Headlines

ಇಂಗ್ಲೆಂಡ್ ತಂಡ ನಮಗೋಸ್ಕರ ಗೆಲ್ತಾರೆ ಬಿಡಿ..! – Kannada News | England win for us says pakistan captain salman ali agha

T20 World Cup 2026: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿ ಫೈನಲ್​ಗೇರಿದರೆ, ಶ್ರೀಲಂಕಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವೆ ಸೆಮಿ ಫೈನಲ್​ ಪೈಪೋಟಿ ಇದೆ. ಅಂದರೆ ಈ ಎರಡು ತಂಡಗಳಲ್ಲಿ ಒಂದು ಟೀಮ್ ಸೆಮಿ ಫೈನಲ್​ಗೇರಲಿದೆ. ಆದರೆ ಇಲ್ಲಿ ಪಾಕಿಸ್ತಾನ್ ತಂಡದ ಸೆಮಿ ಫೈನಲ್​ ಹಾದಿಯನ್ನು ನಿರ್ಧರಿಸುವುದು ಇಂಗ್ಲೆಂಡ್ ತಂಡ ಎಂಬುದು ವಿಶೇಷ. ಅಂದರೆ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ ಗೆದ್ದರೆ ಮಾತ್ರ ಸೆಮಿ…

Read More

ಕಾಡಾನೆ ದಾಳಿ ಭೀತಿಯಲ್ಲಿರುವ ಚಿಕ್ಕಮಗಳೂರು ನಿವಾಸಿಗಳಿಗೆ ಮತ್ತೊಂದು ಶಾಕ್ – Kannada News | Wild gaur of Over 50 Spotted in Koppa Coffee Estate Amid Elephant Fear in Chikkamagaluru: Video goes viral

ಚಿಕ್ಕಮಗಳೂರು, ಫೆಬ್ರವರಿ 26: ಈಗಾಗಲೇ ಕಾಡಾನೆಗಳ ದಾಳಿಯಿಂದ ಆತಂಕದಲ್ಲಿರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಇದೀಗ ಕಾಡುಕೋಣಗಳ ಹಾವಳಿಯೂ ತಲೆನೋವಾಗಿ ಪರಿಣಮಿಸಿದೆ. ಕೊಪ್ಪ ತಾಲೂಕಿನ ಬಸ್ರೀಕಟ್ಟೆ ಗ್ರಾಮದ ಕಾಫಿತೋಟದಲ್ಲಿ 50ಕ್ಕೂ ಅಧಿಕ ಕಾಡುಕೋಣಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳೀಯರು ಕಂಗಾಲಾಗಿದ್ದಾರೆ. ಕಾಫಿತೋಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾಡುಕೋಣಗಳು ಸಂಚರಿಸುತ್ತಿರುವ ದೃಶ್ಯ ಕಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ಕಾಡಾನೆಗಳ ಹಾವಳಿ ಇನ್ನೂ ಕಡಿಮೆಯಾಗದಿರುವಾಗಲೇ ಕಾಡುಕೋಣಗಳ ದಾಳಿ ಭೀತಿ ಹೆಚ್ಚಾಗಿದೆ. ಇತ್ತೀಚೆಗೆ ಕೊಪ್ಪ ತಾಲೂಕಿನ ಮುಂಡೋಳು ಗ್ರಾಮದಲ್ಲಿ 55 ವರ್ಷದ ರೈತ…

Read More

Video: ಬ್ರೇಕಪ್ ನೋವಲ್ಲಿ ಊಟ, ತಿಂಡಿ ಬಿಟ್ಟ ಮಗ, ಹುಡುಗಿ ಬಳಿ ಹೋಗಿ ಕೈಮುಗಿದು ಬೇಡಿದ ತಂದೆ – Kannada News | Father Pleads With Son’s girlfriend After Breakup Sparks Emotional Scene

ಬ್ರೇಕಪ್ ಎಂಬುದು ಎಂಥವರ ಬಾಳಲ್ಲೂ ಬರಸಿಡಿಲಿನಂತೆ ಎರಗಿ ಬಿಡುತ್ತೆ, ಇಷ್ಟು ದಿನ ಜತೆಗಿದ್ದವರು, ತಮ್ಮ ನೋವು, ನಲಿವಿನಲ್ಲಿ ನಮ್ಮೊಂದಿಗಿದ್ದವರು, ಏನೇ ಸಣ್ಣ ಪುಟ್ಟ ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದವರು ಜತೆಗಿಲ್ಲವೆಂದಾದಾಗ ಏನೂ ಬೇಡ ಎನಿಸುವುದು ಸಹಜ. ಹಾಗೆಯೇ ಇಲ್ಲೊಬ್ಬ ಯುವಕ ಬ್ರೇಕಪ್ ನೋವಿನಲ್ಲಿ ಊಟ-ತಿಂಡಿ ಬಿಟ್ಟು ಕೂತಿದ್ದ, ಮಗನ ಸ್ಥಿತಿಯನ್ನು ನೋಡಲಾಗದೆ ತಂದೆ ಮಗನನ್ನು ಕರೆದುಕೊಂಡು ಹುಡುಗಿ ಬಳಿ ಹೋಗಿ ಆಕೆಗೆ ಕೈಮುಗಿದು ತನ್ನ ಮಗನ ಜೀವನಕ್ಕೆ ವಾಪಸಾಗುವಂತೆ ಪರಿಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಅದು ತಂದೆಯೊಬ್ಬ ಮಕ್ಕಳ…

Read More

“ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ”: ಸ್ಟೇಟಸ್ ಹಾಕಿಕೊಂಡು ವಿದ್ಯಾರ್ಥಿ ನೀರಿಗೆ ಬಿದ್ದು ಆತ್ಮಹತ್ಯೆ – Kannada News | Turuvekere Student Suicide: Dhanush’s Emotional Statuses Unveil Tragic End

ತುಮಕೂರು, ಫೆ.26: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದ್ದ ಧನುಷ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಬೆಳಕಿಗೆ ಬಂದಿದೆ. ತುರುವೇಕೆರೆ ತಾಲೂಕಿನ ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್, ಪಟ್ಟಣದ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಬಂದಿದ್ದ ಆತ ಸಂಜೆಯಾದರೂ ವಾಪಸ್ ಹೋಗಿರಲಿಲ್ಲ. ಪೋಷಕರು…

Read More

ಕಾಶ್ಮೀರದ ಬಜೆಟ್ ನಿಮ್ಮ ಐಎಂಎಫ್ ಸಾಲಕ್ಕಿಂತ ಎರಡು ಪಟ್ಟು ದೊಡ್ಡದು: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ – Kannada News | India rebuts Pakistan and OIC’s allegations on Jammu Kashmir at UNHRC session

ನವದೆಹಲಿ, ಫೆಬ್ರುವರಿ 26: ಸ್ವಿಟ್ಜರ್​ಲ್ಯಾಂಡ್​ನ ಜಿನಿವಾದಲ್ಲಿ ನಡೆಯುತ್ತಿರುವ 61ನೇ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿಯ ಸಭೆಯಲ್ಲಿ (UNHRC) ಮಾನವ ಹಕ್ಕು ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ಝಾಡಿಸಿದೆ. ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಜನರ ಮೇಲೆ ಭಾರತ ಸರ್ಕಾರ ದೌರ್ಜನ್ಯ ಎಸಗುತ್ತಿದೆ. ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ ಎನ್ನುವ ಪಾಕಿಸ್ತಾನದ ಆರೋಪಗಳಿಗೆ ಭಾರತ ತಿರುಗೇಟು ಕೊಟ್ಟಿದೆ. ಆರ್ಥಿಕ ಕುಸಿತ ಹೊಂದಿರುವ ಪಾಕಿಸ್ತಾನವು, ಅಭಿವೃದ್ಧಿ ಹೊಂದುತ್ತಿರುವ ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡುವ ದಾರ್ಷ್ಟ್ಯತನ ತೋರಿದೆ ಎಂದು ಭಾರತ ಕಿಡಿಕಾರಿದೆ….

Read More

ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಪೊಲೀಸರಿಂದ 18 ಕಾರ್ಮಿಕರ ರಕ್ಷಣೆ – Kannada News | Hassan Police Rescue 18 Bonded Labourers from Exploitative Farm

ಹಾಸನ, ಫೆಬ್ರವರಿ 26: ರಾಜ್ಯದಲ್ಲಿ ಇನ್ನೂ ಅನಿಷ್ಟ ಜೀತ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಹಾಸನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಹಳೇಬೀಡು ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಕೂಡಿಹಾಕಲಾಗಿದ್ದ 18ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಶುಂಠಿ ಕೆಲಸಕ್ಕೆಂದು ಕರೆತರಲಾಗಿದ್ದ ಈ ಕಾರ್ಮಿಕರನ್ನು, ಮಾಲೀಕ ನಾಗರಾಜ್ ಎಂಬಾತ ಕೂಡಿಹಾಕಿ ದುಡಿಸಿಕೊಳ್ಳುತ್ತಿದ್ದ. ಇವರಿಗೆ ಯಾವುದೇ ಹಣ ನೀಡದೆ, ಕೆಲಸ ಮುಗಿದ ನಂತರ ಒಂದೇ ಜಾಗದಲ್ಲಿ ಲಾಕ್ ಮಾಡಲಾಗುತ್ತಿತ್ತು. ಹೊರಗಡೆ ಹೋಗಲು ಯಾವುದೇ ಅವಕಾಶವಿರಲಿಲ್ಲ ಎನ್ನಲಾಗಿದೆ….

Read More

ತೆಲುಗು ಸಂಪ್ರದಾಯದಂತೆ ಮದುವೆಯಾದ ರಶ್ಮಿಕಾ-ವಿಜಯ್ ದೇವರಕೊಂಡ – Kannada News | Rashmika Mandanna and Vijay Deverakonda marriage, both are husband and wife now

ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಈ ಜೋಡಿ ಇಂದು (ಫೆಬ್ರವರಿ 26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ಸತಿ-ಪತಿಗಳಾಗಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಕಳೆದ ಕೆಲ ವರ್ಷಗಳಿಂದಳೂ ಪರಸ್ಪರ…

Read More

Video: ಎತ್ತಿನ ಕಾಲು ಒತ್ತಿ ಸೇವೆ ಮಾಡಿದ ಮುದ್ದು ಮಕ್ಕಳು, ವೈರಲ್‌ ಆಯ್ತು ದೃಶ್ಯ – Kannada News | The adorable children who served by pressing the ox’s leg

ಪುಟಾಣಿಗಳು (little kids) ಏನು ಮಾಡಿದ್ರೂ ಕೂಡ ಚಂದನೇ. ಮುದ್ದು ಮಕ್ಕಳು ಮನೆಯ ಸಾಕು ಪ್ರಾಣಿಗಳ ಜತೆಗೆ ತುಂಟಾಟ ಆಡುವುದನ್ನು ನೋಡುವಾಗ ಖುಷಿಯೆನಿಸುತ್ತದೆ. ತನ್ನಮೇಲೆ  ಪ್ರೀತಿ ಕಾಳಜಿ ತೋರುವ ಮುದ್ದು ಮನಸ್ಸಿನ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ದೃಶ್ಯ ನೋಡಿದರಂತೂ ಮುಗ್ಧ ಮನಸ್ಸುಗಳ ಶುದ್ಧ ಪ್ರೀತಿಗೆ ನೀವು ಕರಗುವುದು ಖಂಡಿತ. ಪುಟಾಣಿಗಳಿಬ್ಬರೂ ಎತ್ತಿನ ಕಾಲು ಒತ್ತಿ ಸೇವೆ ಮಾಡುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಮುದ್ದು ಮಕ್ಕಳು ಮೂಕ ಪ್ರಾಣಿಗಳ ಮೇಲೆ ಪ್ರೀತಿ…

Read More

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ – Kannada News | Bagalkote Stone Pelting: Sriramulu Urges NIA Probe for Shivaji Jayanti Incident

ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ…

Read More

ಬ್ರೇಕ್ ಫೇಲ್​ ಆಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ನುಗ್ಗಿದ ಲಾರಿ: ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ – Kannada News | Brake Fail Lorry Hits Multiple Vehicles in Bagaluru, North Bengaluru

ದೇವನಹಳ್ಳಿ, ಫೆಬ್ರವರಿ 26: ಬ್ರೇಕ್​​ ಫೇಲ್​​ ಆದ ಪರಿಣಾಮ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕಿ ಸಿಕ್ಕ ವಾಹನಗಳಿಗೆ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಲಾರಿ ನಿಂತಿದ್ದು, ಘಟನೆಯ ದೃಶ್ಯ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಾರಿ‌ ನುಗ್ಗಿದ ರಭಸಕ್ಕೆ ಎರಡು ಕಾರುಗಳು, 3 ಬೈಕ್​ಗಳು ಜಖಂ ಆಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಏರ್​ಪೋರ್ಟ್​ಗೆ ಸಂಪರ್ಕ…

Read More