Category Archives: Blog

Your blog category

ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಅಬ್ದುಲ್​ ರೆಹಮಾನ್ ಜೈಲಿನಲ್ಲಿ ಹತ್ಯೆ – Kannada News | Abdul Rahman Dies in Custody as Fellow Prisoner Faces Murder Charge in Haryana

ಹರಿಯಾಣ, ಫೆಬ್ರವರಿ 10: ಅಯೋಧ್ಯೆಯ ರಾಮ ಮಂದಿರ(Ram Mandir)ದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿ ಜೈಲು ಪಾಲಾಗಿದ್ದ ಅಬ್ದುಲ್ ರೆಹಮಾನ್​ನನ್ನು ಜೈಲಿನಲ್ಲಿ ಸಹ ಕೈದಿಗಳು ಕೊಲೆ ಮಾಡಿರುವ ಘಟನೆ ಹರಿಯಾಣದ ಫರೀದಾಬಾದ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯ ನಿವಾಸಿ ಅಬ್ದುಲ್ ರೆಹಮಾನ್(20)ನನ್ನು ಹರಿಯಾಣದ ಫರೀದಾಬಾದ್ ಜಿಲ್ಲೆಯ ಬಲ್ಲಭಗಢದಲ್ಲಿರುವ ನೀಮ್ಕಾ ಜಿಲ್ಲಾ ಜೈಲಿನಲ್ಲಿ ಬಿಗಿ ಭದ್ರತೆ ಇದ್ದರೂ ಹತ್ಯೆ ಮಾಡಲಾಗಿದೆ.

ವರದಿಗಳ ಪ್ರಕಾರ, ಅಬ್ದುಲ್ ರೆಹಮಾನ್​ನನ್ನು ಮಾರ್ಚ್ 2025ರಲ್ಲಿ ಫರೀದಾಬಾದ್ನ ಪಾಲಿ ಪ್ರದೇಶದಿಂದ ಗುಜರಾತ್ ಭಯೋತ್ಪಾದಕ ನಿಗ್ರಹ ದಳ ಮತ್ತು ಹರಿಯಾಣದ ವಿಶೇಷ ಕಾರ್ಯಪಡೆ ಬಂಧಿಸಿತ್ತು. ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪ ಆತನ ಮೇಲಿತ್ತು.ಬಂಧನದ ಸಮಯದಲ್ಲಿ ಆತನ ಬಳಿ ಗ್ರೆನೇಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಭಾನುವಾರ ರಾತ್ರಿ 10.30ರ ಸುಮಾರಿಗೆ ಬ್ಯಾರಕ್​ನಲ್ಲಿ ಜಗಳ ಭುಗಿಲೆದ್ದಿತ್ತು, ನಂತರ ಸಹ ಕೈದಿ ಅರುಣ್ ಚೌಧರಿ ಅಬ್ದುಲ್ ರೆಹಮಾನ್​​ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೆಹಮಾನ್​ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.
ಕೊಲೆ ಆರೋಪಿಯ ವಿರುದ್ಧ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದವು, ಪೊಲೀಸರು ಈಗ ಆತನ ಮೇಲೆ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಉನ್ನತ ಮಟ್ಟದ ತನಿಖೆ ಮತ್ತು ಜೈಲು ಭದ್ರತಾ ವ್ಯವಸ್ಥೆಗಳ ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ಎಸಿಪಿ ಅಶೋಕ್ ವರ್ಮಾ ತಿಳಿಸಿದ್ದಾರೆ.ಪೊಲೀಸರು ಆತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಕೆ ಆಸ್ಪತ್ರೆಗೆ ಕಳುಹಿಸಿದ್ದಾರೆ, ಮೂವರು ಕೈದಿಗಳನ್ನು ಒಂದೇ ಸೆಲ್​ನಲ್ಲಿ ಇರಿಸಲಾಗಿತ್ತು. ಜೈಲು ಆಡಳಿತದಿಂದ ಬಂದ ಮಾಹಿತಿ ಆಧಾರದ ಮೇಲೆ ಅರುಣ್ ಅಬ್ದುಲ್ ಹಾಗೂ ಶೋಯೆಬ್ ಅವರನ್ನು ಭದ್ರತಾ ವಾರ್ಡ್​​ನಲ್ಲಿರುವ ಸೆಲ್​ನಲ್ಲಿ ಇರಿಸಲಾಗಿತ್ತು. ಈ ಮೂವರು ಸುಮಾರು ಇಪ್ಪತ್ತು ದಿನಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು.

ಮತ್ತಷ್ಟು ಓದಿ: ಬಂಗಾಳದಲ್ಲಿ ಬಾಬರಿ ಮಸೀದಿ ವಿವಾದದ ಬೆನ್ನಲ್ಲೇ ಅಯೋಧ್ಯೆ ಶೈಲಿಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅರುಣ್ ಚೌಧರಿ ಎಂಬ ಕೈದಿ ಅಬ್ದುಲ್ ರೆಹಮಾನ್ ಮಲಗಿದ್ದಾಗ ಹಠಾತ್ತನೆ ಹಲ್ಲೆ ನಡೆಸಿದ್ದಾನೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ತನಿಖೆ ಆರಂಭಿಸಲಾಗಿದೆ.

ರೋಹಿತ್ ಗೋದಾರ ಗ್ಯಾಂಗ್‌ಗೆ ಸಂಬಂಧಿಸಿದ ಸಹ ಕೈದಿ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿಯನ್ನು ಅರುಣ್ ಚೌಧರಿ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ ಜೈಲಿಗೆ ವರ್ಗಾಯಿಸಲಾಗಿತ್ತು. ರೆಹಮಾನ್ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಪ್ರಚೋದನಕಾರಿ ಮತ್ತು ಪ್ರಚೋದನಕಾರಿ ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಿಎಂ ಬಜೆಟ್​ಗೆ ಸಜ್ಜಾದ ಹೊತ್ತಲ್ಲೇ ಡಿಕೆ ಶಿವಕುಮಾರ್​ಗೆ ಅಸಮಾಧಾನ? ದೆಹಲೀಲಿ ದುಃಖ, ದುಮ್ಮಾನ ಚರ್ಚಿಸ್ತೀನೆಂದ ಡಿಸಿಎಂ – Kannada News | DK Shivakumar Skips Budget Meet, Heads to Delhi; Power Sharing Buzz Intensifies in Karnataka Congress

ಕಾಂಗ್ರೆಸ್​ನಲ್ಲಿ ಮತ್ತೆ ಭುಗಿಲೆದ್ದ ಕುರ್ಚಿ ಕದನ?Image Credit source: tv9

ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕರ್ನಾಟಕ ಕಾಂಗ್ರೆಸ್ (Congress) ಅಧಿಕಾರ ಹಂಚಿಕೆ ಕದನವೀಗ ಮತ್ತೆ ತಾರಕಕ್ಕೇರಿದೆ. ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದಾರೆ. ಆದರೆ, ಈ ಸಭೆಗೆ ಗೈರಾಗುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಯತ್ತ ತೆರಳುತ್ತಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಪ್ರಿಯಾಂಕಾ ಗಾಂಧಿ ಕರೆದ ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳುವುದೇನೋ ನಿಜ. ಆದರೆ, ಡಿಕೆ ಶಿವಕುಮಾರ್​ ಜವಾಬ್ದಾರಿ ವಹಿಸಿಕೊಂಡಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬಜೆಟ್ ಪೂರ್ವಭಾವಿ ಸಭೆಯನ್ನೇ ಸಿದ್ದರಾಮಯ್ಯ ನಿಗದಿ ಮಾಡಿದ್ದಾರೆ. ಅಂದರೆ, ತಮ್ಮದೇ ಇಲಾಖೆಗಳಿಗೆ ಸಂಬಂಧಿಸಿದ ಸಭೆಗೆ ಡಿಸಿಎಂ ಗೈರಾಗಲಿದ್ದಾರೆ.

ಏತನ್ಮಧ್ಯೆ ಸಿಎಂ ಕರೆದ ಸಭೆಗೆ ಗೈರಾಗುವ ಮೂಲಕ ಡಿಕೆಶಿ ಸವಾಲ್ ಹಾಕಿದ್ರಾ? ಅಥವಾ ಸಿಎಂ ಬಜೆಟ್ ಮಂಡನೆಗೆ ಬೇಸರಗೊಂಡ್ರಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಯಾಕೆಂದರೆ, ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಯಾರನ್ನೆಲ್ಲ ಭೇಟಿಯಾಗುತ್ತಾರೆ? ಏನೆಲ್ಲಾ ಮಾತುಕತೆ ನಡೆಸುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ನಾನು ಭೇಟಿ ಮಾಡುವ ಎಲ್ಲ ನಾಯಕರ ಹೆಸರುಗಳನ್ನು ಹೇಳಲು ಆಗಲ್ಲ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ನಾನು ಕೇವಲ ಡಿಸಿಎಂ ಮಾತ್ರವಲ್ಲ. ಪಕ್ಷದ ಅಧ್ಯಕ್ಷ ಕೂಡ ಹೌದು. ಹೀಗಾಗಿ, ದೆಹಲಿ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಆಗ ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲಾ ಹೇಳುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಆಡಿದ ಕಷ್ಟ, ದುಃಖ, ಮ್ಮಾನ ಎಂಬ ಮಾತೇ ಈಗ ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ವರಿಷ್ಠರ ಮುಂದೆ ಅಧಿಕಾರ ಹಸ್ತಾಂತರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ದುಃಖ ದುಮ್ಮಾನ ಹೇಳಿಕೊಳ್ತಾರಾ ಎಂಬ ಚರ್ಚೆ ನಡೆಯುತ್ತಿದೆ.

ಏತನ್ಮಧ್ಯೆ ‘ಈ ಅವಧಿಯಲ್ಲೇ ಡಿಕೆಶಿ ಸಿಎಂ ಆಗಬೇಕು’ ಎಂದು ನಿಮ್ಮ ಬೆಂಬಲಿಗರು ಹೇಳುತ್ತಿದ್ದಾರಲ್ಲವೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, ‘ನಾನು ಸಿಎಂ ಆಗುವುದು ನಿಮಗೆ ಇಷ್ಟ ಇಲ್ಲವೇ’ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಬಜೆಟ್ ಪೂರ್ವಭಾವಿ ಸಭೆಗೆ ಗೈರು: ಡಿಕೆ ಶಿವಕುಮಾರ್ ಸ್ಪಷ್ಟನೆ ಏನು?

ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಡಿಕೆ ಶಿವಕುಮಾರ್, ಮುಖ್ಯಮಂತ್ರಿಗಳ ಅನುಮತಿ ಪಡೆದುಕೊಂಡೇ ದೆಹಲಿಗೆ ತೆರಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರು. ನೀರಾವರಿ ಯೋಜನೆಗಳ ಬಗ್ಗೆ ನನಗಿಂತ ಸಿಎಂ ಅವರಿಗೆ ಹೆಚ್ಚು ಗೊತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಸಿಎಂ ಪುತ್ರ ಯತೀಂದ್ರ ದಳ್ಳುರಿ: ತನ್ವೀರ್ ಸೇಠ್ ಕ್ಷೇತ್ರದಲ್ಲೂ ಹಸ್ತಕ್ಷೇಪದ ಆರೋಪ, ಆಕ್ಷೇಪ

ಒಟ್ಟಿನಲ್ಲಿ, ಕಾಂಗ್ರೆಸ್​ನಲ್ಲಿ ಅಧಿಕಾರ ಹಸ್ತಾಂತರದ ಸಮರ ದಿನೇ ದಿನೇ ತೀವ್ರ ಸ್ವರೂಪಕ್ಕೆ ತಿರುಗುವ ಲಕ್ಷಣಗಳು ಕಾಣಿಸುತ್ತಿವೆ. ಇಂದು ದೆಹಲಿಗೆ ತೆರಳುವ ಡಿಕೆ ಶಿವಕುಮಾರ್, ಅವರೇ ಹೇಳಿದಂತೆ ಅದೇನು ದುಃಖ, ಕಷ್ಟ, ನೋವುಗಳನ್ನು ವರಿಷ್ಠರ ಮುಂದೆ ಹೇಳಿಕೊಳ್ಳುತ್ತಾರೆ ಎಂ ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ? – Kannada News | Jana Nayagan Release Woes: Vijay’s Film Hits Censor Snag, Makers Consider Withdrawing Case

ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಈಗಾಗಲೇ ರಿಲೀಸ್ ಆಗಿ ಒಂದು ತಿಂಗಳು ಕಳೆದಿರಬೇಕಿತ್ತು. ಈಗಾಗಲೇ ಸಿನಿಮಾ ಒಟಿಟಿಗೆ ರಿಲೀಸ್​ಗೆ ರೆಡಿ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ. ಇದರಿಂದ ಸಿನಿಮಾದ ಥಿಯೇಟ್ರಿಕಲ್ ರಿಲೀಸ್ ವಿಳಂಬ ಆಗುತ್ತಿದೆ. ಈಗಾಗಲೇ ತಂಡದವರು ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಆದರೆ, ತಂಡದವರು ಕೋರ್ಟ್​ನಿಂದ ಕೇಸ್​ನ ಹಿಂಪಡೆಯುವ ಬಗ್ಗೆ ಆಲೋಚನೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ತಂಡ ಮಂಡಿಯೂರಿದೆ ಎಂದು ವರದಿ ಆಗಿದೆ.

ಕೆವಿಎನ್ ಪ್ರೊಡಕ್ಷನ್ ಪರ ವಕೀಲ ವಿಜಯನ್ ಸುಬ್ರಮಣಿಯನ್ ಅವರು ಮದ್ರಾಸ್ ಹೈಕೋರ್ಟ್ ರಿಜಿಸ್ಟ್ರಿಗೆ ಪತ್ರವೊಂದನ್ನು ಸಲ್ಲಿಸಿದ್ದಾರೆ. ಸಿಬಿಎಫ್‌ಸಿ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಹಿಂತೆಗೆದುಕೊಳ್ಳುವ ವಿಷಯವನ್ನು ತಿಳಿಸಿದ್ದಾರೆ. ಈಗ ನಿರ್ಮಾಣ ಸಂಸ್ಥೆ ಚಿತ್ರವನ್ನು ಸಿಬಿಎಫ್‌ಸಿಯ ಪರಿಷ್ಕರಣಾ ಸಮಿತಿಯ ಮುಂದೆ ಪರಿಶೀಲನೆಗೆ ಸಲ್ಲಿಸಲು ನಿರ್ಧರಿಸಿದೆ ಎಂದು ವರದಿ ಆಗಿದೆ.

ಸದ್ಯ ಕೋರ್ಟ್​​​ನಲ್ಲಿ ಸಿನಿಮಾ ರಿಲೀಸ್​​ಗೆ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.ಕೊರ್ಟ್​​​ಗೆ ತುರ್ತು ವಿಚಾರಣೆ ಮಾಡುವಂತೆ ಅರ್ಜಿ ಸಲ್ಲಿಸಿ ವಾರದ ಒಳಗೆ ಚಿತ್ರ ಬಿಡುಗಡೆ ಮಾಡುವ ಪ್ಲ್ಯಾನ್ ಅನ್ನು ತಂಡ ರೂಪಿಸಿಕೊಂಡಿತ್ತು. ಆದರೆ, ತಿಂಗಳು ಕಳೆದರೂ ಯಾವುದೇ ಪಾಸಿಟಿವ್ ಬದಲಾವಣೆ ಕಾಣುತ್ತಿಲ್ಲ. ಹೀಗಾಗಿ, ತಂಡದವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿ ಆಗಿದೆ.

ರಿವ್ಯೂ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಿದರೆ ಆ ಪ್ರಕ್ರಿಯೆ ಪೂರ್ಣಗೊಳ್ಳಲು ಒಂದು ತಿಂಗಳು ಹಿಡಿಯುತ್ತದೆ. ಮಾರ್ಚ್ ವೇಳೆಗೆ ತಂಡಕ್ಕೆ ಸರ್ಟಿಫಿಕೇಟ್ ಸಿಗಬಹುದು. ಆ ವೇಳೆಗೆ ತಮಿಳುನಾಡು ಚುನಾವಣೆ ಘೋಷಣೆ ಆದರೆ, ಸಿನಿಮಾ ರಿಲೀಸ್ ಸಾಕಷ್ಟು ಮುಂದಕ್ಕೆ ಹೋಗಲಿದೆ.

ಇದನ್ನೂ ಓದಿ: ಮದುವೆ ಫಂಕ್ಷನ್​​ಗೆ ಅಟೆಂಡ್ ಆಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್

ಸದ್ಯದ ಬೆಳವಣಿಗೆ ವಿಜಯ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ವಿಜಯ್ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆ ಹುಸಿಯಾಗಿದೆ. ‘ಜನ ನಾಯಗನ್’ ಚಿತ್ರವನ್ನು ಎಚ್​. ವಿನೋದ್ ನಿರ್ದೇಶನ ಮಾಡಿದ್ದಾರೆ. ದಳಪತಿ ವಿಜಯ್ , ಪೂಜಾ ಹೆಗ್ಡೆ, ಮಮಿತಾ ಬೈಜು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 10ರ ದಿನಭವಿಷ್ಯ – Kannada News | Numerology: Feb 10 Horoscope for Birth 7, 8, 9 – Financial & Health Insights

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಯಾರಿಗೆ ಅಂತ ಸಮಾಜಾಯಿಷಿ ಹೇಳುವುದು ಎಂಬ ಚಿಂತೆ ಅಥವಾ ಆತಂಕ ನಿಮ್ಮನ್ನು ಕಾಡುವುದಕ್ಕೆ ಆರಂಭವಾಗಲಿದೆ. ಈ ಹಿಂದೆ ನಿಮಗೆ ನಿಧಾನವಾಗಿ ನೀಡಿದರೂ ಪರವಾಗಿಲ್ಲ ಎಂದು ಹೇಳಿ ಸಾಲ ನೀಡಿದ್ದ ಕೆಲವರು ತಮಗೆ ತುರ್ತಾಗಿ ಬೇಕಿದೆ ಎಂದೂ ಹಾಗೂ ಹಣವನ್ನು ಈಗಲೇ ಹಿಂತಿರುಗಿಸುವಂತೆ ಒಂದೇ ಸಮಯಕ್ಕೆ ಈ ದಿನ ಕೇಳಲಿದ್ದಾರೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮಲ್ಲಿ ಕೆಲವರು ಬ್ಯಾಂಕ್ ನಲ್ಲಿ ಸಾಲ ಮಾಡಬೇಕಾಬಹುದು ಅಥವಾ ಚಿನ್ನವನ್ನು ಅಡಮಾನ ಮಾಡಿ, ಹಣವನ್ನು ಪಡೆದುಕೊಳ್ಳಬಹುದು. ಅಥವಾ ಹೆಚ್ಚಿನ ಬಡ್ಡಿ ನೀಡುವುದಾಗಿ ಹೊರಗೆ ಹಣವನ್ನು ಸಾಲ ಮಾಡಲಿದ್ದೀರಿ. ರಕ್ತದೊತ್ತಡದ ಸಮಸ್ಯೆ ಇರುವವರಿಗೆ ಸಮಸ್ಯೆ ಉಲ್ಬಣ ಆಗಬಹುದು. ಸ್ವಯಂ ವೈದ್ಯ ಮಾಡಿಕೊಳ್ಳುವುದರ ಬದಲು ಸೂಕ್ತ ವೈದ್ಯೋಪಚಾರ ಮಾಡಿಕೊಳ್ಳುವ ಬಗ್ಗೆ ಲಕ್ಷ್ಯ ನೀಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಆತುರ ಅಥವಾ ಒತ್ತಡಕ್ಕೆ ಸಿಲುಕಿಕೊಂಡು ನಿಮ್ಮಿಂದ ಯಾವುದೇ ತಪ್ಪುಗಳಾಗದಂತೆ ನೋಡಿಕೊಳ್ಳುವುದು ಮುಖ್ಯವಾಗುತ್ತದೆ. ಮಾಲ್ ಗಳಲ್ಲಿ, ಚಿತ್ರಮಂದಿರಗಳಲ್ಲಿ, ಪಿಜ್ಜಾ ಮಳಿಗೆಗಳಲ್ಲಿ ಕಾರ್ಯ ನಿರ್ವಹಿಸುವವರು ವಾಹನ ಚಲಾಯಿಸುವಾಗ ತುಂಬ ಎಚ್ಚರಿಕೆಯಿಂದ ಇರಬೇಕು. ಚೀಟಿಯಲ್ಲಿ ಹಣ ಹಾಕಿರುವವರು ಅದನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದಕ್ಕೆ ಏನು ಮಾಡಬೇಕೋ ಅದನ್ನು ಮಾಡುವುದಕ್ಕೆ ನಿರ್ಧರಿಸಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 10ರ ದಿನಭವಿಷ್ಯ – Kannada News | Feb 10 Numerology: Birth Numbers 4,5,6 Predictions and Ganesha Remedy for Laziness

8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನೀವು ಇಷ್ಟು ಕಾಲ ಕೇಳಿದ ತಕ್ಷಣ ಇತರರಿಗೆ ಕೆಲಸ ಮಾಡಿಕೊಡುತ್ತಿದ್ದವರಿಗೆ ಕೆಲಸ ಆಗುವ ತನಕ ಒಂದು ರೀತಿ ಇದ್ದು, ಆ ನಂತರ ಜನರು ಬದಲಾಗುತ್ತಿದ್ದಾರೆ ಎಂದು ಬಲವಾಗಿ ಅನಿಸುವುದಕ್ಕೆ ಶುರುವಾಗುತ್ತದೆ. ಒಂದೇ ಕಡೆ ಹಾಗೂ ಒಂದೇ ರೀತಿಯಲ್ಲಿ ಆಲೋಚನೆ ಮಾಡುತ್ತಿದ್ದ ನೀವು ಇದೀಗ ನಾಲ್ಕೂ ಕಡೆಯ ಸಾಧ್ಯತೆಗಳನ್ನು ಅಳೆದು- ತೂಗಿ ನೋಡುವುದಕ್ಕೆ ಆರಂಭಿಸುತ್ತೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇಷ್ಟು ದಿನದ ಲೆಕ್ಕ ಬೇರೆ, ಈ ದಿನದಿಂದ ಬೇರೆ ಎಂದು ಆಲೋಚನೆಯನ್ನು ಮಾಡಲಿದ್ದೀರಿ. ಅದಕ್ಕೆ ತಕ್ಕಂತೆ ಕೆಲವು ಯೋಚನೆ ನಿಮಗೆ ಬರಲಿದೆ. ಎಷ್ಟೇ ಪ್ರಯತ್ನ ಮಾಡಿದರೂ ಆದಾಯ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ, ಅಂದುಕೊಂಡ ವೇಗದಲ್ಲಿ ಕೆಲಸ ಸಾಗುತ್ತಿಲ್ಲ ಎಂದು ನಿಮಗೆ ಅನಿಸಲಿದ್ದು, ಇದಕ್ಕೆ ಕಾರಣ ಏನು ಎಂಬುದನ್ನು ಆಲೋಚಿಸಿಕೊಂಡು, ಈ ದಿನ ನಿಮ್ಮ ಸ್ವಂತ ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುವುದಕ್ಕೆ ನಿರ್ಧರಿಸಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನವ ವಿವಾಹಿತರು ಇದ್ದಲ್ಲಿ ಕುಟುಂಬದ ಎಲ್ಲ ಸದಸ್ಯರ ಜತೆಗೆ ಹೆಚ್ಚಿನ ಸಮಯ ಕಳೆಯುವುದಕ್ಕೆ ನಿರ್ಧಾರ ಮಾಡುತ್ತೀರಿ. ರೆಸಾರ್ಟ್, ಸಿನಿಮಾ ಅಥವಾ ರೆಸ್ಟೋರೆಂಟ್ ಗಳಿಗೆ ತೆರಳುವಂಥ ಯೋಗ ಇದೆ. ಇನ್ನು ನಿಮ್ಮಲ್ಲಿ ಕೆಲವರು ಕಿರು ಪ್ರವಾಸಕ್ಕೆ ತೆರಳುವಂಥ ಯೋಗ ಇದೆ. ಆದರೆ ಈ ದಿ ಮಕ್ಕಳ ಅಥವಾ ಮನೆಯಲ್ಲಿ ಇರುವಂಥ ಕಿರಿಯ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವನ್ನು ವಹಿಸಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 10ರ ದಿನಭವಿಷ್ಯ – Kannada News | Numerology Horoscope Feb 10: Birth Numbers 1, 2, 3 Daily Predictions

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಪ್ರಯಾಣದಲ್ಲಿ ಇರುವವರು ಬೆಲೆ ಬಾಳುವ ವಸ್ತುಗಳ ಕಡೆಗೆ ಲಕ್ಷ್ಯ ನೀಡಿ. ಮನೆಯಲ್ಲಿ ಇರುವಂಥ ಪ್ರಮುಖ ಕಾಗದ- ಪತ್ರಗಳು ಇವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ. ಅದರ ನಕಲು ತೆಗೆಸುವುದಕ್ಕೆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗುತ್ತೀರಿ ಎಂದಾದರೆ ಜೋಪಾನವಾಗಿ ವಾಪಸ್ ತಂದು, ಮನೆಯಲ್ಲಿ ಇಟ್ಟುಕೊಳ್ಳುವ ಕಡೆಗೆ ಗಮನವನ್ನು ನೀಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಒಂದು ಬಗೆಯಲ್ಲಿ ಈ ದಿನ ಸಂತೋಷವಾಗಿ ಕಳೆಯಲಿದೆ. ಅದರಲ್ಲೂ ನೀವು ಬಹಳ ಇಷ್ಟ ಪಡುವಂಥ ವ್ಯಕ್ತಿಗಳನ್ನು ಭೇಟಿ ಆಗಲಿದ್ದೀರಿ. ಅವರು ಸ್ನೇಹಿತರಾಗಿರಬಹುದು ಅಥವಾ ಸಂಬಂಧಿಗಳಾಗಿರಬಹುದು, ಆದರೆ ಅವರ ಜತೆಗೆ ನೀವು ಕಳೆಯುವ ಸಮಯ ಸಂತಸವನ್ನು ನೀಡುತ್ತದೆ. ಆದ್ದರಿಂದ ಬಹಳ ಖುಷಿ ಖುಷಿಯಾದ ಮನಸ್ಥಿತಿಯಲ್ಲಿ ಇರುತ್ತೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಈ ಹಿಂದಿನ ಕೆಲವು ಘಟನೆಗಳು ನಿಮ್ಮಲ್ಲಿ ಬದಲಾವಣೆ ತರಲಿದೆ. ನಿಮ್ಮ ಸಿದ್ಧತೆ ಬಹಳ ಚೆನ್ನಾಗಿರಲಿದೆ. ಇತರರು ಸಹ ಇದೇ ವಿಚಾರಕ್ಕೆ ನಿಮ್ಮ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ. ಒಂದು ವೇಳೆ ನೀವೇನಾದರೂ ವಿವಾಹ ವಯಸ್ಕರಾಗಿದ್ದಲ್ಲಿ ಮದುವೆಗೆ ಪ್ರಯತ್ನ ಪಡುತ್ತಿದ್ದರೆ ಮ್ಯಾಟ್ರಿಮೋನಿ ವೆಬ್ ಸೈಟ್ ಗಳು ಅಥವಾ ವಧು-ವರರ ಸಮಾವೇಶಗಳಲ್ಲಿ ಸೂಕ್ತ ಸಂಬಂಧ ದೊರೆಯುವಂಥ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 10 February : ಇಂದು ಈ ರಾಶಿಯವರು ಆಸ್ತಿಯು ಶಾಶ್ವತವಾಗಿ ಉಳಿಯದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಮಂಗಳವಾರ ಒಪ್ಪಿಗೆ, ಕುಶಲತೆ, ಸ್ಪಂದನೆ, ಸೇವೆಯ ಮನಸ್ಸು, ಹಣದ ಹೂಡಿಕೆ, ಮಾರಾಟದ ಲಾಭ ಇವೆಲ್ಲ ಇರಲಿದೆ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಗಂಡ, ಕರಣ : ಬಾಲವ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 08:18 – 09:45, ಯಮಗಂಡ ಕಾಲ 11:12 – 12:39, ಗುಳಿಕ ಕಾಲ 14:05 – 15:32

ಮೇಷ ರಾಶಿ :

ಪ್ರಾಪಂಚಿಕ ಸುಖದ ಮೇಲೆ ಆಸಕ್ತಿಯು ಕಡಿಮೆ ಆದೀತು. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದೆ. ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಮಾತನ್ನು ಕೇಳಿಲ್ಲ ಎಂದ ಮಾತ್ರಕ್ಕೆ ನಿಷ್ಠುರವಾಗಿ ಸಂಬಂಧವನ್ನು ಹಾಳುಮಾಡಿಕೊಳ್ಳುವುದು ಬೇಡ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ಮನಸ್ಸಿಗೆ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಯಾವ ಸಂದರ್ಭವನ್ನೂ ಎದುರಿಸುವ ಮಾನಸಿಕತೆ ಇರಲಿದೆ.

ವೃಷಭ ರಾಶಿ :

ಆರ್ಥಿಕತೆಯ ಕಾರಣದಿಂದ ಕುಟುಂಬದಲ್ಲಿ ಕೆಲವು ಮಾತುಗಳು ಬರಬಹುದು. ಮಾತಿನ ಮೇಲೆ ನಿಯಂತ್ರಣ ಇಟ್ಟುಕೊಂಡು ಆಗುವ ಕಲಹವೂ ತಪ್ಪಬಹುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಗುರಿಗೆ ಹಾದಿಯು ಸ್ಪಷ್ಟವಾಗಿ ಇರದೇ ಹೋಗಬಹುದು. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದು. ಆತ್ಮೀಯರಿಂದ ನೀವು ಕೆಲವು ಸಲಹೆಯನ್ನು ಪಡೆಯುವಿರಿ. ಸಂಸಾರದ ಖರ್ಚನ್ನು ಸರಿದೂಗಿಸಿಕೊಳ್ಳಲು ಆಗದು.

ಮಿಥುನ ರಾಶಿ :

ಸ್ನೇಹಿತರು ನಿಮ್ಮಿಂದ ಅಲ್ಪ ಧನಸಹಾಯವನ್ನು ನಿರೀಕ್ಷಿಸುವರು. ಜೊತಡಗಿರುವವರು ಹುದ್ದೆಯಿಂದ ಕೆಳಗೆ ಹಾಕಲು ನೋಡಬಹದು. ಎಲ್ಲರ ಜೊತೆ ವಿನಾಕಾರಣ ಸಿಟ್ಟಾಗುವಿರಿ. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಹಣದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಆಪ್ತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದದ ಕಾರಣ ಸಂತೋಷದ ಕ್ಷಣವನ್ನು ನಷ್ಟ ಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ :

ಕೆಲಸಕ್ಕೆ ಹೆಚ್ಚುವರಿ ಜವಾಬ್ದಾರಿ ನೀಡುವಿರಿ. ಇನ್ನೊಬ್ಬರ ವಸ್ತುಗಳನ್ನು ಬಳಸಿಕೊಳ್ಳುವಿರಿ. ಕಲಾವಿದರು ಹೆಚ್ಚಿನ ಶ್ರಮದಿಂದ ಆದಾಯವನ್ನು ಗಳಿಸುವರು. ನಿಮ್ಮದಾದ ಗೌಪ್ಯ ಸಂಗತಿಗಳನ್ನು ಇತರರು ತಿಳಿದುಕೊಂಡಾರು. ಮನೋಭಿಲಾಷೆಯನ್ನು ಸರಿಯಾದ ಜನರ ಜೊತೆ ಹೇಳಿ. ಸಾಮಾಜಿಕ ವಲಯಗಳಲ್ಲಿ ಸ್ಥಾನಮಾನವು ಲಭ್ಯವಾಗುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ವಿವಾಹ ಸಂಬಂಧದಿಂದ ಕಿರಿಕಿರಿ ಆಗಬಹುದು. ಕಛೇರಿಯಲ್ಲಿ ಕೆಲಸವು ಮಂದಗತಿಯಲ್ಲಿ ಇರುವುದು.

ಸಿಂಹ ರಾಶಿ :

ನಿಮ್ಮ ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ. ವಿಷಯಗಳನ್ನು ಕ್ರಮವಾಗಿ ಇರಿಸಿ. ಅಪರಿಚಿತರಿಂದ ಕಪಾಲಮೋಕ್ಷವಾಗಬಹುದು. ಅತಿ‌ಜಾಣತನವನ್ನು ತೋರಿಸುವುದು ಬೇಡ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಮೌಲ್ಯಮಾಪನ ಸಿಗಬಹುದು. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಪ್ರೇಮಿಗಳಿಗೆ ಇಂದು ಶುಭವಾಗಿಲ್ಲ. ಸಂಗಾತಿಯ ಮಾತುಗಳು ನಿಮಗೆ ಬಲವನ್ನು ಕೊಡಬಹುದು.

ಕನ್ಯಾ ರಾಶಿ :

ಮನೆಯ ಬದಲಾವಣೆಯಿಂದ ನೆಮ್ಮದಿ ಇಲ್ಲದಂತೆ ಅನುಭವಕ್ಕೆ ಬರುವುದು. ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ. ನಿರುದ್ಯೋಗಿಗಳಿಗೆ ಎಲ್ಲರಿಂದ ಮಾನಸಿಕ ಹಿಂಸೆ ಆಗಬಹುದು. ಏನಾದರೂ ಮಾಡಬೇಕು ಎಂಬ ಇಚ್ಛೆಯು ಅಧಿಕವಾಗುವುದು. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಎಲ್ಲ ಕಾರ್ಯಗಳಿಗೂ ಉತ್ಸಾಹ ಭಂಗವಾಗುವುದು. ಇತರರ ತಪ್ಪಿಗೆ ನಿಮ್ಮನ್ನು ಗುರಿಮಾಡುವರು. ಉದ್ಯೋಗಸ್ಥರು ಪ್ರಗತಿಯನ್ನು ಕಾಣುವರು. ಆರ್ಥಿಕ ವಿಚಾರದಲ್ಲಿ ಸಖ್ಯವು ಏರ್ಪಡುವುದು.

ತುಲಾ ರಾಶಿ :

ಸಂಬಂಧದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಿ. ನಿರುಪಯೋಗ ವಸ್ತುಗಳನ್ನು ಮನೆಯಿಂದ ಹೊರಗುಡುವಿರಿ. ನಿಮ್ಮ ಭಾವನೆಗಳನ್ನು ನಿಮ್ಮ ಸಂಗಾತಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಮಕ್ಕಳ ಪ್ರಗತಿಯು ಇಂದು ಸಫಲತೆಯನ್ನು ಕಾಣುವುದು. ನಿಮ್ಮ ನಂಬಿಕೆಗೆ ಆಪ್ತರಿಂದ ಘಾಸಿಯಾಗಬಹುದು. ನಿಮ್ಮ ವ್ಯಾವಹಾರಿಕ ಓಡಾಟವು ವ್ಯರ್ಥವಾದೀತು. ಸಾಲ ಮಾಡಲು ಇಷ್ಟವಿಲ್ಲದಿದ್ದರೂ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ :

ವೃತ್ತಿಗೆ ಸಂಬಂಧಿಸಿದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಹೊಸ ಆದಾಯದ ಮೂಲಗಳನ್ನು ಹುಡುಕಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ನಿಮ್ಮ ಸಂಗಾತಿಯ ಭಾವನೆಗಳನ್ನು ನೋಯಿಸಬೇಡಿ. ಪರರ ಬೇಡಿಕೆಗೆ ಸ್ಪಂದ‌ನೆ ಇರಲಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲಾರರು. ಅವರಿಂದ ಏನಾದರೂ ತೊಂದರೆ ಆದೀತು. ಅಪಾಯದ ಮುನ್ಸೂಚನೆ ಸಿಕ್ಕಾಗ ಅದನ್ನು ಉಪಾಯದಿಂದ ಸರಿಮಾಡಿಕೊಳ್ಳಲು ಪ್ರಯತ್ನಿಸಿ.

ಧನು ರಾಶಿ :

ನಿಮ್ಮ ವೃತ್ತಿಜೀವನದಲ್ಲಿ ನೀವು ಉತ್ತಮ ಯಶಸ್ಸನ್ನು ಸಾಧಿಸುವಿರಿ. ಇದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಚರಾಸ್ತಿಯ ವ್ಯವಹಾರವನ್ನು ನೀವು ಜಾಣ್ಮೆಯಿಂದ ಮಾಡುವಿರಿ. ನಿಮ್ಮ ಸಮಯಕ್ಕೆ ಸಿಗಬೇಕಾದುದು ಸಿಗದು, ಮನಸ್ತಾಪ ಹೆಚ್ಚು. ಪ್ರಭಾವೀ ವ್ಯಕ್ತಿಗಳ ನಡೆಯನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂದೆ ಹೆಜ್ಜೆ ಹಾಕುವಿರಿ. ನಾಯಕತ್ವದ ಗುಣವನ್ನು ನೀವು ಗೊತ್ತಿಲ್ಲದಂತೆ ಬೆಳೆಸಿಕೊಳ್ಳುವಿರಿ.

ಮಕರ ರಾಶಿ :

ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿಯಾಗುವ ಸಾಧ್ಯತೆ ಇದೆ. ಉದ್ವೇಗಕ್ಕೆ ಸಿಗದೇ ಮನಸ್ಸು ಶಾಂತವಾಗಿರುತ್ತದೆ. ನಿಮ್ಮ ಪ್ರೀತಿಪಾತ್ರರ ಜೊತೆ ನೀವು ಮೋಜಿನ ಕ್ಷಣಗಳನ್ನು ಆನಂದಿಸುವಿರಿ. ಇದರಿಂದ ನಿಮ್ಮ ಸಂಬಂಧವೂ ಸಹ ಬಲವಾಗುವುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಪರಿಸರ ಅನುಕೂಲವಿರುವುದು. ಹಣದ ಹೂಡಿಕೆಗೆ ನಿಮಗೆ ಆಸಕ್ತಿಯು ಹೆಚ್ಚಿರಲಿದೆ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು. ಅನಾರೋಗ್ಯದಿಂದ ಇಂದಿನ ಕಾರ್ಯಕ್ಕೆ ತಡೆಯುಂಟಾದೀತು.

ಕುಂಭ ರಾಶಿ :

ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ನಿಮ್ಮ ಪ್ರೀತಿಪಾತ್ರರು ನಿಮ್ಮೊಂದಿಗೆ ಇರುತ್ತಾರೆ. ಇಂದು ಅಧಿಕಾರಿಗಳ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳು ದೂರವಾಗುತ್ತವೆ. ಕೆಲವು ಜನರು ಕುಟುಂಬ ಪ್ರವಾಸವನ್ನು ಯೋಜಿಸಬಹುದು ಮತ್ತು ಕುಟುಂಬದೊಂದಿಗೆ ಮೋಜು ತುಂಬಿದ ಕ್ಷಣಗಳನ್ನು ಆನಂದಿಸಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ಕುತೂಹಲವು ಇರಲಿದೆ. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು. ಹಳೆಯ ವಸ್ತುಗಳನ್ನು ಮಾರಾಟ ಮಾಡಬೇಕಾಗುವುದು.

ಮೀನ ರಾಶಿ :

ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಂಡಾಗ ಸಾಧ್ಯ. ಯಂತ್ರೋಪಕರಣದ ಮಾರಾಟದಿಂದ ಲಾಭ ಕಡಿಮೆ. ಸ್ನೇಹಿತರ ಸಹಾಯದಿಂದ, ನಿಮ್ಮ ಆದಾಯವನ್ನು ಹೆಚ್ಚಿಸುವ ಮಾರ್ಗಗಳನ್ನು ನೀವು ಕಂಡುಕೊಳ್ಳಬಹುದು. ಮಂಗಲ ಕಾರ್ಯವನ್ನು ಮಾಡಲು ನಿಮಗೆ ಮನಸ್ಸು ಇರುವುದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ಅತಿಯಾದ ವ್ಯಾಯಾಮದಿಂದ ದೇಹಕ್ಕೆ ತೊಂದರೆಯನ್ನು ತಂದುಕೊಳ್ಳುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

Source link

BCCI Central Contracts: 6 ಆಟಗಾರರಿಗೆ ಹಿಂಬಡ್ತಿ; 8 ಪ್ಲೇಯರ್ಸ್​ಗೆ ಗೇಟ್​ಪಾಸ್..! – Kannada News | BCCI New Player Contracts: Grade Changes for Kohli, Rohit; Shreyanka Patil Misses Out

ಬಿಸಿಸಿಐ (BCCI) ತನ್ನ ನೂತನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಅಳೆದು ತೂಗಿ ಆಟಗಾರರಿಗೆ ಗ್ರೇಡ್‌ ನೀಡಿದೆ. ಈ ಬಾರಿಯ ಕೇಂದ್ರ ಒಪ್ಪಂದದಲ್ಲಿ ಮುಂಬಡ್ತಿ ಪಡೆದವರಿಗಿಂತ ಹಿಂಬಡ್ತಿ ಪಡೆದವರ ಸಂಖ್ಯೆಯೇ ಹೆಚ್ಚಿದೆ. ಇದರ ಜೊತೆಗೆ ಕಳೆದ ಬಾರಿ ಕೇಂದ್ರ ಒಪ್ಪಂದಕ್ಕೆ ಒಳಪಟ್ಟಿದ್ದ ಕೆಲವು ಆಟಗಾರರನ್ನು ಈ ಬಾರಿ ಕೇಂದ್ರ ಒಪ್ಪಂದದಿಂದ ಕೈಬಿಡಲಾಗಿದೆ. ಇದರರ್ಥ ಹಿಂಬಡ್ತಿ ಪಡೆದ ಆಟಗಾರರು ಈ ಹಿಂದೆ ವಾರ್ಷಿಕವಾಗಿ ಪಡೆಯುತ್ತಿದ್ದ ವೇತನದಲ್ಲಿ ಇಳಿಕೆ ಕಂಡಿದ್ದರೆ, ಕೇಂದ್ರ ಒಪ್ಪಂದದಿಂದ ಕೈಬಿಟ್ಟಿರುವ ಆಟಗಾರರು ವಾರ್ಷಿಕ ವೇತನದಿಂದ ವಂಚಿತರಾಗಿದ್ದಾರೆ. ಆದಾಗ್ಯೂ ಈ ಒಪ್ಪಂದಕ್ಕೊಳಪಡದ ಆಟಗಾರರು ತಂಡದ ಪರ ಪಂದ್ಯವನ್ನಾಡಿದರೆ, ಮಾದರಿಗನುಗುಣವಾಗಿ ಪಂದ್ಯ ಶುಲ್ಕವನ್ನು ಪಡೆಯಲಿದ್ದಾರೆ.

6 ಆಟಗಾರರಿಗೆ ಹಿಂಬಡ್ತಿ

ಬಿಸಿಸಿಐ ಹಿಂಬಡ್ತಿ ನೀಡಿರುವ ಆಟಗಾರರಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರದ್ದು ಪ್ರಮುಖ ಹೆಸರು. ಇವರಿಬ್ಬರು ಪ್ರಸ್ತುತ ಏಕದಿನ ಮಾದರಿಯಲ್ಲಿ ಆಡುತ್ತಿರುವುದರಿಂದ ಇವರಿಬ್ಬರಿಗೆ ಎ+ ಗ್ರೇಡ್‌ನಿಂದ ಬಿ ಗ್ರೇಡ್‌ಗೆ ಹಿಂಬಡ್ತಿ ನೀಡಲಾಗಿದೆ. ಅದೇ ರೀತಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರಿಷಭ್ ಪಂತ್ ಅವರನ್ನು ಸಹ ಎ ಗ್ರೇಡ್‌ನಿಂದ ಬಿ ಗ್ರೇಡ್‌ಗೆ ಹಿಂಬಡ್ತಿ ನೀಡಲಾಗಿದೆ. ಇದರರ್ಥ ಈ ಬಾರಿ ಈ ಆರು ಆಟಗಾರರ ವೇತನದಲ್ಲಿ ಇಳಿಕೆ ಕಂಡುಬರಲಿದೆ. ಈ ಪ್ರಕಾರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಾರ್ಷಿಕವಾಗಿ ತಲಾ 4 ಕೋಟಿ ರೂಗಳನ್ನು ಕಳೆದುಕೊಂಡರೆ, ಉಳಿದ ನಾಲ್ವರು ಆಟಗಾರರು ತಲಾ 2 ಕೋಟಿ ರೂ. ಕಡಿಮೆ ವೇತನ ಪಡೆಯಲಿದ್ದಾರೆ.

ಐವರಿಗೆ ಗೇಟ್​ಪಾಸ್

6 ಆಟಗಾರರಿಗೆ ಹಿಂಬಡ್ತಿ ನೀಡಿದ್ದರೆ, ಇನ್ನು ಕೆಲವು ಆಟಗಾರರನ್ನು ಕೇಂದ್ರ ಒಪ್ಪಂದ ಪಟ್ಟಿಯಿಂದ ಬಿಸಿಸಿಐ ಕೈಬಿಟ್ಟಿದೆ. ಪ್ರಸ್ತುತ ಭಾರತ ಟಿ20 ವಿಶ್ವಕಪ್ ತಂಡದ ಭಾಗವಾಗಿರುವ ಇಶಾನ್ ಕಿಶನ್ ಅವರನ್ನು ಕೇಂದ್ರ ಒಪ್ಪಂದದಿಂದ ಕೈಬಿಡಲಾಗಿದೆ. ಇದಕ್ಕೆ ಕಾರಣ, ಕಳೆದ ಆವೃತ್ತಿಯಲ್ಲಿ ಕಿಶನ್ ತಂಡದ ಭಾಗವಾಗಿರಲಿಲ್ಲ. ಉಳಿದಂತೆ ಮೊಹಮ್ಮದ್ ಶಮಿ, ಸರ್ಫರಾಜ್ ಖಾನ್, ರಜತ್ ಪಾಟಿದಾರ್ ಮತ್ತು ಮುಖೇಶ್ ಕುಮಾರ್ ಕೂಡ ಈ ಬಾರಿ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಫಾರ್ಮ್, ಲಭ್ಯತೆ ಮತ್ತು ತಂಡದಲ್ಲಿನ ಪಾತ್ರವನ್ನು ಆಧರಿಸಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ನಾಲ್ವರು ಆಟಗಾರರು ಸಹ ಬಹಳ ಸಮಯದಿಂದ ಟೀಂ ಇಂಡಿಯಾ ಪರ ಯಾವುದೇ ಪಂದ್ಯವನ್ನು ಆಡಿಲ್ಲ.

ಕೇಂದ್ರ ಒಪ್ಪಂದಕ್ಕೊಳಪಟ್ಟಿರುವ 51 ಆಟಗಾರರಿಗೆ ಬಿಸಿಸಿಐ ನೀಡುವ ವೇತನವೆಷ್ಟು?

ಕನ್ನಡತಿ ಶ್ರೇಯಾಂಕಗೂ ಸ್ಥಾನವಿಲ್ಲ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಹೊಸ ಕೇಂದ್ರ ಒಪ್ಪಂದ ಪಟ್ಟಿಗೆ ಸೇರ್ಪಡೆಗೊಂಡ ಆಟಗಾರ್ತಿಯರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಆವೃತ್ತಿಯಲ್ಲಿ ಕೇವಲ 16 ಮಹಿಳಾ ಆಟಗಾರ್ತಿಯರು ಕೇಂದ್ರ ಒಪ್ಪಂದದಲ್ಲಿ ಸ್ಥಾನ ಪಡೆದಿದ್ದರೆ, ಈ ಆವೃತ್ತಿಯಲ್ಲಿ ಒಟ್ಟು 21 ಮಹಿಳಾ ಆಟಗಾರ್ತಿಯರಿಗೆ ಕೇಂದ್ರ ಒಪ್ಪಂದ ನೀಡಲಾಗಿದೆ. ಆದಾಗ್ಯೂ, ಪೂಜಾ ವಸ್ತ್ರಕರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಮತ್ತು ಟೈಟಾಸ್ ಸಾಧು ಕೇಂದ್ರ ಒಪ್ಪಂದದಿಂದ ವಂಚಿತರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:55 pm, Mon, 9 February 26

Source link

ಕೇಂದ್ರ ಒಪ್ಪಂದಕ್ಕೊಳಪಟ್ಟಿರುವ 51 ಆಟಗಾರರಿಗೆ ಬಿಸಿಸಿಐ ನೀಡುವ ವೇತನವೆಷ್ಟು? – Kannada News | BCCI Central Contracts 2025 26: Full Player List, Grades and Salaries for Men and Women

2026 ರ ಆವೃತ್ತಿಯ ನೂತನ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಸಿಸಿಐ (BCCI Central Contracts 2025-26) ಇಂದು ಪ್ರಕಟಿಸಿದೆ. ಕೇಂದ್ರ ಒಪ್ಪಂದಕ್ಕೆ ಒಟ್ಟು 51 ಆಟಗಾರರು ಒಳಪಟ್ಟಿದ್ದು, ಇದರಲ್ಲಿ 30 ಪುರುಷ ಆಟಗಾರರು ಮತ್ತು 20 ಮಹಿಳಾ ಆಟಗಾರ್ತಿಯರು ಸೇರಿದ್ದಾರೆ. ಈ 51 ಆಟಗಾರರನ್ನು ಎ,ಬಿ ಮತ್ತು ಸಿ ಎಂಬ ಮೂರು ಗ್ರೇಡ್​​ಗಳಲ್ಲಿ ವಿಂಗಡಿಸಲಾಗಿದೆ. ಈ ಹಿಂದೆ ಪುರುಷರ ಒಪ್ಪಂದದಲ್ಲಿ ಎ+ ಗ್ರೇಡ್ ಅನ್ನು ಜಾರಿಗೆ ತಂದಿದ್ದ ಬಿಸಿಸಿಐ, ಈ ಗ್ರೇಡ್​ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ ವಾರ್ಷಿಕವಾಗಿ 7 ಕೋಟಿ ರೂ. ಎ ಗ್ರೇಡ್‌ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ 5 ಕೋಟಿ ರೂ. ಬಿ ಗ್ರೇಡ್‌ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ 3 ಕೋಟಿ ರೂ. ಮತ್ತು ಸಿ ಗ್ರೇಡ್‌ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ 1 ಕೋಟಿ ರೂ. ವೇತನ ನೀಡುತ್ತಿತ್ತು. ಆದರೆ ಈ ಬಾರಿ ಎ+ ಗ್ರೇಡ್ ಅನ್ನು ಬಿಸಿಸಿಐ ರದ್ದುಗೊಳಿಸಿದೆ. ಉಳಿದಂತೆ ಪ್ರಸ್ತುತ ಜಾರಿಯಲ್ಲಿರುವ ಈ 3 ಗ್ರೇಡ್‌ನಲ್ಲಿ ಯಾವ ಆಟಗಾರರಿಗೆ ಸ್ಥಾನ ಸಿಕ್ಕಿದೆ ಮತ್ತು ಅವರಿಗೆ ಸಿಗುವ ವೇತನವೆಷ್ಟು ಎಂಬುದನ್ನು ನೋಡುವುದಾದರೆ..

ಪುರುಷರ ಆಟಗಾರರ ಸಂಬಳ

ಎ ಗ್ರೇಡ್: ಶುಭ್​ಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಎ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ವರದಿಗಳ ಪ್ರಕಾರ ಈ ಮೂವರಲ್ಲಿ ಬುಮ್ರಾ ಮಾತ್ರ 7 ಕೋಟಿ ರೂಪಾಯಿ ವೇತನ ಪಡೆಯಲಿದ್ದಾರೆ. ಉಳಿದಂತೆ ಶುಭ್​ಮನ್ ಗಿಲ್ ಮತ್ತು ರವೀಂದ್ರ ಜಡೇಜಾ ತಲಾ 5 ಕೋಟಿ ರೂಪಾಯಿ ವೇತನ ಪಡೆಯಲಿದ್ದಾರೆ.

ಬಿ ಗ್ರೇಡ್: ಒಟ್ಟು 11 ಆಟಗಾರರು ಬಿ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕುಲ್ದೀಪ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್​ಗೆ ವಾರ್ಷಿಕವಾಗಿ 3 ಕೋಟಿ ರೂ. ವೇತನ ನೀಡಲಾಗುತ್ತದೆ.

ಸಿ ಗ್ರೇಡ್: ಒಟ್ಟು 17 ಆಟಗಾರರು ಸಿ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಅಕ್ಷರ್ ಪಟೇಲ್, ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಧ್ರುವ ಜುರೆಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ನಿತೀಶ್ ರೆಡ್ಡಿ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್ ಸೇರಿದ್ದು ಈ ಆಟಗಾರರಿಗೆ ವಾರ್ಷಿಕವಾಗಿ 1 ಕೋಟಿ ರೂ. ವೇತನ ಸಿಗಲಿದೆ.

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ

ಮಹಿಳಾ ಆಟಗಾರ್ತಿಯರ ಸಂಬಳ

ಎ ಗ್ರೇಡ್: ಪುರುಷ ಕ್ರಿಕೆಟಿಗರಿಗೆ ಸಿಗುವ ವೇತನಕ್ಕೆ ಹೋಲಿಸಿದರೆ ಮಹಿಳಾ ಆಟಗಾರ್ತಿಯರು ಕಡಿಮೆ ಮೊತ್ತದ ವೇತನ ಪಡೆಯುತ್ತಾರೆ. ಅದರಂತೆ ಈ ಬಾರಿ ಬಿಸಿಸಿಐ 21 ಮಹಿಳಾ ಆಟಗಾರ್ತಿಯರಿಗೆ ಕೇಂದ್ರ ಒಪ್ಪಂದದಲ್ಲಿ ಸ್ಥಾನ ನೀಡಿದೆ. ಇದರಲ್ಲಿ ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ, ದೀಪ್ತಿ ಶರ್ಮಾ ಮತ್ತು ಜೆಮಿಮಾ ರೋಡ್ರಿಗಸ್ ಎ ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದು, ಈ ನಾಲ್ವರು ಆಟಗಾರ್ತಿಯರು ವಾರ್ಷಿಕವಾಗಿ 50 ಲಕ್ಷ ರೂ. ವೇತನ ಪಡೆಯುತ್ತಾರೆ.

ಬಿ ಗ್ರೇಡ್: ರೇಣುಕಾ ಠಾಕೂರ್, ಶೆಫಾಲಿ ವರ್ಮಾ, ರಿಚಾ ಘೋಷ್, ಸ್ನೇಹ ರಾಣಾ, ರಾಧಾ ಯಾದವ್, ಅಮಂಜೋತ್ ಕೌರ್, ಪ್ರತೀಕಾ ರಾವಲ್, ಕ್ರಾಂತಿ ಗೌಡ್, ಉಮಾ ಛೆಟ್ರಿ ಮತ್ತು ಅರುಂಧತಿ ರೆಡ್ಡಿ ಗ್ರೇಡ್ ಬಿ ನಲ್ಲಿ ಸ್ಥಾನ ಪಡೆದಿದ್ದು, ಇವರಿಗೆ ವಾರ್ಷಿಕವಾಗಿ 30 ಲಕ್ಷ ರೂ. ವೇತನ ಸಿಗಲಿದೆ.

ಸಿ ಗ್ರೇಡ್: ಸಿ ಗ್ರೇಡ್‌ನಲ್ಲಿ ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ಹರ್ಲೀನ್ ಡಿಯೋಲ್, ಕಶ್ವಿ ಗೌತಮ್, ಜಿ ಕಮಲಿನಿ, ವೈಷ್ಣವಿ ಶರ್ಮಾ ಮತ್ತು ತೇಜಲ್ ಸೇರಿದ್ದು, ಇವರಿಗೆ ವಾರ್ಷಿಕ 10 ಲಕ್ಷ ರೂ. ವೇತನ ಸಿಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:20 pm, Mon, 9 February 26

Source link

ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ – Kannada News | Chikkanna new Kannada movie Lakshmiputra shooting in Kashi

ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ‘ಲಕ್ಷ್ಮಿಪುತ್ರ’ (Lakshmiputra) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಎಪಿ ಅರ್ಜುನ್ ಅವರು ಬಂಡವಾಳ ಹೂಡುತ್ತಿದ್ದಾರೆ. ಅನೇಕ ಹೊಸ ಹೀರೋಗಳ ಜೊತೆ ಕೆಲಸ ಮಾಡಿದ ಎ.ಪಿ. ಅರ್ಜುನ್ ಅವರು ಈಗ ಚಿಕ್ಕಣ್ಣ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಎಪಿ ಅರ್ಜುನ್ ಅವರೇ ಕಥೆ ಬರೆದಿದ್ದಾರೆ. ಅವರದ್ದೇ ಬ್ಯಾನರ್​​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಚಿಕ್ಕಣ್ಣ (Chikkanna) ಜೊತೆ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ.

‘ಎಪಿ ಅರ್ಜುನ್ ಫಿಲ್ಮ್’ ಬ್ಯಾನರ್ ಮೂಲಕ ಎ.ಪಿ. ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಸಿನಿಮಾದ ಶೂಟಿಂಗ್ ಬಗ್ಗೆ ಹೊಸ ಅಪ್​ಡೇಟ್ ನೀಡಲಾಗಿದೆ. ‘ಲಕ್ಷ್ಮಿಪುತ್ರ’ ಸಿನಿಮಾಗೆ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ಕಾಶಿಯಲ್ಲಿ ಅದ್ದೂರಿಯಾಗಿ ನಡೆದಿದೆ.

ಮೂರು ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ನಾಯಕ ನಟ ಚಿಕ್ಕಣ್ಣ ಜೊತೆ ಹಿರಿಯ ನಟಿ ತಾರಾ ಕೂಡ ಭಾಗಿ ಆಗಿದ್ದಾರೆ. ಅವರ ಜೊತೆ ಅರವತ್ತಕ್ಕೂ ಹೆಚ್ಚು ಕಲಾವಿದರು ಪಾಲ್ಗೊಂಡಿದ್ದಾರೆ. ಕಾಶಿಯ ಮಣಿಕರ್ಣಿಕಾ ಘಾಟ್, ಬನರಾಸ್, ಗಂಗಾ‌ನದಿ ತೀರ, ಕಾಶಿ ಪ್ರಮುಖ ಬೀದಿಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ. ಆ ಮೂಲಕ ನಿರೀಕ್ಷೆ ಮೂಡಿಸಲಾಗಿದೆ.

ಇನ್ನು, ಈ ಸಿನಿಮಾಗೆ ಎರಡು ದಿನದ ಮಾತಿನ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇದೆ. ಶೀಘ್ರದಲ್ಲೇ ಹಾಡುಗಳ ಚಿತ್ರೀಕರಣವನ್ನು ಚಿತ್ರತಂಡ ಕೈಗೆತ್ತಿಕೊಳ್ಳಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ ‘ಲಕ್ಷ್ಮಿಪುತ್ರ’ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂದು ಗುರಿ ಇಟ್ಟುಕೊಳ್ಳಲಾಗಿದೆ. ವಿಜಯ್ ಸ್ವಾಮಿ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಚಿಕ್ಕಣ್ಣ ಅವರಿಗೆ ವಂದಿತಾ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ‘ಆ ಮಾತಿನಿಂದ ದರ್ಶನ್ ಮುಖಭಾವವೇ ಬದಲಾಗಿತ್ತು’; ಚಿಕ್ಕಣ್ಣ ಹೇಳಿಕೆಯಲ್ಲೇನಿದೆ?

‘ಲಕ್ಷ್ಮಿಪುತ್ರ’ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡಿದ್ದಾರೆ. ಎ.ಪಿ. ಅರ್ಜುನ್ ಅವರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಮಾಸ್ ಮಾದ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್. ಗೌಡ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ನೀಡುತ್ತಿದ್ದಾರೆ. ಧರ್ಮಣ್ಣ, ಕುರಿ ಪ್ರತಾಪ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link