ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು.
ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು.
ಮನೆ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಗಳನ್ನು ಸಮನ್ವಯಗೊಳಿಸುವ ಮಹಿಳಾ ಪೊಲೀಸ್ ಸಿಬ್ಬಂದಿ, ಮಹಿಳಾ ದಿನಾಚರಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹೋದ್ಯೋಗಿಗಳೊಂದಿಗೆ ಹರ್ಷಭರಿತ ಕ್ಷಣಗಳನ್ನು ಕಳೆಯುವ ಅವಕಾಶ ಪಡೆದರು.
ಬಾಲ್ಯದಲ್ಲಿ ಕಲಿತಿದ್ದ ರಂಗೋಲಿ ಕಲೆಯನ್ನು ಮತ್ತೆ ಪ್ರದರ್ಶಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಮಹಿಳಾ ಪೊಲೀಸರು ಹೇಳಿದರು. ಸ್ಪರ್ಧೆಯಲ್ಲಿ ವಿವಿಧ ಬಣ್ಣಗಳ ರಂಗೋಲಿಗಳ ಮೂಲಕ ತಮ್ಮ ಸೃಜನಶೀಲತೆಯನ್ನು ತೋರಿಸಿದರು.
ಸ್ಪರ್ಧೆಯಲ್ಲಿ ಮಹಿಳೆಯರ ಬದುಕಿನ ಪಾತ್ರ, ಎದುರಿಸುವ ಸವಾಲುಗಳು ಹಾಗೂ ಸಮಾಜದಲ್ಲಿ ಸಮಾನತೆ ಕುರಿತು ಸಂದೇಶ ನೀಡುವಂತಹ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಯಿತು. ಇದರಿಂದ ಕಾರ್ಯಕ್ರಮಕ್ಕೆ ವಿಶೇಷ ಅರ್ಥಪೂರ್ಣತೆ ಮೂಡಿತು.
ಹೆಣ್ಣು ಮಕ್ಕಳಿಗೆ ಜನನದಿಂದಲೇ ಸಮಾನ ಅವಕಾಶ ನೀಡಬೇಕು, ತಾರತಮ್ಯವನ್ನು ತೊರೆಯಬೇಕು ಎಂಬ ಸಾಮಾಜಿಕ ಸಂದೇಶವನ್ನು ಮಹಿಳಾ ಪೊಲೀಸರು ತಮ್ಮ ರಂಗೋಲಿ ವಿನ್ಯಾಸಗಳ ಮೂಲಕ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂತೋಷ ವ್ಯಕ್ತಪಡಿಸಿದರು.
ಖಾಂಡ್ವಾ, ಮಾರ್ಚ್ 08: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತನ್ನ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ಮಹಿಳೆ ಒಬ್ಬಂಟಿಯಾಗಿದ್ದಾಗ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಮಹಿಳೆ ಮರುದಿನ ಬೆಳಗ್ಗೆ ಬೇರೆ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ. ನಂತರ ಅವರು ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆಸ್ಪತ್ರೆ ಸಿಬ್ಬಂದಿ ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರನ್ನು ಸಂಪರ್ಕಿಸಲು ಸಲಹೆ ನೀಡಿದ್ದಾರೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ಪಿಟಿಐಗೆ ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ, ಪೊಲೀಸರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ರೈ ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿಯೂ ಪೊಲೀಸರು ಘೋಷಿಸಿದ್ದಾರೆ ಎಂದು ಅವರು ಹೇಳಿದರು.
ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ (The Kerala Story 2 Collection) ಆಗಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸೂಚನೆ ಸಿಕ್ಕಿದೆ.
2023ರಲ್ಲಿ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ದಿ ಕೇರಳ ಸ್ಟೋರಿ 2’ ಈಗ ರಿಲೀಸ್ ಆಗಿದೆ. ಈ ಚಿತ್ರಕ್ಕೆ ವಿಪುಲ್ ಅಮೃತ್ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಆದಾಗ ವಿವಾದ ಶುರುವಾಗಿತ್ತು. ಚಿತ್ರದ ವಿರುದ್ಧ ಅನೇಕರು ಕೋರ್ಟ್ ಮೆಟ್ಟಿಲು ಏರಿದ್ದರು.
ಮೊದಲ ದಿನ ಕೆಲವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದರಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅಂದು ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು. ಎರಡನೇ ದಿನ 4.65 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನ 4.74 ಕೋಟಿ ರೂಪಾಯಿ ಆಯಿತು. ಆದರೆ ಮೊದಲ ಸೋಮವಾರ ಬರುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್ ಮತ್ತೆ ಕುಸಿಯುತು.
2ನೇ ವೀಕೆಂಡ್ನಲ್ಲಿ ಕಲೆಕ್ಷನ್ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಿಲ್ಲ. 2ನೇ ಶನಿವಾರ ಅಂದಾಜು 3.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಎಷ್ಟೇ ಪ್ರಚಾರ ಸಿಕ್ಕಿದ್ದರೂ ಒಂದು ದಿನ ಕೂಡ ಈ ಸಿನಿಮಾದ ಕಲೆಕ್ಷನ್ 5 ಕೋಟಿ ರೂಪಾಯಿ ದಾಟಲು ಸಾಧ್ಯವಾಗಿಲ್ಲ. ತೆವಳುತ್ತಾ ಸಾಗುತ್ತಿರುವ ಈ ಸಿನಿಮಾಗೆ ಈವರೆಗೂ ಒಟ್ಟು 30 ಕೋಟಿ ರೂಪಾಯಿ ಆದಾಯ ಬಂದಿದೆ.
ಈ ಸಿನಿಮಾದಿಂದ ಕೇರಳದ ಪ್ರತಿಷ್ಠೆಗೆ ಧಕ್ಕೆ ಆಗಿದೆ ಎಂಬ ಕಾರಣಕ್ಕೆ ಶೀರ್ಷಿಕೆಯನ್ನು ವಿರೋಧಿಸಲಾಗಿದೆ. ಕೇರಳದಲ್ಲಿ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕಾಗಿ ಜನರು ಕಾದಿದ್ದಾರೆ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾ ಹೇಳ ಹೆಸರಿಲ್ಲದಂತೆ ಅಖಾಡದಿಂದ ಹೊರಬೀಳುವುದು ಖಚಿತ.
ಬೆಂಗಳೂರು, ಮಾರ್ಚ್ 8: ಚಿನ್ನದ ಬೆಲೆಯಲ್ಲಿ (Gold Rates) ತುಸು ಏರಿಳಿತವಾಗುತ್ತಿದೆ. ಈ ವಾರ ಮೊದಲ ಐದು ದಿನ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ 230 ರೂಗಳಷ್ಟು ಜಿಗಿದಿದೆ. ಆಭರಣ ಚಿನ್ನದ ಬೆಲೆ 15,000 ರೂ ಮುಟ್ಟಿದೆ. ವಿದೇಶಗಳಲ್ಲೂ ಇದೇ ರೀತಿ ಚಿನ್ನದ ಬೆಲೆಯಲ್ಲಿ ಏರಿಳಿತಗಳಾಗಿವೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿಸಿದೆ. ಇಸ್ರೇಲ್ ಇರಾನ್ ಯುದ್ಧ, ತೈಲ ಬಿಕ್ಕಟ್ಟು ಚಿನ್ನ, ಬೆಳ್ಳಿ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿದಂತೆ ತೋರುತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,50,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,63,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,50,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,364 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,000 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,273 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,364 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,000 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಕೊಪ್ಪಳ, ಮಾರ್ಚ್ 08: ಜಿಲ್ಲೆಯ ಹಲವೆಡೆ ಬೇಸಿಗೆಯಲ್ಲೂ ಕಾಶ್ಮೀರವನ್ನು ನೆನಪಿಸುವಂತಹ ದಟ್ಟ ಮಂಜು ಕಂಡುಬಂದಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ 36 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕೊಪ್ಪಳದಲ್ಲಿ, ಕಂಡುಬಂದ ಚಳಿಯ ವಾತಾವರಣ ಜನರಿಗೆ ಮುದ ನೀಡಿದೆ. ಬೆಳಗ್ಗೆ ಗವಿಮಠದ ಪ್ರದೇಶಕ್ಕೆ ವಾಕಿಂಗ್ ಬಂದ ಜನರು ಮಂಜು ಮುಸುಕಿದ ವಾತಾವರಣದಲ್ಲಿಯೇ ಹೆಜ್ಜೆ ಹಾಕಿದ್ದು, ದಟ್ಟ ಮಂಜಿನಿಂದಾಗಿ ರಸ್ತೆಗಳು ಕಾಣದೆ ವಾಹನ ಸವಾರರು ಪರದಾಡಿದ ಪ್ರಸಂಗವೂ ವರದಿಯಾಗಿದೆ.
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಿಚ್ ರೆಡಿಯಾಗಿದೆ. ಅದು ಸಹ 70% ಕೆಂಪು ಮಣ್ಣು ಮತ್ತು 30% ಕಪ್ಪು ಮಣ್ಣಿನಿಂದ ಕೂಡಿದ ಪಿಚ್ ಎಂಬುದು ವಿಶೇಷ. ಅಂದರೆ ಈ ಬಾರಿ ಮಿಶ್ರ ಮಣ್ಣಿನ ಪಿಚ್ನಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಇದೀಗ ಮಿಶ್ರಿತ ಮಣ್ಣಿನ ಪಿಚ್ ಸಿದ್ಧವಾಗಿದ್ದು, ಈ ಪಿಚ್ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ.
ಮಿಶ್ರ ಮಣ್ಣಿನ ಪಿಚ್: ಈ ಪಂದ್ಯಕ್ಕಾಗಿ ಅಹಮದಾಬಾದ್ನ ಮೈದಾನದ 6ನೇ ಪಿಚ್ ಅನ್ನು ಬಳಸಲಾಗುತ್ತಿದೆ. ಈ ಪಿಚ್ ಅನ್ನು ಕೆಂಪು ಮತ್ತು ಕಪ್ಪು ಮಣ್ಣಿನ ಮಿಶ್ರಣದಿಂದ (70% ಕೆಂಪು ಮತ್ತು 30% ಕಪ್ಪು ಮಣ್ಣು) ನಿರ್ಮಿಸಲಾಗಿದೆ.
ವೇಗ ಮತ್ತು ಬೌನ್ಸ್: ಈ ಪಿಚ್ನಲ್ಲಿ ಶೇ.70 ರಷ್ಟು ಕೆಂಪು ಮಣ್ಣು ಇರುವುದರಿಂದ ಪಿಚ್ ಗಟ್ಟಿಯಾಗಿರುತ್ತದೆ. ಇದರಿಂದ ಚೆಂಡು ವೇಗವಾಗಿ ಮತ್ತು ನಿಖರವಾದ ಬೌನ್ಸ್ನೊಂದಿಗೆ ಬ್ಯಾಟ್ಗೆ ಬರುತ್ತದೆ. ಇದು ಬ್ಯಾಟರ್ಗಳಿಗೆ ಶಾಟ್ಗಳನ್ನು ಆಡಲು ತುಂಬಾ ಸುಲಭ ಮಾಡಿಕೊಡುತ್ತದೆ.
ಬ್ಯಾಟಿಂಗ್ ಸ್ವರ್ಗ: ಈ ಪಿಚ್ ಸಂಪೂರ್ಣವಾಗಿ ಬ್ಯಾಟಿಂಗ್ಗೆ ಪೂರಕವಾಗಿದ್ದು, ಮುಂಬೈನ ವಾಂಖೆಡೆ ಕ್ರೀಡಾಂಗಣದಂತೆ ಹೈ-ಸ್ಕೋರಿಂಗ್ ಪಂದ್ಯ ನಿರೀಕ್ಷಿಸಲಾಗಿದೆ.
ಪಿಚ್ ಸ್ಥಿರತೆ: ಈ ಪಿಚ್ನಲ್ಲಿ ಶೇ.30 ರಷ್ಟು ಕಪ್ಪು ಮಣ್ಣು ಬಳಸಿರುವುದರಿಂದ ಪಿಚ್ ಬೇಗನೆ ಬಿರುಕು ಬಿಡುವುದಿಲ್ಲ. ಇದು ಪಂದ್ಯದ ಉದ್ದಕ್ಕೂ ಪಿಚ್ ಒಂದೇ ಸಮನಾಗಿ ಇರುವಂತೆ ನೋಡಿಕೊಳ್ಳುತ್ತದೆ, ಇದರಿಂದ ಬ್ಯಾಟಿಂಗ್ ಮಾಡುವುದು ಎರಡೂ ಇನ್ನಿಂಗ್ಸ್ಗಳಲ್ಲಿ ಸುಲಭವಾಗುತ್ತದೆ.
ವೇಗದ ಬೌಲರ್ಗಳಿಗೆ ಸಹಕಾರಿ: ಕೆಂಪು ಮಣ್ಣಿನ ಕಾರಣದಿಂದಾಗಿ ಆರಂಭಿಕ ಓವರ್ಗಳಲ್ಲಿ ವೇಗದ ಬೌಲರ್ಗಳಿಗೆ ಉತ್ತಮ ಸ್ವಿಂಗ್ ಮತ್ತು ಕ್ಯಾರಿ ಸಿಗಲಿದೆ.
ಸ್ಪಿನ್ನರ್ಗಳಿಗೆ ಸವಾಲು: ಈ ರೀತಿಯ ಮಿಶ್ರಿತ ಪಿಚ್ಗಳಲ್ಲಿ ಚೆಂಡು ಹೆಚ್ಚು ಸ್ಪಿನ್ ಆಗುವುದಿಲ್ಲ. ಹಾಗಾಗಿ ಸ್ಪಿನ್ನರ್ಗಳು ವಿಕೆಟ್ ಪಡೆಯಲು ಹೆಚ್ಚು ಶ್ರಮಪಡಬೇಕಾಗುತ್ತದೆ.
ಹೈ-ಸ್ಕೋರಿಂಗ್ ಪಂದ್ಯ: ಫೈನಲ್ ಪಂದ್ಯಕ್ಕೆ ಬ್ಯಾಟ್ಸ್ಮನ್ಗಳಿಗೆ ಸಹಕಾರಿಯಾಗುವಂತಹ ಪಿಚ್ ಅನ್ನೇ ನಿರ್ಮಿಸಲಾಗಿದೆ. ಹೀಗಾಗಿ ಈ ಮ್ಯಾಚ್ನಲ್ಲಿ ರನ್ ಮಳೆ ನಿರೀಕ್ಷಿಸಬಹುದು. ಅದರಲ್ಳೂ 200+ ಸ್ಕೋರ್ ಗಳಿಸುವುದು ಇಲ್ಲಿ ಕಷ್ಟವೇನಲ್ಲ.
ಟಾಸ್ ನಿರ್ಣಾಯಕ: ಇಬ್ಬನಿಯ ಪ್ರಭಾವದಿಂದಾಗಿ ಟಾಸ್ ಗೆದ್ದ ತಂಡವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಹಿಂದಿನ ದಾಖಲೆ: ಅಹಮದಾಬಾದ್ನಲ್ಲಿ ಆಡಲಾದ ಕೊನೆಯ ಪಂದ್ಯದಲ್ಲಿ ಕೆನಡಾ ವಿರುದ್ಧ ಸೌತ್ ಆಫ್ರಿಕಾ 213 ರನ್ ಗಳನ್ನು ಕಲೆಹಾಕಿದ್ದರು. ಹೀಗಾಗಿ ಮಿಶ್ರಿತ ಮಣ್ಣಿನ ಪಿಚ್ನಲ್ಲಿ ಈ ಬಾರಿ ಕೂಡ ಬೃಹತ್ ಸ್ಕೋರ್ ನಿರೀಕ್ಷಿಸಬಹುದು.
ಸೋಲಿನ ಪಾಠ: 2023ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಬಳಸಿದ ನಿಧಾನಗತಿಯ ಕಪ್ಪು ಮಣ್ಣಿನ ಪಿಚ್ಗಿಂತ ಇದು ಭಿನ್ನವಾಗಿದೆ. ಭಾರತೀಯ ಬ್ಯಾಟರ್ಗಳ ಆಕ್ರಮಣಕಾರಿ ಆಟಕ್ಕೆ ಪೂರಕವಾಗಲೆಂದೇ ಈ ಬಾರಿ ಕೆಂಪು ಮಣ್ಣಿನ ಮಿಶ್ರಣವನ್ನು ಬಳಸಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ಆಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.
ಬೆಂಗಳೂರು, ಮಾರ್ಚ್ 08:ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಭರದಿಂದ ನಡೆದಿದ್ದು, ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 369 ವಾರ್ಡ್ಗಳಿಗೆ ನಗರಾಭಿವೃದ್ದಿ ಇಲಾಖೆ ಮೀಸಲಾತಿ ಅಂತಿಮಗೊಳಿಸಿದ್ದು, ಈ ಪೈಕಿ 176 ವಾರ್ಡ್ಗಳು ಮಹಿಳೆಯರಿಗೆ ಮೀಸಲಾಗಿವೆ. ಕರಡು ಪಟ್ಟಿಗೆ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಸಲಹೆ ಮತ್ತು ಸೂಚನೆಗಳ ಜೊತೆಗೆ ಸರ್ಕಾರದ ಜೊತೆಗೂ ಕೆಲ ವಿಚಾರಗಳನ್ನು ಚರ್ಚಿಸಿ, ಸೂಕ್ತವಾದವುಗಳನ್ನು ಆಯ್ದುಕೊಂಡು ಈ ಅಂತಿಮ ಮೀಸಲಾತಿಯನ್ನು ನಿಗದಿ ಮಾಡಲಾಗಿದೆ.
ದಾವಣಗೆರೆ, ಮಾರ್ಚ್ 08: ಹಿಮೋಫಿಲಿಯಾ ಎಂಬ ವಿರಳ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಲಭ್ಯವಾಗಿದೆ. ಸುಮಾರು 57 ಸಾವಿರ ರೂ. ಮೌಲ್ಯದ ಎಮಿಸಿಜುಮ್ಯಾಬ್ (ಹೆಮ್ಲಿಬ್ರಾ) ಎಂಬ ಇಂಜೆಕ್ಷನ್ ಅನ್ನು ಇದೀಗ ಉಚಿತವಾಗಿ ನೀಡಲಾಗುತ್ತಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ಡಾ. ನಾಗೇಂದ್ರಪ್ಪ ಈ ಯೋಜನೆಗೆ ಚಾಲನೆ ನೀಡಿದರು. ರಕ್ತ ಹೆಪ್ಪುಗಟ್ಟದ ಸಮಸ್ಯೆಯಿಂದ ಗಾಯವಾದಾಗ ಮಾತ್ರ ಚಿಕಿತ್ಸೆ ನೀಡುತ್ತಿದ್ದ ಹಿಂದಿನ ವ್ಯವಸ್ಥೆಗೆ ಬದಲಾಗಿ, ಇದೀಗ ಗಾಯವಾಗುವ ಮೊದಲುಲೇ ತಿಂಗಳಿಗೆ ಒಮ್ಮೆ ಈ ಇಂಜೆಕ್ಷನ್ ನೀಡಲಾಗುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ಸುಧಾರಿಸಿ ಅನಾವಶ್ಯಕ ರಕ್ತಸ್ರಾವವನ್ನು ತಡೆಯಲು ಸಹಾಯ ಮಾಡುತ್ತದೆ. ಹಿಮೋಫಿಲಿಯಾ ರೋಗಿಗಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟಾಗುವ ಅಪಾಯವನ್ನು ಕಡಿಮೆ ಮಾಡುವಲ್ಲಿ ಈ ಕ್ರಮ ಮಹತ್ವದ್ದಾಗಿದೆ. ಹಲವು ವರ್ಷಗಳ ಹೋರಾಟದ ನಂತರ ಸರ್ಕಾರದ ಈ ನಿರ್ಧಾರಕ್ಕೆ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಭಾವುಕರಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮಾರ್ಚ್ 08: ಮೈತ್ರಿ ಪಕ್ಷಗಳಾಗಿರು ಬಿಜೆಪಿಮತ್ತು ಜೆಡಿಎಸ್ ನಡುವೆ ಹಲವು ವಿಚಾರಗಳಲ್ಲಿ ಸಾಬೀತಾಗಿದ್ದ ಸಮನ್ವಯದ ಕೊರತೆ ಮತ್ತೆ ಸದ್ದು ಮಾಡಿದೆ. ನಿನ್ನೆ ಬಜೆಟ್ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟದ ವಿಚಾರದಲ್ಲೂ ಉಭಯ ಪಕ್ಷಗಳ ನಾಯಕರ ನಡುವೆ ಒಮ್ಮತ ಇರಲಿಲ್ಲ. ಬಿಜೆಪಿ ಪ್ರತ್ಯೇಕವಾಗಿ ಹೋರಾಟ ನಡೆಸಿರುವ ಬಗ್ಗೆ ಜೆಡಿಎಸ್ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಬಜೆಟ್ ಖಂಡಿಸಿ ನಿನ್ನೆ ವಿಧಾನಸೌಧದಲ್ಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ನಡೆಸಿದ್ದರೆ, ಸರ್ಕಾರದ ವಿರುದ್ಧದ ಹೋರಾಟದ ಬಗ್ಗೆ ಬಿಜೆಪಿ ನಾಯಕರು ಯಾವುದೇ ಮಾಹಿತಿ ನೀಡಲಿಲ್ಲ. ಎಲ್ಲವನ್ನೂ ಪ್ಲ್ಯಾನ್ ಮಾಡಿ ಕೊನೆ ಕ್ಷಣದಲ್ಲಿ ಹೋರಾಟಕ್ಕೆ ಬನ್ನಿ ಎಂದು ನಾಮಕವಸ್ಥೆಗೆ ಕರೆಯುತ್ತಾರೆ. ಹೀಗಾಗಿ ನಾವು ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಜೆಡಿಎಸ್ ನಾಯಕರಿಗೆ ದಳ ಶಾಸಕರು ದೂರು ನೀಡಿದ್ದಾರೆ. ಬಳಿಕ ಬಿಜೆಪಿ ಹೋರಾಟದಿಂದ ಅಂತರ ಕಾಯ್ದುಕೊಂಡ ಪ್ರಸಂಗ ನಡೆದಿದೆ.
ಮೈತ್ರಿ ನಾಯಕರ ಮುನಿಸಿನ ನಡುವೆ ಚರ್ಚೆ ಶಾಸಕ ಶರಣಗೌಡ ಕಂದಕೂರು ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿದ್ರೆ 140-150 ಸ್ಥಾನ ಬರುತ್ತೆ. ಮೈತ್ರಿ ಇದ್ದರೂ ಇಲ್ಲದಿದ್ದರೂ ನಮ್ಮ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದು ಹೇಳಿದ್ದಾರೆ. ಅಲ್ಲದೆ ಬಿಜೆಪಿಯವರು ನಿಮ್ಮ ಪಕ್ಷದ ಸಿಎಂ ಅಭ್ಯರ್ಥಿ ಯಾರು ಎಂದು ಹೇಳಿ. ನಮ್ಮದು ಒಂದು ಸೈಡ್ ಲವ್ ಆಗಿದೆ. ನಾವು BJPಯವರನ್ನು ಪ್ರೀತಿಸುತ್ತೇವೆ, ಆದರೆ ಅವರು ನಮ್ಮನ್ನ ಪ್ರೀತಿಸ್ತಿಲ್ಲ. ಸಮನ್ವಯತೆಯಿಂದ ಹೋಗಿದ್ದಕ್ಕೆ MP ಚುನಾವಣೆಯಲ್ಲಿ 19 ಸ್ಥಾನ ಗೆದ್ವಿ ಎಂದು ಹೇಳಿದ್ದಾರೆ.
ಇನ್ನು ಅಧಿವೇಶನದ ವೇಳೆ ಸಮನ್ವಯ ಸಭೆ ಮಾಡಿಕೊಂಡು ಬರುತ್ತಿದ್ದೆವು. ಆದರೆ ನಿನ್ನೆಬಿಜೆಪಿ ಕಡೆಯಿಂದ ಸಮನ್ವಯ ಸಭೆ ಮಾಡುವ ಬಗ್ಗೆ ಏನೂ ಬಂದಿಲ್ಲ. ಅರ್ಧ ಗಂಟೆ ಮುಂಚಿತವಾಗಿ ಪ್ರತಿಭಟನೆ ಮಾಡುವುದಾಗಿ ಹೇಳಿದ್ರು. ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ನಮ್ಮ ಮೇಲೆ ಪ್ರೀತಿ, ಒಲವು ಇದೆ. ಕೆಲ ಬಿಜೆಪಿ ನಾಯಕರಿಂದ ಅವರೇ ಚಿವುಟಿ, ತೊಟ್ಟಿಲು ತೂಗುವಂತ ಕೆಲಸ ಆಗುತ್ತಿದೆ. ಕುಮಾರಸ್ವಾಮಿ ಸಿಎಂ ಆಗಲಿ ಎಂದು ರಾಜ್ಯದ ಜನ ಬಯಸುತ್ತಿದ್ದಾರೆ. ಅವರನ್ನು ನೋಡಿ ನಮ್ಮ ಪಕ್ಷಕ್ಕೆ ಮತ ಹಾಕುತ್ತಾರೆ. ಸಿಎಂ ಬಗ್ಗೆ ಮೋದಿ ತೀರ್ಮಾನ ಮಾಡ್ತಾರೆಂದು ದೇವೇಗೌಡರು ಹೇಳಿದ್ದಾರೆ. ಆದರೆ ನಾವು ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳುತ್ತೇವೆ. ಸಿಎಂ ಅಭ್ಯರ್ಥಿ ಬಗ್ಗೆ ಸರ್ವೆ ಮಾಡಿಸಿ ಬಿಜೆಪಿಯವರು ತೀರ್ಮಾನಿಸಲಿ ಎಂದು ಶಾಸಕ ಶರಣಗೌಡ ಕಂದಕೂರು ತಿಳಿಸಿದ್ದಾರೆ.
ಇದು 2026ರ ಮಾರ್ಚ್ ನ ಎರಡನೇ ವಾರ. ಕೆಲವು ಗ್ರಹಗಳ ಸಣ್ಣ ಸ್ಥಾನ ಬದಲಾವಣೆಯಿಂದ ಹಾಗೂ ಶುಕ್ರನ ರಾಶಿ ಪರಿವರ್ತನೆಯಿಂದ ಅನೇಕ ಶುಭಗಳು ನಮ್ಮದಾಗಲಿದೆ. ಒತ್ತಡದ ಸ್ಥಿತಿಗಳನ್ನು ನಿರ್ಮಾಣ ಮಾಡಿಕೊಳ್ಳದೇ ಇರುವವಂತೆ ನೋಡಿಕೊಳ್ಳಿ.
ಮೇಷ:
ಈ ವಾರ ನಿಮಗೆ ಮಿಶ್ರಫಲ. ವೃತ್ತಿಯಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗಬಹುದು, ಆದರೆ ಧೈರ್ಯಗೆಡಬೇಡಿ. ಆರ್ಥಿಕವಾಗಿ ಸಾಧಾರಣ ಸುಧಾರಣೆ ಕಂಡುಬರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಸ್ನೇಹಿತರ ಬೆಂಬಲ ಸಿಗಲಿದೆ. ಕೋಪ ನಿಯಂತ್ರಿಸುವುದು ಉತ್ತಮ.
ವೃಷಭ:
ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಬರಬೇಕಾದ ಬಾಕಿ ಹಣ ಕೈಸೇರಲಿದೆ. ಭೂಮಿ ಅಥವಾ ವಾಹನ ಖರೀದಿಯ ಚಿಂತನೆ ನಡೆಸುವಿರಿ. ಆರೋಗ್ಯ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸಮಯ ಕಳೆಯಲು ಇದು ಸಕಾಲ.
ಮಿಥುನ:
ಕೆಲಸದ ಒತ್ತಡ ಹೆಚ್ಚಾಗಬಹುದು, ಸಂಘಟಿತರಾಗಿರುವುದು ಮುಖ್ಯ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಶತ್ರುಗಳ ಬಗ್ಗೆ ಜಾಗರೂಕರಾಗಿರಿ. ವಿದೇಶ ಪ್ರಯಾಣದ ಯೋಗವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವ ನಿರೀಕ್ಷೆಯಿದೆ.
ಕರ್ಕಾಟಕ:
ಹೊಸ ಕಾರ್ಯಗಳನ್ನು ಪ್ರಾರಂಭಿಸಲು ಇದು ಶುಭ ಸಮಯ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕ ಲಾಭದ ಸಾಧ್ಯತೆ ಇದೆ. ಪ್ರೇಮ ಜೀವನದಲ್ಲಿ ಮಧುರತೆ ಇರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಸಾಮಾಜಿಕ ಗೌರವ ಹೆಚ್ಚಾಗುತ್ತದೆ. ನಿಮ್ಮ ಮಾತಿನ ಮೇಲೆ ಹತೋಟಿ ಇರಲಿ.
ಸಿಂಹ:
ವ್ಯವಹಾರದಲ್ಲಿ ಸ್ವಲ್ಪ ಏರಿಳಿತಗಳಿರಬಹುದು, ಎಚ್ಚರಿಕೆ ಅಗತ್ಯ. ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಮಕ್ಕಳ ಪ್ರಗತಿಯಿಂದ ನೆಮ್ಮದಿ ಸಿಗಲಿದೆ. ದೂರದ ಪ್ರಯಾಣವನ್ನು ಸದ್ಯಕ್ಕೆ ಮುಂದೂಡುವುದು ಉತ್ತಮ. ಹೂಡಿಕೆಯ ವಿಷಯದಲ್ಲಿ ತಜ್ಞರ ಸಲಹೆ ಪಡೆಯಿರಿ.
ಕನ್ಯಾ:
ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸಂಭವವಿದೆ. ಆಹಾರದ ವಿಚಾರದಲ್ಲಿ ಜಾಗ್ರತೆ ಇರಲಿ. ಆರ್ಥಿಕ ಪರಿಸ್ಥಿತಿ ಸದೃಢವಾಗಿರುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಿರಿಯರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ.
ತುಲಾ:
ಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ಸಂಗಾತಿಯ ಬೆಂಬಲದಿಂದ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಹೂಡಿಕೆಯಿಂದ ಲಾಭವಾಗಲಿದೆ. ಹೊಸ ವ್ಯಕ್ತಿಗಳ ಪರಿಚಯ ವೃತ್ತಿಜೀವನಕ್ಕೆ ಸಹಕಾರಿ. ಕಣ್ಣಿನ ಸಮಸ್ಯೆ ಕಾಡಬಹುದು, ನಿರ್ಲಕ್ಷಿಸಬೇಡಿ. ಸಾಲ ನೀಡುವ ಮುನ್ನ ಆಲೋಚಿಸಿ. ಮನಸ್ಸಿಗೆ ಶಾಂತಿ ದೊರೆಯುವ ವಾರವಿದು.
ವೃಶ್ಚಿಕ:
ಈ ವಾರ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿವೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಸಾಲಬಾಧೆಯಿಂದ ಮುಕ್ತಿ ಪಡೆಯಲು ಹಾದಿ ಸುಗಮವಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ದೈವಿಕ ಚಿಂತನೆಯಿಂದ ಮಾನಸಿಕ ಧೈರ್ಯ ಹೆಚ್ಚಲಿದೆ.
ಧನು:
ಅದೃಷ್ಟ ನಿಮ್ಮ ಪರವಾಗಿದ್ದು, ಸ್ಥಗಿತಗೊಂಡ ಕೆಲಸಗಳು ಪುನರಾರಂಭಗೊಳ್ಳಲಿವೆ. ಆದಾಯದ ಹೊಸ ಮೂಲಗಳು ಗೋಚರಿಸುತ್ತವೆ. ಉನ್ನತ ವ್ಯಾಸಂಗ ಮಾಡುವವರಿಗೆ ಶುಭ ಕಾಲ. ಕುಟುಂಬದಲ್ಲಿ ಸಂತಸದ ವಾತಾವರಣವಿರುತ್ತದೆ. ನಿಮ್ಮ ಯೋಜನೆಗಳನ್ನು ಗೌಪ್ಯವಾಗಿಡಿ. ಪ್ರಯಾಣದಿಂದ ಲಾಭ ಉಂಟಾಗಲಿದೆ. ದಾನಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ಮಕರ:
ಕಠಿಣ ಪರಿಶ್ರಮದಿಂದ ಲಾಭ ಗಳಿಸುವಿರಿ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಆತುರದ ನಿರ್ಧಾರಗಳು ನಷ್ಟಕ್ಕೆ ಕಾರಣವಾಗಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮೋಜು-ಮಸ್ತಿಗಾಗಿ ಹಣ ವ್ಯಯ ಮಾಡುವಿರಿ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಯೋಗ ಮತ್ತು ಧ್ಯಾನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ:
ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರುತ್ತದೆ. ಹೊಸ ಉದ್ಯಮ ಆರಂಭಿಸಲು ತಜ್ಞರ ಮಾರ್ಗದರ್ಶನ ಪಡೆಯಿರಿ. ಹಳೆ ಬಾಕಿ ವಸೂಲಿಯಾಗಲಿದೆ. ಸ್ತ್ರೀಯರಿಗೆ ಹೆಚ್ಚಿನ ಗೌರವ ಸಿಗಲಿದೆ. ಸಂವಹನದಲ್ಲಿ ಸ್ಪಷ್ಟತೆ ಇರಲಿ. ಬೆನ್ನು ನೋವು ಅಥವಾ ಕೀಲು ನೋವು ಕಾಣಿಸಿಕೊಳ್ಳಬಹುದು. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ.
ಮೀನ:
ಮಾನಸಿಕವಾಗಿ ಸ್ವಲ್ಪ ಗೊಂದಲವಿರಬಹುದು, ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರಿಕೆ ಇರಲಿ. ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುತ್ತದೆ. ನೆರೆಹೊರೆಯವರೊಂದಿಗೆ ಸೌಹಾರ್ದತೆಯಿಂದಿರಿ. ದೈಹಿಕ ವ್ಯಾಯಾಮಕ್ಕೆ ಆದ್ಯತೆ ನೀಡಿ. ಶುಭ ವಾರ್ತೆ ಕೇಳುವ ಸಾಧ್ಯತೆ ಇದೆ. ದೇವತಾ ದರ್ಶನ ಭಾಗ್ಯ ಕೂಡಿಬರಲಿದೆ. ತಾಳ್ಮೆಯಿಂದ ಕೆಲಸ ನಿರ್ವಹಿಸಿ.