Headlines

ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಪ್ರಧಾನಿ ಮೋದಿ ಘರ್ಜನೆ, ಕಾಂಗ್ರೆಸ್-ಡಿಎಂಕೆ ಮೇಲೆ ಭ್ರಷ್ಟಾಚಾರ ಆರೋಪ – Kannada News | Puducherry Elections: PM Modi Attacks Rivals, Highlights Development and Tourism Vision

ಪುದುಚೇರಿ, ಮಾರ್ಚ್​ 01: ತಮಿಳುನಾಡಿನಲ್ಲಿ ಶೀಘ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಗೆ ಭೇಟಿ ನೀಡಿ, ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದು, ಎರಡೂ ಪಕ್ಷಗಳ ಆಡಳಿತ ಭ್ರಷ್ಟಾಚಾರದಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದ ಅವಧಿಯಲ್ಲಿ ಪುದುಚೇರಿಯ ಜನರು ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಳ್ಳಿ, ಆ ವರ್ಷಗಳು ಭ್ರಷ್ಟಾಚಾರ, ಅಪರಾಧ…

Read More

ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ – Kannada News | Iran And Israel War: Ali Khamenei visited in 1981 for alipur Village hospital

ಚಿಕ್ಕಬಳ್ಳಾಪುರ, (ಮಾರ್ಚ್​ 1): ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. ಇನ್ನು ಇರಾನ್ ಸಹಾಯದಿಂದ ಅಲಿಪುರದಲ್ಲಿ ಆಸ್ಪತ್ರೆ ನಿರ್ಮಾಣ…

Read More

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah Condemns US Israel Action on Iran, Criticises Trumps Dual Policy

ಶಿವಮೊಗ್ಗ, ಮಾರ್ಚ್​ 01: ಈ ಯುದ್ಧ ಅಗತ್ಯ ಇರಲಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇರಾನ್​ ಮೇಲೆ ಇಸ್ರೇಲ್​-ಅಮೆರಿಕದಿಂದ ಜಂಟಿ ದಾಳಿ ವಿಚಾರವಾಗಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಮಾತನಾಡಿದ ಅವರು, ಒಂದೆಡೆ ಶಾಂತಿ ಮಂತ್ರ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ದಾಳಿ ವೇಳೆ ಇರಾನ್ ಪರಮೋಚ್ಛ ನಾಯಕ ಖಮನೈ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಖಮೇನಿ ಹತ್ಯೆ ಮಾಡಿದ್ದು ಖಂಡನೀಯ ಎಂದಿದ್ದಾರೆ. ಇನ್ನು ಯುದ್ಧ ಆರಂಭವಾದ ಮೇಲೆ ಕನ್ನಡಿಗರು ಸಿಲುಕಿಕೊಂಡಿದ್ದಾರೆ,…

Read More

Holi 2026: ಭಾರತದಂತೆಯೇ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ದೇಶಗಳಿವು – Kannada News | Holi 2026: These are the countries that celebrate Holi festival like India

ನಮ್ಮ ಭಾರತದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬಗಲ್ಲಿ ಹೋಳಿ (Holi)ಹಬ್ಬವೂ ಒಂದು. ಈ ಬಾರಿ ಮಾರ್ಚ್‌ 3 ಮತ್ತು 4 ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಕ್ಷಣಕ್ಕಾಗಿ ಜನರು ಕಾತುರದಿಂದ ಕಾಯುತ್ತಿದ್ದಾರೆ. ವರ್ಣರಂಜಿತವಾದ ಈ ಹಬ್ಬದಲ್ಲಿ ಪರಸ್ಪರ ಬಣ್ಣಗಳನ್ನು ಮೈಮೇಲೆ ಎರಚಿಕೊಳ್ಳುತ್ತಾ  ಸಂತೋಷವನ್ನು ಹಂಚಿಕೊಳ್ಳುತ್ತಾರೆ, ಯಾವುದೇ ಜಾತಿ ಮತಗಳ ಭೇದವಿಲ್ಲದೆ ಜನ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ.  ಭಾರತದಂತೆ ವಿಶ್ವದ ನಾನಾ ಭಾಗಗಳಲ್ಲೂ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಆ…

Read More

Indian Railways Quota: ಭಾರತೀಯ ರೈಲ್ವೆ ನೇಮಕಾತಿಯಲ್ಲಿ ಅಗ್ನಿವೀರ್ ಮತ್ತು ಮಾಜಿ ಸೈನಿಕರಿಗೆ ವಿಶೇಷ ಮೀಸಲಾತಿ ಘೋಷಣೆ – Kannada News | Indian Railways Quota: Agniveers and Ex Servicemen Get Special Reservation in Recruitment

ಭಾರತೀಯ ರೈಲ್ವೆಯು ಅಗ್ನಿವೀರರು ಹಾಗೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರಿಗೆ ಮಹತ್ವದ ಉಡುಗೊರೆಯನ್ನು ಘೋಷಿಸಿದೆ. ಇನ್ನು ಮುಂದೆ ಅಗ್ನಿವೀರರು ಮತ್ತು ನಿವೃತ್ತ ಸೈನಿಕರು ರೈಲ್ವೆ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ಪಡೆಯಲಿದ್ದಾರೆ. ಈ ಕುರಿತು ಭಾರತೀಯ ರೈಲ್ವೆ ಮತ್ತು ಭಾರತೀಯ ಸೇನೆಯ ನಡುವೆ ಸಹಕಾರ ಚೌಕಟ್ಟು ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಈ ಒಪ್ಪಂದದ ಮೂಲಕ ಅಗ್ನಿಪಥ ಯೋಜನೆಯಡಿ ಸೇವೆ ಸಲ್ಲಿಸಿ ನಿವೃತ್ತರಾಗುವ ಅಗ್ನಿವೀರರು ಹಾಗೂ ಮಾಜಿ ಸೈನಿಕರಿಗೆ ರೈಲ್ವೆ ಉದ್ಯೋಗಗಳಲ್ಲಿ ಅವಕಾಶ ಕಲ್ಪಿಸುವ ವ್ಯವಸ್ಥೆ ರೂಪುಗೊಳ್ಳಲಿದೆ….

Read More

ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ – Kannada News | Amid the Israel–Iran conflict, Dubai Vokkaligara Sangha steps up to help Kannadigas affected by disruptions

ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ಯತೀಶ್ ಗೌಡ ಹಾಸನ, ಮಾರ್ಚ್​​​ 01: ಇರಾನ್​ನಾದ್ಯಂತ ಅಮೆರಿಕ ಮತ್ತು ಇಸ್ರೇಲ್​​ ದಾಳಿ ಮುಂದುವರಿಸಿದೆ. ಯುದ್ಧದ (Middle East Conflict) ಎಫೆಕ್ಟ್​​ ಭಾರತೀಯರಿಗೂ ತಟ್ಟಿದೆ. ಫ್ಲೈಟ್ ಇಲ್ಲದೇ ಪರದಾಟ ನಡೆಸಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ನೂರಾರು ಕನ್ನಡಿಗರು ಸಿಲುಕಿದ್ದಾರೆ. ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೆ ದುಬೈ ಒಕ್ಕಲಿಗರ ಸಂಘ ನೆರವಿಗೆ ಮುಂದಾಗಿದೆ. ತುರ್ತು ಪರಿಸ್ಥಿತಿ ಉಂಟಾದರೆ ಸಂಪರ್ಕ‌ ಮಾಡುವಂತೆ ಮನವಿ ಮಾಡಲಾಗಿದೆ. ಕನ್ನಡಿಗರ ಸಹಾಯಕ್ಕೆ ಮುಂದಾದ ದುಬೈ ಒಕ್ಕಲಿಗರ…

Read More

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು? – Kannada News | Iran And Israel War: Why alipur Village People condolences to Ayatollah Khamenei death? What relationship?

ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986…

Read More

ವಿಚ್ಛೇದನಕ್ಕೆ ಅರ್ಜಿ: ವಿಜಯ್ ಪತ್ನಿ ಇಟ್ಟಿರುವ ಬೇಡಿಕೆಗಳೇನು? – Kannada News | Thalapathy Vijay wife Sangeetha divorce alimony demands details

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ವಿಜಯ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇದೇ ಸಮಯದಲ್ಲಿ ವಿಜಯ್ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ವಿಜಯ್​​ಗೆ ರಾಜಕೀಯವಾಗಿ ಸಣ್ಣ ಹಿನ್ನಡೆ ಮೂಡಿಸಿದೆ. ವಿಚ್ಚೇದನಕ್ಕೆ ಅರ್ಜಿ ಹಾಕಿರುವ ಸಂಗೀತ, ವಿಜಯ್ ಎದುರು ಭಾರಿ ಬೇಡಿಕೆಗಳನ್ನು ಇರಿಸಿದ್ದಾರೆ. ವಿಚ್ಛೇದನಕ್ಕಾಗಿ ಭಾರಿ ಮೊತ್ತವನ್ನೇ ವಿಜಯ್ ಅವರು ಪತ್ನಿಗೆ ನೀಡಬೇಕಿದೆ. ವಿಚ್ಚೇದನಕ್ಕೆ ಕಳೆದ ವರ್ಷ ಡಿಸೆಂಬರ್​​ನಲ್ಲಿಯೇ ಅರ್ಜಿ…

Read More

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್ – Kannada News | Actor Vinay Rajkumar takes part in Karnataka State Police run in Mysore

ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್​ನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ. ನಮ್ಮ ಪೊಲೀಸ್, ನಮ್ಮ ಹೆಮ್ಮೆ ಎಂಬ ಟ್ಯಾಗ್ ಲೈನ್ ಕೇಳಲು ಬಹಳ ಖುಷಿ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ. ‘ಇತ್ತೀಚೆಗೆ ಮೈಸೂರಲ್ಲಿ ಪೊಲೀಸರು ದೊಡ್ಡ ಡ್ರಗ್ಸ್ (Drugs) ಜಾಲ ಪತ್ತೆ ಮಾಡಿದ್ದಾರೆ. ಅದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಕೆಲವರು ಮನರಂಜನೆಗೆ, ಕೆಲವರು ನೋವಿಗೆ ಡ್ರಗ್ಸ್…

Read More

ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ, ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು – Kannada News | US Israel Strike Kills Khamenei: Karachi Embassy Attacked Amidst Iran Vows Retaliation

ಕರಾಚಿ, ಮಾರ್ಚ್​ 01: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್(Iran) ಮೇಲೆ ವೈಮಾನಿಕ ದಾಳಿ ನಡೆಸಿದ ಪರಿಣಾಮ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಈ ಹತ್ಯೆಯನ್ನು ಖಂಡಿಸಿ, ಪಾಕಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕರಾಚಿಯಲ್ಲಿರುವ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೈಯಲ್ಲಿ ಕೋಲು ಹಾಗೂ ಕಲ್ಲುಗಳನ್ನು ಹಿಡಿದಿದ್ದ ನೂರಾರು ಜನರ ಗುಂಪು ರಾಯಭಾರಿ ಕಚೇರಿಯತ್ತ ನುಗ್ಗಿ ಕಲ್ಲು ತೂರಾಟ ನಡೆಸಿತು. ಇರಾನ್…

Read More