ಕೆಪಿಎಸ್ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಕಿಡಿ – Kannada News | BJP leader Bhaskar Rao spark on KPSC accuses of illegality again
ಬೆಂಗಳೂರು, ಮಾರ್ಚ್ 04: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್ಸಿಯ ಕೆಎಎಸ್ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao) ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯದ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಜವಾಬ್ದಾರಿಯುತ ಸಂಸ್ಥೆಯ ನಂಬಿಕೆಯನ್ನು ಸಾರ್ವಜನಿಕರು ಸಂಪೂರ್ಣವಾಗಿ ಕಳೆದುಕೊಳ್ಳುತ್ತಾರೆಂದು ಕಿಡಿಕಾರಿದ್ದಾರೆ. ಕೆಪಿಎಸ್ಸಿ ಹಗರಣದ ಸುದ್ದಿಗಳು ತೀವ್ರ ಕಳವಳಕಾರಿ ಎಂದ…