Headlines

ಕಸ್ಟಮರ್ ಮನೆಯಲ್ಲಿ ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್​​: ದೋಚಿದ್ದಿದ್ದು ಬರೋಬ್ಬರಿ 25 ಲಕ್ಷ ಮೌಲ್ಯದ ಬಂಗಾರ!

ಬೆಂಗಳೂರು, ಮಾರ್ಚ್​ 09: ಕಸ್ಟಮರ್ ಮನೆಯಲ್ಲಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೊಚ್ಚಿದ್ದ ಕ್ಯಾಬ್ ಚಾಲಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿಯಾಗಿದ್ದು, ಚಿನ್ನಾಭರಣ ಸಮೇತ ಚಾಲಕನನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೆಬ್ರವರಿ 11 ಶಾಪಿಂಗ್​​ಗೆ ಮುಂಬೈಗೆ ಹೊರಟಿದ್ದ ದಂಪತಿ, ಹೆಬ್ಬಾಳದಿಂದ ಯಶವಂತಪುರಕ್ಕೆ ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ ಸೈಯದ್ ಸಲ್ಮಾನ್ ಪತ್ನಿಗೆ ಮನೆಯಲ್ಲಿ ಚಿನ್ನಾಭರಣ ಇರುವ ಕಪಾಟು ಲಾಕ್ ಮಾಡಿದ್ದೀಯಾ ಎಂದು ಕೇಳಿದ್ದರು. ಮಾರ್ಗ ಮಧ್ಯೆ ಮೂರು ದಿನಗಳ ಕಾಲ ಮನೆಗೆ…

Read More

ಟಿ20 ವಿಶ್ವಕಪ್​ ಗೆದ್ದರೂ ಸೂರ್ಯಕುಮಾರ್ ಯಾದವ್ ‘ಸ್ಥಾನ’ಕ್ಕೆ ಕುತ್ತು!

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ಯಶಸ್ಸಿನೊಂದಿಗೆ ಟೀಮ್ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರೆಯುವುದು ಅನುಮಾನ. ಏಕೆಂದರೆ ಬಿಸಿಸಿಐ 2026ರ ಟಿ20 ವಿಶ್ವಕಪ್​ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೀಗ ಅವರು ವಯಸ್ಸು 35 ವರ್ಷ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು….

Read More

ಮದ್ಯ ನೀತಿ ಪ್ರಕರಣ: ಕೇಜ್ರಿವಾಲ್ ಮತ್ತು ಇತರ 23 ಜನರಿಗೆ ಹೈಕೋರ್ಟ್ ನೋಟಿಸ್

ನವದೆಹಲಿ, ಮಾರ್ಚ್​ 09: ದೆಹಲಿಯ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್(Arvind Kejriwal) ಮತ್ತು ರೌಸ್ ಅವೆನ್ಯೂ ನ್ಯಾಯಾಲಯದಿಂದ ಖುಲಾಸೆಗೊಂಡ ಎಲ್ಲಾ 23 ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯವು ಈಗ ಮಾರ್ಚ್ 16 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ನಿರ್ದೇಶಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ತಡೆಹಿಡಿದಿದೆ. ಸೋಮವಾರ, ಸಿಬಿಐ ಅರ್ಜಿಯ ನಂತರ ಕೇಜ್ರಿವಾಲ್, ಸಿಸೋಡಿಯಾ ಮತ್ತು…

Read More

Iran Israel War: ಯುದ್ಧದ ಪರಿಣಾಮ ಕಾರವಾರ ಬಂದರಿಗೆ ಡಾಂಬರ್ ಸರಬರಾಜು ಬಂದ್; ತಿಂಗಳಿಗೆ 80 ಲಕ್ಷ ರೂ. ನಷ್ಟ!

ಕಾರವಾರ, ಮಾರ್ಚ್​ 09: ಉತ್ತರ ಕನ್ನಡ ಜಿಲ್ಲೆಯ (Uttara Kannada) ಕಾರವಾರದಲ್ಲಿ ಮಧ್ಯಪ್ರಾಚ್ಯ ಯುದ್ಧ ಸಂಘರ್ಷದ ಪರಿಣಾಮ ವಾಣಿಜ್ಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಇರಾನ್‌ನಿಂದ ಕಾರವಾರದ ವಾಣಿಜ್ಯ ಬಂದರಿಗೆ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ತಿಂಗಳಿಗೆ 80 ಲಕ್ಷ ರೂ.ಗಳವರೆಗೂ ನಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. ಡೀಸೆಲ್ ಸರಬರಾಜಿಗೂ ಸಂಕಷ್ಟ ಸಾಮಾನ್ಯವಾಗಿ ಪ್ರತಿ ತಿಂಗಳು ಇರಾನ್‌ನಿಂದ ಕಚ್ಚಾ ಡಾಂಬರ್ ಸಾಗಣೆ ಹಡಗುಗಳು ಕಾರವಾರ ಬಂದರಿಗೆ ಆಗಮಿಸುತ್ತಿದ್ದವು. ಆದರೆ ಯುದ್ಧ ಪರಿಸ್ಥಿತಿಯಿಂದ ಈಗ…

Read More

Video: ಬೆಂಗಳೂರಿನ ಜನ್ರು ತುಂಬಾ ಒಳ್ಳೆಯವ್ರು; ಪ್ರಾಮಾಣಿಕ ಅನುಭವ ಹಂಚಿಕೊಂಡ ಮಹಿಳೆ

ಬೆಂಗಳೂರು, ಮಾರ್ಚ್ 09 : ಬೆಂಗಳೂರು (Bengaluru) ಅಂದ್ರೆ ಯುವಕ ಯುವತಿಯರಿಗೆ ಅದೇನೋ ಸೆಳೆತ, ಹೀಗಾಗಿ ಅದೆಷ್ಟೋ ಯುವಕ ಯುವತಿಯರು ಉದ್ಯೋಗ ಅರಸುತ್ತಾ ಬರುತ್ತಾರೆ. ರಾಜಧಾನಿ ಬೆಂಗಳೂರಿನಲ್ಲಿ ಒಂದು ವರ್ಷ ಕಳೆದ ಬಳಿಕ ತನ್ನ ಪ್ರಯಾಣ ಹಾಗೂ ತನ್ನ ಪ್ರಾಮಾಣಿಕ ಅನುಭವದ ಬಗ್ಗೆ ಮಾತನಾಡಿದ್ದು, ಬೆಂಗಳೂರಿನ ಜನರನ್ನು ಹಾಡಿ ಹೊಗಳಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. atyacreates ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿನಮ್ಮ ಬೆಂಗಳೂರಿನಲ್ಲಿ ಒಂದು…

Read More

ಬಿಕ್ಕಟ್ಟಿನಲ್ಲಿ ಏರಬೇಕಿದ್ದ ಚಿನ್ನದ ಬೆಲೆ ಕಡಿಮೆ ಕಡಿಮೆ ಆಗುತ್ತಿರುವುದು ಯಾಕೆ? ಇಲ್ಲಿವೆ ಇಂಟರೆಸ್ಟಿಂಗ್ ಕಾರಣಗಳು

ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಕಡಿಮೆ ಆಗತೊಡಗಿವೆ. ಸಾಮಾನ್ಯವಾಗಿ ಈ ಅಮೂಲ್ಯ ಲೋಹಗಳನ್ನು ಆಪತ್ಕಾಲದ ಆಸ್ತಿಗಳೆಂದು ಪರಿಗಣಿಸಲಾಗುತ್ತದೆ. ಜಾಗತಿಕ ರಾಜಕೀಯ ಬಿಕ್ಕಟ್ಟು, ಯುದ್ಧ, ಆರ್ಥಿಕ ಹಿಂಜರಿಕೆ ಇತ್ಯಾದಿ ಅನಿಶ್ಚಿತ ಸಂದರ್ಭಗಳು ಎದುರಾದಾಗ ಈ ಲೋಹಗಳ ಬೆಲೆ ಸಹಜವಾಗಿ ಏರಿಕೆ ಆಗುತ್ತದೆ. ಇತ್ತೀಚೆಗೆ ದೊಡ್ಡ ಮಟ್ಟದ ಅನಿಶ್ಚಿತ ಪರಿಸ್ಥಿತಿ ಬಂದೆರಗದೇ ಹೋದರೂ ಒಂದೆರಡು ತಿಂಗಳಲ್ಲೇ ಚಿನ್ನ, ಬೆಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿದ್ದವು. ಈಗ ಇರಾನ್ ಯುದ್ಧದಿಂದ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದರೂ ಚಿನ್ನ,…

Read More

10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ: ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು

ಮಡಿಕೇರಿ, ಮಾರ್ಚ್​​ 09: ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಕಾಡಾನೆಗಳ ಗ್ಯಾಂಗ್​​ ಜನವಸತಿ ಪ್ರದೇಶಗಲಿಗೆ ನುಗ್ಗಿ ಭಯಬೀಳಿಸುತ್ತಿದ್ದರೆ ಇತ್ತ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ(53) ಮೃತ ದುರ್ದೈವಿ. ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ…

Read More

ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

T20 World Cup 2026: ಟಿ20 ವಿಶ್ವಕಪ್​ನ ಆರಂಭದಿಂದಲೂ ಈ ಬಾರಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲ್ಲ ಎಂದು ಭವಿಷ್ಯ ನುಡಿಯುತ್ತಾ ಬಂದಿದ್ದ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮಿರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್​​ ತಲುಪಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು. ಇದಾಗ್ಯೂ ಸೆಮಿಫೈನಲ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮಿರ್ ಖಾಸಗಿ ಚಾನೆಲ್​ನಲ್ಲಿ ಹೇಳಿಕೊಂಡಿದ್ದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್…

Read More

ಜಗತ್ತಿಗೇ ಕಂಟಕವಾಗಲಿದೆ ಇರಾನ್ ಯುದ್ಧ: ಮಾರಕ ಕಾಯಿಲೆ ಹರಡುವ ಭೀತಿ, ಭಾರತಕ್ಕೂ ಇದೆ ಆತಂಕ!

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಕೇವಲ ಆರ್ಥಿಕ ನಷ್ಟವಲ್ಲದೆ, ಭೀಕರ ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ತೈಲ ಬಾವಿಗಳಿಗೆ ಬೆಂಕಿ ಬಿದ್ದಾಗ ಹೊರಹೊಮ್ಮುವ ದಟ್ಟ ಕಪ್ಪು ಹೊಗೆ ನೂರಾರು ಕಿಲೋಮೀಟರ್ ದೂರದವರೆಗೆ ಹರಡಿ ಜನರ ಆರೋಗ್ಯಕ್ಕೆ ಮಾರಕವಾಗಲಿದೆ. ಈ ಹೊಗೆಯಲ್ಲಿರುವ ಕಾರ್ಬನ್ ಮೊನಾಕ್ಸೈಡ್, ಸಲ್ಫರ್ ಡೈಯಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳು ಶ್ವಾಸಕೋಶ ಮತ್ತು ರಕ್ತದ ಮೇಲೆ ನೇರ ಪರಿಣಾಮ ಬೀರುತ್ತವೆ. ಗಾಳಿಯಲ್ಲಿ ಸೇರಿದ ಈ ವಿಷಗಳು ಮಳೆ…

Read More

ತಮಿಳುನಾಡಿನಲ್ಲಿ ಸಿಕ್ತು ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ! ಕೊಲೆಗೆ ಕೊಡಲಾಗಿತ್ತಾ 25 ಲಕ್ಷ ಸುಪಾರಿ?

ಬೆಂಗಳೂರು, ಮಾರ್ಚ್​ 09: ನಗರದ ಆನೇಕಲ್‌ನಲ್ಲಿ (Anekal Kidnap and Murder) ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಹತ್ಯೆಯಾದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ದುಷ್ಕರ್ಮಿಗಳು ಗೋಪಾಲ್ ಅವರ ಕಾರನ್ನು ಅಡ್ಡಗಟ್ಟಿ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಅವರನ್ನು ತಮಿಳುನಾಡಿನ ಡೆಂಕಣಿಕೋಟೆ ಸಮೀಪಕ್ಕೆ ಕರೆದೊಯ್ದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಇಂದು ಡೆಂಕಣಿಕೋಟೆ ಬಳಿ ಗೋಪಾಲ್ ಅವರ ಮೃತದೇಹ ಪತ್ತೆಯಾಗಿದೆ. ನಡೆದಿದ್ದೇನು? ಈ ಹತ್ಯೆ ಪ್ರಕರಣದಲ್ಲಿ ಮೋಹನ್ ಬಾಬು ಎಂಬ ವ್ಯಕ್ತಿ 25…

Read More