂರಿಯಾಗಿ ಈ ಮದುವೆ ಕಾರ್ಯ ನಡೆದಿತ್ತು.
ಸೋಹೈಲ್ ಈ ಮೊದಲು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್ ಜತೆ ಹನ್ಸಿಕಾ ಮದುವೆ ಘೋಷಣೆ ಮಾಡಿಕೊಳ್ಳುತ್ತಿದ್ದಂತೆಯೇ ಒಂದಷ್ಟು ಮಂದಿ ಹನ್ಸಿಕಾ ಟೀಕೆ ಮಾಡಿದರು. ‘ಲವ್ ಶಾದಿ ಡ್ರಾಮಾ’ದಲ್ಲಿ ಹನ್ಸಿಕಾ ಈ ಬಗ್ಗೆ ಮಾತನಾಡಿದ್ದರು.
‘ಆ ಸಮಯದಲ್ಲಿ ಈ ವ್ಯಕ್ತಿಯ ಪರಿಚಯ ನನಗಿತ್ತು ಎಂದ ಮಾತ್ರಕ್ಕೆ ತಪ್ಪು ನನ್ನದೇ ಎಂದು ಹೇಳಲು ಸಾಧ್ಯವಿಲ್ಲ. ನನಗೂ ಇದಕ್ಕೂ ಸಂಬಂಧವಿಲ್ಲ. ನಾನು ಸೆಲೆಬ್ರಿಟಿ ಆಗಿರುವುದರಿಂದ ಜನರಿಗೆ ನನ್ನ ಕಡೆ ಬೆರಳು ಮಾಡಿ, ನನ್ನನ್ನು ವಿಲನ್ ಮಾಡೋದು ಸುಲಭ. ಪಬ್ಲಿಕ್ ಫಿಗರ್ ಆಗಿರುವುದರಿಂದ ನಾನು ತೆರುತ್ತಿರುವ ಬೆಲೆ ಇದು’ ಎಂದು ಹನ್ಸಿಕಾ ಹೇಳಿದ್ದಾರೆ.
‘ನಾನು ಈ ಮೊದಲು ಮದುವೆ ಆಗಿದ್ದೆ. ಅದು ಮುರಿದು ಬಿತ್ತು. ಈ ವಿಚಾರ ಹೊರಜಗತ್ತಿಗೆ ಗೊತ್ತಾಯಿತು. ಆದರೆ, ತಪ್ಪಾದ ರೀತಿಯಲ್ಲಿ ಈ ಮಾಹಿತಿ ಹೊರಬಿತ್ತು. ಹನ್ಸಿಕಾ ಅವರಿಂದ ನನ್ನ ಹಾಗೂ ರಿಂಕಿ ಸಂಬಂಧ ಹಾಳಾಯಿತು ಎಂದು ಹೇಳಲಾಯಿತು. ಇದು ಸುಳ್ಳು. ನಾವಿಬ್ಬರೂ ಸ್ನೇಹಿತರು. ಹನ್ಸಿಕಾ ನನ್ನ ಮದುವೆಗೆ ಹಾಜರಾದ ಫೋಟೋ ನೋಡಿದ್ದರಿಂದ ಈ ಊಹಾಪೋಹ ಪ್ರಾರಂಭವಾಯಿತು’ ಎಂದು ಸೋಹೈಲ್ ಸ್ಪಷ್ಟನೆ ನೀಡಿದ್ದರು.
ಹನ್ಸಿಕಾ ಹಾಗೂ ಸೋಹೈಲ್ ಅವರು ಈ ಮೊದಲು ಅದ್ದೂರಿಯಾಗಿ ವಿವಾಹ ಆದರು. ಇವರ ಮದುವೆಯ ವಿಡಿಯೋ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಮೊದಲು ನಯನತಾರಾ ಹಾಗೂ ವಿಘ್ನೇಶ್ ಶಿವನ್ ಮದುವೆ ವಿಡಿಯೋ ಕೂಡ ರಿಲೀಸ್ ಆಗಲಿದೆ ಎಂದು ನೆಟ್ಫ್ಲಿಕ್ಸ್ ಘೋಷಣೆ ಮಾಡಿತ್ತು.
IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್ನ ವೇಳಾಪಟ್ಟಿ ಈ ಕೆಳಗಿನಂತಿದೆ…
ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಏಪ್ರಿಲ್ 4 ರಂದು ಮೊದಲ ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. 3.30 ಕ್ಕೆ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ದ್ವಿತೀಯ ಮ್ಯಾಚ್ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ.
ಏಪ್ರಿಲ್ 5 ರಂದು ಜರುಗಲಿರುವ ದ್ವಿತೀಯ ಡಬಲ್ ಹೆಡ್ಡರ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಪಂದ್ಯವಾಡಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ದ್ವಿತೀಯ ಪಂದ್ಯವಾಡಲಿದೆ.
ಎಸ್ಆರ್ಹೆಚ್ ಹಾಗೂ ಎಲ್ಎಸ್ಜಿ ಪಂದ್ಯದ ಬಳಿಕ ನಾಲ್ಕು ದಿನ ಡಬಲ್ ಹೆಡ್ಡರ್ ಪಂದ್ಯಗಳಿರುವುದಿಲ್ಲ. ಆದರೆ ಐಪಿಎಲ್ನ 16ನೇ ಪಂದ್ಯದ ನಂತರದ ಬ್ಯಾಕ್ ಟು ಬ್ಯಾಕ್ ಎರಡು ಡಬಲ್ ಹೆಡ್ಡರ್ ಪಂದ್ಯಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ…
ಏಪ್ರಿಲ್ 11 ರಂದು ಮೂರನೇ ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಮೊದಲ ಮ್ಯಾಚ್ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಏಪ್ರಿಲ್ 12 ರಂದು ನಡೆಯಲಿರುವ ಮತ್ತೊಂದು ಡಬಲ್ ಹೆಡ್ಡರ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ.
ಶ್ರೀನಗರ, ಮಾರ್ಚ್ 12: ಜಮ್ಮುವಿನಲ್ಲಿ ಮಾರ್ಚ್ 11ರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಬಂದೂಕುಧಾರಿಯೊಬ್ಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಅವರತ್ತ ಗುಂಡು ಹಾರಿಸಿದ್ದ. ಆದರೆ ಫಾರೂಕ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಜಮ್ಮುವಿನ ಗ್ರೇಟರ್ ಕೈಲಾಶ್ನ ರಾಯಲ್ ಪಾರ್ಕ್ನಲ್ಲಿ ಅಬ್ದುಲ್ಲಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿದೆ. ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ಎರಡು ದಶಕಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. 63 ವರ್ಷದ ಜಮ್ಮು ನಿವಾಸಿಯೊಬ್ಬ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಎನ್ಸಿ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.
ಕಳೆದ 20 ವರ್ಷಗಳಿಂದ ನಾನು ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಬಯಸಿದ್ದೆ ಎಂದಿದ್ದಾನೆ.
ಮೂಲಗಳ ಪ್ರಕಾರ, ಆರೋಪಿಯು ಜಮ್ಮುವಿನ ಹಳೆಯ ಭಾಗದಲ್ಲಿ ಕೆಲವು ಅಂಗಡಿಗಳನ್ನು ಹೊಂದಿದ್ದು, ತನ್ನ ಅಂಗಡಿಗಳಿಂದ ಬಾಡಿಗೆ ಪಡೆದು ಬದುಕು ಸಾಗಿಸುತ್ತಿದ್ದಾನೆ.
ಇಂದು ನನಗೆ ಸರಿಯಾದ ಅವಕಾಶ ಸಿಕ್ಕಿತ್ತು, ಆದರೆ ಅವರು (ಫಾರೂಕ್ ಅಬ್ದುಲ್ಲಾ) ಬದುಕುಳಿದಿರುವುದು ಅದೃಷ್ಟ ಎಂದು ಎನ್ಸಿ ಮುಖ್ಯಸ್ಥರ ಮೇಲಿನ ಹತ್ಯೆಯ ವಿಫಲ ಪ್ರಯತ್ನದ ನಂತರ ಅವರು ಪೊಲೀಸರಿಗೆ ತಿಳಿಸಿದ್ದಾನೆ.
Allah is kind. My father had a very close shave. The details are sketchy at the moment but what is known is that a man with a loaded pistol was able to get within point blank range & discharge a shot. It was only the close protection team that deflected the shot & ensured that… https://t.co/hYBe64Eigl
ದಾಳಿಯ ಸಮಯದಲ್ಲಿ ಆರೋಪಿಯು ಮದ್ಯದ ಅಮಲಿನಲ್ಲಿದ್ದನೆಂದು ವರದಿಯಾಗಿದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡಲು ಪ್ರಯತ್ನಿಸಿದ ನಂತರ ಭದ್ರತಾ ಸಿಬ್ಬಂದಿ ಅವರನ್ನು ಕೂಡಲೇ ವಶಕ್ಕೆ ಪಡೆದರು. ಘಟನೆ ನಡೆದಾಗ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಸ್ಥಳದಲ್ಲಿದ್ದರು.
ಅಧಿಕಾರಿಗಳ ಪ್ರಕಾರ, ಫಾರೂಕ್ ಅಬ್ದುಲ್ಲಾ ಮತ್ತು ಚೌಧರಿ ಅವರು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಬಿಎಸ್ ಚೌಹಾಣ್ ಅವರ ಮಗಳ ಮದುವೆಗೆ ಬಂದಿದ್ದರು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲಿದ್ದರು.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮತ್ತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ, ತನ್ನ ತಂದೆಯ ಜೀವವನ್ನು ಉಳಿಸಿದ್ದಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಲೋಡ್ ಮಾಡಿದ ಪಿಸ್ತೂಲ್ ಹಿಡಿದ ವ್ಯಕ್ತಿ ಪಾಯಿಂಟ್-ಬ್ಲಾಂಕ್ ರೇಂಜ್ ಒಳಗೆ ಹೋಗಿ ಎನ್ಸಿ ಮುಖ್ಯಸ್ಥರ ಮೇಲೆ ಗುಂಡು ಹಾರಿಸಲು ಹೇಗೆ ಸಾಧ್ಯವಾಯಿತು ಎಂದು ಭದ್ರತಾ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು, ಮಾರ್ಚ್ 12: ನಗರದ ಶಾಂಗ್ರೀಲಾ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಭಾರಿ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಪರಿಷತ್ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ.
ಶಾಸಕರ ನಡುವೆಯೇ ಕಿತ್ತಾಟ
ಸಭೆಯಲ್ಲಿ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಹಾಗೂ ರಾಜೇಗೌಡ ನಡುವೆ ಭಾರಿ ವಾಗ್ವಾದ ನಡೆದಿದೆ. IAS ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ ವಿರುದ್ಧ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕಿಡಿ ಕಾರಿದ್ದು, ಪ್ರಭಾವಿಗಳ ಮಾತು ಕೇಳಿ ಕಿರುಕುಳ ಕೊಡುತ್ತಿದ್ದಾರೆ. ಪದೇಪದೆ ಟಾರ್ಗೆಟ್ ಮಾಡಿ ಭೂ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ನೋಟಿಸ್ ನೀಡುತ್ತಿದ್ದಾರೆ. ಇದೇ ರೀತಿ ಹತ್ತಾರು ಸಲ ನೋಟಿಸ್ ನೀಡಿದ್ದಾರೆ. ನೋಟಿಸ್ಗೆ ಉತ್ತರಿಸಿದರೂ ಕ್ಯಾರೆ ಅಂತಿಲ್ಲ. ನಾನು ಮೂರು ಸಲ ಶಾಸಕನಾಗಿದ್ದೇನೆ, ನನಗೆ ಹೀಗಾದರೆ ಏನು ಮಾಡಲಿ? ಹೀಗಾಗಿ ಐಎಎಸ್ ಅಧಿಕಾರಿ ವಿರುದ್ಧ ಕ್ರಮ ಆಗಬೇಕು ಎಂದು ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ವೇಳೆನಾರಾಯಣಸ್ವಾಮಿ ಮಾತಿಗೆ ಶೃಂಗೇರಿ ಶಾಸಕ ರಾಜೇಗೌಡ ಟಾಂಗ್ ನೀಡಿದ್ದು, ರಾಜೇಂದ್ರ ಕುಮಾರ್ ಕಟಾರಿಯಾ ಒಳ್ಳೆಯ ಅಧಿಕಾರಿ ಎಂದಿದ್ದಾರೆ. ರಾಜೇಗೌಡ ಮಾತಿಗೆ ಕೆರಳಿದ ನಾರಾಯಣಸ್ವಾಮಿ ಏಯ್.. ನಿಮಗೇನ್ರಿ ಗೊತ್ತು ನೋವು? ನೋಟಿಸ್ ಕೊಟ್ಟಿರೋದು ನಿಮಗಾ? ಎಂದು ಪ್ರಶ್ನಿಸಿರೋದು ವಾಗ್ವಾದಕ್ಕೆ ಕಾರಣವಾಗಿದೆ.
ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಸಿ, ಎಸ್ಪಿ ವಿಚಾರವೂ ಪ್ರಸ್ತಾಪವಾಗಿದೆ. ಜಿಲ್ಲೆಗಳಿಗೆ ಜಿಲ್ಲಾಧಿಕಾರಿ, ಎಸ್ಪಿಗಳನ್ನು ನೇಮಿಸುವ ಸಂಬಂಧ ಸೌಜನ್ಯಕ್ಕೂ ಶಾಸಕರ ಬಳಿ ಒಂದು ಮಾತು ಕೇಳಲ್ಲ. ಸಚಿವರು, ಪ್ರಭಾವಿಗಳ ಮಾತು ಕೇಳಿ ವರ್ಗಾವಣೆ ಮಾಡಲಾಗುತ್ತೆ. ಕ್ಷೇತ್ರದಲ್ಲಿ ನಾವು ಹೇಳಿದ ಕೆಲಸಗಳೇ ಆಗಲ್ಲ. ವಿಪಕ್ಷದವರ ಕೆಲಸಗಳನ್ನ ಡಿಸಿ, ಎಸ್ಪಿಗಳು ಮಾಡಿಕೊಡುತ್ತಾರೆ. ಹೀಗಾದರೆ ಕ್ಷೇತ್ರದಲ್ಲಿ ನಮ್ಮ ಮರ್ಯಾದೆ ಏನಾಗಬೇಡ ಎಂದು ಕೆಲ ಶಾಸಕರು ಪ್ರಶ್ನಿಸಿದ ಪ್ರಸಂಗವೂ ನಡೆದಿದೆ.