Category Archives: Blog

Your blog category

AIIMS Recruitment 2026: 2551 ನರ್ಸಿಂಗ್ ಅಧಿಕಾರಿ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | AIIMS NORCET 10 Recruitment 2026: 2551 Nursing Officer Posts. Apply by March 16!

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2551 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಪ್ರಾಥಮಿಕ ಪರೀಕ್ಷೆಯು ಏಪ್ರಿಲ್ 11 ರಂದು ಹಾಗೂ ಎರಡನೇ ಹಂತದ ಮುಖ್ಯ ಪರೀಕ್ಷೆಯು ಏಪ್ರಿಲ್ 30 ರಂದು ನಿಗದಿಯಾಗಿದೆ. ದೇಶಾದ್ಯಂತ ಇರುವ ವಿವಿಧ ಏಮ್ಸ್ ಸಂಸ್ಥೆಗಳು ಸೇರಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ (SJH) ಮತ್ತು ಇಎಸ್‌ಐಸಿ (ESIC) ನಂತಹ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಇದು ಉತ್ತಮ ಅವಕಾಶವಾಗಿದೆ.

ಅರ್ಜಿದಾರರು ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಹೊಂದಿರಬೇಕು ಅಥವಾ ಜನರಲ್ ನರ್ಸಿಂಗ್ ಮಿಡ್‌ವೈಫರಿಯಲ್ಲಿ (GNM) ಡಿಪ್ಲೊಮಾ ಪಡೆದವರಾಗಿರಬೇಕು. ಇದರೊಂದಿಗೆ ಅಭ್ಯರ್ಥಿಗಳು 18 ರಿಂದ 30 ವರ್ಷ ವಯೋಮಿತಿಯ ಒಳಗಿರಬೇಕು ಎಂಬ ನಿಯಮವನ್ನು ವಿಧಿಸಲಾಗಿದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಆಯ್ಕೆ ಪ್ರಕ್ರಿಯೆಯ ಮೊದಲ ಹಂತವಾದ ಪ್ರಾಥಮಿಕ ಪರೀಕ್ಷೆಯು ಒಟ್ಟು 100 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳನ್ನು (MCQ) ಒಳಗೊಂಡಿರುತ್ತದೆ. 90 ನಿಮಿಷಗಳ ಕಾಲಾವಧಿಯ ಈ ಪರೀಕ್ಷೆಯಲ್ಲಿ ಋಣಾತ್ಮಕ ಅಂಕದ (Negative Marking) ವ್ಯವಸ್ಥೆಯೂ ಇದ್ದು, ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕಗಳನ್ನು ಕಳೆಯಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಕೆಗಾಗಿ aiimsexams.ac.in ವೆಬ್‌ಸೈಟ್​​ ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೋಕ್ಸೋ ಕೇಸ್​​:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ – Kannada News | POCSO case: Yadagir self styled godman Mallikarjun Mutya Releases Old Statement

ಯಾದಗಿರಿ, (ಫೆಬ್ರವರಿ 26): ಮಲ್ಲಿಕಾರ್ಜುನ ಮುತ್ಯಾ (Mallikarjun Mutya ). ಯಾದಗಿರಿ (Yadagir) ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂಗಾಣದ ಎರಡ್ಮೂರು ಜಿಲ್ಲೆಯಲ್ಲೂ ಈ ಸ್ವಯಂಘೋಷಿತ ದೇವಮಾನವ ಫುಲ್ ಫೇಮಸ್. ಮುತ್ಯಾನ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ಆದ್ರೆ, ಇದೊಂದು ವಿಡಿಯೋ ಈಗ ಮುತ್ಯಾನಿಗೆ ಕಂಟಕ ತಂದೊಡ್ಡಿದೆ. ಸೋಷಿಯಲ್ ಮೀಡಿಯಾದಿಂದಲೇ ಖ್ಯಾತಿ ಗಳಿಸಿದ್ದ ಮುತ್ಯಾನಿಗೆ ಸೋಷಿಯಲ್ ಮೀಡಿಯಾನೇ ಮುಳುವಾಗಿದೆ. ಬಾಲಕಿ ಜೊತೆ ಅನುಚಿತ ವರ್ತಿಸಿರೋ ಇದೇ ವಿಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡು ಯಾದಗಿರಿ ಎಸ್‌ಪಿಗೆ ಸೂಚನೆ ನೀಡಿದೆ. ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಕೂಡಲೇ ಅಲರ್ಟ್ ಆದ ಪೊಲೀಸರು, ಪೋಕ್ಸೋ ಕೇಸ್ (POCSO case) ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಕೇಸ್ ದಾಖಲಾಗುತ್ತಿದ್ದಂತೆಯೇ ಮುತ್ಯಾ ಪರಾರಿಯಾಗಿದ್ದಾನೆ. ಇನ್ನು ಮಠದತ್ತ ಭಕ್ತರು ದೌಡಾಯಿಸುತ್ತಿದ್ದು, ಮುತ್ಯನ ಬೆಂಬಲಕ್ಕೆ ನಿಂತಿದ್ದಾರೆ. ಇನ್ನು ಅಜ್ಞಾತ ಸ್ಥಳದಿಂದಲೇ ಮುತ್ಯಾ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು ಎಲ್ಲಿಗೆ ಹೋಗಿದ್ದೇನೆ ಎನ್ನುವುದನ್ನು ತಿಳಿಸಿದ್ದಾರೆ. ಹಾಗಾದ್ರೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

Source link

ಕಂಟೆಂಟ್ ಕ್ರಿಯೇಟರ್ಸ್​ಗೆ ಸರಿಯಾಗಿ ಆದಾಯ ಹಂಚಿಕೆ ಮಾಡಿ: ಡಿಜಿಟಲ್ ಪ್ಲಾಟ್​ಫಾರ್ಮ್​ಗಳಿಗೆ ಸಚಿವ ವೈಷ್ಣವ್ ಸೂಚನೆ – Kannada News | Content creators should get fair revenue share from digital platforms, says Ashwini Vaishnaw

ನವದೆಹಲಿ, ಫೆಬ್ರುವರಿ 28: ಕುಗ್ರಾಮದಲ್ಲಿ ಕೂತು ತಮಾಷೆಯ ವಿಡಿಯೋಗಳನ್ನು ಮಾಡುವವರಿಂದ ಹಿಡಿದು ಸೃಜನಶೀಲ ಕಲಾವಿದರವರೆಗೂ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ಕಂಟೆಂಟ್ ಹಾಕುವ ಜನರಿಗೆ ಖುಷಿಯ ಸುದ್ದಿ ಇದೆ. ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳು ಕಂಟೆಂಟ್ ಕ್ರಿಯೇಟರ್​ಗಳಿಗೆ ತಮ್ಮ ಆದಾಯದಲ್ಲಿ ನ್ಯಾಯಯುತ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಒತ್ತಾಯಿಸಿದ್ದಾರೆ. ಡಿಜಿಟಲ್ ನ್ಯೂಸ್ ಪಬ್ಲಿಶನ್ಸ್ ಅಸೋಸಿಯೇಶನ್ (ಡಿಎನ್​ಪಿಎ) ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

‘ಮಾಧ್ಯಮ ವೃತ್ತಿಪರರು, ಸೃಜನಶೀಲ ಕಲಾವಿದರು, ಇನ್​ಫ್ಲುಯೆನ್ಸರ್​ಗಳು, ಬರಹಗಾರರು, ಸಂಶೋಧಕರು ಮೊದಲಾದವರು ಈ ಪ್ಲಾಟ್​ಫಾರ್ಮ್​ಗಳನ್ನು ಬಳಸುವುದರಿಂದ ಅದರ ಮೌಲ್ಯದ ಹಂಚಿಕೆ ನ್ಯಾಯಯುತವಾಗಿರಬೇಕು. ಈ ಕ್ರಿಯೇಟರ್​ಗಳು ಡಿಜಿಟಲ್ ಇಕೋಸಿಸ್ಟಂನ ಬೆನ್ನೆಲುಬಾಗಿರುತ್ತಾರೆ. ಆದರೂ ಕೂಡ ಹಲವರಿಗೆ ಸರಿಯಾದ ಮನ್ನಣೆಯಾಗಲೀ, ಸಂಭಾವನೆಯಾಗಲೀ ಸಿಕ್ಕುವುದಿಲ್ಲ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಎ ವೈಷ್ಣವ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಶ್ಮೀರದ ಬಜೆಟ್ ನಿಮ್ಮ ಐಎಂಎಫ್ ಸಾಲಕ್ಕಿಂತ ಎರಡು ಪಟ್ಟು ದೊಡ್ಡದು: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ

‘ಮಾನವ ಅಭಿವೃದ್ಧಿಯು ಯಾವಾಗಲೂ ಕೂಡ ಪ್ರೋತ್ಸಾಹಕಗಳಿಂದ ಪ್ರೇರಿತವಾಗಿರುತ್ತದೆ. ಪ್ರಾಮಾಣಿಕ ಕೆಲಸಕ್ಕೆ ನ್ಯಾಯಯುತವಾದ ಪ್ರಶಂಸೆ ಮತ್ತು ಬಹುಮಾನ ಸಿಗುವ ಖಚಿತ ಭರವಸೆಯ ಅಗತ್ಯ ಇರುತ್ತದೆ. ಕಂಟೆಂಟ್ ಕ್​ರಿಯೇಟರ್​ಗಳಿಗೆ ಉತ್ತೇಜನ ನೀಡಲು ಈ ರೀತಿಯ ಮನ್ನಣೆ ಬಹಳ ಮುಖ್ಯ’ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಡಿಜಿಟಲ್ ಪ್ಲಾಟ್​ಫಾರ್ಮ್​ಗಳು ಇನ್ನೂ ಹೆಚ್ಚು ಜವಾಬ್ದಾರಿಯುತವಾಗಿರಲಿ

ಡಿಎನ್​ಪಿಎ ಕಾಂಕ್ಲೇವ್ 2026 ಕಾರ್ಯಕ್ರಮದಲ್ಲಿ ಅಶ್ಚಿನಿ ವೈಷ್ಣವ್ ಅವರು ಡೀಪ್​ಫೇಕ್ ಇತ್ಯಾದಿ ಹಾವಳಿಯ ವಿಚಾರವನ್ನು ಪ್ರಸ್ತಾಪಿಸಿ, ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳು ಹೆಚ್ಚು ಜವಾಬ್ದಾರಿಯುತವಾಗಿರಲಿ ಎಂದು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: 1917ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕೊಟ್ಟಿದ್ದ 35,000 ರೂ ಸಾಲ ವಾಪಸ್ ಕೇಳಲಿರುವ ಭಾರತೀಯ ಕುಟುಂಬ; ಈಗದರ ಮೌಲ್ಯ ಎಷ್ಟಿರಬಹುದು?

ಡೀಪ್​ಫೇಕ್​ನಂತಹ ನಕಲಿ ಚಿತ್ರ, ಸುಳ್ಳು ಮಾಹಿತಿ ಪ್ರಸರಣ ಇತ್ಯಾದಿ ಅಪಾಯಗಳು ಹೆಚ್ಚುತ್ತಲೇ ಇದ್ದು, ವಿಶ್ವಾದ್ಯಂತ ಡಿಜಿಟಲ್ ಪ್ಲಾಟ್​ಫಾರ್ಮ್​ಗಳ ಬಗ್ಗೆ ಸಾರ್ವಜನಿಕ ನಂಬಿಕೆ ಕಡಿಮೆ ಆಗುವ ಅಪಾಯ ಇದೆ. ಡಿಜಿಟಲ್ ಪ್ಲಾಟ್​ಫಾರ್ಮ್​ಗಳು ತಮ್ಮಲ್ಲಿ ಸೇರ್ಪಡೆಯಾಗುವ ಕಂಟೆಂಟ್ ಬಗ್ಗೆ ಜವಾಬ್ದಾರಿ ಹೊತ್ತುಕೊಳ್ಳಬೇಕು. ಅಪಾಯಕಾರಿ ಕಂಟೆಂಟ್​ಗಳನ್ನು ಗುರುತಿಸಿ ಕ್ರಮ ತೆಗೆದುಕೊಳ್ಳುವಂತಹ ವ್ಯವಸ್ಥೆ ರೂಪಿಸಬೇಕು ಎಂದು ವೈಷ್ಣವ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in

ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ.

ತಲಾ 15 ಲಕ್ಷ ರೂ ದಂಡ

ಕರ್ನಾಟಕದಲ್ಲಿ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ತಲಾ 15 ಲಕ್ಷ ರೂ ದಂಡ ಕಟ್ಟುವಂತೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೋಟಿಸ್​​ ಹೊರಡಿಸಲಾಗಿದೆ. 30 ದಿನಗಳೊಳಗೆ ದಂಡ ಪಾವತಿಸದಿದ್ದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ರೋಗಿಗಳ ಪರದಾಟ

2025ರಲ್ಲಿ ಪದವಿ ಪಡೆಯುತ್ತಿರುವ 8,171 ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕಳುಹಿಸಿದೆ. ಈ ಪೈಕಿ ಕಡ್ಡಾಯ ಗ್ರಾಮೀಣ ಸೇವೆಗೆ 1,772 ಹುದ್ದೆಗಳು ಲಭ್ಯವಾಗಿವೆ. ಎಲ್ಲಾ ಹುದ್ದೆಗಳನ್ನು ಆನ್‌ಲೈನ್​​​ ಕೌನ್ಸಿಲಿಂಗ್​ ಮೂಲಕ ಭರ್ತಿ ಮಾಡಲಾಗಿದೆ. 6,119 ಹೆಚ್ಚುವರಿ ಅಭ್ಯರ್ಥಿಗಳಿಗೆ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲಾಗಿದೆ. ಕೌನ್ಸಿಲಿಂಗ್ ವೇಳೆ ಲಾಗಿನ್​ ಮಾಡದ ಅಥವಾ ಸ್ಥಳ ಆಯ್ಕೆ ಮಾಡದ ಹಾಗೂ ಸೇವೆಗೆ ಹಾಜರಾಗದ 208 ಅಭ್ಯರ್ಥಿಗಳಿಗೆ ನೋಟಿಸ್​​ ಜಾರಿ ಮಾಡಲಾಗಿದೆ. ನಿಯಮಗಳ ಪ್ರಕಾರ ಗ್ರಾಮೀಣ ಸೇವೆ ಕೈಬಿಟ್ಟರೆ 15 ಲಕ್ಷ ರೂ ದಂಡ ಸರ್ಕಾರಕ್ಕೆ ಪಾವತಿಸಬೇಕು.

ಸರ್ಕಾರಿ ವೈದ್ಯಕೀಯ ಕೋಟಾದಡಿ ಎಂಬಿಬಿಎಸ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯವಾಗಿದೆ. ಕಾಯ್ದೆಗಳ ಪ್ರಕಾರ, ಇಂತಹ ಅಭ್ಯರ್ಥಿಗಳು ಕನಿಷ್ಠ ಒಂದು ವರ್ಷ ಗ್ರಾಮೀಣ ಪ್ರದೇಶಗಳ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿದ ನಂತರ ಮಾತ್ರ ಮುಂದಿನ ಹಂತಕ್ಕೆ ಹೋಗಬಹುದು.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ

ಅಂದರೆ ಗ್ರಾಮೀಣ ಸೇವೆಯನ್ನು ಪೂರ್ಣಗೊಳಿಸಿದ ಬಳಿಕವೇ ಅವರು ಕರ್ನಾಟಕ ವೈದ್ಯಕೀಯ ಪರಿಷತ್‌ (ಕೆಎಂಸಿ)ನಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗುತ್ತಾರೆ. ಕೆಎಂಸಿ ನೋಂದಣಿ ಪ್ರಮಾಣಪತ್ರವಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಖಾಸಗಿ ಆಸ್ಪತ್ರೆಗಳಲ್ಲಿ ಉದ್ಯೋಗ ಮಾಡುವುದು, ಸ್ವಂತ ಕ್ಲಿನಿಕ್ ಅಥವಾ ನರ್ಸಿಂಗ್ ಹೋಂ ಆರಂಭಿಸುವುದು ಹಾಗೂ ವೈದ್ಯಕೀಯ ವೃತ್ತಿಗಾಗಿ ವಿದೇಶಗಳಿಗೆ ತೆರಳಲು ಸಾಧ್ಯವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:13 pm, Thu, 26 February 26

Source link

‘ಧುರಂಧರ್ 2’ ಸಿನಿಮಾ ನೋಡಲು ದುಬೈನಿಂದ ಭಾರತಕ್ಕೆ ಬರಲಿರುವ ಪ್ರೇಕ್ಷಕರು – Kannada News | Dubai audience will watch Dhurandhar 2 in India Says R Madhavan

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಬ್ಲಾಕ್ ಬಸ್ಟರ್ ಹಿಟ್ ಆಯಿತು. ಈಗ ಆ ಚಿತ್ರದ ಸೀಕ್ವೆಲ್ ಸಿದ್ಧವಾಗಿದೆ. ಮಾರ್ಚ್ 19ರಂದು ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗಲಿದೆ. ಆದರೆ ಕೆಲವು ದೇಶಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಈ ಸಿನಿಮಾದ ಬಿಡುಗಡೆಗೆ ನಿಷೇಧ ಹೇರಲಾಗಿದೆ. ಆದರೂ ಪ್ರೇಕ್ಷಕರ ಕ್ರೇಜ್ ಕಡಿಮೆ ಆಗಿಲ್ಲ. ಅನೇಕರು ದುಬೈನಿಂದ ಭಾರತಕ್ಕೆ ಬಂದು ಸಿನಿಮಾ ನೋಡಲಿದ್ದಾರೆ ಎಂದು ಚಿತ್ರದ ನಟ ಆರ್. ಮಾಧವನ್ (R. Madhavan) ಅವರು ಹೇಳಿದ್ದಾರೆ.

‘ಧುರಂಧರ್ 2’ ಸಿನಿಮಾದಲ್ಲಿ ಆರ್. ಮಾಧವನ್ ಅವರು ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಸಿನಿಮಾ ಬಗ್ಗೆ ಜನರಿಗೆ ಇರುವ ಕ್ರೇಜ್ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಕೆಲವು ದೇಶಗಳಲ್ಲಿ ಬ್ಯಾನ್ ಆಗಿದ್ದರೂ ಕೂಡ ಪ್ರೇಕ್ಷಕರ ಕ್ರೇಜ್ ಕಡಿಮೆ ಆಗಿಲ್ಲ ಎಂದು ಆರ್. ಮಾಧವನ್ ಹೇಳಿದ್ದಾರೆ.

‘ಅದು ಒಳ್ಳೆಯ ಕಂಟೆಂಟ್​ನ ಶಕ್ತಿ. ದುಬೈನಲ್ಲಿ ಇರುವವರು ಮಾರ್ಚ್ 19ರ ಆಸುಪಾಸಿನಲ್ಲಿ ತಮ್ಮ ಬಿಸ್ನೆಸ್ ಮೀಟಿಂಗ್ ಪ್ಲ್ಯಾನ್ ಮಾಡಿಕೊಂಡು ಭಾರತಕ್ಕೆ ಬರಲಿದ್ದಾರೆ. ಮೀಟಿಂಗ್​​ನಲ್ಲಿ ಭಾಗವಹಿಸುವುದರ ಜೊತೆಗೆ ‘ಧುರಂಧರ್ 2’ ಸಿನಿಮಾವನ್ನು ಕೂಡ ಅವರು ನೋಡಬಹುದು. ಯಾಕೆಂದರೆ ಈ ಸಿನಿಮಾ ದುಬೈನಲ್ಲಿ ರಿಲೀಸ್ ಆಗುತ್ತಿಲ್ಲ’ ಎಂದಿದ್ದಾರೆ ಆರ್. ಮಾಧವನ್.

ಪಾಕಿಸ್ತಾನ, ದುಬೈ ಮುಂತಾದ ಕಡೆಗಳಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಗಿರಲಿಲ್ಲ. ಆದರೆ ಪೈರಸಿ ಕಾಪಿ ಮೂಲಕ ಅಲ್ಲಿನ ಕೋಟ್ಯಂತರ ಜನರು ಸಿನಿಮಾ ನೋಡಿದರು. ಬಳಿಕ ಒಟಿಟಿಯಲ್ಲಿ ಕೂಡ ಸಿನಿಮಾವನ್ನು ವೀಕ್ಷಿಸಿದರು. ಮೊದಲ ಪಾರ್ಟ್ ಸೂಪರ್ ಹಿಟ್ ಆಗಿದ್ದರಿಂದ ಸೀಕ್ವೆಲ್ ಮೇಲೆ ಭಾರಿ ನಿರೀಕ್ಷೆ ಮನೆ ಮಾಡಿದೆ.

ಇದನ್ನೂ ಓದಿ: ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ

ಆರ್. ಮಾಧವನ್, ಸಾರಾ ಅರ್ಜುನ್, ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ‘ಧುರಂಧರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಆದಿತ್ಯ ಧಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮಾರ್ಚ್ 19ರಂದು ‘ಧುರಂಧರ್ 2’ ಎದುರು ಕನ್ನಡದ ‘ಟಾಕ್ಸಿಕ್’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಆದ್ದರಿಂದ ಪೈಪೋಟಿ ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ – Kannada News | Bjp will win west bengal elections remove every infiltrators amit shah says in bihar

ಅರಾರಿಯಾ, ಫೆಬ್ರವರಿ 26: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಂದು ಬಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ನರೇಂದ್ರ ಮೋದಿ ಸರ್ಕಾರವು ಪ್ರತಿಯೊಬ್ಬ ನುಸುಳುಕೋರರನ್ನು ಭಾರತೀಯ ನೆಲದಿಂದ ತೆಗೆದುಹಾಕಲು ದೃಢನಿಶ್ಚಯ ಹೊಂದಿದೆ” ಎಂದು ಘೋಷಿಸಿದ್ದಾರೆ. “ಒಳನುಸುಳುಕೋರರಿಂದ ಮುಕ್ತಿ ಎಂದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕುವುದು ಎಂದರ್ಥವಲ್ಲ. ಭಾರತದ ನೆಲದಿಂದ ಪ್ರತಿಯೊಬ್ಬ ನುಸುಳುಕೋರರನ್ನು ತೆಗೆದುಹಾಕಲು ನಾವು ಒಂದು ಕಾರ್ಯಕ್ರಮವನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿದ್ದೇವೆ. ಈ ಬಾರಿಯ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ” ಎಂದು ಮೋದಿ ಬಿಹಾರದ ಅರಾರಿಯಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು ಸಮೀಪಿಸುತ್ತಿವೆ. ಬಿಜೆಪಿ ಗೆಲ್ಲುತ್ತದೆ ಎಂದು ನನಗೆ ವಿಶ್ವಾಸವಿದೆ. ಹೊಸ ಸರ್ಕಾರ ರಚನೆಯಾದ ನಂತರ, ನಾವು ಪ್ರತಿಯೊಬ್ಬ ನುಸುಳುವವರನ್ನು ದೇಶ ಬಿಟ್ಟು ಓಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ಬಿಹಾರದಲ್ಲಿ ವಿಶೇಷವಾಗಿ ಸೀಮಾಂಚಲ್ ಪ್ರದೇಶದಲ್ಲಿ ಒಳನುಸುಳುವಿಕೆಯ ವಿರುದ್ಧ ಕ್ರಮ ಆರಂಭವಾಗಲಿದೆ. ಕಳೆದ ವರ್ಷ ಇದೇ ವಿಷಯದ ಮೇಲೆ ನಾವು ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ

ಒಳನುಸುಳುವಿಕೆ ದೊಡ್ಡ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಕರೆದ ಅಮಿತ್ ಶಾ, ಇದು ಜನಸಂಖ್ಯಾ ಸಮತೋಲನವನ್ನು ಅಡ್ಡಿಪಡಿಸುತ್ತದೆ ಮತ್ತು ಸಾರ್ವಜನಿಕ ಕಲ್ಯಾಣ ಸಂಪನ್ಮೂಲಗಳನ್ನು ಹಾಳು ಮಾಡುತ್ತದೆ ಎಂದು ಹೇಳಿದ್ದಾರೆ.

“ನರೇಂದ್ರ ಮೋದಿ ಸರ್ಕಾರವು ಇಡೀ ದೇಶವನ್ನು ನುಸುಳುಕೋರರಿಂದ ಮುಕ್ತಗೊಳಿಸಲು ದೃಢನಿಶ್ಚಯ ಹೊಂದಿದೆ ಮತ್ತು ಈ ಉಪಕ್ರಮವು ಶೀಘ್ರದಲ್ಲೇ ಇಡೀ ಸೀಮಾಂಚಲ್ ಪ್ರದೇಶದಲ್ಲಿ ಪ್ರಾರಂಭವಾಗಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ

ಅಕ್ರಮ ವಲಸೆ ಮಾರ್ಗಗಳು, ದಾಖಲೆ ವಂಚನೆ ಜಾಲಗಳು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಗಳಿಗೆ ಹೆಸರುವಾಸಿಯಾದ ಬಾಂಗ್ಲಾದೇಶ-ನೇಪಾಳ ಗಡಿಯುದ್ದಕ್ಕೂ ಬಿಹಾರದ ಕಿಶನ್‌ಗಂಜ್, ಅರಾರಿಯಾ, ಪೂರ್ಣಿಯಾ ಮತ್ತು ಕತಿಹಾರ್ ಜಿಲ್ಲೆಗಳನ್ನು ಒಳಗೊಂಡಿರುವ ಸೀಮಾಂಚಲ್ ಪ್ರದೇಶದಲ್ಲಿ ಅಮಿತ್ ಶಾ 3 ದಿನಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 3:19 pm, Thu, 26 February 26

Source link

ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಹತ್ತಾರು ವಿಘ್ನ: ಕಾಮಗಾರಿ ಮುಗಿಯೋದು ಯಾವಾಗ? – Kannada News | Hassan Airport Project Delays: UDAN Scheme Faces Funding and Land Acquisition Hurdles

ಹಾಸನ, ಫೆಬ್ರವರಿ 26: ನಿಧಿ ಕೊರತೆ ಹಾಗೂ ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದ UDAN ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ (ATC) ಗೋಪುರ, ರನ್‌ವೇ ಮತ್ತು ಏಪ್ರನ್ ಸೇರಿದಂತೆ ಶೇಕಡಾ 80ಕ್ಕೂ ಹೆಚ್ಚು ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಹಲವು ಕೆಲಸಗಳು ಇನ್ನೂ ಬಾಕಿ ಇವೆ. ಹಾಸನ ನಗರದಿಂದ 6 ಕಿ.ಮೀ ದೂರದ ಭುವನಹಳ್ಳಿ ಗ್ರಾಮದ ಸಮೀಪ 516 ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, 2006ರಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್​​.ಡಿ. ದೇವೇಗೌಡರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು.

244.33 ಎಕರೆ ಕರಾಬು ಭೂಮಿ ಒಳಗೊಂಡಂತೆ ಒಟ್ಟು 1,224.16 ಎಕರೆ ಜಾಗವನ್ನು ಸರ್ಕಾರವು ಅಂದು ಮೀಸಲಿಟ್ಟಿತ್ತು. ವಿಮಾನಯಾನ ತರಬೇತಿ ಕೇಂದ್ರ, ಎಂಆರ್‌ಒ (Maintenance, Repair and Overhaul) ಸೌಲಭ್ಯ, ಒಳನಾಡು ಕಂಟೈನರ್ ಡಿಪೋ, ಗಾಲ್ಫ್ ಮೈದಾನ, ಆತಿಥ್ಯ ಮತ್ತು ಕಲ್ಯಾಣ ಸೌಲಭ್ಯಗಳು, ತಂತ್ರಜ್ಞಾನ ಪಾರ್ಕ್, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ರಫ್ತು ಮಾಡುವ ಮೊದಲು ಸಂಗ್ರಹಿಸಲು ದೊಡ್ಡ ಶೀತಗೃಹ ಹೊಂದಿದ ಕಾರ್ಗೋ ಟರ್ಮಿನಲ್ ಮುಂತಾದವುಗಳ ನಿರ್ಮಾಣವನ್ನು ಮೂಲ ಯೋಜನೆ ಒಳಗೊಂಡಿತ್ತು. ಆದರೆ ಆಸಕ್ತಿ ಕೊರತೆಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಟ್ಟು ಸರಳ ವಿಮಾನ ನಿಲ್ದಾಣದ ಯೋಜನೆಗೆ ಇದನ್ನು ರಾಜ್ಯ ಸರ್ಕಾರ ಬದಲಾಯಿಸಿತ್ತು.

ಇದನ್ನೂ ಓದಿ: ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ; ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ

ನಂತರದ ದಿನಗಳಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಇದನ್ನು ಉಡಾನ್ ಯೋಜನೆಯಡಿ ಕೈಗೆತ್ತಿಕೊಂಡಿತ್ತು. ಆದರೆ ವಿಮಾನ ನಿಲ್ದಾಣ ಪ್ರದೇಶದ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿಗಳು ಹಾದುಹೋಗಿರುವುದು ಕಾಮಗಾರಿಯನ್ನು ಮತ್ತಷ್ಟು ವಿಳಂಬಗೊಳಿಸಿತ್ತು. ತಮ್ಮ ಜಮೀನಿನಲ್ಲಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲು ರೈತರು ಮುಂಗಡ ಪರಿಹಾರ ಕೇಳಿದ್ದು, ಅಂತಿಮವಾಗಿ ಅಧಿಕಾರಿಗಳು ರೈತರ ಮನವೊಲಿಸಿ ಕಂಬಗಳನ್ನು ಸ್ಥಳಾಂತರಿಸಿದ್ದರು. ಜೊತೆಗೆ ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ನಿಧಿ ಬಿಡುಗಡೆ ಮಾಡದಿರುವುದೂ ಯೋಜನೆಯ ವಿಳಂಬಕ್ಕೆ ಮತ್ತೊಂದು ಪ್ರಮುಖ ಕಾರಣ ಎನ್ನಲಾಗಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಸಮೀಪದ ಗ್ರಾಮಗಳು, ವಿಮಾನ ನಿಲ್ದಾಣ ಮತ್ತು ಹಾಸನ ನಗರವನ್ನು ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕಾಗಿ ಹೊಸ ಭೂಸ್ವಾಧೀನಕ್ಕೆ 143.67 ಕೋಟಿ ಕೇಳಿದೆ. ಅಲ್ಲದೆ, ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇನ್ನೂ 200 ಕೋಟಿ ಅಗತ್ಯವಿದೆ ಎನ್ನಲಾಗಿದೆ. ಯೋಜನೆಯಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ರಾಜಕೀಯ ಇಚ್ಛಾಶಕ್ತಿ ಇದ್ದಿದ್ದರೆ ವಿಮಾನ ನಿಲ್ದಾಣ ದಶಕಗಳ ಹಿಂದೆಯೇ ಪೂರ್ಣಗೊಳ್ಳಬಹುದಿತ್ತು ಎಂಬ ಅಭಿಪ್ರಾಯಗಳು ಕೂಡ ಕೇಳಿಬಂದಿವೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಹಾಕಿದ್ರು! – Kannada News | Bengaluru rowdy sheeter pavan kumar brutal murder in front of his mother at thanisandra

ಬೆಂಗಳೂರು, (ಫೆಬ್ರವರಿ 26): ರೌಡಿಶೀಟರ್ ಪವನ್ ಕುಮಾರ್‌ನನ್ನು (Rowdy sheeter Pawan Kumar)  ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೂರು ಬೈಕ್‌ಗಳಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ಆರು ಮಂದಿ ದುಷ್ಕರ್ಮಿಗಳು, ಪವನ್ ಕುಮಾರ್ ಮನೆ ಬಳಿ ದಾಳಿ ನಡೆಸಿದ್ದಾರೆ. ಪವನ್ ಮನೆಗೆ ಬಂದು ನಿಂತ ಕ್ಷಣದಲ್ಲೇ, ಆತನ ಹೆತ್ತ ತಾಯಿಯ ಕಣ್ಣೆದುರಿನಲ್ಲೇ ಮಾರಕಾಸ್ತ್ರಗಳಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇನ್ನು ಹೆತ್ತ ಮಗನನ್ನು ರಕ್ಷಿಸಲು ತಾಯಿ ಮುಂದಾಗಿದ್ದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?

ರಿವೇಂಜ್ ಗೆ ನಡೀತಾ ಪವನ್ ಮರ್ಡರ್?

ಕಳೆದ ಮೂರು ವರ್ಷದ ಹಿಂದೆ ಡಿಜೆ ಹಳ್ಳಿಯ ಕಪಿಲ ಎಂಬಾತನ ಕೊಲೆ ನಡೆದಿತ್ತು. ಜುಲೈ 11 ,2023 ರಲ್ಲಿ ಕಪಿಲ ಎಂಬಾತನನ್ನು ಡಿಜೆ ಹಳ್ಳಿ ಬಳಿ ಹತ್ಯೆಯಾಗಿತ್ತು. ಅದೇ ಕೇಸ್ ನಲ್ಲಿ ಮೃತ ಪವನ್ ಕುಮಾರ್ A5 ಆರೋಪಿ ಆಗಿದ್ದ. ಕಪಿಲನ ಕೊಲೆ ಮಾಡಿದಾಗಲೂ ಮುಖ ತೋರಿಸದೆ ಹೆಲ್ಮೆಟ್ ಹಾಕಿಕೊಂಡು ಬಂದು 6 ಜನ ಕೊಚ್ಚಿ ಕೊಲೆ ಮಾಡಿದ್ದರು.ಅದೇ ಮಾದರಿಯಲ್ಲಿ ಬಂದು ಪವನ್ ಕುಮಾರ್ ಕೊಚ್ಚಿ ಕೊಲೆ ಮಾಡಲಾಗಿದೆ. ಕಪಿಲನ ತಮ್ಮ ಪ್ರೇಮ್ ಸೇರಿದಂತೆ ಹಲವರ ಮೇಲೆ ಅನುಮಾನವಿದ್ದು,ಪ್ರೇಮ್ ಫಾಲೋ ಮಾಡ್ತಿದ್ದಾನೆ ಎಂದು ತಾಯಿ ಬಳಿ ಪವನ್ ಹೇಳಿಕೊಂಡಿದ್ದ. ಹೀಗಾಗಿ ರಿವೆಂಜ್ ಗಾಗಿ ಅದೇ ಮಾದರಿಯಲ್ಲಿ ಪವನ್ ಕುಮಾರ್ ಕೊಲೆ ನಡೆಯಿತಾ ಎಂಬ ಅನುಮಾನ ಬಲವಾಗಿದೆ.

ಈಶಾನ್ಯ ವಿಭಾಗದ ಡಿಸಿಪಿ ಹೇಳಿದ್ದೇನು?


ಇನ್ನು ಪವನ್ ಹತ್ಯೆ ಪ್ರಕರಣದ ಬಗ್ಗೆ ಈಶಾನ್ಯ ವಿಭಾಗದ ಡಿಸಿಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪವನ್ ಎಂಬಾತನನ್ನ ಆತನ ಮನೆಗೆ ಬರುವಾಗ ಫಾಲೋ ಮಾಡಿದ್ದಾರೆ. ಒಟ್ಟು ಐದು ಜನ ಫಾಲೋ ಮಾಡ್ಕೊಂಡು ಬಂದಿದ್ದರು. ಮನೆ ಬಳಿ ಆತ ಗಾಡಿ ನಿಲ್ಲಿಸುತ್ತಿದ್ದಂತೆಯೇ ಹಿಂದೆಯಿಂದ ಅಟ್ಯಾಕ್ ಮಾಡಿದ್ದಾರೆ. ಕೊಲೆ ಮಾಡಿದವರ ಗುರುತು ಪತ್ತೆ ಮಾಡಲಾಗಿದೆ. ಹಳೇ ದ್ವೇಷಕ್ಕೆ ಕೊಲೆ ಆಗಿದೆ ಎಂದು ಈಗಲೇ ಹೇಳೋದು ಸರಿಯಲ್ಲ. ಆರೋಪಿಗೆ ಅಪರಾಧ ಹಿನ್ನೆಲೆ ಇತ್ತು. ಸದ್ಯ ಆರೋಪಿಗಳನ್ನ ಹುಡುಕುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು.

Source link

ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ – Kannada News | Dr Rajkumar thought about retirement but it did not happen

ಐದು ದಶಕಗಳ ಕಾಲ ಬೆಳ್ಳಿ ಪರದೆಯ ಮೇಲೆ ರಾರಾಜಿಸಿದ, ಈಗಲೂ ಸಹ ಕನ್ನಡಿಗರ ಮನಸ್ಸುಗಳಲ್ಲಿ ಅಚ್ಚಳಿಯದೆ ನೆಲೆಸಿರುವ ನಟ ಡಾ ರಾಜ್​​ಕುಮಾರ್ (Dr Rajkumar). 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್​ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್​​ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ ನಟನೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಿದ್ದರು. ಕೊನೆಯ ಸಿನಿಮಾನಲ್ಲಿ ನಟಿಸುವ ಹಲವು ವರ್ಷಗಳ ಹಿಂದೆಯೇ ಅವರು ನಿವೃತ್ತಿ ಪಡೆಯುವ ಆಸೆಯಾಗಿತ್ತು. ಆದರೆ ಅದು ಅವರ ಆಪ್ತರ ಕಾರಣದಿಂದಾಗಿ ಸಾಧ್ಯವಾಗಲಿಲ್ಲ.

ಡಾ ರಾಜ್​​ಕುಮಾರ್ ಅವರು ‘ಶಬ್ದವೇಧಿ’ ಸಿನಿಮಾನಲ್ಲಿ ನಟಿಸಿದಾಗ ಅವರಿಗೆ 71 ವರ್ಷ ವಯಸ್ಸು. ಆದರೂ ಸಹ ಆ ಆಕ್ಷನ್ ಥ್ರಿಲ್ಲರ್ ಸಿನಿಮಾನಲ್ಲಿ ಅದ್ಭುತವಾಗಿ ನಟಿಸಿದ್ದಲ್ಲದೆ ಸಿನಿಮಾವನ್ನು ಸೂಪರ್ ಹಿಟ್ ಆಗುವಂತೆ ಮಾಡಿದ್ದರು. ಅಣ್ಣಾವ್ರು ಎಷ್ಟೇ ಅದ್ಭುತ ನಟನಾಗಿದ್ದರೂ, ನಟನೆಯನ್ನು ಅಪಾರವಾಗಿ ಪ್ರೀತಿಸಿದ್ದರೂ ಸಹ ಒಂದು ಹಂತದ ಬಳಿಕ ಅವರ ಮಾನಸಿಕ ಉತ್ಸಾಹಕ್ಕೆ ದೇಹ ಜೊತೆಗೊಡುತ್ತಿರಲಿಲ್ಲ. ಹಾಗಾಗಿ ಅವರು ನಿವೃತ್ತಿಯ ಮನಸ್ಸು ಮಾಡಿದ್ದರು. ಅದೂ ‘ಶಬ್ದವೇಧಿ’ ಸಿನಿಮಾ ಬಡುವ ಬಹಳ ಮುಂಚೆಯೇ ನಿವೃತ್ತಿಯ ಬಗ್ಗೆ ಆಲೋಚಿಸಿದ್ದರು.

ರಾಜ್​ಕುಮಾರ್ ಅವರು 90ರ ದಶಕದಲ್ಲಿ ಖ್ಯಾತ ಚಿತ್ರಸಾಹಿತಿ ಚಿ ಉದಯಶಂಕರ್ ಅವರಿಗೆ ಒಂದು ಸಂದರ್ಶನ ನೀಡಿದ್ದರು. ಸಂದರ್ಶನದಲ್ಲಿ ಅವರು ತಮ್ಮ ನಿವೃತ್ತಿಯ ಬಗ್ಗೆ ಮಾತನಾಡಿದ್ದರು. ಉದಯಶಂಕರ್ ಅವರು, ಆಗಷ್ಟೆ ಬಿಡುಗಡೆ ಆಗಿದ್ದ ‘ಜೀವನ ಚೈತ್ರ’ ಸಿನಿಮಾದ ನಟನೆಯ ಬಗ್ಗೆ ಪ್ರಶ್ನೆ ಕೇಳಿದರು. ಅದಕ್ಕೆ ಉತ್ತರಿಸುತ್ತಾ ಮಾತನಾಡಿದ ರಾಜ್​​ಕುಮಾರ್ ಅವರು, ‘ನನಗೆ ಅದರ ರಹಸ್ಯವೆಲ್ಲ ಗೊತ್ತಿಲ್ಲ, ಹೇಗೋ ಜನರ ಅಪೇಕ್ಷೆ ನನ್ನ ಬಗ್ಗೆ, ನನ್ನ ನಟನೆ ಬಗ್ಗೆ ಇದೆ, ಜನರ ಅಪೇಕ್ಷೆ, ಪ್ರೀತಿ, ಗೌರವಗಳು ಇರುವಾಗಲೇ ಮೆಲ್ಲಗೆ ಪರದೆಯ ಹಿಂದೆ ಸರಿದುಬಿಡುವುದು ಉತ್ತಮ ಎಂದುಕೊಂಡಿದ್ದೆ’ ಎಂದಿದ್ದರು.

ಇದನ್ನೂ ಓದಿ:ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ

‘ಆದರೆ ನೀವುಗಳು, ಇನ್ನೂ ಕೆಲವು ಆಪ್ತರು ನನ್ನ ಹುರಿದುಂಬಿಸಿ ಮತ್ತೆ ನಟಿಸುವಂತೆ ಮಾಡಿದಿರಿ. ನಿಮ್ಮಗಳ ಒತ್ತಾಸೆ ಮತ್ತು ಪ್ರೇಕ್ಷಕರ ಪ್ರಭುಗಳ ಒತ್ತಾಸೆಯಿಂದ ನಾನು ನಟಿಸಿದೆ. ಆದರೆ ಈ ಬಾರಿ (ಜೀವನ ಚೈತ್ರ ಸಿನಿಮಾ ಸಮಯದಲ್ಲಿ) ನಟಿಸುವಾಗ ಹೆಚ್ಚೇ ಭಯ ಆಗಿತ್ತು. ಏಕೆಂದರೆ ಎರಡು ವರ್ಷಗಳ ಕಾಲ ನಾನು ಕ್ಯಾಮೆರ ಎದುರು ನಿಂತಿರಲಿಲ್ಲ, ಹಾಗಾಗಿ ತುಸು ಹೆಚ್ಚೇ ಭಯ ಆಯ್ತು, ಆದರೆ ವೃತ್ತಿ ಬದುಕಿನ ಆರಂಭದಿಂದಲೂ ನನ್ನನ್ನು ಮುಂದೂಡಿಕೊಂಡು ಬರುತ್ತಿರುವ ಶಕ್ತಿಯೊಂದು ಈ ಸಿನಿಮಾದಲ್ಲಿಯೂ ನನಗೆ ಶಕ್ತಿ ತುಂಬಿ ನಟಿಸುವಂತೆ ಮಾಡಿತು’ ಎಂದಿದ್ದರು.

ಅಂದಹಾಗೆ ‘ಜೀವನ ಚೈತ್ರ’ ಸಿನಿಮಾ ಬಿಡುಗಡೆ ಆಗಿದ್ದು 1992 ರಲ್ಲಿ. ಆಗಲೇ ಅಣ್ಣಾವ್ರು ನಿವೃತ್ತಿಯ ಮನಸ್ಸು ಮಾಡಿದ್ದರು. ‘ಜೀವನ ಚೈತ್ರ’ ಸಿನಿಮಾನಲ್ಲಿ ನಟಿಸುವುದಕ್ಕೆ ಮುಂಚೆ ಬರೋಬ್ಬರಿ ಎರಡು ವರ್ಷ ಅವರು ಯಾವುದೇ ಸಿನಿಮಾನಲ್ಲಿ ನಟಿಸಿರಲಿಲ್ಲ. ‘ಜೀವನ ಚೈತ್ರ’ ಸಿನಿಮಾನಲ್ಲಿ ನಟಿಸಿದ ಬಳಿಕ ಅಣ್ಣಾವ್ರು ನಾಯಕನಾಗಿ ನಟಿಸಿದ್ದು ಮೂರೇ ಸಿನಿಮಾಗಳಲ್ಲಿ 1993 ರಲ್ಲಿ ಬಿಡುಗಡೆ ಆದ ‘ಆಕಸ್ಮಿಕ’, 1994ರಲ್ಲಿ ಬಿಡುಗಡೆ ಆದ ‘ಒಡಹುಟ್ಟಿದವರು’ ಮತ್ತು 2000 ರಲ್ಲಿ ಬಿಡುಗಡೆ ಆದ ಅವರ ಕೊನೆಯ ಸಿನಿಮಾ ‘ಶಬ್ದವೇಧಿ’.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಂತರಿಕ ಜಗಳಗಳು ಅಲ್ಲೂ ಇದ್ವು, ಆದ್ರೆ ಇಸ್ರೇಲ್​​ನ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಭಹಿಷ್ಕರಿಸಲಿಲ್ಲ – Kannada News | PM Modi’s Historic Israel Visit: Knesset Speech and Unprecedented Honors Strengthen India Israel

ಇಸ್ರೇಲ್, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಇಸ್ರೇಲ್ ಪ್ರವಾಸದಲ್ಲಿದ್ದಾರೆ. ಪ್ರಧಾನಿ ಮೋದಿ ಸಂಸತ್ತಿನಲ್ಲಿ ಭಾಷಣವನ್ನು ಕೂಡ ಮಾಡಿದ್ದಾರೆ.  ಅಲ್ಲೂ ಕೂಡ ಒಳಜಗಳಗಳಿದ್ದರೂ ಎಷ್ಟೇ ರಾಜಕೀಯವಿದ್ದರೂ ಇಸ್ರೇಲ್ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಬಹಿಷ್ಕರಿಸಲಿಲ್ಲ. ಭಾಷಣಕ್ಕಾಗಿ ಸಂಸತ್ತಿನಲ್ಲೇ ಉಳಿಯಲು ನಿರ್ಧರಿಸಿದರು. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಆಮ್ ಇಸ್ರಾಯಿಲ್ ಚಾಯ್ ಅಂದರೆ ಇಸ್ರೇಲ್ ಜನರು ಜೀವಂತವಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಭಾಷಣ ಸಮಾಪ್ತಿಗೊಳಿಸಿದರು, ಆಗ ಸಂಸತ್ತಿನಲ್ಲಿದ್ದ ಎಲ್ಲಾ ನಾಯಕರು ಎದ್ದು ಚಪ್ಪಾಳೆ ತಟ್ಟಿದ್ದರು.

ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪಡೆದ ಮೊದಲ ವಿಶ್ವ ನಾಯಕ ಮೋದಿ

ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪಡೆದ ಮೊದಲ ವಿಶ್ವ ನಾಯಕರಾಗುವ ಮೂಲಕ ಇತಿಹಾಸ ಸೃಷ್ಟಿಸಿದರು. ಇದು ಇಸ್ರೇಲ್ ಸಂಸತ್ತು, ನೆಸ್ಸೆಟ್ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಮನ್ನಣೆಯು ಭಾರತ ಮತ್ತು ಇಸ್ರೇಲ್ ನಡುವಿನ ಆಳವಾದ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಬಲವಾದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ.

ಇಸ್ರೇಲ್‌ನ ಶಿಷ್ಟಾಚಾರದಲ್ಲಿ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷರಿಗೆ ಸಮಾನರು

ಇಸ್ರೇಲ್ ಸಂಪ್ರದಾಯದಲ್ಲಿ, ಪ್ರಧಾನಿ ವೈಯಕ್ತಿಕವಾಗಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರು ಅಥವಾ ಪೋಪ್ ಅವರನ್ನು ವಿಮಾನ ನಿಲ್ದಾಣಕ್ಕೆ ಹೋಗಿ ಬರಮಾಡಿಕೊಳ್ಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಈ ಶಿಷ್ಟಾಚಾರವನ್ನು ಮುರಿದಿದ್ದಾರೆ. ಪತ್ನಿ ಸಾರಾ ನೆತನ್ಯಾಹು ಸಹ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಅವರನ್ನು ವೈಯಕ್ತಿಕವಾಗಿ ಸ್ವಾಗತಿಸಿದ್ದರು.

ಮತ್ತಷ್ಟು ಓದಿ: Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು

ಮೋದಿ ಬರುವ ಮುನ್ನವೇ ತ್ರಿವರ್ಣದಲ್ಲಿ ಕಂಗೊಳಿಸಿದ ಇಸ್ರೇಲ್ ಸಂಸತ್ತು
ಪ್ರಧಾನಿ ಮೋದಿ ಭಾಷಣಕ್ಕೂ ಮುನ್ನವೇ ಇಸ್ರೇಲ್ ಸಂಸತ್ತು ತ್ರಿವರ್ಣದಿಂದ ಕಂಗೊಳಿಸಿತ್ತು. ಇಸ್ರೇಲ್‌ನ ಸಂಸತ್ತು ಕಟ್ಟಡವನ್ನು ವಿದೇಶಿ ಧ್ವಜದ ರಾಷ್ಟ್ರೀಯ ಬಣ್ಣಗಳಲ್ಲಿ ಬೆಳಗಿಸಲಾಯಿತು, ಇದು ಎರಡು ಪ್ರಜಾಪ್ರಭುತ್ವಗಳ ನಡುವಿನ ವಿಶೇಷ ಬಾಂಧವ್ಯವನ್ನು ಒತ್ತಿಹೇಳುತ್ತದೆ.

ಮೋದಿ: ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡೂ ಗೌರವಿಸಿದ ಏಕೈಕ ನಾಯಕ

ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡೂ ಕಡೆಯಿಂದ ಅತ್ಯುನ್ನತ ನಾಗರಿಕ ಗೌರವಗಳನ್ನು ಪಡೆದ ಅಪರೂಪದ ಜಾಗತಿಕ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರು.

2026: ಸ್ಪೀಕರ್ ಆಫ್ ದಿ ನೆಸ್ಸೆಟ್ ಮೆಡಲ್
(ಇಸ್ರೇಲ್)

2018: ಗ್ರ್ಯಾಂಡ್ ಕಾಲರ್ ಆಫ್ ದಿ ಸ್ಟೇಟ್ ಪ್ಲ್ಯಾಲೆಸ್ತೀನ್ (ವಿದೇಶಿ ಗಣ್ಯರಿಗೆ ಪ್ಯಾಲೆಸ್ಟೈನ್‌ನಲ್ಲಿ ಅತ್ಯುನ್ನತ ಗೌರವ)

ಇಸ್ರೇಲ್ ಸಂಸತ್ತಿನಲ್ಲಿ ಐತಿಹಾಸಿಕ ಭಾಷಣದ ಸಮಯದಲ್ಲಿ ಮೋದಿ ಮೋದಿ ಘೋಷಣೆ
ಇಸ್ರೇಲ್ ಸಂಸತ್ತಿನೊಳಗಿನ ಅಸಾಧಾರಣ ದೃಶ್ಯ ಕಂಡುಬಂತು, ಪ್ರಧಾನಿ ನರೇಂದ್ರ ಮೋದಿ ಒಂದು ಕಡೆ ಭಾಷಣ ಮಾಡುತ್ತಿದ್ದರೆ ಮತ್ತೊಂದು ಕಡೆ ಮೋದಿ ಮೋದಿ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದವು.

ಇಸ್ರೇಲ್‌ನಲ್ಲಿ ಹೂವಿಗೆ ಮೋದಿ ಹೆಸರು

2017 ರ ಇಸ್ರೇಲ್ ಭೇಟಿಯ ಸಮಯದಲ್ಲಿ, ಹೊಸದಾಗಿ ಅಭಿವೃದ್ಧಿಪಡಿಸಿದ ಇಸ್ರೇಲಿ ಕ್ರೈಸಾಂಥೆಮಮ್ ಹೂವಿಗೆ ಪ್ರಧಾನಿ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಮೋದಿ ಎಂದು ಹೆಸರಿಸಲಾಯಿತು. ಡ್ಯಾಂಜಿಗರ್ ಹೂವಿನ ತೋಟದಲ್ಲಿ ನಾಮಕರಣ ಸಮಾರಂಭ ನಡೆಯಿತು. ಇಸ್ರೇಲ್‌ನಲ್ಲಿ, ರಾಜ್ಯ ಭೇಟಿಯ ಸಮಯದಲ್ಲಿ ವಿದೇಶಿ ನಾಯಕರ ಹೆಸರನ್ನು ಹೂವಿಗೆ ಹೆಸರಿಸುವುದು ತುಂಬಾ ಅಪರೂಪ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link