Category Archives: Blog

Your blog category

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ

Source link

ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಬೆಂಗಳೂರು, ಮಾರ್ಚ್ 10: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡಿದ್ದು, ಮಾರ್ಚ್ 10 ರಂದು ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ದಟ್ಟವಾಗಿದೆ. ಎಲ್ಪಿಜಿ ಕೊರತೆಯಿಂದಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ, ಉಪಹಾರ ಮತ್ತು ಊಟ ಲಭ್ಯವಾಗುವುದು ಅನುಮಾನ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್ ನಡೆಸಲು ಅಸಾಧ್ಯ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ. ಕೇಂದ್ರ ಸರ್ಕಾರವು 60-70 ದಿನಗಳ ಸ್ಟಾಕ್ ಇದೆ ಎಂದು ಈ ಹಿಂದೆ ಹೇಳಿದ್ದರೂ, ವಾಣಿಜ್ಯ ಗ್ಯಾಸ್ ಪೂರೈಕೆ ನಿಲ್ಲಿಸಿರುವುದು ಆತಂಕ ಮೂಡಿಸಿದೆ. ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ರಾವ್ ಆಗ್ರಹಿಸಿದ್ದಾರೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ನಿಮ್ಮ ಮನೆಯ ಗೇಟ್ ತೆಗೆಯಲು ಬಾರದಂತೆ ಯಾರಾದ್ರೂ ವಾಹನ ಪಾರ್ಕ್​ ಮಾಡ್ತಿದ್ದಾರಾ ಈ ಟ್ರಿಕ್ ಚೆನ್ನಾಗಿದೆ ನೋಡಿ

ನಮ್ಮ ಭಾರತ ಮಾತ್ರವಲ್ಲ ಎಲ್ಲಾ ದೇಶಗಳಲ್ಲೂ ಇದೊಂದು ಸಮಸ್ಯೆ ಇದೆ. ಬೇರೆಯವರ ಮನೆ ಮುಂದೆ ಕಾರು ನಿಲ್ಲಿಸುವುದು, ಬೇರೆಯವರು ಮನೆಗೆ ಹೋಗುವ ದಾರಿಗೆ ಅಡ್ಡವಾಗಿ ವಾಹನ ಪಾರ್ಕ್​ ಮಾಡುವುದು, ಪಾರ್ಕಿಂಗ್​ಗೆ ಜಾಗವಿದ್ದರೂ ಯದ್ವಾತದ್ವಾ ಗಾಡಿ ನಿಲ್ಲಿಸುವುದು ಹೀಗೆ.ಆದರೆ ಆ ರೀತಿ ವಾಹನ ನಿಲ್ಲಿಸಬಾರದು ಅಂದ್ರೆ ಒಂದೋ ಅಲ್ಲೇ ನೀವು ನಿಂತು ಯಾವುದಾದರೂ ವಾಹನ ಬರುತ್ತಾ ಎಂದು ಕಾದು ನಿಲ್ಲಿಸುವ ಸಮಯದಲ್ಲಿ ಹೇಳಬೇಕು, ಅದಂತೂ ಆಗದ ಕೆಲಸ ಇನ್ನು, ಈ ವ್ಯಕ್ತಿ ಮಾಡಿರುವ ಟ್ರಿಕ್ ತುಂಬಾ ಚೆನ್ನಾಗಿ ವರ್ಕ್​ ಆಗಬಹುದು. ಆಸ್​ಟ್ರೇಲಿಯಾದ ವ್ಯಕ್ತಿಯೊಬ್ಬರು ತಾವು ಮನೆಗೆ ಹೋಗುವ ಆ ಮಾರ್ಗದಲ್ಲಿ ಯಾರಾದರೂ ಗಾಡಿ ನಿಲ್ಲಿಸಿದರೆ ಆಟೋಮೆಟಿಕ್ ಆಗಿ ನೀರು ಕಾಡಿಯ ಮೇಲೆ ಹಾರುವಂತೆ ಮಾಡಿದ್ದಾರೆ. ಆಗ ಅವರಿಗೆ ಅಲ್ಲಿ ಗಾಡಿ ನಿಲ್ಲಿಸಬಾರದೆಂದು ಅರ್ಥವಾಗುವುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಅಷ್ಟಿದ್ರೆ ಆ ರೀತಿಯ ಪಾತ್ರವನ್ನೇ ಮಾಡಬಾರದು’; ಗೀತಾ ಬಾಡಿ ಶೇಮಿಂಗ್ ಆರೋಪಕ್ಕೆ ಮಿಲನಾ ಖಡಕ್ ಉತ್ತರ

ಗೀತಾ ಭಾರತಿ ಭಟ್ ಅವರು ಸಿನಿಮಾದಲ್ಲಿ ತಮಗಾದ ಬಾಡಿಶೇಮಿಂಗ್ ಬಗ್ಗೆ ಮಾತನಾಡಿದ್ದರು. ‘ಲವ್ ಮಾಕ್ಟೇಲ್’ ಚಿತ್ರದಲ್ಲಿ ‘ಹೂ ತರ ಇದ್ಲು, ಹೂಕೋಸ್ ತರ ಆಗಿದ್ದಾಳೆ’ ಎಂಬ ಡೈಲಾಗ್ ಇದೆ. ಈ ದೃಶ್ಯವನ್ನು ಗೀತಾ ಮಾಡಿದರು. ಥಿಯೇಟರ್​​​ನಲ್ಲಿ ನೋಡಿದಾಗ ಅವರಿಗೆ ಶಾಕ್ ಆಗಿತ್ತಂತೆ. ಅದಕ್ಕೆ ಅವರು ತಕರಾರು ತೆಗೆದಿದ್ದರು. ಈ ವಿಷಯಕ್ಕೆ ಚಿತ್ರದ ನಿರ್ಮಾಪಕಿ ಮಿಲನಾ ನಾಗರಾಜ್ ಹಾಗೂ ನಿರ್ದೇಶಕ ಕೃಷ್ಣ ಅವರು ಪ್ರತಿಕ್ರಿಯಿಸಿದ್ದಾರೆ. ‘ಅಷ್ಟಿದ್ರೆ ಸಿನಿಮಾನೇ ಒಪ್ಪಿಕೊಳ್ಳಬಾರದಿತ್ತು’ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.

ಈ ಮೊದಲು ಮಾತನಾಡಿದ್ದ ಗೀತಾ ಅವರು, ನಿರ್ದೇಶಕ ಕೃಷ್ಣ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಸಿನಿಮಾದಲ್ಲಿ ಈ ರೀತಿಯ ಡೈಲಾಗ್ ಇದೆ ಎಂಬುದೇ ಗೊತ್ತಿರಲಿಲ್ಲ ಎಂದು ಆರೋಪಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ‘ಫಸ್ಟ್ ಡೇ ಫಸ್ಟ್ ಶೋ ಕನ್ನಡ’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಿಲನಾ ಹಾಗೂ ಕೃಷ್ಣ ಮಾತನಾಡಿದ್ದಾರೆ.

‘ಅದು ಬಾಡಿ ಶೇಮಿಂಗ್ ಮಾಡಿದ್ದಲ್ಲ. ರೈಮಿಂಗ್ ಆಗಿ ಬರೆದಿದ್ದು ಅಷ್ಟೇ’ ಎಂದು ಕೃಷ್ಣ ಅವರು ಹೇಳಿದ್ದಾರೆ. ‘ಅವರಿಗೆ ಸಿನಿಮಾ ಪಾತ್ರ ಗೊತ್ತಿತ್ತು. ಈಗ ಮಾತನಾಡುವ ಅವಶ್ಯಕತೆ ಇಲ್ಲ. ಅವರು ಸಂಪೂರ್ಣ ದೃಶ್ಯವನ್ನೇ ಮಾಡಿ ಹೋಗಿದ್ದಾರೆ. ಕಲಾವಿದರಿಗೆ ಹೇಳದೆ ನಾವು ದೃಶ್ಯ ಮಾಡೋಕಾಗಲ್ಲ. ಅವರಿಗೆ ಆ ಬಳಿಕ ಹಾಗೆ ಅನಿಸಿರಬಹುದು. ಅಷ್ಟಿದ್ರೆ ಅವರು ಆ ರೀತಿಯ ಪಾತ್ರಗಳನ್ನು ಮಾಡಬಾರದು. ಯಾವುದನ್ನು ಮುಚ್ಚಿಟ್ಟು ಮಾಡಲ್ಲ. ಆಡಿಷನ್ ಮಾಡಿ ಕಾಸ್ಟ್ ಮಾಡಿರೋದು. ನಿಮಗೆ ಆಗಲ್ಲ ಅಂದ್ರೆ ಬಿಡಿ’ ಎಂದು ಮಿಲನ ಖಡಕ್ ಆಗಿ ಹೇಳಿದ್ದಾರೆ.

‘ಗೀತಾ ಅವರು ಧಾರಾವಾಹಿ ಮಾಡುತ್ತಾ ಇದ್ದರು. ಅದರಲ್ಲೂ ಅದೇ ಕಥೆ ಇತ್ತು. ಮೂರು ವರ್ಷ ಆ ರೀತಿಯ ಧಾರಾವಾಹಿ ಮಾಡಿ, ನಮ್ಮ ಒಂದು ದೃಶ್ಯಕ್ಕೆ ತಕರಾರು ತೆಗೆದರೆ ಹೇಗೆ? ಮೇಕಿಂಗ್ ವಿಡಿಯೋ ಯೂಟ್ಯೂಬ್​​ನಲ್ಲೇ ಇದೆ. ಯಾರಿಗೂ ಹರ್ಟ್ ಮಾಡಬೇಕು ಎಂದು ಮಾಡಿದ್ದಲ್ಲ. ಅನೇಕರಿಗೆ ಕನೆಕ್ಟ್ ಆಗಿರೋ ವಿಷಯ ಅದು’ ಎಂದು ಕೃಷ್ಣ ಅವರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ‘ಲವ್ ಮಾಕ್ಟೇಲ್​ನಲ್ಲಿ ನನಗೆ ಬಾಡಿ ಶೇಮಿಂಗ್ ಆಗಿದೆ, ಆ ಪಾತ್ರ ಮಾಡಿ ತಪ್ಪು ಮಾಡಿದೆ’; ಗೀತಾ ಭಾರತಿ ಭಟ್

‘ಕಥಾ ನಾಯಕ ಆದಿ ಏನು ಫೀಲ್ ಮಾಡ್ತಾನೆ ಎಂದು ಬರೆದಿದ್ದು. ಕೆಲವರಿಗೆ ಬೇಸರ ಆಗಬಹುದು, ಕೆಲವರಿಗೆ ಖುಷಿ ಆಗಿರಬಹುದು. ಏನು ಮಾಡೋಕೂ ಆಗಲ್ಲ’ ಎಂದರು ಕೃಷ್ಣ. ‘ಕಾಮಿಡಿಯನ್ನು ಕಾಮಿಡಿತರ ತಗೋಬೇಕು’ ಎಂಬುದು ಮಿಲನಾ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆಟೋ ಪ್ರಯಾಣಿಕರಿಗೆ ಬಿಗ್ ಶಾಕ್: ಹೋಟೆಲ್ ಬಂದ್ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಹೊಡೆತ

ಬೆಂಗಳೂರು, ಮಾರ್ಚ್ 10: ಇರಾನ್, ಇಸ್ರೇಲ್, ಅಮೆರಿಕ ಯುದ್ಧದ (Iran Israel war impact) ಹಿನ್ನೆಲೆ ಭಾರತದಲ್ಲಿ ಈಗಾಗಲೇ ಆಟೋ ಎಲ್ಪಿಜಿ ಬೆಲೆ (LPG Price) ಲೀಟರ್ ಗೆ 10 ರಿಂದ 20 ರೂಪಾಯಿ ವರೆಗೆ ಏರಿಕೆ ಆಗಿದೆ. ದರ ಏರಿಕೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಆರ್ಥಿಕ ತಜ್ಞರು, ಯುದ್ಧ ಹೀಗೆಯೇ ಮುಂದುವರೆದರೆ ಭಾರತದ ಮೇಲೆ ದೊಡ್ಡ ಪರಿಣಾಮವಾಗಲಿದೆ ಎಂದಿದ್ದಾರೆ. ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಕಾರಣ ಅದರ ಮೂಲಕ ಭಾರತಕ್ಕೆ ಬರುವ ಸರಕುಗಳ ಸಾಗಾಟಕ್ಕೆ ಅಡ್ಡಿಯಾಗಿದೆ. ಯುದ್ದದ ಕಾರಣದಿಂದಾಗಿ ಸದ್ಯ ಗುಡ್ ಹೋಪ್ ಶಿಖರದ ಕಡೆಯಿಂದ ಹಡಗುಗಳು ಬರಬೇಕಾಗಿರುವುದರಿಂದ ವೆಚ್ಚ ಹೆಚ್ಚಾಗಲಿದೆ ಎಂದು ಆರ್ಥಿಕ ತಜ್ಞ ಪ್ರೊ. ಎಸ್​ಆರ್ ಕೇಶವ ತಿಳಿಸಿದ್ದಾರೆ.

ಯುದ್ಧದ ಪರಿಣಾಮದಿಂದ ಬೆಂಗಳೂರಿನ ಆಟೋ, ಕ್ಯಾಬ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವುದು ಖಚಿತವಾಗಿದೆ. ಆಟೋ, ಕ್ಯಾಬ್​ಗೆ ಬಳಸುವ ಎಲ್ಪಿಜಿ ದರ ಏರಿಕೆಯಾಗಿದೆ. ಈ ಹಿಂದೆ ಆಟೋ ಎಲ್ಪಿಜಿ ದರ ಲೀಟರ್​ಗೆ 58 ರೂ. ಇತ್ತು. ನಂತರ 59 ರೂ. ಆಯಿತು ಇದೀಗ ಕೆಲ ಬಂಕ್​ಗಳಲ್ಲಿ 69.74 ರೂ. ಇದ್ದರೆ, ಕೆಲವೆಡೆ ಮಾಲೀಕರು 15 ರಿಂದ 20 ರೂ. ವರೆಗೆ ದರ ಏರಿಕೆ ಮಾಡಿಕೊಂಡಿದ್ದಾರೆ.

ಮುಂದಿನ ವಾರದಿಂದ ಆಟೋ ಎಲ್​ಪಿಜಿ ಇನ್ನಷ್ಟು ದುಬಾರಿ

ಮುಂದಿನ ವಾರದಿಂದ ಆಟೋ, ಕ್ಯಾಬ್ ಎಲ್ಪಿಜಿ ದರ ಮತ್ತಷ್ಟು ದರ‌ ಏರಿಕೆ ಆಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಿಂದ ಆಟೋ, ಕ್ಯಾಬ್ ಬುಕ್ ಮಾಡುತ್ತಿದ್ದಂತೆಯೇ ಚಾಲಕರು ಕಿಮೀಗೆ 10 ರಿಂದ 20 ರೂಪಾಯಿ ಹೆಚ್ಚುವರಿ ಕೇಳುತ್ತಿದ್ದಾರೆ. ಆಟೋ, ಕ್ಯಾಬ್ ಮೀಟರ್ ದರ ಏರಿಕೆ ಮಾಡುವಂತೆ ಚಾಲಕರು ಸಾರಿಗೆ ಇಲಾಖೆಯ ಆಯುಕ್ತರು ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಈಗೆಷ್ಟಿದೆ ಆಟೋ, ಕ್ಯಾಬ್ ದರ?

ಸದ್ಯ ಬೆಂಗಳೂರು ನಗರದಲ್ಲಿ ಆಟೋ ಮೀಟರ್ ಕನಿಷ್ಠ ದರ 36 ರೂ. ಇದೆ. ನಂತರ ಒಂದು ಕಿಮೀಗೆ 16 ರೂ.ನಂತೆ ದರ ಇರುತ್ತದೆ. ಕ್ಯಾಬ್​ಗೆ ಕನಿಷ್ಠ ದರದ ಮೇಲೆ ಒಂದು ಕಿಮೀ 24 ರೂ. ಇದ್ದು, ಅದನ್ನು 10 ರೂಪಾಯಿ ಏರಿಕೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಇದನ್ನೂ ಓದಿ: LPG ಸಿಲಿಂಡರ್‌ ಕೊರತೆ: ಹೋಟೆಲ್ ಮುಚ್ಚುವುದೇ ಕೊನೆಯ ದಾರಿ

ಒಟ್ಟಿನಲ್ಲಿ, ಇರಾನ್ ಮೇಲಿನ ಅಮೆರಿಕ ಇಸ್ರೇಲ್ ಯುದ್ಧದ ಪರಿಣಾಮ ಬೆಂಗಳೂರಿನ ಮೇಲೆ ದೊಡ್ಡಮಟ್ಟದಲ್ಲಿ ತಟ್ಟಲಿದ್ದು, ಒಂದು ವೇಳೆ ಯುದ್ಧ ಈ ವಾರವೂ ಮುಂದುವರಿದರೆ ದರ ಏರಿಕೆ ಬಿಸಿ ಇಲ್ಲಿನ ಜನ ಅನುಭವಿಸಬೇಕಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?

ಬೆಂಗಳೂರು, ಮಾರ್ಚ್​​ 10​​​​​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿದಾಗ, ಅದನ್ನು ಈಡೇರಿಸದಿರುವುದು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದನ್ನು ಸಂಕಲ್ಪ ಭಂಗ ಎಂದು ಕರೆಯಲಾಗುತ್ತದೆ. ದೇವಸ್ಥಾನಗಳಿಗೆ ದೇಣಿಗೆ ನೀಡುವುದಾಗಿ ಅಥವಾ ಶುಭ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ಹೇಳಿ, ನಂತರ ಅದನ್ನು ಮರೆತುಬಿಡುವುದು ಅಥವಾ ಪೂರೈಸದಿರುವುದು ಆಧ್ಯಾತ್ಮಿಕವಾಗಿ ಹಾನಿಕರ.

ಈ ರೀತಿಯ ವಚನಭಂಗವು ಮಾನಸಿಕ ಅಶಾಂತಿ, ರೋಗರುಜಿನಗಳು ಮತ್ತು ಅಪರಾಧ ಪ್ರಜ್ಞೆಗೆ (ಗಿಲ್ಟಿನೆಸ್) ಕಾರಣವಾಗುತ್ತದೆ. ವ್ಯಕ್ತಿಯ ಆತ್ಮವೇ ಈಡೇರಿಸದ ಭರವಸೆಗಳ ಬಗ್ಗೆ ನೆನಪಿಸುತ್ತಿರುತ್ತದೆ. ಸಣ್ಣ ದೇವಾಲಯಗಳಿಗೆ ಅಥವಾ ಗ್ರಾಮೀಣ ಗುಡಿಗಳಿಗೆ ನೀಡಿದ ಮಾತು ತಪ್ಪಿದಾಗ ಕುಟುಂಬದಲ್ಲಿ ದೈವಾನುಗ್ರಹ ಕಡಿಮೆಯಾಗಬಹುದು. ಇದು ವ್ಯಕ್ತಿಯ ಧನಾತ್ಮಕ ಆಧ್ಯಾತ್ಮಿಕ ಪ್ರಗತಿಗೆ ಅಡ್ಡಿಯಾಗಿ, ಪಂಚಭೂತಗಳ ಅನುಗ್ರಹವನ್ನೂ ಕಡಿಮೆ ಮಾಡಬಹುದು. ಪದೇ ಪದೇ ವಿಘ್ನಗಳು ಎದುರಾಗಿ, ಕುಲದೇವರ ಅನುಗ್ರಹವೂ ಕುಂಠಿತವಾಗಬಹುದು ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

Source link

ಮಂಗಳವಾರ ಈ ಕೆಲಸಗಳನ್ನು ಮಾಡಲೇಬೇಡಿ: ಮಾಡಿದ್ರೆ ಸಂಕಷ್ಟ ತಪ್ಪಿದ್ದಲ್ಲ!

ಮಂಗಳವಾರ ಮಂಗಳ ಗ್ರಹದ ದಿನ. ಮಂಗಳ ಗ್ರಹವು ಧರಿತ್ರಿಯ ಮಗ, ಮತ್ತು ಭೂಮಿಯ ಮೇಲೆ ವಾಸಿಸುವವರು ಮಂಗಳ ಗ್ರಹದಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಮಂಗಳ ಗ್ರಹವು ಅಪಘಾತಗಳು, ಘರ್ಷಣೆಗಳು ಮತ್ತು ನಷ್ಟಗಳಿಗೆ ಕಾರಣವಾಗಿದೆ. ಅದಕ್ಕಾಗಿಯೇ ಸಾಮಾನ್ಯವಾಗಿ ಮಂಗಳವಾರದಂದು, ಮಂಗಳ ಗ್ರಹವು ತನ್ನ ಪ್ರಭಾವದಲ್ಲಿರುವಾಗ, ಶುಭ ಕಾರ್ಯಗಳನ್ನು ಕೈಗೊಳ್ಳುವುದಿಲ್ಲ. ಮಂಗಳವಾರದಂದು ಯಾವ ಕೆಲಸಗಳನ್ನೆಲ್ಲ ಮಾಡಬಹುದು? ಯಾವುದನ್ನೆಲ್ಲ ಮಾಡಿದರೆ ತೊಂದರೆ ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತುತಜ್ಞರಾದ ಡಾ. ಬಸವರಾಜ ಗುರೂಜಿ ಇಲ್ಲಿ ತಿಳಿಸಿಕೊಟ್ಟಿದ್ದಾರೆ.

ಮಂಗಳವಾರ ಮಾಡಬಾರದ ಕೆಲಸಗಳು ಯಾವುವು?

  • ಮಂಗಳವಾರ ಉಗುರುಗಳನ್ನು ಕತ್ತರಿಸಬೇಡಿ ಅಥವಾ ಕ್ಷೌರ ಮಾಡಬೇಡಿ.
  • ನೀವು ಮಂಗಳವಾರ ಸಾಲವನ್ನು ನೀಡಿದರೆ, ಆ ಹಣವನ್ನು ಮರಳಿ ಪಡೆಯುವುದು ತುಂಬಾ ಕಷ್ಟ.
  • ನೀವು ಸಾಲವನ್ನು ತೆಗೆದುಕೊಂಡರೆ, ಅದು ಅನೇಕ ದುಃಖಗಳು ಮತ್ತು ಅನಗತ್ಯ ಕೆಲಸಗಳಿಗೆ ಖರ್ಚು ಆಗುತ್ತದೆ ಮತ್ತು ಅದನ್ನು ಮರುಪಾವತಿಸಲು ಸಾಧ್ಯವಾಗದ ಅಪಾಯವಿದೆ.
  • ಮಂಗಳವಾರ ಹೊಸ ಬಟ್ಟೆಗಳನ್ನು ಧರಿಸಬೇಡಿ.
  • ತುರ್ತು ಇಲ್ಲದಿದ್ದರೆ ಮಂಗಳವಾರ ಪ್ರಯಾಣಿಸಬೇಡಿ.
  • ಮಂಗಳವಾರ ಉಪವಾಸ ಮಾಡುವವರು ರಾತ್ರಿಯಲ್ಲಿ ಉಪ್ಪು ಹಾಕಿದ ಆಹಾರವನ್ನು ಸೇವಿಸಬಾರದು.
  • ಮಂಗಳವಾರ ನದಿಯಲ್ಲಿ ಸ್ನಾನ ಮಾಡಬಾರದು.
  • ದೈವಿಕ ಕಾರ್ಯಗಳಿಗಾಗಿ ಯಾವುದೇ ಸಮಯದಲ್ಲಿ ಶೈಕ್ಷಣಿಕ ಮತ್ತು ವೈದ್ಯಕೀಯ ಸಾಲಗಳನ್ನು ನೀಡಬಹುದು.

ಮಂಗಳವಾರ ಮಾಡಬೇಕಾದ ಕೆಲಸಗಳು ಯಾವುವು?

  • ಮಂಗಳವಾರ ಆಂಜನೇಯನನ್ನು ಧ್ಯಾನಿಸುವುದರಿಂದ ಧೈರ್ಯ ಬರುತ್ತದೆ ಮತ್ತು ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ.
  • ಸುಬ್ರಹ್ಮಣ್ಯ ದೇವರನ್ನು ಪೂಜಿಸುವುದರಿಂದ ಮಂಗಳನ ಪ್ರಭಾವದಿಂದ ಉಂಟಾಗುವ ಅಪಾಯಗಳನ್ನು ತಡೆಯಬಹುದು.
  • ಮಂಗಳವಾರ ಕಾಳಿ ದೇವಿಯನ್ನು ಧ್ಯಾನಿಸುವುದರಿಂದ ಶತ್ರುಗಳ ಮೇಲೆ ಜಯ ಸಿಗುತ್ತದೆ.
  • ಮಂಗಳವಾರ ಕೆಂಪು ಬಟ್ಟೆಗಳನ್ನು ಧರಿಸಿ ಮತ್ತು ಕೆಂಪು ಹೂವುಗಳಿಂದ ಬಯಸಿದ ದೇವರನ್ನು ಪ್ರಾರ್ಥಿಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.
  • ಜಾತಕದಲ್ಲಿ ಮಂಗಳನು ​​ಕೆಟ್ಟ ದೃಷ್ಟಿಯಿಂದ ಕಾಣಿಸಿಕೊಂಡರೆ, ಕೆಂಪು ಬಟ್ಟೆಗಳನ್ನು ಧರಿಸಬಾರದು.
  • ಮಂಗಳವಾರ ಸಾಲವನ್ನು ತೀರಿಸಿದರೆ. ಆ ಸಾಲವನ್ನು ಬೇಗನೆ ತೀರಿಸಲಾಗುತ್ತದೆ.
  • ಮಂಗಳವಾರ ನಮ್ಮ ಬ್ಯಾಂಕ್ ಖಾತೆಯಲ್ಲಿ ಬಹಳಷ್ಟು ಹಣವನ್ನು ಠೇವಣಿ ಇಡುವುದರಿಂದ, ಅದು ಬೆಳೆಯುತ್ತದೆ.
  • ಮಂಗಳವಾರ ರಾಹುಕಾಲದಲ್ಲಿ (ಮಧ್ಯಾಹ್ನ 3 ರಿಂದ ಸಂಜೆ 4.30 ರವರೆಗೆ) ದುರ್ಗಾ ದೇವಿ ದರ್ಶನ, ದುರ್ಗಾ ಸ್ತೋತ್ರಗಳನ್ನು ಪಠಿಸುವುದರಿಂದ ಆಧ್ಯಾತ್ಮಿಕ ಶಕ್ತಿ ಹೆಚ್ಚಾಗುತ್ತದೆ.
  • ಹನುಮಂತನನ್ನು ಸಿಂಧೂರದಿಂದ ಪೂಜಿಸುವುದು ಮತ್ತು ಸುಬ್ರಹ್ಮಣ್ಯ ದೇವರಿಗೆ ಹನ್ನೊಂದು ಪ್ರದಕ್ಷಿಣೆ ಹಾಕುವುದರಿಂದ ದೋಷದ ಪರಿಣಾಮಗಳು ಕಡಿಮೆಯಾಗುತ್ತವೆ.

ಜ್ಯೋತಿಷ್ಯ ಸಂಬಂಧಿತ ಮತ್ತಷ್ಟು ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯವಾಗುತ್ತಿಲ್ಲ ಎನ್ನುವುದರಿಂದ ನೀವು ಇಕ್ಕಟ್ಟಿಗೆ ಸಿಲುಕಿಕೊಳ್ಳುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಪ್ರಯಾಣಕ್ಕೆ ಹೆಚ್ಚು ಖರ್ಚು ಮಾಡುವ ಯೋಗ ಇದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ನಿಮ್ಮ ಬದ್ಧತೆಗೆ ಸ್ನೇಹಿತರು- ಸಂಬಂಧಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಇತರರು ತಮ್ಮಿಂದ ಆಗದು ಎಂದು ಅರ್ಧಕ್ಕೇ ನಿಲ್ಲಿಸಿದಂಥ ಪ್ರಾಜೆಕ್ಟ್ ಅನ್ನು ನೀವು ಕೈಗೆತ್ತಿಕೊಂಡು, ಸಮಾಧಾನ ಆಗುವ ಮಟ್ಟಕ್ಕೆ ಪೂರ್ಣ ಮಾಡಲಿದ್ದೀರಿ. ಹಣಕಾಸಿನ ವಿಚಾರವನ್ನು ಆರಂಭದಲ್ಲಿಯೇ ಮಾತನಾಡಿಕೊಳ್ಳುವುದಕ್ಕೆ ದಾಕ್ಷಿಣ್ಯ ಮಾಡಿಕೊಳ್ಳಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸಂಗಾತಿ ಜೊತೆಗೆ ಲಾಂಗ್ ಡ್ರೈವ್ ಗೆ ತೆರಳುವಂಥ ಯೋಗ ಇದೆ. ಇಷ್ಟು ಸಮಯ ನಿಮ್ಮ ಮನಸ್ಸಲ್ಲಿ ಇಟ್ಟುಕೊಂಡು, ಹೇಳದೇ ಇದ್ದಂಥ ಕೆಲವು ವಿಷಯಗಳನ್ನು ಹಂಚಿಕೊಳ್ಳಲಿದ್ದೀರಿ. ಹೊಸ ಕೋರ್ಸ್ ಸೇರಿಕೊಳ್ಳುವುದಕ್ಕೆ ವಿಚಾರಣೆ ನಡೆಸಲಿದ್ದೀರಿ. ವೃತ್ತಿಪರರು ನೀವಾಗಿದ್ದರೆ ನಿಮಗೆ ಗೊತ್ತಿರುವ ಮಾಹಿತಿಯೇ ಇದ್ದರೂ ಅದರ ಬಗ್ಗೆ ಇತರರಿಗೆ ಮಾಹಿತಿ ನೀಡುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಪರಿಶೀಲನೆ ಮಾಡಿಕೊಳ್ಳುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ ಬರಲಾರದು ಎಂದೆನಿಸಿದ್ದನ್ನು ನಿಲ್ಲಿಸಿಬಿಡುವುದು ಒಳ್ಳೆಯದು. ಆಯುರ್ವೇದ ಔಷಧಗಳ ವಿತರಣೆ ಮಾಡುವಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ. ನೀವು ಸಹ ಇಂಥ ಮಾತುಗಳಿಗೆ ಅಲ್ಲಿಂದ ಅಲ್ಲಿಗೆ ಎಂಬಂತೆ ಉತ್ತರವನ್ನು ಸಹ ನೀಡುತ್ತೀರಿ. ದೊಡ್ಡ ಅಳತೆಯ ಸೈಟು ಇರುವವರು ಅದನ್ನು ಮಾರಾಟ ಮಾಡಿ, ಕಟ್ಟಿರುವ ಮನೆ ಖರೀದಿ ಮಾಡುವ ಬಗ್ಗೆ ಆಲೋಚಿಸುತ್ತೀರಿ. ಅದರಲ್ಲೂ ತಿಂಗಳಾ ತಿಂಗಳು ಬಾಡಿಗೆ ರೂಪದಲ್ಲಿ ನಿಗದಿತ ಆದಾಯ ಮಾಡಿಕೊಳ್ಳುವ ಕಡೆಗೆ ಗಮನ ಇರಲಿದೆ.

ಸ್ವಾತಿ ಎನ್​​ಕೆ 

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದಕ್ಕೆ ಹೋಗಬೇಡಿ. ಹೋಟೆಲ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಪ್ರೀತಿಯಲ್ಲಿ ಇರುವವರು ಜೊತೆಯಾಗಿ ಸಮಯವನ್ನು ಕಳೆಯುವಂಥ ಯೋಗ ಇದೆ. ಭವಿಷ್ಯದ ಬಗ್ಗೆ ಗಂಭೀರವಾದ ಚರ್ಚೆ ಸಹ ಮಾಡಲಿದ್ದೀರಿ. ಇಷ್ಟು ಸಮಯ ಮಾತನಾಡದೆ ಉಳಿದು ಹೋಗಿದ್ದ ಕೆಲವು ಸಂಗತಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ಯಾರ ಜತೆಗೂ ಅತಿಯಾದ ಸಲುಗೆ ಬೇಡ. ಇದನ್ನು ಮೀರಿಯೂ ನಡೆದುಕೊಂಡಲ್ಲಿ ಎಚ್ಚರಿಕೆ ಮಾತುಗಳನ್ನು ಕೇಳಿಸಿಕೊಳ್ಳುವಂತೆ, ಮುಜುಗರದ ಸನ್ನಿವೇಶ ಎದುರಿಸುವಂತೆ ಆಗುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

 

Source link