Category Archives: Blog

Your blog category

ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ‌

ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ‌

ಬೇಸಿಗೆ ಕಾಲ (summer) ಆರಂಭವಾಗಿದೆ. ಈ ಋತುವಿನಲ್ಲಿ ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ತಂಪಾಗಿಡಲು, ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಲು ಜನ ಎಳನೀರು, ನೀರು, ಕಲ್ಲಂಗಡಿಯಂತಹ ಕಾಲೋಚಿತ ಹಣ್ಣುಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಸುಡು ಬೇಸಿಗೆಯಲ್ಲಿ ಸೋಂಪು ನೀರನ್ನೂ ಕುಡಿಯಬಹುದು. ಇದು ದೇಹವನ್ನು ತಂಪಾಗಿಸುವುದರ ಜೊತೆಗೆ ಇನ್ನೂ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅವು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬೇಸಿಗೆಯಲ್ಲಿ ಸೋಂಪು ನೀರು ಏಕೆ ಕುಡಿಯಬೇಕು?

ಆಯುರ್ವೇದದ ಪ್ರಕಾರ, ಬೇಸಿಗೆಯಲ್ಲಿ, ದೇಹದಲ್ಲಿ ‘ಪಿತ್ತ ದೋಷ’ ಹೆಚ್ಚಾಗುತ್ತದೆ, ಇದು ಶಾಖ, ಉರಿಯೂತ ಮತ್ತು ಆಮ್ಲೀಯತೆಗೆ ಕಾರಣವಾಗಿದೆ. ಸೋಂಪು ತಂಪಾಗಿಸುವ ಗುಣವನ್ನು ಹೊಂದಿದ್ದಿ, ಇದು ಪಿತ್ತವನ್ನು ಸಮತೋಲನಗೊಳಿಸುತ್ತದೆ.  ಹಾಗಾಗಿ ಸುಡು ಬೇಸಿಗೆಯಲ್ಲಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ನೀರನ್ನು ಕುಡಿಯುವುದರಿಂದ ದೇಹದ ಉಷ್ಣತೆಯನ್ನು ಸಮತೋಲನದಲ್ಲಿರುತ್ತದೆ ಮತ್ತು ಶಾಖದ ಹೊಡೆತದ ಅಪಾಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಎಂತಹದೇ ಉರಿ ಬಿಸಿಲಿನಲ್ಲೂ ದೇಹ ತಂಪಾಗಿರುತ್ತದೆ.

ಸೋಂಪು ನೀರಿನ ಪ್ರಯೋಜನಗಳೇನು?

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ: ಬೇಸಿಗೆಯಲ್ಲಿ ಆಮ್ಲೀಯತೆ, ಅನಿಲ, ಮಲಬದ್ಧತೆ ಮತ್ತು ಹೊಟ್ಟೆ ನೋವು ಮುಂತಾದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸೋಂಪು ನೀರು ಈ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೊಟ್ಟೆಯನ್ನು ಹಗುರವಾಗಿರಿಸುತ್ತದೆ.

ದೇಹವನ್ನು ತಂಪಾಗಿಸುತ್ತದೆ: ಸೋಂಪು ನೈಸರ್ಗಿಕ ತಂಪಾಗಿಸುವ ಗುಣಗಳನ್ನು ಹೊಂದಿದ್ದು, ಇದರ ನೀರನ್ನು ಕುಡಿಯುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮತ್ತು ಇದು ಶಾಖದ ಹೊಡೆತದಿಂದ ದೇಹವನ್ನು ರಕ್ಷಿಸುತ್ತದೆ. ಹಾಗಾಗಿ ಸುಡು ಬೇಸಿಗೆಯಲ್ಲಿ ಹೊರಗೆ ಹೋಗುವ ಮೊದಲು ಸೋಮಪು ನೀರನ್ನು ಕುಡಿಯಿರಿ.

ಜಲಸಂಚಯನ ಒದಗಿಸುತ್ತದೆ: ನೀರಿಗೆ ಸ್ವಲ್ಪ ಸೋಂಪು ಬೀಜಗಳನ್ನು ಸೇರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ, ಅಲ್ಲದೆ ಸೋಂಪು ನೀರು ಜಲಸಂಚಯನವನ್ನು ಉತ್ತೇಜಿಸುತ್ತದೆ. ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು, ಜೀವಕೋಶಗಳ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ದೇಹವನ್ನು ಡಿಟಾಕ್ಸ್ ಮಾಡುತ್ತದೆ: ಸೋಂಪು  ನೀರು  ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಶುದ್ಧೀಕರಿಸುತ್ತದೆ, ಇದರಿಂದಾಗಿ ಸ್ಪಷ್ಟ ಮತ್ತು ಹೊಳೆಯುವ ಚರ್ಮವನ್ನು ನೀವು ಪಡೆಯುವಿರಿ.

ಇದನ್ನೂ ಓದಿ: ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಹಣ್ಣುಗಳನ್ನು ಸೇವನೆ ಮಾಡಲೇಬೇಕು

 ತೂಕ ಇಳಿಕೆಗೂ ಪ್ರಯೋಜನಕಾರಿ: ನೀವು ಬೇಗನೆ ತೂಕ ಇಳಿಸಿಕೊಳ್ಳಲು ಬಯಸಿದರೆ, ಬೇಸಿಗೆಯಲ್ಲಿ ನೀವು ಖಂಡಿತವಾಗಿಯೂ ಸೋಂಪು ನೀರನ್ನು ಕುಡಿಯಬೇಕು. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ನಿಮ್ಮ ಹಸಿವನ್ನು ನಿಯಂತ್ರಿಸುತ್ತದೆ.

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ: ಸೋಂಪು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ ಮತ್ತು ಕೂದಲನ್ನು ಬೇರುಗಳಿಂದ ಬಲಪಡಿಸುತ್ತವೆ.

ಸೋಂಪು ನೀರನ್ನು ಹೇಗೆ ತಯಾರಿಸುವುದು?

ರಾತ್ರಿಯಿಡೀ ಒಂದು ಲೋಟ ನೀರಿನಲ್ಲಿ ಒಂದು ಟೀಚಮಚ ಸೋಂಪು ಬೀಜಗಳನ್ನು ನೆನೆಸಿಡಿ. ಬೆಳಿಗ್ಗೆ ನೀರನ್ನು ಸೋಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಬೇಕಾದರೆ, ನೀವು ಅದನ್ನು ಬಿಸಿ ಮಾಡಬಹುದು. ನೀವು ಅದಕ್ಕೆ ಸ್ವಲ್ಪ ಜೇನುತುಪ್ಪ ಮತ್ತು ನಿಂಬೆಹಣ್ಣನ್ನು ಕೂಡ ಸೇರಿಸಬಹುದು. ಇದಲ್ಲದೆ  ಸೋಂಪು ಕಾಳು ಮತ್ತು ಕಲ್ಲು ಸಕ್ಕರೆಯನ್ನು  ಪುಡಿ ಮಾಡಿ ಇಟ್ಟುಕೊಂಡು ತಣ್ಣೀರಿನಲ್ಲಿ ಬೆರೆಸಿ ಸ್ವಲ್ಪ ನಿಂಬೆ ರಸ ಸೇರಿಸಿ ಕುಡಿಯಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು

ನವದೆಹಲಿ, (ಮಾರ್ಚ್ 09): ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ.

ಮಾರ್ಚ್ 08 (ಭಾನುವಾರ) ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ಪ್ರಯಾಣ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದ್ನು ಕೇಳಿ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಾಣದಂತೆ ಇದ್ದ ಖರ್ಗ್ ದ್ವೀಪದ ಮೇಲೆ ಅಮೆರಿಕದ ಕಣ್ಣು; ಏನದರ ಮಹತ್ವ?

ನವದೆಹಲಿ, ಮಾರ್ಚ್ 9: ಯುದ್ಧದ ತೀವ್ರತೆ ಹೆಚ್ಚುತ್ತಿರುವಂತೆಯೇ ಇರಾನ್ ಅನ್ನು ಕಟ್ಟಿಹಾಕಲು ಅಮೆರಿಕ ವಿವಿಧ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಇರಾನ್​ನ ಹಲವು ಮಿಲಿಟರಿ ಮತ್ತು ಪರಮಾಣು ಸೌಕರ್ಯಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳಿಂದ ಸಾಕಷ್ಟು ದಾಳಿಗಳಾಗಿವೆ. ಈ ಮಧ್ಯೆ ಅಮೆರಿಕ ಹೊಸ ತಂತ್ರ ಹಾಕಿದೆ. ಇರಾನ್​ನ ಆರ್ಥಿಕತೆಯ ಬೆನ್ನೆಲುಬಾಗಿರುವ ಒಂದು ದ್ವೀಪದ ಮೇಲೆ ಟ್ರಂಪ್ ಕಣ್ಣಾಕಿದ್ದಾರೆ. ಅದು ಖರ್ಗ್ ಐಲ್ಯಾಂಡ್ (Kharg Island).

ಖರ್ಗ್ ದ್ವೀಪವು ಇರಾನ್​ನ ಪ್ರಮುಖ ರಫ್ತು ಅಡ್ಡೆ ಎನಿಸಿದೆ. ಈ ದ್ವೀಪವನ್ನು ವಶಕ್ಕೆ ತೆಗೆದುಕೊಳ್ಳಲು ಅಥವಾ ಹಾನಿ ಮಾಡಲು ಅಮೆರಿಕ ಯೋಜಿಸಿದೆ. ಖರ್ಗ್ ದ್ವೀಪವು ಪರ್ಷಿಯನ್ ಕೊಲ್ಲಿಯಲ್ಲಿರುವ ಒಂದು ಪುಟ್ಟ ದ್ವೀಪ. ಇರಾನ್​ನ ಕರಾವಳಿಯಿಂದ ಸುಮಾರು 30 ಕಿಮೀ ದೂರದಲ್ಲಿದೆ. ಇದು ಇರಾನ್​ನ ಪ್ರಮುಖ ಕಚ್ಚಾ ತೈಲ ರಫ್ತಿನ ಟರ್ಮಿನಲ್ ಅಥವಾ ಹಡಗುದಾಣ ಎನಿಸಿದೆ. ಇರಾನ್​ನ ಶೇ. 90ರಷ್ಟು ತೈಲ ರಫ್ತು ಈ ಟರ್ಮಿನಲ್​ನಿಂದಲೇ ಆಗುವುದು. ದಿನಕ್ಕೆ 70 ಲಕ್ಷ ಬ್ಯಾರಲ್ ತೈಲವನ್ನು ಇಲ್ಲಿಂದ ಲೋಡ್ ಮಾಡಿ ಕಳುಹಿಸಬಹುದು.

ಇದನ್ನೂ ಓದಿ: ಆಯತೊಲ್ಲಾ ಅಲಿ ಖಮನೈ ಪುತ್ರನಿಗೆ ಇರಾನ್​​ ಸರ್ವೋಚ್ಚ ನಾಯಕನ ಪಟ್ಟ: ಟ್ರಂಪ್​​ ಮಹತ್ವದ ಎಚ್ಚರಿಕೆ

ಖರ್ಗ್ ದ್ವೀಪಕ್ಕೆ ಅಥವಾ ಅದರಲ್ಲಿರುವ ಆಯಿಲ್ ಎಕ್ಸ್ಪೋರ್ಟ್ ಟರ್ಮಿನಲ್​ಗೆ ಧಕ್ಕೆಯಾದರೆ ಇರಾನ್​ನ ಆರ್ಥಿಕ ಬೆನ್ನೆಲುಬು ಮುರಿದಂತಾಗಬಹುದು. ಆದರೂ ಕೂಡ ದಶಕಗಳಿಂದ ಗಲ್ಫ್​ನಲ್ಲಿ ಯಾವ ಸಂಘರ್ಷ ಏರ್ಪಟ್ಟರೂ ಇರಾನ್​ನಲ್ಲಿರುವ ಖರ್ಗ್ ಐಲ್ಯಾಂಡ್ ಮೇಲೆ ಇದೂವರೆಗೂ ಯಾರೂ ಕೂಡ ದಾಳಿ ಮಾಡಿದ್ದಿಲ್ಲ. ಅದಕ್ಕೆ ಕೆಲ ಸಕಾರಣಗಳಿವೆ.

ಖರ್ಗ್ ಐಲ್ಯಾಂಡ್​ನಿಂದ ಜಗತ್ತಿಗೆ ಸಾಕಷ್ಟು ತೈಲ ಸರಬರಾಜಾಗುತ್ತದೆ. ಇದಕ್ಕೆ ಧಕ್ಕೆಯಾದರೆ ತೈಲಕ್ಕೆ ಹಾಹಾಕಾರ ಶುರುವಾಗಬಹುದು. ಜಗತ್ತಿನ ಶೇ. 40ರಷ್ಟು ತೈಲ ಸಾಗಣೆ ಆಗುವ ಹಾರ್ಮುಜ್ ಜಲಸಂಧಿಗೆ ಬಹಳ ಸಮೀಪದಲ್ಲೇ ಖರ್ಗ್ ಇದೆ. ಇಲ್ಲಿ ಹಾನಿಯಾದರೆ ಹಾರ್ಮುಜ್ ಮಾರ್ಗಕ್ಕೂ ಧಕ್ಕೆಯಾಗಬಹುದು. ಇದರಿಂದ ಜಾಗತಿಕವಾಗಿ ಪರಿಣಾಮಗಳಾಗಬಹುದು. ಈ ಕಾರಣಕ್ಕೆ ಇದೂವರೆಗೂ ಯಾರೂ ಕೂಡ ಖರ್ಗ್ ದ್ವೀಪವನ್ನು ಮುಟ್ಟಿಲ್ಲ. ಈಗ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಖರ್ಗ್ ಮೇಲೆ ಕಣ್ಣಾಕಿವೆ.

ಇದನ್ನೂ ಓದಿ: ಬಹರೇನ್​ನ ಅಮೆರಿಕನ್ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ; 21 ಸೈನಿಕರ ಹತ್ಯೆ

ಇರಾನ್ ಅನ್ನು ಹೇಗಾದರೂ ಸೋಲಿಸಲೇಬೇಕು ಅಥವಾ ನಿಯಂತ್ರಿಸಬೇಕು ಎಂದು ಪಣತೊಟ್ಟಿರುವ ಇಸ್ರೇಲ್ ಮತ್ತು ಅಮೆರಿಕ ದೇಶಗಳಿಗೆ ಈಗ ಖರ್ಗ್ ಐಲ್ಯಾಂಡ್ ಒಂದು ಆಯಕಟ್ಟಿನ ಜಾಗವಾಗಬಹುದು. ಈ ಜಾಗವೇನಾದರೂ ತಮ್ಮ ವಶಕ್ಕೆ ಹೋದರೆ ಇರಾನ್​ನ ತಳಹದಿಯೇ ಅಲುಗಾಡುತ್ತದೆ. ಹೀಗಾಗಿ, ಖರ್ಗ್ ಮೇಲೆ ಎರಗಿ ಹೋಗುವ ಆಲೋಚನೆ ನಡೆದಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ ಗೆಳೆಯ ಮತ್ತು ನಟ ಯುಗಿ ಸೇತು (Yugi Sethu) ಇತ್ತೀಚಿನ ಸಂದರ್ಶನವೊಂದರಲ್ಲಿ ಅಚ್ಚರಿಯ ವಿಷಯ ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಈ ಚಿತ್ರಕ್ಕಾಗಿ ಕಮಲ್ ಹಾಸನ್ ಸುಮಾರು 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

ಕಮಲ್ ಹಾಸನ್ ಅವರ ಸಂಭಾವನೆ ಕುರಿತು ಸ್ವಾರಸ್ಯಕರ ಘಟನೆಯನ್ನು ಯುಗಿ ಸೇತು ಹಂಚಿಕೊಂಡಿದ್ದಾರೆ. ‘ನಾನು ಚಿತ್ರದ ನಿರ್ಮಾಪಕ ಸಿ. ಅಶ್ವಿನಿ ದತ್ ಅವರಿಗೆ ಧನ್ಯವಾದ ಅರ್ಪಿಸುತ್ತಾ, ನನ್ನ ಗೆಳೆಯನನ್ನು ದೇಶದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟನನ್ನಾಗಿ ಮಾಡಿದ್ದೀರಿ ಎಂದು ಹೇಳಿದೆ. ಆಗ ದತ್ ಅವರು ನನ್ನನ್ನು ತಿದ್ದುತ್ತಾ, ಕಮಲ್ ಶೂಟಿಂಗ್ ಮಾಡಿದ್ದು 20 ದಿನಗಳಲ್ಲ, ಕೇವಲ 10 ದಿನಗಳು ಮಾತ್ರ ಎಂದರು. ಅಂದರೆ ಅವರ ಲೆಕ್ಕಾಚಾರದ ಪ್ರಕಾರ, ಕಮಲ್ ಹಾಸನ್ ದಿನಕ್ಕೆ ಸುಮಾರು 2 ಮಿಲಿಯನ್ ಡಾಲರ್ (ಅಂದಾಜು 18 ಕೋಟಿ ರೂಪಾಯಿಗೂ ಹೆಚ್ಚು) ಸಂಭಾವನೆ ಪಡೆದಂತಾಯಿತು’ ಎಂದು ಯುಗಿ ಸೇತು ಹೇಳಿದ್ದಾರೆ.

‘ಕಲ್ಕಿ 2898 AD’ ಚಿತ್ರದಲ್ಲಿ ಕಮಲ್ ಹಾಸನ್ ಅವರು ‘ಸುಪ್ರೀಂ ಯಾಸ್ಕಿನ್’ ಎಂಬ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಭಾಗದಲ್ಲಿ ಅವರ ಸ್ಕ್ರೀನ್ ಟೈಮ್ ಕಡಿಮೆ ಇದ್ದರೂ, ಅವರ ಪಾತ್ರ ಸೃಷ್ಟಿಸಿದ ಇಂಪ್ಯಾಕ್ಟ್ ಮಾತ್ರ ದೊಡ್ಡದಿದೆ. ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಅವರ ಪಾತ್ರದ ಭೀಕರತೆಯು ಎರಡನೇ ಭಾಗದ ಮೇಲೆ ಭಾರಿ ನಿರೀಕ್ಷೆ ಮೂಡಿಸಿದೆ.

ಇದನ್ನು ಕಮಲ್ ಹಾಸನ್ ಅವರ ‘ಸೆಕೆಂಡ್ ಇನ್ನಿಂಗ್ಸ್’ ಎನ್ನಬಹುದು. 2022ರಲ್ಲಿ ತೆರೆಕಂಡ ‘ವಿಕ್ರಮ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ಕಮಲ್ ಹಾಸನ್ ಅವರ ಬೇಡಿಕೆ ಗಗನಕ್ಕೇರಿದೆ. 150 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ‘ವಿಕ್ರಮ್’ ಚಿತ್ರ 400 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿತ್ತು. ‘ಕಲ್ಕಿ’ ಸರಣಿಯ ಮೂಲಕ ಅವರು ಮತ್ತೆ ಭಾರತೀಯ ಚಿತ್ರರಂಗದ ದುಬಾರಿ ನಟನಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ

ಸದ್ಯಕ್ಕೆ ‘ಕಲ್ಕಿ’ ಚಿತ್ರದ ಎರಡನೇ ಭಾಗದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ದಶಕಗಳ ನಂತರ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಹಬ್ಬದಂತಿದೆ. ಯುಗಿ ಸೇತು ಅವರು ಸಂಭಾವನೆ ಬಗ್ಗೆ ಮಾತನಾಡಿದ್ದಕ್ಕೆ ಮುಂದಿನ ದಿನಗಳಲ್ಲಿ ಕಮಲ್ ಹಾಸನ್ ಪ್ರತಿಕ್ರಿಯೆ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ.

ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು ಬಂದು ರಸ್ತೆಯಲ್ಲಿ ಧರಧರನೆ ಎಳೆದಾಡಿ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಈ ವೇಳೆ ದೇವಾಲಯದಲ್ಲಿದ್ದ ಕೆಲವು ಮಹಿಳೆಯರು ಅರ್ಚಕರನ್ನು ಕಾಪಾಡಲು ಮುಂದಾದರು. ಅರ್ಚಕರ ಸುತ್ತಲೂ ಕುಳಿತು ಗುರಾಣಿಯಂತೆ ರಕ್ಷಣೆ ನೀಡಲು ಪ್ರಯತ್ನಿಸಿದರು. ಆದರೆ, ಉದ್ರಿಕ್ತ ಗುಂಪು ಅರ್ಚಕರನ್ನು ಉಳಿಸಲು ಬಂದ ಮಹಿಳೆಯರ ಮೇಲೆ ಕೂಡ ಹಲ್ಲೆ ನಡೆಸಿ, ಅವರನ್ನು ದೂಡಿ ಹಾಕಿ ಅರ್ಚಕನಿಗೆ ಹೊಡೆದಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗುಂಪಿನಿಂದ ಅರ್ಚಕರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಅಡುಗೆ ಮಾಡುವ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ ಕುಚ್: ಗ್ರಾಮಸ್ಥರಿಂದ ಬಿತ್ತು ಗೂಸ

ಗಾಯಗೊಂಡಿರುವ ಅರ್ಚಕರು ಈ ಬಗ್ಗೆ ದೂರು ನೀಡಿದ್ದು, “ತನ್ನನ್ನು ದೇವಾಲಯದಿಂದ ಹೊರಹಾಕಲು ನಡೆದ ಪಿತೂರಿ ಇದಾಗಿದೆ. ರೆಸ್ಟೋರೆಂಟ್‌ವೊಂದರಲ್ಲಿ ನಾನು ಕುಳಿತಿದ್ದ ಹಳೆಯ ಫೋಟೋವನ್ನು ಎಡಿಟ್ ಮಾಡಿ, ಅಲ್ಲಿ ಮಾಂಸಾಹಾರ ಇರುವಂತೆ ಬಿಂಬಿಸಲಾಗಿದೆ” ಎಂದು ಆರೋಪಿಸಿದ್ದಾರೆ. ಪೊಲೀಸರು ವೈರಲ್ ವಿಡಿಯೋ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ

ಬೆಳಗಾವಿ, ಮಾರ್ಚ್​​ 09: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಖತರ್ನಾಕ್​​ ಅಂತಾರಾಜ್ಯ ಕಳ್ಳರ ಗ್ಯಾಂಗ್​​ನ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ಸು ಕಂಡಿದ್ದಾರೆ. ವಾಹನವೊಂದರ ಕಳ್ಳತನ ಪ್ರಕರಣದ ಬೆನ್ನು ಬಿದ್ದ ಖಾಕಿ ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನ ಜಪ್ತಿ ಮಾಡಿದೆ. ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ಆರೋಪಿಗಳಿಗಾಗಿಯೂ ಬಲೆ ಬೀಸಿದೆ.

ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್ ಅಹಮ್ಮದ್ ಬಂಧಿತ ಆರೋಪಿಗಳು. ಇವರು ಕರ್ನಾಟಕ ಮತ್ತು ನೆರೆಯ ಆಂಧ್ರ ಪ್ರದೇಶ, ಮಹಾರಾಷ್ಟ್ರ ಮೂಲದವರು ಎಂಬುದು ಗೊತ್ತಾಗಿದೆ. ಆರೋಪಿಗಳಿಂದ 8 ಮಿನಿ ಗೂಡ್ಸ್​​ ವಾಹನ, ರಾಯಲ್​​ ಎನ್​​ಫೀಲ್ಡ್ ಮತ್ತು ಹೋಂಡಾ ಸೇರಿ ಒಟ್ಟು 8​​ ಬೈಕ್​ಗಳು, 5 ಸ್ಕೂಟರ್​​ಗಳನ್ನು ಜಪ್ತಿ ಮಾಡಲಾಗಿದೆ. ಒಂದು ವಾಹನ ಕಳ್ಳತನವಾಗಿದೆ ಅಂತಾ ಹುಡುಕಾಟ ಶುರು ಮಾಡಿದ್ದ ಪೊಲೀಸರ ಬಲೆಗೆ ದೊಡ್ಡ ತಿಮಿಂಗಲವೇ ಬಿದ್ದಿದೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ಮೂರು ತಿಂಗಳ ಹಿಂದೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಒಂದು ಮಿನಿ ಗೂಡ್ಸ್ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಮಾರಿಹಾಳ ಠಾಣೆ ಪೊಲೀಸರು ತನಿಖೆ ಶುರು ಮಾಡಿದ್ದರು. ಈ ವೇಳೆ ಬೈಕ್ ಮೇಲೆ ಬಂದಿದ್ದ ನಾಲ್ಕು ಜನ ಮಿನಿ ಗೂಡ್ಸ್ ವಾಹನ ಕದ್ದು ಪರಾರಿಯಾಗಿರೋದು ಗೊತ್ತಾಗಿತ್ತು. ಆರೋಪಿಗಳು ಬಂದಿದ್ದ ಬೈಕ್ ನಂಬರ್​​ನ ಮಾಹಿತಿಗಾಗಿ ಪೊಲೀಸರು ಬೆನ್ನುಬಿದ್ದಾಗ ಆ ಬೈಕ್ ಕೂಡ ಕಳ್ಳತನ ಆಗಿರೋದು ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆರೋಪಿಗಳು ಕದ್ದ ವಾಹನಗಳನ್ನೇ ಬಳಸಿಕೊಂಡು ಮತ್ತೊಂದು ವಾಹನ ಕಳ್ಳತನ ಮಾಡುತ್ತಿರುವ ವಿಚಾರ ತಿಳಿದ ಪೊಲೀಸರು, ಸಿಸಿಟಿವಿ ಹಾಗೂ ಟೆಕ್ನಿಕಲ್ ಎವಿಡನ್ಸ್ ಆಧಾರದ ಮೇಲೆ ಕೊನೆಗೂ ಐದು ಜನ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳುವಾಗಿದ್ದ ತಮ್ಮ ವಾಹನಗಳು ಮರಳಿ ಸಿಕ್ಕ ಹಿನ್ನೆಲೆ ಅವುಗಳ ಮಾಲೀಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

Source link

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು ತರಿಸುವ ಈ ವಿಡಿಯೋ ನೋಡಿದ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

Akoma 87.9 FM ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಅಪರಿಚಿತ ವ್ಯಕ್ತಿಯನ್ನು ಕಂಡಾಗ ಆಫ್ರಿಕನ್ ಪುಟಾಣಿ ರಿಯಾಕ್ಷನ್ ಹೇಗಿತ್ತು ಎನ್ನುವುದನ್ನು ಸೆರೆ ಹಿಡಿಯಲಾಗಿದೆ. ಬಿಳಿ ಮಹಿಳೆಯೊಬ್ಬಳು ಆಫ್ರಿಕನ್‌ ಮಕ್ಕಳ ಮುಂದೆ ಬಂತು ನಿಂತಿದ್ದಾಳೆ. ಮೊದಲ ಬಾರಿಗೆ ಬಿಳಿ ಮಹಿಳೆಯನ್ನು ಕಂಡೊಡನೆ ಈ ಪುಟಾಣಿಗಳಿಗೆ ಏನು ಅನಿಸಿತು ತಿಳಿದಿಲ್ಲ.. ಕೆಲ ಮಕ್ಕಳು ಅಳಲು ಶುರು ಮಾಡಿದರೆ, ಇನ್ನು ಕೆಲ ಪುಟಾಣಿಗಳು ಹೆದರಿ ಓಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ತಮಾಷೆಯಾಗಿದೆ ಎಂದಿದ್ದಾರೆ. ಮತ್ತೊಬ್ಬರು, ನನ್ನ ಅಜ್ಜ ಅಜ್ಜಿಯೂ ಹೀಗೆ ಓಡುತ್ತಿದ್ದರು. ಆದರೆ ಈಗ ಆಗಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪಾಪ ಆ ಮಕ್ಕಳು ಎಷ್ಟು ಹೆದರಿಕೊಂಡಿದ್ದಾರೇನೋ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

T20 World Cup Prize Money: ಚಾಂಪಿಯನ್ ಭಾರತಕ್ಕೆ ಸಿಕ್ಕಿದೆಷ್ಟು? ಉಳಿದ 19 ತಂಡಗಳಿಗೂ ಕೋಟಿ ಹಣ

Source link

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.

ಕಾರು ಓಡಿಸುವಾಗ ಅನುರಾಗ್ ದೊಭಾಲ್ ಅವರು ಬಹಳ ಎಮೋಷನಲ್ ಆಗಿದ್ದರು. ತಂದೆ-ತಾಯಿ ಮತ್ತು ಪತ್ನಿಯಿಂದ ತಮಗೆ ಪ್ರೀತಿ ಸಿಕ್ಕಿಲ್ಲ ಎನ್ನುತ್ತಾ ಅವರು ಕಣ್ಣೀರು ಹಾಕಿದರು. ಇದು ಕೊನೆಯ ವ್ಲಾಗ್ ಎಂದು ಕೂಡ ಅವರು ತಮ್ಮ ಅಭಿಮಾನಿಗಳಿಗೆ ತಿಳಿಸಿದರು. ದಯವಿಟ್ಟು ಕಾರು ನಿಲ್ಲಿಸಿ ಮಾತನಾಡಿ ಎಂದು ಅಭಿಮಾನಿಗಳು ಮನವಿ ಮಾಡಿದರೂ ಕೂಡ ಅನುರಾಗ್ ದೊಭಾಲ್ ನಿಲ್ಲಿಸಲೇ ಇಲ್ಲ.

ಬಹುಕಾಲದ ಗೆಳತಿ ರಿತಿಕಾ ಚೌಹಾಣ್ ಜೊತೆ ಅನುರಾಗ್ ದೊಭಾಲ್ ಮದುವೆ ಆಗಿದ್ದರು. ಆದರೆ ಜಾತಿಯ ಕಾರಣದಿಂದ ಅನುರಾಗ್ ಮನೆಯವರು ಈ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ಇದರಿಂದಾಗಿ ಅವರು ಬಹಳ ನೊಂದಿದ್ದರು. ಹಣ ಮತ್ತು ಆಸ್ತಿಯ ಸಂಪೂರ್ಣ ನಿಯಂತ್ರಣವನ್ನು ಅನುರಾಗ್ ಅವರ ತಂದೆ-ತಾಯಿ ಮತ್ತು ಸಹೋದರ ಪಡೆದುಕೊಂಡಿದ್ದರು. ಈ ಎಲ್ಲ ಕಾರಣಗಳಿಂದಾಗಿ ಅವರು ಖಿನ್ನತೆಗೆ ಜಾರಿದ್ದರು.

ಅನುರಾಗ್ ದೊಭಾಲ್ ಅವರು 150 ಕಿಲೋ ಮೀಟರ್ ವೇಗದಲ್ಲಿ ಕಾರು ಓಡಿಸುತ್ತಿದ್ದರು. ಸಾಯಲೇ ಬೇಕು ಎಂಬುದು ಅವರ ನಿರ್ಧಾರ ಆಗಿತ್ತು. ಕಣ್ಣೀರು ಹಾಕುತ್ತಲೇ ಅವರು ತಮ್ಮ ನೋವಿನ ಕಥೆಯನ್ನು ವಿವರಿಸಿದರು. ‘ಮುಂದಿನ ಜನ್ಮದಲ್ಲಿ ನಾನು ಮರಳಿ ಬಂದಾಗ ದಯವಿಟ್ಟು ನನಗೆ ಪ್ರೀತಿ ನೀಡಿ ಅಮ್ಮ.. ನನಗೆ ಪ್ರೀತಿಯ ಅವಶ್ಯಕತೆ ಇತ್ತು’ ಎಂದು ಲೈವ್​​ನಲ್ಲಿ ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗೆ ಬಂತು ಬೆದರಿಕೆ; 10 ಕೋಟಿ ರೂಪಾಯಿಗೆ ಬೇಡಿಕೆ

ಬೇಕಂತಲೇ ಕಾರನ್ನು ಡಿವೈಡರ್​​ಗೆ ಡಿಕ್ಕಿ ಹೊಡೆಸಿದಾಗ 80 ಸಾವಿರ ಜನರು ಲೈವ್ ವಿಡಿಯೋ ವೀಕ್ಷಿಸುತ್ತಿದ್ದರು. ದೆಹಲಿ-ಮೀರತ್ ಹೈವೇನಲ್ಲಿ ಅಪಘಾತ ಸಂಭವಿಸಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಅನುರಾಗ್ ಮ್ಯಾನೇಜರ್ ರೋಹಿತ್ ಪಾಂಡೆ ಅವರು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link