Headlines

ಆಂಧ್ರದಲ್ಲೂ 13 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ

ನವದೆಹಲಿ, ಮಾರ್ಚ್ 6: ಆಂಧ್ರಪ್ರದೇಶವು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ ಎಂದು ಘೋಷಿಸಿದೆ. ಆಂಧ್ರದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (CM Chandrababu Naidu) ಈ ಬಗ್ಗೆ ಆದೇಶ ಹೊರಡಿಸಿದ್ದು, ಹೊಸ ನಿಯಮವನ್ನು ಮುಂದಿನ 3 ತಿಂಗಳುಗಳಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದಿದ್ದಾರೆ. ಈ ನಿರ್ಬಂಧಗಳನ್ನು ಅವರು 16 ವರ್ಷ ವಯಸ್ಸಿನವರೆಗಿನ ಮಕ್ಕಳಿಗೂ ವಿಸ್ತರಿಸುವ ಸುಳಿವು ನೀಡಿದ್ದಾರೆ. ಇದು ಮಕ್ಕಳು ಆನ್‌ಲೈನ್‌ನಲ್ಲಿ ಹೆಚ್ಚು ಸಮಯ ಕಳೆಯುವುದರ ದುಷ್ಪರಿಣಾಮದ ಬಗ್ಗೆ ಸರ್ಕಾರ…

Read More

Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ

2026ನೇ ಕರ್ನಾಟಕ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 1500 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ ಈ ಇಲಾಖೆಗಳಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ನೀಡುವ ಮೊತ್ತವನ್ನು 75 ಸಾವಿರದಿಂದ 1.5 ಲಕ್ಷ…

Read More

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದ 2026–27ನೇ ಸಾಲಿನ ಬಜೆಟ್  (Karnataka Budget) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ…

Read More

ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!

ನವದೆಹಲಿ, ಮಾರ್ಚ್ 5: ಈ ವಿಡಿಯೋ ಎಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಎಂಬುದು ತಿಳಿದಿಲ್ಲ. ಆದರೆ, ಈ ವಿಡಿಯೋ (Video Viral) ನೋಡಿದರೆ ಕಣ್ಣಂಚು ಒದ್ದೆಯಾಗುವುದು ಗ್ಯಾರಂಟಿ. ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾಗಿ ತಬ್ಬಿಕೊಂಡು ಹೆದರಿ ಬಚ್ಚಿಟ್ಟುಕೊಳ್ಳುತ್ತದೆ. ಆ ಕ್ಷಣಕ್ಕೆ ಆ ಮರಿಕೋತಿಗೆ ಆ ಗೊಂಬೆಯೇ ಸಾಂತ್ವನ ನೀಡುವ ಅಮ್ಮನಾಗುತ್ತದೆ! ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಕರ್ನಾಟಕ ಬಜೆಟ್ 2026: ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಅನ್ನು ಇಂದು (ಮಾರ್ಚ್ 06) ಮಂಡಿಸಿದರು. ಹಲವಾರು ಕ್ಷೇತ್ರಗಳಿಗೆ ಹಲವು ಅನುದಾನ, ಯೋಜನೆಗಳನ್ನು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಕೃಷಿ ಇನ್ನಿತರೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಕನ್ನಡ ಚಿತ್ರರಂಗವೂ ಸಹ ಈ ಬಾರಿಯ ಬಜೆಟ್​​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿತ್ತು. ಹಾಗಿದ್ದರೆ ಬಜೆಟ್​​ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ… ಹೆಸರಘಟ್ಟದಲ್ಲಿರುವ ಸರ್ಕಾರಿ…

Read More

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ಬೆಂಗಳೂರು ಮಾ.6: ರಾಜ್ಯದ ಮುಖ್ಯಮಂತ್ರಿ ಅವರು ಇಂದು (ಮಾ.6) ದಾಖಲೆಯ 17ನೇ ಬಜೆಟ್​​​ ಅನ್ನು ಮಂಡಿಸಿದ್ದಾರೆ. ಹಲವು ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದು, ಇದೀಗ ಪೊಲೀಸ್​​​​ ಇಲಾಖೆಗೂ ಹೆಚ್ಚಿನ ಅನುದಾನು ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು 12 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ. ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು…

Read More

ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ

ಬೆಂಗಳೂರು, ಮಾರ್ಚ್ 6: ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಚೇರಿಗಳಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಇ ಸ್ಟಾಂಪಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು. 50 ಲಕ್ಷಕ್ಕೂ ಹೆಚ್ಚು ಇರುವ ಟಿಪ್ಪಣಿಗಳು ಮತ್ತು ಒಂದು ಕೋಟಿಗೂ ಹೆಚ್ಚು ಅಟ್ಲಾಸ್‌ಗಳನ್ನು ಜಿಐಎಸ್ ತಂತ್ರಾಂಶದ ಮೂಲಕ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಿ, ನೊಂದಣಿ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು…

Read More

Video: ಕಾಡುಕೋಣಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ

ನಮ್ಮ ಸುತ್ತಮುತ್ತಲಿನಲ್ಲಿರುವ ಕೆಲವರಿಗೆ ಪ್ರಾಣಿ ಪಕ್ಷಿಗಳೆಂದರೆ (animal and birds) ಬಲು ಇಷ್ಟ. ಹೀಗಾಗಿ ಅವುಗಳಿಗೆ ಆಹಾರ ನೀಡುವುದು. ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ಬಾಯಾರಿಕೆಯನ್ನು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮಹಿಳೆಯದ್ದು (woman) ಅಷ್ಟೇ ದೊಡ್ಡ ಮನಸ್ಸು. ಮನೆ ಹತ್ತಿರ ಬಂದ ಕಾಡು ಕೋಣವೊಂದು ಬಾಯಾರಿಕೆಯಿಂದ ಬಳಲಿದೆ. ಹೀಗಾಗಿ  ಈ ಮೂಕ ಪ್ರಾಣಿಯ ನೀರಿನ ದಾಹವನ್ನು ಅರಿತುಕೊಂಡ ಮಹಿಳೆ, ನೀರು ಕೊಟ್ಟು ಅದರ ಬಾಯಾರಿಕೆಯನ್ನು ನೀಗಿಸಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್…

Read More

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ. ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ…

Read More

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್​ಗಳು..!

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಮುಖ ಕಾರಣ ಸಂಜು ಸ್ಯಾಮ್ಸನ್ ಆರ್ಭಟ, ಜಸ್​ಪ್ರೀತ್ ಬುಮ್ರಾ ಅವರ ನಿಖರ ದಾಳಿ ಮತ್ತು ಅಕ್ಷರ್ ಪಟೇಲ್ ಅವರ ಮಿಂಚಿನ ಫೀಲ್ಡಿಂಗ್. ಅದರಲ್ಲೂ ಅಕ್ಷರ್ ಪಟೇಲ್ ಹಿಡಿದ ಎರಡು ಕ್ಯಾಚ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು ಎಂದರೆ ತಪ್ಪಾಗಲಾರದು. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ವಿಕೆಟ್ ನಿರ್ಣಾಯಕವಾಗಿತ್ತು. 5ನೇ…

Read More