Category Archives: Blog

Your blog category

ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ – Kannada News | Bengaluru Sump Tragedy: 3 Dead Due to Chemical Fumes in Rainwater Pit

ಬೆಂಗಳೂರು, ಫೆಬ್ರವರಿ 28: ಮಳೆ ನೀರಿನ ಇಂಗು ಗುಂಡಿಗೆ ಮೂರು ಬಲಿ (death) ಆಗಿರುವಂತಹ ಘಟನೆ ನಗರದ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ನಡೆದಿದೆ. ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಮೃತರು. ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಮಾಲೀಕ ಮುನಿಶಾಮಪ್ಪ 12 ವರ್ಷಗಳ ಹಿಂದೆಯೇ ಇಂಗು ಗುಂಡಿ ನಿರ್ಮಿಸಿದ್ದರೂ ಬಳಸುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ನಾರುತ್ತಿದ್ದವು. ಕೆಮಿಕಲ್ ಹಾಕಿ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ  ಉಸಿರಾಟದ ತೊಂದರೆಯಾಗಿ ಮುನಿಶಾಮಪ್ಪ ಮೂರ್ಛೆ ಹೋಗಿದ್ದಾರೆ.

ಇದನ್ನೂ ಓದಿ: ಕುಡಿದ ನಶೆಯಲ್ಲಿ ವ್ಯಕ್ತಿ ಮೇಲೆ ಕಾರು ಹರಿಸಿ ಕೊಲೆ; ಪ್ರಭಾವಿ ಮುಖಂಡರ ಮಕ್ಕಳು ಅಂದರ್!

ಮಾಲೀಕನನ್ನು ರಕ್ಷಿಸಲು ಹೋದ ಪ್ಲಂಬರ್ ರುದ್ರಕುಮಾರ್​​ ಮೂರ್ಛೆ ಹೋಗಿದ್ದಾರೆ. ಇವರಿಬ್ಬರನ್ನು ನೋಡಲು ಹೋದ ವಿಶ್ವನಾಥ್ ಆಚಾರಿ ಎಂಬ ಯುವಕ ಕೂಡ ಮೂರ್ಛೆಹೋಗಿದ್ದಾನೆ. ವಿಶ್ವನಾಥ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೂವರು ಮೃತಪಟ್ಟಿದ್ದಾರೆ.

ಸಾರಿಗೆ ಬಸ್​ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಸಾರಿಗೆ ಬಸ್​ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ. ಬಸವರಾಜ್​(21) ಮೃತ ವಿದ್ಯಾರ್ಥಿ. ಆಟೋದಲ್ಲಿ ಹೋಗ್ತಿದ್ದಾಗ ಬಸವರಾಜ್ ಆಯತಪ್ಪಿ ಕೆಳಗೆ ಬಿದಿದ್ದಾರೆ. ಬಿಎಸ್ಸಿ ಅಂತಿಮ ವರ್ಷದಲ್ಲಿ ಓದುತ್ತಿದ್ದ. ರಾಯಚೂರು ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ

ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಗುಲಗಳಲೆ ಬಳಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ತಮಿಳುನಾಡು ಮೂಲದ ಧನುಷ್(25) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ

ಗಂಭೀರ ಗಾಯಗೊಂಡ ಮೂವರಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ನೇಹಿತರ ಜೊತೆ ಕಾರಿನಲ್ಲಿ ಧರ್ಮಸ್ಥಳಕ್ಕೆ ಧನುಷ್ ಹೊರಟಿದ್ದರು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಧನು ರಾಶಿಯವರಿಗೆ ಮಾರ್ಚ್ ತಿಂಗಳಲ್ಲಿ ಏನೆಲ್ಲ ಸಿಗಲಿದೆ…?

ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳ ಸಂಚಾರವು ಜೀವನದ ವಿವಿಧ ಆಯಾಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಧನು ರಾಶಿಯ ಅಧಿಪತಿ ಗುರುವು ಈ ಸಮಯದಲ್ಲಿ ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ವಿಶೇಷ ಶಕ್ತಿಯನ್ನು ನೀಡುತ್ತದೆ.

ಧನು ರಾಶಿ:

ಮಾರ್ಚ್ 2026ರ ದಶಫಲಗಳ ಸಮೀಕ್ಷೆಯಲ್ಲಿ
​ಧನು ರಾಶಿಯವರಿಗೆ ಈ ತಿಂಗಳು ಸಾಮಾಜಿಕ ಗೌರವ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರುವ ಲಕ್ಷಣಗಳಿವೆ. ಆದರೆ, ನಾಲ್ಕನೇ ಮನೆಯಲ್ಲಿರುವ ಶನಿಯ ಪ್ರಭಾವವು ಸ್ವಲ್ಪ ಎಚ್ಚರಿಕೆಯನ್ನು ಬಯಸುತ್ತದೆ.

​ಉತ್ತಮ ಫಲ ನೀಡುವ ದಶೆಗಳು

​ಈ ದಶೆಗಳು ನಡೆಯುತ್ತಿದ್ದರೆ ನಿಮಗೆ ಅದೃಷ್ಟ ಮತ್ತು ಯಶಸ್ಸು ಒದಗಿ ಬರಲಿದೆ.

​ಗುರು ದಶೆ :

ಧನು ರಾಶಿಯವರಿಗೆ ಗುರುವು ಲಗ್ನಾಧಿಪತಿಯಾಗಿದ್ದು, ಈ ಸಮಯದಲ್ಲಿ ಏಳನೇ ಮನೆಯಲ್ಲಿ ಇರುತ್ತಾನೆ. ಈ ದಶೆ ನಡೆಯುತ್ತಿದ್ದರೆ ಅವಿವಾಹಿತರಿಗೆ ವಿವಾಹ ಯೋಗ, ವ್ಯಾಪಾರದಲ್ಲಿ ಪಾಲುದಾರಿಕೆಯಿಂದ ಲಾಭ ಮತ್ತು ಸಮಾಜದಲ್ಲಿ ದೊಡ್ಡ ಮಟ್ಟದ ಹೆಸರು ಸಿಗಲಿದೆ.

​ಸೂರ್ಯ ದಶೆ :

ಮಾರ್ಚ್ ಮಧ್ಯಭಾಗದವರೆಗೆ ಸೂರ್ಯನು ಅನುಕೂಲಕರ ಸ್ಥಾನದಲ್ಲಿರುವುದರಿಂದ ಸರ್ಕಾರಿ ಕೆಲಸಗಳಲ್ಲಿ ಜಯ ಮತ್ತು ತಂದೆಯ ಕಡೆಯಿಂದ ಆರ್ಥಿಕ ಸಹಾಯ ದೊರೆಯಲಿದೆ. ಉದ್ಯೋಗದಲ್ಲಿ ಬಡ್ತಿಗಾಗಿ ಕಾಯುತ್ತಿರುವವರಿಗೆ ಇದು ಸುವರ್ಣ ಕಾಲ.

​ಮಧ್ಯಮ ಫಲ ನೀಡುವ ದಶೆಗಳು

​ಈ ದಶೆಗಳು ನಡೆಯುತ್ತಿದ್ದರೆ ಫಲಿತಾಂಶಗಳು ಮಿಶ್ರಿತವಾಗಿರುತ್ತವೆ. ಕೆಲಸಗಳು ಸ್ವಲ್ಪ ವಿಳಂಬವಾಗಿ ಪೂರ್ಣಗೊಳ್ಳುತ್ತವೆ.

​ಬುಧ ದಶೆ :

ಬುಧನು ನಿಮ್ಮ ಹತ್ತನೇ ಮನೆಯ ಅಧಿಪತಿಯಾಗಿದ್ದರೂ, ಮಾರ್ಚ್ ಆರಂಭದಲ್ಲಿ ವಕ್ರಗತಿಯಲ್ಲಿರುವುದರಿಂದ ವೃತ್ತಿ ಕ್ಷೇತ್ರದಲ್ಲಿ ಗೊಂದಲಗಳು ಉಂಟಾಗಬಹುದು. ಮಾತಿನ ಮೇಲೆ ಸಂಯಮವಿದ್ದರೆ ವ್ಯಾಪಾರದಲ್ಲಿ ಸಾಧಾರಣ ಲಾಭ ಗಳಿಸಬಹುದು.

​ಶುಕ್ರ ದಶೆ :

ಐಷಾರಾಮಿ ಜೀವನದ ಮೇಲೆ ಆಸೆ ಹೆಚ್ಚಾಗಲಿದೆ. ಶುಕ್ರನ ದಶೆಯು ಹಣಕಾಸಿನ ಹರಿವನ್ನು ನೀಡಿದರೂ, ಅನಗತ್ಯ ಖರ್ಚುಗಳನ್ನು ಸಮತೋಲನ ಮಾಡುವುದು ಸವಾಲಾಗಬಹುದು. ಪ್ರೇಮ ಜೀವನದಲ್ಲಿ ಮಿಶ್ರ ಪ್ರತಿಕ್ರಿಯೆ ಇರುತ್ತದೆ.

​ಅಧಮ ಅಥವಾ ಎಚ್ಚರಿಕೆಯ ದಶೆಗಳು

​ಈ ದಶೆಗಳು ನಡೆಯುತ್ತಿರುವಾಗ ಮಾನಸಿಕ ಮತ್ತು ದೈಹಿಕ ಜಾಗರೂಕತೆ ಅತ್ಯಗತ್ಯ.

​ಶನಿ ದಶೆ :

ಧನು ರಾಶಿಯವರಿಗೆ ಶನಿಯು ಪ್ರಸ್ತುತ ನಾಲ್ಕನೇ ಮನೆಯಲ್ಲಿ ಸಂಚರಿಸುತ್ತಿದ್ದಾನೆ. ಇದನ್ನು ಅರ್ಧಾಷ್ಟಮ ಶನಿ ಎನ್ನಲಾಗುತ್ತದೆ. ಶನಿ ದಶೆ ಅಥವಾ ಅಂತರ್ದಶೆ ನಡೆಯುತ್ತಿದ್ದರೆ ಮನೆಯಲ್ಲಿ ಅಶಾಂತಿ, ತಾಯಿಯ ಆರೋಗ್ಯದಲ್ಲಿ ಏರುಪೇರು ಅಥವಾ ಆಸ್ತಿ ವಿಚಾರದಲ್ಲಿ ವಿವಾದಗಳು ಉಂಟಾಗಬಹುದು.

​ರಾಹು ದಶೆ :

ರಾಹುವು ನಾಲ್ಕನೇ ಮನೆಯಲ್ಲಿ ಶನಿಯೊಂದಿಗೆ ಸೇರುವುದರಿಂದ ಮಾನಸಿಕ ನೆಮ್ಮದಿಗೆ ಭಂಗ ಬರಬಹುದು. ವಿನಾಕಾರಣ ಭಯ ಅಥವಾ ಗಾಬರಿ ಉಂಟಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ಹೊಸ ಮನೆ ಖರೀದಿಸುವ ನಿರ್ಧಾರವನ್ನು ಮುಂದೂಡುವುದು ಉತ್ತಮ.

ಗುರುವು ನಿಮ್ಮ ರಾಶ್ಯಾಧಿಪತಿಯಾಗಿರುವುದರಿಂದ ವಿಷ್ಣುವಿನ ಆರಾಧನೆ ನಿಮಗೆ ಆರ್ಥಿಕ ಮತ್ತು ಮಾನಸಿಕ ಇನ್ನಷ್ಟು ಸ್ಥಿರತೆ ನೀಡುತ್ತದೆ. ಪ್ರತಿ ಶನಿವಾರ ಹನುಮಂತನಿಗೆ ಅಥವಾ ಶನಿದೇವನಿಗೆ ಎಳ್ಳೆಣ್ಣೆ ದೀಪ ಹಚ್ಚಿ. ಇದು ಅರ್ಧಾಷ್ಟಮ ಶನಿಯ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಅಥವಾ ಹಳದಿ ಬಣ್ಣದ ಬಟ್ಟೆಗಳನ್ನು ದಾನ ಮಾಡುವುದರಿಂದ ಗುರುವಿನ ಕೃಪೆಗೂ ಪಾತ್ರರಾಗಲು ಸಾಧ್ಯ.

– ಲೋಹಿತ ಹೆಬ್ಬಾರ್

Source link

ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ – Kannada News | Urgent Plea: Indian Students in Iran Seek Govt Help Amidst Israel US Airstrikes

ಇಸ್ರೇಲ್ ಮತ್ತು ಅಮೆರಿಕದ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಈಗ ತೀವ್ರ ಆತಂಕದಲ್ಲಿದ್ದಾರೆ. ವಿಶೇಷವಾಗಿ ತೆಹ್ರಾನ್‌ನಲ್ಲಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ತುರ್ತು ತೆರವು ಕಾರ್ಯಾಚರಣೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಸರಣಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ನಾವು ಇರುವ ಜಾಗದ ಹತ್ತಿರವೇ ಭಾರಿ ಸ್ಫೋಟದ ಶಬ್ದಗಳು ಕೇಳಿಸುತ್ತಿವೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿದೆ, ಆಹಾರ ಮತ್ತು ನೀರಿಗೆ ತೊಂದರೆಯಾಗುತ್ತಿದೆ. ನಾವು ಇಲ್ಲೇ ಸಿಲುಕಿಕೊಂಡಿದ್ದೇವೆ, ದಯವಿಟ್ಟು ಭಾರತ ಸರ್ಕಾರ ನಮ್ಮನ್ನು ಬೇಗ ಇಲ್ಲಿಂದ ಕರೆದೊಯ್ಯಲಿ.” ಎಂದು ಭಾರತೀಯ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್ – Kannada News | Drone Prathap Stuck in Abu Dhabi airport shared video

ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ.

ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ತಾವು ಅಬುದಾಬಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವುದಾಗಿ ಹೇಳಿದ್ದಾರೆ. ಇಂದು ರಾತ್ರಿ ಅವರು ಬೆಂಗಳೂರಿಗೆ ವಾಪಸ್ ಹೊರಡಬೇಕಿತ್ತಂತೆ ಅದಕ್ಕಾಗಿ ಟಿಕೆಟ್ ಸಹ ಬುಕ್ ಮಾಡಿದ್ದರಂತೆ, ಆದರೆ ಯುದ್ಧ ಭೀತಿಯಿಂದಾಗಿ ಭಾರತದ ಎಲ್ಲ ವಿಮಾನಗಳನ್ನು ರದ್ದು ಮಾಡಲಾಗಿದೆ. ಇದೇ ಕಾರಣಕ್ಕೆ ತಾವು ಅಬುದಾಬಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವುದಾಗಿ ಡ್ರೋನ್ ಪ್ರತಾಪ್ ಹೇಳಿದ್ದಾರೆ.

‘ಮುಂದಿನ 12 ಗಂಟೆಗಳ ಕಾಲದ ಎಲ್ಲ ವಿಮಾನ ಸೇವೆಗಳನ್ನು ರದ್ದು ಮಾಡಿರುವುದಾಗಿ ಹೇಳುತ್ತಿದ್ದಾರೆ, 12 ಗಂಟೆ ಆದ ಬಳಿಕ ಹೊಸ ಅಪ್​​​ಡೇಟ್ ಕೊಡುತ್ತಾರಂತೆ. ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಅನೌನ್ಸ್​​ಮೆಂಟ್ ಮಾಡುತ್ತಿದ್ದಾರೆ’ ಎಂದಿರುವ ಡ್ರೋನ್ ಪ್ರತಾತ್, ಅಲ್ಲಿ ವಿಮಾನಗಳು ಕ್ಯಾನ್ಸಲ್ ಆಗಿರುವ ದೊಡ್ಡ ಪಟ್ಟಿಯನ್ನು ವಿಡಿಯೋನಲ್ಲಿ ತೋರಿಸಿದ್ದಾರೆ. ಮುಂದಿನ ಅರ್ಧದಿನ ಡ್ರೋನ್ ಪ್ರತಾಪ್ ಮತ್ತು ಭಾರತಕ್ಕೆ ಬರಲು ಅಣಿಯಾಗಿದ್ದ ಹಲವಾರು ಮಂದಿ ವಿಮಾನ ನಿಲ್ದಾಣದಲ್ಲಿಯೇ ಕಳೆಯಬೇಕಿದೆ.

ಇದನ್ನೂ ಓದಿ:ಸಹಾಯ ಮಾಡಿದವರನ್ನು ಮರೆಯಲಿಲ್ಲ ಡ್ರೋನ್ ಪ್ರತಾಪ್

ಕಳೆದ ಜನವರಿಯಲ್ಲಿ ವಿಡಿಯೋ ಮಾಡಿದ್ದ ಡ್ರೋನ್ ಪ್ರತಾಪ್, ತಮ್ಮ ಡ್ರೋನಾರ್ಕ್ ಕಂಪೆನಿಯನ್ನು ದುಬೈನಲ್ಲಿ ನೊಂದಣಿ ಮಾಡಿಸಿದ್ದಾಗಿ ಹೇಳಿದ್ದರು. ಇತ್ತೀಚೆಗೆ ದುಬೈಗೆ ಹೋಗಿದ್ದ ಡ್ರೋನ್ ಪ್ರತಾಪ್ ಅಲ್ಲಿ ತಮ್ಮ ಬೆಂಬಲಿಗರೊಬ್ಬರನ್ನು ಭೇಟಿಯಾಗಿ ಅವರಿಗೆ ಉಡುಗೊರೆ ನೀಡಿದ್ದರು. ಬಳಿಕ ಅಲ್ಲಿನ ಫಾರಂ ಒಂದರಲ್ಲಿ ಹಣ್ಣು ಕೃಷಿ ನೋಡಿ, ಮಾಹಿತಿಯನ್ನು ವ್ಲಾಗ್​​​ನಲ್ಲಿ ಹಂಚಿಕೊಂಡಿದ್ದರು. ಅಲ್ಲಿನ ಕನ್ನಡಿಗರ ಹೋಟೆಲ್​​ಗೆ ಭೇಟಿ ನೀಡಿ ಮುದ್ದೆ ಸಹ ಮಾಡಿದ್ದರು. ಆದರೆ ಇದೀಗ ವಾಪಸ್ ಬೆಂಗಳೂರಿಗೆ ಬರುವ ಸಮಯದಲ್ಲಿ ಅವರ ವಿಮಾನ ರದ್ದಾಗಿ ಅಬುದಾಬಿಯಲ್ಲಿ ಸಿಲುಕಿಕೊಳ್ಳುವಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:56 pm, Sat, 28 February 26

Source link

ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು – Kannada News | Gadag: Gruhalakshmi Beneficiaries Donate Scheme Funds for Renuka Yellamma Temple

ಗದಗ, ಫೆಬ್ರವರಿ 28: ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಮಾದರಿ ಕಾರ್ಯ ಮಾಡಿದ್ದಾರೆ. ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಸುಮಾರು 850 ಮಹಿಳೆಯರು ಸ್ವಯಂಪ್ರೇರಣೆಯಿಂದ ಈ ದೇಣಿಗೆ ಸಂಗ್ರಹದಲ್ಲಿ ಭಾಗವಹಿಸಿದ್ದಾರೆ. ನಾಲ್ಕು ದಿನದಲ್ಲಿ 2 ಲಕ್ಷ 50 ಸಾವಿರ ರೂ ಸಂಗ್ರಹಿಸಿದ್ದಾರೆ. ದೇವಸ್ಥಾನದ ಕಟ್ಟಡ ಕಾಮಗಾರಿಯು ಹಣಕಾಸಿನ ತೊಂದರೆಯಿಂದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಕೆಲಸವನ್ನು ಪುನರಾರಂಭಿಸಲು ಮಹಿಳೆಯರು ನಿರ್ಧರಿಸಿದ್ದಾರೆ. ದೇವಾಲಯ ಸಂಪೂರ್ಣಗೊಳ್ಳುವವರೆಗೂ ಅಗತ್ಯಬಿದ್ದರೆ ಮತ್ತಷ್ಟು ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಆಂಧ್ರದ ಕಾಕಿನಾಡ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 21 ಜನರ ಸಜೀವದಹನ – Kannada News | Andhra Pradesh Kakinada fireworks factory blast kills 21 dozens injured

ಕಾಕಿನಾಡ, ಫೆಬ್ರವರಿ 28: ಆಂಧ್ರದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 21 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟನೆಯ ಕುರಿತು ಆಂಧ್ರದ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ವಿಜಯನಗರದ ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚಂದ್ರಬಾಬು ಮಾತನಾಡಿದರು. ಅಪಘಾತದ ಕಾರಣಗಳ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳಿಂದ ವಿಚಾರಿಸಿದರು.

ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯರು ಕೂಡ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಬೆಂಕಿಯನ್ನು ನಂದಿಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಪಟಾಕಿಗಳನ್ನು ತಯಾರಿಸುವಾಗ ದೊಡ್ಡ ಪ್ರಮಾಣದ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದ ಪರಿಣಾಮವಾಗಿ ಕಾರ್ಖಾನೆಯ ಬಳಿಯ ಕಟ್ಟಡಗಳು ಸಹ ನಾಶವಾದವು.

ಇದನ್ನೂ ಓದಿ: ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ

ಅಪಘಾತ ಸಂಭವಿಸಿದ ಸೂರ್ಯ ಪಟಾಕಿ ಕಾರ್ಖಾನೆಯಲ್ಲಿ ಸುಮಾರು 30 ಜನರು ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ತಿಳಿಸಿದರು. ಈ ಹಠಾತ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿದ್ದ ಕಾರ್ಮಿಕರು ಬೆಂಕಿಯಲ್ಲಿ ಸಿಲುಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯ ಪಟಾಕಿ ತಯಾರಕರ ಪ್ರಾಣಹಾನಿಗೆ ಸಿಎಂ ಚಂದ್ರಬಾಬು ದುಃಖ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PAK vs SL: ಒಂದೇ ಪಂದ್ಯದಲ್ಲಿ 3 ವಿಶ್ವದಾಖಲೆಗಳನ್ನು ಮುರಿದ ಸಾಹಿಬ್ಜಾದಾ ಫರ್ಹಾನ್

Source link

ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ – Kannada News | Dhanveer Gowda said some people trying to spread negative reviews on his movie

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಪರಸ್ಪರ ‘ಥುಳಿಯುವ’ ಸಂಸ್ಕೃತಿ ಹೆಚ್ಚಾದಂತಿದೆ. ಹೊಸ ಸಿನಿಮಾ ಬಿಡುಗಡೆ ಸಮಯದಲ್ಲಿಯೂ ನಡೆಯುವ ಪತ್ರಿಕಾಗೋಷ್ಠಿಗಳಲ್ಲಿ ಈ ರೀತಿಯ ಮಾತುಗಳು ಸಾಮಾನ್ಯ ಆಗಿಬಿಟ್ಟಿವೆ. ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುವ ಪ್ರಯತ್ನವೋ ತಿಳಿಯದು. ಇದೀಗ ಧನ್ವೀರ್ ಗೌಡ ಅವರು ಸಹ ಇಂಥಹುದೇ ಮಾತುಗಳನ್ನಾಡಿದ್ದಾರೆ.

ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾ ನಿನ್ನೆ ಸಂಜೆ ಬಿಡುಗಡೆ ಆಗಿದೆ. ತಾಂತ್ರಿಕ ಕಾರಣಗಳಿಂದ ಸಿನಿಮಾದ ಮೊದಲೆರಡು ಶೋಗಳು ರದ್ದಾಗಿದ್ದವು, ಸಂಜೆ ವೇಳೆಗೆ ಸಿನಿಮಾ ಬಿಡುಗಡೆ ಆಯ್ತು. ಮೊದಲ ದಿನ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆಯೇ ದೊರಕಿದೆ. ನಿನ್ನೆ ಚಿತ್ರಮಂದಿರ ಭೇಟಿ ವೇಳೆ ಮಾತನಾಡಿದ ಧನ್ವೀರ್ ಗೌಡ, ಕೆಲವರು ತಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಸಿದ್ದಾರೆಂದು, ಅಂಥಹವರಿಂದಲೇ ತಮ್ಮ ಸಿನಿಮಾದ ಮೊದಲ ಎರಡು ಶೋಗಳು ರದ್ದಾಗಿವೆ ಎಂದು ಹೇಳಿದರು.

‘ಹಯಗ್ರೀವ’ ಸಿನಿಮಾದ ನಿರ್ಮಾಪಕರು ಇತ್ತೀಚೆಗೆ ಮಾತನಾಡಿ, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡಲೆಂದೇ ವಾಟ್ಸ್ ಆಫ್ ಗ್ರೂಪ್ ರಚಿಸಲಾಗಿದೆ ಎಂದಿದ್ದರು. ಈ ಬಗ್ಗೆಯೂ ಮಾತನಾಡಿದ ಧನ್ವೀರ್, ಪರೋಕ್ಷವಾಗಿ ಟಾಂಗ್ ನೀಡುತ್ತಾ, ‘ನಮ್ಮ ಮೇಲೆ ಲವ್ ಜಾಸ್ತಿ ಆಗಿದೆ. ಆದರೆ ನಮ್ಮ ಪ್ರೀತಿಯನ್ನು ನಾವು ಮುಂದಿನ ದಿನಗಳಲ್ಲಿ ತೋರಿಸ್ತೀವಿ’ ಎಂದು ಡೈಲಾಗ್ ಹೊಡೆದರು.

ಇದನ್ನೂ ಓದಿ:‘ದರ್ಶನ್ ಕೇಸಲ್ಲಿ ನೀನು ತಲೆ ತೂರಿಸಬೇಡ’: ಧನ್ವೀರ್ ಗೌಡಗೆ ಪೊಲೀಸ್ ವಾರ್ನಿಂಗ್

‘ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ಆ ದೇವರು ಬಿಟ್ಟರೆ ನಮ್ಮನ್ನು ಇನ್ಯಾರೂ ಸಹ ಥುಳಿಯಲು ಆಗಲ್ಲ’ ಎಂದ ಧನ್ವೀರ್ ಗೌಡ, ಮುಂದಿನ ದಿನಗಳಲ್ಲಿ ವಿಶೇಷ ಪತ್ರಿಕಾಗೋಷ್ಠಿ ಮಾಡಿ, ತಮ್ಮ ಸಿನಿಮಾದ ವಿರುದ್ಧ ತಮ್ಮ ವಿರುದ್ಧ ನಡೆದ ಪಿತೂರಿಯ ಪೂರ್ಣ ಮಾಹಿತಿ ಹಂಚಿಕೊಳ್ಳುವುದಾಗಿ ಸಹ ಹೇಳಿದರು.

‘ಹಯಗ್ರಿವ’ ಸಿನಿಮಾನಲ್ಲಿ ಧನ್ವೀರ್ ಜೊತೆಗೆ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಗಿಲ್ಲಿ ನಟ ಹಾಸ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ರಘುಕುಮಾರ್, ಸಿನಿಮಾನಲ್ಲಿ ಧನ್ವೀರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪಾತ್ರಕ್ಕಾಗಿ ಅವರು ಸಿಕ್ಸ್​ಪ್ಯಾಕ್ ಸಹ ಮಾಡಿದ್ದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಶಾಂತಿಯುತ ಮಾತುಕತೆಗೆ ಕರೆ ನೀಡಿದ ಭಾರತ – Kannada News | Deeply Concerned India Reacts To Iran Conflict Urges To Avoid Escalation

ನವದೆಹಲಿ, ಫೆಬ್ರವರಿ 28: ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ದೇಶಗಳು ಇರಾನ್ (Iran) ಮೇಲೆ ಜಂಟಿಯಾಗಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎರಡೂ ಕಡೆಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಗೆಹರಿಸಲು ‘ಮಾತುಕತೆ ಮತ್ತು ರಾಜತಾಂತ್ರಿಕತೆ’ಗೆ ಭಾರತ ಕರೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ ಪ್ರಜೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿವೆ. ಅವರು ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರತೀಯ ನಾಗರಿಕರು ಸ್ಥಳೀಯ ಭದ್ರತಾ ಮಾರ್ಗದರ್ಶನವನ್ನು ಅನುಸರಿಸಬೇಕು ಮತ್ತು ರಾಯಭಾರ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್

“ಸಂಘರ್ಷಕ್ಕೊಳಗಾದ ಎಲ್ಲ ಕಡೆಯವರು ಸಂಯಮದಿಂದ ವರ್ತಿಸಬೇಕು, ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಮತ್ತು ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು” ಎಂದು ಜೈಸ್ವಾಲ್ ಹೇಳಿದ್ದಾರೆ. ಇಸ್ರೇಲ್-ಇರಾನ್-ಅಮೆರಿಕದ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು. ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಜೈಸ್ವಾಲ್ ಹೇಳಿದ್ದಾರೆ.

ಇಂದಿನ ದಾಳಿಯಲ್ಲಿ ಇರಾನ್‌ನ ರಕ್ಷಣಾ ಸಚಿವ ಅಮೀರ್ ನಾಸಿರ್ಜಾದೆ ಮತ್ತು ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಮೊಹಮ್ಮದ್ ಪಕ್‌ಪೂರ್ ಕೊಲ್ಲಲ್ಪಟ್ಟಿದ್ದಾರೆ ಎನ್ನಲಾಗಿದೆ. ತನ್ನ ದೇಶದ ಮೇಲಿನ ದಾಳಿಗೆ ಇರಾನ್ ಕೂಡ ಪ್ರತೀಕಾರದ ದಾಳಿಗಳ ಬಗ್ಗೆ ಎಚ್ಚರಿಕೆ ನೀಡಿದೆ. ಕತಾರ್ ಮತ್ತು ಕುವೈತ್‌ ಸೇರಿದಂತೆ 6 ದೇಶಗಳ ಯುಎಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇರಾನ್ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಬುಧಾಬಿ ಮತ್ತು ದುಬೈ ಮೇಲೆಯೂ ದಾಳಿ ಮಾಡಿ ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿದೆ.

ಇದನ್ನೂ ಓದಿ: ಇರಾನ್ ಮೇಲಿನ ವೈಮಾನಿಕ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್

ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ, ಜರ್ಮನಿ, ಫ್ರಾನ್ಸ್, ಸ್ವಿಟ್ಜರ್ಲೆಂಡ್ ಮತ್ತು ಇಟಲಿ ಸೇರಿದಂತೆ ಹಲವಾರು ಯುರೋಪಿಯನ್ ರಾಷ್ಟ್ರಗಳು ತುರ್ತು ಸಭೆಗಳನ್ನು ನಡೆಸುತ್ತಾ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ – Kannada News | Iran’s Top Military Leaders Dead in Israel Strikes: Middle East Escalation Feared

ಇರಾನ್‌ನ ರಕ್ಷಣಾ ಸಚಿವ ಮತ್ತು IRGC ಕಮಾಂಡರ್

ಟೆಹ್ರಾನ್, ಫೆ.28: ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಇಬ್ಬರು ಪ್ರಭಾವಿ ನಾಯಕರು ಹತರಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇರಾನ್‌ನ ರಕ್ಷಣಾ ಸಚಿವ (Defence Minister) ಮತ್ತು ಇರಾನ್‌ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಘಟಕವಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್ ಈ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಎನ್​​​ಎಐ ವರದಿಯನ್ನು ಪ್ರಕಟಿಸಿದೆ. ಇರಾನ್‌ನ ರಾಜಧಾನಿ ಟೆಹ್ರಾನ್ ಮತ್ತು ಪ್ರಮುಖ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಈ ವೇಳೆ ಇರಾನ್‌ನ ಉನ್ನತ ಅಧಿಕಾರಿಗಳು ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆಯೇ ದಾಳಿ ನಡೆದಿದೆ ಎನ್ನಲಾಗಿದೆ.

ಇಸ್ರೇಲ್ ಮಾಧ್ಯಮಗಳು ಈ ಹತ್ಯೆಯನ್ನು ದೃಢಪಡಿಸಿವೆಯಾದರೂ, ಇರಾನ್ ಸರ್ಕಾರವು ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ರಕ್ಷಣಾ ಸಚಿವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕೆಲವು ಮೂಲಗಳು ತಿಳಿಸಿವೆ. ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಸ್ಥಿತಿಯ ಬಗ್ಗೆ ಈಗಾಗಲೇ ಗೊಂದಲವಿರುವ ಬೆನ್ನಲ್ಲೇ, ರಕ್ಷಣಾ ಸಚಿವರ ಹತ್ಯೆಯ ಸುದ್ದಿ ಇರಾನ್ ಸೈನ್ಯಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಈ ಪ್ರಮುಖ ನಾಯಕರ ಹತ್ಯೆಯ ನಂತರ ಇರಾನ್ ದೊಡ್ಡ ಮಟ್ಟದ ಪ್ರತೀಕಾರಕ್ಕೆ ಮುಂದಾಗುವ ಸಾಧ್ಯತೆ ಇದೆ. ಇದರಿಂದಾಗಿ ಅಲ್ಲಿರುವ ಭಾರತೀಯ ಪ್ರಜೆಗಳಿಗೆ ಈಗಾಗಲೇ ನೀಡಿರುವ ‘ರೆಡ್ ಅಲರ್ಟ್’ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗಿದೆ. ಟೆಹ್ರಾನ್‌ನಲ್ಲಿರುವ ಇರಾನ್‌ನ ರಾಜಕೀಯ ಮತ್ತು ಭದ್ರತಾ ವಲಯದ ಉನ್ನತ ಅಧಿಕಾರಿಗಳು ಸಭೆ ಸೇರಿದ್ದ ಸ್ಥಳವನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಇಸ್ರೇಲ್ ಇದನ್ನು “ಮುನ್ನೆಚ್ಚರಿಕೆ ದಾಳಿ” ಎಂದು ಕರೆದಿದೆ.

ಇದನ್ನೂ ಓದಿ: ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರು ಹೇಳಿದ್ದೇನು?

ಈ ಹತ್ಯೆಗಳ ಬಗ್ಗೆ ಇರಾನ್ ಸರ್ಕಾರದಿಂದ ಇನ್ನೂ ಅಧಿಕೃತ ದೃಢೀಕರಣ ಬಂದಿಲ್ಲ. ಆದರೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು, “ನಮಗೆ ತಿಳಿದಿರುವ ಮಟ್ಟಿಗೆ ಸುಪ್ರೀಂ ನಾಯಕ ಖಮೇನಿ ಅವರು ಸುರಕ್ಷಿತವಾಗಿದ್ದಾರೆ” ಎಂದು ಹೇಳುವ ಮೂಲಕ ಪರಿಸ್ಥಿತಿಯ ಗಂಭೀರತೆಯನ್ನು ಒಪ್ಪಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲೇ ಇರಾನ್ ಕೂಡ ಇಸ್ರೇಲ್ ಮತ್ತು ಕತಾರ್, ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ಮಳೆಗರೆದಿದೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link