Category Archives: Blog

Your blog category

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ – Kannada News | Jasprit bumrah t20 worldcup record highest wickets india

ಈ ವಿಚಾರದಲ್ಲಿ ಬುಮ್ರಾ, ವೆಸ್ಟ್ ಇಂಡೀಸ್‌ನ ಸ್ಯಾಮ್ಯುಯೆಲ್ ಬದ್ರಿ, ಶ್ರೀಲಂಕಾದ ಅಜಂತಾ ಮೆಂಡಿಸ್ ಮತ್ತು ನ್ಯೂಜಿಲೆಂಡ್‌ನ ಟಿಮ್ ಸೌಥಿ ಅವರ ದಾಖಲೆಗಳನ್ನು ಮುರಿದರು. ಟಿ20 ವಿಶ್ವಕಪ್ ಪಂದ್ಯದಲ್ಲಿ 4 ಓವರ್‌ಗಳ ಪೂರ್ಣ ಕೋಟಾ ಬೌಲಿಂಗ್ ಮಾಡಿದ ನಂತರ ಇವರೆಲ್ಲರೂ ತಲಾ ನಾಲ್ಕು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಆದರೀಗ ಬುಮ್ರಾ ಐದನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ.

Source link

IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

Source link

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಹೊಸ ದಿನಾಂಕ ಲಾಕ್? – Kannada News | Thalapathy Vijay’s last film Jana Nayagan eyeing June release around his birthday

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ (Thalapathy Vijay) ಸದ್ಯ ತಮ್ಮ ವೃತ್ತಿಜೀವನದ ಅತ್ಯಂತ ಮಹತ್ವದ ಘಟ್ಟದಲ್ಲಿದ್ದಾರೆ. ರಾಜಕೀಯಕ್ಕೆ ಧುಮುಕಿರುವ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ಮುಳುಗುವ ಮುನ್ನ ಕೊನೆಯ ಸಿನಿಮಾನಲ್ಲಿ ನಟಿಸಿದ್ದರು ಅದುವೇ ‘ಜನ ನಾಯಗನ್’. ಸಂಕ್ರಾಂತಿಗೆ ಬಿಡುಗಡೆ ಆಗಬೇಕಿದ್ದ ಈ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವ ಕಾರಣ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್​’ಗೆ ಪ್ರಮಾಣ ಪತ್ರ ನಿರಾಕರಿಸಿರುವ ಹಿಂದೆ ರಾಜಕೀಯ ಕೈವಾಡ ಇದೆ ಎಂಬುದು ಗುಟ್ಟೇನೂ ಅಲ್ಲ. ಆದರೆ ಇದೀಗ ಸಿನಿಮಾದ ಬಿಡುಗಡೆ ಕುರಿತಾಗಿ ಹೊಸದೊಂದು ಅಪ್​​ಡೇಟ್ ಹೊರಬಿದ್ದಿದೆ.

ಪಿಂಕ್‌ವಿಲ್ಲಾ ವರದಿಯ ಪ್ರಕಾರ, ಜನವರಿಯಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾವು ಆರು ತಿಂಗಳು ತಡವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ವಿಜಯ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿನಿಮಾವನ್ನು ತೆರೆಗೆ ತರಲು ಪ್ಲಾನ್ ಮಾಡುತ್ತಿದೆ. ಜೂನ್ 22 ರಂದು ವಿಜಯ್ ಅವರ ಜನ್ಮದಿನವಿದ್ದು, ಅದೇ ವಾರದಲ್ಲಿ ಅಂದರೆ ಜೂನ್ 2026 ರ ಸುಮಾರಿಗೆ ‘ಜನ ನಾಯಗನ್’ ವಿಶ್ವಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ.

ತಮಿಳುನಾಡು ಚುನಾವಣೆಗೆ ಮುಂಚೆ ಸಿನಿಮಾವನ್ನು ಬಿಡುಗಡೆ ಮಾಡದಂತೆ ತಡೆಯಲು ಹಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು, ಸಿನಿಮಾದ ನಿರ್ಮಾಪಕರ ಮೇಲೆ ಸಹ ಈ ಬಗ್ಗೆ ಸಾಕಷ್ಟು ಒತ್ತಡ ಇದೆಯಂತೆ. ಇದೇ ಕಾರಣಕ್ಕೆ ನಿರ್ಮಾಪಕರು ಸಹ ಚುನಾವಣೆ ಮುಗಿದ ಬಳಿಕ ಜೂನ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಮಾನಸಿಕವಾಗಿ ಸಿದ್ಧವಾಗಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ದಳಪತಿ ವಿಜಯ್​​ಗೆ ಮತ್ತೊಂದು ಶಾಕ್; ಕಟ್ಟಬೇಕಿದೆ ಒಂದೂವರೆ ಕೊಟಿ ರೂ. ದಂಡ

ಎಚ್ ವಿನೋತ್ ನಿರ್ದೇಶನದ ‘ಜನ ನಾಯಗನ್’ ಸಿನಿಮಾ ಪಕ್ಕಾ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಎನ್ನಲಾಗಿದೆ. ಈ ಸಿನಿಮಾ ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿದ್ದರೂ ಸಹ ಕೆಲವು ಹೆಚ್ಚುವರಿ ಅಂಶಗಳನ್ನು ಸಿನಿಮಾಕ್ಕೆ ಸೇರಿಸಲಾಗಿದೆ. ವಿಜಯ್ ಈಗಾಗಲೇ ತಮ್ಮ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮೂಲಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿರುವುದರಿಂದ, ಈ ಸಿನಿಮಾದ ಕಥೆ ಮತ್ತು ಸಂಭಾಷಣೆಗಳು ಅವರ ರಾಜಕೀಯ ಹಾದಿಗೆ ಪೂರಕವಾಗಿವೆ, ತಮ್ಮ ರಾಜಕೀಯ ಪಕ್ಷದ ಅಜೆಂಡದ ಪ್ರಚಾರಕ್ಕೆ ಈ ಸಿನಿಮಾವನ್ನು ವಿಜಯ್ ಬಳಸಿಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಕಾರಣಕ್ಕೆ ರಾಜಕೀಯ ಎದುರಾಳಿಗಳು, ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ಪ್ರಭಾವ ಬಳಸಿ ತಡೆ ಹಿಡಿದಿದ್ದಾರೆ.

‘ಜನ ನಾಯಗನ್’ ನಟನಾಗಿ ವಿಜಯ್ ಅವರ 69ನೇ ಹಾಗೂ ಅಂತಿಮ ಚಿತ್ರ. ಈ ಸಿನಿಮಾನಲ್ಲಿ ಬಾಬಿ ಡಿಯೋಲ್ ವಿಲನ್. ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಜೊತೆಗೆ ಮಲಯಾಳಂ ನಟಿ ಮಮಿತಾ ಬಿಜು ಸಹ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಅನಿರುದ್ಧ್ ರವಿಚಂದ್ರನ್. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೇ ಇರುವ ಬಗ್ಗೆ ನಿರ್ಮಾಪಕರು ಸಲ್ಲಿಸಿರುವ ಆಕ್ಷೇಪದ ವಿಚಾರಣೆ ಪ್ರಸ್ತುತ ಹೈಕೋರ್ಟ್​​ನಲ್ಲಿ ಚಾಲ್ತಿಯಲ್ಲಿದೆ. ಇದರ ನಡುವೆ ಸಿನಿಮಾವನ್ನು ಸಿಬಿಎಫ್​​ಸಿಯ ರಿವ್ಯೂ ಕಮಿಟಿಗೆ ಕಳಿಸಲಾಗಿದೆ. ಆದರೆ ರಿವ್ಯೂ ಕಮಿಟಿಯವರು ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್​ಡಿ ಕುಮಾರಸ್ವಾಮಿ – Kannada News | HD kumaraswamy sparks on Siddaramaiah Over Dalit CM Issue and Congress Internal Politics

ರಾಯಚೂರು, ಫೆಬ್ರವರಿ 22: ಮಲ್ಲಿಕಾರ್ಜುನ ಖರ್ಗೆ ಯಾವತ್ತೋ ಸಿಎಂ ಆಗ್ಬೇಕಿತ್ತು, ಡಾ.ಜಿ.ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು. ಆದರೆ ಅವರನ್ನು ದಿಲ್ಲಿಗೆ ಕಳುಹಿಸುವ ಮೂಲಕ ಅವಕಾಶ ತಪ್ಪಿಸಲಾಯಿತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಮಂತ್ರಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಏನಾದರೂ ಆದರೆ ಅದು ಕಾಂಗ್ರೆಸ್ ಪಕ್ಷದಲ್ಲೇ ಅಂತೆ. ಬೇರೆ ಪಕ್ಷದಲ್ಲಿ ಅವಕಾಶನೇ ಇಲ್ಲ. ದಲಿತರು ಆಗುವುದನ್ನ ತಪ್ಪಿಸಿರೋದೇ ಇವರು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

Source link

ಬ್ರಾ ಮತ್ತು ಹೊಕ್ಕಳು: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ತಾಪ್ಸಿ ಪನ್ನು ಹೇಳಿಕೆ – Kannada News | Taapsee Pannu talks about South movie industry

ತೆಲುಗಿನ ‘ಝುಮ್ಮಂದಿನಾದಂ’ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿ ಇಂದು ಬಾಲಿವುಡ್‌ನಲ್ಲಿ (Bollywood) ಸ್ಟಾರ್ ನಟಿಯಾಗ ಮಿಂಚುತ್ತಿರುವ ತಾಪ್ಸಿ ಪನ್ನು, ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಆಡಿರುವ ಮಾತುಗಳು ಈಗ ಹೊಸ ವಿವಾದ ಸ್ವರೂಪ ಪಡೆದುಕೊಂಡಿವೆ. ತಮ್ಮ ಹೊಸ ಚಿತ್ರ ‘ಅಸ್ಸಿ’ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ದಕ್ಷಿಣದ ಸಿನಿಮಾಗಳಲ್ಲಿ ನಟಿಯರ ಮೇಲೆ ಹೇರಲಾಗುವ ಮುಜುಗರದ ಬೇಡಿಕೆಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ತಾಪ್ಸಿ ಅವರ ಹೇಳಿಕೆಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಲಿದ್ದಾರೆ.

ಸಂದರ್ಶನದಲ್ಲಿ ಮಾತನಾಡುತ್ತಾ ತಾಪ್ಸಿ, ‘ದಕ್ಷಿಣದ ಚಿತ್ರಗಳಲ್ಲಿ ನಟಿಯರನ್ನು ಗ್ಲಾಮರಸ್ ಆಗಿ ತೋರಿಸಲು ನಿರ್ದೇಶಕರು ಪ್ಯಾಡೆಡ್ ಬ್ರಾ ಧರಿಸುವಂತೆ ಒತ್ತಾಯಿಸುತ್ತಾರೆ. ಸೆಟ್‌ನಲ್ಲಿ ಹುಡುಗಿಯರು ಹೆಚ್ಚಾಗಿ ಇರುವುದಿಲ್ಲ, ಹಾಗಾಗಿ ನಿರ್ದೇಶಕರು ಅಸಿಸ್ಟೆಂಟ್ ಡೈರೆಕ್ಟರ್ ಮೂಲಕ ಈ ವಿಷಯವನ್ನು ಸ್ಟೈಲಿಸ್ಟ್‌ಗಳಿಗೆ ತಿಳಿಸುತ್ತಾರೆ, ನಂತರ ಅದು ನಮಗೆ ತಲುಪುತ್ತದೆ. ಹಾಡಿನ ಚಿತ್ರೀಕರಣದ ಮಧ್ಯೆ ಹೋಗಿ ಬಟ್ಟೆ ಬದಲಿಸಿ ಬರುವುದು ಎಷ್ಟು ಮುಜುಗುರ ತರುತ್ತದೆ ಎಂದು ಅವರು ಯೋಚಿಸುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತ ಮತ್ತು ಭೋಜಪುರಿ ಸಿನಿಮಾಗಳಲ್ಲಿ ಹೊಕ್ಕಳನ್ನು ತೋರಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ದಕ್ಷಿಣದ ಚಿತ್ರರಂಗದವರಿಗೆ ಹೊಕ್ಕಳಿನ ಮೇಲೆ ವಿಶೇಷ ಪ್ರೀತಿ, ನಟಿಯರ ಹೊಕ್ಕುಳು ತೋರಿಸಲು ಅವರು ಗಮನ ವಹಿಸುತ್ತಾರೆ. ಬಾಲಿವುಡ್‌ನಲ್ಲಿ ನಟಿಯರ ಎದೆಯ ಭಾಗದ ಪ್ರದರ್ಶನಕ್ಕೆ ಆದ್ಯತೆ ನೀಡಲಾಗುತ್ತದೆ. ದಕ್ಷಿಣದ ಸಿನಿಮಾಗಳಲ್ಲಿ ಹೊಕ್ಕಳನ್ನು ತೋರಿಸುವುದೇ ಒಂದು ಕಾಮದ ಪ್ರತೀಕ ಎಂಬಂತೆ ಬಿಂಬಿಸಲಾಗುತ್ತದೆ. ಇದು ನನಗೆ ಇಂದಿಗೂ ಅರ್ಥವಾಗದ ವಿಷಯ’ ಎಂದಿದ್ದಾರೆ.

ಇದನ್ನೂ ಓದಿ:‘ನೀವು ಗಂಡಸರ ರೀತಿ ಕಾಣ್ತೀರಾ’ ಎಂದಿದ್ದಕ್ಕೆ ಖುಷಿ ಆಗಿದ್ದೇಕೆ ತಾಪ್ಸಿ ಪನ್ನು?

ತಾಪ್ಸಿ ಪನ್ನು ದಕ್ಷಿಣ ಭಾರತ ಚಿತ್ರರಂಗದವರ ಬಗ್ಗೆ ಮಾತನಾಡುತ್ತಿರುವುದು ಇದು ಮೊದಲೇನಲ್ಲ, ಈ ಹಿಂದೆಯೂ ತಾಪ್ಸಿ ತಮ್ಮ ಮೊದಲ ತೆಲುಗು ಸಿನಿಮಾದ ಬಗ್ಗೆ ಮಾತನಾಡುತ್ತಾ, ಆ ಸಿನಿಮಾನಲ್ಲಿ ತಮ್ಮ ಹೊಕ್ಕಳ ಮೇಲೆ ತೆಂಗಿನಕಾಯಿ ಎಸೆದಿದ್ದ ಘಟನೆಯನ್ನು ಹಾಸ್ಯಮಯವಾಗಿ ಹೇಳಿದ್ದರು. ಆ ಸಿನಿಮಾದ ನಿರ್ದೇಶಕರೂ ಆಗಿರುವ ರಾಘವೇಂದ್ರ ರಾವ್ ಅವರ ಬಗ್ಗೆಯೂ ಕ್ಷುಲ್ಲಕವಾಗಿ ಮಾತನಾಡಿದ್ದರು. ಇದು ದೊಡ್ಡ ವಿವಾದವಾಗಿತ್ತು ಮತ್ತು ನಂತರ ಅವರು ಕ್ಷಮೆಯನ್ನೂ ಕೇಳಿದ್ದರು. ಈಗ ಮತ್ತೆ ಅಂತಹದ್ದೇ ಹೇಳಿಕೆಗಳನ್ನು ನೀಡುತ್ತಿರುವುದು ದಕ್ಷಿಣ ಭಾರತದ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ.

ತಾಪ್ಸೀ ಅವರ ಈ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ‘ದಕ್ಷಿಣದ ಸಿನಿಮಾಗಳಿಂದಲೇ ಹೆಸರು ಮತ್ತು ಹಣ ಮಾಡಿದ್ದರೂ, ಈಗ ಅದೇ ಚಿತ್ರರಂಗವನ್ನು ಟೀಕಿಸುವುದು ಸರಿ ಅಲ್ಲ, ನಿಮ್ಮ ಸಿನಿಮಾದ ಪ್ರಚಾರಕ್ಕಾಗಿ ಹೀಗೆ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ’ ಎಂಬ ಕಾಮೆಂಟ್‌ಗಳು ಹರಿದುಬರುತ್ತಿವೆ. ಬಾಲಿವುಡ್‌ನಲ್ಲೂ ಮಹಿಳೆಯರನ್ನು ವಸ್ತುಗಳಂತೆ ಬಿಂಬಿಸುವ ಅನೇಕ ಉದಾಹರಣೆಗಳಿವೆ ಎಂಬ ಪಾಯಿಂಟ್ ಅನ್ನು ಅನೇಕರು ಉಲ್ಲೇಖಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:19 pm, Sun, 22 February 26

Source link

ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ-ಲಾಠಿ ಚಾರ್ಜ್‌, ಶೃಂಗೇರಿ ಬಂದ್​​ಗೆ ಕರೆ – Kannada News | Chikkamagaluru Elephant Attack: Second Death in 7 Days Ignites Massive Protests, Police Lathi Charge

ಪ್ರತಿಭಟನೆ ವೇಳೆ ಲಾಠಿಜಾರ್ಜ್​​Image Credit source: tv9 kannada

ಚಿಕ್ಕಮಗಳೂರು, ಫೆಬ್ರವರಿ 22: ಕಾಫಿನಾಡಿನಲ್ಲಿ ಕಾಡಾನೆ (Elephant) ದಾಳಿಗೆ ಮತ್ತೊಂದು ಬಲಿಯಾಗಿದೆ. ಕೇವಲ 7 ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಇಬ್ಬರನ್ನ ಕಾಡಾನೆ ಬಲಿ (death) ಪಡೆದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ಬೇಕೆಂದು ಆಗ್ರಹಿಸಿ ಸಾವಿರಾರು ಜನರು ರಾಜ್ಯ ಹೆದ್ದಾರಿ ಬಂದ್ ಮಾಡಿ ರಸ್ತೆಯಲ್ಲಿ ಮೃತ ದೇಹವಿಟ್ಟು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ಉಂಟಾಗಿದೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ಕೂಡ ನಡೆದಿದೆ. ಇನ್ನು ಮಾಜಿ ಶಾಸಕ ಜೀವರಾಜ್, ಜೆಡಿಎಸ್​ ವಕ್ತಾರ ಸುಧಾಕರ್ ಶೆಟ್ಟಿ ಸೇರಿದಂತೆ 25ಕ್ಕೂ ಹೆಚ್ಚು ಜನರನ್ನ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಭಾಗದ ಜನರಿಗೆ ಕಾಡಾನೆ ಕಾಟದಿಂದ ತಪ್ಪಿಸಿಕೊಳ್ಳಲು ಆಗ್ತಿಲ್ಲ. ಎಷ್ಟೇ ಹೋರಾಟ ನಡೆಸಿದರೂ ಮಾನವ, ಕಾಡುಪ್ರಾಣಿ ಸಂಘರ್ಷ ನಿಲುತ್ತಿಲ್ಲ. ವಾರದ ಹಿಂದಷ್ಟೇ ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಬಲಿ ಆಗಿದ್ದ. ಅಂದು ಆಕ್ರೋಶ ಹೊರಹಾಕ್ತಿದ್ದಂತೆ ದಾಳಿ ಮಾಡ್ತಿರೋ ಆನೆಯನ್ನ ಹಿಡಿಯೋದಾಗಿ ಅರಣ್ಯ ಇಲಾಖೆ ಭರವಸೆ ನೀಡಿತ್ತು. ಹೀಗಿರುವಾಗಲೇ ಇಂದು ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಗೆ ಬಲಿ ಆಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

ವಿಜಯನಗರ ಜಿಲ್ಲೆಯ ಹೊಸಪೇಟೆಯ ಬೋರಮ್ಮ ಅನ್ನೋ ಮಹಿಳೆ ತುತ್ತಿನ ಚೀಲ ತುಂಬಿಸಿಕೊಳ್ಳೋಕೆ ಚಿಕ್ಕಮಗಳೂರಿಗೆ ಬಂದಿದ್ದರು. ತಾಲೂಕಿನ ಪುರ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡ್ತಿದ್ರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಅಲ್ಲೇ ಉಸಿರು ನಿಲ್ಲಿಸಿದ್ದಾರೆ.

ರಸ್ತೆಯಲ್ಲೇ ಶವವಿಟ್ಟು ಆಕ್ರೋಶ: 2 ಕಿ.ಮೀ ಟ್ರಾಫಿಕ್‌ಜಾಮ್‌!

ಮಹಿಳೆ ಸಾವಿನ ವಿಷಯ ಗೊತ್ತಾಗ್ತಿದ್ದಂತೆ ಕೆರಳಿದ ಜನರು ಕಡಬಗೆರೆಯಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಿ ರಸ್ತೆಗೆ ಇಳಿದಿದ್ದಾರೆ. ರಸ್ತೆಯಲ್ಲೇ ಶವವಿಟ್ಟು ಆಕ್ರೋಶ ಹೊರಹಾಕಿದರು. ಮೃತರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಕೊಡ್ಬೇಕು ಅಂತಾ ರಸ್ತೆಯಲ್ಲೇ ಶಾಮಿಯಾನ ಹಾಕಿಕೊಂಡು ಹೋರಾಟ ನಡೆಸಿದರು. ಇದ್ರಿಂದ ಎರಡು ಕಿಲೋ ಮೀಟರ್‌ವರೆಗೂ ಟ್ರಾಫಿಕ್‌ ಜಾಮ್ ಆಗಿತ್ತು. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗ್ತಿದ್ದ ಸವಾರರು ಪರದಾಟುವಂತಾಗಿತ್ತು.

ಖಾಕಿ ಲಾಠಿ ಲಘು ಪ್ರಹಾರ! 25ಕ್ಕೂ ಹೆಚ್ಚು ಜನರ ಬಂಧನ

ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಹೋರಾಟ ಮಾಡಿದ್ರೂ ಯಾರೊಬ್ಬರು ಸ್ಥಳಕ್ಕೆ ಬಂದಿರಲಿಲ್ಲ. ಮಧ್ಯಾಹ್ನ ಸ್ಥಳಕ್ಕೆ ಬಂದ ಶಾಸಕ ಟಿಡಿ ರಾಜೇಗೌಡ ಹಾಗೂ ಕೊಪ್ಪ ಡಿಎಫ್‌ಒಗೂ ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡರು. ಬಳಿಕ ಎಸ್‌ಪಿ, ಜಿಲ್ಲಾಧಿಕಾರಿಗಳು ಸ್ಪಾಟ್‌ಗೆ ಬಂದು ಮನವೊಲಿಸೋ ಪ್ರಯತ್ನ ಮಾಡಿದರು. ಅಷ್ಟೇ ಅಲ್ಲ ರಸ್ತೆ ಮಧ್ಯದಲ್ಲಿದ್ದ ಮಹಿಳೆ ಮೃತದೇಹವನ್ನ ಆ್ಯಂಬುಲೆನ್ಸ್‌ನಲ್ಲಿಟ್ಟು ಆಸ್ಪತ್ರೆ ರವಾನಿಸಲು ಮುಂದಾದರು. ಈ ವೇಳೆ ಪ್ರತಿಭಟನಾಕಾರರು ಶವ ತೆಗೆಯದಂತೆ ಆ್ಯಂಬುಲೆನ್ಸ್‌ಗೆ ಅಡ್ಡ ಕುಳಿತರು. ಪೊಲೀಸರು ಹಾಗೂ ಹೋರಾಟಗಾರರ ನಡುವೆ ನೂಕಾಟ-ತಳ್ಳಾಟ ಆಗ್ತಿದ್ದಂತೆ ಲಘು ಲಾಠಿಪ್ರಹಾರವೇ ನಡೆಯಿತು. ಇನ್ನು ಈ ವೇಳೆ ಮಾಜಿ ಶಾಸಕ ಜೀವರಾಜ್, ಜೆಡಿಎಸ್​ ವಕ್ತಾರ ಸುಧಾಕರ್ ಶೆಟ್ಟಿ ಸೇರಿದಂತೆ 25ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು!

ಲಾಠಿಚಾರ್ಜ್​ ವೇಳೆ ಕೊಪ್ಪ ಠಾಣೆಯ ಲೇಡಿ ಕಾನ್ಸ್​ಟೇಬಲ್​​​ ರೇಖಾಗೆ ಕಿವಿಗೆ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಲೇಡಿ ಕಾನ್ಸ್​ಟೇಬಲ್​​ ರೇಖಾ ಕಿವಿಗೆ ಕಲ್ಲು ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಪ್ರತಿಭಟನಾಕಾರರ ಮನವೊಲಿಸುವಲ್ಲಿ ವಿಫಲವಾದ ಜಿಲ್ಲಾಡಳಿತ 

ಇನ್ನು ಡಿಸಿ ನಾಗರಾಜ್​ ಬರುವಂತೆ ಪಟ್ಟು ಹಿಡಿದು ಕುಳಿತಿದ್ದ ನೂರಾರು ಹೋರಾಟಗಾರರು ಅವರು ಬರುತ್ತಿದ್ದಂತೆ ಆಕ್ರೋಶ ಹೆಚ್ಚಾಯಿತು. ಮನವೊಲಿಸುವ ಪ್ರಯತ್ನ ಮಾಡಿದರು ಹೋರಾಟಗಾರರು ಬಗ್ಗದೆ ಜಿಲ್ಲಾಡಳಿತದ ‌ನಡೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ ಇಂದ ಹೋರಾಟ ಮಾಡಿದರೂ ನಿಮಗೆ ಮಾಹಿತಿ ಸಿಕ್ಕಿಲ್ಲವಾ ಎಂದು ಪ್ರಶ್ನಿಸಿದ್ದು, ಪ್ರತಿಭಟನಾಕಾರರ ಮನವೊಲಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಯಿತು.

ಜಿಲ್ಲಾಧಿಕಾರಿ ನಾಗರಾಜ್ ಹೇಳಿದ್ದಿಷ್ಟು 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿ ನಾಗರಾಜ್, ದೊಡ್ಡ ಮಟ್ಟದಲ್ಲಿ ಲಾಠಿಚಾರ್ಜ್ ಮಾಡಿಲ್ಲ. ಪೊಲೀಸ್​ ಸಿಬ್ಬಂದಿ ಗುಂಪು ಚದುರಿಸುವ ಕೆಲಸ ಮಾಡಿದ್ದಾರೆ. ಪ್ರಚೋದನೆ ಮಾಡುತ್ತಿದ್ದವರನ್ನು ಕರೆದುಕೊಂಡು ಹೋಗಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಅವಕಾಶ ನೀಡಿದ್ದೆವು. ಸರ್ಕಾರ ಕಾಡಾನೆ ದಾಳಿ ಸಂಬಂಧ ಸಂಕಷ್ಟು ಕ್ರಮಕೈಗೊಂಡಿದೆ ಎಂದರು. ಪ್ರಮುಖ ರಸ್ತೆ ಬಂದ್ ಆಗಿತ್ತು. ಹೀಗಾಗಿ ಜನರಿಗೆ ತೊಂದರೆಯಾಗಿತ್ತು. ರಸ್ತೆ ಕ್ಲಿಯರ್ ಮಾಡುವ ನಿಟ್ಟಿನಲ್ಲಿ ನಾವು ಕ್ರಮಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ನಾಳೆ ಬಂದ್​ಗೆ ಕರೆ

ಇನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಸೇರಿದಂತೆ ಮಲೆನಾಡು ನಾಗರಿಕ ರಕ್ಷಣಾ ವೇದಿಕೆ, ರೈತ ಸಂಘಟನೆಗಳ ಒಕ್ಕೂಟದಿಂದ ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರ‌ ಬಂದ್​ಗೆ ಕರೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Gifts Land Rover Defender to Ex Wife Natasha & Son Agastya

ಪ್ರಸ್ತುತ ಟಿ20 ವಿಶ್ವಕಪ್​ನಲ್ಲಿ ನಿರತರಾಗಿರುವ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ವಿಚ್ಛೇದಿತ ಮಡದಿ ನತಾಶಾ ಸ್ಟಾಂಕೋವಿಕ್ ಹಾಗೂ ಮಗ ಅಗಸ್ತ್ಯಗೆ ದುಬಾರಿ ಬೆಲೆಯ ಐಷರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ವಾಸ್ತವವಾಗಿ ಹಾರ್ದಿಕ್ ಹಾಗೂ ನತಾಶಾ 2024 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ವಿಚ್ಛೇದನವನ್ನು ಘೋಷಿಸಿದ್ದರು. ವಿಚ್ಛೇದನದ ನಂತರ ಪಾಂಡ್ಯ, ಮಹಿಕಾ ಶರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

ಏತನ್ಮಧ್ಯೆ ಹಾರ್ದಿಕ್ 3 ರಿಂದ 4 ಕೋಟಿ ರೂ. ಮೌಲ್ಯದ ಐಷಾರಾಮಿ SUV ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ನತಾಶಾ ಮತ್ತು ಅಗಸ್ತ್ಯ ಕಾರಿನೊಂದಿಗೆ ಪೋಸ್ ನೀಡಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಾರ್ದಿಕ್ ಪಾಂಡ್ಯ ಈ ಉಡುಗೊರೆಯನ್ನು ತಮ್ಮ ಮಗ ಅಗಸ್ತ್ಯನಿಗೆ ನೀಡಿದ್ದಾರೆಯಾದರೂ ಅಗಸ್ತ್ಯನನ್ನು ನೋಡಿಕೊಳ್ಳುವ ಅವರ ಮಾಜಿ ಪತ್ನಿ ನತಾಶಾ ಕೂಡ ಕಾರನ್ನು ಸ್ವೀಕರಿಸಲು ಅವರೊಂದಿಗೆ ಬಂದಿದ್ದರು.

Source link

ಪತಂಜಲಿ ಇಮ್ಯುನೊಚಾರ್ಜ್ ಎಂದರೇನು? ಅದು ಹೇಗೆ ಕೆಲಸ ಮಾಡುತ್ತದೆ? – Kannada News | Patanjali Immunocharge, know how this ayurvedic medicine helps to provide with immunity

ಇಂದಿನ ದಿನಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಗಳಿಂದಾಗಿ ಅನೇಕ ಜನರ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತಿದೆ. ದುರ್ಬಲ ರೋಗನಿರೋಧಕ ಶಕ್ತಿ ಆಗಾಗ್ಗೆ ಶೀತ, ಕೆಮ್ಮು, ಆಯಾಸ, ಸೋಂಕು ಮತ್ತು ದೌರ್ಬಲ್ಯಕ್ಕೆ ಕಾರಣವಾಗಬಹುದು. ನಿದ್ರೆಯ ಕೊರತೆ, ಅಪೌಷ್ಟಿಕತೆ, ಅತಿಯಾದ ಒತ್ತಡ, ಮಾಲಿನ್ಯ ಮತ್ತು ದೈಹಿಕ ಚಟುವಟಿಕೆಯ ಕೊರತೆಯೂ ಸಹ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಆಯುರ್ವೇದದಿಂದ ಪರಿಹಾರಗಳನ್ನು ಹುಡುಕುತ್ತಾರೆ. ಬಾಬಾ ರಾಮದೇವ್ ಪರಿಚಯಿಸಿದ ಪತಂಜಲಿ ಇಮ್ಯುನೊಚಾರ್ಜ್ (Patanjali Immunocharge), ರೋಗನಿರೋಧಕ ಶಕ್ತಿಯನ್ನು (Immunity) ಬೆಂಬಲಿಸುವ ಆಯುರ್ವೇದ ಉತ್ಪನ್ನಗಳಲ್ಲಿ ಒಂದಾಗಿದೆ.

ಪತಂಜಲಿ ಇಮ್ಯುನೊಚಾರ್ಜ್ ವಿಶೇಷವಾಗಿ ಆಗಾಗ್ಗೆ ಅನಾರೋಗ್ಯ, ದೌರ್ಬಲ್ಯ ಅಥವಾ ಬದಲಾಗುತ್ತಿರುವ ಹವಾಮಾನಕ್ಕೆ ತ್ವರಿತ ಪ್ರತಿಕ್ರಿಯೆಗಳಿಂದ ಬಳಲುತ್ತಿರುವವರಿಗೆ ಪ್ರಯೋಜನಕಾರಿಯಾಗಿದೆ. ದುರ್ಬಲಗೊಂಡ ರೋಗನಿರೋಧಕ ಶಕ್ತಿಯ ಲಕ್ಷಣಗಳನ್ನು ಗಮನಿಸಿದರೆ, ಅವುಗಳನ್ನು ತ್ವರಿತವಾಗಿ ಪರಿಹರಿಸುವುದು ಮತ್ತು ನಿಮ್ಮ ದೇಹವನ್ನು ಒಳಗಿನಿಂದ ಬಲಪಡಿಸುವುದು ಮುಖ್ಯ. ಪತಂಜಲಿ ಇಮ್ಯುನೊಚಾರ್ಜ್ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದರ ವಿವರ ಇಲ್ಲಿದೆ.

ಇದನ್ನೂ ಓದಿ: ಡಿಸೆಂಬರ್ ತ್ರೈಮಾಸಿಕ ವರದಿ: ಪತಂಜಲಿ ಫುಡ್ಸ್ ಭರ್ಜರಿ ಆದಾಯ ಮತ್ತು ಲಾಭ ದಾಖಲು; ಹೂಡಿಕೆದಾರರಿಗೂ ಲಾಭ

ಪತಂಜಲಿ ಇಮ್ಯುನೊಚಾರ್ಜ್​ನಿಂದ ರೋಗನಿರೋಧಕ ಶಕ್ತಿ ಹೇಗೆ ಹೆಚ್ಚುತ್ತದೆ?

ಪತಂಜಲಿ ಇಮ್ಯುನೊಚಾರ್ಜ್ ದೇಹದ ರೋಗನಿರೋಧಕ ಶಕ್ತಿಯನ್ನು ಬೆಂಬಲಿಸುವ ಹಲವಾರು ಆಯುರ್ವೇದ ಪದಾರ್ಥಗಳನ್ನು ಒಳಗೊಂಡಿದೆ ಎಂದು ಬಾಬಾ ರಾಮದೇವ್ ವಿವರಿಸುತ್ತಾರೆ. ಇದು ಗಿಲೋಯ್, ಆಮ್ಲಾ, ಅಶ್ವಗಂಧ, ತುಳಸಿ ಮತ್ತು ಅರಿಶಿನದಂತಹ ಪದಾರ್ಥಗಳನ್ನು ಒಳಗೊಂಡಿದೆ. ಗಿಲೋಯ್ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಆಮ್ಲಾ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ, ಇದು ದೇಹದ ನೈಸರ್ಗಿಕ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ಅಶ್ವಗಂಧವು ಒತ್ತಡವನ್ನು ಕಡಿಮೆ ಮಾಡಲು ಮತ್ತು ದೇಹವನ್ನು ಚೈತನ್ಯಗೊಳಿಸಲು ಸಹಾಯ ಮಾಡುತ್ತದೆ, ಆದರೆ ತುಳಸಿ ಮತ್ತು ಅರಿಶಿನವು ಅವುಗಳ ಆ್ಯಂಟಿ ಆಕ್ಸಿಡೆಂಟ್ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಈ ಅಂಶಗಳು ಒಟ್ಟಾಗಿ ದೇಹವನ್ನು ಒಳಗಿನಿಂದ ಬಲಪಡಿಸಲು, ಆಯಾಸವನ್ನು ಕಡಿಮೆ ಮಾಡಲು ಮತ್ತು ರೋಗವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಮತ್ತು ಸಮತೋಲಿತ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಬೆಂಬಲಿಸಲು ಸಹಾಯ ಮಾಡುತ್ತದೆ. ನಿಮ್ಮ ವೈದ್ಯರನ್ನು ಸಂಪರ್ಕಿಸಿದ ನಂತರವೇ ಪತಂಜಲಿ ಇಮ್ಯುನೊಚಾರ್ಜ್ ಬಳಸಿ. ನಿಮ್ಮ ವೈದ್ಯರ ಸಲಹೆಯಿಲ್ಲದೆ ಇದನ್ನು ಬಳಸಬೇಡಿ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಈ ಆಹಾರಗಳು

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಪ್ಲಿಮೆಂಟ್ಸ್ ಮಾತ್ರ ಅವಲಂಬಿಸಿರುವುದು ಸಾಕಾಗುವುದಿಲ್ಲ. ನಿಮ್ಮ ದೈನಂದಿನ ಆಹಾರದಲ್ಲಿ ಹಸಿರು ತರಕಾರಿಗಳು, ಕಾಲೋಚಿತ ಹಣ್ಣುಗಳು (ಸೀಸನಲ್ ಫ್ರೂಟ್ಸ್), ಒಣಗಿದ ಹಣ್ಣುಗಳು (ಡ್ರೈ ಫ್ರೂಟ್ಸ್) ಮತ್ತು ಸಾಕಷ್ಟು ಪ್ರೋಟೀನ್ ಅನ್ನು ಸೇರಿಸಿ. ಉಗುರು ಬೆಚ್ಚಗಿನ ನೀರು, ಅರಿಶಿನ ಹಾಲು ಮತ್ತು ತುಳಸಿ-ಶುಂಠಿ ಚಹಾವನ್ನು ಕುಡಿಯುವುದು ಸಹ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ.

ಜಂಕ್ ಫುಡ್ ಮತ್ತು ಹೆಚ್ಚುವರಿ ಸಕ್ಕರೆಯನ್ನು ತಪ್ಪಿಸಬೇಕು. ದೇಹವನ್ನು ಹೈಡ್ರೇಟೆಡ್ ಆಗಿಡುವುದು ರೋಗನಿರೋಧಕ ಶಕ್ತಿಗೆ ಸಹ ಅತ್ಯಗತ್ಯ.

ಇದನ್ನೂ ಓದಿ: ಪ್ರತೀ ದಿನ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಏನು ಪ್ರಯೋಜನ? ಬಾಬಾ ರಾಮದೇವ್ ಅವರ ಟಿಪ್ಸ್ ಇಲ್ಲಿದೆ

ಆರೋಗ್ಯಕರ ಅಭ್ಯಾಸಗಳು ಸಹ ಮುಖ್ಯ

ಬಲವಾದ ರೋಗನಿರೋಧಕ ಶಕ್ತಿಗಾಗಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಪ್ರತಿದಿನ ಸಾಕಷ್ಟು ನಿದ್ರೆ ಪಡೆಯಿರಿ ಮತ್ತು ಒತ್ತಡವನ್ನು ತಪ್ಪಿಸಲು ಪ್ರಯತ್ನಿಸಿ. ನಿಯಮಿತ ಯೋಗ, ಪ್ರಾಣಾಯಾಮ ಮತ್ತು ಲಘು ವ್ಯಾಯಾಮವು ದೇಹವನ್ನು ಸಕ್ರಿಯವಾಗಿಡುತ್ತದೆ.

ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು ಸಹ ಮುಖ್ಯವಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಮತ್ತು ಸಮತೋಲಿತ ಆಹಾರವನ್ನು ಕಾಪಾಡಿಕೊಳ್ಳುವುದು ದೀರ್ಘಾವಧಿಯವರೆಗೆ ಬಲವಾದ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾ ಸಿಕ್ಕಿದೆ ಎಂದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link